Tag: ಗೀತಾಭಾರತಿ ಭಟ್

  • ‘ರವಿಕೆ ಪ್ರಸಂಗ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಸಕ್ಸಸ್

    ‘ರವಿಕೆ ಪ್ರಸಂಗ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಸಕ್ಸಸ್

    ವಿಭಿನ್ನ ಕಥಾಹಂದರ ಹೊಂದಿರುವ ರವಿಕೆ ಪ್ರಸಂಗ ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ ಗೀತಾಭಾರತಿ ಭಟ್, ಪದ್ಮಜಾರಾವ್, ಜೊತೆಗೆ ಪೋಷಕ ಕಲಾವಿದರು, ಚಿತ್ರದ ಸಂಕಲನಾಕಾರರಾದ ರಘು ಉಪಸ್ಥಿತರಿದ್ದರು.

    ಬಹಳ‌ಮುಖ್ಯವಾಗಿ ಗೀತಾಭಾರತಿ ಭಟ್ ಅವರು ಅಲ್ಲಿದ್ದ ನೂರಾರು ಜನರೊಂದಿಗೆ ರವಿಕೆ ಪ್ರಸಂಗ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದರು. ಬಹಳ ವಿಶೇಷವಾಗಿ ಸ್ಟೇಜ್ ಮೇಲೆ ಕರ್ನಾಟಕದ ಬೆಸ್ಟ್ ಟೈಲರ್ ಅನ್ನು ಗುರುತಿಸುವ ಕಂಟೆಸ್ಟ್ ಲಾಂಚ್ ಮಾಡಲಾಯಿತು.‌ ಬೆಸ್ಟ್ ಟೈಲರನ್ನು ಗುರುತಿಸಿ ಭರ್ಜರಿ ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಚಿತ್ರತಂಡ ಘೋಷಿಸಿದೆ. ವಿಜೇತರಾದವರಿಗೆ, ಹೊಲಿಗೆ ಯಂತ್ರ, ಮೊಬೈಲ್ ಫೋನ್ ಹಾಗೂ ಸಿನಿಮಾ ಟಿಕೆಟ್ ನೀಡಲಾಗುವುದು.

    ಬಹಳ ಮುಖ್ಯವಾಗಿ ರಾಜ್ಯದ್ಯಾಂತ 7ಸಾವಿರಕ್ಕೂ ಹೆಚ್ಚಿನ ಆಟೋ ಪಬ್ಲಿಸಿಟಿ ಮಾಡುತ್ತಿರುವ ರವಿಕೆಪ್ರಸಂಗ ಚಿತ್ರತಂಡ ಆಟೋ ಡ್ರೈವರ್ ಗಳೊಂದಿಗೆ ಒಂದಷ್ಟು ಸಿನಿಮಾದ ಬಗ್ಗೆ ಚರ್ಚಿಸಿ ಗೀತಾಭಾರತಿಭಟ್ ಅವರು ಅನೇಕ ಆಟೋಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಚಾಲನೆ ನೀಡಿದರು. ಸಿನಿಮಾ ಕುರಿತು ಹಲವು ಗಣ್ಯರು ಈ ಸಂದರ್ಭದಲ್ಲಿ ಮಾತನಾಡಿದರು. ಜೊತೆಗೆ ಎಲ್ಲರನ್ನೂ ಗೌರವಿಸಲಾಯಿತು.

    ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದೆ. ಚಿತ್ರವೂ ವಿಶೇಷ ಕಥಾಹಂದರ ಹೊಂದಿದ್ದು, ಒಂದು ರವಿಕೆಗೆ ಹುಕ್ ಹೇಗೆ ಮುಖ್ಯವೋ ಹಾಗೇ  ಜೀವನದ ಕೆಲವು ಸಂಘರ್ಷಗಳು, ಸಂಬಂಧಗಳು   ಅತೀ ಮುಖ್ಯವಾಗುತ್ತವೆ. ರವಿಕೆಯ ಒಂದು ಸಣ್ಣ ವಿಚಾರ ನ್ಯಾಷನಲ್ ಇಶ್ಯೂ ಆಗುವತ್ತ ಹೋಗುವ ಮತ್ತು ಜೀವನದ ಮೌಲ್ಯಗಳ ಅರ್ಥವನ್ನು ರವಿಕೆ ಪ್ರಸಂಗ ಚಿತ್ರದ ಮೂಲಕ ನಿಮ್ಮ ಮುಂದೆ ಇಡಲಿದೆ.

     

    ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಾಳೆಯಿಂದ ಚಿತ್ರ ತಂಡ ಪ್ರೆಸ್ ಮೀಟ್ ಮಾಡಿ ಭರ್ಜರಿ ಪ್ರಚಾರ ಮಾಡಲಿದೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದ ಚಿತ್ರದ ಮೇಲಿರಲಿ ಎಂದು ಚಿತ್ರದ ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು ಹಾಗೂ ಇಡೀ ಚಿತ್ರತಂಡ ಕೋರಿದರು.

  • ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧದ ಅಭಿಪ್ರಾಯಗಳಿಂದ ಮನನೊಂದು ವೀಡಿಯೋ ಮಾಡಿ ಕಣ್ಣೀರು ಹಾಕಿದ ನಿರೂಪಕಿ, ನಟಿ ಅನುಶ್ರೀಗೆ ಕಿರುತೆರೆ ನಟಿ ಗೀತಾಭಾರತಿ ಭಟ್ ಧೈರ್ಯ ತುಂಬಿದ್ದಾರೆ.

    ಅನುಶ್ರೀ ಅವರು ಇನ್ಸ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋಗೆ ಕಮೆಂಟ್ ಮಾಡಿರುವ ‘ಬ್ರಹ್ಮಗಂಟು’ ನಟಿ, ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಧೈರ್ಯವಾಗಿದ್ದು, ಎದುರಿಸಿ. ನನ್ನ ಪ್ರೀತಿ ಹಾಗೂ ಧೈರ್ಯ ಸದಾ ನಿಮ್ಮೊಂದಿಗಿರುತ್ತೆ ಎಂದು ಸಾಂತ್ವನ ನೀಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಭಾರತಿ ಭಟ್ ಕೂಡ ಈ ಹಿಂದೆ ವಿಚಾರಣೆ ಎದುರಿಸಿದ್ದರು. ಅಲ್ಲದೆ ಮುಂದೆ ವಿಚಾರಣೆಗೆ ಕರೆದರೂ ಹಾಜರಾಗುವುದಾಗಿ ತಿಳಿಸಿದ್ದರು.

    ವೀಡಿಯೋದಲ್ಲಿ ಅನುಶ್ರೀ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನಿವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

  • ‘ಬ್ರಹ್ಮಗಂಟು’ ಗೀತಾ, ‘ಗಟ್ಟಿಮೇಳ’ ವಿಕ್ರಾಂತ್ ವಿಚಾರಣೆಗೆ ಹಾಜರ್

    ‘ಬ್ರಹ್ಮಗಂಟು’ ಗೀತಾ, ‘ಗಟ್ಟಿಮೇಳ’ ವಿಕ್ರಾಂತ್ ವಿಚಾರಣೆಗೆ ಹಾಜರ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ಸೀರಿಯಲ್ ನಟ, ನಟಿಯರಿಗೂ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಿರುತೆರೆ ನಟಿ ಗೀತಾಭಾರತಿ ಭಟ್ ಮತ್ತು ನಟ ಅಭಿಷೇಕ್ ದಾಸ್ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ನಟ ಲೂಸ್ ಮಾದ ಯೋಗಿಯಿಂದ ಮತ್ತೊಂದು ಎಡವಟ್ಟು

