Tag: ಗುರುಮಠಕಲ್

  • ಯಾದಗಿರಿ | ಅನ್ನಭಾಗ್ಯ ಅಕ್ಕಿ ಬಳಿಕ ಜೋಳ, ಅವಧಿ ಮೀರಿದ ಹಾಲಿನ ಪೌಡರ್ ಪ್ಯಾಕೆಟ್ ಸೇರಿ ಅಕ್ರಮ ಜಾಲ ಪತ್ತೆ

    ಯಾದಗಿರಿ | ಅನ್ನಭಾಗ್ಯ ಅಕ್ಕಿ ಬಳಿಕ ಜೋಳ, ಅವಧಿ ಮೀರಿದ ಹಾಲಿನ ಪೌಡರ್ ಪ್ಯಾಕೆಟ್ ಸೇರಿ ಅಕ್ರಮ ಜಾಲ ಪತ್ತೆ

    ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರದ ಜೋಳ ಹಾಗೂ ಬಡಮಕ್ಕಳ ಪೌಷ್ಟಿಕತೆ ಹೆಚ್ಚಿಸುವ ಕ್ಷೀರಭಾಗ್ಯ ಯೋಜನೆಯ, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್‌ಗಳ ಪ್ಯಾಕೆಟ್‌ಗಳನ್ನೂ ವಿದೇಶಕ್ಕೆ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್‌ನ ಲಕ್ಷ್ಮೀ ತಿಮ್ಮಪ್ಪ ಹತ್ತಿ ಮಿಲ್‌ನಲ್ಲಿ ಅಕ್ರಮ ಬಯಲಾಗಿದೆ. ಪಡಿತರ ಅಕ್ಕಿ ಇದೆ ಎಂದು ದಾಳಿ ಮಾಡಿ ಪರಿಶೀಲನೆ ಮಾಡಿದಾಗ ಮತ್ತಷ್ಟು ದಂಧೆ ಬಯಲಾಗಿದೆ.ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಟನ್‌ಗಟ್ಟಲೇ ಪಡಿತರ ಅಕ್ಕಿ ದಾಸ್ತಾನು ಜಪ್ತಿ ಮಾಡಲು ತೆರಳಿದ್ದ ತಂಡ ಅಕ್ಕಿ ಜೊತೆಗೆ ಜೋಳ ಹಾಗೂ ಹಾಲಿನ ಪೌಡರ್‌ನ ಚೀಲಗಳನ್ನೂ ಕಂಡು ಶಾಕ್ ಆಗಿದೆ.

    ಅಕ್ಕಿ ದಾಸ್ತಾನು ಜಪ್ತಿಯ ವೇಳೆ, ಗೋದಾಮಿನ ಮತ್ತೊಂದು ಭಾಗದಲ್ಲಿ ಸರ್ಕಾರಿ ಜೋಳ ಹಾಗೂ ನವೆಂಬರ್ 2024ರಲ್ಲೇ ಅವಧಿ ಮೀರಿದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ದಾಸ್ತಾನು ಸಿಕ್ಕಿದೆ. 200 ಕ್ವಿಂಟಾಲ್‌ನಷ್ಟು ಜೋಳದ ಚೀಲಗಳು ಹಾಗೂ 300 ಕೇಜಿಗೂ ಹೆಚ್ಚು ಹಾಲಿನ ಪೌಡರ್ ಅಂದಾಜು 20 ಚೀಲ ಗೋಧಿ ಪತ್ತೆಯಾಗಿದೆ.ಇದನ್ನೂ ಓದಿ: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು – ತೆಲಂಗಾಣ ಕೋರ್ಟ್ ಆದೇಶ

  • ಸ್ಲೋ ಪಾಯ್ಸನ್ ನೀಡಿ ಪತಿಯ ಹತ್ಯೆ ಆರೋಪ – ವಿಡಿಯೋ ಸಾಕ್ಷಿ ಇದ್ರೂ ಪತ್ನಿಯನ್ನು ಬಂಧಿಸದ ಪೊಲೀಸರು

    ಸ್ಲೋ ಪಾಯ್ಸನ್ ನೀಡಿ ಪತಿಯ ಹತ್ಯೆ ಆರೋಪ – ವಿಡಿಯೋ ಸಾಕ್ಷಿ ಇದ್ರೂ ಪತ್ನಿಯನ್ನು ಬಂಧಿಸದ ಪೊಲೀಸರು

