Tag: ಗವಿ ಮಠ

  • ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

    ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

    ಕೊಪ್ಪಳ: ಇಲ್ಲಿನ ಗವಿ ಮಠ (Gavi Math) ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಮುಸ್ಲಿಂ ಮಹಿಳೆಯೊಬ್ಬರು (Muslim Woman) ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತು ಗಮನಸೆಳೆದಿದ್ದಾರೆ.

    ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ ಬೇಗಂ ನಾಗ ದೇವರ ಮುಂದೆ ಧ್ಯಾನಕ್ಕೆ ಕುಳಿತ ಮಹಿಳೆ. ಹಸೀನಾ ಬೇಗಂ ಕಳೆದ ಎಂಟು ದಿನಗಳಿಂದ ಗವಿ ಮಠಕ್ಕೆ ಬಂದು ದ್ಯಾನ ಮಾಡುತ್ತಿದ್ದಾರೆ. ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನದಲ್ಲಿ ತೊಡಗಿದ್ದಾರೆ. 90%ನಷ್ಟು ಹಿಂದೂ ಧರ್ಮದವರು ಗವಿ ಮಠಕ್ಕೆ ಬರುತ್ತಾರೆ. ಆದರೆ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಹಸೀನಾ ಬೇಗಂ ಮಾನಸಿಕ ನೆಮ್ಮದಿಗಾಗಿ ಇಲ್ಲಿ ಧ್ಯಾನ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಗವಿ ಮಠದ ಶ್ರೀಗಳು ನಿತ್ಯ ಸಂಜೆ ಸಮಯದಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೆ ಹಸೀನಾ ಧ್ಯಾನಕ್ಕೆ ಕುಳಿತುಕೊಳ್ಳುತ್ತಾರೆ. ಒಟ್ಟು 11 ಧ್ಯಾನ ಮಾಡೋದಾಗಿ ಬೇಡಿಕೊಂಡಿರೋ ಹಸಿನಾ ಬೇಗಂ, ನಾಗದೇವರ ಮುಂದೆ ನಿತ್ಯ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಹಸೀನಾ ಬೇಗಂ, ನನ್ನ ಮನಸ್ಸಿಗೆ ನೆಮ್ಮದಿ ಇರಲಿಲ್ಲ. ಇಲ್ಲಿ ಧ್ಯಾನಕ್ಕೆ ಕೂರುತ್ತೇನೆ ಎಂದು ಗವಿಮಠದ ಶ್ರೀಗಳನ್ನು ಕೇಳಿದ್ದೆ. ನಿನ್ನ ಮನಸ್ಸಿಗೆ ನೆಮ್ಮದಿ ಸಿಗುವುದಾದರೆ ಕೂರು ಎಂದು ಹೇಳಿದ್ದರು. ನಾನು 2013ರಿಂದ ಮಠಕ್ಕೆ ಬರುತ್ತಿದ್ದೇನೆ. ನನಗೆ ಸಮಯ ಸಿಕ್ಕಾಗೆಲ್ಲ ಇಲ್ಲಿಗೆ ಬಂದು 10 ನಿಮಿಷ ಕುಳಿತುಕೊಂಡು ಹೋಗುತ್ತೇನೆ. ನನಗೆ ಕಷ್ಟ ಇತ್ತು, ಅದಕ್ಕೆ ಇಲ್ಲಿಗೆ ಬಂದಿದ್ದೇನೆ. ಎಂಟು ದಿನಗಳ ಹಿಂದೆ ನನಗೆ ನಿಲ್ಲಲು ಆಗುತ್ತಿರಲಿಲ್ಲ. ನಾನು ಇಲ್ಲಿಗೆ ಬಂದ ವೇಳೆ ಜೋರು ಮಳೆ ಬರುತ್ತಿತ್ತು. ಆ ಮಳೆಯಲ್ಲೇ ಧ್ಯಾನಕ್ಕೆ ಕುಳಿತುಕೊಂಡೆ. ಇವತ್ತು ನನ್ನ ಮನಸ್ಸಿಗೆ ನೆಮ್ಮದಿ ಅನಿಸಿದೆ. ಹಿಂದೂ-ಮುಸ್ಲಿಂ ಅನ್ನೋದು ನನ್ನಲಿಲ್ಲ. ಇದು ನಮ್ಮ ಮಠ. ನನಗೆ ಬಹಳ ನೋವಾಗಿತ್ತು. ಶ್ರೀಗಳು ಕೂರುವ ಜಾಗದ ಎದುರಿನ ಜಾಗ ನನಗೆ ಬಹಳ ಇಷ್ಟ ಆಯಿತು. ಅದಕ್ಕೆ ಅಲ್ಲೇ ಧ್ಯಾನಕ್ಕೆ ಕುಳಿತೆ. ಪ್ರತಿನಿತ್ಯ ಒಂದು ಗಂಟೆ ಧ್ಯಾನಕ್ಕೆ ಕುಳಿತುಕೊಳ್ಳುತ್ತೇನೆ. ಸೋಮವಾರದ ತನಕ ಧ್ಯಾನ ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ: ನಿಖಿಲ್‌ ಕುಮಾರಸ್ವಾಮಿ ಸ್ಕ್ಯಾನರ್‌ನಲ್ಲಿರೋ ಫೋಟೊ ಯಾರದ್ದು?

