Tag: ಗವಾಸ್ಕರ್

  • ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳ ವಿರುದ್ಧ ಗವಾಸ್ಕರ್ ಗರಂ

    ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳ ವಿರುದ್ಧ ಗವಾಸ್ಕರ್ ಗರಂ

    ಅಹಮದಾಬಾದ್‌: ಪಂಜಾಬ್‌ (Punjab Kings) ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) ಅವರಿಗೆ ಎಚ್ಚರಿಕೆ ನೀಡದ್ದಕ್ಕೆ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸುನಿಲ್‌ ಗವಾಸ್ಕರ್ (Sunil Gavaskar) ಅವರು ಅಂಪೈರ್‌ಗಳನ್ನು ಟೀಕಿಸಿದ್ದಾರೆ.

    ವಿರಾಟ್‌ ಕೊಹ್ಲಿ ಹೆಚ್ಚು ಬೌಂಡರಿ, ಸಿಕ್ಸ್‌ ಹೊಡೆಯಲು ಹೋಗದೇ ವಿಕೆಟ್‌ ಉಳಿಸುವ ಮೂಲಕ ಸಿಂಗಲ್‌, ಡಬಲ್‌ ರನ್‌ ಓಡುತ್ತಿದ್ದರು. 12ನೇ ಓವರ್‌ನಲ್ಲಿ ಚಹಲ್‌ ಎಸೆದ ಎಸೆತವನ್ನು ಕೊಹ್ಲಿ ಲಾಂಗ್‌ ಅನ್‌ ಕಡೆಗೆ ತಳ್ಳಿದರು. ಕೊಹ್ಲಿ ಮತ್ತು ಲಿವಿಂಗ್‌ಸ್ಟೋನ್ ಎರಡು ರನ್‌ ಓಡಿದರು. ರನ್‌ ಓಡುವಾಗ ಕೊಹ್ಲಿ ಪಿಚ್‌ ಮೇಲೆ ನೇರವಾಗಿ ಓಡಿದ್ದರು.

    ಈ ವಿಚಾರವನ್ನು ಪ್ರಸ್ತಾಪ ಮಾಡಿದ ಗವಸ್ಕಾರ್‌, ಕೊಹ್ಲಿ ವಿಕೆಟ್‌ಗಳ ಮಧ್ಯೆ ವೇಗವಾಗಿ ಓಡುತ್ತಾರೆ. ಚೆಂಡನ್ನು ಹೊಡೆದ ತಕ್ಷಣವೇ ಇದರಲ್ಲಿ 2 ರನ್‌ ಬರುತ್ತದೆ ಎನ್ನುವುದು ಅವರಿಗೆ ತಿಳಿದಿತ್ತು ಎಂದು ಹೇಳಿದರು. ಮತ್ತೆ ತಮ್ಮ ವಿವರಣೆಯನ್ನು ಮುಂದುವರಿಸಿ, ಯಾವೊಬ್ಬ ಅಂಪೈರ್‌ ಕೊಹ್ಲಿಗೆ ಏನು ಹೇಳುವುದಿಲ್ಲ. ಅವರು ಮತ್ತೆ ಪಿಚ್‌ ಮೇಲೆ ನೇರವಾಗಿ ಓಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ಮತ್ತೆ ಬ್ಯಾಟಿಂಗ್‌ ಮಾಡಬೇಕಿದೆ ಎಂದು ಎಂದು ಹೇಳುವ ಮೂಲಕ ಎಚ್ಚರಿಕೆ ನೀಡದ ಅಂಪೈರ್‌ಗಳನ್ನು ಟೀಕಿಸಿದರು. ಇದನ್ನೂ ಓದಿ: IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್‌ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?

    ಕ್ರಿಕೆಟ್‌ನಲ್ಲಿ ರನ್‌ ಓಡುವಾಗ ಬ್ಯಾಟರ್‌ಗಳು ಪಿಚ್‌ ಮೇಲೆ ಓಡುವಂತಿಲ್ಲ. ಪಿಚ್‌ ಮೇಲೆ ಓಡಿದ್ದರೆ ಅದು ಹಾಳಾಗಿ ಬೌಲಿಂಗ್‌ಗೆ ಸಮಸ್ಯೆ ಆಗುತ್ತದೆ. ಒಂದು ವೇಳೆ ಬ್ಯಾಟರ್‌ಗಳು ಪಿಚ್‌ ಮೇಲೆ ಓಡಿದ್ದರೆ ಅಂಪೈರ್‌ಗಳು ಎಚ್ಚರಿಕೆ ನೀಡುತ್ತಾರೆ. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

    ಫೈನಲ್‌ ಪಂದ್ಯದಲ್ಲಿ ಕೊಹ್ಲಿ 43 ರನ್‌(35 ಎಸೆತ, 3 ಬೌಂಡರಿ) ಹೊಡೆದಿದ್ದರು. ಈ ಟೂರ್ನಿಯಲ್ಲಿ ಕೊಹ್ಲಿ 15 ಪಂದ್ಯಗಳಿಂದ 657 ರನ್‌ ಹೊಡೆಯುವ ಮೂಲಕ ಅತಿ ಹೆಚ್ಚು ರನ್‌ ಹೊಡೆದ ಬ್ಯಾಟರ್‌ಗಳ ಪೈಕಿ 3ನೇ ಸ್ಥಾನ ಪಡೆದಿದ್ದು ಒಟ್ಟು 8 ಅರ್ಧಶತಕ ಹೊಡೆದಿದ್ದಾರೆ.

