Tag: ಗವಿಗಂಗಾಧರ

  • ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

    ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

    ಬೆಂಗಳೂರು: ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ (Makar Sankranti)ಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅಂತೆಯೇ ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಿದೆ.

    ಹೌದು. ಪ್ರಕೃತಿಯ ವಿಸ್ಮಯಕ್ಕೆ ಸನ್ನಿಧಾನ ಸಾಕ್ಷಿಯಾಗಿದ್ದು, ಸಂಜೆ 5.25ಕ್ಕೆ ಸರಿಯಾಗಿ ಗವಿಗಂಗಾಧರೇಶ್ವರನಿಗೆ ಸೂರ್ಯದೇವ  ಸ್ಪರ್ಶಿಸಿದ. ಈ ವಿದ್ಯಾಮಾನ ಕಣ್ತುಂಬಿಕೊಳ್ಳಲು ಭಕ್ತಗಣ ಸಾಕ್ಷಿಯಾಯಿತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ನಾಳೆಯಿಂದ್ಲೇ ಪೂರ್ವಭಾವಿ ಪೂಜೆಗಳು ಆರಂಭ: ಚಂಪತ್‌ ರೈ

    ಮೊದಲು ದೇವರ ಅಭಿಷೇಕಕ್ಕೆ ಪೂರ್ಣಕುಂಭ ಕಳಸದೊಂದಿಗೆ ದೇವಸ್ಥಾನಕ್ಕೆ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಆಗಮಿಸಿದರು. ಸೂರ್ಯ ರಶ್ಮಿ ಸ್ಪರ್ಶ ವೇಳೆ ಗವಿಗಂಗಾದರೇಶ್ವರನಿಗೆ ಪೂರ್ಣಕುಂಭ ಅಭಿಷೇಕ ಮಾಡಲಾಯಿತು. ಇದೇ ಸಂದರ್ಭದಲ್ಲಿ ದೇವಾಲಯ ಪ್ರವೇಶ ಮಾಡಿದ ಸೂರ್ಯ ರಶ್ಮಿ ಮೊದಲು ನಂದಿಯನ್ನ ಸ್ಪರ್ಶಿಸಿದ. ದಕ್ಷಿಣಯಾನದಿಂದ ಉತ್ತರಯಾನ ಪಥ ಬದಲಾವಣೆ ಮಾಡುತ್ತಿರೋ ಸೂರ್ಯ ಗರ್ಭ ಗುಡಿಯ ಮುಂಭಾಗದಲ್ಲಿರೋ ಸ್ಪಟಿಕ ಲಿಂಗಕ್ಕೆ ಸ್ಪರ್ಶಿಸಿ ನಂತರ ಶಿವಲಿಂಗ ಪೀಠದ ಸ್ಪರ್ಶ ಮಾಡಿದ. ಬಳಿಕ ಸೂರ್ಯದೇವ ಈಶ್ವರನ ಪಾದ ಸ್ಪರ್ಶ ಮಾಡಿದನು. ಲಿಂಗಭಾಗದಲ್ಲಿ 18 ಸೆಕೆಂಡ್‌ಗಳ ಕಾಲ ಸೂರ್ಯರಶ್ಮಿ ಬಿದ್ದಿದೆ.

    ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ  ಓಪನ್‌ ಮಾಡಲಾಗಿತ್ತು. ಭಕ್ತಾದಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಮಾಡಲಾಗಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶವಿರಲಿಲ್ಲ.

    ಗವಿಗಂಗಾಧರೇಶ್ವರ ದೇವಾಲಯವನ್ನು ಇಂದು ಮಧ್ಯಾಹ್ನ 1.45ಕ್ಕೆ ಅರ್ಚಕ ವೃಂದವು ಸಾರ್ವಜನಿಕ ದರ್ಶನಕ್ಕೆ ಬಂದ್ ಮಾಡಿತ್ತು. ಸೂರ್ಯ ರಶ್ಮಿ ಸ್ಪರ್ಶದ ಬಳಿಕ ಪೂಜೆ ಸಲ್ಲಿಕೆ ಮಾಡಿ ಸಂಜೆ 6 ಗಂಟೆ ನಂತರ ಮತ್ತೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ರಾತ್ರಿ 11 ರವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದು.

