Tag: ಗವರ್ನರ್

  • ರೈಲುಗಳ ನಡುವೆ ಭೀಕರ ಅಪಘಾತ- 32 ಮಂದಿ ದುರ್ಮರಣ

    ರೈಲುಗಳ ನಡುವೆ ಭೀಕರ ಅಪಘಾತ- 32 ಮಂದಿ ದುರ್ಮರಣ

    ಅಥೆನ್ಸ್: ಪ್ಯಾಸೆಂಜರ್ ಹಾಗೂ ಗೂಡ್ಸ್ ರೈಲಿನ (Train) ನಡುವೆ ಅಪಘಾತ ಸಂಭವಿಸಿ 32 ಜನರು ಮೃತಪಟ್ಟು, 85 ಮಂದಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಗ್ರೀಸ್‍ನ (Greece) ಟೆಂಪೆಯಲ್ಲಿ ನಡೆದಿದೆ.

    ಘಟನೆ ಬಗ್ಗೆ ಮಾಹಿತಿ ನೀಡಿರುವ ಥೆಸ್ಸಾಲಿ ಪ್ರದೇಶದ ಗವರ್ನರ್ (Governor) ಕಾನ್ಸಾಂಟಿನೋಸ್ ಅಗೋರಾಸ್ಟೋಸ್, ಅಪಘಾತ (Accident) ಬಹಳ ಪ್ರಬಲವಾಗಿ ನಡೆದಿದೆ. ರೈಲಿನ ಮುಂಭಾಗದ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಎದುರಿನ ಎರಡು ಬೋಗಿಗಳು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಲಾರಿ ಮೇಲೆ ಮುರಿದು ಬಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆ- ತಪ್ಪಿದ ಅನಾಹುತ

    ರೈಲಿನಲ್ಲಿ ಸುಮಾರು 350 ಪ್ರಯಾಣಿಕರಿದ್ದರು. ಅದರಲ್ಲಿ 250 ಪ್ರಯಾಣಿಕರನ್ನು (Passengers) ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಗವರ್ನರ್ ತಿಳಿಸಿದ್ದಾರೆ.

    ಎರಡು ರೈಲುಗಳ ನಡುವಿನ ಘರ್ಷಣೆಯ ತೀವ್ರತೆಯಿಂದ ರಕ್ಷಣಾ ಕಾರ್ಯದಲ್ಲಿ ವಿಳಂಬವಾಗುತ್ತಿದೆ ಎಂದು ಅಗ್ನಿಶಾಮಕ ದಳದ (Fire service) ವಕ್ತಾರ ವಾಸಿಲಿಸ್ ವರ್ತಕೊಯಾನಿಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ರಕ್ಷಣಾ ಕಾರ್ಯಕ್ಕೆ ಸೇನೆಯ ನೆರವುಕೋರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಣೆಯಾಗಿದ್ದ 6ರ ಬಾಲಕಿ ಶವವಾಗಿ ಪತ್ತೆ – ಅತ್ಯಾಚಾರದ ಶಂಕೆ

  • ಫೋಟೋಗಾಗಿ ಬೆಂಗ್ಳೂರು ಎಫ್‍ಸಿ ನಾಯಕ ಸುನಿಲ್ ಚೆಟ್ರಿಯನ್ನು ತಳ್ಳಿದ ಬಂಗಾಳದ ಗವರ್ನರ್

    ಫೋಟೋಗಾಗಿ ಬೆಂಗ್ಳೂರು ಎಫ್‍ಸಿ ನಾಯಕ ಸುನಿಲ್ ಚೆಟ್ರಿಯನ್ನು ತಳ್ಳಿದ ಬಂಗಾಳದ ಗವರ್ನರ್

    ಕೋಲ್ಕತ್ತಾ: ಡುರಾಂಡ್ ಕಪ್ ಫುಟ್‍ಬಾಲ್ 2022ರನ್ನು (Durand Cup Football Tournament) ಬೆಂಗಳೂರು ಎಫ್‍ಸಿ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಫೈನಲ್‍ನಲ್ಲಿ ಹೋರಾಡಿ ಪ್ರಸ್ತಿಗೆದ್ದ ಬೆಂಗಳೂರು ಎಫ್‍ಸಿ (Bengaluru FC) ತಂಡದ ನಾಯಕ ಸುನಿಲ್‌ ಚೆಟ್ರಿ (Sunil Chhetri) ಅವರನ್ನು ಪ್ರಶಸ್ತಿ ಸಮಾರಂಭದ ವೇಳೆ ಬಂಗಾಳದ ಗವರ್ನರ್ (Governor) ಲಾ ಗಣೇಶನ್ (La Ganesan) ಫೋಟೋಗಾಗಿ (Photo) ತಳ್ಳಿದ ಪ್ರಸಂಗವೊಂದು ನಡೆದಿದೆ.