  • ಕೊರೊನಾ ಸೋಂಕಿತರ ಊಟಕ್ಕಾಗಿ ಚಪಾತಿ ಮಾಡಿದ ಗವಿ ಶ್ರೀ

    ಕೊರೊನಾ ಸೋಂಕಿತರ ಊಟಕ್ಕಾಗಿ ಚಪಾತಿ ಮಾಡಿದ ಗವಿ ಶ್ರೀ

    ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಆರೈಕೆಗೆ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ ಗವಿಮಠದ ಶ್ರೀಗಳು, ಇದೀಗ ಸೋಂಕಿತರ ಊಟಕ್ಕಾಗಿ ದಾಸೋಹ ಭವನದಲ್ಲಿ ತಾವೇ ಚಪಾತಿ ಮಾಡುವ ಮೂಲಕ ಇತರರಿಗೂ ಸ್ಫೂರ್ತಿ ತುಂಬಿ ಗಮನ ಸೆಳೆದಿದ್ದಾರೆ.

    ಗವಿಸಿದ್ದೇಶ್ವರ ಸ್ವಾಮೀಜಿ ಸರಳತೆಗೆ ಸಾಕ್ಷಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಮಠದ ಯಾವ ಕೆಲಸವನ್ನೂ ಇತರೆ ಜನರಿಗೆ ಹೇಳದೇ ತಾವೇ ಮುಂದೆ ನಿಂತು ಮಾಡಿದ್ದಾರೆ. ಇದನ್ನು ನೋಡುವ ಭಕ್ತಗಣವು ಶ್ರೀಗಳೇ ಕೆಲಸಕ್ಕೆ ಸಜ್ಜಾಗಿದ್ದಾರೆ, ನಾವೇಕೆ ಸುಮ್ಮನೆ ನಿಲ್ಲಬೇಕೆಂದು ಕಾಯಕದಲ್ಲಿ ತೊಡಗುತ್ತಿದ್ದಾರೆ. ಹೀಗೆ ಕಾಯಕಕ್ಕೆ ಇತರರಿಗೆ ಪ್ರೇರಣೆಯಾಗುವ ಶ್ರೀಗಳು, ಇದೀಗ ತಾವೇ ಚಪಾತಿ ಮಾಡಿದ್ದಾರೆ.

    ಇತ್ತೀಚೆಗೆ ಗವಿಮಠದ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಗೆ ಮಠದಿಂದಲೇ ಅಡುಗೆಯನ್ನು ಸಿದ್ಧಪಡಿಸಿ ಪ್ಯಾಕೆಟ್ ರೂಪದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಈ ವೇಳೆ ದಾಸೋಹ ಭವನದ ಮಹಿಳೆಯರಿಗೆ ಸ್ಫೂರ್ತಿ ತುಂಬಲು ತಾವೇ ದಾಸೋಹದ ಅಡುಗೆ ಕೋಣೆಗೆ ತೆರಳಿ ಅವರೊಟ್ಟಿಗೆ ಕುಳಿತು ಚಪಾತಿ ಮಾಡಿದ್ದಾರೆ.

    ಅಭಿನವ ಶ್ರೀಗಳು ಈ ಹಿಂದೆಯೂ ಜಾತ್ರೆಯ ಸಂದರ್ಭದಲ್ಲಿ ಮಠದ ಆವರಣದಲ್ಲಿ ಕಸ ಗುಡಿಸುವುದು, ಶೌಚಾಲಯ ಸ್ವಚ್ಛಗೊಳಿಸುವುದು ಸೇರಿದಂತೆ ಇತರೆ ಕಾರ್ಯದಲ್ಲಿ ತೊಡಗಿ ಸ್ಫೂರ್ತಿಯಾಗಿದ್ದರು. ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಮಿಕರೊಂದಿಗೆ ಸರಳತೆಯಿಂದ ಬೆರೆತು ಕಸ ಗುಡಿಸಿದ್ದರು. ಇದೀಗ ಸೋಂಕಿತರ ಊಟಕ್ಕಾಗಿ ದಾಸೋಹ ಭವನದಲ್ಲಿ ಚಪಾತಿ ಮಾಡುವ ಮೂಲಕ ಬಾಣಸಿಗರಿಗೆ ಕೋವಿಡ್ ವೇಳೆ ಸ್ಫೂರ್ತಿ ತುಂಬಿದ್ದಾರೆ.

