Tag: ಗಾಂಜಾ ದಂಧೆ

  • ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

    ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

    ಮಡಿಕೇರಿ: ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ (Ganja Sale) ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಹೊಕ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ಮಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆಜಿ 481 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ. ಆರೋಪಿಗಳನ್ನು ಬಂಧಿಸಿದ್ದಾರೆ.

    ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

  • ‘ಕೆಜಿಎಫ್’ ರೌಡಿ ತಂಗಂ ಕುಟುಂಬದವರಿಂದ ಗಾಂಜಾ ದಂಧೆ

    ‘ಕೆಜಿಎಫ್’ ರೌಡಿ ತಂಗಂ ಕುಟುಂಬದವರಿಂದ ಗಾಂಜಾ ದಂಧೆ

    – 1.5 ಕೋಟಿ ಮೌಲ್ಯದ ಗಾಂಜಾ ವಶ, ಇಬ್ಬರ ಬಂಧನ

    ಕೋಲಾರ: ಅವರೆಲ್ಲಾ ಒಂದು ಕಾಲದಲ್ಲಿ ಚಿನ್ನದ ನೆಲದಲ್ಲಿ ರೌಡಿಸಂ ಹೆಸರಲ್ಲಿ ನೆತ್ತರು ಹಸಿದ್ದವರು, ಆದರೆ ಕಳೆದ ಎರಡು ದಶಕಳಿಂದ ರೌಡಿಸಂನಿಂದ ದೂರ ಉಳಿದಿದ್ದವರು ಏನು ಮಾಡುತ್ತಿದ್ದರು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ ಮುಳುಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

    ಜಿಲ್ಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್‍ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 186 ಕೆ.ಜಿ.ಯಷ್ಟು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ರಾಬರ್ಟ್‍ಸನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಸುಮಾರು ಒಂದು ಕೋಟಿ ಮೌಲ್ಯದ 186 ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ.

    ಒಂದು ಕಾಲದಲ್ಲಿ ಕೆಜಿಎಫ್‍ನ್ನು ರೌಡಿಸಂ ಹೆಸರಲ್ಲಿ ನಡುಗಿಸಿದ್ದ ರೌಡಿ ತಂಗಂ ಸೋದರರಾದ ಜೋಸೆಫ್ ಹಾಗೂ ಪಲ್ಲರಾಜ್ ಈ ಪ್ರಕರಣದ ಮುಖ್ಯ ಆರೋಪಿಗಳಾಗಿದ್ದು, ಸದ್ಯ ಪೊಲೀಸರಿಗೆ ಜೋಸೆಫ್ ಸಿಕ್ಕಿಬಿದ್ದಿದ್ದು ಮತ್ತೊಬ್ಬರ ಆರೋಪಿ ರಾಜ ಆಲಿಯಾಸ್ ಪಲ್ಲರಾಜ್ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕಳೆದ ಎರಡುವರೆ ದಶಕಗಳಿಂದ ಹಲವಾರು ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರುಗಳು ಈಗ ಮತ್ತೆ ಡ್ರಗ್ಸ್ ಗಾಂಜಾ ದಂಧೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಇವರು ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಮಾಹಿತಿ ಸಿಕ್ಕಿದ್ದು ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

    ಗಾಂಜಾ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ಕೆಜಿಎಫ್ ಪೊಲೀಸರು ಅಂತರರಾಜ್ಯ ಗಾಂಜಾ ಮುಠಾವನ್ನ ಭೇಧಿಸಿದ್ದಾರೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಡ್ರಗ್ಸ್ ಹಾಗೂ ಗಾಂಜಾ ದಂಧೆ ಜೋರಾಗಿ ಸದ್ದು ಮಾಡುತ್ತಿದೆ. ಈ ನಡುವೆಯೇ ಕೆಜಿಎಫ್‍ನಲ್ಲಿ ಇಷ್ಟು ದೊಡ್ಡ ಮಟ್ಟದ ಗಾಂಜಾ ಸಿಕ್ಕಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ ಇದರಲ್ಲಿ ಯಾರೇ ಭಾಗಿಯಾಗಿದರೂ ಸರಿಯೇ ಕಾನೂನು ಕ್ರಮ ಕೈಗೊಳ್ಳಲಾಗುವುದು.

