Tag: ಗಲಭೆ

  • ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

    ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

    ಶಿವಮೊಗ್ಗ: ನಗರದ (Shivamogga) ರಾಗಿಗುಡ್ಡದಲ್ಲಿ (Ragigudda) ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

     

    ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಜನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದೆ. ಅಲ್ಲದೇ ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದೆ.

    ಈ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಅವರು ಗಾಯಾಳುಗಳ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಗಲಭೆ ನಡೆದ ಸ್ಥಳಕ್ಕೆ ತಂಡ ಭೇಟಿ ನೀಡಿದ್ದು, ಸಂತ್ರಸ್ಥರ ಮನೆಗಳಿಲ್ಲಿ ಪರಿಸ್ಥಿತಿ ಅವಲೋಕಿಸಿದೆ.

    ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಹಲವು ಮನೆಗಳಿಗೆ ಹಾನಿಯಾಗಿತ್ತು. ಈ ವೇಳೆ ಪೊಲೀಸರ ಮೇಲೂ ಹಲ್ಲೆಗಳಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು ಜನಜೀವನ ಮೊದಲಿನ ಸ್ಥಿತಿಗೆ ಬಂದಿದೆ. ಇದನ್ನೂ ಓದಿ: ನಾವು ಸಾಬ್ರು ಗೊತ್ತಲ್ಲ; ಒಂದಾ ನಾವು, ಇಲ್ಲಾ ಅವ್ರು ಸಾಯ್ಬೇಕು- ಪೊಲೀಸ್ರ ಮುಂದೆ ಅವಾಜ್ ಹಾಕಿದ್ದವ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೆಚ್ಚಿನ ಫುಟ್‌ಬಾಲ್‌ ತಂಡ ಸೋತಿದ್ದಕ್ಕೆ ಸ್ಟೇಡಿಯಂನಲ್ಲಿ ಅಭಿಮಾನಿಗಳ ಗಲಭೆ – ಮಕ್ಕಳು, ಪೊಲೀಸರು ಸೇರಿ 127 ಮಂದಿ ಸಾವು

    ನೆಚ್ಚಿನ ಫುಟ್‌ಬಾಲ್‌ ತಂಡ ಸೋತಿದ್ದಕ್ಕೆ ಸ್ಟೇಡಿಯಂನಲ್ಲಿ ಅಭಿಮಾನಿಗಳ ಗಲಭೆ – ಮಕ್ಕಳು, ಪೊಲೀಸರು ಸೇರಿ 127 ಮಂದಿ ಸಾವು

    ಜಕಾರ್ತ: ಇಂಡೋನೇಷ್ಯಾದಲ್ಲಿ (Indonesia) ಶನಿವಾರ ರಾತ್ರಿ ನಡೆದ ಫುಟ್‌ಬಾಲ್ (Football) ಪಂದ್ಯವೊಂದರಲ್ಲಿ ಗಲಭೆ ಸಂಭವಿಸಿ, ಕನಿಷ್ಠ 127 ಜನರು ಸಾವನ್ನಪ್ಪಿದ್ದಾರೆ. ಸತ್ತವರಲ್ಲಿ ಮಕ್ಕಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

    ಇಂಡೋನೇಷ್ಯಾದ ಪೂರ್ವ ಜಾವಾದ ಪ್ರಾಂತ್ಯದ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಇದನ್ನೂ ಓದಿ: 2.9 ಕೋಟಿ ಬೆಳಕಿನ ವರ್ಷಗಳ ಹಿಂದಿನ ನಕ್ಷತ್ರಪುಂಜ – ನಾಸಾದ ವೆಬ್ ಟೆಲಿಸ್ಕೋಪ್‌ನಿಂದ ಸೆರೆ

    ತವರು ಮೈದಾನದಲ್ಲಿ ಅರೆಮಾ ಫುಟ್‌ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತು. ಇದರಿಂದ ಬೇಸರಗೊಂಡ ಅರೆಮಾ ಫುಟ್‌ಬಾಲ್‌ ಕ್ಲಬ್‌ ತಂಡದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಿಚ್‌ಗೆ ನುಗ್ಗುವಂತೆ ಪ್ರೇರೇಪಿಸಿತು. ನಂತರ ಸಾಮೂಹಿಕ ಗಲಭೆಗಳು ಭುಗಿಲೆದ್ದು, ಪೊಲೀಸರು ಸೇರಿದಂತೆ 127 ಮಂದಿ ಸಾವನ್ನಪ್ಪಿದ್ದಾರೆ.

