Tag: ಗುರು ದೇಶಪಾಂಡೆ

  • ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ‘ಪೆಂಟಗನ್’ (Pentagon) ಸಿನಿಮಾದ ಟೀಸರ್‍ನಲ್ಲಿ (Teaser) ಕನ್ನಡಪರ ಹೋರಾಟಗಾರರಿಗೆ ರೋಲ್‍ಕಾಲ್ ಎಂದು ಕರೆದಿರುವ ಕುರಿತು ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ (Karave) ಯುವ ಘಟಕ ಈ ಕುರಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ರೋಲ್‍ಕಾಲ್ ಪದವನ್ನು ಟೀಸರ್‍ನಿಂದ ಕಿತ್ತುಹಾಕದೇ ಇದ್ದರೆ ನಿರ್ದೇಶಕ ಗುರು ದೇಶಪಾಂಡೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದೆ.

    ಕಿಶೋರ್ ನಾಯಕ ನಟಿಸಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ಬಿಡುಗಡೆಯ ವೇದಿಕೆಯಲ್ಲೇ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು. ಇಬ್ಬರೂ ಒಟ್ಟಾಗಿ ವಿರೋಧಿಸಿದ್ದರಿಂದ ನಿರ್ದೇಶಕ ಗುರು ದೇಶಪಾಂಡೆ (Guru Deshpande) ಅದೇ ವೇದಿಕೆಯಲ್ಲೇ ಸ್ಪಷ್ಟನೆ ಕೂಡ ನೀಡಿದ್ದರು. ಇದನ್ನೂ ಓದಿ:ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ, ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ಕಿಶೋರ್ ನಾಯಕನಾಗಿ ನಟಿಸಿರುವ ‘ಪೆಂಟಗನ್’ (Pentagon) ಸಿನಿಮಾದ 5ನೇ ಕಥೆಯ ಟೀಸರ್ (Teaser) ನಿನ್ನೆ ಬಿಡುಗಡೆ ಆಗಿದೆ. ಕನ್ನಡಪರ ಹೋರಾಟಗಾರನ ಕುರಿತಾದ ಈ ಕಥೆಯಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ವೇದಿಕೆಯ ಮೇಲೆಯೇ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧಿಸಿದ ಘಟನೆ ನಡೆದಿದೆ. ಕನ್ನಡಪರ ಹೋರಾಟಗಾರರಿಗೆ ರೋಲ್ ಕಾಲ್ ಸೇರಿದಂತೆ ಹಲವು ಶಬ್ದಗಳನ್ನು ಟೀಸರ್ ನಲ್ಲಿ ಬಳಸಲಾಗಿದೆ ಎಂದು ಅವರು ವಿರೋಧಿಸಿದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು.

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ (Guru Deshpande), ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು. ಇದನ್ನೂ ಓದಿ: ಕಿಚ್ಚ ಅಭಿಮಾನಿಗಳಿಗೆ ಸಿಹಿಸುದ್ದಿ: ಸುದೀಪ್ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಗುರು ದೇಶಪಾಂಡೆ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ರಿಲೀಸ್ ಆಗಿದ್ದು, ಹತ್ತು ಹಲವು ವಿಚಾರಗಳನ್ನು ಅದು ಹೊತ್ತು ತಂದಿದೆ. ಒಟ್ಟು ಐದು ಕಥೆಗಳ ಸಂಕಲನದಂತಿರುವ ‘ಪೆಂಟಗನ್’ ಸಿನಿಮಾದ ಐದನೇ ಕಥೆಯ ಟೀಸರ್ ಇದಾಗಿದ್ದು ಕನ್ನಡಪರ ಹೋರಾಟಗಾರರೊಬ್ಬರ ಕಥೆಯನ್ನು ಇದು ಒಳಗೊಂಡಿದೆ ಎನ್ನುವ ಅನುಮಾನ ಮೂಡಿಸುತ್ತದೆ. ಟೀಸರ್ ನಲ್ಲಿ ಬಳಸಲಾದ ಸಂಭಾಷಣೆ ಕೇಳಿದರೆ, ಕನ್ನಡ ಪರ ಸಂಘಟನೆಯ ಅನೇಕ ಹೋರಾಟಗಾರರನ್ನು ಅದು ನೆನಪಿಸುತ್ತದೆ.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ. ಇದನ್ನೂ ಓದಿ: ತಾಯಿಯಾಗುತ್ತಿರುವ ಗುಡ್‌ ನ್ಯೂಸ್‌ ಕೊಟ್ರು ʻಯೇ ಜವಾನಿ ಹೇ ದಿವಾನಿ’ ನಟಿ

