Tag: ಗಾರ್ಡನ್

  • ಆಡಂಬರದ ಮದುವೆಗೆ ಬ್ರೇಕ್ – ಸರಳ ವಿವಾಹಕ್ಕೆ ಸಾಕ್ಷಿಯಾದ ಪರಿಸರ ಸ್ನೇಹಿ ಕಪಲ್

    ಆಡಂಬರದ ಮದುವೆಗೆ ಬ್ರೇಕ್ – ಸರಳ ವಿವಾಹಕ್ಕೆ ಸಾಕ್ಷಿಯಾದ ಪರಿಸರ ಸ್ನೇಹಿ ಕಪಲ್

    ನವದೆಹಲಿ: ಮದುವೆ ಎಂದರೆ ವಿಜೃಂಭಣೆ, ಅದ್ಧೂರಿಯಾಗಿ ಹಣ ಖರ್ಚುಮಾಡಿ ಆಗುವುದನ್ನು ಸಾಮಾನ್ಯವಾಗಿ ನಾವು ನೋಡಿರುತ್ತೇವೆ. ಆದರೆ ದೆಹಲಿಯ ಜೋಡಿಯೊಂದು ಆಡಂಬರದ ಮದುವೆಗೆ ಬ್ರೇಕ್ ಹಾಕಿ ಬಹಳ ಯುನಿಕ್ ಆಗಿ ಸರಳವಾಗಿ ಪರಿಸರ ಸ್ನೇಹಿಗಳಿಬ್ಬರು ವಿವಾಹವಾಗಿದ್ದಾರೆ.

    ಹೌದು, ವರ ಆದಿತ್ಯ ಅಗರ್‍ವಾಲ್(32) ತಮ್ಮ ಮದುವೆಗೆ ಕಾರು ಬೈಕ್‍ನಲ್ಲಿ ಬರದೇ ಯುಲು ಬೈಕ್ ಮೇಲೆ ಬಂದರು. ಮೊದಲಿನಿಂದಲೂ ಕಡಿಮೆ ವೆಚ್ಚದಲ್ಲಿ ಮದುವೆಯಗಬೇಕೆಂಬ ಆಸೆ ಹೊಂದಿದ್ದ, ವಧು ಮಾಧುರಿ ಬಲೋಡಿಯವರಿಗೆ ಕುಟುಂಬಸ್ಥರು ಹಾಗೂ ಸ್ನೇಹಿತರು ಬೆಂಬಲ ನೀಡಿದ್ದಾರೆ.

    ಮಾಧುರಿಯವರ ವಿವಾಹವನ್ನು ಅವರ ಚಿಕ್ಕಪ್ಪನ ಮನೆಯ ಗಾರ್ಡನ್ ನಲ್ಲಿ ಏರ್ಪಡಿಸಲಾಗಿತ್ತು. ಮದುವೆ ಸಮಯದಲ್ಲಿ ಸಾಧ್ಯವಾದಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ, ಹಳೆಯ ಬಾಟಲಿಗಳಿಗೆ ನ್ಯೂಸ್ ಪೇಪರ್‌ಗಳನ್ನು ಅಂಟಿಸಿ, ಪರಿಸರ ಸ್ನೇಹಿ ವಸ್ತುಗಳನ್ನು ಅಲಂಕಾರಕ್ಕೆ ಉಪಯೋಗಿಸಲಾಗಿತ್ತು.

    ಮದುವೆಗೆ ಆಹ್ವಾನ ಪತ್ರಿಕೆ ನೀಡಿದರೆ ಜನ ಅದನ್ನು ನೋಡಿ ಬಿಸಾಡುತ್ತಾರೆ. ಹಾಗಾಗಿ ಆಹ್ವಾನ ಪತ್ರಿಕೆಯನ್ನು ಪ್ರಿಂಟ್ ಮಾಡಿಸದೇ ನನ್ನ ಮದುವೆ ಸ್ವತಃ ನಾನೇ ಆಹ್ವಾನ ಪತ್ರಿಕೆಯನ್ನು ವಿನ್ಯಾಸಗೊಳಿಸಿದೆ ಹಾಗೂ ಮದುವೆಗೆ ಪ್ರಿಂಟೆಡ್ ಬ್ಯಾನರ್ ಬಳಸುವ ಬದಲಾಗಿ ನಾವು ಚಾರ್ಕ್ ಬೋಡ್ ಬಳಸಲಾಗಿದೆ ಎಂದು ಮಾಧುರಿ ತಿಳಿಸಿದ್ದಾರೆ.