    ಯಾದಗಿರಿ: ಪತಿಯನ್ನು ಸ್ಲೋ ಪಾಯ್ಸನ್ ನೀಡಿ ಪತ್ನಿ ಹತ್ಯೆ ಮಾಡಿರುವ ಘಟನೆ ಯಾದಗಿರಿಯ (Yadagiri) ಗುರುಮಠಕಲ್‌ನ ಗಡ್ಡಿ ಮೊಹಲ್ಲಾನಲ್ಲಿ ನಡೆದಿದೆ.

    ಮೃತನನ್ನು ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಆತನ ಪತ್ನಿಯ ವಿರುದ್ಧ ಸ್ಲೋ ಪಾಯ್ಸನ್ ನೀಡಿದ ಆರೋಪ ಕೇಳಿಬಂದಿದೆ.ಇದನ್ನೂ ಓದಿ: ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಸನ್ಮಾನಿಸಿದ ಸಿಎಂ

    ಕಳೆದ ಒಂದೂವರೆ ವರ್ಷದ ಹಿಂದೆ ಗಂಡನಿಗೆ ಕೆಮ್ಮು ಇದೆ ಎಂದು ಸ್ಲೋ ಪಾಯ್ಸನ್ ಹಾಕಿ ಹೆಂಡತಿ ಕೊಲೆ ಮಾಡಿದ್ದಳು. ಆದರೆ ಗಂಡ ಸಾಯುವ ಮುನ್ನ ಸೆಲ್ಫೀ ವಿಡಿಯೋ ಮಾಡಿ, ತನ್ನ ತಮ್ಮ ಮಹ್ಮದ್ ಇಕ್ಬಾಲ್‌ಗೆ ಕಳುಹಿಸಿದ್ದರು. ವಿಡಿಯೋದಲ್ಲಿ ನನಗೆ ಸರಿಯಾಗಿ ಆಸ್ಪತ್ರೆಗೆ ತೋರಿಸುತ್ತಿಲ್ಲ, ಊಟನೂ ಹಾಕ್ತಿಲ್ಲ, ವಿಷ ಹಾಕಿರುವ ಅನುಮಾನವಿದೆ ಎಂದು ತಿಳಿಸಿದ್ದರು.

    ಈ ಕುರಿತು ಮಹಮ್ಮದ್ ಅಲಿ ತಾಯಿ ಗುರುಮಠಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಹೂತ್ತಿದ್ದ ಶವವನ್ನು ತೆಗೆದು ಪೊಲೀಸರು ಪರಿಶೀಲನೆ ನಡೆಸಿದ್ದರು. ಜೊತೆಗೆ ವಿಡಿಯೋ ಸಾಕ್ಷಿಯಿರುವ ಬಗ್ಗೆಯೂ ಗೊತ್ತಿತ್ತು. ಆದರೆ ಇಷ್ಟೆಲ್ಲ ಇದ್ದರೂ ಪೊಲೀಸರು ಮಾತ್ರ ಪತ್ನಿಯನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ನ್ಯಾಯಕ್ಕಾಗಿ ವೃದ್ಧ ತಾಯಿ, ತಮ್ಮ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ.ಇದನ್ನೂ ಓದಿ: RTO ಕಣ್ತಪ್ಪಿಸಿ ಓಡಾಡ್ತಿದ್ದ ಫೆರಾರಿ ಕಾರು ಸೀಜ್‌ – 1.58 ಕೋಟಿ ತೆರಿಗೆ ಕಟ್ಟಲು ಸಂಜೆವರೆಗೆ ಡೆಡ್‌ಲೈನ್‌ ಫಿಕ್ಸ್‌