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ (Pentagon) ಸಿನಿಮಾದ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಾಕಷ್ಟು ಚರ್ಚೆ  ಆಗಿದೆ. ಈಗಾಗಲೇ ಈ ಸಂಕಲನದ ಫಸ್ಟ್ ಲುಕ್, ಮೋಷನ್ ಪೋಸ್ಟರ್ ಗಳು ಬಿಡುಗಡೆಯಾಗಿ ಜನ ಮೆಚ್ಚುಗೆ ಪಡೆದಿವೆ.  ಇದೀಗ ಈ ಚಿದ್ರದಲ್ಲಿನ ಐದನೇ ಕಥೆಯ ಟೀಸರ್ (Teaser) ಅನ್ನು ಜನವರಿ 18 ರಂದು ಸಂಜೆ 6.04ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಕನ್ನಡ ಹೋರಾಟಗಾರನೊಬ್ಬನ ವಿರೋಧಾಭಾಸ ಜೀವನವನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದೊಳಗಿನ ಈ ಕತೆಯು ಅತ್ಯಂತ ಕುತೂಹಲ ಮೂಡಿಸುವಂಥದ್ದು.

    ಗುರು ದೇಶಪಾಂಡೆ (Guru Deshpande) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ (Kishor) ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್ (Prithvi Amber), ರೂಪೇಶ್ ರಾಜಣ್ಣ(Rupesh Rajanna), ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

    ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಬೆಂಗಳೂರು: ಲವ್ ಯು ರಚ್ಚು ಚಿತ್ರೀಕರಣ ವೇಳೆ ಫೈಟರ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿನಿಮಾ ನಿರ್ದೇಶಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಮೃತ ಫೈಟರ್ ವಿವೇಕ್ ಕುಟುಂಬಸ್ಥರು ನೀಡಿದ ದೂರಿನನ್ವಯ ನಿರ್ದೇಶಕ ಶಂಕರ್ ರಾಜ್, ಸ್ಟಂಟ್ ಮಾಸ್ಟರ್ ವಿನೋದ್, ಜಮೀನು ಮಾಲೀಕ ಪುಟ್ಟರಾಮು ಹಾಗೂ ಕ್ರೇನ್ ಡ್ರೈವರ್ ನನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ನಾಲ್ವರನ್ನು ಬಂಧಿಸುವ ಸಾಧ್ಯತೆಗಳಿವೆ. ಇನ್ನೂ ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಂಜಿತ್ ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ನಡೆಯುತ್ತಿದ್ದಂತೆ ಶೂಟಿಂಗ್ ನಿಲ್ಲಿಸಿ ಚಿತ್ರತಂಡ ಪ್ಯಾಕಪ್ ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದೆ. ಚಿತ್ರೀಕರಣಕ್ಕೆ ಸಿನಿಮಾ ತಂಡ ಸ್ಥಳೀಯ ಪೊಲೀಸರ ಅನುಮತಿ ಸಹ ಪಡೆದುಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

    ಫೈಟರ್ ವಿವೇಕ್ ಸಾವು:
    ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

  • ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    – ಹೈಟೆನ್ಷನ್ ವೈರ್ ಇರೋದು ಫೈಟರ್ ಮಾಸ್ಟರ್​​​ಗೆ ಗೊತ್ತಿರಬೇಕಿತ್ತು

    ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು. ಸಾಹಸ ದೃಶ್ಯಗಳ ಚಿತ್ರೀಕರಣ ಮಾಡುವಾಗ ಫೈಟ್ ಮಾಸ್ಟರ್ ವಿನೋದ್ ಗಮನಿಸಬೇಕಿತ್ತು. ಈ ಮೊದಲು ಅಲ್ಲಿ ಹೈಟೆನ್ಷನ್ ವೈರ್ ಇದ್ದಿದ್ದರಿಂದ ನಾನು ಆ ದೃಶ್ಯ ಮಾಡಲ್ಲ ಅಂತ ಹೇಳಿದ್ದೆ ಎಂದು ಲವ್ ಯು ರಚ್ಚು ಸಿನಿಮಾದ ನಾಯಕ ನಟ ಅಜಯ್ ರಾವ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಜಯ್ ರಾವ್, ಅಲ್ಲಿ ನನ್ನ ಸೀನ್ ಇರದ ಕಾರಣ ದೂರದಲ್ಲಿ ಕುಳಿತಿದ್ದೆ. ಇದ್ದಕ್ಕಿದ್ದಂತೆ ಶಾರ್ಟ್ ಸಕ್ರ್ಯೂಟ್ ರೀತಿಯಲ್ಲಿ ಸೌಂಡ್ ಕೇಳಿಸಿದಾಗ, ನನ್ನ ಹುಡುಗರು ಬಂದು ವಿಷಯ ಹೇಳಿದರು. ಕಳೆದ ಐದು ದಿನಗಳಿಂದ ಈಗಲ್ ಟನ್ ಬಳಿಯಲ್ಲಿ ಸಾಹಸ ಚಿತ್ರೀಕರಣ ನಡೆಯುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಚಿತ್ರೀಕರಣ ನಡೆಸೋದು ಕಷ್ಟದ ಕೆಲಸ. ನಮ್ಮ ಟೀಂ ನಿರ್ಮಿಸಿದ ವಾಟರ್ ಟ್ಯಾಂಕ್ ಬಳಿ ಫೈಟ್ ಸೀನ್ ಇತ್ತು. ಆದ್ರೆ ನಾನು ಬೇಡ ಅಂತ ಹೇಳಿದ್ದಕ್ಕೆ ಅಜಯ್ ಎಲ್ಲದಕ್ಕೂ ಹಿಂದೇಟು ಹಾಕ್ತಾರೆ ಅನ್ನೋ ಮಾತುಗಳು ಕೇಳಿ ಬಂದವು ಎಂದು ಬೇಸರದ ಮಾತುಗಳನ್ನಾಡಿದರು.