    ಜನರನ್ನು ಚದುರಿಸಲು ಘಟನಾ ಸ್ಥಳದಲ್ಲಿ ಅಶ್ರುವಾಯು ಸಿಡಿಸಲಾಯಿತು. ಸಾಕರ್ ಮೈದಾನದಲ್ಲಿ ಗಲಭೆ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಬೀದಿಗಳಲ್ಲಿ ಜನ ಚೆಲ್ಲಾಪಿಲ್ಲಿಯಾಗಿ ಓಡಿದರು. ಈ ವೇಳೆ ಕಾಲ್ತುಳಿತ ಕೂಡ ಸಂಭವಿಸಿತು. ಇದನ್ನೂ ಓದಿ: ನಮೀಬಿಯಾದಿಂದ ಬಂದ ಚೀತಾ `ಆಶಾ’ ಗರ್ಭಿಣಿಯಾಗಿದ್ಯಾ – ಅಧಿಕಾರಿಗಳು ಹೇಳೋದೇನು?

    Live Tv
    [brid partner=56869869 player=32851 video=960834 autoplay=true]

  • ಶಿವರಾತ್ರಿಯಂದು ಗಲಭೆ – 1 ವರ್ಷ ಬೆಳಗಾವಿ ಜೈಲಿನಲ್ಲೇ ಇರಲಿದ್ದಾನೆ ಮಾಸ್ಟರ್ ಮೈಂಡ್ ಅನ್ಸಾರಿ

    ಶಿವರಾತ್ರಿಯಂದು ಗಲಭೆ – 1 ವರ್ಷ ಬೆಳಗಾವಿ ಜೈಲಿನಲ್ಲೇ ಇರಲಿದ್ದಾನೆ ಮಾಸ್ಟರ್ ಮೈಂಡ್ ಅನ್ಸಾರಿ

    ಕಲಬುರಗಿ: ಶಿವರಾತ್ರಿ ದಿನದಂದು ಕಲಬುರಗಿಯ ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಗಲಭೆ ನಡೆಸಲು ಕಾರಣವಾಗಿದ್ದ ಮಾಸ್ಟರ್ ಮೈಂಡ್ ಮೊಹಮ್ಮದ್ ಫಿರ್ದೋಸ್ ಅನ್ಸಾರಿ ಇನ್ನು ಒಂದು ವರ್ಷ ಬೆಳಗಾವಿ ಜೈಲಿನಲ್ಲೇ ಇರಲಿದ್ದಾನೆ.

    ಜಿಲ್ಲಾಧಿಕಾರಿ ಆದೇಶದಂತೆ ಫಿರ್ದೋಸ್ ಅನ್ಸಾರಿಯನ್ನು ಗಡಿಪಾರು ಮಾಡಿ, ಬೆಳಗಾವಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಈಗ ಡಿಸಿ ಆದೇಶವನ್ನು ಕಲಬುರಗಿ ಹೈಕೋರ್ಟ್ ಸಲಹಾ ಮಂಡಳಿ ಎತ್ತಿ ಹಿಡಿದಿದೆ.

    ಏನಿದು ಪ್ರಕರಣ?
    ಮಾರ್ಚ್ 1ರಂದು ಆಳಂದ ಪಟ್ಟಣದಲ್ಲಿ ಗಲಭೆ, ಕಲ್ಲುತೂರಾಟ ನಡೆದಿತ್ತು. ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ, ಹೊರ ಬರುವ ವೇಳೆ ಕಲ್ಲು ತೂರಾಟ ನಡೆದಿತ್ತು. ಡಿಸಿ, ಎಸ್‌ಪಿ, ಕೇಂದ್ರ ಸಚಿವ ಖೂಬಾ, ಶಾಸಕರು ಸೇರಿದಂತೆ ಹತ್ತಾರು ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದನ್ನೂ ಓದಿ: ನಾರ್ವೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ, 14 ಮಂದಿಗೆ ಗಂಭೀರ ಗಾಯ

    ಈ ಕಲ್ಲು ತೂರಾಟ ಹಾಗೂ ಗಲಭೆ ಎಬ್ಬಿಸಲು ಅನ್ಸಾರಿ ಮಾಸ್ಟರ್ ಪ್ಲಾನ್ ಮಾಡಿದ್ದು, ಮುಂಚಿತವಾಗಿಯೇ ಕಟ್ಟಡಗಳ ಮೇಲೆ ಕಲ್ಲು ಜಮಾವಣೆ ಮಾಡಿ ಲಾಠಿಗಳನ್ನು ಸಂಗ್ರಹಿಸಿಡಲಾಗಿತ್ತು. ಅನ್ಸಾರಿ ಸೂಚನೆಯಂತೆ ನೂರಾರು ಜನ ಗಲಭೆಗೆ ಸಿದ್ದರಾಗಿದ್ದರು. ಇದನ್ನೂ ಓದಿ: ಶಿವಸೇನೆ ಹೆಸರು ಬಳಸದಂತೆ ಶಿಂಧೆಗೆ ಠಾಕ್ರೆ ಸವಾಲ್ – 16 ರೆಬೆಲ್ ಶಾಸಕರಿಗೆ ನೊಟೀಸ್