  • ನವಜಾತ ಶಿಶುಗಳ ಸರಣಿ ಸಾವು – ಎರಡು ವಾರದ ಅಂತರದಲ್ಲಿ ಮೂರು ಶಿಶುಗಳ ಮರಣ

    ನವಜಾತ ಶಿಶುಗಳ ಸರಣಿ ಸಾವು – ಎರಡು ವಾರದ ಅಂತರದಲ್ಲಿ ಮೂರು ಶಿಶುಗಳ ಮರಣ

    ಯಾದಗಿರಿ: ಜಿಲ್ಲೆಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲಿ ಮೂರು ಶಿಶುಗಳು ಮೃತಪಟ್ಟಿವೆ. ಈ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್ (Gurumitkal) ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ನಿನ್ನೆ (ಎ.08) ತಪಾಸಣೆಗಾಗಿ ಗರ್ಭಿಣಿ ಗಾಯತ್ರಿ ದಾಸರಿ ಎಂಬವರು ಗುರುಮಠಕಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ವೈದ್ಯರು ಕೆಲವು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಹೋಗಲು ಸೂಚಿಸಿದ್ದರು. ಆದರೆ ತಡರಾತ್ರಿ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.ಇದನ್ನೂ ಓದಿ: ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಸಣ್ಣ ನೀರಾವರಿ ಇಲಾಖೆಯ 1.43 ಲಕ್ಷ ರೂ. ಮೌಲ್ಯದ ಪೀಠೋಪಕರಣ ಜಪ್ತಿ

    ಆಸ್ಪತ್ರೆಗೆ ಬರುತ್ತಲೇ ಮಗುವಿನ ಅರ್ಧದೇಹ ಹೊರಗೆ ಬಂದಿತ್ತು. ಆದರೆ ಈ ಸಮಯದಲ್ಲಿ ಜಿಲ್ಲಾಸ್ಪತ್ರೆಗೆ ಹೋಗಲು ಯಾವುದೇ ಅಂಬುಲೆನ್ಸ್ ಇರಲಿಲ್ಲ. ಹೀಗಾಗಿ, ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ಹೆರಿಗೆ ಮಾಡಿದ್ದಾರೆ. ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.

    ಶಿಶು ಮೃತಪಟ್ಟ ಹಿನ್ನೆಲೆ ಡಿಹೆಚ್‌ಓ ಮಹೇಶ್ ಬಿರಾದಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೇದೆ ಆತ್ಮಹತ್ಯೆ

     

  • ಯಾದಗಿರಿ | ಮಳೆಯ ಅವಾಂತರಕ್ಕೆ ಶೆಡ್ ಗೋಡೆ ಕುಸಿದು ವೃದ್ಧೆ ಸಾವು

    ಯಾದಗಿರಿ | ಮಳೆಯ ಅವಾಂತರಕ್ಕೆ ಶೆಡ್ ಗೋಡೆ ಕುಸಿದು ವೃದ್ಧೆ ಸಾವು

    ಯಾದಗಿರಿ: ಮಳೆಯ ಅವಾಂತರಕ್ಕೆ ಟಿನ್ ಶೆಡ್ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್ (Gurumatkal) ತಾಲೂಕಿನ ಚಿಂತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ

    ಮೃತ ವೃದ್ಧೆಯನ್ನು ಚಿಂತನಹಳ್ಳಿ ಗ್ರಾಮದ ನಿವಾಸಿ ಗುಂಜಲಮ್ಮ (68) ಎಂದು ಗುರುತಿಸಲಾಗಿದೆ.

    ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ರಾತ್ರಿ ಮಲಗಿರುವಾಗ ಸುರಿದ ಮಳೆಯ ರಭಸಕ್ಕೆ ಟಿನ್ ಶೆಡ್ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಯ ಜೊತೆಗಿದ್ದ ಆಕೆಯ ಸಹೋದರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಗುರುಮಠಕಲ್ ಪೊಲೀಸ್ ಠಾಣಾ (Gurumatkal Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

  • ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನಿಗೆ ಚಾಕಲೇಟ್ ಕೊಡಿಸಿ ಕೊಲೆ!

    ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನಿಗೆ ಚಾಕಲೇಟ್ ಕೊಡಿಸಿ ಕೊಲೆ!

    ಯಾದಗಿರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪುತ್ರನಿಗೆ ಚಾಕಲೇಟ್ ಕೊಡಿಸಿ ಪ್ರಿಯಕರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುರುಮಠಕಲ್ (Gurumatkal) ತಾಲೂಕಿನ ಕಾಕಲವಾರ (Kakalwar) ಗ್ರಾಮದಲ್ಲಿ ನಡೆದಿದೆ.

