Tag: ಗವಿಮಠ

  • ವಿಜಯೇಂದ್ರನ ಚಮಚಾಗಳಿದ್ರೆ ಪ್ರಶ್ನೆ ಕೇಳ್ಬೇಡಿ – ಮಾಧ್ಯಮಗಳ ಮುಂದೆ ಸಿಡಿಮಿಡಿಗೊಂಡ ಯತ್ನಾಳ್

    ವಿಜಯೇಂದ್ರನ ಚಮಚಾಗಳಿದ್ರೆ ಪ್ರಶ್ನೆ ಕೇಳ್ಬೇಡಿ – ಮಾಧ್ಯಮಗಳ ಮುಂದೆ ಸಿಡಿಮಿಡಿಗೊಂಡ ಯತ್ನಾಳ್

    – ಯಾವ ಜನ್ಮದಲ್ಲೂ ಕಾಂಗ್ರೆಸ್‌ಗೆ ಹೋಗಲ್ಲ, ಅದು ಮುಸ್ಲಿಮರ ಪಕ್ಷ: ಯತ್ನಾಳ್

    ಕೊಪ್ಪಳ: ಯಾವ ಜನ್ಮದಲ್ಲಿಯೂ ಕಾಂಗ್ರೆಸ್‌ಗೆ (Congress) ಹೋಗಲ್ಲ, ಅದು ಮುಸ್ಲಿಮರ ಪಕ್ಷ ಎಂದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಗೋಶಾಲೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲು ಕೊಪ್ಪಳದ (Koppal) ಗವಿಮಠಕ್ಕೆ (Gavi Mutt)ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಯಾವ ಜನ್ಮದಲ್ಲಿಯೂ ಹೋಗಲ್ಲ, ಅದು ಮುಸ್ಲಿಮರ ಪಕ್ಷ. ವಿಜಯೇಂದ್ರನ ಟೀಂನವರದ್ದು ನಕಲಿ ಸಾಮಾಜಿಕ ಜಾಲತಾಣವಿದೆ. ಅದರಲ್ಲಿ ಈ ರೀತಿ ಅಪಪ್ರಚಾರ ಮಾಡ್ತಾ ಇದ್ದಾರೆ. ಬಿಜೆಪಿಯಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದವರಿದ್ದಾರೆ. ಕೊರೊನಾ ಸಮಯದಲ್ಲಿ ಎಷ್ಟೆಷ್ಟೋ ಬಿಲ್ ಹಾಕಿದ್ದರು ಎಂದರು.ಇದನ್ನೂ ಓದಿ:ಟಾಲಿವುಡ್ ನೆಪೋಟಿಸಂ ಬಗ್ಗೆ ಮಾತನಾಡಿದ ‘ಲಕ್ಕಿ ಭಾಸ್ಕರ್‌’ ನಿರ್ಮಾಪಕ ನಾಗ ವಂಶಿ

    ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ ನಿಮ್ಮ ಜೊತೆ ಇರುತ್ತಾರಾ ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಅವರು, ನಿಮಗೆ ವಿಜಯೇಂದ್ರ ಏನಾದರೂ ಈ ರೀತಿ ಪ್ರಶ್ನೆ ಕೇಳುವಂತೆ ಕಳಿಸಿದ್ದಾನಾ? ಪದೇ ಪದೇ ಅದೇ ಕೇಳುತ್ತೀರಾ? ಮಾಧ್ಯಮದವರು ಪಾರದರ್ಶಕರಾಗೀರಿ, ವಿಜಯೇಂದ್ರ ವಾಟಾಪ್ಸ್ನಲ್ಲಿ ಕಳುಹಿಸಿದ್ದನ್ನು ನನಗೆ ಕೇಳಬೇಡಿ. ವಿಜಯೇಂದ್ರನ ಚಮಚಾಗಳಿದ್ದರೆ ನನಗೆ ಪ್ರಶ್ನೆ ಕೇಳಬೇಡಿ ಗೆಟ್ ಔಟ್, ಸುಮ್ಮನೇ ಸರಳ ಪ್ರಶ್ನೆ ಕೇಳಿ, ವಿಜಯೇಂದ್ರ ಕಡೆ ದುಡ್ಡು ತೆಗೆದುಕೊಂಡು ನನಗೆ ಪ್ರಶ್ನೆ ಕೇಳುವ ಹಾಗಿದ್ರೆ, ನನ್ನ ಪ್ರೆಸ್ ಮೀಟ್‌ಗಳಿಗೆ ಬರಬೇಡಿ ಎಂದು ಗರಂ ಆದರು.

