Tag: ಗುರುತೇಜ್ ಶೆಟ್ಟಿ

  • ‘ರಾನಿ’ ಬಳಿಕ ಗುರುತೇಜ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಕಿರಣ್ ರಾಜ್

    ‘ರಾನಿ’ ಬಳಿಕ ಗುರುತೇಜ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಕಿರಣ್ ರಾಜ್

    ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ (Kiran Raj) ಅವರು ಸಿನಿಮಾ ಹಾಗೂ ಸೀರಿಯಲ್‌ ಎರಡರಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಡೈರೆಕ್ಟರ್ ಗುರುತೇಜ್ ಶೆಟ್ಟಿ (Gurutej Shetty) ಜೊತೆ ಮತ್ತೆ ಹೊಸ ಸಿನಿಮಾಗಾಗಿ ಕಿರಣ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಅದಿತಿ ಪ್ರಭುದೇವ ಮಗಳ ಗ್ರ್ಯಾಂಡ್ ಬರ್ತ್‌ಡೇ ಸೆಲಬ್ರೇಶನ್

    2024ರಲ್ಲಿ ತೆರೆಕಂಡ ‘ರಾನಿ’ (Ronny) ಸಿನಿಮಾದ ನಂತರ ಮತ್ತೊಂದು ಚಿತ್ರಕ್ಕೆ ಜೊತೆಯಾಗಿದ್ದಾರೆ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಕಿರಣ್ ರಾಜ್. ಈ ಚಿತ್ರಕ್ಕೆ ‘ಜಾಕಿ 42’ (Jockey 42) ಎಂದು ಹೆಸರಿಡಲಾಗಿದೆ. ಕಿರಣ್ ರಾಜ್ ಜಾಕಿಯಾಗಿ ಕುದುರೆ ಮೇಲೆರಿದ್ದಾರೆ. ಕುದುರೆಯ ಕಾಲು ಕೆಳಗೆ ಹಣದ ಕಂತೆ ಇರುವ ಪೋಸ್ಟರ್‌ ಎಲ್ಲರ ಗಮನ ಸೆಳೆದಿದೆ. ಸಖತ್ ಕ್ಯಾಚಿ ಆಗಿರೋ ಟೈಟಲ್ ಅನ್ನೇ ಚಿತ್ರಕ್ಕೆ ಇಡಲಾಗಿದೆ. ಇದನ್ನೂ ಓದಿ:ಅದಿತಿ ಪ್ರಭುದೇವ ಮಗಳ ಗ್ರ್ಯಾಂಡ್ ಬರ್ತ್‌ಡೇ ಸೆಲಬ್ರೇಶನ್

     

    View this post on Instagram

     

    A post shared by Kiran Raj (@itskiranraj)

    ಆಕ್ಷನ್, ರೊಮಾನ್ಸ್, ಫ್ಯಾಮಿಲಿ ಸೆಂಟಿಮೆಂಟ್ ಮತ್ತು ಹಾಸ್ಯ ಎಲ್ಲಾವನ್ನೂ ಚಿತ್ರ ಒಳಗೊಂಡಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಭರವಸೆ ನೀಡಿದ್ದಾರೆ. ಬೆಂಗಳೂರು, ಮೈಸೂರು ಮತ್ತು ವಿದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೇ15ರಿಂದ ಚಿತ್ರೀಕರಣ ಆರಂಭವಾಗಲಿದೆ. ಇದನ್ನೂ ಓದಿ:ಲೈಫ್‌ಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿಯಾಗಿರೋಕೆ ತಂದೆಯೇ ಕಾರಣ- ನಿವೇದಿತಾ ಭಾವುಕ

    ಈ ಚಿತ್ರವನ್ನು ಭಾರತಿ ಸತ್ಯನಾರಾಯಣ ಅವರು ಗೋಲ್ಡನ್ ಗೇಟ್ ಸ್ಟುಡಿಯೋ ಮೂಲಕ ಚಿತ್ರ ನಿರ್ಮಾಣವಾಗುತ್ತಿದೆ. ಗಿರೀಶ್ ಹೆಗಡೆ, ಗುರುತೇಜ್ ಮತ್ತು ಕಿರಣ್ ಸಹ ನಿರ್ಮಾಪಕರಾಗಿದ್ದಾರೆ.

