Tag: ಗುಂಡಿನ ದಾಳಿ

  • ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಲೀಪಾ ಕಣಿವೆಯಲ್ಲಿ (Leepa valley) ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ಸೇನೆ (Pakistani Army) ಕದನ ವಿರಾಮವನ್ನು ಉಲ್ಲಂಘಿಸಿ (Ceasefire Violation) ಭಾರತೀಯ ಪೋಸ್ಟ್‌ಗಳ ಮೇಲೆ ಗುಂಡು ಹಾರಿಸಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 26-27ರ ಮಧ್ಯರಾತ್ರಿ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳನ್ನು ಮತ್ತು ಮಾರ್ಟರ್ ಶೆಲ್ಲಿಂಗ್ ಬಳಸಿ ದಾಳಿ ನಡೆಸಿದೆ.

    ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ. ಲೀಪಾ 9 ಕಿ.ಮೀ ಎತ್ತರದ ಕಣಿವೆಯಾಗಿದ್ದು, ಇದು ಕಾಜಿನಾಗ್ ಸ್ಪ್ರಿಂಗ್ ಮೂಲಕ ಹಾದುಹೋಗುತ್ತದೆ ಮತ್ತು ಇದು ಬಹಳ ಹಿಂದಿನಿಂದಲೂ ಒಳನುಸುಳುವಿಕೆ ಪ್ರಯತ್ನಗಳಿಗೆ ಪ್ರಮುಖ ಮಾರ್ಗವಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    ಮೂರು ದಿನಗಳ ಯುದ್ಧದ ನಂತರ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತಕ್ಕೆ ಮನವಿ ಮಾಡಿದ ಹಿನ್ನೆಲೆ ಕಳೆದ ಮೇ 10ರಿಂದ ಎಲ್‌ಒಸಿ ಕದನ ವಿರಾಮ ಘೋಷಿಸಿತ್ತು. ಆಗಸ್ಟ್ನಲ್ಲಿ ಪೂಂಚ್ ಪ್ರದೇಶದಲ್ಲಿ ಪಾಕಿಸ್ತಾನ ಗುಂಡು ಹಾರಿಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂಬ ವರದಿಗಳು ಬಂದವು. ಆದರೆ, ಸೇನೆಯು ಈ ವರದಿಗಳನ್ನು ನಿರಾಕರಿಸಿತ್ತು. ಇದನ್ನೂ ಓದಿ: ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಒಟ್ಟಾವಾ: ಕೆನಡಾದಲ್ಲಿರುವ (Canada) ನಟ ಕಪಿಲ್ ಶರ್ಮಾ (Kapil Sharma) ಕೆಫೆ ಮೇಲೆ ಮೂರನೇ ಬಾರಿ ಗುಂಡಿನ ದಾಳಿ ನಡೆದಿದೆ.

    ಗುರುವಾರ (ಅ.16) ಕೆನಡಾದ ಸರ್ರೆಯಲ್ಲಿರುವ ಕೆಫೆ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:ಬೆಂಗಳೂರಲ್ಲಿ ಬೀದಿ ನಾಯಿ ಮೇಲೆ ಗ್ಯಾಂಗ್‌ ರೇಪ್‌; ನಶೆಯಲ್ಲಿದ್ದ ಕಾಮುಕರಿಂದ ಪೈಶಾಚಿಕ ಕೃತ್ಯ

    ಸಾಮಾಜಿಕ ಜಾಲತಾಣದಲ್ಲಿ ಗುಂಡಿನ ದಾಳಿಯ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೋರ್ವ ಕಾರಿನ ಕಿಟಕಿಯಿಂದ ಕೈ ಹೊರಗೆ ಹಾಕಿ ಹ್ಯಾಂಡ್‌ಗನ್‌ನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ. ಹಾರಿಸಿದ ಗುಂಡುಗಳು ಕೆಫೆಯ ಕಿಟಿಕಿ ಹಾಗೂ ಗೋಡೆಗೆ ತಾಗಿದೆ. ಗುಂಡಿನ ದಾಳಿ ನಡೆದ ಸಮಯದಲ್ಲಿ ಕೆಫೆಯೊಳಗೆ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಸದ್ಯ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ (Lawrence Bishnoi Gang) ಸಹಚರರಾದ ಕುಲ್ವೀರ್ ಸಿಧು ಮತ್ತು ಗೋಲ್ಡಿ ಧಿಲ್ಲೋನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ದಾಳಿಯ ಹೊಣೆ ಹೊತ್ತಿದ್ದಾರೆ.