    ಗಲಭೆಗೆ ಸಂಚು ರೂಪಿಸಿದ್ದ ಹಿನ್ನೆಲೆ ಫಿರ್ದೋಸ್ ಅನ್ಸಾರಿಯನ್ನು ಬಂಧಿಸಲಾಗಿತ್ತು. ಅವನನ್ನು ಗಡಿಪಾರು ಮಾಡಿ, ಬೆಳಗಾವಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅನ್ಸಾರಿಯ ಮೇಲೆ ಅಕ್ರಮ ಕಳ್ಳಭಟ್ಟಿ, ಜೂಜು, ಪೈರಸಿ ಸೇರಿದಂತೆ ಹತ್ತು ಹಲವು ಕೇಸ್‌ಗಳಿವೆ. ಆಳಂದ ಪೊಲೀಸ್ ಠಾಣೆಯೊಂದರಲ್ಲೇ ಅನ್ಸಾರಿ ವಿರುದ್ಧ 33 ಎಫ್‌ಐಆರ್ ದಾಖಲಾಗಿದೆ.

    Live Tv

  • ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್

    ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್

    ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

    ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್‌

    ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.

  • ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್

    ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್

    ಮುಂಬೈ: ಹಿಂಸೆ ಹೆಚ್ಚುತ್ತಿರುವ ಸಮಾಜವು ಹೆಚ್ಚು ದಿನಗಳು ಉಳಿಯುವುದಿಲ್ಲ. ಇದರಿಂದಾಗಿ ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದರು.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೇಶದ ಹಲವಾರು ಭಾಗಗಳಲ್ಲಿ ಗುಂಪುಗಳ ನಡುವೆ ಘರ್ಷಣೆಗಳು ನಡೆಯುತ್ತಿವೆ. ಈ ರೀತಿಯ ಹಿಂಸಾಚಾರದಿಂದಾಗಿ ಯಾರಿಗೂ ಪ್ರಯೋಜನವಿಲ್ಲ. ಇದರ ಬದಲು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಮತ್ತು ಮಾನವೀಯತೆಯನ್ನು ಕಾಪಾಡುವ ಅಗತ್ಯತೆ ಇದೆ ಎಂದರು.

    ಹಿಂಸೆ ಹೆಚ್ಚುತ್ತಿರುವ ಸಮಾಜವು ತನ್ನ ಕೊನೆಯ ದಿನಗಳನ್ನು ಎಣಿಸುತ್ತದೆ. ನಾವು ಎಂದಿಗೂ ಅಹಿಂಸಾತ್ಮಕ ಮತ್ತು ಶಾಂತಿ ಪ್ರಿಯರಾಗಬೇಕು. ಇದಕ್ಕಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಶಾಂತಿ ಕಾಪಾಡುವುದು ಅತ್ಯಗತ್ಯವಾಗಿದೆ. ಎಲ್ಲರೂ ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

    ಸಿಂಧಿ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ದೇಶದಲ್ಲಿ ಸಿಂಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಅಗತ್ಯವಿದೆ. ಭಾರತ ಬಹುಭಾಷಾ ದೇಶವಾಗಿದ್ದು, ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಕೆಲವು ಸಿಂಧಿಗಳು ತಮ್ಮ ಭೂಮಿಯನ್ನು ರಕ್ಷಿಸಲು ಪಾಕಿಸ್ತಾನದಲ್ಲಿ ಉಳಿದುಕೊಂಡಿದ್ದರೆ, ಅನೇಕರು ತಮ್ಮ ಧರ್ಮವನ್ನು ರಕ್ಷಿಸಲು ಭಾರತಕ್ಕೆ ಬಂದರು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಕುಡಿಸಿ ಕೊಂದ ಪಾಪಿ ಪತಿ

  • ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

    ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

    ಹುಬ್ಬಳ್ಳಿ: ಮಧ್ಯಾಹ್ನವಷ್ಟೇ ಅಜ್ಞಾತ ಸ್ಥಳದಿಂದ ವೀಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ವಾಸಿಂ ಪಠಾಣ್, ವೀಡಿಯೋ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.

