Tag: ಗಲ್ಫ್ ರಾಷ್ಟ್ರಗಳು

  • ಸೆಪ್ಟೆಂಬರ್ 2ರಂದು ಗಲ್ಫ್ ದೇಶಗಳಲ್ಲಿ ಇ-ಮಣ್ಣು ಚಿತ್ರ ಬಿಡುಗಡೆಗೆ ‘ಓವರ್ಸೀಸ್ ಮೂವೀಸ್ ಗಲ್ಫ್ ತಂಡ ‘ಸಜ್ಜು!

    ಸೆಪ್ಟೆಂಬರ್ 2ರಂದು ಗಲ್ಫ್ ದೇಶಗಳಲ್ಲಿ ಇ-ಮಣ್ಣು ಚಿತ್ರ ಬಿಡುಗಡೆಗೆ ‘ಓವರ್ಸೀಸ್ ಮೂವೀಸ್ ಗಲ್ಫ್ ತಂಡ ‘ಸಜ್ಜು!

    ದುಬೈ: ಗಲ್ಫ್ ದೇಶಗಳಲ್ಲಿ ಸೆಪ್ಟೆಂಬರ್ 2ರಂದು ಇ-ಮಣ್ಣು ಚಿತ್ರ ಬಿಡುಗಡೆಗೆ ‘ಓವರ್ಸೀಸ್ ಮೂವೀಸ್ ಗಲ್ಫ್ ತಂಡ’ ಸಜ್ಜಾಗಿದೆ.

    ದುಬೈ ಫಾರ್ಚ್ಯೂನ್ ಏಟ್ರಿಎಂ ಸಭಾಂಗಣದಲ್ಲಿಈ ಸಂಬಂಧ ಮಾಧ್ಯಮ ಸಂವಾದ ನಡೆಯಿತು. ಮಾಧ್ಯಮ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎನ್ಆರೈ ಫೋರಂ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ವೇದಿಕೆಯಲ್ಲಿದ್ದರು. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ತುಂಬಾ ಒಳ್ಳೆಯ ಹುಡುಗಿ, ಫೇಕ್ ಗುಣವಿಲ್ಲ: ಅರ್ಜುನ್ ರಮೇಶ್

    ಇ-ಮಣ್ಣು ಚಿತ್ರದ ಕುರಿತು ನಿರ್ಮಾಪಕರಾದ ಈಶ್ವರ್ ದಾಸ್ ಶೆಟ್ಟಿಯವರು ಇ-ಮಣ್ಣು ಚಿತ್ರ ನಿರ್ಮಾಣ ಹೇಗಾಯಿತು ಎಂದು ವಿವರಿಸಿದರು. ಚಿತ್ರದ ನಿರ್ದೇಶಕ ಶಿವಧ್ವಜ್ ವೀಡಿಯೋ ಸಂದೇಶದ ಮೂಲಕ ಚಿತ್ರ ಬಿಡುಗಡೆಗೆ ಶ್ರಮಿಸುತ್ತಿರುವ ತಂಡಕ್ಕೆ ಶುಭ ಕೋರಿದರು.

    ಇದೇ ಸಂದರ್ಭದಲ್ಲಿ ಗಲ್ಫ್ ದೇಶಗಳಲ್ಲಿ ಚಲನಚಿತ್ರ ಬಿಡುಗಡೆ, ಪ್ರೀಮಿಯರ್ ಶೋ, ಆಡಿಯೋ ಬಿಡುಗಡೆ, ಚಲನಚಿತ್ರ ಶೂಟಿಂಗ್ ಮಾಡಲು ಅಧಿಕೃತ ಪರವಾನಗಿ ಪಡೆದ ಅನಿವಾಸಿ ಕನ್ನಡಿಗರ ಪ್ರಪ್ರಥಮ ಚಿತ್ರವಿತರಕ ಸಂಸ್ಥೆಯಾದ ‘ಓವರ್ಸೀಸ್ ಮೂವೀಸ್ ಗಲ್ಫ್’ ಗೆ ಅಧಿಕೃತ ಚಾಲನೆ ನೀಡಲಾಯಿತು. ಸೆಂಥಿಲ್ ಬೆಂಗಳೂರು, ಮಲ್ಲಿಕಾರ್ಜುನ ಗೌಡ, ಈಶ್ವರ್ ದಾಸ್ ಶೆಟ್ಟಿ, ಶಶಿಧರ್ ನಾಗರಾಜಪ್ಪ ನೇತೃತ್ವದ ಈ ಸಂಸ್ಥೆಯ ಅಡಿಯಲ್ಲಿ ಇ-ಮಣ್ಣು ಚಿತ್ರ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಅಧ್ಯಕ್ಷರಾದ ಹಿದಾಯತ್ ಅಡ್ಡೂರ್, ಕನ್ನಡಿಗರು ದುಬೈ ಅಧ್ಯಕ್ಷೆ ಉಮಾ ವಿದ್ಯಾಧರ್, ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಆನಂದ್ ಬೈಲೂರು, ಸುಗಂಧರಾಜ ಬೇಕಲ್, ಗಣೇಶ್ ರೈ, ಚಿತ್ರ ನಿರ್ಮಾಪಕ, ಉದ್ಯಮಿ ಹರೀಶ್ ಶೇರಿಗಾರ್, ಕನ್ನಡ ಪಾಠ ಶಾಲೆಯ ನಾಗರಾಜ್ ರಾವ್, ಗವಾಸ್ಕರ್, ಸಿದ್ಧಲಿಂಗೇಶ್, ಸನ್ನಿ ಕರ್ನಾಟಕ ಮೀಡಿಯಾ ಫೋರಂನ ಇಮ್ರಾನ್ ಎರ್ಮಾಳ್, ಬಿಲ್ಲವಾಸ್ ದುಬೈನ ಸತೀಶ್ ಪೂಜಾರಿ, ಹೆಮ್ಮೆಯ ಕನ್ನಡಿಗರು ದುಬೈನ ಮಮತಾ, ದುಬೈ ಅನಿವಾಸಿ ಕನ್ನಡಿಗರು ತಂಡದ ಫಿರೋಜ್ ಮತ್ತು ಹಲವು ಕನ್ನಡ ಪರ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದು, ಇ-ಮಣ್ಣು ಚಿತ್ರದ ಪ್ರೀಮಿಯರ್ ಶೋ ಯಶಸ್ವಿಗೆ ಶುಭ ಹಾರೈಸಿದರು.