    ಮೃತ ಬಾಲಕನನ್ನು 11 ವರ್ಷದ ನರೇಂದ್ರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ಟೆಸ್ಟ್‌ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಜೋ ರೂಟ್‌

    ಹಲವು ವರ್ಷಗಳಿಂದ ನರೇಂದ್ರನ ತಾಯಿ ಗೋವಿಂದಮ್ಮಳ ಜೊತೆ ಅಬ್ದುಲ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಆರೋಪಿ ಅಬ್ದುಲ್ ಗೋವಿಂದಮ್ಮಳನ್ನು ಓಡಿ ಹೋಗಿ ಮದುವೆಯಾಗೋಣ ಎಂದು ಕರೆದಿದ್ದ. ಆದರೆ ಗೋವಿಂದಮ್ಮ ಮಗನಿಗಾಗಿ ಓಡಿ ಹೋಗಿ ಮದುವೆಯಾಗುವುದನ್ನು ನಿರಾಕರಿಸಿದ್ದಳು. ಆಕೆಯ ಮಗನನ್ನು ಕಿರಾಣಿ ಅಂಗಡಿಗೆ ಕರೆದುಕೊಂಡು ಹೋಗಿ ಚಾಕಲೇಟ್ ಕೊಡಿಸಿದ್ದ. ಬಳಿಕ ಅಲ್ಲಿಂದ ಬಾಲಕನನ್ನು ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ. ಆಕೆಯನ್ನು ವರಿಸಿಕೊಳ್ಳಲು ಈ ಕೃತ್ಯವನ್ನು ಎಸಗಿದ್ದ.

    ಸೆ.30ರಂದು ಅಬ್ದುಲ್ ಬಾಲಕನನ್ನು ಕೊಲೆ ಮಾಡಿದ್ದು, ಅನುಮಾನಾಸ್ಪದವಾಗಿ ಕಂಡಿದೆ. ತನಿಖೆ ನಡೆಸಿದಾಗ ಕಿರಾಣಿ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿ ಬಾಲಕನನ್ನು ಕರೆದೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನ ಸಾವು ನಡೆದ 9 ದಿನಗಳ ಬಳಿಕ ಪ್ರಕರಣ ಬೇಧಿಸಿ ಆರೋಪಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

    ಸದ್ಯ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಂಜು ವೆಡ್ಸ್ ಗೀತಾ 2 : ಮಂಗ್ಲಿ ಹಾಡಿಗೆ ಸೊಂಟ ಬಳುಕಿಸಿದ ರಾಗಿಣಿ

  • ಮಾಜಿ ಗ್ರಾಪಂ ಸದಸ್ಯನಿಂದ 120 ಎಕರೆ ಕೆರೆ ಭೂಮಿ ಕಬಳಿಕೆ!

    ಮಾಜಿ ಗ್ರಾಪಂ ಸದಸ್ಯನಿಂದ 120 ಎಕರೆ ಕೆರೆ ಭೂಮಿ ಕಬಳಿಕೆ!

