Tag: ಗಲಭೆ

  • 6 ದಿನಗಳಿಂದ ತಲೆ ಮರೆಸಿಕೊಂಡಿದ್ದ ದೆಹಲಿ ಗಲಭೆಯ ಆರೋಪಿ ಶರಣು

    6 ದಿನಗಳಿಂದ ತಲೆ ಮರೆಸಿಕೊಂಡಿದ್ದ ದೆಹಲಿ ಗಲಭೆಯ ಆರೋಪಿ ಶರಣು

    – ತಾಹೀರ್ ವಿಚಾರಣೆ ನಿರಾಕರಿಸಿದ ಕೋರ್ಟ್

    ನವದೆಹಲಿ: ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪಿ ಕೌನ್ಸಿಲರ್ ತಾಹೀರ್ ಹುಸೇನ್ ಗುರುವಾರ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಆದರೆ ಪ್ರಕರಣ ನಮ್ಮ ನ್ಯಾಯವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ವಿಚಾರಣೆ ನಿರಾಕರಿಸಿದೆ.

    ಆರೋಪಿ ತಾಹೀರ್ ತಲೆ ಮರೆಸಿಕೊಂಡ ಆರು ದಿನಗಳ ಬಳಿಕ ದೆಹಲಿ ಪೊಲೀಸರು ಆತನನ್ನು ನ್ಯಾಯಾಲಯದ ಪಾರ್ಕಿಂಗ್ ಸ್ಥಳದಲ್ಲಿ ಬಂಧಿಸಿದ್ದಾರೆ. ತಾಹಿರ್ ಕಾರ್ಕಾರ್ಡೂಮಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಗಲಭೆಯ ಪ್ರಮುಖ ಆರೋಪಿಗಳ ಹೆಸರುಗಳು ಹೊರಬಿದ್ದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ತಾಹೀರ್ ನನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಫೆಬ್ರವರಿ 28ರಂದು ತಾಹೀರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

    ನಿರೀಕ್ಷಿತ ಜಾಮೀನು ಅರ್ಜಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ತಾಹೀರ್, ಫೆಬ್ರವರಿ 24ರಂದು ಗುಂಪೊಂದು ಕಾರ್ಖಾನೆಯ ಮೇಲೆ ದಾಳಿ ಮಾಡಿದಾಗ, ಪೊಲೀಸರು ಕಾರ್ಖಾನೆಯ ಸಮೀಪದ ನನ್ನ ಮನೆಯನ್ನು ಪರಿಶೀಲಿಸಿದ್ದರು. ಆಗ ಕಾರ್ಖಾನೆ ಹಾಗೂ ಮನೆ ಎರಡನ್ನೂ ಮುಚ್ಚಿ ಕೀಲಿಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಫೆಬ್ರವರಿ 24ರ ಇಡೀ ರಾತ್ರಿ ಹಾಗೂ ಫೆಬ್ರವರಿ 25ರ ಇಡೀ ದಿನ ಸ್ನೇಹಿತನ ಮನೆಯಲ್ಲಿದ್ದೆ. ಫೆಬ್ರವರಿ 25ರಂದು ಬೆಳಗ್ಗೆ 8:30ಕ್ಕೆ ಮನೆಯಲ್ಲಿದ್ದ ಬಟ್ಟೆ ತೆಗೆದುಕೊಂಡು ಮನೆಗೆ ಹೋಗಿದ್ದೆ. ಆದರೆ ಮನೆಯ ಮುಂದೆ ಜನಸಂದಣಿ ಇತ್ತು. ಆದ್ದರಿಂದ ಪೊಲೀಸರು ನನ್ನನ್ನು ಹೊರಹೋಗುವಂತೆ ಸಲಹೆ ನೀಡಿದ್ದರು ಎಂದು ಹೇಳಿದ್ದಾನೆ.

    ಹಿಂಸಾಚಾರದ ನಂತರ, ಇಟ್ಟಿಗೆ, ಕಲ್ಲು ಹಾಗೂ ಹಿಂಸಾಚಾರಕ್ಕೆ ಬಳಸಬಹುದಾದ ವಸ್ತುಗಳು ಕೌನ್ಸಿಲರ್ ತಾಹೀರ್ ಮನೆಯ ಮೇಲ್ಭಾವಣಿಯಲ್ಲಿ ದೊರೆತಿವೆ. ಬಾಟಲಿಗಳಲ್ಲಿ ಆಸಿಡ್ ಅನ್ನು ತುಂಬಿ ತಾಹೀರ್ ಮನೆಯಲ್ಲಿ ಇಡಲಾಗಿತ್ತು. ದೆಹಲಿಯ ದಯಾಲ್‍ಪುರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 ಕೊಲೆ ಪ್ರಕರಣದ ಅಡಿಯಲ್ಲಿ ತಾಹೀರ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

    ದೆಹಲಿ ಹಿಂಸಾಚಾರ ಘಟನೆಯಲ್ಲಿ ಈವರೆಗೆ 531 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 47 ಪ್ರಕರಣಗಳು ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿರುವ ಕೇಸ್‍ಗಳಿದ್ದು, 1,647 ಜನರನ್ನು ಬಂಧಿಸಲಾಗಿದೆ.