    ಯಡಿಯೂರಪ್ಪ ಹಾಗೂ ಅವನ ಮಗನದ್ದು ಸಾಕಷ್ಟು ಹಗರಣ ಇದೆ, ಅವರು ಹಣ ಕೊಟ್ಟು ಕೆಲವರನ್ನ ಖರೀದಿ ಮಾಡಿರಬಹುದು. ನಾನು ಇಡಿ ರಾಜ್ಯ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹ ಮಾಡುತ್ತೇನೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ವೀರಶೈವ ಲಿಂಗಾಯತರಿಗೆ ಮೀಸಲಾತಿ ತಪ್ಪಿಸಿದರು. ಇನ್ನೂ ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿಯ ಮಹಾಕಳ್ಳರು ಸೇರಿ ರಾಜಣ್ಣನ ಹನಿಟ್ರ‍್ಯಾಪ್ ಮಾಡಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌

  • ಗವಿಶ್ರೀಗಳಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್

    ಗವಿಶ್ರೀಗಳಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್

    ಕೊಪ್ಪಳ: ನಟ ಡಾಲಿ ಧನಂಜಯ್ (Daali Dhananjay) ಇಂದು (ಜ.28) ಕೊಪ್ಪಳ (Koppal) ಸಂಸ್ಥಾನದ ಗವಿಮಠಕ್ಕೆ ಆಗಮಿಸಿ, ಗವಿಸಿದ್ದೇಶ್ವರ ಸ್ವಾಮೀಜಿಗಳನ್ನು ಭೇಟಿ ಮಾಡಿ, ಮದುವೆಗೆ ಆಹ್ವಾನಿಸಿದ್ದಾರೆ.

    ಗವಿಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ಡಾಲಿ ಆಮಂತ್ರಣ ಪತ್ರಿಕೆ ನೀಡಿ, ಮದುವೆಗೆ ಆಹ್ವಾನಿಸಿದರು. ನಂತರ ಕೆಲ ಹೊತ್ತು ಗವಿಶ್ರೀ ಡಾಲಿ ಧನಂಜಯ್ ಉಭಯ ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಶ್ರೀಗಳು ಮಠದ ಪರಂಪರೆ, ಇತಿಹಾಸ, ರಥೋತ್ಸವ, ಜಾತ್ರೋತ್ಸವದ ಬಗ್ಗೆ ಮಾಹಿತಿ ನೀಡಿದರು.ಇದನ್ನೂ ಓದಿ: ಹಾಡಹಗಲೇ ಶೂಟೌಟ್ – ಓರ್ವನ ಬರ್ಬರ ಹತ್ಯೆ, ಹಳೇ ದ್ವೇಷಕ್ಕೆ ಹರಿಯಿತಾ ನೆತ್ತರು?

    ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಶ್ರೀಮಠದಿಂದ ಡಾಲಿ ಧನಂಜಯ್‌ಗೆ ಗವಿಸಿದ್ದೇಶ್ವರರ ಕರ್ತೃ ಗದ್ದುಗೆಯ ಫೋಟೋ ನೀಡಿ, ಸನ್ಮಾನಿಸುವ ಮೂಲಕ ಆಶೀರ್ವದಿಸಿದರು. ನಂತರ ಗವಿಮಠ ಮೈದಾನದಲ್ಲಿನ ಮಹಾದಾಸೋಹ ಭವನದಲ್ಲಿ ಡಾಲಿ ಪ್ರಸಾದ ಸ್ವೀಕರಿಸಿದರು.

    ಫೆ.15ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗದ ವಸ್ತು ಪ್ರದರ್ಶನ ಮೈದಾನದಲ್ಲಿ ಫೆ.16ರಂದು ಡಾಲಿ-ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.ಇದನ್ನೂ ಓದಿ:AI ರಂಗದಲ್ಲಿ ಡೀಪ್‌ಸೀಕ್ ಸಂಚಲನ – ಅಮೆರಿಕ ಷೇರುಪೇಟೆ ಶೇಕ್!

  • ವೀಡಿಯೋ ಕಾಲ್ ಮಾಡಿ ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದ ಗವಿಮಠದ ಶ್ರೀಗಳು

    ವೀಡಿಯೋ ಕಾಲ್ ಮಾಡಿ ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದ ಗವಿಮಠದ ಶ್ರೀಗಳು

    ಕೊಪ್ಪಳ: ಇತ್ತೀಚೆಗಷ್ಟೇ ಗವಿ ಮಠದ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ತೆರದ ಬೆನ್ನಲ್ಲೇ ಇದೀಗ ಶ್ರೀಗಳು ಸ್ವತಃ ವೀಡಿಯೋ ಕಾಲ್ ಮಾಡಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.