    ಡುರಾಂಡ್ ಕಪ್ 2022 ಫೈನಲ್ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಿತು. ಫೈನಲ್‍ನಲ್ಲಿ ಬೆಂಗಳೂರು ಎಫ್‍ಸಿ ಮತ್ತು ಮುಂಬೈ ಸಿಟಿ ಎಫ್‍ಸಿ (Mumbai City FC) ತಂಡಗಳು ಕಾದಾಟ ನಡೆಸಿದವು. ರೋಚಕ ಹೋರಾಟದಲ್ಲಿ ಬೆಂಗಳೂರು ಎಫ್‍ಸಿ ತಂಡ ಮುಂಬೈ ವಿರುದ್ಧ 2-1 ಅಂತರದ ಜಯದೊಂದಿಗೆ ಪ್ರಶಸ್ತಿಗೆ ಮುತ್ತಿಕ್ಕಿತು. ಇದನ್ನೂ ಓದಿ: ನಮ್ದು ಕಲ್ಲಂಗಡಿಯಾದರೆ ನಿಮ್ದು ಹಾರ್ಪಿಕ್ – ಇಂಡೋ ಪಾಕ್ ಅಭಿಮಾನಿಗಳ ಜೆರ್ಸಿ ಫೈಟ್

    ಬಳಿಕ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಂಗಳೂರು ಎಫ್‍ಸಿ ತಂಡದ ನಾಯಕ ಸುನಿಲ್‌ ಚೆಟ್ರಿ ಪ್ರಶಸ್ತಿ ಪಡೆಯಲು ವೇದಿಕೆ ಮೇಲೆ ತೆರಳಿದ್ದಾರೆ. ಈ ವೇಳೆ ಪ್ರಶಸ್ತಿ ಪ್ರಧಾನ ಮಾಡಿದ ಬಂಗಾಳದ ಗವರ್ನರ್ ಲಾ ಗಣೇಶನ್ ಫೋಟೋಗಾಗಿ ಛೆಟ್ರಿಯನ್ನು ತಳ್ಳಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ರೋಹಿತ್ – ಆ್ಯಂಕರ್ ಎಡವಟ್ಟು

    ಇದೀಗ ಈ ಘಟನೆಯ ಸಾಕಷ್ಟು ವೀಡಿಯೋಗಳು ವೈರಲ್ ಆಗುತ್ತಿದ್ದು, ಈ ರಾಜಕಾರಣಿಗಳಿಗೆ ಯಾಕಿಷ್ಟು ಫೋಟೋ ಹುಚ್ಚು ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಕಪ್ ಗೆಲ್ಲಲು ಮೈದಾನದಲ್ಲಿ ಹೋರಾಡಿದವರು ಸುನಿಲ್ ಚೆಟ್ರಿ ಆದರೆ ಫೋಟೋಗೆ ಫೋಸ್ ನೀಡಲು ಒದ್ದಾಡಿದವರು ಗವರ್ನರ್ ಎಂಬ ಆಕ್ರೋಶದ ಮಾತುಗಳು ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಮೂರು ವರ್ಷಕ್ಕೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಮರು ನೇಮಕ

    ಮುಂದಿನ ಮೂರು ವರ್ಷಕ್ಕೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಮರು ನೇಮಕ

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‍ನ ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರನ್ನು ಮತ್ತೆ ಮುಂದಿನ ಮೂರು ವರ್ಷಗಳವರೆಗೆ ಅದೇ ಸ್ಥಾನಕ್ಕೆ ಕೇಂದ್ರ ಸರ್ಕಾರ ಮರು ನೇಮಕ ಮಾಡಿದೆ.