    ವಿಚಾರಣೆಗೆ ಹೋಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಷೇಕ್ ದಾಸ್, ಸೋಮವಾರ ರಾತ್ರಿ ನನಗೆ ನೋಟಿಸ್ ಬಂದಿದೆ. ಹೀಗಾಗಿ ವಿಚಾರಣೆಗೆ ಬಂದಿದ್ದೇನೆ. ನನ್ನ ಪ್ರಕಾರ ಡ್ರಗ್ಸ್ ಕೇಸಿನಲ್ಲಿ ಬಂಧಿತರಾಗಿರುವ ವ್ಯಕ್ತಿಗಳ ಬಗ್ಗೆ ಕೇಳಲು ಕರೆದಿರಬಹುದು ಅಥವಾ ಆ ವ್ಯಕ್ತಿಗಳನ್ನು ಮುಂಚೆ ಎಲ್ಲಾದರೂ ಭೇಟಿಯಾಗಿದ್ದೀರಾ, ಯಾವುದಾದರೂ ಪಾರ್ಟಿಗೆ ಹೋಗಿದ್ದೀರ ಎಂದು ಕೇಳಲು ಕರೆದಿರಬಹುದು ಎಂದರು. ಇದನ್ನೂ ಓದಿ: ನಮಗೆ ಆಗದವರು ನಮ್ಮ ಹೆಸರು ಹೇಳಿರ್ಬೋದು: ಗೀತಾಭಾರತಿ ಭಟ್‍

    ಕಿರುತೆರೆಯಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಸರ್ಕಲ್‍ನಲ್ಲಿ ಡ್ರಗ್ಸ್ ಇಲ್ಲ. ನಾನು ಓಡಾಡಿರುವ ಸ್ನೇಹಿತರು ಕೂಡ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ನೋಡಿಲ್ಲ. ಕೆಲವು ವ್ಯಕ್ತಿಗಳ ಬಗ್ಗೆ ವಿಚಾರಣೆ ಮಾಡಬೇಕು. ಅವರ ಬಗ್ಗೆ ನಿಮಗೆ ಗೊತ್ತಿರುವ ಮಾಹಿತಿ ಕೊಟ್ಟು ಹೋಗಿ ಎಂದು ಫೋನ್ ಮಾಡಿ ಕರೆದಿದ್ದಾರೆ. ಹೀಗಾಗಿ ಬಂದಿದ್ದೇನೆ. ಈಗಾಗಲೇ ಮೂವರು ಕಿರುತೆರೆ ನಟರು ಬಂದಿದ್ದಾರೆ. ಇನ್ನೂ ಕೆಲವರು ಬರುತ್ತಾರೆ, ನಾಳೆನೂ ಕೆಲ ನಟರು ಬರುತ್ತಾರೆ. ನನಗೆ ಗೊತ್ತಿರುವುದನ್ನು ನಾನು ಹೇಳುತ್ತೇನೆ ಎಂದು ನಟ ಅಭಿಷೇಕ್ ಹೇಳಿದರು.

    ಇದೇ ವೇಳೆ ಗೀತಾಭಾರತಿ ಭಟ್ ಮಾತನಾಡಿದ್ದು, ಸೆ.19ರಂದು ನನಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಸಂಪೂರ್ಣವಾಗಿ ಐಎಸ್‍ಡಿಗೆ ನಾನು ಸಪೋರ್ಟ್ ಮಾಡುತ್ತೇನೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸುವ ಮೂಲಕ ಸಹಕಾರ ನೀಡುತ್ತೇನೆ. ಅವರು ನಮ್ಮನ್ನು ವಿಚಾರಣೆಗೆ ಕರೆದಿದ್ದಾರೆ. ಆದರೆ ಅವರು ನಮ್ಮನ್ನು ಆರೋಪಿಯನ್ನಾಗಿ ಮಾಡುತ್ತಿಲ್ಲ ಎಂದರು.