    ಒಬ್ಬ ಹುಡುಗ ಹೈಟೆನ್ಷನ್ ವೈರ್ ಬಳಿಯಲ್ಲಿದ್ದನಾ ಅಥವಾ ರೂಪ್ ಎಳೆಯುತ್ತಿದ್ದನಾ ಅಂತ ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೋರ್ವ ಹುಡುಗ ಬಿದ್ದು ಗಾಯಗೊಂಡಿದ್ದು ಮಾತ್ರ ಕಾಣಿಸಿತು. ಸದ್ಯ ಆ ಹುಡುಗ ಹುಷಾರಾಗಿದ್ದಾನೆ. ಅಷ್ಟರಲ್ಲಿ ಫೈಟರ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗಲೂ ಕೂಡ ನನ್ನ ಕೈಕಾಲು ನಡಗುತ್ತಿದೆ. ಇದಾದ ಕೆಲವೇ ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಫೈಟ್ ಮಾಸ್ಟರ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನನ್ನಿಂದ ಏನಾದ್ರೂ ಸಹಾಯ ಬೇಕಾದ್ರೆ ಬರುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದೇನೆ ಎಂದು ತಿಳಿಸಿದರು.

    ಏನಿದು ಘಟನೆ?:
    ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

  • ಬೇರೆ ಭಾಷೆ ಸಿನಿಮಾಗಿಂತ ‘ಜಂಟಲ್ ಮ್ಯಾನ್’ ಯಾವುದರಲ್ಲೂ ಕಡಿಮೆ ಇಲ್ಲ..!

    ಬೇರೆ ಭಾಷೆ ಸಿನಿಮಾಗಿಂತ ‘ಜಂಟಲ್ ಮ್ಯಾನ್’ ಯಾವುದರಲ್ಲೂ ಕಡಿಮೆ ಇಲ್ಲ..!

    ಪ್ರಜ್ವಲ್ ದೇವರಾಜ್ ಅಭಿನಯದ ‘ಜಂಟಲ್ ಮ್ಯಾನ್’ ಸಿನಿಮಾ ತೆರೆಕಂಡು ಯಶಸ್ಸಿನ ಹಾದಿಯಲ್ಲಿ ಓಡುತ್ತಿದೆ. ಕನ್ನಡ ಚಿತ್ರ ವಿಮರ್ಶಕರು ಅಷ್ಟು ಸುಲಭದಲ್ಲಿ ಒಂದು ಸಿನಿಮಾವನ್ನು ಕಂಪ್ಲೀಟ್ ಒಪ್ಪುವುದಿಲ್ಲ. ಆದ್ರೆ ‘ಜಂಟಲ್ ಮ್ಯಾನ್’ ಚಿತ್ರ ಎಲ್ಲಾ ವರ್ಗದವರಿಂದಲೂ ಹೊಗಳಿಕೆಯ ಮಹಾಪೂರವನ್ನೇ ಸ್ವೀಕರಿಸಿದೆ. ಕಮರ್ಷಿಯಲ್ ಅಂಶಗಳನ್ನೂ ಒಳಗೊಂಡಂತೆ ಪರಭಾಷೆಯ ಯಾವ ಚಿತ್ರಕ್ಕೂ ಕಡಿಮೆ ಇಲ್ಲವೆಂಬಂತೆ ‘ಜಂಟಲ್ ಮ್ಯಾನ್’ ಸಿನಿಮಾ ರೂಪುಗೊಂಡಿದೆ.

