Tag: ಗುರುದೇವ ಹೊಯ್ಸಳ

  • ಕಿರುತೆರೆಯಲ್ಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾ

    ಕಿರುತೆರೆಯಲ್ಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾ

    ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಯೋಜನೆ ಮಾಡಿದೆ. ಅದರಲ್ಲಿ ನಟ ರಾಕ್ಷಸ ಡಾಲಿ ಧನಂಜಯ್ (Dolly Dhananjay) ಅಭಿನಯದ ‘ಗುರುದೇವ್ ಹೊಯ್ಸಳ’ (Gurudeva Hoysala) ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಈ ಸಿನಿಮಾವು ಕಿರುತೆರೆಯಲ್ಲಿ ರಾರಾಜಿಸಲಿದೆ.

    ಪಟ್ಟಣದ ಅತ್ಯಂತ ನಿಷ್ಠಾವಂತ ಹಾಗು ಶಕ್ತಿಶಾಲಿ ಪೊಲೀಸ್ ಅಧಿಕಾರಿ ಗುರುದೇವ್ ಹೊಯ್ಸಳ. ರಾಜಕಾರಣಿಗಳು ಹಾಗು ದರೋಡೆಕೋರರಿಂದ ಭೂ ಮಾಫಿಯಾವನ್ನು ತಡೆಗಟ್ಟುವಲ್ಲಿ ಗುರುದೇವ್ ಹೇಗೆ ಯಶಸ್ವಿಯಾಗುತ್ತಾರೆ ಎಂಬುದು ಈ ಸಿನಿಮಾದ ಮುಖ್ಯ ಕಥೆ. ಇನ್ನು ಇದೊಂದು ಸಾಮಾನ್ಯ ಪೊಲೀಸ್ ವಿಲನ್ ಕತೆ ಮಾತ್ರವಲ್ಲದೆ ಭಾಷೆ-ನೆಲದ ವಿಷಯವನ್ನು ಒಳಗೊಂಡ ಸುಂದರ ಕತೆಯಾಗಿದೆ. ಇದನ್ನೂ ಓದಿ:ನಾಳೆಯಿಂದ ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್: ಚಿತ್ರೋದ್ಯಮ ಭಾಗಿ

    ‘ಹೊಯ್ಸಳ’ ಸಿನಿಮಾದ ನಾಯಕನಾಗಿ ಡಾಲಿ ಧನಂಜಯ್ ಹಾಗು ನಾಯಕಿಯಾಗಿ ಅಮೃತ ಅಯ್ಯಂಗಾರ್ (Amrita Iyengar) ನಟಿಸಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಇನ್ನು ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿರುವ ಈ ಸಿನಿಮಾವು ಇದೇ ಮೊದಲ ಬಾರಿಗೆ ಕಿರುತೆರೆಯ ಮೂಲಕ ನಿಮ್ಮ ಮನೆಯಂಗಳಕ್ಕೆ ಬರಲಿದೆ.

    ಈ ನಿಟ್ಟಿನಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗಾಗಿ ಉಡುಗೊರೆಯನ್ನು ನೀಡಲು ಸಜ್ಜಾಗಿದೆ. ‘ಗುರುದೇವ್ ಹೊಯ್ಸಳ’ ಸಿನಿಮಾವನ್ನು ಟಿವಿಯಲ್ಲಿ ನೋಡಿ, ಅಲ್ಲಿ ಕೇಳುವ 2 ಸರಳ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿ 43 ಇಂಚಿನ LED TV ಯನ್ನು ನೀಡಲಿದೆ.  ಇದೇ ಆಗಸ್ಟ್ 13 ರಂದು ಭಾನುವಾರ ಸಂಜೆ 6.00 ಕ್ಕೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲಿ ಧನಂಜಯ್ ಈಗ ಕೋಟಿ ಕಾರಿನ ಒಡೆಯ

    ಡಾಲಿ ಧನಂಜಯ್ ಈಗ ಕೋಟಿ ಕಾರಿನ ಒಡೆಯ

    ನಂಜಯ್ (Dhananjay) ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದೆ. ಬಾಕ್ಸಾಫೀಸ್‌ನಲ್ಲಿ ಸಿನಿಮಾ ಸೌಂಡ್ ಮಾಡ್ತಿದೆ. 25ನೇ ಸಿನಿಮಾ ರಿಲೀಸ್ ಆಗಿರುವ ಶುಭ ಸಂದರ್ಭದಲ್ಲಿ ಡಾಲಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಈ ಕುರಿತು ಡಾಲಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹೇಳಿಕೊಂಡಿದ್ದಾರೆ.

