Tag: ಗುಮಾಸ್ತ

  • 68 ಲಕ್ಷ ವಿದ್ಯಾರ್ಥಿ ವೇತನ ಗುಳುಂ ಮಾಡಿ ಪರಾರಿಯಾದ ಗುಮಾಸ್ತ

    68 ಲಕ್ಷ ವಿದ್ಯಾರ್ಥಿ ವೇತನ ಗುಳುಂ ಮಾಡಿ ಪರಾರಿಯಾದ ಗುಮಾಸ್ತ

    ಚಿಕ್ಕಬಳ್ಳಾಪುರ: ಗುಮಾಸ್ತನೊಬ್ಬನು ವಿದ್ಯಾರ್ಥಿಗಳ ಹಾಗೂ ಸರ್ಕಾರಕ್ಕೆ ಸೇರಿದ ಹಣವನ್ನು ಸ್ವಂತ ಬಳಕೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

    ಸಂತೋಷ್ ಕುಮಾರ್ ಆರೋಪಿ. ಈತ ಚಿಂತಾಮಣಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವೀತಿಯ ದರ್ಜೆ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ಈತ ವಿದ್ಯಾರ್ಥಿ ವೇತನ ಕಡತಗಳ ನಿರ್ವಹಣೆ ಮಾಡುತ್ತಿದ್ದ.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೊತ್ತರ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕೆ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಬರೋಬ್ಬರಿ 68 ಲಕ್ಷ 65 ಸಾವಿರ ರೂ. ಹಣ ಮಂಜೂರು ಮಾಡಿತ್ತು.

    ಸಂತೋಷ್ ಕುಮಾರ್ ವಿದ್ಯಾರ್ಥಿಗಳು ಹಾಗೂ ಸರ್ಕಾರಕ್ಕೆ ನೀಡಬೇಕಿದ್ದ 68 ಲಕ್ಷ 65 ಸಾವಿರ ರೂ. ಹಣವನ್ನು ತನ್ನ ಸ್ವಂತ ಖಾತೆಗೆ ವರ್ಗಾಯಿಸಿಕೊಂಡು ಪಂಗನಾಮ ಹಾಕಿದ್ದಾನೆ.

    ಸಮತೋಷ್ ಕಳೆದ ಏಪ್ರಿಲ್‌ನಿಂದ ಅನಧಿಕೃತ ಗೈರಾಗಿದ್ದಾನೆ. ಎಷ್ಟು ಕರೆದರೂ ಕರ್ತವ್ಯಕ್ಕೆ ಬಂದಿಲ್ಲ. ಇದರಿಂದ ಅನುಮಾನಗೊಂಡು, ಆತ ನಿರ್ವಹಿಸಿದ ಕಡತಗಳ ಪರಿಶೀಲನೆ ನಡೆಸಿದಾಗ 68 ಲಕ್ಷ 65 ಸಾವಿರ ರೂಪಾಯಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಗೆಳೆಯನನ್ನು ಕೊಂದು, ಕತೆ ಕಟ್ಟಿದ ಸ್ನೇಹಿತ ಪೊಲೀಸರ ಬಲೆಗೆ

    ಕಾಲೇಜಿನ ಪ್ರಾಂಶುಪಾಲೆ ಶಾರದಾರವರ ನಕಲಿ ಸಹಿಗಳನ್ನು ಮಾಡಿ, ಬೆಂಗಳೂರು ಥಣಿಸಂದ್ರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸಂತೋಷಕುಮಾರ್ ತನ್ನ ವೈಯುಕ್ತಿಕ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು ಪತ್ತೆಯಾಗಿದೆ.

    ಕೂಡಲೇ ಕಾಲೇಜಿನ ಪ್ರಾಂಶುಪಾಲರಾದ ಶಾರದಾ ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಚಿಂತಾಮಣಿ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ

  • ಗುಮಾಸ್ತನ ಮನೆಯೇ ಪರೀಕ್ಷಾ ಕೇಂದ್ರ – ಮಕ್ಕಳ ಜೊತೆ ದುಡ್ಡು ನೀಡಿ ಕುಳಿತ್ತಿದ್ದವರು ಅರೆಸ್ಟ್

    ಗುಮಾಸ್ತನ ಮನೆಯೇ ಪರೀಕ್ಷಾ ಕೇಂದ್ರ – ಮಕ್ಕಳ ಜೊತೆ ದುಡ್ಡು ನೀಡಿ ಕುಳಿತ್ತಿದ್ದವರು ಅರೆಸ್ಟ್

    ಲಕ್ನೋ: ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆಯಲ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.

    ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆ ಕಾಲೇಜಿನ ಪಕ್ಕದಲ್ಲೇ ಇದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆಯಿಸಿ ಪರೀಕ್ಷೆ ಮಾಡಿದ್ದಾನೆ. ಜೊತೆಗೆ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಬೇರೆಯವರ ಕೈಯಲ್ಲಿ ದುಡ್ಡು ಕೊಟ್ಟು ಪರೀಕ್ಷೆ ಬರೆಸುತ್ತಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗುಮಾಸ್ತನ ಮನೆಯ ಮೇಲೆ ದಾಳಿಮಾಡಿದ್ದಾರೆ. ದಾಳಿ ವೇಳೆ ಗುಮಾಸ್ತ ಎಸ್ಕೇಪ್ ಆಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದಾಗ ನಾವು ಇಲ್ಲಿ ಪರೀಕ್ಷೆ ಬರೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳ ಆರಂಭಗೊಂಡಿದ್ದು, ಸುಮಾರು 56 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಿನಿಂದ ನಡೆಸಬೇಕು ಎಂದು ಉತ್ತರ ಪ್ರದೇಶದ ಶಿಕ್ಷಣ ಇಲಾಖೆ ಬಹಳ ಪ್ರಯತ್ನ ಮಾಡುತ್ತಿದೆ. ಈ ನಡುವೆ ಈ ರೀತಿಯ ಅವ್ಯವಹಾರ ನಡೆಯುತ್ತಿರುವುದು ಕಂಡು ಶಿಕ್ಷಣ ಇಲಾಖೆ ತಲೆಕೆಡಿಸಿಕೊಂಡಿದೆ.

    ಕಳೆದ ವಾರವಷ್ಟೇ ಹೇಗೆ ಮೋಸ ಮಾಡಿ ಪರೀಕ್ಷೆ ಬರೆಯಬೇಕು ಮತ್ತು ನೀವು ನೀವೇ ಮಾತನಾಡಿಕೊಂಡು ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಲಾಗಿತ್ತು.