    8 ದಿನಗಳ ಬಳಿಕ ಶಾರುಖ್ ಅರೆಸ್ಟ್:
    ಪ್ರಮುಖ ಆರೋಪಿ ಮೊಹಮ್ಮದ್ ಶಾರುಖ್‍ನನ್ನು ದೆಹಲಿ ಪೊಲೀಸರು ಮಾರ್ಚ್ 3ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಬರೇಲಿಯಲ್ಲಿ ಬಂಧಿಸಿದ್ದರು. ಫೆಬ್ರವರಿ 24ರಂದು ಜಫರಾಬಾದ್‍ನ ಪೊಲೀಸರ ಮೇಲೆ ಶಾರುಖ್ ಪಿಸ್ತೂಲ್‍ನಿಂದ 8 ಸುತ್ತು ಗುಂಡು ಹಾರಿಸಿದ್ದ. ಆ ಬಳಿಕ 8 ದಿನ ತಲೆ ಮರೆಸಿಕೊಂಡಿದ್ದ.

  • ಮಂಗಳೂರು ಗಲಭೆ- ಸಾವಿರಾರು ಕೇರಳಿಗರಿಗೆ ಪೊಲೀಸ್ ನೋಟಿಸ್

    ಮಂಗಳೂರು ಗಲಭೆ- ಸಾವಿರಾರು ಕೇರಳಿಗರಿಗೆ ಪೊಲೀಸ್ ನೋಟಿಸ್

    – ಅಮಾಯಕರಿಗೂ ನೋಟಿಸ್ ಕಿರಿಕಿರಿ

    ಮಂಗಳೂರು: ಮಂಗಳೂರಿನ ಗಲಭೆ, ಗೋಲಿಬಾರ್ ಘಟನೆಗೂ ಕೇರಳಕ್ಕೂ ಡೈರೆಕ್ಟ್ ಲಿಂಕ್ ಇದೆಯಾ ಅನ್ನೋ ಅನುಮಾನ ಕೇಳಿಬಂದಿತ್ತು. ಕೆಲವರಂತೂ, ಈ ಘಟನೆ ಹಿಂದೆ ಕೇರಳದ ಜಿಹಾದಿಗಳು ಭಾಗಿಯಾಗಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಅಂತಲೇ ಆರೋಪಿಸಿದ್ದರು.

    ಇದೀಗ ಹಿಂಸಾಚಾರ ಘಟನೆಯ ಬೆನ್ನು ಬಿದ್ದಿರುವ ಪೊಲೀಸರು ಕೃತ್ಯದಲ್ಲಿ ಕೇರಳದ ಲಿಂಕ್ ಇರುವುದನ್ನು ಪತ್ತೆ ಮಾಡಲು ಹೊಸ ಉಪಾಯ ಹೂಡಿದ್ದಾರೆ. ಡಿಸೆಂಬರ್ 19ರಂದು ನಡೆದ ಮಂಗಳೂರಿನ ಹಿಂಸಾಚಾರ ಮತ್ತು ಗೋಲಿಬಾರ್ ಘಟನೆಯಾಗಿ ಒಂದು ತಿಂಗಳು ಕಳೆದಿದೆ. ಹಿಂಸಾಚಾರ ಕೃತ್ಯದಲ್ಲಿ ಭಾಗಿಯಾದವರ ಪತ್ತೆಗೆ ಪೊಲೀಸರು ವಿಡಿಯೋ ಫೂಟೇಜ್ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

    ಆದರೆ ವಿಡಿಯೋದಲ್ಲಿ ಸಾವಿರಾರು ಮಂದಿ ಇರುವುದರಿಂದ ಅವರನ್ನು ಪತ್ತೆ ಮಾಡುವುದು ಸುಲಭದ ಕಾರ್ಯವಲ್ಲ. ಹೀಗಾಗಿ ಅಂದು ಘಟನೆ ನಡೆದ ಬಂದರು ಠಾಣೆ ಪರಿಸರಕ್ಕೆ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಮಂದಿಯನ್ನು ಪೊಲೀಸರು ಪಟ್ಟಿ ಮಾಡಿದ್ದಾರೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ, ಹೊರಜಿಲ್ಲೆ ಮತ್ತು ಕೇರಳ ಮೂಲದ ನಿವಾಸಿಗಳನ್ನು ಪಟ್ಟಿ ಮಾಡಿದ್ದು ಸಾವಿರಕ್ಕೂ ಹೆಚ್ಚು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ಹಿಂಸಾಚಾರ ಘಟನೆಯ ಬಳಿಕ ಬಂದರು ಠಾಣೆಯಲ್ಲಿ ದೊಂಬಿ, ಪೊಲೀಸರ ಕೊಲೆಯತ್ನ, ಗಲಭೆ, ಕಲ್ಲು ತೂರಾಟ ಸೇರಿ ಗಂಭೀರ ಅಪರಾಧ ಕೃತ್ಯಗಳ ಬಗ್ಗೆ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿತ್ತು. ಇದೇ ಆಧಾರದಲ್ಲಿ ಆವತ್ತು ಬಂದರು ಠಾಣೆ ವ್ಯಾಪ್ತಿಗೆ ಆಗಮಿಸಿದ್ದ ಪ್ರಮುಖವಾಗಿ ಕೇರಳದ ನಿವಾಸಿಗಳಿಗೆ ಈಗ ನೋಟಿಸ್ ಜಾರಿಯಾಗಿದೆ. ನಿಗದಿಗೊಳಿಸಿದ ದಿನಾಂಕಗಳಂದು ನೋಟಿಸ್ ಪಡೆದವರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕಿದೆ. ಪೊಲೀಸರ ಈ ಕ್ರಮದಿಂದಾಗಿ ಸಾವಿರಾರು ಮಂದಿ ಈಗ ಪೊಲೀಸರ ತನಿಖೆ ಎದುರಿಸುವಂತಾಗಿದೆ.