    ಇ-ಮಣ್ಣು ಪ್ರೀಮಿಯರ್ ಶೋ ಕುರಿತು ಹೆಚ್ಚಿನ ಮಾಹಿತಿಗಾಗಿ, ಟಿಕೆಟ್ ಬುಕ್ಕಿಂಗ್ ಗಾಗಿ ಸಂಪರ್ಕಿಸಿ: ಸೆಂಥಿಲ್ ಬೆಂಗಳೂರು 050 391 1719

    Live Tv
    [brid partner=56869869 player=32851 video=960834 autoplay=true]

  • ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

    ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

    ನವದೆಹಲಿ: ಪಿಎಂ ನರೇಂದ್ರ ಮೋದಿ ಅವರ ಯುಎಇ ಭೇಟಿಗೆ ಮುನ್ನ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಪ್ರವಾದಿಯ ವಿಷಯದಲ್ಲಿ ಭಾರತದ ನಿಲುವಿನ ಬಗ್ಗೆ ಗಲ್ಫ್ ರಾಷ್ಟ್ರಗಳಿಗೆ ತಿಳಿವಳಿಕೆ ಇದೆ ಎಂದು ತಿಳಿಸಿದರು.

    ವಿನಯ್ ಮೋಹನ್ ಕ್ವಾತ್ರಾ ಅವರು ಶುಕ್ರವಾರ ಪ್ರವಾದಿ ಮೊಹಮ್ಮದ್ ವಿವಾದಾತ್ಮಕ ಹೇಳಿಕೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಭಾರತವು ತನ್ನ ನಿಲುವನ್ನು ವಿವಿಧ ವೇದಿಕೆಗಳಲ್ಲಿ ತಿಳಿಸಿದೆ. ಬಹುತೇಕ ಎಲ್ಲ ಗಲ್ಫ್ ರಾಷ್ಟ್ರಗಳು ಭಾರತದ ನಿಲುವಿನ ಬಗ್ಗೆ ತಿಳಿವಳಿಕೆಯನ್ನು ಹೊಂದಿವೆ. ನಾವು ವಿವಿಧ ವೇದಿಕೆಗಳಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೇವೆ. ಅದನ್ನು ಇನ್ನೂ ಮುಂದೆಯೂ ಮಾತನಾಡುವುದು ಸರಿಯಲ್ಲ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ನಾನು ಕಲಿತ ಶಾಲೆಯನ್ನ ದತ್ತು ಪಡೆದು ಮಾದರಿ ಶಾಲೆ ಮಾಡುತ್ತೇನೆ: ಪ್ರಮೋದ್ ಮುತಾಲಿಕ್ 

    ಮೋದಿ ಅವರ ಜರ್ಮನಿ ಮತ್ತು ಯುಎಇ ಭೇಟಿಯ ಕುರಿತು ವಿಶೇಷ ಮಾಹಿತಿ ನೀಡುವ ಸಂದರ್ಭದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದರು. ನಂತರ ಮೋದಿ ಅವರ ಮೊದಲ ಯುಎಇ ಭೇಟಿಯ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಯುಎಇ ಭೇಟಿಯು ಎರಡು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ಮೊದಲು ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ಅವರ ನಿಧನಕ್ಕೆ ಸಂತಾಪ ಸೂಚಿಸಲು. ಎರಡನೆಯದು ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸುವುದು ಎಂದು ವಿವರಿಸಿದರು.

    ಯುಎಇಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್ 

    ಜೂನ್ 26-27 ರಂದು ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಜರ್ಮನಿಗೆ ಭೇಟಿ ನೀಡಲಿದ್ದಾರೆ. ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಮೋದಿ ಜೂನ್ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಪ್ರಯಾಣಿಸಲಿದ್ದಾರೆ.

    Live Tv