Tag: ಗುರು ರಾಘವೇಂದ್ರ ಸ್ವಾಮಿ

  • ಸಾಲು ಸಾಲು ರಜೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ

    ಸಾಲು ಸಾಲು ರಜೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ

    ರಾಯಚೂರು: ಸಾಲು ಸಾಲು ರಜೆಗಳ ಹಿನ್ನೆಲೆ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ಭಕ್ತಸಾಗರ ಹರಿದು ಬಂದಿದೆ. ಕ್ರಿಸ್‌ಮಸ್ ರಜೆ, ಹೊಸವರ್ಷಾಚರಣೆಗೆ ದಿನಗಣನೆ, ಅಮವಾಸ್ಯೆ ಹಿನ್ನೆಲೆ ರಾಯರ ಮಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ.

    ಸಾವಿರಾರು ಭಕ್ತರ ಭೇಟಿಯಿಂದ ಮಂತ್ರಾಲಯ ರಾಯರ ಮಠ ತುಂಬಿ ತುಳುಕುತ್ತಿದ್ದು, ಮಠದ ರೂಂಗಳಿಗೆ ಆನ್‌ಲೈನ್ ಬುಕಿಂಗ್ ಬಂದ್ ಮಾಡಲಾಗಿದೆ. ಕೇವಲ ಆಫ್‌ಲೈನ್ ಬುಕಿಂಗ್‌ಗೆ ಮಾತ್ರ ಅವಕಾಶ ನೀಡಲಾಗಿದ್ದು, ಭಕ್ತರು ಕೋಣೆಗಳಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಇದನ್ನೂ ಓದಿ: ಮಹಿಳೆಯರನ್ನು ಉದ್ಯೋಗದಿಂದ ಕೈಬಿಡಿ – ಎನ್‌ಜಿಒಗಳಿಗೆ ತಾಲಿಬಾನ್‌ ಎಚ್ಚರಿಕೆ

    ಕಳೆದ ನಾಲ್ಕೈದು ದಿನಗಳಿಂದ ಮಂತ್ರಾಲಯ ಮಠದಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ ಡಿ.25 ರಿಂದ ಜ.2 ರವರೆಗೆ ರೂಂಗಳ ಆನ್‌ಲೈನ್ ಬುಕ್ಕಿಂಗ್ ಬಂದ್ ಮಾಡಲಾಗಿದ್ದು, ಜ.1ರ ವರೆಗೆ ಇದೇ ರೀತಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದು ಶ್ರೀಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇನ್ನೂ ಮಠದ ಪ್ರಾಂಗಣ ಹಾಗೂ ರಾಜಬೀದಿಯಲ್ಲಿ ಎಲ್ಲೂ ನೋಡಿದರೂ ರಾಯರ ಭಕ್ತರೇ ಕಾಣಸಿಗುತ್ತಿದ್ದಾರೆ.ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ

  • ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ: ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭಾಗಿ

    ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ: ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭಾಗಿ

    – ಕೊನೆಕ್ಷಣದಲ್ಲಿ ರದ್ದಾದ ಹೆಲಿಕ್ಯಾಪ್ಟರ್ ಪುಷ್ಪವೃಷ್ಠಿ

    ರಾಯಚೂರು: ಮಂತ್ರಾಲಯದಲ್ಲಿ (Mantralaya) ಗುರು ರಾಘವೇಂದ್ರ ಸ್ವಾಮಿಗಳ (Guru Raghavendra) 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಹಾರಥೋತ್ಸವ ಅದ್ದೂರಿಯಾಗಿ ನಡೆಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

    ಉತ್ತರಾರಾಧನೆಯ ಮಹಾರಥೋತ್ಸವದ ವೈಭವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಸಾಕ್ಷಿಯಾದರು. ಗುರು ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನು ಮಂತ್ರಾಲಯದಲ್ಲಿ ಉತ್ತರಾರಾಧನೆಯಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಉತ್ತರಾರಾಧನೆ ಹಿನ್ನೆಲೆ ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು.ಇದನ್ನೂ ಓದಿ: iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    ಮಹಾರಥೋತ್ಸವ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ( Sri Subudhendra Teertharu ) ಭಕ್ತರನ್ನು ಉದ್ದೇಶಿಸಿ ಆಶೀವಚನ ನೀಡಿದ ಅವರು, ಜಾತಿ, ಮತ, ಬೇಧವಿಲ್ಲದೆ ದೇಶದಲ್ಲಿ ನಡೆಯುವ ಹಬ್ಬ ರಾಯರ ಆರಾಧನಾ ಮಹೋತ್ಸವ. ವಿಶ್ವಕ್ಕೆ ಕಲ್ಯಾಣವಾಗಲಿ, ಪ್ರಾಣಿ, ಸಸ್ಯ, ಮನುಕುಲಕ್ಕೆ ಒಳ್ಳೆಯದಾಗಲಿ. ಗಲಭೆಗಳು ಆಗದಂತೆ ಭಗವಂತ ಆರ್ಶೀವದಿಸಲಿ ಎಂದು ಪ್ರಾರ್ಥಿಸೋಣ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿಯಾಗಿದೆ ಅದನ್ನು ಖಂಡಿಸೋಣ. ಎಲ್ಲರೂ ಅಣ್ಣ-ತಮ್ಮಂದಿರ ಹಾಗೇ ಬಾಳುವಂತೆ ಆಗಬೇಕು. ದೇಶ-ವಿದೇಶಗಳ ನಡುವೆ ಗಲಭೆಯಾಗದಂತೆ ಭಗವಂತ ಕಾಪಾಡಲಿ ಎಂದು ಎಲ್ಲರ ಪರವಾಗಿ ಕೇಳಿಕೊಳ್ಳುತ್ತೇನೆ ಎಂದರು.