    – ಲಕ್ಷ ಲಕ್ಷ ಹಣ ಪಡೆದು ಜಾಗ ಲೀಸ್‍ಗೆ ಕೊಟ್ಟ ಭೂಪ

    ಯಾದಗಿರಿ: ಕೃಷಿಗೆ ಉತ್ತೇಜನ ಸಿಗಲಿ, ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರದಿರಲಿ ಎಂಬ ಉದ್ದೇಶದಿಂದ ಸರ್ಕಾರ ಯಾದಗಿರಿಯ (Yadgir) ಗುರುಮಠಕಲ್‍ನ (Gurumitkal) ಬದ್ದೆಪಲ್ಲಿ ಗ್ರಾಮದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಕೆರೆ ನಿರ್ಮಾಣ ಮಾಡಿತ್ತು. ಕಳೆದ 15 ವರ್ಷಗಳಿಂದ ಗ್ರಾಮದ ಪ್ರಭಾವಿ ವ್ಯಕ್ತಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯನೊಬ್ಬ ಬರೋಬ್ಬರಿ 120 ಎಕರೆ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಲಕ್ಷ ಲಕ್ಷ ಹಣ ಪಡೆದು ಈ ಭೂಮಿಯನ್ನು ಲೀಸ್‍ಗೆ ನೀಡಿದ್ದಾನೆ. ಇದರಿಂದ ಕೆರೆ ನೀರು ನಂಬಿ ಕೃಷಿ ಮಾಡಬೇಕಿದ್ದ ನೂರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಬದ್ದೆಪಲ್ಲಿ ಗ್ರಾಮದಲ್ಲಿ ಸರ್ಕಾರ 140 ಎಕರೆ ಜಮೀನಿನಲ್ಲಿ ಕೆರೆ ನಿರ್ಮಾಣ ಮಾಡಿತ್ತು. ಇದರಿಂದ ರೈತರಿಗೆ ಅನುಕೂಲವಾಗಿತ್ತು. ಆ ಕೆರೆಯನ್ನೇ ಬಂಡವಾಳ ಮಾಡಿಕೊಂಡ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಅಭಿಮನ್ಯು ಸರ್ಕಾರಿ ಜಮೀನು ಕಬಳಿಕೆ ಮಾಡಿಕೊಂಡಿದ್ದಾನೆ. ಕೆರೆಗೆ ಹತ್ತಿರದಲ್ಲೇ ಆತನ 20 ಎಕರೆ ಜಮೀನಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಆತ ಬೇಸಿಗೆಯಲ್ಲಿ ಕೆರೆಯ ನೀರನ್ನು ಖಾಲಿ ಮಾಡಿ ಕಳೆದ 15 ವರ್ಷಗಳಿಂದ ಇಡೀ ಕೆರೆಯನ್ನ ಒತ್ತುವರಿ ಮಾಡಿ 120 ಎಕರೆ ಜಮೀನಿನನ್ನು ತನ್ನ ವಶಕ್ಕೆ ಪಡೆದಿದ್ದಾನೆ. ಇದನ್ನೂ ಓದಿ: ಮೀಸಲಾತಿಗೆ ನೆಹರು ವಿರೋಧ, ಅಂಬೇಡ್ಕರ್‌ಗೆ ಭಾರತರತ್ನ ಕೊಡುವ ಮನಸ್ಸು ಕಾಂಗ್ರೆಸ್‌ಗೆ ಇರಲಿಲ್ಲ: ಮೋದಿ ಕಿಡಿ

    ಈ ಜಾಗದಲ್ಲಿ ವಾಣಿಜ್ಯ ಬೆಳೆ ಖರ್ಬೂಜ ಬೆಳೆಯುತ್ತಿದ್ದಾನೆ. ಸರ್ಕಾರ ಕಳೆದ ವರ್ಷ ಗ್ರಾಮದ ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವಂತೆ ಅನುಕೂಲಕ್ಕಾಗಿ ಕೆರೆ ತುಂಬುವ ಯೋಜನೆ ಜಾರಿ ಮಾಡಿ, ಸಣ್ಣ ನೀರಾವರಿ ಇಲಾಖೆ ಮೂಲಕ ಅನುದಾನ ಬಿಡುಗಡೆಗೊಳಿಸಿ ಕೆರೆಯನ್ನು ಸಹ ತುಂಬಿಸಿತ್ತು. ಈ ವೇಳೆ ಅಭಿಮನ್ಯು ತನ್ನ ಸ್ವಾರ್ಥಕ್ಕಾಗಿ ಕೆರೆಯ ನೀರನ್ನು ತೆರವು ಮಾಡಿದ್ದಲ್ಲದೇ, ಕೆರೆಯಲ್ಲಿ ಹೂಳು ಎತ್ತಿ ಕೆರೆಯ ಮಣ್ಣನ್ನು ಸಹ ಮಾರಿಕೊಂಡಿದ್ದ. ಈಗ ಅದೇ ಜಮೀನನ್ನು ಆಂಧ್ರ ಪ್ರದೇಶ ಮೂಲದ ವ್ಯಕ್ತಿಯಿಂದ ಲಕ್ಷ ಲಕ್ಷ ಹಣ ಪಡೆದು ಲೀಸ್‍ಗೆ ನೀಡಿದ್ದಾನೆ.