    RBI

    ಶಕ್ತಿಕಾಂತ ದಾಸ್ ಅವರು 2024ರ ಡಿಸೆಂಬರ್‍ವರೆಗೆ ಆರ್‌ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನೊಳಗೊಂಡ ಸಂಪುಟ ನೇಮಕಾತಿಗಳ ಸಮಿತಿಯು ಈ ನಿರ್ಧಾರ ಕೈಗೊಂಡಿದೆ. ಮುಂದಿನ ಆದೇಶದವರೆಗೂ ಆರ್‌ಬಿಐ ಗವರ್ನರ್ ಆಗಿ ಶಕ್ತಕಾಂತ್ ದಾಸ್ ಮರು ನೇಮಕಕ್ಕೆ ಸಮಿತಿಯು ಗುರುವಾರ ತಡರಾತ್ರಿ ಅನುಮೋದನೆ ನೀಡಿದೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

    SHAKTIKANTA DAS

    ಶಕ್ತಿಕಾಂತ್ ದಾಸ್ ಅವರು 2018ರ ಡಿಸೆಂಬರ್‍ನಲ್ಲಿ ಮೂರು ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಡೆಂಗ್ಯೂ ಉಲ್ಬಣ – ಆಸ್ಪತ್ರೆಗಳಲ್ಲಿ ಬೆಡ್‍ಗಳ ಕೊರತೆ

  • ಸೋಮವಾರಕ್ಕೆ ವಿಧಾನಸಭೆ ಕಲಾಪ ಮುಂದೂಡಿಕೆ – ಸುಳಿವು ಕೊಟ್ಟ ಸಿದ್ದರಾಮಯ್ಯ

    ಸೋಮವಾರಕ್ಕೆ ವಿಧಾನಸಭೆ ಕಲಾಪ ಮುಂದೂಡಿಕೆ – ಸುಳಿವು ಕೊಟ್ಟ ಸಿದ್ದರಾಮಯ್ಯ

    ಬೆಂಗಳೂರು: ವಿಶ್ವಾಸಮತಯಾಚನೆಯ ಪ್ರಸ್ತಾಪ ಕುರಿತಂತೆ ಸದನದಲ್ಲಿ ಚರ್ಚೆ ಮುಂದುವರಿದಿದ್ದು, ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟಿದ್ದಾರೆ.

    ಭೋಜನ ವಿರಾಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ವಿಶ್ವಾಸಮತಯಾಚನೆ ಚರ್ಚೆ ಮುಂದಕ್ಕೆ ಹೋಗುವ ಸಾಧ್ಯತೆಯಿದ್ದು, ಈಗ ಸಿಎಂ ಮಾತನಾಡಿದ್ದಾರೆ. ಹಲವು ನಾಯಕರು ಮಾತನಾಡುವುದು ಬಾಕಿ ಇದೆ. ಅಲ್ಲದೇ ಇಂದು ಶುಕ್ರವಾರ ಆಗಿದ್ದು, ಅರ್ಧ ದಿನ ಸದನ ಇರುವ ಸಾಧ್ಯತೆ ಇದೆ. ಆದ್ದರಿಂದ ಸೋಮವಾರವೂ ಚರ್ಚೆ ಮುಂದುವರಿಯುತ್ತದೆ ಎಂದು ಹೇಳಿದರು.

    ಆಪರೇಷನ್ ಕಮಲದ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶಾಸಕ ಶ್ರೀನಿವಾಸಗೌಡ ಅವರೇ ಮಾತನಾಡಿದ್ದು, ಹಣ ಯಾರು ತಂದು ಕೊಟ್ಟಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಅದರ ಅನ್ವಯ ಸ್ಪೀಕರ್ ಅವರು ಕ್ರಮಕೈಗೊಳ್ಳುತ್ತಾರೆ ಎಂದರು.

    ಚರ್ಚೆಯ ಬಳಿಕಷ್ಟೇ ವಿಶ್ವಾಸಮತಯಾಚನೆ ನಡೆಯಲಿದ್ದು, ಸೋಮವಾರದ ಕಲಾಪದಲ್ಲಿಯೂ ಚರ್ಚೆ ನಡೆಯಲಿದೆ. ರಾಜ್ಯಪಾಲರು ಆದೇಶ ನೀಡಿದ್ದರೂ ಕೂಡ ಈಗಾಗಲೇ ಸದನದಲ್ಲಿ ನಿರ್ಣಯ ಮಂಡನೆ ಆಗಿರುವುದರಿಂದ ಈಗ ಇದರ ಬಗ್ಗೆ ತೀರ್ಮಾನ ಮಾಡಲು ಸ್ಪೀಕರ್ ಅವರೇ ಸುಪ್ರೀಂ ಆಗಿದ್ದಾರೆ. ಸಚಿವ ಕೃಷ್ಣಬೈರೇಗೌಡ ಅವರು ಕೂಡ ಈ ಬಗ್ಗೆ ಸದನದಲ್ಲಿ ವಿವರಿಸಿದ್ದಾರೆ ಎಂದರು.