    ನಗರದ ಗವಿ ಮಠದ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ತೆರಯಲಾಗಿದೆ. ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಾದ ರೋಗಿಗಳಿಗೆ ವೀಡಿಯೋ ಕಾಲ್ ಮಾಡಿ ಶ್ರೀಗಳು ಮಾತನಾಡಿದ್ದಾರೆ. ಆರೋಗ್ಯ ವಿಚಾರಿಸಿ, ಯಾವುದೇ ರೀತಿಯ ಭಯಪಡದಂತೆ ರೋಗಿಗಳಲ್ಲಿ ಧೈರ್ಯ ತುಂಬಿದ್ದಾರೆ. ಕೋವಿಡ್ ಕೇರ್ ಸೆಂಟರ್ ತೆರೆಯುವುದಲ್ಲದೆ, ಸ್ವತಃ ತಾವೇ ರೋಗಿಗಳಿಗೆ ಕರೆ ಮಾಡಿ ಆರೋಗ್ಯ ವಿಚಾರಿಸುವ ಕಾಳಜಿ ತೋರಿದ್ದಾರೆ. ವೀಡಿಯೋ ಕಾಲ್ ಮೂಲಕ ಧೈರ್ಯ ತುಂಬಿದ ಶ್ರೀಗಳ ಮಾತಿಗೆ ಸೋಂಕಿತರು ಕೈ ಮುಗಿದಿದ್ದಾರೆ.

    ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗುತ್ತಿದ್ದಂತೆ ಐತಿಹಾಸಿಕ ಗವಿಮಠದಿಂದ 100 ಬೆಡ್ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ಗವಿ ಮಠದ ಸ್ವಾಮೀಜಿ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಗವಿಮಠದ ವೃದ್ಧಾಶ್ರಮದಲ್ಲಿ 100 ಬೆಡ್‍ಗಳ ಆಸ್ಪತ್ರೆ ತಲೆ ಎತ್ತಿದ್ದು, ಕೊಪ್ಪಳ ಜಿಲ್ಲಾಡಳಿತದ ಮನವಿ ಹಿನ್ನೆಲೆ ಗವಿಸಿದ್ದೇಶ್ವರ ಸ್ವಾಮೀಜಿ 100 ಬೆಡ್‍ಗಳ ಆಸ್ಪತ್ರೆ ನಿರ್ಮಾಣ ಮಾಡಿಸಿದ್ದಾರೆ.

    ಒಟ್ಟು 100 ಹಾಸಿಗೆಯಲ್ಲಿ 70 ಆಕ್ಸಿಜನ್ ಬೆಡ್, 20 ಸಾಮಾನ್ಯ ಬೆಡ್ ಮಾಡಲಾಗಿದ್ದು, ಬಾಕಿ 10 ಬೆಡ್ ನಲ್ಲಿ 6 ಎಚ್‍ಎಫ್‍ಎನ್‍ಸಿ ಬೆಡ್ ಮತ್ತು 4 ವೆಂಟಿಲೇಟರ್ ಬೆಡ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಗವಿಮಠದಿಂದ 100 ಬೆಡ್‍ನ ಕೋವಿಡ್ ಆಸ್ಪತ್ರೆ ಸಿದ್ಧ

    ಗವಿಮಠದಿಂದ 100 ಬೆಡ್‍ನ ಕೋವಿಡ್ ಆಸ್ಪತ್ರೆ ಸಿದ್ಧ

    ಕೊಪ್ಪಳ: ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗುತ್ತಿದ್ದಂತೆ ಐತಿಹಾಸಿಕ ಗವಿಮಠದಿಂದ 100 ಬೆಡ್ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದ್ದು, ಗವಿ ಮಠದ ಸ್ವಾಮೀಜಿ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

    ಗವಿಮಠದ ವೃದ್ಧಾಶ್ರಮದಲ್ಲಿ 100 ಬೆಡ್‍ಗಳ ಆಸ್ಪತ್ರೆ ತಲೆ ಎತ್ತಿದ್ದು, ಕೊಪ್ಪಳ ಜಿಲ್ಲಾಡಳಿತದ ಮನವಿ ಹಿನ್ನೆಲೆ ಗವಿಸಿದ್ದೇಶ್ವರ ಸ್ವಾಮೀಜಿ 100 ಬೆಡ್‍ಗಳ ಆಸ್ಪತ್ರೆ ನಿರ್ಮಾಣ ಮಾಡಿಸಿದ್ದಾರೆ. ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಸ್ವಾಮೀಜಿಗೆ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