    ಕೆರೆ ನೀರು ಖಾಲಿ ಮಾಡಿದ್ದನ್ನು ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರ ಮೇಲೂ ಅಭಿಮನ್ಯು ಹಾಗೂ ಆತನ ಕುಟುಂಬಸ್ಥರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹೀಗಾಗಿ ಇಡೀ ಊರಿಗೆ ಊರೇ ಒಗ್ಗಟಾಗಿ ಕಳೆದ ಎರಡು ತಿಂಗಳ ಹಿಂದೆ ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ. ಸರ್ಕಾರಿ ಜಮೀನು ಒತ್ತುವರಿ ಮಸಡಿಕೊಂಡಿರೋದು ಕಣ್ಣಿಗೆ ಕಾಣ್ತಿದ್ರೂ ಅಧಿಕಾರಿಗಳು ಯಾಕೆ ಮೌನವಹಿಸಿದ್ದಾರೆ ಎಂದು ಜನ ಪ್ರಶ್ನಿಸಿದ್ದಾರೆ. ಕೆರೆಯ ಜಾಗವನ್ನು ಒತ್ತುವರಿ ತೆರವುಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿನಿಮಾ ಶೈಲಿಯಲ್ಲಿ ಮೊಬೈಲ್‌ಗಳ್ಳರ ಸೆರೆ

  • ಹೃದಯಾಘಾತ – ಮಾಜಿ ಶಾಸಕ ನಾಗನಗೌಡ ಕಂದಕೂರು ನಿಧನ

    ಹೃದಯಾಘಾತ – ಮಾಜಿ ಶಾಸಕ ನಾಗನಗೌಡ ಕಂದಕೂರು ನಿಧನ

    ಯಾದಗಿರಿ: ಜಿಲ್ಲೆಯ ಗುರುಮಠಕಲ್‌ನ (Gurumatakal) ಮಾಜಿ ಶಾಸಕ ನಾಗನಗೌಡ ಕಂದಕೂರು (Naganagouda Kandkur) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

    ನಾಗನಗೌಡ ಕಂದಕೂರು (79) ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುರುಮಠಕಲ್‌ನ ಹಾಲಿ ಶಾಸಕ ಶರಣಗೌಡ ಕಂದಕೂರು ಅವರ ತಂದೆಯಾಗಿರುವ ನಾಗನಗೌಡ ಕಂದಕೂರು 2018ರಲ್ಲಿ ಗುರುಮಠಕಲ್ ಕ್ಷೇತ್ರದಿಂದ ಜೆಡಿಎಸ್ (JDS) ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ನಿಧನ ಸುದ್ದಿ ತಿಳಿದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅಭಿಮಾನಿ ಬಳಗ ಆಸ್ಪತ್ರೆಗೆ ಧಾವಿಸಿದೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ

    ಭಾನುವಾರ (ಜ.28) ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 11 ಗಂಟೆಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿದ್ದಾರೆ. ನಾಗನಗೌಡ ಕಂದಕೂರು ವಿಧಿವಶ ಹಿನ್ನೆಲೆ ಶಾಸಕ ಶರಣಗೌಡ ಕಂದಕೂರು ತಂದೆಯ ಪಾರ್ಥಿವ ಶರೀರವನ್ನು ಅಂಬುಲೆನ್ಸ್‌ನಲ್ಲಿ ಯಾದಗಿರಿ (Yadgiri) ನಗರದ ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

    ಪಾರ್ಥಿವ ಶರೀರ ಮನೆಗೆ ಬರುತ್ತಿದ್ದಂತೆ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಪತಿಯ ಮೃತದೇಹವನ್ನು ಕಂಡು ಪತ್ನಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ತಾಯಿಯ ಸ್ಥಿತಿ ಕಂಡು ಶಾಸಕ ಶರಣಗೌಡ ಕಂದಕೂರು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಕೆಳಗಿಳಿಸಿದ ಪೊಲೀಸರು – ಸ್ಥಳೀಯರ ಮೇಲೆ ಲಾಠಿ ಚಾರ್ಜ್‌, ಕೆರಗೋಡು ಗ್ರಾಮ ಉದ್ವಿಗ್ನ

  • ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಯಾದಗಿರಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯ ಚುನಾವಣಾ (Election) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಟಿಕೆಟ್‌ ಲಭಿಸಿದೆ. ಗುರುಮಠಕಲ್‌ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ (BJP) ಹೊಸ ಸಾಹಸಕ್ಕೆ ಮುಂದಾಗಿದೆ. ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಅನಪೂರಗೆ (Lalita Anpur) ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಈ ಮೂಲಕ ಇತ್ತೀಚೆಗೆ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ (Congress) ಸೇರಿರುವ ಅಭ್ಯರ್ಥಿ ಬಾಬುರಾವ್ ಚಿಂಚನಸೂರಗೆ ಬಿಜೆಪಿ ಚೆಕ್‍ಮೇಟ್ ನೀಡಿದೆ.

