Tag: ಗುಲಾಮ್‌ ರಸೂಲ್‌ ಬಲ್ಯಾವಿ

  • ಸಶಸ್ತ್ರ ಪಡೆಯಲ್ಲಿ ಮುಸ್ಲಿಮರಿಗೆ 30% ಮೀಸಲಾತಿ ನೀಡಿ: ಜೆಡಿಯು

    ಸಶಸ್ತ್ರ ಪಡೆಯಲ್ಲಿ ಮುಸ್ಲಿಮರಿಗೆ 30% ಮೀಸಲಾತಿ ನೀಡಿ: ಜೆಡಿಯು

    ಪಾಟ್ನಾ: ಮುಸ್ಲಿಮರಿಗೆ ಸಶಸ್ತ್ರ ಪಡೆಯಲ್ಲಿ ಕನಿಷ್ಟ 30% ಆದರೂ ಮೀಸಲಾತಿ ನೀಡಬೇಕು ಎಂದು ಜೆಡಿಯು (JDU)ನಾಯಕ ಗುಲಾಮ್ ರಸೂಲ್ (Gulam Rasool Balywai ) ಬಲ್ಯಾವಿ ಮಂಗಳವಾರ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ.

    2019ರ ಪುಲ್ವಾಮ ಭಯೋತ್ಪಾದನಾ (PulwamaA Attack) ದಾಳಿಗೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸೈನಿಕರ ತ್ಯಾಗ ಬಲಿದಾನದ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಕಿಸ್ತಾನಕ್ಕೆ ಹಾಗೂ ಭಯೋತ್ಪಾದಕರಿಗೆ ಹೆದರುತ್ತಾರೆ. ಮುಸಲ್ಮಾನರಿಗೆ 30% ಮೀಸಲಾತಿ ಕೊಟ್ಟು ನೋಡಲಿ. ಪಾಕಿಸ್ತಾನ ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸುವಾಗ ಬಂದಿದ್ದು ಅಬ್ದುಲ್ ಕಲಾಂ (APJ Abdul Kalam) ಎಂಬ ಮುಸಲ್ಮಾನ್ ವ್ಯಕ್ತಿಯೇ ಹೊರತು ನಾಗ್ಪುರದ ಯಾವ ಬಾಬಾನೂ ಬರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

    ಬಿಜೆಪಿ ಸೈನಿಕರ ಹೆಸರಿನಲ್ಲಿ ಮತಯಾಚನೆ ಮಾಡಿದೆ. ಬಿಜೆಪಿ ತನ್ನ ಅಪರಾಧಗಳನ್ನು ಮರೆಮಾಚಲು ಸೇನೆಯ ಹೆಸರನ್ನು ಬಳಸಿಕೊಳ್ಳುತ್ತಿದೆ. ಸೈನಿಕರ ರಕ್ತವನ್ನು ರಾಜಕೀಯಕ್ಕೆ ಬಳಕೆ ಮಾಡಿ ತನ್ನ ತಪ್ಪುಗಳನ್ನು ಅಡಗಿಸುವ ಪ್ರಯತ್ನ ಮಾಡಿದೆ ಎಂದು ಅವರು ದೂರಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬಿಹಾರದ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ನಿತೀಶ್ ಕುಮಾರ್, ಬುಲ್ಯಾವಿಯವರ ಬೇಡಿಕೆಯನ್ನು ಖಂಡಿಸಿದ್ದಾರೆ. ಅವರ ಹೇಳಿಕೆಯ ಬಗ್ಗೆ ವಿವರಣೆಯನ್ನು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಪಠಾಣ್’ ಚಿತ್ರಕ್ಕೆ ಮತ್ತೊಂದು ಜಯ : ಹಾಡು ನಿರ್ಬಂಧಕ್ಕೆ ಸಲ್ಲಿಸಿದ್ದ ಅರ್ಜಿ ವಜಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

    ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

    ರಾಂಚಿ: ಸೇನೆಯಲ್ಲಿ ಮುಸ್ಲಿಮರಿಗೆ (Muslims) (ಸಶಸ್ತ್ರ ಪಡೆ) ಶೇ.30 ರಷ್ಟು ಮೀಸಲಾತಿ ನೀಡಬೇಕು ಎಂದು ಜನತಾ ದಳ (ಯುನೈಟೆಡ್) (JDU) ಮುಖಂಡ ಗುಲಾಮ್ ರಸೂಲ್ ಬಲ್ಯಾವಿ (Gulam Rasool Balyawi) ಒತ್ತಾಯಿಸಿದ್ದಾರೆ.

    ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಕ್ಷವು ತನ್ನ ಅಪರಾಧಗಳನ್ನು ಮುಚ್ಚಿಡಲು ಸೇನೆಯ ಹಿಂದೆ ಅಡಗಿದೆ. ಸೈನಿಕರ ಶೌರ್ಯ ಮತ್ತು ಧೈರ್ಯದ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

    ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಸೇನೆಯ ಹಿಂದೆ ಅಡಗಿಕೊಂಡಿದೆ. ಬಿಜೆಪಿಯವರು ಮತಕ್ಕಾಗಿ ಸೈನಿಕರ ರಕ್ತದೊಂದಿಗೆ ರಾಜಿ ಮಾಡಿಕೊಂಡಿದ್ದಾರೆ. ಅವರು ನಮ್ಮ ಪಡೆಗಳ ತ್ಯಾಗ, ಶೌರ್ಯ ಮತ್ತು ಹುತಾತ್ಮರ ಲಾಭವನ್ನು ಪಡೆದುಕೊಂಡಿದ್ದಾರೆ. ಸೇನೆಯ ಮೇಲೆ ನಮಗೆ ನಂಬಿಕೆ ಇದೆ. ಸಶಸ್ತ್ರ ಪಡೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 30 ರಷ್ಟು ಮೀಸಲಾತಿ ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದರು. ಪುಲ್ವಾಮಾ ಭಯೋತ್ಪಾದಕ ದಾಳಿಗೆ ಫೆ.14ಕ್ಕೆ ನಾಲ್ಕು ವರ್ಷ. ಈ ವೇಳೆ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ವೇಳೆ ಜೆಡಿಯು ನಾಯಕ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    2019ರ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ಹೆದ್ದಾರಿಯ ಪುಲ್ವಾಮದ ಅವಂತಿಪುರದಲ್ಲಿ ಪಾಕಿಸ್ತಾನದ ಜೈಷ್‌–ಇ– ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ಮಾಡಿತ್ತು. ಪುಲ್ವಾಮದ ಅವಂತಿಪುರ ಹೆದ್ದಾರಿಯಲ್ಲಿ ಒಟ್ಟು 70 ವಾಹನಗಳಲ್ಲಿ 2500 ಸಿಆರ್‌ಪಿಎಫ್ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. 70 ವಾಹನಗಳು ಸರತಿ ಸಾಲಿನಲ್ಲಿ ತೆರಳುತ್ತಿದ್ದವು. ಈ ಸಾಲಿನಲ್ಲಿ ನಿರ್ದಿಷ್ಟ ಬಸ್‌ವೊಂದರ ಬಳಿಗೆ ಸ್ಫೋಟಕ ತುಂಬಿದ್ದ ಕಾರು ತರುವಲ್ಲಿ ಯಶಸ್ವಿಯಾಗಿದ್ದ ಉಗ್ರರು ಎರಡು ಬಸ್‌ಗಳನ್ನು ಸ್ಫೋಟಿಸಿದ್ದರು. ಜೈಷ್‌–ಇ– ಮೊಹಮ್ಮದ್‌ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k