    ನಟಿ ಗೀತಾಭಾರತಿ ಭಟ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದು, ಗೀತಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಇನ್ನೂ ನಟ ಅಭಿಷೇಕ್ ದಾಸ್ ‘ಗಟ್ಟಿಮೇಳ’ ಸೀರಿಯಲ್ಲಿ ನಟಿಸುತ್ತಿದ್ದು, ವಿಕ್ರಾಂತ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

  • ನಮಗೆ ಆಗದವರು ನಮ್ಮ ಹೆಸರು ಹೇಳಿರ್ಬೋದು: ಗೀತಾಭಾರತಿ ಭಟ್‍

    ನಮಗೆ ಆಗದವರು ನಮ್ಮ ಹೆಸರು ಹೇಳಿರ್ಬೋದು: ಗೀತಾಭಾರತಿ ಭಟ್‍

    ಬೆಂಗಳೂರು: ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಗಟ್ಟಿಮೇಳ ಧಾರವಾಹಿಯ ವಿಕ್ರಾಂತ್ ಖ್ಯಾತಿಯ ಅಭಿಷೇಕ್ ದಾಸ್ ಮತ್ತು ಬ್ರಹ್ಮಗಂಟು ಧಾರಾವಾಹಿಯ ಗೀತಾಭಾರತಿ ಭಟ್‍ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

    ಈ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಗೀತಾಭಾರತಿ, ಡ್ರಗ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿರುವುದು ನಿಜ. ನಾನು ಈ ವಿಚಾರವಾಗಿ ಪ್ಯಾನಿಕ್ ಆಗಿದ್ದೇನೆ. ವಿಚಾರಣೆಗೆ ಕರೆದಿದ್ದಾರೆ ಎಂದರೆ ನಾವು ತಪ್ಪು ಮಾಡಿದ್ದೇವೆ ಎಂದಲ್ಲ. ನಮಗೆ ಆಗದವರು ನನ್ನ ಹೆಸರು ಹೇಳಿರಬಹುದು. ವಿಚಾರಣೆಗೆ ಹಾಜರಾಗೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಬ್ಬರು ಡ್ರಗ್ ಪೆಡ್ಲರ್‌ಗಳು ಅರೆಸ್ಟ್ – ಅಯ್ಯಪ್ಪ, ಲೂಸ್ ಮಾದ ಯೋಗಿ ವಿಚಾರಣೆ

    ಅಭಿಷೇಕ್ ದಾಸ್ ಮತ್ತು ಗೀತಾಭಾರತಿ ಭಟ್ ಇಂದು ಆಂತರಿಕ ಭದ್ರತಾ ದಳದ ಎದುರು ಹಾಜರಾಗಬೇಕಿದೆ. ಸೆಪ್ಟಂಬರ್ 19ರಂದು ಮಾಜಿ ಕ್ರಿಕೆಟರ್ ಅಯ್ಯಪ್ಪ, ಸೀರಿಯಲ್ ನಟಿ ರಶ್ಮಿ ಚಂಗಪ್ಪ ವಿಚಾರಣೆಯೂ ನಡೆದಿದೆ. ಸೆಪ್ಟೆಂಬರ್ 12ರಂದು ಪೀಣ್ಯ ಪೊಲೀಸರ ಕೈಗೆ ಕೇರಳ ಮೂಲದ ಇಬ್ಬರು ಪೆಡ್ಲರ್‍ಗಳು ತಗ್ಲಾಕೊಂಡಿದ್ದರು. ಅವರ ಬಳಿ ಗಾಂಜಾ, ಎಲ್‍ಎಸ್‍ಡಿ ಮಾತ್ರೆಗಳು ಪತ್ತೆಯಾಗಿದ್ದವು. ವಿಚಾರಣೆ ವೇಳೆ ಸಿನಿಮಾ ಮತ್ತು ಸೀರಿಯಲ್ ನಟ-ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡ್ತಿರೋದರ ಬಗ್ಗೆ ಬಾಯ್ಬಿಟ್ಟಿದ್ರು.