    ನಮ್ಮ ಜನ ತಾಯ್ನಾಡಿ, ತಾಯಿ ನೆಲದ ಸಿನಿಮಾಗಳನ್ನ ನೋಡಿ, ಹೊಗಳುವುದಕ್ಕಿಂತ ಪಕ್ಕದ ತಮಿಳು, ತೆಲುಗಿನ ಸಿನಿಮಾಗಳಿಗೆ ಮನಃಪೂರ್ವಕ ಹೊಗಳುತ್ತಾರೆ. ಕನ್ನಡದಲ್ಲಿ ಒಳ್ಳೆ ಸಿನಿಮಾಗಳೇ ಬರುವುದಿಲ್ಲ ಎಂಬ ಕೊಂಕು ಮಾತುಗಳನ್ನು ಆಡುವವರು ಕೆಲವರಿದ್ದಾರೆ. ಆ ಭಾವನೆಯನ್ನ ಮೊದಲು ತೆಗೆದು ಹಾಕಿ ಕನ್ನಡ ಸಿನಿಮಾಗಳು ರಿಲೀಸ್ ಆದಾಗ ಚಿತ್ರಮಂದಿರಕ್ಕೆ ಬಂದು ಆ ಸಿನಿಮಾಗಳನ್ನು ನೋಡಬೇಕು. ಆಗ ಅಂತ ವರ್ಗಕ್ಕೆ ಕನ್ನಡದಲ್ಲೂ ಇಂಥ ಸಿನಿಮಾಗಳು ಇವೆ ಅನ್ನೋದು ಅರಿವಿಗೆ ಬರುತ್ತೆ. ಅದನ್ನು ಮಾಡದೇ ಸೋಶಿಯಲ್ ಮೀಡಿಯಾದಲ್ಲೆಲ್ಲೋ ಸಿನಿಮಾ ಬಗ್ಗೆ ವಿಮರ್ಶೆ ಬಂದಾಗ ಕೇವಲ ಒಂದು ಲೈಕ್ ಅಥವಾ ಕಮೆಂಟ್ ಮಾಡಿ ಸುಮ್ಮನಾಗಿ ಬಿಡುತ್ತಾರೆ.

    ಸದ್ಯ ಕನ್ನಡ ಚಿತ್ರರಂಗದ ಸ್ಥಿತಿಯೂ ಹಾಗೇ ಇದೆ. ಬರುವ ಎಲ್ಲಾ ಸಿನಿಮಾಗಳು ಉತ್ತಮವಾಗಿಯೇ, ಒಳ್ಳೆ ಕಂಟೆಂಟ್ ಹೊಂದಿದ ಸಿನಿಮಾಗಳು ಬರುತ್ತವೆಂದು ಹೇಳುವುದಕ್ಕಾಗಲ್ಲ. ಅದರ ನಡುವೆಯೂ ಒಳ್ಳೆ ಕಂಟೆಂಟ್ ಹೊಂದಿದ ಸಿನಿಮಾಗಳು ಸಾಕಷ್ಟು ಬರುತ್ತವೆ. ಅಂತ ಚಿತ್ರಗಳಲ್ಲೊಂದು ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’.

    ಜಂಟಲ್ ಮನ್ ಚಿತ್ರದ ನಿರ್ದೇಶಕ ನಿಜಕ್ಕೂ ಪ್ರತಿಭಾವಂತ. ಮೊದಲ ಸಿನಿಮಾದಲ್ಲೇ ನಿರ್ದೇಶಕನಾಗಿ ಕಸುಬುದಾರಿಕೆ ತೋರಿದ್ದವರು. ಈ ಸಲವಂತೂ ತಮ್ಮ ಎಲ್ಲಾ ಶ್ರಮವನ್ನು ಧಾರೆಯೆರೆದು ಅಪರೂಪದ ಚಿತ್ರ ಮಾಡಿದ್ದಾರೆ. ಸಂಚಾರಿ ವಿಜಯ್ ಅವರಂಥಾ ನಟ ಕೂಡಾ ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನು ತೆರೆದಿಟ್ಟಿದ್ದಾರೆ. ಗುರು ದೇಶಪಾಂಡೆ ಸ್ವತಃ ನಿರ್ದೇಶಕರಾಗಿದ್ದೂ ಗಟ್ಟಿ ಕಥೆ ಹೊಂದಿದೆ ಎನ್ನುವ ಕಾರಣಕ್ಕೆ ಇಷ್ಟು ದಿನ ತಾವು ದುಡಿದದ್ದನ್ನೆಲ್ಲಾ ಸೇರಿಸಿ, ಅದರೊಟ್ಟಿಗೆ ಎಲ್ಲೆಲ್ಲಿಂದಲೋ ಹಣ ತಂದು ‘ಜಂಟಲ್ ಮ್ಯಾನ್’ ಚಿತ್ರವನ್ನು ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಅವರಂತೂ ತಮ್ಮ ಸಿನಿಮಾ ಬದುಕಿನಲ್ಲೇ ಮೈಲಿಗಲ್ಲಾಗಿ ಉಳಿಯುವಂಥಾ ಪಾತ್ರದಲ್ಲಿ, ತಮ್ಮನ್ನು ತಾವು ಅರ್ಪಿಸಿಕೊಂಡು ನಟಿಸಿದ್ದಾರೆ. ಇವರೆಲ್ಲರ ಶ್ರಮಕ್ಕೆ ಪ್ರತಿಫಲ ದೊರೆಯಬೇಕೆಂದರೆ ಪ್ರೇಕ್ಷಕರು ಉತ್ಸಾಹದಿಂದ ಚಿತ್ರಮಂದಿರಕ್ಕೆ ಬರಬೇಕಲ್ಲವೇ? ನಮ್ಮ ಕನ್ನಡದ ಪ್ರೇಕ್ಷಕರ ಮನತಣಿಸಲು ಜಂಟಲ್ ಮನ್ ಗಿಂತಾ ಸಿನಿಮಾ ಬೇಕೇ? ಇಷ್ಟೆಲ್ಲ ಇದ್ದರೂ ಯಾಕೆ ನಮ್ಮವರು ಅಸಡ್ಡೆ ಮನೋಭಾವನೆ ತೋರುತ್ತಿದ್ದಾರೆ? ಎಂಬ ಬೇಸರ ಚಿತ್ರತಂಡದವರಲ್ಲಿ ಮೂಡಿದೆ.

