Tag: ಗುಜರಾತ್ ಸರ್ಕಾರ

  • ಹೊಸ ವರ್ಷಕ್ಕೂ ಮುನ್ನವೇ ಗುಡ್‌ನ್ಯೂಸ್‌ – ಗುಜರಾತ್‌ನ GIFT ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ

    ಹೊಸ ವರ್ಷಕ್ಕೂ ಮುನ್ನವೇ ಗುಡ್‌ನ್ಯೂಸ್‌ – ಗುಜರಾತ್‌ನ GIFT ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ

    ಗಾಂಧಿನಗರ: ಗುಜರಾತ್‌ನಲ್ಲಿ ಮದ್ಯ ಸೇವನೆ ಮತ್ತು ಮಾರಾಟಕ್ಕೆ ಅಲ್ಲಿನ ಸರ್ಕಾರ ಅವಕಾಶ ಕಲ್ಪಿಸಿದೆ. ಗುಜರಾತ್ ಸರ್ಕಾರವು ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ನಲ್ಲಿ ವೈನ್ ಮತ್ತು ಡೈನ್ (Wine and Dine) ನೀಡುವ ಹೋಟೆಲ್‌, ರೆಸ್ಟೋರೆಂಟ್ಸ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಿದೆ.

    ರಾಜಧಾನಿ ಗಾಂಧಿನಗರದ ಸಂಪೂರ್ಣ ಗಿಫ್ಟ್ ಸಿಟಿಯಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಾಗೂ ಮಾಲೀಕರಿಗೆ ಮದ್ಯ ಸೇವನೆ ಪರವಾನಗಿಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬಹುಮಹಡಿ ಕಟ್ಟಡದ 8ನೇ ಮಹಡಿಯಿಂದ ಬಿದ್ದ ಲಿಫ್ಟ್- ಐವರು ಟೆಕ್ಕಿಗಳು ಐಸಿಯುಗೆ ದಾಖಲು

    ಸಾಂದರ್ಭಿಕ ಚಿತ್ರ

    ಇದಲ್ಲದೇ, ಪ್ರತಿ ಕಂಪನಿಯ ಅಧಿಕೃತ ಸಂದರ್ಶಕರು ಆ ಕಂಪನಿಯ ಕಾಯಂ ಉದ್ಯೋಗಿಗಳ ಉಪಸ್ಥಿತಿಯಲ್ಲಿ ತಾತ್ಕಾಲಿಕ ಪರವಾನಗಿ ಹೊಂದಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗಿದೆ.

    ಗಿಫ್ಟ್ ಸಿಟಿಯಲ್ಲಿರುವ ಅಥವಾ ಬರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಅಥವಾ ಕ್ಲಬ್‌ಗಳು ಅಲ್ಲಿ ವೈನ್ ಮತ್ತು ಡೈನ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗಿಫ್ಟ್ ಸಿಟಿಯಲ್ಲಿ ಅಧಿಕೃತವಾಗಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳು ಮತ್ತು ಅಧಿಕೃತವಾಗಿ ಭೇಟಿ ನೀಡುವ ಸಂದರ್ಶಕರು ಹೋಟೆಲ್‌ಗಳು, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಸೇವಿಸಬಹುದು. ಆದ್ರೆ, ಇಲ್ಲಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.

    ಗಿಫ್ಟ್ ಸಿಟಿಯು ತೆರಿಗೆಗೆ ತಟಸ್ಥ ಹಣಕಾಸು ಕೇಂದ್ರವಾಗಿದ್ದು, ಸಿಂಗಾಪುರದಂತಹ ಕೇಂದ್ರಗಳೊಂದಿಗೆ ಸ್ಪರ್ಧಿಸುವ ಗುರಿ ಹೊಂದಿದೆ. ಏಕೆಂದರೆ ಇದು ಹಣಕಾಸಿನ ಪ್ರೋತ್ಸಾಹ ಮತ್ತು ಸಡಿಲವಾದ ಕಾನೂನು ನಿಯಂತ್ರಣಗಳನ್ನು ಹೊಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ 

  • ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಗಾಂಧಿನಗರ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ (Bilkis Bano Case) 11 ಅಪರಾಧಿಗಳಲ್ಲಿ ಒಬ್ಬನಾದ ಶೈಲೇಶ್ ಭಟ್ ಜೊತೆ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ (BJP MP) ಮತ್ತು ಸ್ಥಳೀಯ ಶಾಸಕ ವೇದಿಕೆ ಹಂಚಿಕೊಂಡಿರುವುದು ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ದಾಹೋದ್ ಜಿಲ್ಲೆಯ ಲಿಮ್ಖೇಡಾ, ಸಿಂಗ್ವಾಡ್ ಮತ್ತು ಝಲೋದ್ ತಾಲೂಕಿನ 64 ಹಳ್ಳಿಗಳಿಗೆ ಗುಜರಾತ್‌ನ (Gujarat) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ 101.88 ಕೋಟಿ ರೂ. ವೆಚ್ಚದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭದಲ್ಲಿ ಬಿಜೆಪಿ ಸಂಸದ ಜಸ್ವಂತ್ ಸಿಂಗ್ ಭಾಭೋರ್, ಬಿಜೆಪಿ ಶಾಸಕ ಶೈಲೇಶ್ ಭಾಭೋರ್ ಅವರೊಂದಿಗೆ ಅಪರಾಧಿ ಶೈಲೇಶ್ ಭಟ್ ಮೊದಲ ಸಾಲಿನಲ್ಲೇ ಕುಳಿತಿದ್ದ ವೀಡಿಯೊ ಮತ್ತು ಚಿತ್ರಗಳು ಚರ್ಚೆಯನ್ನು ಹುಟ್ಟುಹಾಕಿವೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (Mahua Moitra) ಟ್ವೀಟ್ ಮಾಡಿ, ಬಿಜೆಪಿಗರನ್ನು ರಾಕ್ಷಸರು ಎಂದು ಟೀಕಿಸಿದ್ದಾರೆ. ನಾನು ಈ ರಾಕ್ಷಸರನ್ನ ಮತ್ತೆ ಜೈಲಿನಲ್ಲಿ ನೋಡಬಯಸುತ್ತೇನೆ ಎಂದಿದ್ದಾರೆ. ಇದನ್ನೂಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

    ಬಿಆರ್‌ಎಸ್ ಪಕ್ಷದ ಕೆಟಿಆರ್ ಅವರೂ ಕಿಡಿ ಕಾರಿದ್ದು, ಬಿಜೆಪಿಯನ್ನು ಬಲತ್ಕಾರ್ ಜಸ್ಟಿಫಿಕೇಷನ್ ಪಾರ್ಟಿ ಎಂದು ಜರೆದಿದ್ದಾರೆ. ಬಿಲ್ಕಿಸ್ ಬಾನೋ ರೇಪ್ ಪ್ರಕರಣದ ದೋಷಿಗಳ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರೋದು ಆ ಪಕ್ಷದವರ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ ಎಂದು ಟೀಕಿಸಿದ್ದಾರೆ. ಆದ್ರೆ, ವೇದಿಕೆ ಮೇಲೆ ಯಾರಿದ್ರೂ ಅನ್ನೋದು ನನಗೆ ಗೊತ್ತೇ ಇಲ್ಲ ಎಂದು ಹೇಳಿ ಬಿಜೆಪಿ ಶಾಸಕ ಶೈಲೇಶ್ ಜಾರಿಕೊಂಡಿದ್ದಾರೆ. ಇದನ್ನೂಓದಿ: ಗಾಂಧಿ ಕುಟುಂಬವನ್ನು ರಾಮನ ವಂಶಕ್ಕೆ ಹೋಲಿಸಿರುವುದು ಅಹಂಕಾರ : ಅನುರಾಗ್ ಠಾಕೂರ್

    ಅತ್ಯಾಚಾರ ದೋಷಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಅಂತಾ ಗೊತ್ತಿಲ್ಲ ಎಂದು ದಾಹೋದ್ ಜಿಲ್ಲಾಡಳಿತ ತಪ್ಪಿಸಿಕೊಳ್ಳಲು ನೋಡಿದೆ. ಈ ಬೆಳವಣಿಗೆ ನಡೆದಿರುವ ಹೊತ್ತಲ್ಲೇ, ಬಿಲ್ಕಿಸ್ ಬಾನೋ ಅತ್ಯಾಚಾರ ಅಪರಾಧಿಗಳನ್ನು ಯಾವ ಅಂಶಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದೀರಿ ಎಂಬ ಬಗ್ಗೆ ದಾಖಲೆಗಳನ್ನು ಒದಗಿಸಲು ಸಜ್ಜಾಗಿ ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

    2002ರ ಗುಜರಾತ್ ಗಲಭೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ಗುಜರಾತ್ ರಾಜ್ಯ ಮತ್ತು 11 ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

  • ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಗಾಂಧಿನಗರ: ಮೋರ್ಬಿ ತೂಗುಸೇತುವೆ ದುರಂತ (Morbi Bridge Collapse) ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.

    ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ (Gujarat Government) 5.40 ಕೋಟಿ ಪರಿಹಾರ ವಿತರಿಸಿದೆ. ನಾಳೆ ಗುಜರಾತ್‌ನಲ್ಲಿ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಮಧ್ಯೆ, ಇವತ್ತು ಮೋರ್ಬಿಗೆ ಪ್ರಧಾನಿ ಮೋದಿ (Narendra Modi) ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಎಸ್‌ಪಿ ಕಚೇರಿಯಲ್ಲಿ ಸಿಎಂ (Chief Minister) ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೋದಿ ಆಗಮನ ಕಾರಣ ನಿನ್ನೆ ರಾತ್ರಿ ತರಾತುರಿಯಲ್ಲಿ ಮೋರ್ಬಿ ಸರ್ಕಾರಿ ಆಸ್ಪತ್ರೆಗೆ (Hospital) ಸುಣ್ಣ-ಬಣ್ಣ ಬಳಿದಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಈವರೆಗೂ ಯಾವುದೇ ಕ್ರಮ ಇಲ್ಲ. ಆದ್ರೆ ಫೋಟೋಶೂಟ್‌ಗಾಗಿ ಹೇಗೆಲ್ಲಾ ಮಾಡ್ತಿದ್ದಾರೆ ಎಂದು ಎಎಪಿ (AAP) ಕಿಡಿಕಾರಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಭಾರೀ ಭ್ರಷ್ಟಾಚಾರದ ಕಾರಣ ಈ ದುರಂತ ಸಂಭವಿಸಿದೆ. ಇದು ಸರ್ಕಾರವೇ ನಡೆಸಿದ ಸರ್ಕಾರಿ ಕೊಲೆ ಎಂದು ಸಿಎಂ ಕೇಜ್ರಿವಾಲ್ (Arvind Kejriwal) ಆಪಾದಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದನ್ನ ನಾನು ರಾಜಕೀಯಗೊಳಿಸಲು ಬಯಸಲ್ಲ ಎಂದು ಮೃದುಸ್ವಭಾವ ತೋರಿಸಿದ್ದಾರೆ.

    ಈ ಮಧ್ಯೆ ಮೋರ್ಬಿ ದುರಂತದ ಬಗ್ಗೆ ಸುಪ್ರೀಂಕೋರ್ಟ್ (Supreme Court) ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ವಕೀಲರೊಬ್ಬರು ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ. ನವೆಂಬರ್ 14ರಂದು ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ನವದೆಹಲಿ: ಬಿಲ್ಕಿಸ್ ಬಾನು (Bilkish Bano) ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರ (Gujarat Government) ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ ವಿಚಾರಕ್ಕೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಧಾನಿ ಮೋದಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

    ಅಪರಾಧಿಗಳ ಕ್ಷಮಾಪಣೆಗೆ ತನಿಖಾ ಸಂಸ್ಥೆಯು ಕೇಂದ್ರದಿಂದ ಸೂಕ್ತ ಆದೇಶಗಳನ್ನು ಪಡೆದುಕೊಂಡಿದೆ. 11 ಅಪರಾಧಿಗಳ ಬಿಡುಗಡೆಗೆ ಕೇಂದ್ರವು ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರ ಅಫಿಡವಿಟ್‌ನಲ್ಲಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಧಾನಿ (PrimeMinister) ವಿರುದ್ಧ ವ್ಯಾಗ್ದಾಳಿ ನಡೆಸಿದ್ದಾರೆ.