    ಇದುವರೆಗೂ ಜಿಲ್ಲೆಯ ಯಾವುದೇ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಯಾವುದೇ ಪಕ್ಷ ಮಣೆ ಹಾಕಿರಲಿಲ್ಲ. ಹೀಗಾಗಿ ಈ ಬಾರಿ ಮಹಿಳೆಯರಿಗೆ ಅವಕಾಶ ನೀಡಿರುವುದು ಇಲ್ಲಿನ ಚುನಾವಣೆ ವಿಶೇಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗುಡ್‌ ಬೈ

    ಹಿಂದುಳಿದ ಕೋಲಿ ಕಬ್ಬಲಿಗ ಸಮುದಾಯದ ಅತ್ಯಂತ ಪ್ರಭಾವಿ ಮಹಿಳೆಯಾಗಿರುವ ಲಲಿತಾ ಅನಪೂರ ಯಾದಗಿರಿ (Yadgiri) ನಗರಸಭೆಯ ಹಾಲಿ ಸದಸ್ಯರಾಗಿದ್ದಾರೆ. ಗುರುಮಠಕಲ್ ಕ್ಷೇತ್ರದಲ್ಲಿ ಸಮುದಾಯದ ಹೆಚ್ಚಿನ ಮತಗಳು ಇರುವುದರಿಂದ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಉತ್ತಮ ಪೈಪೋಟಿ ನೀಡಲಿದ್ದಾರೆ ಎನ್ನುವ ರಾಜಕೀಯ ಲೆಕ್ಕಾಚಾರ ಇದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ (Gurumatkal) ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಬಾಬುರಾವ್ ಚಿಂಚನಸೂರ ಹಾಗೂ ಜೆಡಿಎಸ್‍ನಿಂದ (JDS) ಶರಣಗೌಡ ಕಂದಕೂರಗೆ ಈಗಾಗಲೇ ಟಿಕೆಟ್ ಘೋಷಣೆಯಾಗಿತ್ತು. ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

  • ನಿನ್ ವೋಟ್ ಯಾವಾನಿಗ್ ಬೇಕು ಹೋಗು- ಬಿಜೆಪಿ ಕಾರ್ಯಕರ್ತನಿಗೆ ಚಿಂಚನಸೂರ್ ಕ್ಲಾಸ್

    ನಿನ್ ವೋಟ್ ಯಾವಾನಿಗ್ ಬೇಕು ಹೋಗು- ಬಿಜೆಪಿ ಕಾರ್ಯಕರ್ತನಿಗೆ ಚಿಂಚನಸೂರ್ ಕ್ಲಾಸ್

    ಯಾದಗಿರಿ: ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಕಾರ್ಯಕರ್ತರ ಆಕ್ರೋಶವನ್ನು ಎದುರಿಸಿದ ಘಟನೆ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಅರಿಯಲು ಬಂದಿದ್ದ ಚಿಂಚನಸೂರ್, ನಾನು ಗೆದ್ದರೆ ನೀರಿನ ಸಮಸ್ಯೆ ಬಗೆಹರಿಸುತ್ತೇನೆ. ಗ್ರಾಮದ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಅಧಿಕಾರದಲಿದ್ದಾಗ ಏನು ಮಾಡಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಗ್ರಾಮಸ್ಥನೊಬ್ಬ ಚಿಂಚನಸೂರ್ ಉತ್ತರಕ್ಕೆ ಪಟ್ಟು ಹಿಡಿದು, ಈ ಬಾರಿ ಚುನಾವಣೆಯಲ್ಲಿ ನನ್ನ ತಾಕತ್ತು ತೋರಿಸುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾನೆ. ಇದರಿಂದ ವಿಚಲಿತರಾದ ಸಂಸದ ನಿನ್ನ ವೋಟು ಯಾರಿಗಾದರೂ ಹಾಕು, ನನಗೆ ನಿನ್ನ ಮತ ಬೇಡ ಎಂದು ಗದರಿದ್ದಾರೆ.