    ‘ಜಂಟಲ್ ಮ್ಯಾನ್’ ನಲ್ಲಿರುವಂತ ಕಥೆ ಹಿಂದೆಂದೂ ಕೂಡ ನಾವೂ ನೋಡಿರುವುದಕ್ಕೆ ಸಾಧ್ಯವಿಲ್ಲ. ಅಂತದ್ದೊಂದು ಅಪರೂಪದ ಕಥೆ ಹೆಣೆದಿದ್ದಾರೆ. ಅಂತ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೂ ಕೂಡ ಈ ಸಿನಿಮಾದಿಂದ ಮನಸ್ಥೈರ್ಯ ಸಿಗುವ ಭರವಸೆ ಹೆಚ್ಚಾಗಿದೆ. ಕನ್ನಡದಲ್ಲೂ ಇನ್ನು ಉತ್ತಮ ಸಿನಿಮಾಗಳು ಬರಬೇಕು. ಆ ರೀತಿ ಬರಬೇಕೆಂದೆಲ್ಲಿ ಪ್ರೇಕ್ಷಕರ ಸಹಕಾರ ಅಷ್ಟೇ ಮುಖ್ಯವಾಗುತ್ತೆ. ಕನ್ನಡಿಗರೇ ಕನ್ನಡ ಸಿನಿಮಾಗಳನ್ನ ಉಳಿಸಲಿಲ್ಲ ಅಂದ್ರೆ ಹೇಗೆ? ನಿರ್ಮಾಪಕರಿಗೆ ಧೈರ್ಯ ಬರಬೇಕಾದಲ್ಲಿ ಚಿತ್ರಮಂದಿರಗಳು ತುಂಬಿರಬೇಕು. ‘ಜಂಟಲ್ ಮ್ಯಾನ್’ ಅದ್ಬುತ ಚಿತ್ರ ಎಂಬುದರಲ್ಲಿ ಎರಡು ಮಾತಿಲ್ಲ. ನೋಡದೆ ಇರುವವರು ಚಿತ್ರ ನೋಡಿ ಖಂಡಿತ ಇಷ್ಟವಾಗುತ್ತೆ.

  • ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಜಂಟಲ್ ಮನ್ ಚಿತ್ರವೀಗ ಬಿಡುಗಡೆಯ ಹಂತದಲ್ಲಿದೆ. ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಇದೀಗ ಬಿಡುಗಡೆಯಾಗಿದೆ. ವಿಶೇಷವೆಂದರೆ ಈ ಹಾಡಿನ ಮೂಲಕವೇ ನಾಯಕ ಪ್ರಜ್ವಲ್ ದೇವರಾಜ್ ಅವರ ಒಂದಷ್ಟು ಗೆಟಪ್ಪುಗಳನ್ನೂ ಅನಾವರಣಗೊಳಿಸಿದೆ. ಪ್ರತಿಯೊಬ್ಬರಿಗೂ ಆಪ್ತವಾಗುವಂಥಾ ಆವೇಗದ ಸಾಲುಗಳನ್ನೊಳಗೊಂಡ ಈ ಹಾಡು ನಟ ವಸಿಷ್ಠ ಸಿಂಹ ಅವರ ಕಂಠಸಿರಿಯಲ್ಲಿ ರಗಡ್ ಶೈಲಿಯಲ್ಲಿ ಮೂಡಿ ಬಂದಿದೆ.