    ಈ ಚಿತ್ರದ ಜೊತೆ ಕಿರುತೆರೆಗೂ ಅವರು ಕಮ್ ಬ್ಯಾಕ್ ಆಗಿದ್ದಾರೆ. ‘ಕನ್ನಡತಿ’ ಸೀರಿಯಲ್ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕಿರಣ್ ರಾಜ್ ಮಾಡುತ್ತಿದ್ದರು. ಇದೀಗ ‘ಕರ್ಣ’ ಎಂಬ ಹೊಸ ಸೀರಿಯಲ್ ಅನ್ನು ಅವರು ಒಪ್ಪಿಕೊಂಡಿದ್ದಾರೆ. ಇದರ ಪ್ರೋಮೋ ಈಗಾಗಲೇ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಕರ್ಣನಾಗಿ ಬರುತ್ತಿರುವ ಕಿರಣ್ ರಾಜ್‌ಗೆ ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ನಾಯಕಿ ಸಾಥ್ ನೀಡಲಿದ್ದಾರೆ. ಸೀರಿಯಲ್ ಪ್ರಸಾರದ ದಿನಾಂಕ ಇನ್ನೂ ನಿಗದಿ ಮಾಡಬೇಕಿದೆ.

  • ವಿಷ್ಣುವರ್ಧನ್ ಸ್ಮಾರಕದಲ್ಲಿ ‘ರಾನಿ’ ಚಿತ್ರದ ಶೂಟಿಂಗ್ ಮುಕ್ತಾಯ

    ವಿಷ್ಣುವರ್ಧನ್ ಸ್ಮಾರಕದಲ್ಲಿ ‘ರಾನಿ’ ಚಿತ್ರದ ಶೂಟಿಂಗ್ ಮುಕ್ತಾಯ

    ಗುರುತೇಜ್ ಶೆಟ್ಟಿ (Gurtej Shetty) ನಿರ್ದೇಶನದ, ಕಿರಣ್ ರಾಜ್ (Kiran Raj) ನಾಯಕನಾಗಿ ನಟಿಸಿರುವ ‘ರಾನಿ’ (Rani) ಚಿತ್ರದ ಕೊನೆ ಹಂತದ ಚಿತ್ರಿಕರಣ ಮುಗಿಸಿದೆ.  ಮೈಸೂರಿನ ವಿಷ್ಣುವರ್ಧನ್ ಸ್ಮಾರಕದಲ್ಲಿ ರವಿಶಂಕರ್, ಮಠ ಗುರುಪ್ರಸಾದ್, ಯಶ್ ಶೆಟ್ಟಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರ್ ಅವರ ಕೊನೆಯ ಹತ್ತು ದಿನದ ಚಿತ್ರೀಕರಣ ಮಾಡಿ ಮುಗಿಸಿದೆ.

    ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ ಹೆಗ್ಡೆ ನಿರ್ಮಿಸುತ್ತಿರುವ ಮೊದಲ ಚಿತ್ರ ಇದಾಗಿದೆ. ಈಗಾಗಲೇ ಪೊಸ್ಟರ್, ಟೀಸರ್ ನಿಂದ ಚಿತ್ರ ಪ್ರೇಕ್ಷಕರಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು ರಾಧ್ಯ, ಸಮಿಕ್ಷಾ ಮತ್ತು ಅಪೂರ್ವ ಅಭಿನಯಿಸಿದ್ದಾರೆ.  ಮೈಕೋ ನಾಗರಾಜ್, ಉಗ್ರಂ ಮಂಜು, ಉಗ್ರಂ ರವಿ, ಸುಜಯ್ ಶಾಸ್ತ್ರಿ, ಗಿರೀಶ್ ಹೆಗ್ಡೆ, ಬಿ ಸುರೇಶ, ಶ್ರೀಧರ್, ಧರ್ಮೇಂದ್ರ ಆರಸ್, ಚೇತನ್ ದುರ್ಗ, ಅನಿಲ್ ಯಾದವ್, ಪ್ರಥ್ವಿ ರಾಜ್, ಅರ್ಜುನ್, ಕರಿ ಸುಬ್ಬು ಮುಂತಾದ ಹೆಸರಾಂತ ಕಲಾವಿದ ಚಿತ್ರದಲ್ಲಿ ಅಭಿನಯಿಸಿದ್ದಾರೆ.