    ನಮಗೆ ಸಾರ್ವಜನಿಕರ ವಿರುದ್ಧ ಯಾವುದೇ ದ್ವೇಷವಿಲ್ಲ. ಆದರೆ ನಮಗೆ ಮೋಸ ಮಾಡುವವರಿಗೆ ನಾವು ಎಚ್ಚರಿಕೆ ನೀಡುತ್ತೇವೆ. ಗುಂಡು ಎಲ್ಲಿಂದಾದರೂ ಬರಬಹುದು ನಮ್ಮ ಧರ್ಮದ ವಿರುದ್ಧ ಮಾತನಾಡುವ ಬಾಲಿವುಡ್ ವ್ಯಕ್ತಿಗಳು ಕೂಡ ಸಿದ್ಧರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

    ಇದಕ್ಕೂ ಮುನ್ನ ಎರಡು ಬಾರೀ ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಜು.9ರಂದು ಮೊದಲ ಬಾರೀ ಗುಂಡಿನ ದಾಳಿ ನಡೆದಾಗ ಜರ್ಮನಿ ಮೂಲದ ಬಿಕೆಐ ಉಗ್ರಗಾಮಿ ಹರ್ಜಿತ್ ಸಿಂಗ್ ಹಾಗೂ ಆ.7ಎಂದು ಎರಡನೇ ಬಾರೀ ನಡೆದಾಗ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಹೊಣೆ ಹೊತ್ತುಕೊಂಡಿತ್ತು.ಇದನ್ನೂ ಓದಿ: ವೈದ್ಯೆ ಕೃತಿಕಾ ಹತ್ಯೆ ಕೇಸ್ – 11 ತಿಂಗಳಿಂದ ಪತ್ನಿ ಹತ್ಯೆಗೆ ಸ್ಕೆಚ್ ಹಾಕಿದ್ದ ಕಿಲ್ಲರ್ ಪತಿ

  • ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ

    ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ

    ಇಂಫಾಲ್‌: ಮಣಿಪುರದಲ್ಲಿ (Manipur) ಶಾಂತಿ ಸ್ಥಾಪನೆಯಾಗಬೇಕು ಎನ್ನುವ ಹೊತ್ತಲ್ಲೇ ಇಂಫಾಲ್‌ನ ಹೊರ ವಲಯದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ.

    ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್‌ನ ಟ್ರಕ್ (Assam Rifles) ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ. ಪರಿಣಾಮ ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಇಂಫಾಲ್‌ನಲ್ಲಿರುವ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸಂಜೆ 6 ಗಂಟೆ ಸುಮಾರಿಗೆ 33 ಅಸ್ಸಾಂ ರೈಫಲ್ಸ್‌ ಘಟಕದ ಸೈನಿಕರ ತಂಡ ಇಂಫಾಲದಿಂದ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ಬಿಷ್ಣುಪುರ ಕಡೆಗೆ ಹೊರಟಿತ್ತು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಬಂಧೂಕುದಾರಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ‌ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆಂದು ಗುವಾಹಟಿಯ ರಕ್ಷಣಾ ಪಿಆರ್‌ಒ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ ಸೂಚಿಸಿತ್ತು. ಇದರಿಂದ ಮಣಿಪುರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ ಕೂಡ ಕಳೆದವಾರ ಭೇಟಿ ನೀಡಿ, ಅಭಿವೃದ್ಧಿ ಯೋಜನೆಗಳನ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮತ್ತೆ ಗುಂಡಿನ ದಾಳಿ ನಡೆಸಿರುವುದು ಜನರ ನಿದ್ದೆಗೆಡಿಸಿದೆ.

  • ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ

    ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ

    ಬಾಲಿವುಡ್ (Bollywood) ನಟಿ ದಿಶಾ ಪಟಾನಿ (Disha Patani) ಅವರ ಮನೆ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ದುಷ್ಕರ್ಮಿಗಳು ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    disha patani 3

    ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ರೋಹ್ಟಕ್‌ ಮೂಲದ ರವೀಂದ್ರ ಅಲಿಯಾಸ್ ಕಲ್ಲು ಮತ್ತು ಹರಿಯಾಣದ ಸೋನಿಪತ್ ನಿವಾಸಿ ಅರುಣ್ ಹತ್ಯೆಯಾಗಿದ್ದಾರೆ. ಇಬ್ಬರೂ ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸಕ್ರಿಯ ಸದಸ್ಯರಾಗಿದ್ದರು. ಜೊತೆಗೆ ಬಹು ಕ್ರಿಮಿನಲ್‌ ಪ್ರಕರಣಗಳಲ್ಲಿ ಮೋಸ್ಟ್‌ ವಾಂಟೆಡ್‌ಗಳಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌

    disha patani 4

    ಇಂದು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF)ಯ ನೋಯ್ಡಾ ಘಟಕ ಹಾಗೂ ದೆಹಲಿ ಪೊಲೀಸರ ಅಪರಾಧ ಗುಪ್ತಚರ (CI) ಘಟಕ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಮುಂಭಾಗದಲ್ಲಿದ್ದ ಪೊಲೀಸ್‌ ಘಟಕದ ಮೇಲೆ ಶಂಕಿತರು ಗುಂಡಿನ ದಾಳಿಗೆ ಮುಂದಾದ್ರು, ಬಳಿಕ ಪೊಲೀಸರು ಪ್ರತಿದಾಳಿ ನಡೆಸಿದರು. ಈ ವೇಳೆ ಗಾಯಗೊಂಡಿದ್ದ‌ ಶಂಕಿತರು ಬಳಿಕ ಸಾವನ್ನಪ್ಪಿದರು. ಘಟನಾ ಸ್ಥಳದಿಂದ, ಅಧಿಕಾರಿಗಳು ಗ್ಲಾಕ್ ಪಿಸ್ತೂಲ್, ಜಿಗಾನಾ ಪಿಸ್ತೂಲ್ ಮತ್ತು ಬಹು ಲೈವ್ ಕಾರ್ಟ್ರಿಡ್ಜ್‌ಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ

    ದಿಶಾ ಪಟಾನಿ ಮನೆ ಬಳಿ ಏನಾಗಿತ್ತು?
    ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆ ಹೊರಗೆ ಇದೇ ಸೆ.12ರಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರರಿಂದ ನಾಲ್ಕು ಸುತ್ತು ಗುಂಡು (Fire) ಹಾರಿಸಿ ಎಸ್ಕೇಪ್‌ ಆಗಿದ್ದರು. ಗುಂಡಿನ ದಾಳಿ ನಡೆದ ಮನೆಯಲ್ಲಿ ದಿಶಾ ಪಟಾನಿ ಕುಟುಂಬ ವಾಸವಿತ್ತು. ಆ ಸಮಯದಲ್ಲಿ ದಿಶಾ ಅವರ ತಂದೆ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಸಿಂಗ್ ಪಟಾನಿ, ತಾಯಿ ಅಕ್ಕ ಖುಷ್ಬು ಪಟಾನಿ ಇದ್ದರು. ಬಳಿಕ ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆ ಹೊತ್ತುಕೊಂಡಿತ್ತು. ಇದನ್ನೂ ಓದಿ: ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು

    Disah

    ಗುಂಡಿನ ದಾಳಿಗೆ ಕಾರಣ ಏನು?
    ದಾಳಿ ಹೊಣೆ ಗೊತ್ತಿದ್ದ ಗೋಲ್ಡಿ ಬ್ರಾರ್‌ ಗ್ಯಾಂಗ್‌ ಅದಕ್ಕೆ ಕಾರಣ ಉಲ್ಲೇಖಿಸಿ ಪತ್ರವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ʻಎಲ್ಲಾ ಸಹೋದರರಿಗೆ ರಾಮ್ ರಾಮ್… ನಾನು, ವೀರೇಂದ್ರ ಚರಣ್, ಮಹೇಂದ್ರ ಶರಣ್ (ದೆಲಾನಾ). ಸಹೋದರರೇ, ಇಂದು ಖುಷ್ಬೂ ಪಟಾನಿ/ದಿಶಾ ಪಟಾನಿ (ಬಾಲಿವುಡ್ ನಟಿ) ಮನೆಯಲ್ಲಿ (ವಿಲ್ಲಾ ನಂ. 40, ಸಿವಿಲ್ ಲೈನ್ಸ್, ಬರೇಲಿ, ಯುಪಿ) ನಡೆದ ಗುಂಡಿನ ದಾಳಿಯನ್ನು ನಾವು ಮುಗಿಸಿದ್ದೇವೆ. ಅವರು ನಮ್ಮ ಪೂಜ್ಯ ಸಂತರನ್ನು (ಪ್ರೇಮಾನಂದ ಜಿ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಜಿ ಮಹಾರಾಜ್) ಅವಮಾನಿಸಿದ್ದಾರೆ. ಅಲ್ಲದೇ ನಮ್ಮ ಸನಾತನ ಧರ್ಮವನ್ನು ಅವಮಾನಿಸಲು ಪ್ರಯತ್ನಿಸಿದರು. ನಮ್ಮ ದೇವತೆಗಳ ಮೇಲಿನ ಅವಮಾನ ಸಹಿಸಲಾಗದು. ಇದು ಕೇವಲ ಟ್ರೈಲರ್‌ ಅಷ್ಟೇ. ಮುಂದಿನ ಬಾರಿ, ಅವರು ಅಥವಾ ಬೇರೆ ಯಾರಾದರೂ ನಮ್ಮ ಧರ್ಮದ ಬಗ್ಗೆ ಅಗೌರವ ತೋರಿಸಿದ್ರೆ, ಅವರ ಮನೆಯಲ್ಲಿ ಯಾರೂ ಜೀವಂತವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿತ್ತು.

  • ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌

    ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌

    ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ (Bollywood) ನಟಿ ದಿಶಾ ಪಟಾನಿ (Disha Patani) ಅವರ ಮನೆ ಹೊರಗೆ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ.

    ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು (Fire) ಹಾರಿಸಿದ್ದಾರೆ. ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆಯನ್ನ ಹೊತ್ತುಕೊಂಡಿದೆ. ಸದ್ಯ ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

    ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ ನಂತರ, ದಿಶಾ ಪಟಾನಿ ಅವರ ಮನೆ ಮುಂದೆ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ.  ಇದನ್ನೂ ಓದಿ: ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್

    ದಾಳಿ ಹೊಣೆ ಹೊತ್ತುಕೊಂಡಿರುವ ಗೋಲ್ಡಿ ಬ್ರಾರ್‌ ಗ್ಯಾಂಗ್‌ ಸೋಷಿಯಲ್‌ ಮೀಡಿಯಾ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ. ಹಿಂದಿಯಲ್ಲಿ ಬರೆಯಲಾದ ಪೋಸ್ಟ್‌ನಲ್ಲಿ ಇಬ್ಬರು ಪುರುಷರ ಹೆಸರನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಇದು ಚಿತ್ರೋದ್ಯಮಕ್ಕೆ ನೀಡಲಾದ ಎಚ್ಚರಿಕೆ ಎಂದೂ ಕೂಡ ಬರೆದುಕೊಂಡಿದೆ.

    ಪತ್ರದಲ್ಲಿ ಏನಿದೆ?
    ಎಲ್ಲಾ ಸಹೋದರರಿಗೆ ರಾಮ್ ರಾಮ್… ನಾನು, ವೀರೇಂದ್ರ ಚರಣ್, ಮಹೇಂದ್ರ ಶರಣ್ (ದೆಲಾನಾ).
    ಸಹೋದರರೇ, ಇಂದು ಖುಷ್ಬೂ ಪಟಾನಿ/ದಿಶಾ ಪಟಾನಿ (ಬಾಲಿವುಡ್ ನಟಿ) ಮನೆಯಲ್ಲಿ (ವಿಲ್ಲಾ ನಂ. 40, ಸಿವಿಲ್ ಲೈನ್ಸ್, ಬರೇಲಿ, ಯುಪಿ) ನಡೆದ ಗುಂಡಿನ ದಾಳಿಯನ್ನು ನಾವು ಮುಗಿಸಿದ್ದೇವೆ. ಅವರು ನಮ್ಮ ಪೂಜ್ಯ ಸಂತರನ್ನು (ಪ್ರೇಮಾನಂದ ಜಿ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಜಿ ಮಹಾರಾಜ್) ಅವಮಾನಿಸಿದ್ದಾರೆ. ಅಲ್ಲದೇ ನಮ್ಮ ಸನಾತನ ಧರ್ಮವನ್ನು ಅವಮಾನಿಸಲು ಪ್ರಯತ್ನಿಸಿದರು. ನಮ್ಮ ದೇವತೆಗಳ ಮೇಲಿನ ಅವಮಾನ ಸಹಿಸಲಾಗದು. ಇದು ಕೇವಲ ಟ್ರೈಲರ್‌ ಅಷ್ಟೇ. ಮುಂದಿನ ಬಾರಿ, ಅವರು ಅಥವಾ ಬೇರೆ ಯಾರಾದರೂ ನಮ್ಮ ಧರ್ಮದ ಬಗ್ಗೆ ಅಗೌರವ ತೋರಿಸಿದ್ರೆ, ಅವರ ಮನೆಯಲ್ಲಿ ಯಾರೂ ಜೀವಂತವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.  ಇದನ್ನೂ ಓದಿ: ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್

    ಇನ್ನೂ ಘಟನೆ ಬಳಿಕ ನೆರೆಹೊರೆಯ ಜನ ಭಯಭೀತರಾಗಿದ್ದಾರೆ. ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು, ಇಬ್ಬರು ಬೈಕ್ ಸವಾರರು ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದಾರೆ.

    ಏತನ್ಮಧ್ಯೆ, ಗುಂಡು ಹಾರಿಸಿದ ಯುವಕರನ್ನು ಹಿಡಿಯಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಬರೇಲಿ ಎಸ್‌ಎಸ್‌ಪಿ ಅನುರಾಗ್ ಆರ್ಯ ಹೇಳಿದ್ದಾರೆ. ಇದರೊಂದಿಗೆ, ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ.

  • ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ವಾಷಿಂಗ್ಟನ್‌: ನ್ಯೂಯಾರ್ಕ್‌ನ (New York) ಗಗನಚುಂಬಿ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್‌ ಅಧಿಕಾರಿ, ಶಂಕಿತ ದಾಳಿಕೋರ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ನ್ಯೂಯಾರ್ಕ್‌ನ ಕೇಂದ್ರ ಮ್ಯಾನ್‌ಹ್ಯಾಟನ್‌ನಲ್ಲಿ (Midtown Manhattan) ಗುಂಡಿನ ದಾಳಿ ನಡೆದಿದ್ದು, ಓರ್ವ ಪೊಲೀಸ್‌ ಅಧಿಕಾರಿ ಸೇರಿ ನಾಲ್ವರು ಸಾವನ್ನಪ್ಪಿದ್ದರು. ಆ ಬಳಿಕ ಬಂಧೂಕುದಾರಿ ಸ್ವಯಂ ಹಾನಿಯಿಂದ ಸಾವನ್ನಪ್ಪಿದ್ದಾನೆ. ಬಂಧೂಕುಧಾರಿಯನ್ನ ನೆವಾಡಾದ ಶೇನ್ ಟಮುರಾ (27) ಎಂದು ಗುರುತಿಸಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ ಪಟ್ಟಣವು NFL ಪ್ರಧಾನ ಕಚೇರಿ ಮತ್ತು ಹೆಡ್ಜ್ ಫಂಡ್, ಬ್ಲಾಕ್‌ಸ್ಟೋನ್ ಸೇರಿದಂತೆ ಹಲವಾರು ಪ್ರಮುಖ ಹಣಕಾಸು ಸಂಸ್ಥೆಗಳ ಕಚೇರಿಗಳನ್ನು ಹೊಂದಿರುವ ಸ್ಥಳವಾಗಿದೆ. ಅಲ್ಲದೇ ಪ್ರಮುಖ ಐಷಾರಾಮಿ ಹೋಟೆಲ್‌ಗಳೂ ಇಲ್ಲಿವೆ. ಅಮೆರಿಕದ ಸ್ಥಳೀಯ ಕಾಲಮಾನ ಸಂಜೆ 6:30ರ ಸುಮಾರಿಗೆ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಅಂಬುಲೆನ್ಸ್‌ ಹಾಗೂ ಭದ್ರತಾ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ. ಇದನ್ನೂ ಓದಿ: ಬ್ಯಾಂಕಾಕ್ ಫುಡ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿಗೆ 6 ಬಲಿ

    ಇನ್ನೂ ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

  • ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

    ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

    ಪಾಟ್ನಾ: ಇಲ್ಲಿನ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ದರೋಡೆಕೋರ ಚಂದನ್ ಮಿಶ್ರಾನನ್ನ (Chandan Mishra) ಗುಂಡಿಕ್ಕಿ (Firing) ಕೊಂದ್ದಿದ್ದ ಐವರು ಆರೋಪಿಗಳನ್ನು ಕೋಲ್ಕತ್ತಾದಲ್ಲಿ (Kolkata) ಪೊಲೀಸರು ಶನಿವಾರ (ಇಂದು) ಬಂಧಿಸಿದ್ದಾರೆ.

    ಬಿಹಾರ ಪೊಲೀಸರು (Bihar Police) ಮತ್ತು ಪಶ್ಚಿಮ ಬಂಗಾಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೋಲ್ಕತ್ತಾದ ಉಪನಗರದ ವಸತಿ ಸಂಕೀರ್ಣದಲ್ಲಿ ಬಂಧಿಸಿದ್ದಾರೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ‘Sher’ Will Roar | ನಿಮಿಷಕ್ಕೆ 700 ಬುಲೆಟ್‌ ಹಾರಿಸಬಲ್ಲ `AK-203′ ರೈಫಲ್‌ ಸೇನೆಗೆ!

    ಆ ದಿನ ಆಸ್ಪತ್ರೆ ವಾರ್ಡ್‌ನಲ್ಲಿ ನಡೆದಿದ್ದೇನು?
    ಪೆರೋಲ್ ಮೇಲೆ ಹೊರಗಿದ್ದ ದರೋಡೆಕೋರ ಚಂದನ್ ಮಿಶ್ರಾನನ್ನ ಪಾಟ್ನಾದ ಆಸ್ಪತ್ರೆಯ ಐಸಿಯುನಲ್ಲೇ ಗುಂಡು ಹಾರಿಸಿ ಐವರು ದುಷ್ಕರ್ಮಿಗಳು ಕೊಂದಿದ್ದರು. ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ ಗ್ಯಾಂಗ್‌ಸ್ಟಾರ್ ಚಂದನ್ ಮಿಶ್ರಾನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪೆರೋಲ್ ಮೇಲೆ ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ಇದನ್ನರಿತ ಎದುರಾಳಿ ಗ್ಯಾಂಗ್‌ನವರು ಗನ್ ಸಮೇತ ಆಸ್ಪತ್ರೆಗೆ ನುಗ್ಗಿ ಮನಸೋ ಇಚ್ಛೆ ಗುಂಡಿನ ಸುರಿಮಳೆಗೈದಿದ್ದರು. ಚಂದನ್ ಮಿಶ್ರಾ ದೇಹಕ್ಕೆ 12 ಬುಲೆಟ್ ಹೊಕ್ಕಿದ್ದು, ಆಸ್ಪತ್ರೆಯಲ್ಲೆ ಹತನಾಗಿದ್ದ. ಫೈರಿಂಗ್ ಬಳಿಕ ದಾಳಿಕೋರರು ಎಸ್ಕೇಪ್ ಆಗಿದ್ದರು. ಪಾಟ್ನಾದಿಂದ ಪರಾರಿಯಾಗಿ ಕೋಲ್ಕತ್ತಾದ ನ್ಯೂ ಟೌನ್‌ ವಸತಿ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ಇತ್ತ ಪ್ರಕರಣ ದಾಖಲಿಸಿಕೊಂಡಿದ್ದ ಬಿಹಾರ ಪೊಲೀಸರು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

