Tag: ಗವಿಗಂಗಾಧರ ದೇವಸ್ಥಾನ

  • ಆಪರೇಷನ್ ಸಿಂಧೂರ ಯಶಸ್ವಿ – ಸೇನೆಯ ಒಳಿತಿಗಾಗಿ ಬೆಂಗಳೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ

    ಆಪರೇಷನ್ ಸಿಂಧೂರ ಯಶಸ್ವಿ – ಸೇನೆಯ ಒಳಿತಿಗಾಗಿ ಬೆಂಗಳೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ

    – ಗವಿಗಂಗಾಧರ ದೇವಾಲಯದಲ್ಲಿ ವಿಶೇಷ ದುರ್ಗಾ ಹೋಮ

    ಬೆಂಗಳೂರು: ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ಯಶಸ್ವಿಯಾಗಿದೆ. ಆಪರೇಷನ್ ಸಿಂಧೂರ ಯಶಸ್ವಿ ದಾಳಿ ಹಿನ್ನೆಲೆ ಬೆಂಗಳೂರಿನ ದೇವಾಲಯಗಳಲ್ಲಿ ಸೇನೆಗೆ ಒಳಿತಾಗಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

    ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆ ಮುಜರಾಯಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಯೋಧರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಕೆಗೆ ಆದೇಶ ನೀಡಲಾಗಿತ್ತು. ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರ ದೇವಾಲಯದಲ್ಲಿ ಸೈನ್ಯದ ಬಲವರ್ಧನೆಗೆ ಸೋಮಸುಂದರ್ ದೀಕ್ಷಿತ್‌ರ ನೇತೃತ್ವದಲ್ಲಿ ವಿಶೇಷ ದುರ್ಗಾ ಹೋಮ ಮಾಡಲಾಯಿತು. ಇದನ್ನೂ ಓದಿ: ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ನಾಡಿಗೆ, ನಮ್ಮನ್ನ ರಕ್ಷಿಸುವ ಸೈನ್ಯಕ್ಕೆ ಬಲ ನೀಡು ತಾಯಿ ಎಂದು ದುರ್ಗಾ ಹೋಮ ಮಾಡಲಾಗಿದ್ದು, ದುರ್ಗಾ ಹೋಮದ ಜೊತೆಗೆ ವಿಶೇಷ ಪೂಜೆಗೆ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಶತ್ರುಗಳ ಸಂಹಾರದ ಜೊತೆಗೆ ಸೈನಿಕರ ಶಕ್ತಿಗಾಗಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಆಗಲ್ಲ – ಆಪರೇಷನ್‌ ಸಿಂಧೂರ ಬೆಂಬಲಿಸಿದ ಇಸ್ರೇಲ್‌

    ಸೇನೆಯ ಒಳಿತಿಗಾಗಿ ಮಾಡಲಾದ ಪೂಜೆ, ಹೋಮ ಹವನಗಳ ಕುರಿತು ಗವಿಗಂಗಾಧರ ದೇವಾಲಯದ ಪ್ರಧಾನ ಅರ್ಚಕ ಶ್ರೀ ಸೋಮಸುಂದರ್ ದೀಕ್ಷಿತ್ ಮಾತನಾಡಿದರು, ಶತ್ರು ಸಂಹಾರಕ್ಕಾಗಿ ದುರ್ಗಾ ಹೋಮ ಮಾಡಲಾಗುತ್ತಿದೆ. ಸೈನ್ಯಕ್ಕೆ ಬಲ ಸಿಗಲಿ. ಉಗ್ರರ ಸಂಹಾರ ಆಗಲಿ ಎಂದು ಹೋಮ ಮಾಡಲಾಗುತ್ತಿದೆ. ನಾವು ಹಣೆಗೆ ತಿಲಕ ಸಿಂಧೂರ ಹಚ್ಚುತ್ತೇವೆ. ನಮ್ಮ ಹೆಣ್ಣುಮಕ್ಕಳ ಸಿಂಧೂರ ತೆಗೆಯಲು ಬಂದವರನ್ನು, ನಾಶ ಮಾಡಲು ಬಂದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಅವರು ಮಹಾಸಂಹಾರಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್‌ ಸೇನೆ

    ಯುದ್ಧ ಕಾಲದಿಂದಲೂ ದುರ್ಗಾ ಹೋಮ ಮಾಡುತ್ತಾ ಬಂದಿದ್ದೇವೆ. ಇಂದು ಸಹ ಹೋಮ ಮಾಡಿ ಶತ್ರು ಸಂಹಾರವಾಗಲಿ ಎಂದು ಪ್ರಾರ್ಥನೆ ಮಾಡಲಾಗಿದೆ. ಅವರು 26 ಜನರ ಸಾಯಿಸಿದ್ದಾರೆ. ಪ್ರಧಾನಿ ಮೋದಿಯವರು ಅದಕ್ಕೆ ತಕ್ಕಂತೆ ಸಿಂಧೂರದ ಹೆಸರಿಂದ ದಾಳಿ ಮಾಡಿದ್ದಾರೆ. ದಸರಾ ನವರಾತ್ರಿಯಲ್ಲಿ ಉಪವಾಸ ಪೂಜೆ ಮಾಡ್ತಾರೆ. ದುರ್ಗಾ ದೇವಿ ಕೃಪೆಯಿಂದ ಶತ್ರುಗಳ ನಾಶ ಮಾಡಲು ಈ ಹೋಮ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ಅಲ್ಲದೇ ಮಲ್ಲೇಶ್ವರಂನ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ದೇವರಿಗೆ ಅಭಿಷೇಕ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಶಾಂತಿ ನೆಲೆಸಲಿ ಎಂದು ರುದ್ರಪಾರಾಯಣ ಪೂಜೆ ಸಹ ಮಾಡಲಾಗಿದೆ. ಆಪರೇಷನ್ ಸಿಂಧೂರವು ಯಶಸ್ವಿಯಾದ ಬೆನ್ನಲ್ಲೇ ಭಾರತಕ್ಕೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ವಿಶೇಷ ಹೋಮ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ.