     

    ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸತೀಶ್ ಕಲಾ ನಿರ್ದೇಶನ, ಉಮೇಶ ಸಂಕಲನ,  ಮಣಿಕಾಂತ್ ಕದ್ರಿ ಸಂಗೀತ ಹಾಗೂ ಪ್ರಮೋದ ಮರವಂತೆ ಗೀತರಚನೆ,  ವಿನೋದ್ ಸಾಹಸ ಧನಂಜಯ ಅವರ ನೃತ್ಯ ನಿರ್ದೇಶನವಿದೆ. “ರಾನಿ” ಗೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತವಿದ್ದು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನೆಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಿಸಲಿದೆ ಚಿತ್ರತಂಡ.

  • ಚಂದ್ರನ ಅಂಗಳಕ್ಕೆ ಚಂದ್ರಯಾನ 3: ಅದೇ ವೇಳೆಗೆ ‘ರಾನಿ’ ಟೀಸರ್ ರಿಲೀಸ್

    ಚಂದ್ರನ ಅಂಗಳಕ್ಕೆ ಚಂದ್ರಯಾನ 3: ಅದೇ ವೇಳೆಗೆ ‘ರಾನಿ’ ಟೀಸರ್ ರಿಲೀಸ್

    ಗಸ್ಟ್  23ರ ರಂದು ಸಂಜೆ 6 ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ ‘ಚಂದ್ರಯಾನ 3’ (Chandrayaan 3) ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು  ಈಗಾಗಲೇ ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ (Kiran Raj) ನಾಯಕರಾಗಿ ನಟಿಸಿರುವ ‘ರಾನಿ’ (Rani) ಚಿತ್ರದ ಹಿಂದಿ ಟೀಸರ್  (Hindi Teaser) ರಿಲೀಸ್ ಮಾಡಲು ಹೊರಟಿದೆ ಚಿತ್ರತಂಡ. ಈ ಮೂಲಕ ನಾವು ISRO ವಿಜ್ಞಾನಿಗಳಿಗೆ ಶುಭ ಕೋರುತ್ತಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ.

    ಈಗಾಗಲೇ 1 ನಿಮಿಷ 35 ಸೆಕೆಂಡ್ ಅವಧಿಯ ಕನ್ನಡ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ. ಈಗ 2 ನಿಮಿಷ 22 ಸೆಕೆಂಡ್ ನ ಹಿಂದಿ ಟೀಸರ್ ಬಿಡುಗಡೆಯಾಗುತ್ತಿದೆ. ಈ ಮೂಲಕ ಚಿತ್ರದ ಕಥೆಯ ಬಗ್ಗೆ ಇನ್ನಷ್ಟು ಮಾಹಿತಿ ಬಿಟ್ಟುಕೊಡುತ್ತಿದ್ದೇವೆ ಹಾಗೂ ಹಿಂದಿ ಪ್ರಾದೇಶಿಕತೆಗೆ ತಕ್ಕಂತೆ ಟೀಸರ್ ಕಟ್ಸ್ ಇರುತ್ತದೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

    ಕಿರಣ್ ರಾಜ್ ಈ ಸಿನಿಮಾದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದರೆ ಅಪೂರ್ವ, ರಾಧ್ಯ, ಸಮೀಕ್ಷಾ ಮೂವರು ನಾಯಕಿಯರಿದ್ದಾರೆ. ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ  ಇದಾಗಿದ್ದು, ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ ಹೆಗ್ಡೆ ನಿರ್ಮಿಸಿದ್ದಾರೆ. ಇದನ್ನೂ ಓದಿ:ಪತ್ನಿ ರಾಖಿ ಸಾವಂತ್ ವಿರುದ್ಧ ಗುಡುಗಿದ ಮೈಸೂರು ಹುಡುಗ ಆದಿಲ್

    ರವಿ ಶಂಕರ್, ಮೈಕೋ ನಾಗರಾಜ್, ಮಂಡ್ಯ ರಮೇಶ್, ಗಿರೀಶ್ ಹೆಗ್ಡೆ, B ಸುರೇಶ, ಸೂರ್ಯ ಕುಂದಾಪುರ, ಧರ್ಮಣ್ಣ, ಉಗ್ರಂ ಮಂಜು, ಉಗ್ರಂ ರವಿ, ಮನಮೋಹನ್ ರೈ, ಅನಿಲ್ ಯಾದವ್, ಪ್ರಥ್ವಿ, ಧರ್ಮೇಂದ್ರ ಅರಸ್, ಸುಜಯ್ ಶಾಸ್ತ್ರಿ ಅನೇಕ ಹೆಸರಾಂತ ಕಲಾವಿದರು ಚಿತ್ರದಲ್ಲಿದ್ದಾರೆ.

    ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಪ್ರಮೋದ್ ಮರವಂತೆ ಗೀತರಚನೆ, ಸಚಿನ್ ಬಸ್ರೂರ್ ಹಿನ್ನೆಲೆ ಸಂಗೀತ,  ರಾಘವೇಂದ್ರ ಕೋಲಾರ ಛಾಯಾಗ್ರಾಹಣ ಉಮೇಶ R B ಸಂಕಲನ ಹಾಗೂ ಸತೀಶ್ ಅವರ ಕಲಾ ನಿರ್ದೇಶನ ರಾನಿ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಸಿನಿಮಾದ ಟೀಸರ್ ಔಟ್

    ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಸಿನಿಮಾದ ಟೀಸರ್ ಔಟ್

    ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ (Kiran Raj) ಈಗ ಹಿರಿತೆರೆಯಲ್ಲೂ ಬೇಡಿಕೆ ನಟ. ಪ್ರಸ್ತುತ ಕಿರಣ್ ರಾಜ್ ಅಭಿನಯದ ರಾನಿ (Rani) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕಿರಣ್ ರಾಜ್ ಹುಟ್ಟುಹಬ್ಬದಂದು (Birthday) ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ವೀಕ್ಷಣೆಯಾಗಿ, ನೋಡುಗರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಮಾಗಡಿ ರಸ್ತೆಯ ವಿಕ್ಟರಿ ಸಿನಿಮಾದಲ್ಲಿ ಅದ್ದೂರಿಯಾಗಿ ಟೀಸರ್ (Teaser) ಬಿಡುಗಡೆ ಸಮಾರಂಭ ಹಾಗೂ ಕಿರಣ್ ರಾಜ್ ಹುಟ್ಟುಹಬ್ಬ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.

    ಅಭಿಮಾನಿಗಳ ಪ್ರೀತಿಗೆ ಮನ ತುಂಬಿ ಬಂದಿದೆ ಎಂದು ಮಾತು ಪ್ರಾರಂಭಿಸಿದ ಕಿರಣ್ ರಾಜ್, ‘ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಚಿರ ಋಣಿ. ರಾನಿ ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ. ಗುರುತೇಜ್ ಶೆಟ್ಟಿ (Gurutej Shetty) ವಿಭಿನ್ನ ಕಥೆ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ’ ಎಂದರು.

    ನಾನು ಚಿತ್ರರಂಗದಿಂದ ದೂರ ಉಳಿದಿದ್ದ ಸಮಯದಲ್ಲಿ ಮಿತ್ರ ಗಿರೀಶ್ ಹೆಗಡೆ, ನಿರ್ಮಾಪಕ ಉಮೇಶ್ ಹೆಗಡೆ ಅವರನ್ನು ಪರಿಚಯಿಸಿದರು. ಉಮೇಶ್ ಹೆಗಡೆ ಹಾಗೂ ಚಂದ್ರಕಾಂತ್ ಪೂಜಾರಿ ಅವರು ಈ ಚಿತ್ರದ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ನಾಯಕ ಕಿರಣ್ ರಾಜ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ನಟನೆಗಷ್ಟೇ ಸೀಮಿತವಾಗದೆ, ನನ್ನ ಜೊತೆ ಪ್ರತಿಯೊಂದು ಕೆಲಸದಲ್ಲೂ ಭಾಗಿಯಾಗಿದ್ದಾರೆ. ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿರುವುದಷ್ಟೇ ಅಲ್ಲದೇ, ಟೀಸರ್ ಗೆ ಧ್ವನಿ ಸಹ ನೀಡಿದ್ದಾರೆ. ರಾಘವೇಂದ್ರ ಬಿ ಕೋಲಾರ್ ಛಾಯಾಗ್ರಹಣ, ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ‌. ಚಿತ್ರೀಕರಣ ಮುಕ್ತಾಯವಾಗಿದೆ.

