Tag: ಗಾಡ್ ಫಾದರ್

  • ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: ಗಾಡ್ ಫಾದರ್‌ಗೆ ಸಲ್ಲು ಬಾಯ್ ಸಾಥ್

    ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: ಗಾಡ್ ಫಾದರ್‌ಗೆ ಸಲ್ಲು ಬಾಯ್ ಸಾಥ್

    ಟಾಲಿವುಡ್‌ನ ಮೆಗಾ ಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇದೀಗ 67ನೇ ವಸಂತಕ್ಕೆ ಕಾಲಿಟ್ಟಿರುವ ಮೆಗಾಸ್ಟಾರ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ತಮ್ಮ 67ನೇ ವಸಂತಕ್ಕೆ ತಮ್ಮ ಅಭಿಮಾನಿಗಳಿಗೆ ಅಚ್ಚರಿಯ ಗಿಫ್ಟ್‌ವೊಂದನ್ನ ನೀಡಿದ್ದಾರೆ. ಚಿರಂಜೀವಿ ನಟನೆಯ ಬಹುನಿರೀಕ್ಷಿತ ಸಿನಿಮಾ `ಗಾಡ್ ಫಾದರ್’ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ರಾದ್ಧಾಂತ ಅನಿರುದ್ಧ ಜೊತೆ ನಟಿಸ್ತಿದ್ದ ಮೇಘಾ ಶೆಟ್ಟಿ ಮೌನ

    ನಯನತಾರಾ ಲುಕ್ಕು, ಚಿರಂಜೀವಿ ಖಡಕ್ ಡೈಲಾಗ್ ಕಿಕ್ ಜತೆ ಸಲ್ಮಾನ್ ಖಾನ್ ಎಂಟ್ರಿ ನೋಡುಗರನ್ನ ಮೋಡಿ ಮಾಡುತ್ತಿದೆ. ಟೀಸರ್‌ನಲ್ಲಿ ಜಿರಂಜೀವಿ ಜೊತೆ ಸತ್ಯದೇವ ಅಬ್ಬರ ಕೂಡ ಕಮಾಲ್ ಮಾಡುತ್ತಿದೆ. ರಿಲೀಸ್ ಆಗಿರುವ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಪಡೆದುಕೊಂಡಿದೆ.

    ಇನ್ನು ಮಲಯಾಳಂ `ಲೂಸಿಫರ್’ ಚಿತ್ರವನ್ನ ತೆಲುಗಿಗೆ ರಿಮೇಕ್ ಮಾಡಲಾಗಿದ್ದು, ಮೆಗಾಸ್ಟಾರ್ ಚಿರಂಜೀವಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ವಿಜಯದಶಮಿ ಅಕ್ಟೋಬರ್ 5ರಂದು ತೆರೆಗೆ ಬರಲು `ಗಾಡ್ ಫಾದರ್’ ಸಿನಿಮಾ ಸಜ್ಜಾಗಿದೆ. ಇನ್ನು ಗಾಡ್ ಫಾದರ್ ಚಿತ್ರದ ಕಲೆಕ್ಷನ್‌ನಿಂದ ಆಚಾರ್ಯ ಸಿನಿಮಾದ ಸೋಲು ಮರೆಸುತ್ತಾ ಎಂಬುದನ್ನ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಮೆಗಾಸ್ಟಾರ್ ಚಿರಂಜೀವಿ ಜೊತೆ ಬಾಲಿವುಡ್ ಬ್ಯಾಡ್ ಬಾಯ್ ಡಾನ್ಸ್

    ಮೆಗಾಸ್ಟಾರ್ ಚಿರಂಜೀವಿ ಜೊತೆ ಬಾಲಿವುಡ್ ಬ್ಯಾಡ್ ಬಾಯ್ ಡಾನ್ಸ್

    ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅಭಿನಯಿಸಿರುವ ಅಪ್‍ಕಮಿಂಗ್ ಸಿನಿಮಾಗಳಲ್ಲಿ ಗಾಡ್‍ಫಾದರ್ ದೊಡ್ಡ ಹೈಪ್ ಕ್ರಿಯೆಟ್ ಮಾಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸುವ ಮೂಲಕ ಚಿರಂಜೀವಿಗೆ ಸಾಥ್ ನೀಡುತ್ತಿದ್ದಾರೆ. ಸದ್ಯ ಇಬ್ಬರೂ ಘಟಾನುಘಟಿ ಸ್ಟಾರ್ಸ್ ಸಿನಿಮಾದ ವಿಶೇಷ ಸಾಂಗ್‍ವೊಂದರಲ್ಲಿ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸುದ್ದಿ ಟಾಲಿವುಡ್ ಸಿನಿ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಹೌದು, ನಟ ಚಿರಂಜೀವಿ ಹಾಗೂ ಸಲ್ಮಾನ್‍ಖಾನ್ ಗಾಡ್ ಫಾದರ್ ಸಿನಿಮಾದ ಹಾಡೊಂದರಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇನ್ನೂ ಈ ಹಾಡಿಗೆ ನೃತ್ಯ ಸಂಯೋಜನೆ ಮಾಡಲು ನಿರ್ದೇಶಕ ಮೋಹನ್ ರಾಜ್ ಅವರು ಪ್ರಭುದೇವ್ ಅವರನ್ನು ಕರೆತರುತ್ತಿದ್ದಾರೆ. ಈ ಚಿತ್ರಕ್ಕೆ ಸಂಗೀತ ನಿರ್ದೇಶಕ ಎಸ್.ಥಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದು, ಈ ವಿಶೇಷ ಹಾಡಿನ ಜವಾಬ್ದಾರಿಯನ್ನು ಸಹ ತಾವೇ ಹೊತ್ತುಕೊಂಡಿದ್ದಾರೆ.