    ಡಾಲಿ- ಅಮೃತಾ ನಟನೆಯ `ಹೊಯ್ಸಳ’ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಾಲಿ, ಅಮೃತಾ, ನವೀನ್ ಶಂಕರ್, ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. `ಗುರುದೇವ್ ಹೊಯ್ಸಳ’ ಕಥೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಾಲಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ದುಬಾರಿ ಬೆಲೆಯ Toyota Vellfire ಕಾರನ್ನ ಚಿತ್ರದ ನಿರ್ಮಾಪಕರಾದ ಕಾರ್ತಿಕ್- ಯೋಗಿ ಡಾಲಿಗೆ ಉಡುಗೊರೆ ನೀಡಿದ್ದಾರೆ.

    25ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ. ಲವ್‌ ಯೂ ನಾವು ಒಟ್ಟಿಗೆ ಮಾಡಲಿರುವ ಹೆಚ್ಚು ಹೆಚ್ಚು ಕೆಲಸಗಳಿಗಾಗಿ ಚೀರ್ಸ್. ಇಂತಹ ಒಳ್ಳೆಯ ನೆನಪುಗಳಿಗೆ ಧನ್ಯವಾದಗಳು ಎಂದು ಡಾಲಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೆ ಡಾಲಿ ಇದೀಗ ಕೋಟಿ ಕಾರಿನ ಒಡೆಯನಾಗಿದ್ದಾರೆ. ನಿರ್ಮಾಪಕರಾದ ಕಾರ್ತಿಕ್-ಡಾಲಿ ಉಡುಗೊರೆ ನೀಡಿರುವ Toyota Vellfire ಕಾರಿಗೆ 1 ಕೋಟಿ ಬೆಲೆಯದಾಗಿದೆ.

  • ‘ಬ್ಯಾರೇನೇ ಐತಿ’ ಅಂತ ಬಂದ ಗುರುದೇವ್ ಹೊಯ್ಸಳ

    ‘ಬ್ಯಾರೇನೇ ಐತಿ’ ಅಂತ ಬಂದ ಗುರುದೇವ್ ಹೊಯ್ಸಳ

    ತ್ತರ ಕರ್ನಾಟಕ ಭಾಗದಲ್ಲೇ ಹೆಚ್ಚುವರಿ ಚಿತ್ರೀಕರಣ ಮಾಡಿರುವ ‘ಗುರುದೇವ್ ಹೊಯ್ಸಳ’ (Gurudev Hoysala) ಚಿತ್ರಕ್ಕೂ ಹಾಗೂ ಉತ್ತರ ಕರ್ನಾಟಕಕ್ಕೂ ಏನೋ ಒಂದು ವಿಶೇಷ ಕನೆಕ್ಷನ್ ಇರುವುದಂತೂ ಹೌದು. ಇದನ್ನು ಚಿತ್ರತಂಡವೇ ಸಾಕಷ್ಟು ಬಾರಿ ಹೇಳಿದ್ದುಂಟು. ಇದಕ್ಕೆ ಸರಿಯಾಗಿ ಇಂದು ‘ಗುರುದೇವ್ ಹೊಯ್ಸಳ’ ಸಿನೆಮಾ ತಂಡ ಮೂರನೇ ಹಾಡನ್ನು (Song)  ಬಿಡುಗಡೆ ಮಾಡಿದೆ.

    ‘ಬ್ಯಾರೇನೇ ಐತಿ’ (Barene Aiti) ಎನ್ನುವ ಈ ಹಾಡು ಉತ್ತರ ಕರ್ನಾಟಕ ಭಾಗದಲ್ಲಿ ವಾಸವಾಗಿರುವ ಅಲೆಮಾರಿಗಳ ಜೀವನ ಹೇಗಿರುತ್ತದೆ ಎಂದು ವರ್ಣನೆ ಮಾಡುತ್ತದೆ. ಅಲೆಮಾರಿಗಳ ಬಗ್ಗೆ ಇರುವ ಈ ಹಾಡಿಗೆ ಯೋಗರಾಜ್ ಭಟ್ (Yogaraj Bhatt) ರವರು ಸಾಹಿತ್ಯ ಬರೆದಿದ್ದು, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ರವರು ಹಾಡಿಗೆ ಹೊಸ ರೂಪ ಕೊಟ್ಟು, ರಚನೆ ಮಾಡಿ ಬಹಳ ಸೊಗಸಾಗಿ ಹಾಡಿದ್ದಾರೆ. ಇದನ್ನೂ ಓದಿ:ತೆಲಂಗಾಣಕ್ಕೆ ತೆರಳಿ ಪತ್ನಿಗೆ ವಸಿಷ್ಠ ಸಿಂಹ ಸರ್ಪ್ರೈಸ್