    HUBBALLI VASIM

    ಗಲಭೆ ನಡೆದ ದಿನ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದ ಎಐಎಮ್‌ಐಎಮ್ ಮುಖಂಡ ಮಹಮ್ಮದ್ ಆರಿಫ್‌ನನ್ನು ಪೊಲೀಸರು ವಶಕ್ಕೆ ಪಡೆದ್ದರು. ಇಂದು ವಾಸಿಂ ವೀಡಿಯೋ ರಿಲೀಸ್ ಮಾಡುತ್ತಿದ್ದಂತೆ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ತಂಡವು ಕಾರ್ಯಾಚರಣೆ ನಡೆಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ. ಇನ್ಸ್ಪೆಕ್ಟರ್ ಅಲ್ತಾಫ್ ಕೂಡಾ ತಂಡದಲ್ಲಿ ಇದ್ದರು. ಇದನ್ನೂ ಓದಿ: ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

    ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 126 ಜನರನ್ನು ಬಂಧಿಸಿದ್ದು, 12 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಜನರ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    HUBBALLI INCIDENT

    ವೀಡಿಯೋನಲ್ಲಿ ವಾಸಿಂ ಹೇಳಿದ್ದೇನು?
    ಇಲ್ಲಿನ ಗಲಭೆಗೆ ನಾನು ಮಾಸ್ಟರ್ ಮೈಂಡ್ ಅಲ್ಲ. ಪೊಲೀಸರ ಸೂಚನೆಯಂತೆ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಅವರ ಕೈಯಲ್ಲಿದ್ದ ಮೈಕ್ ತೆಗೆದುಕೊಂಡು ಮಾತನಾಡಿದೆ ಅಷ್ಟೇ. ಬಂದಿದ್ದ ಜನರನ್ನು ಕರೆದು ದೂರು ಕೊಡಲು ಅವರೇ ಹೇಳಿದ್ರು. ಯಾವಾಗ ಗಲಭೆಗೆ ತಿರುಗಿತ್ತೋ ಆಗ ನನಗೆ ಎಲ್ಲರನ್ನು ಸಮಾಧಾನ ಪಡಿಸಲು ಜೀಪ್ ಮೇಲೆ ಹತ್ತುವಂತೆ ಹೇಳಿದ್ರು. ಅವರ ಸೂಚನೆಯಂತೆಯೇ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಮುಂದಾದೆ. ಪೊಲೀಸರ ಕೈಯಲ್ಲಿದ್ದ ಮೈಕ್ ಅನ್ನು ತೆಗೆದುಕೊಂಡು ಮಾತನಾಡಿದೆ. ಇದೇ ವೇಳೆ ಅಚಾನಕ್ಕಾಗಿ ಕರೆಂಟ್ ಕಟ್ ಆಯ್ತು. ನಾನೂ ಅಲ್ಲೇ ಇದ್ದರಿಂದ ನನ್ನ ಮೇಲೆ ಆರೋಪ ಬಂದಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರು ಮುಗ್ಧ ಜನರು, ಅಮಾಯಕರು: ಆನಂದ್ ಸಿಂಗ್

    HUBBALLI_ GALATE 1

    ನಾನು ಜನರಿಗೆ ಸಮಾಧಾನ ಮಾಡಿದ ವೀಡಿಯೋ ಯಾವುದೂ ಜಾಲತಾಣದಲ್ಲಿ ಬಂದಿಲ್ಲ. ಅದು ಬಿಟ್ಟು ಬೇರೆ ಬೇರೆ ವೀಡಿಯೋ ಬಂದಿವೆ. ನನಗೆ ಪೊಲೀಸರ ಮೇಲೆ ಹಾಗೂ ಕಾನೂನಿನ ಮೇಲೆ ಭರವಸೆಯಿದೆ. ಆದಷ್ಟು ಬೇಗ ಪೊಲೀಸರ ಮುಂದೆ ಹಾಜರಾಗುತ್ತೇನೆ. ಜಮಾತ್ ಮುಂದೆ ಸಹ ನಿಲ್ಲುತ್ತೇನೆ ಎಂದು ವೀಡಿಯೋನಲ್ಲಿ ಹೇಳಿದ್ದರು.

  • ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

    ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

    ಹುಬ್ಬಳ್ಳಿ: ಇಲ್ಲಿನ ಗಲಭೆಗೆ ನಾನು ಮಾಸ್ಟರ್ ಮೈಂಡ್ ಅಲ್ಲ. ಪೊಲೀಸರ ಸೂಚನೆಯಂತೆ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಅವರ ಕೈಯಲ್ಲಿದ್ದ ಮೈಕ್ ತೆಗೆದುಕೊಂಡು ಮಾತನಾಡಿದೆ ಅಷ್ಟೇ ಎಂದು ಹುಬ್ಬಳ್ಳಿ ಗಲಭೆ ಬಳಿಕ ನಾಪತ್ತೆಯಾಗಿರುವ ವಾಸಿಂ ಹೇಳಿದ್ದಾನೆ.

