Tag: ಗೀತಾ ಆರ್ಟ್ಸ್

  • ಮತ್ತೆ ಒಂದಾದ ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಮ್

    ಮತ್ತೆ ಒಂದಾದ ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಮ್

    ‘ಅಲ ವೈಕುಂಠಪುರಮುಲೋ’ ಸಿನಿಮಾದ ಮೂಲಕ ಹಿಟ್ ಜೋಡಿ ಎಂದೇ ಹೆಸರು ಪಡೆದಿದ್ದ ಅಲ್ಲು ಅರ್ಜುನ್ (Allu Arjun) ಮತ್ತು ತ್ರಿವಿಕ್ರಮ್  (Trivikram) ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ.  ಗುರು ಪೂರ್ಣಿಮೆ ದಿನದಂದು ಈ ಸಿಹಿ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ.

    ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಇದೀಗ ಅಲ್ಲು ಅರ್ಜುನ್ ತ್ರಿವಿಕ್ರಮ್ ಜೊತೆ ಕೈ ಜೋಡಿಸಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

    ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಈ ಕಾಂಬೋ ನಾಲ್ಕನೇ ಚಿತ್ರಕ್ಕೆ ಸಜ್ಜಾಗಿದ್ದಾರೆ. ಬಹಳ ದಿನಗಳಿಂದಲೂ ಅಲ್ಲು-ತ್ರಿವಿಕ್ರಮ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಗಾಸಿಪ್ ಗೆ ಅಧಿಕೃತ ಮುದ್ರೆ ಬಿದ್ದಿದೆ.

    ಗುರು ಪೂರ್ಣಿಮಾ ದಿನದ ಅಂಗವಾಗಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಹೊಸ ಸಿನಿಮಾ ಅನೌನ್ಸ್ ಆಗಿದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದ್ದು, ಅದಕ್ಕೆ ಬೇಕಾದ ಎಲ್ಲ ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ.

    ಅಲ ವೈಕುಂಠಪುರಮುಲೂ ಸಿನಿಮಾದಂತಹ ಭರ್ಜರಿ ಹಿಟ್ ಕೊಟ್ಟಿರುವ ಹಾರಿಕಾ ಮತ್ತು ಹಾಸನ್ ಕ್ರಿಯೇಷನ್ಸ್  ಹಾಗೂ ಗೀತಾ ಆರ್ಟ್ಸ್ (Geetha Arts) ಬ್ಯಾನರ್ ನಡಿಯಲ್ಲಿಯೇ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ನಾಲ್ಕನೇ ಸಿನಿಮಾ ತಯಾರಾಗಲಿದೆ. ಈಗಾಗಲೇ ಸೂಪರ್ ಹಿಟ್ ಜೋಡಿ ಎನಿಸಿಕೊಂಡಿರುವ ಇವರಿಬ್ಬರು ಮತ್ತೆ ಒಂದಾಗಿರುವುದು ಭಾರೀ ನಿರೀಕ್ಷೆ ಹೆಚ್ಚಿಸಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಪ್ ಡೇಟ್ ಕೊಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಿಷಬ್ ಶೆಟ್ಟಿಗೆ ತೆಲುಗಿನಿಂದ ಭಾರೀ ಆಫರ್: ಸಣ್ಣದೊಂದು ಬ್ರೇಕ್ ಕೇಳಿದ ನಟ