    ಒಟ್ಟು 100 ಹಾಸಿಗೆಯಲ್ಲಿ 70 ಆಕ್ಸಿಜನ್ ಬೆಡ್, 20 ಸಾಮಾನ್ಯ ಬೆಡ್ ಮಾಡಲಾಗಿದ್ದು, ಬಾಕಿ 10 ಬೆಡ್ ನಲ್ಲಿ 6 ಎಚ್‍ಎಫ್‍ಎನ್‍ಸಿ ಬೆಡ್ ಮತ್ತು 4 ವೆಂಟಿಲೇಟರ್ ಬೆಡ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • 200 ವರ್ಷಗಳಲ್ಲಿ ಮೊದಲ ಬಾರಿ ಬೆಳಗ್ಗೆ ನಡೆದ ಗವಿಸಿದ್ದೇಶ್ವರ ರಥೋತ್ಸವ

    200 ವರ್ಷಗಳಲ್ಲಿ ಮೊದಲ ಬಾರಿ ಬೆಳಗ್ಗೆ ನಡೆದ ಗವಿಸಿದ್ದೇಶ್ವರ ರಥೋತ್ಸವ

    ಕೊಪ್ಪಳ: 200 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗವಿಸಿದ್ದೇಶ್ವರ ರಥೋತ್ಸವ ಬೆಳಗ್ಗೆ ನಡೆಯಿತು. ಇಂದು ಬೆಳಗ್ಗೆ 8.45 ಕ್ಕೆ ಗವಿಸಿದ್ದೇಶ್ವರ ರಥೋತ್ಸವ ಸಂಪನ್ನವಾಗಿದ್ದು, ಕೊರೊನಾ ಹಿನ್ನೆಲೆ ನೂರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಸಲಾಯಿತು. ಅಲ್ಲದೆ ಈ ಬಾರಿ ಕೇವಲ ಮೂರು ದಿನಕ್ಕೆ ಜಾತ್ರೆಯನ್ನ ಸೀಮಿತ ಮಾಡಲಾಗಿದೆ.

    ಕೊರೊನಾ ಗೆದ್ದ ಕುಷ್ಟಗಿ ತಾಲೂಕಿನ ಬಿಜಕಲ್ ನ ಶಿವಲಿಂಗ ಶಿವಾಚಾರ್ಯರು ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದ ಬೀದಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಕೆಲವು ಜನರು ಮಾತ್ರ ರಥೋತ್ಸವ ನೆರವೇರಿಸಿದರು. ಕೊರೊನಾ ಹಿನ್ನೆಲೆ ಜಿಲ್ಲಾಡಳಿತ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೂ ಸರಳವಾಗಿ ಜಾತ್ರೆ ಮಾಡಲಾಗಿದ್ದು, ಕೇವಲ ಮೂರು ದಿನಕ್ಕೆ ಸೀಮಿತಗೊಳಿಸಲಾಗಿದೆ.

    200 ವರ್ಷಗಳಲ್ಲಿ ಇದೇ ಮೊದಲ ಬಾರಿ ಗವಿಸಿದ್ದೇಶ್ವರ ರಥೋತ್ಸವ ಬೆಳಗ್ಗೆ 8.45 ಕ್ಕೆ ನಡೆಯಿತು. ಪ್ರತಿ ವರ್ಷ ಸುಮಾರು ಐದರಿಂದ ಆರು ಲಕ್ಷ ಜನ ಗವಿ ಸಿದ್ದೇಶ್ವರ ಜಾತ್ರೆಗೆ ಸೇರತ್ತಿದ್ದರು. ಈ ಬಾರಿ ಒಂದು ಲಕ್ಷ ಜನ ರಥೋತ್ಸವಕ್ಕೆ ಬಂದಿದ್ದರು. ಆದರೂ ರಥೋತ್ಸವ ಬೀದಿ ಮಾತ್ರ ಖಾಲಿ ಖಾಲಿ ಕಾಣುತ್ತಿತ್ತು.