    ಈ ಕುರಿತಂತೆ ಎಸ್.ಥಮನ್ ಅವರು ಟ್ವಿಟ್ಟರ್‌ನಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಫೋಟೋದಲ್ಲಿ ಪ್ರಭುದೇವ್, ಚಿರಂಜೀವಿ, ಜಯಂ ಮೋಹನ್ ರಾಜ್, ಎಸ್. ಥಮನ್ ಅವರು ಒಟ್ಟಿಗೆ ಇರುವುದನ್ನು ಕಾಣಬಹುದಾಗಿದೆ. ಅಲ್ಲದೇ ಕ್ಯಾಪ್ಷನ್‍ನಲ್ಲಿ ನಮ್ಮ ಬಾಸ್ ಚಿರಂಜೀವಿ ಮತ್ತು ಸಲ್ಮಾನ್‍ಖಾನ್ ಒಟ್ಟಿಗೆ ಅಭಿನಯಿಸುತ್ತಿರುವ ಹಾಡಿಗೆ ಪ್ರಭುದೇವ್ ಅವರು ನೃತ್ಯ ಸಂಯೋಜಿಸಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 1957ರ ನಾಣ್ಯ ಮಾರಲು ಹೋಗಿ ಲಕ್ಷಾಂತರ ರೂ. ಕಳೆದುಕೊಂಡ – ಆನ್‍ಲೈನ್ ವಂಚನೆಯಿಂದ ವ್ಯಕ್ತಿ ಆತ್ಮಹತ್ಯೆ

    ಗಾಡ್‍ಫಾದರ್ ಸಿನಿಮಾ ಮಲಯಾಳಂನ ಮೋಸ್ಟ್ ಹ್ಯಾಪನಿಂಗ್ ಹೀರೋ ಮೋಹನ್‍ಲಾಲ್ ಹಾಗೂ ನಟ ಪೃಥ್ವಿರಾಜ್ ನಟಿಸಿರುವ ಮಲಯಾಳಂ ಬ್ಲಾಕ್‍ಬಸ್ಟರ್ ಚಿತ್ರ ಲೂಸಿಫರ್(2019)ನ ರಿಮೇಕ್ ಆಗಿದೆ. ಸದ್ಯ ತೆಲುಗಿನಲ್ಲಿ ಗಾಡ್ ಫಾದರ್ ಸಿನಿಮಾಕ್ಕೆ ಮೋಹನ್ ರಾಜಾ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಕೊನಿಡೇಲಾ ಪ್ರೊಡಕ್ಷನ್ ಕಂಪನಿ ಮತ್ತು ಸೂಪರ್ ಗುಡ್ ಫಿಲ್ಮ್ಸ್ ಚಿತ್ರವನ್ನು ನಿರ್ಮಿಸುತ್ತಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಳ್ಳುತ್ತಿದ್ದಾರೆ.

    ಚಿರಂಜೀವಿ ಮತ್ತು ಸಲ್ಮಾನ್ ಖಾನ್ ಹೊರತುಪಡಿಸಿ ಚಿತ್ರದಲ್ಲಿ ನಯನತಾರಾ ನಾಯಕಿಯಾಗಿ ಕಾಣಿಸಿಕೊಂಡರೆ, ಸತ್ಯದೇವ್ ಕಾಂಚರಣ, ಹರೀಶ್ ಉತ್ತಮನ್, ಜಯಪ್ರಕಾಶ್ ಮತ್ತು ವಂಶಿ ಕೃಷ್ಣ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:  ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ

  • ನನಗೆ ನಾನೇ ಗಾಡ್ ಫಾದರ್ – ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಿ.ಟಿ.ರವಿ

    ನನಗೆ ನಾನೇ ಗಾಡ್ ಫಾದರ್ – ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಿ.ಟಿ.ರವಿ

    ಮೈಸೂರು: ನನಗೆ ನಾನೇ ಗಾಡ್ ಫಾದರ್ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ ರವಿ ಇಂದು ಮೈಸೂರಿನಲ್ಲಿ ಹೇಳಿದ್ದಾರೆ.