    ರಿಷಬ್ ಶೆಟ್ಟಿಗೆ ತೆಲುಗಿನಿಂದ ಭಾರೀ ಆಫರ್: ಸಣ್ಣದೊಂದು ಬ್ರೇಕ್ ಕೇಳಿದ ನಟ

    ಕಾಂತಾರ (Kantara) ಸಕ್ಸಸ್ ಬೆನ್ನೆಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಅವಕಾಶಗಳ ಮೇಲೆ ಅವಕಾಶಗಳು ಸಿಗುತ್ತಿವೆ. ಹಾಗಂತ ರಿಷಬ್ ಏನೂ ಖಾಲಿ ಕುಳಿತಿರಲಿಲ್ಲ. ಒಂದು ಸಿನಿಮಾದ ನಿರ್ದೇಶನ, ಎರಡು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಬೇಕಿತ್ತು. ಈ ನಡುವೆಯೇ ತೆಲುಗು ಸಿನಿಮಾ ರಂಗದಿಂದ ಶೆಟ್ಟರಿಗೆ ಭರ್ಜರ್ ಆಫರ್ ಬಂದಿದೆ. ಅದನ್ನು ರಿಷಬ್ ಒಪ್ಪಿಕೊಂಡಿದ್ದಾರೆ ಎಂದು ಸ್ವತಃ ನಿರ್ಮಾಪಕರಿಗೆ ಹೇಳಿದ್ದಾರೆ.

    ಕಾಂತಾರ ಸಿನಿಮಾವನ್ನು ತೆಲುಗಿನಲ್ಲಿ ವಿತರಿಸಿದವರು ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun) ಅವರ ತಂದೆ ಅಲ್ಲು ಅರವಿಂದ್ (Allu Arvind). ಇವರ ಗೀತಾ ಆರ್ಟ್ಸ್ (Geetha Arts) ಪ್ರೊಡಕ್ಷನ್ ಹೌಸ್ ಹಿಟ್ ಸಿನಿಮಾಗಳನ್ನು ಕೊಟ್ಟಿದೆ. ತೆಲುಗು ಸಿನಿಮಾ ರಂಗಕ್ಕೆ ಸಾಕಷ್ಟು ಸಿನಿಮಾಗಳನ್ನು ನೀಡಿದ ಹೆಗ್ಗಳಿಕೆಯೂ ಇದೆ. ಈಗ ಅದೇ ಬ್ಯಾನರ್ ನಲ್ಲೇ ರಿಷಬ್ ಅವರಿಗೆ ಆಫರ್ ಹೋಗಿದ್ದು, ಈ ಅವಕಾಶವನ್ನು ರಿಷಬ್ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ ಅಲ್ಲು ಅರವಿಂದ್ ತಿಳಿಸಿದ್ದಾರೆ. ಇದನ್ನೂ ಓದಿ:ಕೈಲಾಗದವರು, ಗೆಲ್ಲಲಾರದವರು ನನ್ನ ಪೌರತ್ವ ಕೇಳ್ತಾರೆ : ನಟ ಚೇತನ್

    ತೆಲುಗಿನಲ್ಲಿ ಕಾಂತಾರ ಸಿನಿಮಾದ ಸಕ್ಸಸ್ ಮೀಟ್ ಆಯೋಜನೆ ಮಾಡಿದ್ದರು ಅರವಿಂದ್. ಈ ಸಕ್ಸಸ್ ಮೀಟ್ ನಲ್ಲಿ ರಿಷಬ್ ಶೆಟ್ಟಿ, ಸಪ್ತಮಿ ಗೌಡ ಸೇರಿದಂತೆ ಸಿನಿಮಾ ತಂಡದ ಹಲವರು ಸದಸ್ಯರಿದ್ದರು. ಇದೇ ಸಮಯದಲ್ಲೇ ತಮ್ಮ ಬ್ಯಾನರ್ ಮೂಲಕ ರಿಷಬ್ ಅವರು ಸಿನಿಮಾ ಮಾಡಲಿದ್ದಾರೆ ಎಂದು ಅರವಿಂದ್ ಘೋಷಣೆ ಮಾಡಿದರು. ಅದಕ್ಕೆ ರಿಷಬ್ ಕೂಡ ಒಪ್ಪಿಗೆ ಸೂಚಿಸಿದರು. ಇದಕ್ಕೂ ಮೊದಲು ತಮಗೆ ಸಣ್ಣದೊಂದು ಬ್ರೇಕ್ ಬೇಕಿರುವ ವಿಚಾರವನ್ನೂ ರಿಷಬ್ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]