    ‘ನಡುಗುತಿದೆ ಎದೆಗೂಡು ಸುಡುಗಾಡು ಬರಿ ಮೌನ. ತೆವಳುತಿದೆ ವಾತ್ಸಲ್ಯ ಬರಿ ಮೋಸ ದ್ವೇಷ ಇದೇ ಜಮಾನ’ ಅಂತ ಶುರವುವಾಗೋ ಈ ಹಾಡನ್ನು ಧನಂಜಯ್ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಅದಕ್ಕೆ ವಿಶಿಷ್ಟ ಅನ್ನಿಸುವಂಥಾ ಶೈಲಿಯಲ್ಲಿಯೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರತಿ ಸಾಲುಗಳಲ್ಲಿಯೂ ಬಹುತೇಕರಿಗೆ ಆಪ್ತವಾಗುವಂಥಾ ಸಾಲುಗಳೊಂದಿಗೆ, ವಸಿಷ್ಠ ಸಿಂಹ ಅವರ ಬೇಸ್ ವಾಯ್ಸ್ ನೊಂದಿಗೆ ಮೂಡಿ ಬಂದಿರೋ ಈ ಹಾಡಿನಲ್ಲಿಯೇ ಕಥೆಯ ಝಲಕ್ಕುಗಳಿವೆ. ಅದು ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ ಚಿತ್ರವೆಂಬುದನ್ನೂ ಋಜುವಾತುಗೊಳಿಸುವಂತಿವೆ.

    ಈ ಲಿರಿಕಲ್ ವಿಡಿಯೋ ಸಾಂಗ್‍ನಲ್ಲಿಯೇ ಅದು ಮೂಡಿ ಬಂದಿರೋ ರೀತಿ ಮತ್ತು ಮೇಕಿಂಗ್ ಮಜಲುಗಳನ್ನೂ ತೆರೆದಿಡಲಾಗಿದೆ. ವಿಜಯಲಕ್ಷ್ಮಿ ಮುರುಗೇಶ್ ನಾಯ್ಡು ಅವರ ಆಶೀರ್ವಾದದೊಂದಿಗೆ, ಬಿ.ಟಿ ಮಂಜುನಾಥ್ ಅರ್ಪಿಸುವ ಈ ಚಿತ್ರವನ್ನು ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಾಮಾನ್ಯವಾಗಿ ಗುರು ದೇಶಪಾಂಡೆ ನಿರ್ದೇಶನದ ಯಾವುದೇ ಸಿನಿಮಾಗಳನ್ನು ನೋಡಿದರೂ ಅದರಲ್ಲಿ ಹಾಡುಗಳಿಗೆ ಕಥೆಯಷ್ಟೇ ಮಹತ್ವ ಕೊಟ್ಟು ರೂಪಿಸಿದ್ದಾರೆ. ಅವರು ನಿರ್ಮಾಣ ಮಾಡಿರುವ ಜಂಟಲ್ ಮನ್ ಕೂಡಾ ಅದಕ್ಕೆ ತಕ್ಕುದಾಗಿಯೇ ರೂಪುಗೊಳ್ಳುತ್ತಿದೆ.

    ಅಜನೀಶ್ ಲೋಕನಾಥ್ ಗುರು ದೇಶಪಾಂಡೆಯವರ ಇಂಗಿತದಂತೆಯೇ ಈ ಸಿನಿಮಾದ ಎಲ್ಲ ಹಾಡುಗಳಿಗೂ ಭಿನ್ನವಾದ ಸಂಗೀತದ ಪಟ್ಟುಗಳನ್ನು ಹಾಕಿದ್ದಾರಂತೆ. ಅಂದಹಾಗೆ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಈ ವರೆಗೆ ನಟಿಸಿರದಂಥ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದು ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆಯ ಬೇಸಿನ ಗುಣಲಕ್ಷಣಗಳನ್ನು ಹೊಂದಿರುವ ಪಾತ್ರ. ಇದರ ಸುತ್ತಾ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಜಂಟಲ್ ಮನ್‍ನನ್ನು ರೂಪಿಸಲಾಗಿದೆ. ಇದರಲ್ಲಿ ಕ್ರೈಂ ಅಂಶಗಳೂ ಸೇರಿಕೊಂಡಿವೆಯಾ ಎಂಬ ಕುತೂಹಲ ಮೂಡಿಸುವಲ್ಲಿಯೂ ಇದೀಗ ಬಿಡುಗಡೆಯಾಗಿರುವ ಲಿರಿಕಲ್ ವಿಡಿಯೋ ಯಶ ಕಂಡಿದೆ. ಈ ಚಿತ್ರ ಮುಂದಿನ ವರ್ಷದ ಆರಂಭದ ತಿಂಗಳುಗಳಲ್ಲಿಯೇ ಬಿಡುಗಡೆಯಾಗಲಿದೆ.

  • ‘ಪಡ್ಡೆ ಹುಲಿ’ ಏಪ್ರಿಲ್ 19ರಂದು ರಿಲೀಸ್

    ‘ಪಡ್ಡೆ ಹುಲಿ’ ಏಪ್ರಿಲ್ 19ರಂದು ರಿಲೀಸ್

    ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಜನಪ್ರಿಯ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಪಾದಾರ್ಪಣೆ ಮಾಡುತ್ತಿರುವ ಚಿತ್ರ `ಪಡ್ಡೆ ಹುಲಿ’ ಅನೇಕ ವಿಶೇಷತೆಗಳನ್ನು ತುಂಬಿಕೊಂಡು ಈ ವಾರ ಬಿಡುಗಡೆ ಆಗುತ್ತಿದೆ.