    ಈ ಮಧ್ಯೆ ಎಲ್ಲಾ ಆರೋಪಿಗಳು ಕೋಲ್ಕತ್ತಾದ ನ್ಯೂ ಟೌನ್‌ ಪ್ರದೇಶದ ವಸತಿ ಸಂಕೀರ್ಣದ ಫ್ಲಾಟ್‌ನಲ್ಲಿ ಅಡಗಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಬಳಿಕ ಬಂಗಾಳ ಪೊಲೀಸರ ಸಹಾಯ ಪಡೆದು ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಪೈಕಿ ನಾಲ್ವರು ಆರೋಪಿಗಳು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಐದನೇ ಆರೋಪಿ ಅಪರಾಧದಲ್ಲಿ ಭಾಗಿಯಾಗಿದ್ದನೇ ಅಥವಾ ಕೊಲೆಗಾರರು ಅಡಗಿಕೊಳ್ಳಲು ಸಹಾಯ ಮಾಡಿದ್ದನೇ ಎಂಬುದರ ಬಗ್ಗೆ ತರನಿಖೆ ನಡೆಸಲಾಗುತ್ತಿದೆ.

    ಸದ್ಯ ಬಂಧಿತ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿ ಕೋಲ್ಕತ್ತಾದಿಂದ ಬಿಹಾರಕ್ಕೆ ಕರೆತರುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದನ್ನೂ ಓದಿ: ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್‌

  • ಮೆಕ್ಸಿಕೊದಲ್ಲಿ ಧಾರ್ಮಿಕ ಆಚರಣೆ ವೇಳೆ ಗುಂಡಿನ ದಾಳಿ; 12 ಮಂದಿ ಬಲಿ

    ಮೆಕ್ಸಿಕೊದಲ್ಲಿ ಧಾರ್ಮಿಕ ಆಚರಣೆ ವೇಳೆ ಗುಂಡಿನ ದಾಳಿ; 12 ಮಂದಿ ಬಲಿ

    ಮೆಕ್ಸಿಕೊ: ಮೆಕ್ಸಿಕನ್‌ (Mexico) ರಾಜ್ಯ ಗುವಾನಾಜುವಾಟೊದ ಇರಪುವಾಟೊ ನಗರದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 12 ಮಂದಿ ಸಾವನ್ನಪ್ಪಿದ್ದಾರೆ.

    ಧಾರ್ಮಿಕ ಆಚರಣೆಯೊಂದು ನಡೆಯುತ್ತಿತ್ತು. ಜನರು ಬೀದಿಯಲ್ಲಿ ನೃತ್ಯ ಮಾಡುತ್ತಾ, ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಿಂದ ಭಯಭೀತರಾಗಿ ಜನರು ಓಡಿದ ದೃಶ್ಯಗಳಿರುವ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಮೇಘಸ್ಫೋಟ | ರಣ ಪ್ರವಾಹಕ್ಕೆ ಹಲವೆಡೆ ಭೂಕುಸಿತ – 171 ರಸ್ತೆಗಳು ಹಾಳು, 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಜಖಂ

    ಇರಾಪುವಾಟೊ ಅಧಿಕಾರಿ ರೊಡಾಲ್ಫೊ ಗೊಮೆಜ್ ಸೆರ್ವಾಂಟೆಸ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಲಿಯಾದವರ ಸಂಖ್ಯೆ 12 ಕ್ಕೆ ಏರಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ದಾಳಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು, ಗ್ವಾನಾಜುವಾಟೊದ ಸ್ಯಾನ್ ಬಾರ್ಟೊಲೊ ಡಿ ಬೆರಿಯೊಸ್‌ನಲ್ಲಿ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪಾರ್ಟಿ ಆಯೋಜಿಸಿದ್ದಾಗಲೂ ಗುಂಡಿನ ದಾಳಿ ನಡೆದಿತ್ತು. ಆಗ 7 ಮಂದಿ ಮೃತಪಟ್ಟಿದ್ದರು. ಇದನ್ನೂ ಓದಿ: ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌

    ವರ್ಷದ ಮೊದಲ ಐದು ತಿಂಗಳುಗಳಲ್ಲಿ ರಾಜ್ಯದಲ್ಲಿ 1,435 ನರಹತ್ಯೆಗಳು ನಡೆದಿವೆ. ಇದು ಇತರ ರಾಜ್ಯಕ್ಕಿಂತ ಎರಡು ಪಟ್ಟು ಹೆಚ್ಚು ಎಂದು ಅಂಕಿಅಂಶಗಳಿಂದ ತಿಳಿದುಬಂದಿದೆ.