    ಮಂಗಳೂರು ಗಲಭೆಯಲ್ಲಿ ಆಗಿದ್ದೇನು
    ಡಿ.19ರಂದು 144 ಸೆಕ್ಷನ್ ಉಲ್ಲಂಘಿಸಿ, ಪ್ರತಿಭಟನೆಗೆ ಯತ್ನಿಸಲಾಗಿತ್ತು. ಮುಸ್ಲಿಂ ಯುವಕರ ಗುಂಪು ಸೇರಿ ಪೊಲೀಸರ ಸೂಚನೆ ಲೆಕ್ಕಿಸದೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಬಳಿಕ ಪೊಲೀಸರು ಲಾಠಿಚಾರ್ಜ್ ಮಾಡಿದ್ದಲ್ಲದೆ, ಕಲ್ಲು ತೂರಾಟದಲ್ಲಿ ತೊಡಗಿದ್ದವರನ್ನು ಟಿಯರ್ ಗ್ಯಾಸ್ ಮೂಲಕ ಚದುರಿಸಲು ಯತ್ನಿಸಿದ್ದರು. ಘಟನೆ ಬಳಿಕ ಸಿಸಿಟಿವಿ ಮತ್ತು ಮೊಬೈಲ್, ಕ್ಯಾಮೆರಾ ವಿಡಿಯೋಗಳನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣ ಸಂಬಂಧಿಸಿ ಈವರೆಗೆ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಮಧ್ಯೆ ಕೃತ್ಯದಲ್ಲಿ ಕೇರಳದ ನಿವಾಸಿಗಳು ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈವರೆಗೆ ಬಂಧಿತರಲ್ಲಿ ಕೇರಳದ ಮಂದಿ ಯಾರೂ ಇಲ್ಲ. ಹೀಗಾಗಿ ತಪ್ಪಿಸಿಕೊಂಡಿರುವ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಟವರ್ ಲೊಕೇಶನ್ ಆಧರಿಸಿ ಬಿಲ ತೋಡುವ ಕೆಲಸ ಮಾಡಿದ್ದಾರೆ. ಪೊಲೀಸರ ಈ ಕ್ರಮದಿಂದಾಗಿ ಅಮಾಯಕರಿಗೂ ನೋಟಿಸ್ ಜಾರಿಯಾಗುವಂತಾಗಿದ್ದು ವಿನಃ ಕಾರಣ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ. ಸಂಬಂಧಿಕರ ಮನೆಗಳಿಗೆ ಆಗಮಿಸಿದ್ದ ಬಡ ಮಹಿಳೆಯರಿಗೂ ನೋಟಿಸ್ ಜಾರಿಯಾಗಿದ್ದು ಮುಸ್ಲಿಂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಗಂಭೀರ ಅಪರಾಧ ಆಗಿರುವ ಹಿನ್ನೆಲೆಯಲ್ಲಿ ನೋಟಿಸ್ ಪಡೆದವರು ತಾವು ಆಗಮಿಸಿದ್ದ ಬಗ್ಗೆ ಸೂಕ್ತ ಕಾರಣಗಳನ್ನು ಪೊಲೀಸರಿಗೆ ನೀಡಬೇಕಾಗಿದೆ. ವಿಚಾರಣೆ ವೇಳೆ ಸಂಶಯಾಸ್ಪದ ಕಂಡುಬಂದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರ, ಉಪ್ಪಳ, ಕುಂಬ್ಳೆ ಪರಿಸರದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಒಟ್ಟಿನಲ್ಲಿ ಮಂಗಳೂರಿನ ಹಿಂಸಾಚಾರ ಘಟನೆಯ ನೈಜ ಆರೋಪಿಗಳು ತಲೆಮರೆಸಿಕೊಂಡಿದ್ದರೆ, ಈಗ ಅಮಾಯಕರು ತಾವು ಮಾಡದ ತಪ್ಪಿಗೆ ಪರಿತಪಿಸುವಂತಾಗಿದೆ.