  • ನನ್ನ 53 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಅಭಿಷೇಕವಿಲ್ಲ: ಸೋಮಸುಂದರ್ ದೀಕ್ಷಿತ್

    ನನ್ನ 53 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಅಭಿಷೇಕವಿಲ್ಲ: ಸೋಮಸುಂದರ್ ದೀಕ್ಷಿತ್

    ಬೆಂಗಳೂರು: ನನ್ನ 53 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗವಿಗಂಗಾಧರನಿಗೆ ಸೂರ್ಯ ರಶ್ಮಿ ಅಭಿಷೇಕ ಗೋಚರವಾಗಿಲ್ಲ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ.

    ಈ ಬಾರಿ ಗವಿಗಂಗಾಧರನಿಗೆ ಸೂರ್ಯ ರಶ್ಮಿಯ ಅಭಿಷೇಕ ಇಲ್ಲವಾಯಿತು. ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರ್ಚಕರು, ಸ್ವಾಮಿ 2020 ಬಹಳಷ್ಟು ನೋವನ್ನು ಇಡೀ ಪ್ರಪಂಚಕ್ಕೆ ನೀಡಿದ್ದ. ಕಾರ್ತಿಕ ಸೋಮವಾರಗಳಲ್ಲಿ ಈ ಕೊರೊನಾ ಪೀಡೆಯನ್ನು ಕಡಿಮೆ ಮಾಡಿದ್ದ. ಕಳೆದ ಬಾರಿ ನಾನು ಹೇಳಿದ್ದೆ 2 ನಿಮಿಷಗಳ ಹೆಚ್ಚು ಕಾಲ ಸ್ವಾಮಿ ಮೇಲೆ ರಶ್ಮಿ ಇದಿದ್ದರಿಂದ ಕೊರೊನಾ ನಮ್ಮನ್ನೆಲ್ಲ ಕಾಡಿತ್ತು ಎಂದು ಹೇಳಿದರು.

    ಸಹಸ್ರ ಕಣ್ಣುಗಳು ಮಧ್ಯಾಹ್ನ ಎರಡು ಗಂಟೆಗಳಿಂದ ಸೂರ್ಯ ರಶ್ಮಿ ಅಭಿಷೇಕ ನೋಡಲು ಕಾತರದಿಂದ ಕೂತಿತ್ತು. ಆದ್ರೆ ನನ್ನ 53 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಅಭಿಷೇಕ ಗೋಚರವಾಗಿಲ್ಲ. ಅದೇ ರೀತಿಯಲ್ಲಿ ನಮಗೆ ಯಾವ ತೊಂದರೆಯಾಗದಂತೆ ಅಗೋಚರವಾಗಿ ಆರ್ಶೀವಾದ ಮಾಡಲಿ ಎಂದು ಆಶೀಸುತ್ತೇನೆ ಎಂದರು.