  • ನೋಟು ನಿಷೇಧವನ್ನು ಬೆಂಬಲಿಸಿದ್ದ ಶಕ್ತಿಕಾಂತ್ ದಾಸ್ ಮುಂದಿನ ಆರ್‌ಬಿಐ ಗವರ್ನರ್

    ನೋಟು ನಿಷೇಧವನ್ನು ಬೆಂಬಲಿಸಿದ್ದ ಶಕ್ತಿಕಾಂತ್ ದಾಸ್ ಮುಂದಿನ ಆರ್‌ಬಿಐ ಗವರ್ನರ್

    ನವದೆಹಲಿ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ಆರ್‌ಬಿಐ ಗವರ್ನರ್ ಆಗಿ ನೇಮಕ ಮಾಡಿದೆ.

    ಸೋಮವಾರ ಹುದ್ದಗೆ ಉರ್ಜಿತ್ ಪಟೇಲ್ ದಿಢೀರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞ, ನೋಟು ನಿಷೇಧದ ಸಮಯದಲ್ಲಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಶಕ್ತಿಕಾಂತ್ ದಾಸ್ ಅವರು ಗವರ್ನರ್ ಹುದ್ದೆಗೆ ಏರಲಿದ್ದಾರೆ.

    1980ರಲ್ಲಿ ತಮಿಳುನಾಡು ಕೇಡರ್ ಐಎಎಸ್ ಅಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದ ಶಕ್ತಿಕಾಂತ್ ದಾಸ್ ಅವರು 37 ವರ್ಷಗಳ ಕಾಲ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ 2015ರ ಆಗಸ್ಟ್ ನಲ್ಲಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. ಈ ವರ್ಷದ ಮೇ ತಿಂಗಳಿನಲ್ಲಿ ಈ ಹುದ್ದೆಯಿಂದ ನಿವೃತ್ತರಾಗಿದ್ದ ಇವರನ್ನು ಸರ್ಕಾರ 15ನೇ ಹಣಕಾಸು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು. ನಿವೃತ್ತರಾದ ಬಳಿಕವೂ ಅಗತ್ಯ ಬಿದ್ದರೆ ಸರ್ಕಾರಕ್ಕೆ ಸೇವೆ ಸಲ್ಲಿಸಲು ಸಿದ್ಧ ಎಂದು ಶಕ್ತಿಕಾಂತ್ ದಾಸ್ ಈ ಹಿಂದೆ ತಿಳಿಸಿದ್ದರು.

    2016ರ ನವೆಂಬರ್ 8 ರಂದು ನೋಟು ನಿಷೇಧವಾದ ಬಳಿಕ ಡಿಸೆಂಬರ್ 30ರ ವರೆಗೆ ಕೇಂದ್ರ ಸರ್ಕಾರ ಹಲವು ಬಾರಿ ಸುದ್ದಿಗೋಷ್ಠಿಯನ್ನು ನಡೆಸಿತ್ತು. ಈ ಸಮಯದಲ್ಲಿ ಶಕ್ತಿಕಾಂತ್ ದಾಸ್ ಅವರೇ ಮಾಧ್ಯಮಗಳಿಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದ ಮೂಲಕ ಕೂಡಲೇ ಸರ್ಕಾರ ನಿರ್ಧಾರವನ್ನು ತಿಳಿಸುತ್ತಿದ್ದರು. ನೋಟು ನಿಷೇಧ ನಿರ್ಧಾರದಿಂದಾಗಿ ಜನರಲ್ಲಿ ಮತ್ತು ಬ್ಯಾಂಕ್ ಗಳಲ್ಲಿ ಮೂಡುತ್ತಿದ್ದ ಗೊಂದಲಗಳನ್ನು ನಿವಾರಿಸುವ ಮೂಲಕ ಸರ್ಕಾರದ ಟ್ರಬಲ್ ಶೂಟರ್ ಆಗಿ ಶಕ್ತಿಕಾಂತ್ ದಾಸ್ ಕೆಲಸ ಮಾಡಿದ್ದರು. ಇದನ್ನೂ ಓದಿ: 1000 ರೂ. ನೋಟು ಮತ್ತೆ ಬರುತ್ತಾ?: ಎಲ್ಲ ವದಂತಿಗೆ ತೆರೆ ಎಳೆದ ಸರ್ಕಾರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ತುಂಬು ಗರ್ಭಿಣಿಯನ್ನು ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದು, ಮಾನವೀಯತೆ ಮೆರೆದ ಗವರ್ನರ್