    ಜೊತೆಗೆ ಕೆಜಿಎಫ್‍ನಲ್ಲಿ ಇತ್ತೀಚಿಗೆ ಆರಂಭವಾಗಿರುವ ರೌಡಿಸಂಗೆ ಕಡಿವಾಣ ಹಾಕಲು ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವ ರೌಡಿಗಳ ಮೇಲೆ ಗೂಂಡಾ ಕಾಯ್ದೆ ಪ್ರಯೋಗ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಹಲವು ವರ್ಷಗಳಿಂದ ರೌಡಿಸಂ ನಿಂದ ಹೆಸರು ಮಾಡಿದ್ದ ರೌಡಿ ತಂಗಂ ಕುಟುಂಬದ ಗಾಂಜಾ ದಂಧೆಯಲ್ಲಿ ತೊಡಗಿದ್ದು ಅವರ ಹೆಡೆಮುರಿ ಕಟ್ಟಿ ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕ್ರಮಕ್ಕೆ ಸ್ಥಳೀಯರಿಂದ ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ.

  • ಆನ್‍ಲೈನ್‍ಲ್ಲಿ ಸಿಗ್ತಿದೆ ಗಾಂಜಾ- ಕಾಲೇಜುಗಳೇ ಅಡ್ಡ, ವಿದ್ಯಾರ್ಥಿಗಳಿಗೆ ಕೆಡ್ಡ

    ಆನ್‍ಲೈನ್‍ಲ್ಲಿ ಸಿಗ್ತಿದೆ ಗಾಂಜಾ- ಕಾಲೇಜುಗಳೇ ಅಡ್ಡ, ವಿದ್ಯಾರ್ಥಿಗಳಿಗೆ ಕೆಡ್ಡ

    -ಸಿಂಗಂ ರವಿಚೆನ್ನಣ್ಣನವರ್ ಏರಿಯಾದಲ್ಲೇ ಗಾಂಜಾ ದಂಧೆ

    ಬೆಂಗಳೂರು: ಇತ್ತೀಚೆಗೆ ಜಿಲ್ಲೆಯಾದ್ಯಂತ ಗಾಂಜಾ ಮಾರಾಟ ದಂಧೆ ಮೇಲೆ ಪೊಲೀಸರು ಹೆಚ್ಚು ನಿಗಾ ವಹಿಸಿದ್ದರೂ ಗಾಂಜಾ ಮಾರಾಟ ಗ್ಯಾಂಗ್ ಮಾತ್ರ ಯಾವುದೇ ತಲೆ ಕೆಡಿಸಿಕೊಂಡಿಲ್ಲ. ಏನಾದರೂ ಮಾಡಿಕೊಳ್ಳಿ ಕ್ಯಾರೆ ಮಾಡಲ್ಲ ಎನ್ನುತ್ತ ಸಾಮಾಜಿಕ ಜಾಲತಾಣವನ್ನು ಬಳಸಿ ಗಾಂಜಾ ದಂಧೆಯನ್ನು ಎಗ್ಗಿಲ್ಲದಂತೆ ನಡೆಸುತ್ತಿದ್ದಾರೆ.