    ನಿರ್ಮಾಣದ ಬಗ್ಗೆ ಚಂದ್ರಕಾಂತ್ ಪೂಜಾರಿ – ಉಮೇಶ್ ಹೆಗಡೆ, ಹಾಡುಗಳ ಬಗ್ಗೆ ಮಣಿಕಾಂತ್ ಕದ್ರಿ ಹಾಗೂ ತಮ್ಮ ಪಾತ್ರದ ಬಗ್ಗೆ ನಾಯಕಿಯರಾದ ಸಮೀಕ್ಷ, ಅಪೂರ್ವ, ರಾಧ್ಯ ಮಾತನಾಡಿದರು. ಛಾಯಾಗ್ರಾಹಕ ರಾಘವೇಂದ್ರ ಬಿ ಕೋಲಾರ್ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಟೀಸರ್

    ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ‘ರಾನಿ’ ಟೀಸರ್

    ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ ‘ರಾನಿ’ (Rani) ಸಿನಿಮಾದ ಟೀಸರ್ (Teaser) ನಾಯಕ ನಟ ಕಿರಣ್ ರಾಜ್ (Kiran Raj) ಹುಟ್ಟುಹಬ್ಬದ ದಿನ ಜುಲೈ 5 ರಂದು ಬಿಡುಗಡೆಯಾಗುತ್ತಿದೆ. ರಾನಿ  ಚಿತ್ರದ​ ನಾಯಕ ಕಿರಣ್ ರಾಜ್ ದುಬೈಗೆ ಹೋಗಿ 13 ಸಾವಿರ  ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ರಾನಿ ಚಿತ್ರದ ಟೈಟಲ್ ಅನಾವರಣಗೊಳಿಸಿದ್ದರು. ಅವರ ಈ ಸಾಹಸಕ್ಕೆ ಇಡೀ ಚಿತ್ರರಂಗವೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ನಂತರ ಬಿಡುಗಡೆಯಾದ ಪೋಸ್ಟರ್ ಚಿತ್ರದ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಿಸಿತ್ತು.

    ಈ ಬಾರಿ ಗಟ್ಟಿ ಕಥೆಯೊಂದಿಗೆ ಆಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ ಎನ್ನುವ ನಿರ್ದೇಶಕ ಗುರುತೇಜ್ ಶೆಟ್ಟಿ (Gurutej Shetty),  ಇದೊಂದು ಗ್ಯಾಂಗ್ ಸ್ಟರ್ ಸಿನಿಮಾ ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳು ಚಿತ್ರದಲ್ಲಿದೆ ಎನ್ನುತ್ತಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕಿಡಿಕಾರಿದ ನಟ ರಾಜೀವ್ ಖಂಡೇಲ್ವಾಲ್

    ರವಿಶಂಕರ್ ಮೈಕೋ ನಾಗರಾಜ್ ,ಉಗ್ರಂ ರವಿ , ಉಗ್ರಂ ಮಂಜು, ಬಿ. ಸುರೇಶ , ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೆಗ್ಡೆ ಹೀಗೆ ಮುಂತಾದ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

     

    ಸಮೀಕ್ಷಾ, ಅಪೂರ್ವ, ರಾದ್ಯಾ ಮೂವರು ಈ ಚಿತ್ರದ ನಾಯಕಿಯರು. ಮೂವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವೇಂದ್ರ ಬಿ.ಕೋಲಾರ್ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೆಶನ​​ವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡುತ್ತಿದ್ದಾರೆ. ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರವಿದು. ಇದೆ ವರ್ಷ ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ​ ಯೋಜನೆಯಲ್ಲಿದ್ದಾರೆ ನಿರ್ಮಾಪಕರು.

  • ‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

    ‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

    ಚಿತ್ರದ ಟೈಟಲ್ ಹಾಗೂ ಪೋಸ್ಟರ್ ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ ‘ರಾನಿ’ (Rani) ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.  ಕಿರಣ್ ರಾಜ್ (Kiran Raj) ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ (Gurutej Shetty) ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು (Birthday) ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು.