    ಹುಬ್ಬಳ್ಳಿ ಗಲಭೆಯ ನಂತರ ಕಾಣೆಯಾಗಿದ್ದ ಮಾಸ್ಟರ್‌ಮೈಂಡ್ ವಾಸಿಂ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು, ಅಜ್ಞಾತ ಸ್ಥಳದಿಂದ ವೀಡಿಯೋವೊಂದನ್ನು ಹರಿಯಬಿಟ್ಟಿದ್ದಾನೆ. ವೀಡಿಯೋದಲ್ಲಿ ಸುಮಾರು 4 ನಿಮಿಷಗಳ ಕಾಲ ಮಾತನಾಡಿದ್ದು, ಪೊಲೀಸರೇ ನನಗೆ ಫೋನ್ ಮಾಡಿ ಕರೆದು ಅಲ್ಲಿ ಮಾತನಾಡಲು ಹೇಳಿದ್ರು ಎಂದಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    HUBBALLI_ MOULVI 3

    ಬಂದಿದ್ದ ಜನರನ್ನು ಕರೆದು ದೂರು ಕೊಡಲು ಅವರೇ ಹೇಳಿದ್ರು. ಯಾವಾಗ ಗಲಭೆಗೆ ತಿರುಗಿತ್ತೋ ಆಗ ನನಗೆ ಎಲ್ಲರನ್ನು ಸಮಾಧಾನ ಪಡಿಸಲು ಜೀಪ್ ಮೇಲೆ ಹತ್ತುವಂತೆ ಹೇಳಿದರು. ಅವರ ಸೂಚನೆಯಂತೆಯೇ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಮುಂದಾದೆ. ಪೊಲೀಸರ ಕೈಯಲ್ಲಿದ್ದ ಮೈಕ್ ಅನ್ನು ತೆಗೆದುಕೊಂಡು ಮಾತನಾಡಿದೆ. ಇದೇ ವೇಳೆ ಅಚಾನಕ್ಕಾಗಿ ಕರೆಂಟ್ ಕಟ್ ಆಯ್ತು. ನಾನೂ ಅಲ್ಲೇ ಇದ್ದರಿಂದ ನನ್ನ ಮೇಲೆ ಆರೋಪ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರು ಮುಗ್ಧ ಜನರು, ಅಮಾಯಕರು: ಆನಂದ್ ಸಿಂಗ್

    HUBBALLI INCIDENT

    ನಾನು ಜನರಿಗೆ ಸಮಾಧಾನ ಮಾಡಿದ ವೀಡಿಯೋ ಯಾವುದೂ ಜಾಲತಾಣದಲ್ಲಿ ಬಂದಿಲ್ಲ. ಅದು ಬಿಟ್ಟು ಬೇರೆ ಬೇರೆ ವೀಡಿಯೋ ಬಂದಿವೆ. ನನಗೆ ಪೊಲೀಸರ ಮೇಲೆ ಹಾಗೂ ಕಾನೂನಿನ ಮೇಲೆ ಭರವಸೆಯಿದೆ. ಆದಷ್ಟು ಬೇಗ ಪೊಲೀಸರ ಮುಂದೆ ಹಾಜರಾಗುತ್ತೇನೆ. ಜಮಾತ್ ಮುಂದೆ ಸಹ ನಿಲ್ಲುತ್ತೇನೆ ಎಂದು ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ.

    ಹುಬ್ಬಳ್ಳಿಯಲ್ಲಿನ ಗಲಭೆಗೆ ನಾನು ಮಾಸ್ಟರ್ ಮೈಂಡ್ ಅಲ್ಲ. ವಾಟ್ಸಪ್‌ನಲ್ಲಿ ಹಾಕಿದ್ದ ಸ್ಟೇಟಸ್ ಗಲಭೆಗೆ ಕಾರಣ. ನನ್ನ ಮೇಲಿನ ಆರೋಪಗಳಿಂದ ನನ್ನ ಕುಟುಂಬಕ್ಕೂ ನಾನು ಕೆಟ್ಟವನಾಗಿ ಕಾಣಿಸುತ್ತಿದ್ದೇನೆ. ನನ್ನ ಮಾತುಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದೀರಿ ಅಂದುಕೊಂಡಿದ್ದೇನೆ ಎಂದು ಮನವಿ ಮಾಡಿದ್ದಾನೆ.