  • ಆಸ್ಟ್ರೀಯ ಶಾಲೆಯ ಒಳಗಡೆ ಮನ ಬಂದಂತೆ ಗುಂಡಿನ ದಾಳಿಗೆ 10 ಬಲಿ

    ಆಸ್ಟ್ರೀಯ ಶಾಲೆಯ ಒಳಗಡೆ ಮನ ಬಂದಂತೆ ಗುಂಡಿನ ದಾಳಿಗೆ 10 ಬಲಿ

    ವಿಯೆನ್ನಾ: ಶಾಲೆಯ (School) ಒಳಗಡೆ ನಡೆದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟ ಘಟನೆ ಆಸ್ಟ್ರೀಯಾದ (Austria) ಗ್ರಾಜ್‌ ನಗರದಲ್ಲಿ ನಡೆದಿದೆ.

    ಆಸ್ಟ್ರೀಯಾ ಕಾಲಮಾನ ಮಂಗಳವಾರ ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಬಳಿಕ ದಾಳಿಕೋರ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರಂತದಲ್ಲಿ 8 ವಿದ್ಯಾರ್ಥಿಗಳು ಮತ್ತು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಒಬ್ಬನೇ ಈ ಕೃತ್ಯವನ್ನು ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಸುಮಾರು 3 ಲಕ್ಷ ಜನರು ನೆಲೆಸಿರುವ ಗ್ರಾಜ್ ನಗರವು ರಾಜಧಾನಿ ವಿಯೆನ್ನಾದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿದೆ. ಇದು ಆಸ್ಟ್ರಿಯಾದ ಎರಡನೇ ಅತಿದೊಡ್ಡ ನಗರವಾಗಿದೆ. ಇದನ್ನೂ ಓದಿ: ಕೈಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡೀಪಾರು

    ಆಸ್ಟ್ರಿಯಾವು ಕಟ್ಟುನಿಟ್ಟಾದ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ದೇಶದಲ್ಲಿ ಬಂದೂಕುಗಳ ಮಾಲೀಕತ್ವವನ್ನು ಪಡೆಯಬೇಕಾದರೆ ಪರವಾನಗಿ ಹೊಂದುವುದು ಅಗತ್ಯವಾಗಿದೆ. ಅಷ್ಟೇ ಅಲ್ಲದೇ ವ್ಯಕ್ತಿಗಳು ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸ್‌ ಆಗಬೇಕಾಗುತ್ತದೆ. ಇದನ್ನೂ ಓದಿ: KRSನಲ್ಲಿ ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್‌ ಮಾಡೇ ಮಾಡ್ತೀವಿ – ಗಣಿಗ ರವಿಕುಮಾರ್

    ಮೆಷಿನ್ ಗನ್‌ಗಳು, ಹೆಚ್ಚಿನ ಸಾಮರ್ಥ್ಯದ ಮ್ಯಾಗಜೀನ್‌ಗಳು, ಕ್ಷಿಪ್ರ-ಗುಂಡು ಬಂದೂಕುಗಳ ಬಳಕೆಗೆ ನಿರ್ಬಂಧವಿದೆ. ಅಪ್ರಾಪ್ತ ವಯಸ್ಕರು ಬಂದೂಕು ಹೊಂದುವಂತಿಲ್ಲ. ಯುರೋಪಿಯನ್ ಅಲ್ಲದ ನಿವಾಸಿಗಳು ಆಸ್ಟ್ರಿಯಾಕ್ಕೆ ಬಂದೂಕುಗಳನ್ನು ತರಲು ವಿಶೇಷ ಪರವಾನಗಿ ಪಡೆಯಬೇಕಾಗುತ್ತದೆ.

    ಆಸ್ಟ್ರೀಯಾದ ಒಟ್ಟು ಜನಸಂಖ್ಯೆ 91.3 ಲಕ್ಷ ಆಗಿದ್ದು ಸ್ಮಾಲ್ ಆರ್ಮ್ಸ್ ಸರ್ವೆ ಪ್ರಕಾರ ಆಸ್ಟ್ರೀಯಾದ 100 ಮಂದಿಯಲ್ಲಿ ಅಂದಾಜು 30 ಮಂದಿ ಬಂದೂಕು ಪರವಾನಗಿ ಹೊಂದಿದ್ದಾರೆ.