    ‘ಪಡ್ಡೆ ಹುಲಿ’ ಚಿತ್ರದ ನಿರ್ಮಾಪಕ ಎಂ.ರಮೇಶ್ ರೆಡ್ಡಿ (ನಂಗ್ಲಿ). ತೇಜಸ್ವಿನಿ ಎಂಟರ್‍ಪ್ರೈಸಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ದೇಶನ ಮಾಡಿರುವವರು ಗುರು ದೇಶಪಾಂಡೆ. ಶ್ರೇಯಸ್ ಪ್ರಥಮ ಹೆಜ್ಜೆಗೆ ಡಾ.ವಿಷ್ಣುವರ್ಧನ ಅವರ ನೆರಳು ಇದೆ. ಚಿತ್ರವನ್ನು ಚಿತ್ರದುರ್ಗದ ಹಿನ್ನೆಲೆಯಲ್ಲಿ ಡಾ.ವಿಷ್ಣುವರ್ಧನ್ ಅವರನ್ನು ನೆನಪಿಸುವ ಹಾಗೆ ಕಥೆ ಮಾಡಲಾಗಿದೆ. ನಿಶ್ವಿಕ ನಾಯ್ಡು ಚಿತ್ರದ ಕಥಾ ನಾಯಕಿ. ವಿ ರವಿಚಂದ್ರನ್ ನಾಯಕ ಶ್ರೇಯಸ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅತಿಥಿ ಪಾತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ರಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಸುಧಾರಾಣಿ, ಮಧುಸೂಧನ್, ರಂಜಿತ್, ಚಿಕ್ಕಣ್ಣ, ಧರ್ಮಣ್ಣ ಹಾಗೂ ಇತರರು ಇದ್ದಾರೆ.

    ಪಡ್ಡೆ ಹುಲಿ ಚಿತ್ರದ ಪ್ರಮುಖ ಅಂಶಗಳೆಂದರೆ ಹಳೆಯ ಹಾಡುಗಳನ್ನು ಮರುಸಂಯೋಜನೆ ಮಾಡಲಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಚಿತ್ರದಲ್ಲಿ ಬಸವಣ್ಣ ಅವರ ಕಳಬೇಡ…ಕೊಲಬೇಡ…ಹುಸಿಯ ನುಡಿಯಲೂ ಬೇಡ…, ಬಿ.ಆರ್.ಲಕ್ಷ್ಮಣ್ ರಾವ್ ಅವರ `ಹೇಳಿ ಹೋಗು ಕಾರಣ…, ಜಿ ಪಿ ರಾಜರತ್ನಂ ಅವರ `ಹೆಂಡ ಹೆಂಡ್ತಿ ಕನ್ನಡ ಪದಗೊಳ್ ಅಂದ್ರೆ ರತ್ನಂಗ್ ಪ್ರಾಣ…, ಡಿವಿಜಿ ಅವರ `ಬದುಕು ಜಟಕಾ ಬಂಡಿ…ವಿಧಿ ಅದರ ಸಾಹೇಬ…, ಕೆ.ಎಸ್.ನರಸಿಂಹ ಸ್ವಾಮಿ ಅವರ `ನಿನ್ನ ಪ್ರೇಮದ ಪರಿಯ ನಾನಾರಿಯೆ ಕನಕಾಂಗಿ ಹಾಡುಗಳನ್ನು ಮರು ಸಂಯೋಜನೆ ಮಾಡಿ ಹಾಡಿಸಲಾಗಿದೆ. ಇಷ್ಟೇ ಅಲ್ಲದೆ ಇನ್ನೂ ಐದು ಹಾಡುಗಳಿಗೆ ಅಜನಿಷ್ ಲೋಕನಾಥ್ ಸ್ವರ ಸಂಯೋಜನೆ ಮಾಡಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಗೀತ ಸಾಹಿತ್ಯ ಸಹ ಇದೆ. ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಡಿಫರೆಂಟ್ ಡ್ಯಾನಿ ಹಾಗೂ ವಿನೋದ್ ಸಾಹಸ, ಮದನ್ ಹರಿಣಿ, ವಿ.ಮುರಳಿ, ಕಲೈ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇದೆ.

  • ಶ್ರೇಯಸ್ ಪಡ್ಡೆಹುಲಿಯಾದದ್ದರ ಹಿಂದಿದೆ ಪರಿಶ್ರಮದ ಕಹಾನಿ!