  • ಹುಬ್ಬಳ್ಳಿ ಗಲಾಟೆ ಮೊದಲೇ ಗೊತ್ತಿತ್ತು: ಭರತ್ ಶೆಟ್ಟಿ ಆಡಿಯೋ ವೈರಲ್

    ಹುಬ್ಬಳ್ಳಿ ಗಲಾಟೆ ಮೊದಲೇ ಗೊತ್ತಿತ್ತು: ಭರತ್ ಶೆಟ್ಟಿ ಆಡಿಯೋ ವೈರಲ್

    ಬೆಂಗಳೂರು: ಹುಬ್ಬಳ್ಳಿ ಗಲಾಟೆ ಮೊದಲೇ ಗೊತ್ತಿತ್ತು ಎಂದು ಹಿಂದೂ ಮುಖಂಡ ಭರತ್ ಶೆಟ್ಟಿ ಅವರು ಹುಬ್ಬಳ್ಳಿ ಗಲಾಟೆ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಇದೀಗ ಆಗುತ್ತಿದೆ.

    ಸ್ನೇಹ ಸಮ್ಮೇಳನದ ನೇತೃತ್ವವನ್ನು ವಹಿಸಿದ್ದ ಭರತ್ ಶೆಟ್ಟಿ ಅವರ ಸ್ಪೋಟಕ ಆಡಿಯೋವೊಂದು ಬಹಿರಂಗವಾಗಿದ್ದು, ಈ ಆಡಿಯೋದಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹುಬ್ಬಳ್ಳಿ ಗಲಾಟೆಗಾಗಿಯೇ ಮಾಡಿರುವುದಾಗಿ ಹೇಳಿದ್ದಾರೆ. ಈ ಆಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆ ಮಧ್ಯೆ ಈಗ ವೈಮನಸ್ಸು ಮೂಡಿದ್ದು, ಹುಬ್ಬಳ್ಳಿ ಗಲಾಟೆ ಮೊದಲೇ ಹೇಗೆ ಗೊತ್ತಾಗಲು ಸಾಧ್ಯ? ಇದು ಪೂರ್ವ ನಿಯೋಜಿತ ಕೃತ್ಯನಾ ಎಂದು ಕೆಲ ಹಿಂದೂ ಸಂಘಟನೆ ಸದಸ್ಯರು ಪ್ರಶ್ನಿಸಿದ್ದಾರೆ.

    HBL_ POLICE 5

    ಈ ಬಗ್ಗೆ ರಾಷ್ಟ್ರ ರಕ್ಷಣಾ ವೇದಿಕೆಯ ಪುನೀತ್ ಕೆರೆಹಳ್ಳಿ ಮಾತನಾಡಿ, ಈ ಘಟನೆಯಯನ್ನು ಗಮನಿಸಿದರೆ ಹಿಂದೂ ಸಂಘಟನೆಯನ್ನು, ಕಾರ್ಯಕರ್ತರನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಷಡ್ಯಂತ್ರ ನಡೆಯುತ್ತಿದೆ ಎಂಬ ಯೋಚನೆ ಬರುತ್ತಿದೆ. ಸ್ನೇಹ ಸಮ್ಮಿಲನ ಏಕಾಏಕಿ ನಡೆದಿದೆ? ಇದು ಹಿಂದೂ ಸಂಘಟನೆಯ ದಿಕ್ಕು ತಪ್ಪಿಸಿದೆ. ಭರತ್ ಶೆಟ್ಟಿಗೆ ನಿಜವಾಗಿಯೂ ಇದರ ಬಗ್ಗೆ ಮಾಹಿತಿಯಿತ್ತಾ ಎನ್ನುವುದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡುತ್ತೇವೆ ಎಂದು ತಿಳಿಸಿದರು.

    ಇತ್ತಿಚಿನ ದಿನಗಳಲ್ಲಿ ಏಕಾಏಕಾಯಾಗಿ ನಡೆಯುತ್ತಿರುವ ಬೆಳವಣಿಗೆಗಳು, ಭರತ್ ಶೆಟ್ಟಿ ಅವರು ಹಿಂದೂ ಕಾರ್ಯಕರ್ತರ ಹೋರಾಟದ ದಿಕ್ಕನ್ನು ತಪ್ಪಿಸಿರುವುದು. ಇದಾದ ಬಳಿಕ ಅವರು ಹೇಳಿರುವ ಹೇಳಿಕೆಗಳು ಗೊಂದಲವನ್ನು ಸೃಷ್ಟಿಸುತ್ತಿದೆ. ಇವೆಲ್ಲವೂ ಭರತ್ ಶೆಟ್ಟಿ ಅವರೇ ನೀಡುತ್ತಿರುವ ಹೇಳಿಕೆಗಳಾ ಅಥವಾ ಭರತ್ ಶೆಟ್ಟಿ ಅವರ ಹಿಂದೆ ಬೇರಾದರೂ ಇದ್ದರಾ, ಇವೆಲ್ಲಾ ಸಂಶಯಕ್ಕೆ ಎಡೆ ಮಾಡಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

