Tag: ಗವಿಗಂಗಾಧರ ದೇವಾಲಯ

  • ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    – ಬೆಂಗ್ಳೂರಿನ ಬಹುತೇಕ ದೇವಸ್ಥಾನಗಳ ದರ್ಶನ ಸಮಯದಲ್ಲಿ ಬದಲಾವಣೆ

    ಬೆಂಗಳೂರು: ಇದೇ ಭಾನುವಾರ (ಸೆ.7) ರಕ್ತಚಂದ್ರಗ್ರಹಣ ಸಂಭವಿಸಲಿದ್ದು, ನಗರದ ಗವಿಗಂಗಾಧರ ದೇವಾಲಯ (Gavi Gangadhareshwara Temple) ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ.

    ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್‌ ಅವರು ಮಾತನಾಡಿ, ಸೂರ್ಯಗ್ರಹಣವಾದರೆ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಬಂದ್ ಮಾಡುತ್ತಿದ್ದೆವು. ಆದರೆ ಚಂದ್ರಗ್ರಹಣದಲ್ಲಿ ಹಾಗೇ ಮಾಡಲು ಬರುವುದಿಲ್ಲ. ಗ್ರಹಣಕ್ಕೂ ಮೊದಲು ಸುಮಾರು 6 ಗಂಟೆ ದೇವಾಲಯ ಬಂದ್ ಮಾಡಬೇಕಾಗುತ್ತದೆ. ಹೀಗಾಗಿ ಬೆಳಗ್ಗೆ ಗಂಗಾಧರನಿಗೆ ಕ್ಷೀರ ನೈವೇದ್ಯ ನೀಡುತ್ತೇವೆ. ಕ್ಷೀರ ಬಿಟ್ಟು ಬೇರೆ ಪ್ರಸಾದ ನೀಡಲ್ಲ. ಬೆಳಗ್ಗೆ 11 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಬಳಿಕ ಬಾಗಿಲು ಬಂದ್ ಮಾಡಲಾಗುತ್ತದೆ. ಗ್ರಹಣ ಮೋಕ್ಷಗೊಂಡ ಕೂಡಲೇ ಶುದ್ಧೀಕರಣ ಮಾಡಲು ಆಗಲ್ಲ, ಮರುದಿನ ಬೆಳಗ್ಗೆ ಶುದ್ಧೀಕರಣ ಮಾಡಿದ ಬಳಿಕ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸೆಪ್ಟೆಂಬರ್ 7, 8 ರಂದು ಸಂಭವಿಸಲಿದೆ ಚಂದ್ರಗ್ರಹಣ

    ಇನ್ನೂ ರಕ್ತಚಂದ್ರಗ್ರಹಣ ಹಿನ್ನೆಲೆ ನಗರದ ಬಹುತೇಕ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆಯಾಗಲಿದೆ. ಯಾವ ದೇವಸ್ಥಾನ, ದರ್ಶನ ಸಮಯ ಯಾವಾಗ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

    ಬನಶಂಕರಿ ದೇವಾಲಯ:
    ಬನಶಂಕರಿ ದೇವಿ ಜನ್ಮೋತ್ಸವದ ದಿನವೇ ರಕ್ತಚಂದ್ರಗ್ರಹಣ ಸಂಭವಿಸುತ್ತಿದೆ. ಗ್ರಹಣದ ದಿನ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತದೆ. ಜೊತೆಗೆ ದೇವಿಯ ಜನ್ಮೋತ್ಸವವಿರುವುದರಿಂದ ಚಂಡಿಕಾ ಹೋಮ ನಡೆಸಲಾಗುತ್ತದೆ. ಸಂಜೆ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದ್ದು, ಬಳಿಕ 4:30ಕ್ಕೆ ದೇವಾಲಯ ಬಂದ್ ಮಾಡಲಾಗುತ್ತದೆ. ಮರುದಿನ ಬೆಳಗ್ಗೆ 6 ಗಂಟೆಗೆ ದೇವಾಲಯ ಹಾಗೂ ಆವರಣ ಶುದ್ಧೀಕರಣ ಮಾಡಲಾಗುತ್ತದೆ. ನಂತರ ಪೂಜೆ ಮಾಡಿ, ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ.

    ಗಾಳಿ ಆಂಜನೇಯ ದೇವಸ್ಥಾನ:
    ಗ್ರಹಣದ ದಿನ ಮಧ್ಯಾಹ್ನ 3 ಗಂಟೆಗೆ ದೇವಾಲಯವನ್ನು ಬಂದ್ ಮಾಡಲಾಗುತ್ತದೆ. ಹೀಗಾಗಿ 2:30ರ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. 2:30ರಿಂದ 3ಗಂಟೆವರೆಗೆ ದೇವಾಲಯದ ಒಳಗೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಬಳಿಕ ಬೆಳಗ್ಗೆ ಶಾಂತಿ ಪೂಜೆ ಮಾಡಿ, ಎಂದಿನಂತೆ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ.