    ಗವಿಮಠದ ಜಾತ್ರೆ ಕೇವಲ ಜಾತ್ರೆಯಾಗದೆ, ಪ್ರತಿ ವರ್ಷ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿತ್ತು. ಈ ಬಾರಿ ಮೂರೇ ದಿನಕ್ಕೆ ಜಾತ್ರೆ ಸೀಮಿತವಾಗಿದೆ. ಯಾವುದೇ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮ ಇರಲಿಲ್ಲ. ಸರಳವಾಗಿ ಜಾತ್ರೆ ಆಚರಿಸಲಾಗಿದೆ. ಆದರೆ ಗವಿಮಠ ಹೊಸದೊಂದು ಸಂಕಲ್ಪ ಮಾಡಿದ್ದು, ವಿದ್ಯಾರ್ಥಿಗಳಿಗಾಗಿ 24 ಗಂಟೆ ಗ್ರಂಥಾಲಯ ಆರಂಭಿಸಿದೆ. ಜೊತೆಗೆ ಕೊಪ್ಪಳ ತಾಲೂಕಿನ ಗಿಣಗೇರಿ ಕೆರೆಯ ಸ್ವಚ್ಚತಾ ಸಂಕಲ್ಪ ಮಾಡಿದೆ. ಒಂದು ಗ್ರಾಮವನ್ನು ದತ್ತು ಸ್ವೀಕಾರ ಮಾಡಿ ಮಾದರಿ ಗ್ರಾಮ ಮಾಡಲು ಗವಿ ಮಠ ಮುಂದಾಗಿದೆ.

    ದಕ್ಷಿಣ ಭಾರತದ ಕುಂಭಮೇಳ ಎಂದು ಹೆಸರು ವಾಸಿಯಾದ ಗವಿಮಠ ಜಾತ್ರೆ, ಪ್ರತಿ ವರ್ಷ ಸಾಮಾಜಿಕ ಕಳಕಳಿಯಿಂದ ನಾಡಿನಾದ್ಯಂತ ಹೆಸರು ಗಳಿಸಿದೆ. ಇದೀಗ ಹೊಸ ಆಲೋಚನೆಯನ್ನು ಜಾತ್ರೆಯ ದಿನ ಗವಿಮಠದ ಪೀಠಾಧಿಪತಿಗಳು ಸಂಕಲ್ಪ ಮಾಡಿದ್ದಾರೆ. ಇಂದು ನಡೆದ ಗವಿಮಠದ ಜಾತ್ರೆಯಲ್ಲಿ ಸ್ವಾಮೀಜಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ದಂಪತಿ ಹಾಗೂ ಜಿಲ್ಲೆಯ ಜನ ಪ್ರತಿನಿಧಿಗಳು ಭಾಗಿಯಾಗಿದ್ದರು. ಜನ ದೂರದಿಂದಲೇ ನಿಂತು ರಥೋತ್ಸವಕ್ಕೆ ಹೂ, ಹಣ್ಣು ಎಸೆದು ಭಕ್ತಿ, ಭಾವ ಮೆರೆದರು.

  • ಪೇಜಾವರ ಶ್ರೀಗಳದ್ದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು: ಗವಿಮಠದ ಸ್ವಾಮೀಜಿ

    ಪೇಜಾವರ ಶ್ರೀಗಳದ್ದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು: ಗವಿಮಠದ ಸ್ವಾಮೀಜಿ

    ಕೊಪ್ಪಳ: ಪೇಜಾವರ ಶ್ರೀಗಳು ಅಸ್ತಂಗತರಾಗಿರುವುದಕ್ಕೆ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಸ್ವಾಮೀಜಿ, ಪೇಜಾವರ ಮಠದ ಶ್ರೀಗಳು ವ್ಯಕ್ತಿತ್ವ ಆಧರಣಿಯ ಮತ್ತು ಅನುಕರಣಿಯವಾಗಿದೆ. ಅವರದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು. ಮುಖದಲ್ಲಿ ಸದಾ ದೈವಿ ಕಳೆ, ಮನದಲ್ಲಿ ಸದಾ ದೇಶಪ್ರೇಮ ಇತ್ತು ಎಂದು ನೆನೆದರು.

    ವಿಶ್ವೇಶತೀರ್ಥ ಶ್ರೀಪಾದರು ಜನರ ಕಣ್ಣಿಂದ ದೂರ ಆಗಿರಬಹುದು, ಮಣ್ಣಲ್ಲಿ ಮರೆಯಾಗಬಹುದು ಲಕ್ಷ ಲಕ್ಷ ಭಕ್ತರ ಹೃದಯದಿಂದ ದೂರ ಆಗುವ ವ್ಯಕ್ತಿತ್ವ ಅವರದ್ದಲ್ಲ. ಆಧ್ಯಾತ್ಮ ಚೇತನ ಅಗಲಿದ್ದು ಈ ನಾಡಿಗೆ ತುಂಬದ ಹಾನಿಯಾಗಿದೆ. ಅವರ ಆದರ್ಶಗಳು, ಆಲೋಚನೆಗಳು ನಮಗೆ ಬೆಳಕಾಗಲಿವೆ ಎಂದರು.