    ಬೆಂಗಳೂರಿನ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಯೋಧರ ಹಾಗೂ ದೇಶದ ಒಳಿತಿಗಾಗಿ ಪೂಜೆ ಸಲ್ಲಿಸಲಾಗಿದೆ. ಹಾಗೆಯೇ ಇಂದು ಬೆಳಗ್ಗೆ ಬನಶಂಕರಿ ದೇವಸ್ಥಾನದಲ್ಲಿ ದೇಶ ಕಾಯೋ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಪೂಜೆ ಮಾಡಲಾಯಿತು.

  • ಗವಿಗಂಗಾಧರ ಸನ್ನಿಧಿಯಲ್ಲಿ ಕಾಲಿಡಲು ಭಕ್ತರು ಹಿಂದೇಟು-ದೇಗುಲದಲ್ಲೆಲ್ಲಾ ಗಬ್ಬು ವಾಸನೆ

    ಗವಿಗಂಗಾಧರ ಸನ್ನಿಧಿಯಲ್ಲಿ ಕಾಲಿಡಲು ಭಕ್ತರು ಹಿಂದೇಟು-ದೇಗುಲದಲ್ಲೆಲ್ಲಾ ಗಬ್ಬು ವಾಸನೆ

    ಬೆಂಗಳೂರು: ನಗರದ ವಿವಿಪುರಂನಲ್ಲಿರುವ ಗವಿಗಂಗಾಧರ ದೇವಾಸ್ಥಾನ ಸೂರ್ಯರಶ್ಮಿ ವಿಸ್ಮಯದಿಂದಲೇ ಖ್ಯಾತಿ. ಶಿವನೇ ನಮ್ಮನ್ನು ಕಾಪಾಡು ಅಂತ ಬರುವ ಭಕ್ತರ ಇಷ್ಟಾರ್ಥ ನೆರವೇರಿಸುವ ಶಿವನಿಗೆ ಈಗ ಸಂಕಷ್ಟ ಶುರುವಾಗಿದೆ. ನೆಮ್ಮದಿ, ಭಕ್ತಿಯ ತಾಣವಾಗಿದ್ದ ಗಂಗಾಧರೇಶ್ವರನ ಸನ್ನಿಧಾನಕ್ಕೆ ಈಗ ಭಕ್ತರು ಕಾಲಿಡೋದಕ್ಕೂ ಹಿಂದೇಟು ಹಾಕ್ತಿದ್ದಾರೆ. ಕಾರಣ ದೇವಾಲಯದ ಆವರಣದಲ್ಲಿ ಬರುತ್ತಿರೋ ವಿಚಿತ್ರ ವಾಸನೆ.

    ಪ್ರತಿನಿತ್ಯ ಗವಿಗಂಗಾಧರನಿಗೆ ಹಾಲು, ಹಣ್ಣಿನಿಂದ ಅಭಿಷೇಕ ಮಾಡಲಾಗುತ್ತದೆ. ಅಭಿಷೇಕದ ಬಳಿಕ ತ್ಯಾಜ್ಯವೆಲ್ಲ ಗವಿಯೊಳಗೆ ಹೋಗಿ ಶೇಖರಣೆಯಾಗುತ್ತಿದ್ದು, ದೇವಾಲಯದೊಳಗೆ ಗಬ್ಬು ವಾಸನೆ ಬರುತ್ತಿದೆ. ಗವಿಯೊಳಗೆ ಧ್ಯಾನ ಪೂಜೆಗೆ ಬರುವ ಭಕ್ತರು ಏಕಾಗ್ರತೆಯಿಂದ ಪೂಜೆ ಮಾಡೋದಕ್ಕೆ ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಲಕ್ಷಾಂತರ ಆದಾಯ ತಂದುಕೊಡುವ ದೇಗುಲವನ್ನು ಸ್ವಚ್ಛಗೊಳಿಸಲು ಬಿಬಿಎಂಪಿ ಮತ್ತು ಮುಜರಾಯಿ ಇಲಾಖೆ ಹಿಂದೇಟು ಹಾಕುತ್ತಿರೋದಕ್ಕೆ ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.

    ಗವಿಗಂಗಾಧರ ದೇವಸ್ಥಾನ ಭಕ್ತರ ಶ್ರದ್ಧಾಭಕ್ತಿಯ ಕೇಂದ್ರ. ಅದಕ್ಕಿಂತಲೂ ಮುಖ್ಯವಾಗಿ ಗವಿಗಂಗಾಧರ ಬೆಂಗಳೂರಿನ ಹೆಮ್ಮೆ. ಹೀಗಾಗಿ ಬಿಬಿಎಂಪಿ ಈ ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.