  • ಸತ್ಯವಾದ ವಿಡಿಯೋ ಬಿಡುಗಡೆ ಮಾಡಿದ ಹೆಚ್‍ಡಿಕೆಗೆ ಧನ್ಯವಾದ: ಖಾದರ್

    ಸತ್ಯವಾದ ವಿಡಿಯೋ ಬಿಡುಗಡೆ ಮಾಡಿದ ಹೆಚ್‍ಡಿಕೆಗೆ ಧನ್ಯವಾದ: ಖಾದರ್

    ಮಂಗಳೂರು: ಡಿಸೆಂಬರ್ 19 ರಂದು ನಡೆದ ಮಂಗಳೂರಿನ ಗಲಭೆಯ ಸತ್ಯಾಸತ್ಯತೆಯ ಎಲ್ಲಾ ವೀಡಿಯೋಗಳನ್ನು ಬಿಡುಗಡೆ ಮಾಡಿ ಸತ್ಯವನ್ನು ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಯವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

    ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿರೋದು ಸಂತಸ ತಂದಿದೆ. ಸತ್ಯಕ್ಕೆ ಸಾವಿಲ್ಲ. ಸತ್ಯ ಇಂದಲ್ಲ ನಾಳೆ ಹೊರ ಜಗತ್ತಿಗೆ ಗೊತ್ತಾಗುತ್ತದೆ. ಸರ್ಕಾರ ತನ್ನ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಪ್ರಯತ್ನ ಪಟ್ಟಿತ್ತು. ಆದರೆ ಅದು ಇದೀಗ ಸಾಧ್ಯವಾಗಿಲ್ಲ ಎಂದರು.

    ನನ್ನ ಮೇಲೆ ಕೂಡ ಕೇಸ್ ಹಾಕಿ ಬೇರೆ ರೀತಿ ಬಿಂಬಿಸಲು ಸರ್ಕಾರ ಹೊರಟಿತ್ತು. ಆದರೆ ಈ ವಿಡಿಯೋ ಅಂದಿನ ಘಟನೆ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೊತ್ತಾಗಿದೆ. ನಾನು ಅವತ್ತೇ ಹೇಳಿದ್ದೆ, ಎಲ್ಲಾ ವಿಡಿಯೋ ಬಿಡುಗಡೆ ಮಾಡಿಲ್ಲ ಎಂದು. ಇವತ್ತು ಎಲ್ಲಾ ವಿಡಿಯೋವನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಜನರಿಗೆ ಸತ್ಯ ಗೊತ್ತಾಗಿದೆ. ಹೀಗಾಗಿ ಎಚ್‍ಡಿಕೆಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ: ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ತಪ್ಪಿತಸ್ಥರನ್ನು ತನಿಖೆಯಿಂದ ಕೈಬಿಡಿ ಎಂದು ನಾವು ಎಲ್ಲೂ ಹೇಳುತ್ತಿಲ್ಲ. ಆದರೆ ಅಮಾಯಕರನ್ನು ಪ್ರಕರಣದಿಂದ ಕೈಬಿಡಬೇಕು. ನ್ಯಾಯಾಂಗ ತನಿಖೆಗೆ ಆದರೆ ಮಾತ್ರ ಇದೆಲ್ಲಾ ಸರಿಯಾಗಿ ನಡೆಯುತ್ತೆ. ಆದ್ದರಿಂದ ನಾವು ನ್ಯಾಯಾಂಗ ತನಿಖೆಯನ್ನು ಮಾಡಲು ಒತ್ತಾಯಿಸುತ್ತಿದ್ದೇವೆ. ಈ ವೀಡಿಯೋವನ್ನು ನಾವು ಬಿಡುಗಡೆ ಮಾಡಿದರೆ ಇದು ಫೇಕ್ ಎಂದು ಹೇಳಿ ಅದಕ್ಕೆ ಜಾತಿ ಧರ್ಮದ ಲೇಪ ಹಚ್ಚುತ್ತಿದೆ ಎಂದು ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದರು.

  • ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರು: ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕುತ್ತಿದೆ. ಅದೇ ರೀತಿಯಲ್ಲಿ ಮಂಗಳೂರಿನ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರಿಗೆ ಪುಂಡು ಕಂದಾಯ ಹೇರಿ. ಆಸ್ತಿಯನ್ನು ಜಪ್ತಿ ಮಾಡುವ ಕಾನೂನು ತರಬೇಕೆಂದು ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪೌರತ್ವ ಮಸೂದೆಯನ್ನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಆಸ್ತಿಪಾಸ್ತಿ ಹಾನಿ ಮಾಡಿದವರನ್ನು ಗುರುತಿಸಿ ಅವರ ಆಸ್ತಿಗಳನ್ನು ಜಪ್ತಿ ಮಾಡಲಾರಂಭಿಸಿದ್ದಾರೆ. ಹೀಗಾಗಿ ನಮ್ಮ ರಾಜ್ಯ ಸರ್ಕಾರವೂ ಇಂತಹ ಕ್ರಮಕ್ಕೆ ಮುಂದಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ನಡೆಯುವ ಗಲಭೆಯನ್ನು ನಿಯಂತ್ರಿಸಬಹುದು ಎಂದು ಹೇಳಿದರು.

    ಯಾವುದೇ ಚಳುವಳಿ ಇರಬಹುದು, ಯಾವುದೇ ಪಕ್ಷದ ಚಟುವಟಿಕೆ ಇರಬಹುದು. ಬೆಂಕಿ ಹಾಕುತ್ತೇವೆ ಎನ್ನುವವರ ಮತ್ತು ಬೆಂಕಿ ಹಾಕುವ ಗಲಭೆಕೋರರಿಗೆ ಈ ಮೂಲಕ ಮೂಗುದಾರ ತೊಡಿಸಬಹುದು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ಹೇಳಿದರು.