    ಪೇಜಾವರ ಶ್ರೀಗಳು 2012ರ ಜನೇವರಿ 11ರಂದು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಉದ್ಘಾಟನೆ ನೆರವೆರಿಸಿದ್ದರು. ಜಾತ್ರಾ ಮಹೋತ್ಸವ ನೋಡಿ ತುಂಬ ಸಂತೋಷ ಪಟ್ಟಿದ್ದರು. ನಮ್ಮ ಜಾತ್ರೆಯನ್ನು ನೋಡಿ ಪೂರಿ ಜಗನ್ನಾಥ್ ಜಾತ್ರೆಗೆ ಹೋಲಿಸಿ ನಮಗೆಲ್ಲ ಮಾರ್ಗದರ್ಶನ ಮಾಡಿದ್ದರು. ನಮ್ಮೆಲ್ಲರಿಗೂ ಸಂತೋಷ ಪಡುವ ಮಾತನಾಡಿ ನಮಗೆಲ್ಲ ಹುರಿದುಂಬಿಸಿದ್ದು ಇನ್ನೂ ಸ್ಮರಣೆಯಲ್ಲಿದೆ ಎಂದು ನೆನೆದರು.

  • ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ ಚಾಲನೆ

    ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ ಚಾಲನೆ

    – ಕೋಮು ಸೌಹಾರ್ದತೆ ಮೂಡಿಸಲು ಮುಂದಾದ ಮುಸ್ಲಿಂ ಬಾಂಧವರ

    ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧರ್ಮ ಧರ್ಮಗಳ ನಡುವೆ ಕೋಮು ಸೌಹಾರ್ದತೆ ಮೂಡಿಸುವ ನಿಟ್ಟಿನಲ್ಲಿ ಜಮಾತ್-ಎ-ಇಸ್ಲಾಂ ಹಿಂದ್ ಸಂಘಟನೆ ಮಸೀದಿ ಸಂದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ನೂರಾರು ಹಿಂದೂಗಳು ಮಸೀದಿಗೆ ಭೇಟಿ ನೀಡಿ ಇಸ್ಲಾಂ ಧರ್ಮ ಹಾಗೂ ಮಸೀದಿ ಬಗ್ಗೆ ತಿಳಿದುಕೊಂಡರು.

    ಕೊಪ್ಪಳದ ನಗರದ ಸ್ಟೇಷನ್ ರಸ್ತೆಯಲ್ಲಿರುವ ಮಸ್ಜಿದ್-ಎ-ಅಲ್ಲಾದಲ್ಲಿ ಇಂದು ವಿಭಿನ್ನ ಕಾರ್ಯಕ್ರಮವೊಂದು ನಡೆಯಿತು. ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳು ಮಸೀದಿಗೆ ಭೇಟಿ ನೀಡಿದರು. ಈ ವೇಳೆ ಸ್ವಾಮೀಜಿಗಳಿಗೆ ಮುಸ್ಲಿಂ ಬಾಂಧವರ ಮಸೀದಿಯ ಬಗ್ಗೆ ವಿವರಿಸಿದರು.

    ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮಸೀದಿಗೆ ಭೇಟಿ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ ಅಲ್ಲಿನ ವ್ಯವಸ್ಥೆ ಹಾಗೂ ಪ್ರಾರ್ಥನೆ ಮಾಡುವ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಜೊತೆಗೆ ಮುಸ್ಲಿಂ ಬಾಂಧವರು ಹಿಂದೂ ಸಮಾಜದ ಎಲ್ಲ ಸಮುದಾಯದವರಿಗೂ ಸಹ ಮಸೀದಿಗೆ ಆಹ್ವಾನ ನೀಡಿದ್ದರು. ಮುಸ್ಲಿಂ ಬಾಂಧವರ ಕರೆಗೆ ಓಗೊಟ್ಟು ಬಂದಿದ್ದ ನೂರಾರು ಹಿಂದೂಗಳಿಗೂ ಸಹ ಮಸೀದಿ ಹಾಗೂ ಇಸ್ಲಾಂ ಧರ್ಮದ ಕುರಿತು ಮಾಹಿತಿ ನೀಡಿಲಾಯಿತು. ಹಿಂದೂ ಪುರಷರಷ್ಟೇ ಅಲ್ಲದೆ ಮಹಿಳೆಯರೂ ಸಹ ಮಸೀದಿ ಸಂದರ್ಶನದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ.