    ಈ ಹಿಂದೆ ರತ್ನನ್ ಪ್ರಪಂಚ ಚಿತ್ರದಲ್ಲಿ ‘ಅಲೆಮಾರಿಯೇ’ ಎಂಬ ಸಾಲುಗಳನ್ನು ಹೊಂದಿರುವ ಹಾಡಿನಲ್ಲಿ ಧನಂಜಯ (Dhananjay) ಕಾಣಿಸಿಕೊಂಡಿದ್ದರು ಎನ್ನುವುದು ಮತ್ತೊಂದು ವಿಶೇಷ. ಆದರೇ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ಅಲೆಮಾರಿಗಳಿಗೆ ವಿಶೇಷ ಪ್ರಾಮುಖ್ಯತೆ ಸಿಕ್ಕಂತಿದೆ. ಈ ಚಿತ್ರಕ್ಕೂ ಅಲೆಮಾರಿಗಳಿಗೂ ಏನು ಸಂಬಂಧ, ಯಾಕೆ ಅವರ ಪಂಗಡವನ್ನು ಈ ಸಿನಿಮಾ ಹಾಡಿನಲ್ಲಿ ಬಳಸಿಕೊಂಡಿದ್ದಾರೆ ಎನ್ನುವುದು ಸಿನೆಮಾದಲ್ಲೇ ನೋಡಬೇಕಿದೆ.

    ಇನ್ನೇನು ಬಿಡುಗಡೆಯ ಬಿರುಸಿನಲ್ಲಿ ಇರುವ ಡಾಲಿ ಧನಂಜಯ ಅಭಿನಯದ 25ನೇ ಸಿನೆಮಾ ‘ಗುರುದೇವ್ ಹೊಯ್ಸಳ’, ದಿನೇ ದಿನೇ ಸಿನಿಪ್ರಿಯರ ಕುತೂಹಲ ಹೆಚ್ಚಿಸುತ್ತಿದೆ. ಮಾಸ್ ಟ್ರೈಲರ್, ಹಿಟ್ ಹಾಡುಗಳನ್ನ ಬಿಡುಗಡೆ ಮಾಡಿರುವ ಚಿತ್ರತಂಡ ಈಗಾಗಲೇ ಅರ್ಧ ಸಕ್ಸಸ್ ಕಂಡಂತಿದೆ.

    ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಸಿನಿಮಾ ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ವಿಜಯ್ ಎನ್ ರವರು ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

    ಈ ಚಿತ್ರದಲ್ಲಿ ಮಾಸ್ ಮತ್ತು ಖಡಕ್ ಪೊಲೀಸ್ ಪಾತ್ರ ಧರಿಸಿರುವ ಡಾಲಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

  • ಡಾಲಿ ಜೊತೆನೇ ಯಾಕೆ ಅಮೃತಾ ಸಿನಿಮಾ ಮಾಡ್ತಾರೆ? ಕಾಲೆಳೆದ ಕಿಚ್ಚ

    ಡಾಲಿ ಜೊತೆನೇ ಯಾಕೆ ಅಮೃತಾ ಸಿನಿಮಾ ಮಾಡ್ತಾರೆ? ಕಾಲೆಳೆದ ಕಿಚ್ಚ

    ಡಾಲಿ (Dali) ಮತ್ತು ಅಮೃತಾ ಅಯ್ಯಂಗಾರ್ `ಗುರುದೇವ ಹೊಯ್ಸಳ’ (Gurudeva Hoysala) ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ. ಟ್ರೈಲರ್‌ ಲಾಂಚ್ ಕಾರ್ಯಕ್ರಮದಲ್ಲಿ ಡಾಲಿ ಮತ್ತು ಅಮೃತಾಗೆ ಕಿಚ್ಚ ಸುದೀಪ್ ಕಾಲೆಳೆದಿದ್ದಾರೆ. ಡಾಲಿ ಜೊತೆನೇ ನೀವ್ಯಾಕೆ ಸಿನಿಮಾ ಮಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮತ್ತೊಂದು ಹೊಸ ಚಿತ್ರ ಒಪ್ಪಿಕೊಂಡ ಕ್ರೇಜಿಸ್ಟಾರ್ ರವಿಚಂದ್ರನ್