  • ವಿದ್ಯಾರ್ಥಿಯ ಶೂ ಲೇಸ್ ಕಟ್ಟಿದ ಗವಿ ಸಿದ್ದೇಶ್ವರ ಶ್ರೀಗಳು

    ವಿದ್ಯಾರ್ಥಿಯ ಶೂ ಲೇಸ್ ಕಟ್ಟಿದ ಗವಿ ಸಿದ್ದೇಶ್ವರ ಶ್ರೀಗಳು

    ಕೊಪ್ಪಳ: ವಿಶ್ವವಿಖ್ಯಾತ ಗವಿ ಮಠದ ಗವಿ ಸಿದ್ದೇಶ್ವರ ಶ್ರೀಗಳು ವಿದ್ಯಾರ್ಥಿಯೊಬ್ಬನ ಶೂ ಲೇಸ್ ಕಟ್ಟಿ ಸರಳತೆ ಮೆರೆದಿದ್ದಾರೆ.

    ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಠದ ವತಿಯಿಂದ ವಿನೂತನ ವೃಕ್ಷ ಸಂಕಲ್ಪ ಜಾಗೃತಿ ಅಭಿಯಾನವನ್ನು ಆಯೋಜಿಲಾಗಿತ್ತು. ಲಕ್ಷ ವೃಕ್ಷೋತ್ಸವ ಶೀರ್ಷಿಕೆಯ ದೈವ ಸಾಕ್ಷಾತ್ಕಾರಕ್ಕೆ ಲಕ್ಷ ದೀಪೋತ್ಸವ, ಪ್ರಕೃತಿ ಸಾಕ್ಷಾತ್ಕರಕ್ಕೆ ಲಕ್ಷ ವೃಕ್ಷೋತ್ಸವ ಎಂಬ ಘೋಷವಾಕ್ಯದೊಂದಿಗೆ ಕೊಪ್ಪಳದ ಸಾರ್ವಜನಿಕ ಮೈದಾನದಿಂದ ಆರಂಭವಾದ ಜಾಥಾ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್‍ಕುಮಾರ ಚಾಲನೆ ನೀಡಿದ್ದರು.

    ಲಕ್ಷ ವೃಕ್ಷೋತ್ಸವ ಜಾಥಾ ಸಮಯದಲ್ಲಿ ಬಾಲಕನೊಬ್ಬನ ಶೂ ಲೇಸ್ ಬಿಚ್ಚಿತ್ತು. ಇದನ್ನು ಗಮಿನಿಸಿದ ಗವಿ ಸಿದ್ದೇಶ್ವರ ಶ್ರೀಗಳು, ಬಾಲಕ ಬಳಿಗೆ ಬಂದು ಶೂ ಲೇಸ್ ಕಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಶ್ರೀಗಳ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ವೃಕ್ಷ ಸಂಕಲ್ಪ ಜಾಗೃತಿ ಅಭಿಯಾನದಲ್ಲಿ ವಿವಿಧ ಶಾಲೆ ಹಾಗೂ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೆರವಣಿಗೆಯು ಸಾರ್ವಜನಿಕ ಮೈದಾನದಿಂದ ಅಶೋಕ ಸರ್ಕಲ್, ಜವಾಹರ್ ರಸ್ತೆ, ಗಡಿಯಾರ ಕಂಭ, ಶಾರದಾ ಚಿತ್ರಮಂದಿರವಾಗಿ ಸಾಗಿ ಗವಿಮಠದ ಮಹಾದಾಸೋಹ ಭವನ ತಲುಪಿತು.

    ಲಕ್ಷವೃಕ್ಷೋತ್ಸವ ಎಂಬ ಜಾಥಾ ನಡಿಗೆ ಕಾರ್ಯಕ್ರಮದ ನಿಮಿತ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಆಯ್ಕೆಯಾಗಿ ಪ್ರಥಮ, ದ್ವೀತಿಯ, ಹಾಗೂ ತೃತಿಯ ಸ್ಥಾನ ಪಡೆದ ಪ್ರೌಢ ಶಾಲಾ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಕೆರೆಯ ಅಭಿವೃದ್ಧಿ ಪ್ರಾಧಿಕಾರ, ಖಾಸಗಿ ಶಾಲಾ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಯ ಅಧಿಕಾರಿಗಳು, ಶಿಕ್ಷಕವೃಂದ, ಸಿಬ್ಬಂದಿವರ್ಗ ಮತ್ತು ಇತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.