    ಇದಲ್ಲದೆ ಗಲಭೆ ಪ್ರಕರಣದಲ್ಲಿ ಅಮಾಯಕರು ಸತ್ತರೆ ಪರಿಹಾರ ನೀಡೋದು ಸಹಜ. ಆದರೆ ಕ್ರಿಮಿನಲ್ ಚಟುವಟಿಕೆ ಮಾಡಿದ್ದರೂ ಪರಿಹಾರ ನೀಡಬೇಕೇ ಎಂದು ಕಾಂಗ್ರೆಸ್ಸಿಗರನ್ನು ಪ್ರಶ್ನೆ ಮಾಡಿದ ಸಿಟಿ ರವಿ, ಸರ್ಕಾರವನ್ನು ಅಸ್ಥಿರ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನ. ಈಗ ಪೊಲೀಸರ ಮೇಲೆ ಅನುಮಾನ ಬಂದಿದೆ ಎಂದು ವ್ಯಂಗ್ಯವಾಡಿದರು.

  • ಮಂಗ್ಳೂರು ಗಲಭೆಗೆ ಮೊದಲೇ ಪ್ಲಾನ್- ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

    ಮಂಗ್ಳೂರು ಗಲಭೆಗೆ ಮೊದಲೇ ಪ್ಲಾನ್- ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

    – ಗಲಭೆಗೆ ತಯಾರಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ.

    ಮಂಗಳೂರು ಗೊಲಿಬಾರ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಆದರೆ ಈ ಗಲಭೆ ನಡೆಸಲು ಕೆಲ ಪ್ರತಿಭಟನಾಕಾರರ ಗುಂಪು ಮೊದಲೇ ಪ್ಲಾನ್ ಮಾಡಿಕೊಂಡಿತ್ತು. ಗಲಭೆಗೂ ಮುನ್ನ ಕೆಲ ಗುಂಪು ಗೂಡ್ಸ್ ಆಟೋದಲ್ಲಿ ಕಲ್ಲುಗಳನ್ನು ತರೆಸಿಕೊಂಡಿದ್ದರು. ಗೋಣಿಚೀಲಗಳಲ್ಲಿ ಈ ಕಲ್ಲುಗಳನ್ನು ತುಂಬಿಸಿಡಲಾಗಿತ್ತು. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಕೆಲ ಪ್ರತಿಭಟನಾಕಾರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಲಾರಂಭಿಸಿದ್ದರು. ಬಳಿಕ ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಕೆಲವರು ಮೊದಲೇ ಗಲಭೆಗೆ ತಯಾರಿ ನಡೆಸಿಕೊಂಡೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಗಳು ಬಯಲು ಮಾಡಿದೆ.

    ಯುವಕರಿದ್ದ ಒಂದು ಗುಂಪು ಪ್ರತಿಭಟನೆ ವೇಳೆ ಗಲಭೆ ನಡೆಸಲೆಂದೆ ಕಲ್ಲು ತಂದು ಹಾಕಿದರೆ, ಇನ್ನೊಂದು ಗುಂಪು ಸಿಸಿಟಿವಿಗಳನ್ನು ಒಡೆದು ಹಾಕಿ ಗಲಭೆ ಮಾಡಲು ಯತ್ನಿಸಿದ ದೃಶ್ಯಗಳು ಕೂಡ ಲಭ್ಯವಾಗಿದೆ. ಕಲ್ಲು ತೂರಾಟ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪ್ರತಿಭಟನಾಕಾರರು ಒಡೆಯಲು ಯತ್ನಿಸಿರುವುದು, ಮನೆಗಳ ಮುಂದಿದ್ದ ಕ್ಯಾಮೆರಾಗಳನ್ನು ತಿರುಗಿಸಿ ಹೋಗಿರುವ ದೃಶ್ಯಗಳು ಸೆರೆಯಾಗಿವೆ. ಅಷ್ಟೇ ಅಲ್ಲದೆ ಪೊಲೀಸ್ ವ್ಯಾನ್ ಬರುವುದನ್ನು ಗಮನಿಸಿ ರಸ್ತೆಗೆ ಅಡ್ಡವಾಗಿ ಕಬ್ಬಿಣದ ಕಂಬಗಳನ್ನು ಹಾಕಿ ಓಡಿಹೋಗಿರುವ ದೃಶ್ಯಾವಳಿಗಳು ಕೂಡ ಲಭ್ಯವಾಗಿದೆ.