    ಈ ಬಾರಿ ಉತ್ತರಾರಾಧನೆಯಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣರಾಜ ಚಾಮರಾಜ ಒಡೆಯರ್ ಭಾಗವಹಿಸಿದ್ದರು. ಯದುವೀರ್ ಒಡೆಯರ್‌ಗೆ ಮಠದಿಂದ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಿನ್ನದ ಸರ, ನಗದು ಜೊತೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯದುವೀರ್ ಒಡೆಯರ್ (Yaduveer Wadiyar) ಮೈಸೂರು ದಸರಾದಷ್ಟೇ ವಿಜೃಂಭಣೆಯಿಂದ ರಾಯರ ಆರಾಧನೆ ನಡೆಯುತ್ತಿದೆ. ಪ್ರಾಚೀನ ಕಾಲದಿಂದಲೂ ರಾಯರ ಆರಾಧನೆ ನಡೆಯುತ್ತಿದೆ ಮುಂದೆಯೂ ನಡೆಯುತ್ತದೆ. ಗುರುಗಳು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆಯೋಣ. ನಮ್ಮ ವಂಶದ ಪರವಾಗಿ ಇಂದು ಸನ್ಮಾನ ಸ್ವೀಕಾರ ಮಾಡಿದ್ದೇನೆ. ಮೈಸೂರು ಸಂಸ್ಥಾನದ ಪರವಾಗಿ ಮಂತ್ರಾಲಯ ಮಠಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಲೋಕಾಯುಕ್ತ, ಸಿಬಿಐಗಿಂತ ಜಾಸ್ತಿ ಹಿಂಸೆ ಕೊಡ್ತಿದೆ – ಡಿಕೆಶಿ

    ಮಂತ್ರಾಲಯದಲ್ಲಿ ಮಹಾರಥೋತ್ಸವಕ್ಕೆ ಪ್ರತೀವರ್ಷ ನಡೆಯುತ್ತಿದ್ದ ಪುಷ್ಪವೃಷ್ಠಿ ಈ ಬಾರಿ ಕೊನೆಕ್ಷಣದಲ್ಲಿ ರದ್ದಾಯಿತು. ಜಿಲ್ಲಾಡಳಿತದಿಂದ ಅನುಮತಿ ಸಿಗದ ಹಿನ್ನೆಲೆ ಪುಷ್ಪವೃಷ್ಠಿ ನಡೆಯಲಿಲ್ಲ. ಹೆಲಿಕಾಪ್ಟರ್ ಹಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಪುಷ್ಪ ವೃಷ್ಟಿಗೆ ಅನುಮತಿ ಸಿಗದ ಹಿನ್ನೆಲೆ ಈ ಬಾರಿ ರದ್ದುಮಾಡಲಾಗಿದೆ.

  • ಮಂತ್ರಾಲಯದ ಹೆಸರಲ್ಲಿ ನಕಲಿ ವೆಬ್‍ಸೈಟ್ – ಭಕ್ತರಿಂದ ಹಣ ವಸೂಲಿ ಮಾಡಿರುವ ಖದೀಮರು

    ಮಂತ್ರಾಲಯದ ಹೆಸರಲ್ಲಿ ನಕಲಿ ವೆಬ್‍ಸೈಟ್ – ಭಕ್ತರಿಂದ ಹಣ ವಸೂಲಿ ಮಾಡಿರುವ ಖದೀಮರು

    ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಭಕ್ತರು ದೇಶ ಮಾತ್ರವಲ್ಲ ವಿದೇಶದಲ್ಲೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಖದೀಮರು ಮಠದ ಹೆಸರಿನಲ್ಲಿ ಆನ್‍ಲೈನ್ ಮೂಲಕ ಭಕ್ತರಿಂದ ಹಣ ವಸೂಲಿ ಮಾಡಿದ್ದಾರೆ. ಸಾಕಷ್ಟು ಜನ ಭಕ್ತರು ಸತ್ಯ ಅರಿಯದೇ ಕಾಣಿಕೆ ಅಂತಲೋ, ಭಕ್ತಿ ಸಮರ್ಪಣೆ ಅಂತಲೋ ದುಡ್ಡನ್ನು ಹಾಕಿ ಮೋಸ ಹೋಗಿದ್ದಾರೆ.