    ಸಂಸದರ ಆವಾಜ್‍ಗೆ ಗಾಜರಕೋಟ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಫೆ.28ಕ್ಕೆ ಬೆಳಗಾವಿಗೆ ಮೋದಿ- ಫಸ್ಟ್ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿಕೆ

  • ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ  – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಯಾದಗಿರಿ: ಜಮೀನು ವರ್ಗಾವಣೆಯ ಮೂಲ ನಕಲು ಪ್ರತಿಯನ್ನು ನೀಡಲು ಕಂದಾಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಹಿನ್ನೆಲೆ ಊರಿಗೆ ತೆರಳದೆ ಬಸ್ ನಿಲ್ದಾಣದಲ್ಲಿ ಕುಟುಂಬವೊಂದು ವಾಸ ಮಾಡುತ್ತಿದೆ.

    ಜಿಲ್ಲೆಯ ಗುರುಮಠಕಲ್ ಬಸ್ ನಿಲ್ದಾಣದಲ್ಲಿ ಪ್ರಮಿಳಾ ವೆಂಕಟರೆಡ್ಡಿ ದಂಪತಿ ಕಳೆದ 16 ದಿನಗಳಿಂದ ವಾಸಮಾಡುತ್ತಿದ್ದಾರೆ. ಇವರು ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಪಳ್ಳಿ ಗ್ರಾಮದವರು. ಹೈದರಾಬಾದ್‍ನಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಪ್ರಮಿಳಾಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪ್ರಮಿಳಾ ತವರು ಊರು ಗುರುಮಠಕಲ್ ತಾಲೂಕಿನ ಹಿಮಲಾಪುರ ಗ್ರಾಮ, ಪಿತ್ರಾರ್ಜಿತ ಆಸ್ತಿ ಪಡೆಯಲು ಜಮೀನಿನ ದಾಖಲೆಗಾಗಿ ಹೈದರಾಬಾದ್‍ನಿಂದ ಸೆ.6 ರಂದು ಗುರುಮಠಕಲ್‍ಗೆ ಬಂದಿದ್ದಾರೆ. ಇದನ್ನೂ ಓದಿ: ನಿಷ್ಪಕ್ಷಪಾತವಾದ ವರದಿ ಕೊಡಿ – ಆಧಿಕಾರಿಗಳಿಗೆ ಆಣೆ ಮಾಡಿಸಿದ ಗ್ರಾಮಸ್ಥರು

    ತಹಶೀಲ್ದಾರ್ ಕಚೇರಿಗೆ ತೆರಳಿ ಜಮೀನಿನ ಮೂಲ ನಕಲು ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ಸಲ್ಲಿಸಿ 16 ದಿನಗಳಾದರೂ ಮೂಲ ನಕಲು ಪ್ರತಿ ನೀಡದೆ ಕಂದಾಯ ಇಲಾಖೆಯ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಗುರುಮಿಠಕಲ್ ಪಟ್ಟಣದಲ್ಲಿ ಪ್ರಮಿಳಾವರಿಗೆ ಯಾವುದೇ ಸಂಬಂಧಿಕರಿಲ್ಲ, ಹೋಟೆಲ್ ನಲ್ಲಿ ರೂಮ್ ಮಾಡುವಷ್ಟು ಶಕ್ತರಲ್ಲದ ಕಾರಣ ಬಸ್ ನಿಲ್ದಾಣದಲ್ಲಿ ರಾತ್ರಿ ಕಳೆದು ಬೆಳಗ್ಗೆ ತಹಶೀಲ್ದಾರ್ ಕಚೇರಿ ಬಾಗಿಲು ಕಾಯುತ್ತಿದ್ದಾರೆ.  ಇದನ್ನೂ ಓದಿ: ಮಕ್ಕಳನ್ನು ವೈದ್ಯರಲ್ಲಿ ತೋರಿಸಲು ಪೋಷಕರ ನೂಕುನುಗ್ಗಲು