    ನಿರ್ದೇಶಕ ಗುರುತೇಜ್ ಶೆಟ್ಟಿ ಚಿತ್ರತಂಡ ರೆಡಿ ಮಾಡಿದ್ದ ಐವತ್ತು ಕೇಜಿ ಕೇಕ್ ಕಟ್ ಮಾಡಿ ಸಂಭ್ರಮಿಸಿದರು.  ಸ್ಟಾರ್ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶೇಕಡಾ 90 ರಷ್ಟು ಮುಕ್ತಾಯವಾಗಿದೆ.  ಬಹು ತಾರಾಗಣದ ಚಿತ್ರ ಇದಾಗಿದ್ದು,‌ ಸದ್ಯದಲ್ಲೇ  ಟೀಸರ್ ಬಿಡುಗಡೆಯಾಗಲಿದೆ.  ಇದನ್ನೂ ಓದಿ:ಮುದ್ದು ಮಗಳ ಜೊತೆಗಿನ ಚೆಂದದ ವೀಡಿಯೋ ಹಂಚಿಕೊಂಡ ಧ್ರುವ ಸರ್ಜಾ

    ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್‌, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ‌.

  • ‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಗೆ ಮಾಸ್ ಲುಕ್

    ‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಗೆ ಮಾಸ್ ಲುಕ್

    ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ,  ಗುರುತೇಜ್ ಶೆಟ್ಟಿ (Gurtej Shetty) ಕಥೆ  ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕಿರಣ್ ರಾಜ್ (Kiran Raj) ನಾಯಕರಾಗಿ ನಟಿಸುತ್ತಿರುವ ‘ರಾನಿ’ (Rani) ಚಿತ್ರದ ಪೋಸ್ಟರ್ (Poster) ಯಗಾದಿ ಹಬ್ಬಕ್ಕೆ ಬಿಡುಗಡೆಯಾಗಿದೆ. ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ (Mass Look) ಕಾಣಿಸಿಕೊಂಡಿದ್ದಾರೆ.

    ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ  ಪ್ರಶಂಸೆ ಪಡೆದುಕೊಂಡಿದ್ದರು.  ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್  ಮಾಡಿದಾರಂತೆ, ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿದೆ‌. ‘ರಾನಿ’ ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ‌.  5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ಈಗಾಗಲೇ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.   ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್‌, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ‌.

     ‘ಸಿಂಗಾರ ಸಿರಿಯೆ’ ಹಾಡು ಬರೆದಿರುವ ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.  ಸೂಕ್ಷ್ಮ ಕಥೆಯುಳ್ಳ,   ಪಕ್ಕ ಆಕ್ಷನ್ ಚಿತ್ರ ಇದಾಗಿದ್ದು, ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಬಿಡುಗಡೆ ಯಾಗಲಿದೆ.  ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು  ತಿಳಿಸುತ್ತೇವೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

  • ಹದಿಮೂರು ಸಾವಿರ ಅಡಿಯಿಂದ ಜಿಗಿದು ಸಿನಿಮಾ ಟೈಟಲ್ ಅನಾವರಣ

    ಹದಿಮೂರು ಸಾವಿರ ಅಡಿಯಿಂದ ಜಿಗಿದು ಸಿನಿಮಾ ಟೈಟಲ್ ಅನಾವರಣ

    ಟ ಕಿರಣ್ ರಾಜ್ (Kiran Raj) ‘ಕನ್ನಡತಿ’ (Kannadathi) ಧಾರಾವಾಹಿ ನಂತರ ಏನು ಮಾಡುತ್ತಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ಅದಕ್ಕೆ ಉತ್ತರ ದೊರಕಿದೆ. ಗುರುತೇಜ್ ಶೆಟ್ಟಿ (Gurutej Shetty) ನಿರ್ದೇಶಿಸುತ್ತಿರುವ ನೂತನ ಚಿತ್ರದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿದ್ದಾರೆ.  ಸಾಮಾನ್ಯವಾಗಿ ನಾಯಕ ಸಿನಿಮಾದಲ್ಲಿ ಬರುವ ಸಾಹಸ ಸನ್ನಿವೇಶಗಳಲ್ಲಿ ಸ್ವಲ್ಪ ರಿಸ್ಕ್ ತೆಗೆದುಕೊಳ್ಳುವುದು ನೋಡಿದ್ದೇವೆ. ಆದರೆ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಲು ನಾಯಕ ಕಿರಣ್ ರಾಜ್, ಭಾರೀ ಸಾಹಸ ಮಾಡಿದ್ದಾರೆ. ಇಲ್ಲಿಂದ ದೂರದ ದುಬೈಗೆ ಹೋಗಿ ಅಲ್ಲಿ ವಿಮಾನದಿಂದ ಹದಿಮೂರು ಸಾವಿರ ಅಡಿ ಮೇಲಿಂದ ಜಿಗಿದು(ಸ್ಕೈ ಡ್ರೈವ್) ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಅವರ ಮುಂದಿನ ಚಿತ್ರದ ಹೆಸರು ‘ರಾನಿ’ (Rani). ಈ ಬಗ್ಗೆ ಕಿರಣ್ ರಾಜ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ‌.