    ಮೊದಲ ಪ್ರಕರಣ
    ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀಗುರು ರಾಘವೇಂದ್ರ ಸ್ವಾಮಿ ಮಠದ ಹೆಸರು ದುರ್ಬಳಕೆ ಮಾಡಿಕೊಂಡು ಕಳೆದ ಎರಡು ವರ್ಷಗಳಿಂದ ವಿವಿಧ ಗುಂಪುಗಳು ಆನ್‍ಲೈನ್‍ನಲ್ಲಿ ಭಕ್ತರಿಂದ ಹಣ ವಸೂಲಿ ನಡೆಸಿವೆ. ಮಠದಲ್ಲಿ 25 ರೂಪಾಯಿಗೆ ಸಿಗುವ ಪರಿಮಳ ಪ್ರಸಾದದ ಒಂದು ಪ್ಯಾಕೆಟ್‍ನ್ನು ನೇರವಾಗಿ ಹೋಂ ಡೆಲಿವರಿ ಮಾಡುತ್ತೇವೆ ಎಂದು ಒಂದು ಪ್ಯಾಕೆಟ್‍ಗೆ 400 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇದರಿಂದಲೇ ಭಕ್ತರಿಂದ ಲಕ್ಷಾಂತರ ರೂಪಾಯಿ ವಸೂಲಿಯಾಗಿದೆ. ಇದನ್ನೂ ಓದಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ 

    ಎರಡನೇ ಪ್ರಕರಣ
    ಮಂತ್ರಾಲಯದ ಸ್ಥಳೀಯ ಧಿರೇಂದ್ರ ಕೊರೊನಾ ಬಳಿಕ ಮಠದ ಸಿಬ್ಬಂದಿ, ಅರ್ಚಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಾಯ ಮಾಡಿ ಎಂದು ಬ್ಯಾಂಕ್ ಅಕೌಂಟ್ ನಂಬರ್, ಗೂಗಲ್ ಪೇ ನಂಬರ್ ನೀಡಿ ಭಕ್ತರಿಂದ ಹಣ ವಸೂಲಿ ಮಾಡಿದ್ದಾನೆ.

    ಮೂರನೇ ಪ್ರಕರಣ
    ಮಂತ್ರಾಲಯದಲ್ಲಿನ ಯೋಜನೆಗೆ ಶ್ರೀಮಠದ ಭಕ್ತರು ಪ್ರಯೋಜಕತ್ವವನ್ನು ವಹಿಸಿಕೊಳ್ಳುವುದಕ್ಕೆ ಹಾಗೂ ದೇಣಿಗೆ ನೀಡುವಂತೆ ಕೋರಿ ‘ಮಾತೃಭೂಮಿ ಹಿಂದೂ ಸ್ಪಂದನೆ’ ಹೆಸರಿನ ವಾಟ್ಸಪ್ ಗ್ರೂಪ್‍ನಲ್ಲಿ ಹಣ ವಸೂಲಿ ನಡೆಸಲಾಗಿದೆ. ಈಗಾಗಲೇ ಪ್ರತ್ಯೇಕ ಮೂರು ಪ್ರಕರಣಗಳು ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇಬ್ಬರು ಆರೋಪಿಗಳ ಬಂಧನವಾಗಿದೆ.

    ಮುಂದೆ ಯಾವುದೇ ಭಕ್ತರು ವಂಚಕರ ಬಲೆಗೆ ಬೀಳದೆ, ಕಾಣಿಕೆ ನೀಡುವವರು ನೇರವಾಗಿ ಮಠದ ಅಧಿಕೃತ ವೆಬ್‍ಸೈಟ್ ಮೂಲಕ ಅಥವಾ ನೇರವಾಗಿ ದೇಣಿಗೆ ನೀಡಬೇಕು. ಮೋಸ ಹೋದವರು ತಮ್ಮ ಹತ್ತಿರದ ಪೊಲೀಸ್ ಠಾಣೆಯಲ್ಲೇ ದೂರು ದಾಖಲಿಸಬೇಕು ಎಂದು ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ತಿಳಿಸಿದ್ದಾರೆ.

    ಭಕ್ತರು ವಂಚಕರ ಹಾವಳಿ ಹೆಚ್ಚಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ನಕಲಿ ವೆಬ್‍ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಠದ ಹೆಸರು ಬಳಸಿಕೊಂಡು ಹಣ ವಸೂಲಿಗೆ ನಿಂತಿರುವವರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ

    ಕಳೆದ ಎರಡು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ವಿವಿಧ ಗುಂಪುಗಳು ರಾಯರ ಮಠದ ಹೆಸರಿನಲ್ಲಿ ವಸೂಲಿ ಮಾಡಿವೆ. ಕನಿಷ್ಠ ಈಗಲಾದ್ರೂ ಭಕ್ತರು ಎಚ್ಚೆತ್ತುಕೊಂಡು ಹಣ ವರ್ಗಾವಣೆ ಮಾಡಬೇಕಿದೆ. ಆಂಧ್ರಪ್ರದೇಶ ಹಾಗೂ ಕರ್ನಾಟಕ ಪೊಲೀಸರು ಖದೀಮರ ಗುಂಪುಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕಿದೆ.

    Live Tv