    ಘಟನೆ ಬಗ್ಗೆ ಗೊತ್ತಾದ ಕೂಡಲೇ ಭರತ್ ಶೆಟ್ಟಿ ಅವರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಾಗಿತ್ತು. ಘಟನೆಯನ್ನು ತಡೆಯುವಂತಹ ಕೆಲಸ ಮಾಡಬೇಕಿತ್ತು. ಗೊತ್ತಿದ್ದು ಯಾಕೆ ಸುಮ್ಮನಿದ್ದರು. ಇದರಲ್ಲಿ ಏನೂ ಹುನ್ನಾರಾ ಇದೆ ಎನ್ನುವುದರ ಕುರಿತು ತನಿಖೆ ನಡೆದರೆ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

    ಸ್ನೇಹ ಸಮ್ಮಿಲನ ಕಾರ್ಯಕ್ರಮವೇ ಹಿಂದೂಗಳ ದಾರಿ ತಪ್ಪಿಸಿರೋದು. ಇದು ಮುಸ್ಲಿಂ ಮುಖಂಡರು ಸೇರಿ ಮಾಡಿರುವ ಹೋರಾಟವಾಗಿದೆ. ಭರತ್ ಶೆಟ್ಟಿ ಆಡಿಯೋ ಬಗ್ಗೆ ಕಮೀಷನರ್ ಅವರು ಭರತ್ ಶೆಟ್ಟಿ ಅವರನ್ನು ಕರೆಸಿ ಮಾತಾನಾಡಲಿ. ಘಟನೆ ಕುರಿತು ತನಿಖೆಯಾಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

  • ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ

    ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ

    ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿನ ದಾಂಧಲೆ ಪ್ರಕರಣವು ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಥರನೇ ಆಗಿದ್ದು, ಘಟನೆ ಹದ್ದುಬಸ್ತಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಹೊಸಪೇಟೆಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಲಭೆ ಕುರಿತು ಸಂದೇಶ ಪೋಸ್ಟ್ ಮಾಡಿದ್ದವನು ಸೇರಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದಾದ ನಂತರ ಒಂದು ಗುಂಪು ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿದ್ದು, ಪೊಲೀಸ್ ವಾಹನಗಳನ್ನೇ ಧ್ವಂಸಗೊಳಿಸಿದ್ದಾರೆ. ಘಟನೆಯನ್ನು ನಿಯಂತ್ರಿಸುವ ವೇಳೆ ಕೆಲ ಪೊಲೀಸರೂ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    hbl (1)

    ನಿನ್ನೆ ರಾತ್ರಿ ಒಬ್ಬ ಯುವಕ ತನ್ನ ಮೊಬೈಲ್ ವಾಟ್ಸಪ್‌ನ ಸ್ಟೇಟಸ್‌ನಲ್ಲಿ ವಿವಾದಿತ ಪೋಸ್ಟ್ ಹಾಕಿದ್ದರಿಂದಾಗಿ ಗಲಭೆ ಹೊತ್ತಿಕೊಂಡಿದೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲೇ ಇದೆ. ಈಗಾಗಲೇ ಪೋಸ್ಟ್ ಹಾಕಿದ ವ್ಯಕ್ತಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವವರು ಯಾವುದೇ ಧರ್ಮದವರಾದರೂ ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    HBL_ POLICE 1

    ಇದೊಂದು ವ್ಯವಸ್ಥಿತ ಸಂಚು ಇದ್ದಂತೆ ಮೇಲ್ನೋಟಕ್ಕೆ ಕಾಣುತ್ತದೆ. ನನಗೆ ಬಂದ ಮಾಹಿತಿ ಪ್ರಕಾರ ಅಲ್ಲಿ ಮೊದಲೇ ಒಂದು ಲೋಡ್ ಕಲ್ಲು ಸಂಗ್ರಹವಾಗಿತ್ತು. ಕಲ್ಲು ತೂರಾಟದ ವೇಳೆ ಕೆಲ ಪೊಲೀಸ್ ಗಾಯಗೊಂಡಿದ್ದಾರೆ. ಓರ್ವ ಪಿಎಸ್‌ಐ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ತರವಾದ ಘಟನೆಯಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    HBL_ POLICE 4