    ನನಗೆ ಸಿನಿಮಾ ಎಂದರೆ ಕನಸು‌. ಹಾಗಾಗಿ ಚಿತ್ರ ಆರಂಭದಿಂದಲೂ ಸ್ವಲ್ಪ ವಿಶೇಷ ಇರಬೇಕು ಎಂದು ಬಯಸುತ್ತೇನೆ‌. ಸಾಮಾನ್ಯವಾಗಿ ಗಣ್ಯರ ಸಮ್ಮುಖದಲ್ಲಿ ಶೀರ್ಷಿಕೆ ಅನಾವರಣವಾಗುತ್ತದೆ. ಆದರೆ ನಾನು ಸ್ವಲ್ಪ ಭಿನ್ನವಾಗಿರಲಿ ಎಂದು ಯೋಚಿಸಿ, ಸ್ಕೈಡ್ರೈವ್ ಮೂಲಕ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದೆ. “ರಾನಿ” ಈ ಚಿತ್ರದ ಹೆಸರು. ನನ್ನ ಈ ಸಾಹಸಕ್ಕೆ ಮನೆಯವರಿಂದ, ಸ್ನೇಹಿತರಿಂದ ವಿರೋಧ ವ್ಯಕ್ತವಾಯಿತು. ಆದರು ನಾನು ಅಲ್ಲಿನ ಪರಿಣಿತರಿಂದ ತರಭೇತಿ ಪಡೆದು ಈ ಸಾಹಸಕ್ಕೆ ಮುಂದಾದೆ. ಇದು ಆಕ್ಷನ್ ಓರಿಯಂಟೆಡ್ ಚಿತ್ರವಾಗಿರುವುದರಿಂದ ಚಿತ್ರದಲ್ಲೂ ಮೈನವಿರೇಳಿಸುವ ಸಾಹಸ ದೃಶ್ಯಗಳಿರುತ್ತದೆ ಎಂದರು ನಾಯಕ ಕಿರಣ್ ರಾಜ್.  ಇದನ್ನೂ ಓದಿ : ಬ್ರಹ್ಮಚಾರಿಗಳ ಪಾದಯಾತ್ರೆಗೆ ಚಾಲನೆ ನೀಡಿದ ನಟ ಧನಂಜಯ

    ಕಿರಣ್ ರಾಜ್ ಅವರ ಈ ಸಾಹಸ ನನಗೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ಆವರು ದುಬೈನಲ್ಲಿ ಅಗಸದಿಂದ ಹಾರುತ್ತಿದ್ದರೆ, ನಾನು ಇಲ್ಲಿ ದೇವರ ಬಳಿ ಪ್ರಾರ್ಥಿಸುತ್ತಿದೆ.‌ ಅವರು ಪೂರ್ತಿ ವಿಡಿಯೋ ಕಳುಹಿಸಿದ ಮೇಲೆ ನೆಮ್ಮದಿಯ ನಿಟ್ಟುಸಿರು ಬಿಟ್ಟೆ‌. ಕಿರಣ್ ರಾಜ್ ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. “ಬಡ್ಡೀಸ್” ನಂತರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಈ ಚಿತ್ರ ಬರುತ್ತಿದೆ. ಮುಂದಿನ ಕೆಲವೆ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡುತ್ತೇನೆ ಎಂದರು ನಿರ್ದೇಶಕ ಗುರುತೇಜ್ ಶೆಟ್ಟಿ.

    ರಾಜಕುಮಾರ್, ವಿಷ್ಣುವರ್ಧನ್ ಅವರ ಚಿತ್ರಗಳನ್ನು ನೋಡಿ ಬೆಳೆದವರು ನಾವು. ಮೂಲತಃ ಉದ್ಯಮಿಗಳು. ಚಿತ್ರ ಮಾಡುವ ಆಸೆಯಿತ್ತು. ಗುರುತೇಜ್ ಶೆಟ್ಟಿ ಅವರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು ಎಂದರು ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗಡೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k