    ತೆರೆಯ ಮೇಲೆ ಮೋಡಿ ಮಾಡಿರುವ ನಟರಾಕ್ಷಸ ಡಾಲಿ- ಅಮೃತಾ ಜೋಡಿ `ಪಾಪ್‌ಕಾರ್ನ್ ಮಂಕಿ ಟೈಗರ್’ ಮತ್ತು `ಬಡವ ರಾಸ್ಕಲ್’, `ಗುರುದೇವ ಹೊಯ್ಸಳ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಮಧ್ಯೆ ಒಳ್ಳೆಯ ಆಪ್ತತೆ ಬೆಳೆದಿದೆ. ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಕೂಡಯಿದೆ. ಆದರೆ, ಇದನ್ನು ಇಬ್ಬರು ಒಪ್ಪಿಕೊಂಡಿಲ್ಲ. ಅವರ ಮಧ್ಯೆ ಪ್ರೀತಿ ಇದೆಯೋ ಇಲ್ಲವೋ ಒಳ್ಳೆಯ ಫ್ರೆಂಡ್‌ಶಿಪ್ ಅಂತೂ ಇದೆ. ಸುದೀಪ್ (Sudeep) ವೇದಿಕೆ ಏರಿದಾಗ ಇವರ ವಿಚಾರವನ್ನು ಇಟ್ಟುಕೊಂಡು ಎಲ್ಲರನ್ನೂ ನಕ್ಕು ನಗಿಸಿದ್ದಾರೆ.

    ಮೊದಲು ವೇದಿಕೆ ಏರಿದ ಅಮೃತಾ ಅವರು ಡಾಲಿಯನ್ನು ನಾಲ್ಕೈದು ಬಾರಿ ಹೊಗಳಿದರು. ಅವರು ಸುಂದರವಾಗಿ ಕಾಣ್ತಿದಾರೆ ಎಂದು ಮೆಚ್ಚುಗೆ ಸೂಚಿಸಿದರು. ನಂತರ ಸುದೀಪ್ ಜೊತೆ ವೇದಿಕೆ ಏರಿದ ಡಾಲಿ ಅವರು ಒಂದೇ ಬಾರಿ ಅಮೃತಾ ಹೆಸರನ್ನು ಹೇಳಿದರು. ಇದನ್ನು ಸುದೀಪ್ ನೆನಪಿಟ್ಟುಕೊಂಡಿದ್ದರು. ಧನಂಜಯ್ ಈ ರೀತಿ ಒಂದೇ ಮಾತಲ್ಲಿ ಅಮೃತಾ ಅವರ ಬಗ್ಗೆ ಹೇಳಿದ್ದು ನ್ಯಾಯ ಅಲ್ಲ ಎಂದರು ಕಿಚ್ಚ.

    ಆಗ ಡಾಲಿ ಅಮೃತಾ ಅವರನ್ನು ಹೊಗಳಲು ಮುಂದಾಗಿದ್ದಾರೆ. ನಟಿ ಬಗ್ಗೆ ಮಾತಾಡಿ ಎಂದು ಕಿಚ್ಚ ಕೂಡ ಕಾಲೆಳೆದಿದ್ದಾರೆ.  ಮೂರು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ವಿ. ಎಲ್ಲಾ ಸಿನಿಮಾಗಳಲ್ಲೂ ಅದ್ಭುತವಾಗಿ ಕೆಲಸ ಮಾಡಿದ್ದಾರೆ ಎಂದು ಡಾಲಿ ಹೇಳುತ್ತಿದ್ದಂತೆ ಸುದೀಪ್ ಅವರು ಮತ್ತೆ ಕಾಲೆಳೆಯಲು ಮುಂದಾದರು. ಹೌದು ನೀವ್ಯಾಕೆ ಇವರೊಟ್ಟಿಗೆ ಕೆಲಸ ಮಾಡ್ತೀರಾ ಬೇರೆ ಕಲಾವಿದರಿಗೆ ಡೇಟ್ಸ್ ಕೊಡಿ. ಅವರ ಜೊತೆಯೂ ಕೆಲಸ ಮಾಡಿ. ಇವರೊಟ್ಟಿಗೆ ಸಿನಿಮಾ ಮಾಡ್ತಾ ಇದ್ರೆ ಬೇರೆ ಹೀರೋಗಳಿಗೆ ನೀವು ಹೇಗೆ ಸಿಗ್ತೀರಾ ಇಷ್ಟೆಲ್ಲ ಮಾಡಿದ್ರೂ ನಿಮ್ಮನ್ನು ಹೊಗಳುತ್ತಿಲ್ಲ ಎಂದು ಅಮೃತಾಗೆ ಸುದೀಪ್ ಹೇಳಿದರು. ಈ ಮಾತನ್ನು ಕೇಳಿ ಎಲ್ಲರೂ ನಕ್ಕರು. ಕೊನೆಯಲ್ಲಿ ಇವರ ಕೆಮಿಸ್ಟ್ರಿ ಬಗ್ಗೆ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಕಾರ್ತಿಕ್ ಮತ್ತು ಯೋಗಿ ಜಿ ನಿರ್ಮಾಣದ `ಗುರುದೇವ ಹೊಯ್ಸಳ’ ಸಿನಿಮಾ ಇದೇ ಮಾರ್ಚ್ 30ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. ಡಾಲಿ – ಅಮೃತಾ ಜೋಡಿ ಈ ಬಾರಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಕಾದುನೋಡನೋಡಬೇಕಿದೆ.