    ಶ್ರೇಯಸ್ ಪಡ್ಡೆಹುಲಿಯಾದದ್ದರ ಹಿಂದಿದೆ ಪರಿಶ್ರಮದ ಕಹಾನಿ!

    ಬೆಂಗಳೂರು: ಪಡ್ಡೆಹುಲಿ ಚಿತ್ರದ ನವನಾಯಕ ಶ್ರೇಯಸ್ ಅವರ ಶ್ರದ್ಧೆ ಎಂಥಾದ್ದೆಂಬುದರ ಝಲಕುಗಳು ಈಗಾಗಲೇ ಅನಾವರಣಗೊಂಡಿವೆ. ಶ್ರೇಯಸ್ ಅವರಲ್ಲೊಬ್ಬ ಪಳಗಿದ ನಟನ ಚಹರೆಯನ್ನ ಕಂಡು ಪ್ರೇಕ್ಷಕರು ಕೂಡಾ ಥ್ರಿಲ್ ಆಗಿದ್ದಾರೆ. ಎಂ.ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಈ ಚಿತ್ರ, ಗುರುದೇಶಪಾಂಡೆಯವರ ನಿರ್ದೇಶನದಲ್ಲಿ ಇದೇ ಏಪ್ರಿಲ್ 19ರಂದು ತೆರೆ ಕಾಣಲು ರೆಡಿಯಾಗಿದೆ.

    ಈ ಹಿಂದೆ ರಾಜಾಹುಲಿ ಎಂಬ ಸೂಪರ್ ಹಿಟ್ ಕೊಟ್ಟಿದ್ದವರು ನಿರ್ದೇಶಕ ಗುರು ದೇಶಪಾಂಡೆ. ಅವರು ಪಡ್ಡೆಹುಲಿ ಚಿತ್ರವನ್ನೂ ಕೂಡಾ ರಾಜಾಹುಲಿಯಂತೆಯೇ ಬಲು ಕಾಳಜಿಯಿಂದ ರೂಪಿಸಿದ್ದಾರೆ. ಪ್ರತಿಯೊಂದರಲ್ಲಿಯೂ ಪರಿಪೂರ್ಣತೆ ಬಯಸುವ ಗುರುದೇಶಪಾಂಡೆ ಆ ದಿಸೆಯಲ್ಲಿಯೇ ಶ್ರೇಯಸ್ ಅವರನ್ನು ಪಳಗಿದ ನಟನಂತೆ ರೂಪಿಸಿದ್ದಾರೆ.

    ಈ ಸಿನಿಮಾಗಾಗಿಯೇ ದೈಹಿಕವಾಗಿಯೂ ಫಿಟ್ ಆಗಿರೋ ಶ್ರೇಯಸ್ ನಟನೆಯಲ್ಲಿಯೂ ತರಬೇತಿ ಪಡೆದುಕೊಂಡಿದ್ದಾರೆ. ಡ್ಯಾನ್ಸ್, ಫೈಟ್ ಸೇರಿದಂತೆ ಈ ಚಿತ್ರಕ್ಕೆ ಏನೇನು ಬೇಕೋ ಅದೆಲ್ಲದರಲ್ಲಿಯೂ ಪಳಗಿಕೊಂಡಿದ್ದಾರೆ. ಎಂಥಾ ರಿಸ್ಕೀ ಸನ್ನಿವೇಶಗಳಿದ್ದರೂ ಮತ್ತೊಂದು ಯೋಚನೆ ಮಾಡದೆ ಅಖಾಡಕ್ಕಿಳಿದು ಬಿಡುತ್ತಿದ್ದ ಶ್ರೇಯಸ್ ಅವರ ಬದ್ಧತೆಯ ಬಗ್ಗೆ ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಇಡೀ ಚಿತ್ರತಂಡದಲ್ಲೊಂದು ಮೆಚ್ಚುಗೆಯಿದೆ.

    ಇಂಥಾ ಪರಿಶ್ರಮಕ್ಕೆ ಯಾವತ್ತಿದ್ದರೂ ಫಲ ಇದ್ದೇ ಇರುತ್ತೆ. ಹೀಗೆ ಶ್ರಮ ವಹಿಸಿ ಬಂದವರನ್ನು ಕನ್ನಡದ ಸಹೃದಯಿ ಪ್ರೇಕ್ಷಕರು ದೂರ ತಳ್ಳಿದ ಉದಾಹರಣೆಗಳೇ ಇಲ್ಲ. ಪಡ್ಡೆಹುಲಿಯನ್ನೂ ಕೂಡಾ ಪ್ರೇಕ್ಷಕರು ಅಂಥಾದ್ದೇ ಮನಸ್ಥಿತಿಯೊಂದಿಗೆ ಸ್ವೀಕರಿಸಿ ಗೆಲ್ಲಿಸೋ ಎಲ್ಲ ಲಕ್ಷಣಗಳೂ ದಟ್ಟವಾಗಿವೆ.