  • ಮಾರಿಕಾಂಬ ದೇವಿ ಗದ್ದುಗೆ ವಿಷಯಕ್ಕೆ ಎರಡು ಕೋಮಿನ ನಡುವೆ ಘರ್ಷಣೆ

    ಮಾರಿಕಾಂಬ ದೇವಿ ಗದ್ದುಗೆ ವಿಷಯಕ್ಕೆ ಎರಡು ಕೋಮಿನ ನಡುವೆ ಘರ್ಷಣೆ

    ಶಿವಮೊಗ್ಗ: ಮಾರಿಕಾಂಬ ದೇವಿ ಗದ್ದುಗೆ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಎರಡು ಕೋಮುಗಳ ನಡುವೆ ಪರಸ್ಪರ ಕಲ್ಲು ತೂರಾಟ ಕೂಡ ನಡೆದಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಘರ್ಷಣೆಯಲ್ಲಿ ರಾಮರಾಮ್ ಕೋರೆ ಎಂಬವರ ಮೇಲೆ ಇನ್ನೊಂದು ಕೋಮಿನವರು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾಗಿ ಗಾಯಗೊಂಡಿರುವ ರಾಮರಾವ್ ಕೋರೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದೇ ತಿಂಗಳ 31ರಂದು ಗ್ರಾಮದಲ್ಲಿ ಮಾರಿಕಾಂಬ ಜಾತ್ರೆ ನಡೆಯಲಿದೆ. ಹೀಗಾಗಿ ಗ್ರಾಮದ ಒಂದು ಕೋಮಿನವರು ಇಂದು ಸ್ಥಳವನ್ನು ಸ್ವಚ್ಛಗೊಳಿಸಿ ಪೆಂಡಾಲ್ ಹಾಕಲು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ಮತ್ತೊಂದು ಕೋಮಿನ ಗುಂಪು ಈ ಜಾಗ ನಮಗೆ ಸೇರಿದ್ದು ಇಲ್ಲಿ ಗದ್ದುಗೆ ನಿರ್ಮಾಣ ಮಾಡಬೇಡಿ ಎಂದು ಗಲಾಟೆ ತೆಗೆದಿದೆ.

    ಪರಿಸ್ಥಿತಿ ಅರಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ಹಾಗೂ ಸ್ಥಳೀಯ ಶಾಸಕ ಅಶೋಕ್ ಕುಮಾರ್ ನಾಯ್ಕ್ ಗ್ರಾಮಕ್ಕೆ ಭೇಟಿ ನೀಡಿ ಎರಡು ಕೋಮಿನವರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು. ಗಲಭೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಂತರ್ಜಾತಿ ವಿವಾಹ, ಎರಡು ಕುಟುಂಬದ ನಡುವೆ ಗಲಾಟೆ – ಇಬ್ಬರ ಕೈ ಬೆರಳು ಕಟ್

    ಅಂತರ್ಜಾತಿ ವಿವಾಹ, ಎರಡು ಕುಟುಂಬದ ನಡುವೆ ಗಲಾಟೆ – ಇಬ್ಬರ ಕೈ ಬೆರಳು ಕಟ್

    ಕಾರವಾರ: ಅಂತರ್ಜಾತಿ ವಿವಾಹ ಸಂಬಂಧವಾಗಿ ಎರಡೂ ಕುಟುಂಬಗಳು ಬಡಿದಾಡಿಕೊಂಡು ಯುವಕನ ಕುಟುಂಬದ ಆರು ಜನರು ಗಂಭೀರ ಗಾಯಗೊಂಡ ಘಟನೆ ಬನವಾಸಿಯಲ್ಲಿ ನಡೆದಿದೆ.

    ಬನವಾಸಿಯ ಕೃಷ್ಣಚೆನ್ನಯ್ಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಕುನವಳ್ಳಿಯ ಮಡಿವಾಳ ಜನಾಂಗದ ಯುವತಿಯನ್ನು ಪ್ರೀತಿಸಿದ್ದು, ಎಂಟು ದಿನದ ಹಿಂದೆ ಬೆಂಗಳೂರಿನಲ್ಲಿ ಮದುವೆಯಾಗಿದ್ದರು.

    ಯುವಕ ದಲಿತ ಎಂಬ ಕಾರಣಕ್ಕೆ ಯುವತಿಯ ಕುಟುಂಬದವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮದುವೆ ಮಾಡಿಕೊಂಡು ಜೋಡಿಗಳು ಇಂದು ಬೆಂಗಳೂರಿನಿಂದ ಊರಿಗೆ ಬಂದಿದ್ದಾರೆ. ಈ ಮದುವೆಗೆ ಯಾವುದೇ ಅಧಿಕೃತ ದಾಖಲೆ ಇಲ್ಲದನ್ನು ತಿಳಿದ ಯುವತಿ ಕುಟುಂಬದವರು ಯುವತಿಯನ್ನು ಅಪಹರಿಸಿ ಕರೆದುಕೊಂಡು ಹೋಗಲು ಬನವಾಸಿಗೆ ಬಂದಿದ್ದಾರೆ.

    ಈ ವೇಳೆ ಮನೆಯಲ್ಲಿ ಮದುವೆಯಾದ ನವ ಜೋಡಿಗಳು ಇರಲಿಲ್ಲ. ಇದರಿಂದ ಕೋಪಗೊಂಡ ಯುವತಿಯ ಚಿಕ್ಕಪ್ಪ ಹೊಳಿಯಪ್ಪ ಶಾನವಳ್ಳಿ ಮತ್ತು ಸಂಬಧಿಕರು ಯುವಕನ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಎರಡೂ ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು ಯುವಕನ ಸಹೋದರ ಹಾಗೂ ಮಾವನಿಗೆ ಮಚ್ಚಿನಿಂದ ಹೊಡೆದಿದ್ದು ಬೆರಳುಗಳು ತುಂಡಾಗಿವೆ. ಈ ಬಡಿದಾಟದಲ್ಲಿ ಒಟ್ಟು ಆರು ಜನರಿಗೆ ಗಂಭೀರ ಗಾಯವಾಗಿದೆ.