    ನಾನು ಶಾಶ್ವತ ಮಾಜಿ ಮುಖ್ಯಮಂತ್ರಿಯಾಗಿರಬೇಕು ಎಂಬ ಸಿ.ಟಿ.ರವಿ ಹೇಳಿಕೆ ವಿಚಾರವಾಗಿ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಚಂದ್ರು ಇದ್ದ ಕಾರಣ ಆ ಮಾತನ್ನು ಹೇಳಿದೆ. ಅವರಿಗೆ ಅವಿಶ್ವಾಸದ ಕಾಟ ಇಲ್ಲ. ಅವರು ಶಾಶ್ವತ ಮುಖ್ಯಮಂತ್ರಿ ಈ ಕಾರಣಕ್ಕೆ ನಾನು ಆ ಮಾತನ್ನು ಹೇಳಿದೆ ಎಂದು ತಿಳಿಸಿದರು.

    ಭಗವಂತನ ಇಚ್ಛೆ ಏನಿದೆ ಎಂದು ಗೊತ್ತಿಲ್ಲ, ನಾನು ಪಕ್ಷ ನಿಷ್ಠೆ ಇಟ್ಟುಕೊಂಡವನು. ಇದನ್ನು ಯಾರು ಪ್ರಶ್ನೆ ಮಾಡುವ ವಿಚಾರ ಇಲ್ಲ. ಕೆಲವರಿಗೆ ಗಾಡ್ ಫಾದರ್ ಇದ್ದಾರೆ ಆದರೆ ನನಗೆ ನಾನೇ ಗಾಡ್ ಫಾದರ್. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿ. ಅದಾದ ಮೇಲೆ ಏನಾಗುತ್ತೆ ಗೊತ್ತಿಲ್ಲ. ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಯಾಗುತ್ತಾರೆ ಎಂದು ಯಾರಿಗೆ ಗೊತ್ತಿತ್ತು. ಯಾವ ಜ್ಯೋತಿಷಿಯು ಹೇಳಿರಲಿಲ್ಲ. ಹಾಗೇ ನಾನು ಮಾರ್ಮಿಕವಾಗಿ ಹೇಳಿದೆ ಅಷ್ಟೆ ಎಂದು ತನ್ನ ಸಿಎಂ ಆಸೆಯನ್ನು ವ್ಯಕ್ತಪಡಿಸಿದರು.

    ಆನಂದ್ ಸಿಂಗ್‍ಗೆ ಅರಣ್ಯ ಖಾತೆ ನೀಡಿದಕ್ಕೆ ಕಾಂಗ್ರೆಸ್ ಆಕ್ಷೇಪ ವಿಚಾರವಾಗಿ ಮಾತನಾಡಿ, ಅವರು ಈಗಷ್ಟೇ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ದುರ್ಬಳಕೆಯ ಪ್ರಶ್ನೆಯೇ ಬರಲ್ಲ ಎಂದು ಸಮರ್ಥಿಸಿಕೊಂಡರು. ನಂತರ ಕಾಂಗ್ರೆಸ್ಸಿನಲ್ಲಿ ಇದ್ದಷ್ಟು ಕಾಲ ಅವರು ಪತಿವ್ರತರಾಗಿದ್ದರು. ಬಿಟ್ಟು ಬಂದ ಮೇಲೆ ಅವರು ಕೆಟ್ಟು ಹೋದರಾ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

    ಪುಲ್ವಾಮಾ ದಾಳಿ ವಿಚಾರವಾಗಿ ರಾಹುಲ್ ಗಾಂಧಿ ಟೀಕೆ ಬಗ್ಗೆ ಮಾತನಾಡಿ, ಇದೇ ಮೊದಲ ಬಾರಿಗೆ ಅವರು ಟೀಕೆ ಮಾಡುತ್ತಿಲ್ಲ. ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ನಿರಂತವಾಗಿ ಅನುಮಾನವಾಗಿ ಕಾಂಗ್ರೆಸ್ ನೋಡುತ್ತಿದೆ. ಇಂತವರಿಂದ ಏನನ್ನು ನಿರೀಕ್ಷೆ ಮಾಡಲು ಸಾಧ್ಯ, ಜನರೆ ಇದಕ್ಕೆ ತೀರ್ಮಾನಿಸುತ್ತಾರೆ ಎಂದರು.

    ಎಂಎಲ್‍ಸಿ ಚುನಾವಣೆಯಲ್ಲಿ ನಮಗೆ ಹೆಚ್ಚುವರಿಯಾಗಿ 25 ಮತ ಬರುತ್ತೆ. ನಮ್ಮಲ್ಲಿ ಯಾವುದೇ ಬಂಡಾಯ ಇಲ್ಲ ನೋಡುತ್ತೀರಿ ಗೆಲುವಿಗೆ ಬೇಕಾದ ಮತಕ್ಕಿಂತ ಹೆಚ್ಚುವರಿ ಮತ ಬರುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್-ಕಾಂಗ್ರೆಸ್ ಆಪರೇಷನ್ ಗುಟ್ಟುಬಿಟ್ಟು ಕೊಟ್ಟರು.