  • ಸರ್ಕಾರಿ ಜಾಗದಲ್ಲಿ ರಸ್ತೆ ಮಾಡುವ ವಿಚಾರಕ್ಕೆ ಗಲಾಟೆ – ಕ್ರಷರ್ ಮಾಲೀಕನಿಂದ ರೈತನಿಗೆ ಗುಂಡೇಟು

    ಸರ್ಕಾರಿ ಜಾಗದಲ್ಲಿ ರಸ್ತೆ ಮಾಡುವ ವಿಚಾರಕ್ಕೆ ಗಲಾಟೆ – ಕ್ರಷರ್ ಮಾಲೀಕನಿಂದ ರೈತನಿಗೆ ಗುಂಡೇಟು

    ಚಿಕ್ಕಬಳ್ಳಾಪುರ: ಸರ್ಕಾರಿ ಜಾಗದಲ್ಲಿ ರಸ್ತೆ ಮಾಡಲು ಮುಂದಾದ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ರೈತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕ್ರಷರ್ ಮಾಲೀಕ ರೈತರೊಬ್ಬರ (Farmer) ಕಾಲಿಗೆ ಗುಂಡು ಹಾರಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮಾಜಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ್ ಕುಮಾರ್ ಎಂಬಾತ ಮಂಚೇನಹಳ್ಳಿ ಗ್ರಾಮದ ಚಿಕನ್ ರವಿ ಅಲಿಯಾಸ್ ಜಿಮ್ ರವಿ ಎಂಬ ರೈತರೊಬ್ಬರ ಮೇಲೆ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ – ಪ್ರಹ್ಲಾದ್ ಜೋಶಿ

    ಸಕಲೇಶ್ ಕುಮಾರ್‌ಗೆ ಕೋಟಗಾನ ಗುಟ್ಟ ಎಂಬ ಬೆಟ್ಟದಲ್ಲಿ ಕ್ರಷರ್ ಮಾಡಲು ಮಂಜೂರಾತಿ ಸಿಕ್ಕಿತ್ತು. ಆದರೆ ಬೆಟ್ಟಕ್ಕೆ ತೆರಳಲು ದಾಳಿ ಇರಲಿಲ್ಲ. ಹೀಗಾಗಿ ಸಕಲೇಶ್ ತಾನೇ ಮುಂದೆ ನಿಂತು ಸರ್ಕಾರಿ ಜಾಗದಲ್ಲಿ ರಸ್ತೆ ಮಾಡಲು ಮುಂದಾಗಿದ್ದು, ಇದು ಸ್ಥಳೀಯ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: Pahalgam Terror Attack | ಭಾರತ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ – ಉಗ್ರರಿಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

    ಇಂದು ಸಹ ಸಕಲೇಶ್ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ಮಾಡಲು ಮುಂದಾಗಿದ್ದು, ಗ್ರಾಮಸ್ಥರು ಕ್ರಷರ್ ಮಾಡಬಾರದು. ರಸ್ತೆಯನ್ನೂ ಅಗೆಯಬಾರದು ಎಂದು ಅಡ್ಡಿಪಡಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸಕಲೇಶ್ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಈ ವೇಳೆ ಸಕಲೇಶ್ ತನ್ನ ಪರವಾನಿಗೆ ಸಹಿತ ರಿವಾಲ್ವರ್‌ನಿಂದ ಚಿಕನ್ ರವಿ ಎಂಬ ರೈತರೊಬ್ಬರ ಕಾಲಿಗೆ ಗುಂಡು ಹಾರಿಸಿದ್ದಾನೆ. ಬಳಿಕ ನನ್ನ ತಲೆಗೆ ಕಲ್ಲಿನಿಂದ ಹೊಡೆದವರು ಯಾರು ಎಂದು ಕೂಗಾಡುತ್ತಾ ರಿವಾಲ್ವರ್ ಕೈಯಲ್ಲಿ ಹಿಡಿದು ಜನರನ್ನ ಬೆದರಿಸಿದ್ದಾನೆ. ಇದನ್ನೂ ಓದಿ: ಇಂದು ಮನೆಗೆ ಮರಳಬೇಕಿದ್ದ ಉದ್ಯಮಿ ಉಗ್ರರ ಗುಂಡಿಗೆ ಬಲಿ – ಇಡೀ ಗ್ರಾಮದಲ್ಲಿ ಮಡುಗಟ್ಟಿದ ಮೌನ

    ಘಟನೆಯಲ್ಲಿ ಗಾಯಗೊಂಡ ರವಿ ಎಂಬ ರೈತನಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆರೋಪಿ ಸಕಲೇಶ್‌ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.