    ಗಾಯಾಳುಗಳನ್ನು ಬನವಾಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಎರಡೂ ಕುಟುಂಬದ ವಿರುದ್ಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾರವಾರದಲ್ಲಿ ಸಂಭ್ರಮಾಚರಣೆ ಬದಲು ಪರೇಶ್ ಮೇಸ್ತ ಹೆಸರಿನಲ್ಲಿ ಬಿಜೆಪಿಯಿಂದ ಪೂಜೆ

    ಕಾರವಾರದಲ್ಲಿ ಸಂಭ್ರಮಾಚರಣೆ ಬದಲು ಪರೇಶ್ ಮೇಸ್ತ ಹೆಸರಿನಲ್ಲಿ ಬಿಜೆಪಿಯಿಂದ ಪೂಜೆ

    ಕಾರವಾರ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಗೆಲುವು ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭ್ರಮಾಚರಣೆ ಮಾಡದೇ ಬಿಜೆಪಿ ಕಾರ್ಯಕರ್ತರು ಹೊನ್ನಾವರದಲ್ಲಿ ಸಾವನ್ನಪ್ಪಿದ್ದ ಪರೇಶ್ ಮೇಸ್ತಾ ಹೆಸರಿನಲ್ಲಿ ಪೂಜೆ ಮಾಡಿದ್ದಾರೆ.

    ಇಂದು ಕಾರವಾರದ ಸುಭಾಷ್ ಸರ್ಕಲ್ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಕಾರ್ಯಕರ್ತರೊಂದಿಗೆ ಪೂಜೆ ಸಲ್ಲಿಸಿ ಮನೋಜ್ ಭಟ್ ಮಾಧ್ಯಮಗಳ ಜೊತೆ ಮಾತನಾಡಿದರು.

    ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಗಲಭೆಗಳಾಗಿದ್ದು, ಈ ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹಾಗೂ ಅಮಾಯಕ ಜನರನ್ನು ಬಂಧಿಸಲಾಗುತ್ತಿದೆ. ಈ ಕಾರಣದಿಂದ ನಾವು ವಿಜಯೋತ್ಸವ ಆಚರಿಸುವುದಿಲ್ಲ, ಬದಲಾಗಿ ದೇವರಿಗೆ ಪೂಜೆ ಸಲ್ಲಿಸುತ್ತೇವೆ. ಈ ಮೂಲಕ ಎಲ್ಲ ವಿಘ್ನಗಳು ನಿವಾರಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ ಎಂದು ಕಾರವಾರದ ಬಿಜೆಪಿ ಅಧ್ಯಕ್ಷ ಮನೋಜ್ ಭಟ್ ತಿಳಿಸಿದ್ದಾರೆ.

    ಪರೇಶ್ ಮೇಸ್ತಾ ಸಹಜವಾಗಿ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಆದರೆ ಮರೇಶ್ ಮೇಸ್ತಾ ತಂದೆ ವೈದ್ಯರು ಸುಳ್ಳು ವರದಿ ನೀಡಿದ್ದಾರೆ. ಮಗನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದ್ದರು. ಭಾರೀ ಪ್ರತಿಭಟನೆಗಳು ನಡೆದ ಬಳಿಕ ಸರ್ಕಾರ ಈ ಪ್ರಕರಣವನ್ನು ತನಿಖೆ ನಡೆಸಲು ಸಿಬಿಐಗೆ ವಹಿಸಿದೆ.

  • ಯುವಕರ ಹುಚ್ಚಾಟಕ್ಕೆ ಹೊತ್ತಿ ಉರಿದ ಬೆಳಗಾವಿ-ಕಾರು, ಆಟೋಗಳು ಬೆಂಕಿಗಾಹುತಿ, ಪೊಲೀಸರಿಗೆ ಗಾಯ

    ಯುವಕರ ಹುಚ್ಚಾಟಕ್ಕೆ ಹೊತ್ತಿ ಉರಿದ ಬೆಳಗಾವಿ-ಕಾರು, ಆಟೋಗಳು ಬೆಂಕಿಗಾಹುತಿ, ಪೊಲೀಸರಿಗೆ ಗಾಯ

    ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ರಾತ್ರಿ ಗಲಭೆ ಸಂಭವಿಸಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ನಗರದ ಖಡಕಗಲ್ಲಿ, ಖಂಜರಗಲ್ಲಿ, ಶಾಸ್ತ್ರಿ ಚೌಕ ಸುತ್ತಮುತ್ತ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.

    ಗಲಾಟೆಯಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ಹಾಗೂ ಬಾಟಲ್ ತೂರಾಟ ನಡೆಸಲಾಗಿದೆ. ಅಲ್ಲದೇ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಸುಮಾರು 4 ಬೈಕ್, 1 ಕಾರು, 1 ಆಟೋ ಬೆಂಕಿಗೆ ಆಹುತಿಯಾಗಿದ್ದು, ಅನೇಕ ವಾಹನಗಳು ಜಖಂ ಆಗಿವೆ.