    ಈ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆವರೆಗೂ ನಡೆಯಿತು. ಈ ವೇಳೆ ಸಾವಿರಾರು ಹಿಂದೂಗಳು ಮಸೀದಿಗೆ ಭೇಟಿ ನೀಡಿದರು. ಒಟ್ಟಿನಲ್ಲಿ ಸಮಾಜದಲ್ಲಿ ಧರ್ಮ, ಧರ್ಮಗಳ ನಡುವೆ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಕೊಪ್ಪಳದಲ್ಲಿ ಮಸೀದಿ ಸಂದರ್ಶನ ಹಮ್ಮಿಕೊಂಡಿದ್ದು ನಿಜಕ್ಕೂ ಪ್ರಶಂಸನಿಯ ಕೆಲಸವಾಗಿದೆ.

  • ಗವಿಮಠ ಜಾತ್ರಾ ಮಹೋತ್ಸವದಲ್ಲಿ ಬದಲಾವಣೆಯಿಲ್ಲ: ಗವಿಸಿದ್ಧೇಶ್ವರ ಶ್ರೀ

    ಗವಿಮಠ ಜಾತ್ರಾ ಮಹೋತ್ಸವದಲ್ಲಿ ಬದಲಾವಣೆಯಿಲ್ಲ: ಗವಿಸಿದ್ಧೇಶ್ವರ ಶ್ರೀ

    ಕೊಪ್ಪಳ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಶ್ರೀಗಳ ಶಿವೈಕ್ಯರಾದ ಹಿನ್ನೆಲೆಯಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಗವಿಮಠದ ಗವಿಸಿದ್ಧೇಶ್ವರ ಶ್ರೀಗಳು ತಿಳಿಸಿದ್ದಾರೆ.

    ನಗರದ ಗವಿಮಠದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳವಾರದಿಂದ ಪ್ರಾರಂಭವಾಗುವ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತವೆ. ನಾಳೆ ಸಂಜೆ 6 ಗಂಟೆಗೆ ಕೆನಡಾದ ಮ್ಯಾಥ್ಯೂ ಪೌರ್ಟಿಯರ್ ದಂಪತಿ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಿದ್ದಗಂಗಾ ಶ್ರೀಗಳ ಅಗಲಿಕೆ ನೋವನ್ನು ತಂದಿದೆ. ಲಕ್ಷಾಂತರ ಜನರಿಗೆ ಅನ್ನ, ಜ್ಞಾನವನ್ನು ನೀಡಿ ಬೆಳಕು ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ತಂದೆ-ತಾಯಿ, ಗುರುವಾಗಿ ಮಾರ್ಗದರ್ಶನ ಮಾಡಿದ್ದಾರೆ. ಹೀಗಾಗಿ ಶ್ರೀಗಳನ್ನು ಜಗತ್ತಿನ ಎಂಟನೇ ಅದ್ಭುತ ಅಂತ ಕರೆಯಬಹುದು ಎಂದು ಹೇಳಿದರು.

    ಸಿದ್ದಗಂಗಾ ಶ್ರೀಗಳನ್ನು ಕಳೆದುಕೊಂಡ ನಾಡು ಅನಾಥವಾಗಿದೆ. ಅವರು ಈ ಕಾಲದ ಸರ್ವಶ್ರೇಷ್ಠ ಸಂತರು, ಶಿವಕುಮಾರ ಶ್ರೀಗಳು ಒಬ್ಬ ತಪಸ್ವಿ, ಇಷ್ಟಲಿಂಗ, ಸಮಾಜ ಸೇವಕ, ಕರುಣಾಮಯಿ ಇಷ್ಟು ಗುಣಗಳನ್ನು ಹೊತ್ತು ಭೂಮಿಗೆ ಬಂದ ಭಗವಂತ. ಶ್ರೀಗಳ ಆತ್ಮಕ್ಕೆ ಚಿರಶಾಂತಿ ನೀಡಲಿ ಎನ್ನುವುದಕ್ಕಿಂತ, ಸಿದ್ದಗಂಗಾ ಶ್ರೀಗಳ ಆತ್ಮ ಲಕ್ಷಾಂತರ ಆತ್ಮದಲ್ಲಿ ಬೆರೆಯಲಿ ಅಂತ ದೇವರಲ್ಲಿ ಬೇಡಿಕೊಳ್ಳಬೇಕು ಎಂದರು.