    2008 ರಿಂದ ಆರ್‌ಸಿಬಿ ತಂಡದಲ್ಲೇ ಆಡುತ್ತಿರುವ ಕೊಹ್ಲಿ 267 ಪಂದ್ಯಗಳಿಂದ 8,661 ರನ್‌ ಹೊಡೆದಿದ್ದಾರೆ. 8 ಶತಕ, 63 ಬಾರಿ ಅರ್ಧಶತಕ ಬಾರಿಸಿದ್ದಾರೆ.

  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

    ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದ್ದು, ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

    ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

  • ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಬೆಂಗಳೂರು: ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಬೆಂಗಳೂರು ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಗಾಳಿ ಸಮೇತ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಅನೇಕ ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬ ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದು ಬಿದ್ದವು. ಅಷ್ಟೇ ಅಲ್ಲದೇ ಕೆಲವು ಸೇತುವೆಗಳು ಬಿರುಕು ಕಂಡಿದ್ದು, ಬಂಟ್ವಾಳ ಮತ್ತು ಮಂಗಳೂರು ಸಂಪರ್ಕ ಕಲ್ಪಿಸುವ ಫಲ್ಗುಣಿ ಸೇತುವೆ ಕುಸಿದು ಬಿದ್ದಿತ್ತು.

  • ಅಬ್ಬರಿಸಿದ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ – ನೆಲಕ್ಕುರುಳಿದ ಮರಗಳು, ನೀರು ತುಂಬಿದ ಬಸ್ ಸ್ಟ್ಯಾಂಡ್

    ಅಬ್ಬರಿಸಿದ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ – ನೆಲಕ್ಕುರುಳಿದ ಮರಗಳು, ನೀರು ತುಂಬಿದ ಬಸ್ ಸ್ಟ್ಯಾಂಡ್

    ಬೆಂಗಳೂರು: ಬೆಂಗಳೂರಿನ ಹಲವೆಡೆ ಮಂಗಳವಾರ ಮಧ್ಯಾಹ್ನ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರು ಪರದಾಡಿದ್ದಾರೆ.

    ರಾಜಾಜಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಯಶವಂತಪುರ, ಗೊರಗುಂಟೆಪಾಳ್ಯ, ಜಾಲಹಳ್ಳಿ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಸರ್ಕಲ್ ಮಾರಮ್ಮ ಮತ್ತು ಟಾಟಾ ಇನ್ಸ್ ಸ್ಟಿಟ್ಯೂಟ್ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ. ಅಷ್ಟೇ ಅಲ್ಲದೇ ರಾಮಯ್ಯ ಕಾಲೇಜು ಮುಂಭಾಗ ಕಾರಿನ ಮೇಲೆ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಲ್ಲೇಶ್ವರಂ 10ನೇ ಕ್ರಾಸ್, ಮಹಾಲಕ್ಷ್ಮಿ ಲೇಔಟ್, ಸದಾಶಿವ ನಗರ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ಮರಗಳು ಬಿದ್ದಿವೆ. ಮೇಖ್ರಿ ಸರ್ಕಲ್, ಮತ್ತು ಎಸ್‍ಎಸ್‍ಎಲ್‍ಸಿ ಬೋರ್ಡ್ ಮುಂಭಾಗ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿದೆ. ಪರಿಣಾಮ ಪ್ಯಾಲೆಸ್ ಗ್ರೌಂಡ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಶವಂತಪುರ ಬಸ್ ಸ್ಟ್ಯಾಂಡ್ ತುಂಬಾ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಗಿತ್ತು.

    ಇನ್ನೂ ರಾಮಯ್ಯ ಆಸ್ಪತ್ರೆ ಮುಂದೆ ಪಾರ್ಕಿಂಗ್ ಲಾಟ್ ನಲ್ಲಿದ್ದ ಕಾರು, ಬೈಕ್ ಗಳ ಮೇಲೆ ಮರ ಉರುಳಿದೆ. ಕೂಡಲೇ ಸಾರ್ವಜನಿಕರು ಕಾರಿನಲ್ಲಿದ್ದ ಚಾಲಕನನ್ನ ರಕ್ಷಣೆ ಮಾಡಿದ್ದಾರೆ. ಮರ ಬಿದ್ದ ರಭಸಕ್ಕೆ ಒಲಾ ಕಾರು ಮತ್ತು ಟಿವಿಎಸ್ ಬೈಕ್ ಜಖಂ ಆಗಿದೆ. ಆದರೆ ಮರ ಬಿದ್ದು ಅರ್ಧ ಗಂಟೆ ಆಗಿದ್ದರೂ ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿ ಬಂದಿರಲಿಲ್ಲ.

    ಪೂರ್ವ ಮುಂಗಾರಿನಲ್ಲಿ ಸಮಯದಲ್ಲಿ ರಾಜ್ಯಾದ್ಯಂತ ಭಾರೀ ಗುಡುಗು ಗಾಳಿ ಸಹಿತ ಆಗಾಗ ಮಳೆಯಾಗುವುದು ಸಹಜ. ಮೇ ತಿಂಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ಮುಂದುವರೆಯಲಿದೆ. ಮೋಡಗಳ ಸಾಲು ನಿರ್ಮಾಣವಾಗಿರುವ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಮಳೆಯಾಗುತ್ತಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.