    ಎರಡು ಗುಂಪುಗಳ ನಡುವೆ ತೀವ್ರ ಕಲ್ಲು ತೂರಾಟ ನಡೆದ್ದರಿಂದ ರಸ್ತೆ ತುಂಬ ಕಲ್ಲು, ಗಾಜಿನ ಚುರುಗಳು ಬಿದ್ದಿವೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ನಗರ ಪೊಲೀಸ್ ಆಯುಕ್ತ ಕೃಷ್ಣ ಭಟ್, ಡಿಸಿಪಿ ಅಮರನಾಥರೆಡ್ಡಿ ಹಾಗೂ ಮಾರ್ಕೆಟ್ ಎಸಿಪಿ ಶಂಕರ ಮಾರಿಹಾಳ ಅವರಿಗೂ ಘಟನೆಯಲ್ಲಿ ಗಾಯವಾಗಿದೆ. ಶಂಕರ ಮಾರಿಹಾಳರಿಗೆ ಸೇರಿದ ಪೊಲೀಸ್ ವಾಹನ ಸಂಪೂರ್ಣ ಜಖಂ ಆಗಿದೆ.

    ಪರಿಸ್ಥಿತಿಯನ್ನು ನಿಯಂತ್ರಿಸಿ ಸ್ಥಳದಲ್ಲಿ ಶಾಂತಿ ಕಾಪಾಡಲು ಕೆ ಎಸ್‍ ಆರ್ ಪಿ ತುಕಡಿ ಹಾಗೂ ನಗರದ ವಿವಿಧ ಠಾಣೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಗಲಭೆ ಸಂಭವಿಸಿದ ಸಂದರ್ಭದಲ್ಲಿ ದುಷ್ಕರ್ಮಿಗಳು ಪಟಾಕಿ ಸಿಡಿಸಿದ್ದು, ಅಶ್ರುವಾಯು ಪ್ರಯೋಗ ಅನ್ನೋ ಅನುಮಾನ ವ್ಯಕ್ತವಾಗಿತ್ತು. ಘಟನೆಯಲ್ಲಿ ಗಲಭೆ ಮಾಡಿದ ವ್ಯಕ್ತಿಗಳ ವಿಡಿಯೋ ಲಭ್ಯವಾಗಿದ್ದು, ಘಟನೆ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಗಲಭೆಗೆ ಸ್ಪಷ್ಟಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಡಿಸಿಪಿ ಅಮರನಾಥ ರೆಡ್ಡಿ ಹೇಳಿದ್ದಾರೆ.

  • ದಕ್ಷಿಣ ಕನ್ನಡ ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದಕ್ಕೆ ಐಜಿಪಿ ಹರಿಶೇಖರನ್ ಎತ್ತಂಗಡಿ?

    ದಕ್ಷಿಣ ಕನ್ನಡ ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದಕ್ಕೆ ಐಜಿಪಿ ಹರಿಶೇಖರನ್ ಎತ್ತಂಗಡಿ?

    ಬೆಂಗಳೂರು: ದಕ್ಷಿಣ ಕನ್ನಡ ಗಲಭೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದು, ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಎತ್ತಂಗಡಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ದಕ್ಷಿಣ ಕನ್ನಡ ಗಲಭೆಯ ಪರಿಸ್ಥಿತಿ ನಿಭಾಯಿಸುವಲ್ಲಿ ಹರಿಶೇಖರನ್ ವಿಫಲವಾಗಿದ್ದಾರೆ. ಗಲಭೆ ವೇಳೆ ಕೂಡಲೇ ಶಾಂತಿ ಸಭೆ ನಡೆಸಲಿಲ್ಲ. ಎರಡೂ ಸಮಾಜದ ಮುಖಂಡರ ಮನವೊಲಿಸಿಲ್ಲ ಅಂತ ಸಿಎಂ ಕಿಡಿಕಾರಿದ್ದಾರೆ.

    ಬಿಜೆಪಿ ಮುಖಂಡರಿಗೆ ಸಹಾನುಭೂತಿ ತೋರಿಸಿದ ಪೊಲೀಸರ ಬಗ್ಗೆಯೂ ಸಿಎಂ ಕೆಂಗಣ್ಣು ಬೀರಿದ್ದಾರೆ. ಹೀಗಾಗಿ, ಈ ಹಿಂದೆ ದಕ್ಷಿಣ ಕನ್ನಡ ಎಸ್‍ಪಿಯಾಗಿದ್ದ ಭೂಷಣ್ ಜಿ ಬೊರಸೆ ವಿರುದ್ಧವೂ ಕಿಡಿಕಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದಿದ್ದ ಪೊಲೀಸ್ ಅಧಿಕಾರಿಗಳ ಸಭೆಯಲ್ಲೂ ಸಿಎಂ ಸಿಟ್ಟು ಹೊರಹಾಕಿದ್ದರು.

    https://www.youtube.com/watch?v=4C5xONzT-FI