    2005ರಲ್ಲಿ ಗವಿಮಠದ ಎರಡು ಸಾವಿರ ವಿದ್ಯಾರ್ಥಿಗಳ ಉಚಿತ ಪ್ರಸಾದ ನಿಲಯ ಅಡಿಗಲ್ಲು ಹಾಗೂ 2006ರಲ್ಲಿ ಉದ್ಘಾಟನೆಯನ್ನು ಶ್ರೀ ಶಿವಕುಮಾರ ಸ್ವಾಮೀಜಿಗಳು ನೆರವೇರಿಸಿದ್ದರು. ಇತ್ತೀಚೆಗೆ ಶ್ರೀಗಳ 111ನೇ ಜನ್ಮದಿನಾಚರಣೆಯಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರಿಂದ ಆಶೀರ್ವಾದ ಪಡೆದಿದ್ದೆ ಎಂದು ಗವಿಸಿದ್ಧೇಶ್ವರ ಸ್ವಾಮೀಜಿ ಸ್ಮರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಗ್ನಲ್ ಜಂಪ್ ಮಾಡಿದ್ದಕ್ಕೆ ಘನಘೋರ ಶಿಕ್ಷೆ – ಯುವಕರಿಬ್ಬರಿಗೆ ಪೊಲೀಸ್ ಬೆಲ್ಟ್ ನಿಂದ ಥಳಿತ

    ಸಿಗ್ನಲ್ ಜಂಪ್ ಮಾಡಿದ್ದಕ್ಕೆ ಘನಘೋರ ಶಿಕ್ಷೆ – ಯುವಕರಿಬ್ಬರಿಗೆ ಪೊಲೀಸ್ ಬೆಲ್ಟ್ ನಿಂದ ಥಳಿತ

    ಕೊಪ್ಪಳ: ಸಿಗ್ನಲ್ ಜಂಪ್ ಮಾಡಿದ ಇಬ್ಬರು ಯುವಕರಿಗೆ ಪೊಲೀಸರು ಬೆಲ್ಟ್ ನಿಂದ ಚೆನ್ನಾಗಿ ಥಳಿಸಿದ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

    ಗವಿಮಠದ ಜಾತ್ರೆಯ ಬಂದೋಬಸ್ತ್ ಗೆ ಆಗಮಿಸಿದ ಪೊಲೀಸರು ಈ ದರ್ಪ ಮೆರೆದಿದ್ದಾರೆ. ಜಾತ್ರೆಗೆ ಬಂದಿರೋ ಇಬ್ಬರ ಯುವಕರು ಸಿಗ್ನಲ್ ಜಂಪ್ ಮಾಡಿದರೆಂದು ಆರೋಪಿಸಿ ಅವರನ್ನು ಠಾಣೆಗೆ ಕರೆ ತಂದು ಬೆಲ್ಟ್ ನಿಂದ ಚೆನ್ನಾಗಿ ಥಳಿಸಿದ್ದಾರೆ.

    ಕೊಪ್ಪಳ ನಗರ ಠಾಣೆಯಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪ್ರೊಬೆಷನರಿ ಪಿಎಸ್‍ಐ ವಿರುಪಾಕ್ಷ ಇಬ್ಬರಿಗೆ ಥಳಿಸೋ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಒಟ್ಟಿನಲ್ಲಿ ಬಂದೋಬಸ್ತ್ ನೆಪದಲ್ಲಿ ಜಾತ್ರೆಯಲ್ಲಿ ಭಕ್ತರ ಮೇಲೆ ದರ್ಪ ತೋರುತ್ತಿರುವ ಪೊಲೀಸರು ಟ್ರಾಫಿಕ್, ಪ್ರಸಾದ ಕೌಂಟರ್ ಬಳಿ ಭಕ್ತರಿಗೆ ಅವಾಚ್ಯ ಪದಗಳನ್ನು ಬಳಕೆ ಮಾಡುತ್ತಿದ್ದಾರೆ. ಅಲ್ಲದೇ ಮಾಜಿ ಶಾಸಕ ಪರಣ್ಣ ಮುನವಳ್ಳಿಗೂ ಮಠದತ್ತ ಬಿಡದೆ ಪೊಲೀಸರು ತಮ್ಮ ಕೌರ್ಯ ಮೆರೆದಿದ್ದಾರೆ. ಪೊಲೀಸರ ಈ ನಡೆಯನ್ನು ಜನ ಖಂಡಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=YRfX0IOSbGY