    ತುಂಬು ಗರ್ಭಿಣಿಯನ್ನು ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದು, ಮಾನವೀಯತೆ ಮೆರೆದ ಗವರ್ನರ್

    ಇಟಾನಗರ: ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಯನ್ನು ಸ್ವತಃ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಆರ್.ಡಿ.ಮಿಶ್ರಾರವರು ತಮ್ಮ ಹೆಲಿಕಾಪ್ಟರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಬುಧವಾರ ಅರುಣಾಚಲ ಪ್ರದೇಶದ ತವಾಂಗ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭಕ್ಕೆ ಆರ್.ಡಿ. ಮಿಶ್ರಾ ಆಗಮಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಪೇಮಾ ಖಂಡು ಹಾಗೂ ಸ್ಥಳೀಯ ಶಾಸಕರ ಜೊತೆ ಚರ್ಚೆ ನಡೆಸುತ್ತಿದ್ದರು. ಈ ವೇಳೆ ಗರ್ಭಿಣಿಯೊಬ್ಬರು ತೀವ್ರ ನೋವಿನಿಂದ ಬಳಲುತ್ತಿದ್ದಲ್ಲದೇ, ಚಿಂತಾಜನಕ ಸ್ಥಿತಿಯಲ್ಲಿರುವುದು ಅವರ ಗಮನಕ್ಕೆ ಬಂದಿತ್ತು. ಅಲ್ಲದೇ ಮುಂದಿನ ಮೂರು ದಿನಗಳ ಕಾಲ ತವಾಂಗ್ ಮತ್ತು ಗುವಾವಟಿ ಮಧ್ಯೆ ಹೆಲಿಕಾಪ್ಟರ್ ಸೇವೆ ಇಲ್ಲವೆಂಬ ಮಾಹಿತಿಯನ್ನು ಶಾಸಕರಿಂದ ಪಡೆದ ಅವರು, ಕೂಡಲೇ ತಮ್ಮ ಇಬ್ಬರು ಅಧಿಕಾರಿಗಳೊಂದಿಗೆ ಮಾತನಾಡಿ ತಮ್ಮ ಹೆಲಿಕಾಪ್ಟರಿನಲ್ಲೇ ಗರ್ಭಿಣಿ ಹಾಗೂ ಪತಿಯನ್ನು ಕರೆದೊಯ್ಯವ ವ್ಯವಸ್ಥೆ ಮಾಡಿದ್ದರು.

    ಗವರ್ನರ್ ಹಾಗೂ ತುಂಬು ಗರ್ಭಿಣಿ ಹೊರಟಿದ್ದ ಹೆಲಿಕಾಪ್ಟರ್ ಇಂಧನ ತುಂಬಿಸಿಕೊಳ್ಳಲು ತೇಜ್ಪುರದಲ್ಲಿ ಇಳಿದಿತ್ತು. ಆದರೆ ಇಂಧನ ತುಂಬಿಸಿಕೊಂಡ ಬಳಿಕ ಹೆಲಿಕಾಪ್ಟರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಕೂಡಲೇ ಎಚ್ಚೆತ್ತ ಗವರ್ನರ್ ವಾಯುಪಡೆಯ ಹೆಲಿಕಾಪ್ಟರಿಗೆ ಮನವಿ ಮಾಡಿ, ಗರ್ಭಿಣಿ ಹಾಗೂ ಆಕೆಯ ಪತಿಯನ್ನು ಮೊದಲು ರಾಜಧಾನಿ ತಲುಪುವಂತೆ ಮಾಡಿದ್ದರು. ಅಲ್ಲದೇ ತಮ್ಮ ರಾಜಭವನದ ಹೆಲಿಪ್ಯಾಡ್ ನಲ್ಲಿ ಪ್ರಸೂತಿ ತಜ್ಞರನ್ನು ಒಳಗೊಂಡ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದರು. ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗದಂತೆ ನೋಡಿಕೊಂಡು, ನಂತರ ಬೇರೆ ವಿಮಾನದಲ್ಲಿ ಇಟಾನಗರಕ್ಕೆ ತೆರಳಿದ್ದರು.

    ಇಟಾನಗರದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿ, ಸಿಸೇರಿಯನ್ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿದ್ದಾರೆ. ಸದ್ಯ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದು, ಗವರ್ನರ್ ಅವರ ಕಾರ್ಯಕ್ಕೆ ಆಕೆಯ ಕುಟುಂಬಸ್ಥರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

    ತವಾಂಗ್ ಪಟ್ಟಣದಿಂದ ಇಟಾನಗರಕ್ಕೆ ಸುಮಾರು 200 ಕಿ.ಮೀ. ಅಂತರವಿದ್ದು, ಬೆಟ್ಟ-ಗುಡ್ಡ ಹಾಗೂ ಕಣಿವೆಗಳ ಮೂಲಕ ರಸ್ತೆ ಮಾರ್ಗವಾಗಿ ತಲುಪಲು ಸುಮಾರು 15 ತಾಸುಗಳು ಬೇಕಾಗುತ್ತದೆ. ಇದನ್ನು ಅರಿತ ಗವರ್ನರ್ ತಮ್ಮ ಹೆಲಿಕಾಪ್ಟರ್ ಮೂಲಕ ಮಹಿಳೆಯನ್ನು 2 ಗಂಟೆಯೊಳಗೆ ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೆಫ್ಟಿನೆಂಟ್ ಗವರ್ನರ್ ಜೊತೆ ಮೋದಿ ಮುನಿಸು: ಕೇಜ್ರಿವಾಲ್ ಆರೋಪ

    ಲೆಫ್ಟಿನೆಂಟ್ ಗವರ್ನರ್ ಜೊತೆ ಮೋದಿ ಮುನಿಸು: ಕೇಜ್ರಿವಾಲ್ ಆರೋಪ

    ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಪ್ರಧಾನಿಯ ಕೋಪವನ್ನು ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

    ಪ್ರಧಾನಿ ಮೋದಿ ಅವರು ಹಾಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರೊಂದಿಗೆ ಕೋಪಗೊಂಡಿದ್ದಾರೆ. ಮೋದಿ ಜೊತೆಗಿನ ಕೋಪದಿಂದಾಗಿ ಈ ಹಿಂದೆ ನೇಮಕಗೊಂಡಿದ್ದ ನಜೀಬ್ ಗಂಜ್ 18 ತಿಂಗಳು ಅಧಿಕಾರವಾಧಿ ಹೊಂದಿದ್ದರೂ ಮೊದಲೇ ರಾಜಿನಾಮೆಯನ್ನು ನೀಡಬೇಕಾಯಿತು ಎಂದು ಕೇಜ್ರಿವಾಲ್ ದೂರಿದರು.

    ಲೆಫ್ಟೆನೆಂಟ್ ಗವರ್ನರ್ ಮೂಲಕ ಮೋದಿ ದೆಹಲಿ ಸರಕಾರವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಈಗಾಗಲೇ ಹೇಳಿದಂತೆ ದೆಹಲಿ ಸರ್ಕಾರಕ್ಕೆ ಸಾಕಷ್ಟು ಕಿರುಕುಳ ನೀಡುತ್ತಿಲ್ಲವೆಂದು ಪ್ರಧಾನಿ ಲೆಫ್ಟಿನಂಟ್ ಗವರ್ನರ್ ಮೇಲೆ ಕೋಪಗೊಂಡಿದ್ದಾರೆ. ಈ ಎಲ್ಲದರ ನಡುವೆಯೂ ದೆಹಲಿ ಸರ್ಕಾರ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

    ನನ್ನ ಬಳಿಯಿರುವ ದಾಖಲೆಗಳ ಪ್ರಕಾರ ಮೋದಿ ಆಮ್ ಆದ್ಮಿ ಸರಕಾರ ಶಿಕ್ಷಣ, ಆರೋಗ್ಯ, ನೀರು ಸರಬರಾಜು, ವಿದ್ಯುತ್ ವಿತರಣೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಾಗುವ ಅಭಿವೃದ್ಧಿ ಕೆಲಸಗಳನ್ನು ತಡೆಯುವಂತೆ ಸಾಕಷ್ಟು ಒತ್ತಡವನ್ನು ಗವರ್ನರ್ ಮೇಲೆ ಮೋದಿ ಹಾಕುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದರು.