    ಈ ಬಾರಿ ಅಗೋಚರವಾಗಿ ಸೂರ್ಯ ಈಶ್ವರನ ದರ್ಶನ ಮಾಡಿ ಹೋಗಿದ್ದಾನೆ. ಅಗೋಚರವಾಗಿ ಸೂರ್ಯ ಸ್ಪರ್ಶ ಮಾಡಿದ್ದಾನೆ. ಪ್ರಕೃತಿಯಲ್ಲಿ ಸಣ್ಣ ಅಡಚಣೆಯಿಂದ ಅಗೋಚರವಾಗಿ ಈಶ್ವರನ ಪೂಜೆ ಮಾಡಿ ಮುಂದೆ ಸಾಗಿದ್ದಾನೆ. ಸ್ವಾಮಿಯ ಗರ್ಭಗುಡಿಯವರೆಗೂ ಸೂರ್ಯನ ಪ್ರವೇಶವಾಗಿದೆ. ಲಿಂಗದ ಕೆಳಭಾಗದಲ್ಲಿ ಇದ್ದಂತಹ ಆತ್ಮಲಿಂಗಕ್ಕು ಸಹ ಸೂರ್ಯನ ಸ್ಪರ್ಶವಾಗಿದೆ. ರುದ್ರಹೋಮಗಳಿಂದ ನಮ್ಮ ದೇಶ ಸುಭದ್ರದಲ್ಲಿರಲಿದೆ. ಇದು ಯುದ್ಧದ ಸೂಚಕ ಎಂದು ಸೋಮಸುಂದರ್ ದೀಕ್ಷಿತ್ ಸ್ವಾಮೀಜಿ ವಿವರಿಸಿದ್ದಾರೆ.

    ಸಂಕ್ರಾಂತಿ ಸಡಗರದ ನಡುವೆ ಸೂರ್ಯ ತನ್ನ ಪಥ ಬದಲಾವಣೆಗಾಗಿ ಪ್ರತಿ ವರ್ಷ ಭಾಸ್ಕರನ ಅನುಮತಿಯನ್ನ ಇಂದು ಪಡೆಯುತ್ತಾನೆ ಎಂಬ ನಂಬಿಕೆ ಇದೆ. ಆದರೆ ಇಂದು ಮೋಡ ಅಡ್ಡವಾದ ಪರಿಣಾಮ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಸೂರ್ಯ ಮುಂದೆ ಹೋಗಿದ್ದಾನೆ.

  • ಅಧಿಕಾರಕ್ಕಾಗಿ ಬಿಎಸ್‍ವೈಯಿಂದ ಮಹಾ ರುದ್ರಯಾಗ

    ಅಧಿಕಾರಕ್ಕಾಗಿ ಬಿಎಸ್‍ವೈಯಿಂದ ಮಹಾ ರುದ್ರಯಾಗ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೇರಲಿ ಎಂದು ಇಂದು ಗವಿಗಂಗಾಧರ ದೇಗುಲದಲ್ಲಿ ಮಹಾ ರುದ್ರಯಾಗ ಮಾಡಲಿದ್ದಾರೆ.

    ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಯಡಿಯೂರಪ್ಪ ಅವರು ಮಹಾ ರುದ್ರಯಾಗ ಮಾಡಲಿದ್ದು, ಈಗಾಗಲೇ ದೇಗುಲದ ಹೊರಭಾಗದಲ್ಲಿ ಹೋಮಕ್ಕೆ ಸಿದ್ಧತೆ ಮಾಡಲಾಗಿದೆ.

    ಬಿಎಸ್‍ವೈ ನಡೆಸಲಿರುವ ಮಹಾರುದ್ರ ಯಾಗದ ಮಹತ್ವ ತಿಳಿಸಿರುವ ಗವಿ ಗಂಗಾಧರ ಸಹಾಯಕ ಅರ್ಚಕ ಶ್ರೀಕಂಠದೀಕ್ಷಿತ್, ಈ ಯಾಗದಿಂದ ಅಂದುಕೊಂಡಿರುವುದನ್ನು ಸಾಧಿಸಬಹುದು. ಅಧಿಕಾರ ಪ್ರಾಪ್ತಿಯ ಬಗ್ಗೆ ಅವರು ಅಂದುಕೊಂಡರೆ ಅದು ಕೂಡ ನೆರವೇರಲಿದೆ. ಲೋಕಕಲ್ಯಾಣದ ಕಾರಣದ ಜೊತೆಗೆ ಅವರ ಮನಸ್ಸಿನ ಇಷ್ಟಾರ್ಥ ನೆರವೇರಿಕೆಗಾಗಿ ಮಹಾ ರುದ್ರಯಾಗ ನಡೆಯಲಿದೆ ಎಂದು ಹೇಳಿದ್ದಾರೆ.