    ಪ್ರಧಾನಿಯವರು ಮಿತವ್ಯಯದ ಭರವಸೆಗಳನ್ನ ನೀಡುತ್ತಿದ್ದಾರೆ. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಅವರ ಮಾತುಗಳು ಮತ್ತು ಉದ್ದೇಶಗಳ ನಡುವೆ ವ್ಯತ್ಯಾಸ ತುಂಬಾ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

    ಕೆಂಪುಕೋಟೆಯಲ್ಲಿ ಮಹಿಳೆಯರ ಬಗ್ಗೆ ಗೌರವದ ಮಾತುಗಳನ್ನಾಡುತ್ತಾರೆ. ಆದರೆ ವಾಸ್ತವದಲ್ಲಿ ಅತ್ಯಾಚಾರಿಗಳಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಪ್ರಧಾನಿಯವರ ಈ ಭರವಸೆ ಹಾಗೂ ಉದ್ದೇಶಗಳ ನಡುವೆ ವ್ಯತ್ಯಾಸ ಇರುವುದು ಸ್ಪಷ್ಟವಾಗಿದೆ. ಪ್ರಧಾನಿ ಮೋದಿ (Narendra Modi) ಅವರು ಮಹಿಳೆಯರಿಗೆ (Women) ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ- ಸಂತ್ರಸ್ತ ಬಾಲಕಿ, ತಾಯಿ ಹೇಳಿಕೆಯಲ್ಲಿ ಗೊಂದಲ

    ಬಿಲ್ಕಿಸ್ ಬಾನು ಪ್ರಕರಣದಲ್ಲಿ ಈಗಾಗಲೇ 14 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ 11 ಅಪರಾಧಿಗಳಿಗೆ ಶಿಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ನವದೆಹಲಿ: 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಗ್ಯಾಂಗ್ ರೇಪ್‍ಗೆ ಒಳಗಾಗಿದ್ದ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಉದ್ಯೋಗ, ಮನೆ ಹಾಗೂ 50 ಲಕ್ಷ ರೂ. ಹಣವನ್ನು ಪರಿಹಾರದ ರೂಪದಲ್ಲಿ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

    ರಾಧಿಕ್ ಪುರ ಗ್ರಾಮದಲ್ಲಿ 2002ರ ಮಾರ್ಚ್ ನಲ್ಲಿ ಗೋಧ್ರಾ ಗಲಭೆಯ ಬಳಿಕ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಮೇಲೆ 11 ಮಂದಿ ದುಷ್ಕರ್ಮಿಗಳು ಗ್ಯಾಂಗ್ ರೇಪ್ ಮಾಡಿದ್ದರು. ಅಲ್ಲದೆ ಆಕೆಯ ಕುಟುಂಬದ 7 ಮಂದಿ ಸದಸ್ಯರನ್ನು ಹತ್ಯೆಗೈದಿದ್ದರು.

    ಇಂದು ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸಂತ್ರಸ್ತೆಯಾಗಿರುವ ಬಿಲ್ಕಿಸ್ ಬಾನೋಗೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಮತ್ತು ಮನೆಯನ್ನು ನೀಡುವಂತೆ ಆದೇಶಿಸಿದೆ.

    ಈ ಪ್ರಕರಣದ ವಿಚಾಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ವಿಶೇಷ ನ್ಯಾಯಪೀಠ ಕಳೆದ ತಿಂಗಳು ಗುಜರಾತ್ ಸರ್ಕಾರಕ್ಕೆ, ಬಾಂಬೆ ಹೈಕೋರ್ಟ್ ತಪ್ಪಿತಸ್ಥರು ಎಂದು ಘೋಷಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿತ್ತು. ಆದಾದ ಬಳಿಕ ಗುಜರಾತ್ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡಲು ಮುಂದಾಗಿದ್ದಾದ ಬಿಲ್ಕಿಸ್ ಬಾನೊ ನಿರಾಕರಿಸಿದ್ದರು.

    2008ರಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯವೂ ಕೃತ್ಯದಲ್ಲಿ ಶಾಮೀಲಾಗಿದ್ದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಕೃತ್ಯದಲ್ಲಿ ಕೈಜೋಡಿಸಿದ ಆರೋಪ ಹೊಂದಿದ್ದ ಐವರು ಪೊಲೀಸ್ ಅಧಿಕಾರಿಗಳು ಹಾಗೂ ಇಬ್ಬರು ಸರ್ಕಾರಿ ವೈದ್ಯರನ್ನು ಬಿಡುಗಡೆಗೊಳಿಸಿತ್ತು. ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ಕೃತ್ಯದಲ್ಲಿ ಭಾಗಿಯಾಗಿದ್ದ ಐಪಿಎಸ್ ಅಧಿಕಾರಿಗಳನ್ನು ಹಿಂಬಡ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.