    ಕಾಡು ಮಲ್ಲೇಶ್ವರ ದೇವಾಲಯ:
    ಗ್ರಹಣದ ದಿನ ಬೆಳಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಮಧ್ಯಾಹ್ನ 2:30ವರೆಗೆ ಮಾತ್ರ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ. ಗ್ರಹಣದ ಸಮಯದಲ್ಲಿ ಎಲ್ಲಾ ದೇವರುಗಳ ಮೇಲೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಮರುದಿನ ಬೆಳಿಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಶುದ್ಧೀಕರಣ ಮಾಡಿ, ನಂತರ ಗ್ರಹಣ ಶಾಂತಿಗಾಗಿ ರುದ್ರ ಹೋಮ, ಪ್ರಸಾದ ಸೇವೆ ಇರಲಿದೆ. ನಂತರ ದರ್ಶನಕ್ಕೆ ಅವಕಾಶವಿರುತ್ತದೆ.ಇದನ್ನೂ ಓದಿ: ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

  • ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರನ ಸನ್ನಿಧಿ

    ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರನ ಸನ್ನಿಧಿ

    ಬೆಂಗಳೂರು: ಇಂದು ಸಂಕ್ರಾತಿಯ ಸುದಿನ. ಉತ್ತರಾಯಣ ಆರಂಭಗೊಳ್ಳುವ ಶುಭ ಘಳಿಗೆ. ಭಾಸ್ಕರ್ ತನ್ನ ಪಥ ಬದಲಿಸೋ ಹಿನ್ನೆಲೆ,ಸೂರ್ಯ ರಶ್ಮಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ, ಮಕರ ಸಂಕ್ರಾಂತಿಯಂದು ಸೂರ್ಯದೇವ, ಪರಶಿವನಿಗೆ ಪೂಜಿಸಲಿದ್ದಾನೆ. ಈ ಐತಿಹಾಸಿಕ ನೆರಳು-ಬೆಳಕಿನಾಟಕ್ಕೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರ ದೇವಾಲಯ ಸಾಕ್ಷಿಯಾಗಲಿದೆ.

    ಇಂದು ಸಂಜೆ 5.14 ರಿಂದ 5.18 ರವಳಗೆ ಸುಮಾರು 30 ಸೆಕೆಂಡ್ ಗಳ ಕಾಲ ಈಶ್ವರನಿಗೆ ಸೂರ್ಯರಶ್ಮಿ ಸ್ಪರ್ಶಿಸಲಿದ್ದು, ಇದು ಅನಾದಿ ಕಾಲದಿಂದಲೂ ನಡೆದು ಬಂದಿರೋ ವೈಶಿಷ್ಟ್ಯವಾಗಿದೆ ಎಂದು ಗವಿಗಂಗಾಧರ ದೇವಾಲಯದ ಪ್ರಧಾನ ಅರ್ಚಕ ಡಾ.ಸೋಮಸುಂದರ್ ದೀಕ್ಷಿತ್ ಹೇಳಿದ್ರು.

    ಈ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ಶಿವನಿಗೆ ರುದ್ರಾಭಿಷೇಕ ಸೇರಿ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ. ಇನ್ನೂ ಸಂಜೆಯ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ದೇವಸ್ಥಾನದ ಆವರಣದಲ್ಲಿ ಪೆಂಡಲ್ ಹಾಕಿ ಎಲ್‍ಇಡಿ ಟಿವಿ ಅಳವಡಿಸಲಾಗಿದೆ. ಭಕ್ತಾದಿಗಳೆಲ್ಲಾ ಸಹಕರಿಸಿದ್ರೇ ಮೂಲಮೂರ್ತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

    ಒಂದು ವೇಳೆ ಭಕ್ತಾದಿಗಳು ಸಹಕರಿಸದಿದ್ರೇ ದೇವಸ್ಥಾನ ಕ್ಲೋಸ್ ಮಾಡ್ತೇವೆ. ಸರ್ಕಾರ ಈಗಾಗಲೇ ಹೇಳಿದ್ದಾರೆ ಭಕ್ತಾದಿಗಳಿಗೆ ಒಳಗಡೆ ಬಿಡಬೇಡಿ. ನೂಕು ನುಗ್ಗಲು ಆಗುತ್ತೆ. ಕೊರೋನಾ ಪರಿಸ್ಥಿತಿಗೆ ಅನುಗುಣವಾಗಿ ಈ ಆದೇಶ ಕೊಟ್ಟಿದ್ದಾರೆ. ಆದ್ದರಿಂದ ಭಕ್ತಾದಿಗಳು ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ಬಂದರೆ ಮೂಲಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡ್ತೇವೆ ಅಂತಾ ದೇವಾಲಯದ ಪ್ರಧಾನ ಅರ್ಚಕರಾದ ಸೋಮಸುಂದರ್ ಹೇಳಿದ್ದಾರೆ.