    ಮದುವೆ ಸಮಯದಲ್ಲಿ ನನ್ನ ಸ್ನೇಹಿತರು ಗಾಜಿಪುರದಿಂದ ತುಳಸಿ ಹಾರವನ್ನು ತರಿಸಿದ್ದು, ನಾವು ಹಾರವಾಗಿ ತುಳಸಿಯನ್ನು ಬಳಸಿದ್ದೇವೆ. ಅಲ್ಲದೇ ಎರಡು ಕುಟುಂಬಗಳು ಯಾವುದೇ ಗಿಫ್ಟ್‍ಗಳನ್ನು ವಿನಿಮಯ ಮಾಡಿಕೊಳ್ಳದೇ, ಬದಲಾಗಿ ಇಬ್ಬರು ಒಂದು ಕೆಜಿ ಹಣ್ಣುಗಳನ್ನು ತಂದಿದ್ದಾರೆ. ಹಿಂದಿನ ಕಾಲದಲ್ಲಿ ಜನರು ಮದುವೆಗೆ ಹೋಗುವಾಗ ತಮ್ಮದೇ ಗುಂಪುಗಳನ್ನು ಮಾಡಿಕೊಂಡು ಹೋಗುತ್ತಿದ್ದರು. ಇದೀಗ ಜನರ ಮಧ್ಯೆ ಆ ಬಾಂಧವ್ಯ ಕಾಣೆಯಾಗದೆ. ಆದರೆ ನಮ್ಮ ಮದುವೆಗೆ ಎಲ್ಲರೂ ವಿಭಿನ್ನ ರೀತಿಯಲ್ಲಿಯೇ ಕೊಡುಗೆ ನೀಡಿದ್ದಾರೆ.

    ಈ ಜೋಡಿ ವಿವಾಹಕ್ಕೆ ಮಾಧುರಿ ಸೋದರ ಸಂಬಂಧಿಯೊಬ್ಬರು ಪಂಡಿತರ ಪಾತ್ರವನ್ನು ವಹಿಸಿದರೆ, ಸ್ನೇಹಿತರು ಫೋಟೋವನ್ನು ಮದುವೆಯ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಮದುವೆ ವೇಳೆ ಮಾಧುರಿ 2,500 ರೂ ಸೀರೆ ಉಟ್ಟರೆ, ವರ ಆದಿತ್ಯ 3,000 ರೂ ಶೇರ್ವಾನಿ ಧರಿಸಿದ್ದರು. ಅಲ್ಲದೆ ಮದುವೆಯಲ್ಲಿ ಪಾಲ್ಗೊಂಡವರಿಗೆ ತಾಂಬೂಲದ ಬದಲಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಗಿತ್ತು.

  • ಚಾಲಕನಿಂದ ಬಿಎಂಟಿಸಿ ಬಸ್ಸಿನೊಳಗೆ ಮಿನಿ ಉದ್ಯಾನ ನಿರ್ಮಾಣ

    ಚಾಲಕನಿಂದ ಬಿಎಂಟಿಸಿ ಬಸ್ಸಿನೊಳಗೆ ಮಿನಿ ಉದ್ಯಾನ ನಿರ್ಮಾಣ

    ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಪುಟ್ಟ ಪುಟ್ಟ ಗಿಡಗಳನ್ನು ಇಟ್ಟು ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.

    ನಾರಾಯಣಪ್ಪ ಕಳೆದ 27 ವರ್ಷದಿಂದ ಬಿಎಂಟಿಸಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾರಾಯಣಪ್ಪ ಕಾವಲ್ ಬೈರಸಂದ್ರದಿಂದ ಯಶವಂತಪುರದ ಮಾರ್ಗದಲ್ಲಿ ಬಸ್ ಓಡಿಸುತ್ತಿದ್ದು, ತಮ್ಮ ಬಸ್ಸಿನಲ್ಲಿ ಪುಟ್ಟ ಪುಟ್ಟ ಗಿಡಗಳನ್ನು ಇಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.

    ಈ ಬಗ್ಗೆ ಮಾತಾನಾಡಿದ ನಾರಾಯಣಪ್ಪ ಅವರು, “ಜನರಲ್ಲಿ ಪರಿಸರದ ಜಾಗೃತಿ ಮೂಡಿಸಲು ನಾನು ಕಳೆದ ಮೂರು – ನಾಲ್ಕು ವರ್ಷಗಳಿಂದ ಬಸ್ಸಿನಲ್ಲಿ ಪುಟ್ಟ ಪುಟ್ಟ ಗಿಡಗಳನ್ನು ಇಟ್ಟು ಬೆಳೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

    ನಾರಾಯಣಪ್ಪ ತಮ್ಮ ಬಸ್ಸಿನ ಮುಂಭಾಗದಲ್ಲಿ ಹಾಗೂ ಬಸ್ಸಿನ ಹಿಂದಿಯಲ್ಲಿ ಸುಮಾರು 14 ಗಿಡಗಳನ್ನು ಬೆಳೆಸುತ್ತಿದ್ದಾರೆ. ಅಲ್ಲದೆ ದಿನ ಆ ಗಿಡಗಳಿಗೆ ನೀರು ಹಾಕಿ ಅದನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾರಾಯಣಪ್ಪ ಅವರ ಪರಿಸರ ಪ್ರೀತಿ ನೋಡಿ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

    ನಾರಾಯಣಪ್ಪ ಮಾಡುತ್ತಿರುವ ಈ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ. ಅವರು ತಮ್ಮ ಬ್ಯುಸಿ ಕೆಲಸದ ನಡುವೆಯೂ ಬಸ್ಸಿನಲ್ಲಿ ಗಿಡ ಬೆಳೆಸಿ ಅದನ್ನು ನೋಡಿಕೊಳ್ಳುತ್ತಿದ್ದಾರೆ. ಇದರಿಂದ ಸಾಕಷ್ಟು ಜನ ಸ್ಫೂರ್ತಿ ಆಗುತ್ತಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.