    ಸಾಮಾನ್ಯವಾಗಿ ನಾವೆಲ್ಲಾ ಆನ್‍ಲೈನ್‍ನಲ್ಲಿ ಊಟ, ಇಲ್ಲ ಬಟ್ಟೆ, ಎಲೆಕ್ಟ್ರಾನಿಕ್ ಐಟಮ್ಸ್ ಹೀಗೆ ವಸ್ತುಗಳನ್ನ ಆರ್ಡರ್ ಮಾಡಿ ತರಿಸಿಕೊಳ್ಳುತ್ತೇವೆ. ಆದರೆ ಆನ್‍ಲೈನ್‍ನಲ್ಲಿ ಗಾಂಜಾ ಸಿಗುತ್ತೆ ಎಂದರೆ ನಿಜಕ್ಕೂ ಶಾಕ್ ಆಗುತ್ತೆ. ಈ ದಂಧೆ ನಡೆಯುತ್ತಿರೋದು ಬೇರೆಲ್ಲೂ ಅಲ್ಲ, ನಮ್ಮ ಸಿಲಿಕಾನ್ ಸಿಟಿಯಲ್ಲಿ. ಹೌದು ಸಿಲಿಕಾನ್ ಸಿಟಿಯಲ್ಲಿ ಎಗ್ಗಿಲ್ಲದಂತೆ ಆನ್‍ಲೈನ್ ಗಾಂಜಾ ಗಂಧೆ ನಡೆಯುತ್ತಿದೆ. ಪೊಲೀಸರು ಚಾಪೆ ಕೆಳಗೆ ನುಗ್ಗಿದರೆ ನಾವು ಸುಮ್ನೆ ಇದ್ದರೆ ಹೇಗೆ ಅಂತ ಗಾಂಜಾ ಮಾರಾಟ ಗ್ಯಾಂಗ್ ರಂಗೋಲಿ ಕೆಳಗೆ ನುಗ್ಗಿ ಮಾಸ್ಟರ್ ಪ್ಲಾನ್ ಮಾಡಿದೆ. ಗಾಂಜಾ ದಂಧೆಕೋರರು ಆನ್‍ಲೈನ್‍ಗೂ ಲಗ್ಗೆ ಇಟ್ಟು ಪ್ರತಿಷ್ಠಿತ ಕಾಲೇಜು ಯುವಕ ಯುವತಿಯರನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದಾರೆ. ಈಗಿನ ಯುವಕ, ಯುವತಿಯರಿಗೆ ಅಗತ್ಯತೆಗೆ ಅನುಗುಣವಾಗಿ ಆನ್‍ಲೈನ್‍ನಲ್ಲಿ ಗಾಂಜಾ ಮಾರಾಟ ಮಾಡುವುದನ್ನ ಶುರುವಿಟ್ಟುಕೊಂಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಜಾಲಾ ಹರಡಿಬಿಟ್ಟಿದೆ. ಇತ್ತೀಚೆಗೆ ಆನೇಕಲ್ ತಾಲೂಕಿನಲ್ಲಿ ವಿಬಿಎಚ್‍ಎಸ್ ಅಪಾಟ್‌ರ್ಮೆಂಟ್‌, ಅಲಯನ್ಸ್ ಕಾಲೇಜು ಸೇರಿದಂತೆ ಹಲವೆಡೆ ಗಾಂಜಾ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಅಂತರಾಜ್ಯ ದಂಧೆಕೋರ ಡೇವಿಡ್‍ನನ್ನು ಬಂಧಿಸಿದ್ದರು. ಆತನ ಬಳಿ ಇದ್ದ ಬರೋಬ್ಬರಿ 800 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಆದರೂ ಭಯಬೀಳದ ದಂಧೆಕೋರರು ಹೊರ ರಾಜ್ಯಗಳಿಂದ ಬಂದು ವಿಬಿಎಚ್‍ಎಸ್ ಅಪಾಟ್‌ರ್ಮೆಂಟ್‌ ನ ಪ್ಲಾಟ್‍ಗಳನ್ನು ಬಾಡಿಗೆಗೆ ಪಡೆದು, ಆನ್‍ಲೈನ್ ಮೂಲಕ ಗಾಂಜಾ ವ್ಯಾಪಾರ ಶುರುವಿಟ್ಟುಕೊಂಡಿದ್ದಾರೆ. ಗಾಂಜಾ ಬುಕ್ ಮಾಡಿದ ಯುವಕ ಯುವತಿಯರ ಪೇಪರ್ ಮೇಲೆ ಹೆಸರು ಬರೆದು ಯಾರ ಭಯವು ಇಲ್ಲದೆ, ಎಗ್ಗಿಲ್ಲದೆ ಗಾಂಜಾ ಸಪ್ಲೈ ಮಾಡ್ತಿದ್ದಾರೆ.

    ಇಷ್ಟೇ ಅಲ್ಲ ಅವರ ಅಡ್ಡಾಕ್ಕೆ ಸ್ಥಳೀಯರು ಯಾರಾದರೂ ಕಾಲಿಟ್ಟರೆ ಗೇಟ್ ಬಳಿ ಬೌನ್ಸರ್ ಗಳನ್ನು ಇಟ್ಟು, ಯಾರು ಒಳ ಹೋಗದಂತೆ ತಡೆಯುತ್ತಿದ್ದಾರೆ. ಗಾಂಜಾ ಪಡೆದು ಸೇವನೆ ಮಾಡುವ ಪ್ರತಿಷ್ಠಿತ ಕಾಲೇಜಿನ ಯುವಕ ಯುವತಿಯರು ನಡುರಸ್ತೆಯಲ್ಲಿ ನಿಂತು ತೂರಾಡುತ್ತಿರುವ ದೃಶ್ಯಗಳು ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    https://www.youtube.com/watch?v=gVymkMfbH8A