    ಘಟನೆ ವೇಳೆ ಅಲ್ಲಾಹು ಅಕ್ಬರ್ ಘೋಷಣೆ: ಇನ್ನೂ ಈ ದಾಂಧಲೆಯ ಬಗ್ಗೆ ಸ್ಥಳೀಯ ನಿವಾಸಿಗಳು ಪಬ್ಲಿಕ್ ಟಿವಿಯೊಂದಿಗೆ ತಮ್ಮ ಆತಂಕವನ್ನು ಹೇಳಿಕೊಂಡಿದ್ದಾರೆ. ಏಕಾಏಕಿ ಮನೆಗಳ ಮುಂದೆ ಬಂದು ಅಲ್ಲಾಹು ಅಕ್ಬರ್ ಅಂತ ಘೋಷಣೆ ಕೂಗಲು ಶುರು ಮಾಡಿದ್ದರು. ನಂತರ ಕಾರಿನ ಗಾಜು ಹೊಡಿದು, ಅಂಗಡಿ ಮುಂಗಟ್ಟಿಗೆ ಕಲ್ಲು ತೂರಿದ್ದಾರೆ. ಪೊಲೀಸರು ಬರೋದು ಹತ್ತು ನಿಮಿಷ ತಡವಾಗಿದ್ರೆ ಪುಂಡರು ಮನೆಗಳಿಗೇ ನುಗ್ಗುತ್ತಿದ್ದರು ಎಂದು ಸತ್ಯಾಸತ್ಯತೆಗಳನ್ನು ಬಿಚ್ಚಿಟ್ಟಿದ್ದಾರೆ.

  • ದೆಹಲಿ ಹಿಂಸಾಚಾರದ ಪ್ರಮುಖ ಆರೋಪಿಯ ಬಂಧನ

    ದೆಹಲಿ ಹಿಂಸಾಚಾರದ ಪ್ರಮುಖ ಆರೋಪಿಯ ಬಂಧನ

    ದೆಹಲಿ: ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಪ್ರಕರಣ ಕುರಿತಂತೆ ದೆಹಲಿ ಪೊಲೀಸರು ಪ್ರಮುಖ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

    ತಾಂತ್ರಿಕ ಕಣ್ಗಾವಲ ಸಹಾಯದಿಂದ ಚಂಡೀಗಢದ ಅಪರಾಧ ವಿಭಾಗವು ಸುಖ್‍ದೇವ್ ಸಿಂಗ್(65) ಎಂಬಾತನನ್ನು ಬಂಧಿಸಿದ್ದಾರೆ. ಈತ ಸುಖ್ ದೇವ್, ಕರ್ನಲ್ ಮೂಲದವರಾಗಿದ್ದು, ಭಾರತೀಯ ಕಿಸಾನ್ ಯೂನಿಯನ್ ಸದಸ್ಯ.

    ಈ ಮುನ್ನ ದೆಹಲಿ ಪೊಲೀಸರು ಪ್ರತಿಭಟನೆಯಲ್ಲಿ ಹಿಂಸಾಚಾರ ಕೃತ್ಯ ಎಸಗಿದ ಸಿಂಗ್ ಆರೋಪಿಗಳ ಕುರಿತಂತೆ ಮಾಹಿತಿ ನೀಡಿದವರಿಗೆ 50,000 ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದೀಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸುಖ್ ದೇವ್ ಸಿಂಗ್ ಆಪ್ತರೊಬ್ಬರು ಪೊಲೀಸರಿಗೆ ಸಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ.

    ಕೆಂಪುಕೋಟೆಯಲ್ಲಿ ನಡೆದ ಗಲಭೆಯ ಹಲವು ವೀಡಿಯೋಗಳಲ್ಲಿ ಸುಖ್ ದೇವ್ ಸಿಂಗ್ ಕಾಣಿಸಿಕೊಂಡಿದ್ದು, ಈ ಹಿಂದೆ ಪೊಲೀಸರು ಬಂಧಿಸಿದ್ದ ಗಲಭೆಕೋರರ ಮಧ್ಯೆ ಸುಖ್ ದೇವ್ ಸಿಂಗ್‍ನನ್ನು ಸಹ ಗುರುತಿಸಿದ್ದಾರೆ. ಒಟ್ಟಾರೆ ರಾಜಧಾನಿ ದೆಹಲಿಯಲ್ಲಿ ನಡೆದ ಪ್ರತಿಭಟನೆ ಸಂಬಂಧ ಪೊಲೀಸರು ಈವರೆಗೂ 127 ಜನರನ್ನು ಬಂಧಿಸಿದ್ದಾರೆ.

    ಗಣರಾಜ್ಯೋತ್ಸವ ದಿನದ ಗಲಭೆ ನಂತರ ಪರಾರಿಯಾಗಿದ್ದವರನ್ನು ಬಂಧಿಸಲು, ಹರಿಯಾಣ ಮತ್ತು ಪಂಜಾಬ್‍ನಲ್ಲಿ ತಲಾ 5 ಸದ್ಯರನ್ನು ಒಳಗೊಂಡ 20 ತಂಡಗಳು ತನಿಖೆ ನಡೆಸುತ್ತಿದೆ.