    ನಜೀಬ್ ಜಂಗ್ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ವೇಳೆ ದೆಹಲಿ ಸರ್ಕಾರದ ಹಲವು ನೀತಿಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದರಿಂದಾಗಿ ದೆಹಲಿ ಸರ್ಕಾರ ಮತ್ತು ನಜೀಬ್ ಜಂಗ್ ಅವರ ನಡುವಿನ ತಿಕ್ಕಾಟ ರಾಷ್ಟ್ರದೆಲ್ಲೆಡೆ ಸುದ್ದಿಯಾಗಿ ಚರ್ಚೆಯಾಗುತಿತ್ತು. 2016ರ ಡಿಸೆಂಬರ್ ನಲ್ಲಿ ನಜೀಬ್ ಜಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

    ಕೆಲಸಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ವೇಳೆ ಕೋರ್ಟ್ ದೆಹಲಿಯಲ್ಲಿ ಆಯ್ಕೆಯಾದ ಸರ್ಕಾರಕ್ಕೆ ಕೆಲ ಅಧಿಕಾರವಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು.

     

  • ವಿಹೆಚ್‍ಪಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ರಘುರಾಮ್ ರಾಜನ್‍ಗೆ ಆಹ್ವಾನ!

    ವಿಹೆಚ್‍ಪಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ರಘುರಾಮ್ ರಾಜನ್‍ಗೆ ಆಹ್ವಾನ!

    ನವದೆಹಲಿ: ವಿಶ್ವ ಹಿಂದೂ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗುವಂತೆ ವಿಶ್ವ ಹಿಂದೂ ಪರಿಷತ್ (ವಿಹೆಚ್‍ಪಿ) ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರನ್ನು ಆಹ್ವಾನಿಸಿದೆ.

    ಚಿಕಾಗೊ ದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾಷಣದ 125 ನೇ ವರ್ಷದ ನೆನಪಿನಾರ್ಥ ವಿಹೆಚ್‍ಪಿ ಈ ಸಮ್ಮೇಳನವನ್ನು ಆಯೋಜಿಸಿದೆ.

    4 ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನಕ್ಕೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಟಿಬೇಟಿಯನ್ ಗುರು ದಲೈ ಲಾಮ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಾಲಿವುಡ್ ನಟ ರಿಚರ್ಡ್ ಗೆರೆ, ಯುಎಸ್ ಕಾಂಗ್ರೆಸ್ ನ ತುಳಸಿ ಗಬ್ಬಾರ್ಡ್ ಅವರನ್ನು ಆಹ್ವಾನಿಸಲಾಗಿದೆ.

    ರಾಜನ್ ಅವರು ಆಹ್ವಾನವನ್ನು ಸ್ವೀಕರಿಸಿದಲ್ಲಿ ಸ್ಪೈಸ್ ಜೆಟ್ ಮುಖ್ಯಸ್ಥ ಅಜಯ್ ಸಿಂಗ್, ಪಿರಾಮಾಲ್ ಸಮೂಹದ ಮುಖ್ಯಸ್ಥ ಅಜಯ್ ಪಿರಾಮಾಲ್, ಕೆಪಿಎಮ್‍ಜಿ ಭಾರತದ ಮುಖ್ಯಸ್ಥ ಅರುಣ್ ಕುಮಾರ್ ಅವರ ಜೊತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

    ಜೂನ್ 7 ರಂದು ನಡೆಯುವ ಆರ್‍ಎಸ್‍ಎಸ್ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಲಾಗಿದೆ. ಆಹ್ವಾನಕ್ಕೆ ಒಪ್ಪಿಗೆ ಸೂಚಿಸಿರುವುದು ಈಗ ವಿವಾದವನ್ನು ಸೃಷ್ಟಿಸಿದೆ. ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದು ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖರ್ಜಿ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?

    ರಾಜನ್ ಅವರು ರಿಸರ್ವ್ ಬ್ಯಾಂಕ್ ಗವರ್ನರ್ ಅಗಿದ್ದ ವೇಳೆ ಆರ್‍ಎಸ್‍ಎಸ್ ಅವರನ್ನ ಬಹಳ ಟೀಕೆ ಮಾಡಿದ್ದು ಈಗ ಸಮ್ಮೇಳನಕ್ಕೆ ಆಹ್ವಾನ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.