Tag: ಗೂಂಡಾ ಕಾಯ್ದೆ

  • ಗೂಂಡಾ ಕಾಯ್ದೆ ಅಡಿ ಪುನೀತ್‌ ಕೆರೆಹಳ್ಳಿ ಅರೆಸ್ಟ್‌ – 1 ವರ್ಷ ಸಿಗಲ್ಲ ಜಾಮೀನು

    ಗೂಂಡಾ ಕಾಯ್ದೆ ಅಡಿ ಪುನೀತ್‌ ಕೆರೆಹಳ್ಳಿ ಅರೆಸ್ಟ್‌ – 1 ವರ್ಷ ಸಿಗಲ್ಲ ಜಾಮೀನು

    ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಸಿಸಿಬಿ ಪೊಲೀಸರು (CCB) ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ಬಂಧಿಸಿದ್ದಾರೆ.

    ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್‌ ಕೆರೆಹಳ್ಳಿ(32) ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯ (Gunda Act) ಅಡಿ ಕೇಸ್‌ ದಾಖಲಿಸಿದ್ದಾರೆ.

    ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ ಆರೋಪ ಪುನೀತ್‌ ಕೆರೆಹಳ್ಳಿ ಮೇಲೆ ಬಂದಿತ್ತು.  ಇದನ್ನೂ ಓದಿ: ಭಾರತದ ಚಂದ್ರಯಾನ-3 Vs ರಷ್ಯಾದ ಲೂನಾ-25: ಚಂದ್ರನ ಮೇಲೆ ಮೊದಲು ಹೆಜ್ಜೆ ಇಡೋದು ಯಾರು?

    ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ನೇರವಾಗಿ ಜೈಲಿಗೆ ಕಳುಹಿಸಿದ್ದಾರೆ. ಗೂಂಡಾ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ ಮತ್ತು ಒಂದು ವರ್ಷ ಜಾಮೀನು (Bail) ಸಿಗುವುದಿಲ್ಲ.

    ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್‌ ಜಾರಿ ಮಾಡಿದ್ದರು.

    ಪುನೀತ್‌ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಚಾಮರಾಜಪೇಟೆ ಪೊಲೀಸರು ಈ ಹಿಂದೆ ಮಾಹಿತಿ ನೀಡಿದ್ದರು.

    ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಆರೋಪ ಪುನೀತ್‌ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯ ಜಾಮೀನು ನೀಡಿತ್ತು.

    ಜುಲೈ ತಿಂಗಳಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಬಳಿ ಇರುವ ನಾಗರಕಟ್ಟೆಯಲ್ಲಿ ಪೂಜೆ ನಡೆಸಿದ್ದಕ್ಕೆ ಪುನೀತ್‌ ಕೆರೆಹಳ್ಳಿಗೆ ಬೆಂಗಳೂರು ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು. ಬಿಬಿಎಂಬಿ ಮೈದಾನದ ಪಕ್ಕದಲ್ಲಿ ಇರುವ ನಾಗರಕಟ್ಟೆಯ ಬಳಿ ಪೂಜೆಯನ್ನು ಮಾಡಲು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿಯನ್ನು ಪಡೆದಿದ್ದಲ್ಲಿ ಅನುಮತಿ ಪತ್ರದ ಪ್ರತಿಯನ್ನು ನೀಡುವಂತೆ ನೋಟಿಸ್ ಕೊಟ್ಟಿದ್ದರು. ಅನುಮತಿ ಪಡೆಯಬೇಕು ಎಂದು ಪುನಿತ್ ಕೆರೆಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ವಿಪಕ್ಷ ಬಿಜೆಪಿ (BJP) ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಪುಂಡರ ಮೇಲೆ ಗೂಂಡಾ ಕಾಯ್ದೆ ಪ್ರಯೋಗ – ಈ ಕಾಯ್ದೆಯ ವಿಶೇಷತೆ ಏನು?

    ಬೆಂಗಳೂರು ಪುಂಡರ ಮೇಲೆ ಗೂಂಡಾ ಕಾಯ್ದೆ ಪ್ರಯೋಗ – ಈ ಕಾಯ್ದೆಯ ವಿಶೇಷತೆ ಏನು?

    ಬೆಂಗಳೂರು: ದೇವರಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಹಾಕಿ ಬಂಧಿಸಿ ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

    ಭಾರೀ ಪ್ರಮಾಣದ ಅಪರಾಧ ಕೃತ್ಯಗಳನ್ನು ಎಸಗಿದ ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿಲಾಗುತ್ತದೆ. ಈ ಕಾಯ್ದೆ ಬಿದ್ದರೆ ಆರೋಪಿಗಳಿಗೆ ಜಾಮೀನು ಸಿಗುವುದಿಲ್ಲ. ಗೂಂಡಾ ಕಾಯ್ದೆ ಅಲ್ಲದೇ ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯ ಅಡಿಯೂ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ಹೀಗಾಗಿ ಇಲ್ಲಿ ಗೂಂಡಾ ಕಾಯ್ದೆ ಯಾವಾಗ ಬಂದಿತ್ತು? ವಿಶೇಷತೆ ಏನು ಇತ್ಯಾದಿ ಮಾಹಿತಿಗಳನ್ನು ನೀಡಲಾಗಿದೆ.

    ಏನಿದು ಗೂಂಡಾ ಕಾಯ್ದೆ?
    ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ರೌಡಿಗಳ ಹಾವಳಿ ಮೀತಿ ಮೀರಿತ್ತು. ಈ ರೌಡಿಗಳನ್ನು ಮಟ್ಟ ಹಾಕಲು 1985ರಲ್ಲಿ ಜನತಾ ಸರ್ಕಾರ ಗೂಂಡಾ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿತು.

    ಯಾರ ವಿರುದ್ಧ ಕ್ರಮ ಕೈಗೊಳ್ಳಬಹುದು?
    ತಿದ್ದು ಪಡಿಯಾದ ಕಾಯ್ದೆ ವ್ಯಾಪ್ತಿಗೆ ಆಸಿಡ್ ದಾಳಿಕೋರರು, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಪರಿಸರಕ್ಕೆ ಹಾನಿ ಮಾಡುವವರು, ಡಿಜಿಟಲ್ ಮೀಡಿಯಾದಲ್ಲಿ (ವೆಬ್‍ಸೈಟ್) ವಂಚಿಸುವವರು, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು, ಕಾನೂನು ಬಾಹಿರ ಹಣಕಾಸು ವ್ಯವಹಾರ ನಡೆಸುವವರನ್ನು ಸೇರಿಸಲಾಗಿದೆ.

    ನೇರವಾಗಿ ಜೈಲಿಗೆ:
    ಈ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ. ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದಾಗಿದೆ. ಈ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ. ಮುನ್ನಚ್ಚರಿಕಾ ಕ್ರಮವಾಗಿ ಬಂಧಿಸಿ ಗಡೀಪಾರು ಆದೇಶವನ್ನೂ ಹೊರಡಿಸಲು ಅವಕಾಶವಿದೆ. ಇದನ್ನೂ ಓದಿ: ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

    ಯಾವ ರಾಜ್ಯದಲ್ಲಿದೆ?
    ಸ್ವಾತಂತ್ರ್ಯಾ ನಂತರ ರಾಜಸ್ತಾನ (1975), ಉತ್ತರ ಪ್ರದೇಶ (1971), ತಮಿಳುನಾಡು (1982), ಕೇರಳ(2007) ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಿವೆ. ಡಿಜಿಟಲ್ ಅಪರಾಧ, ಸೈಬರ್ ಅಪರಾಧಗಳನ್ನು ಗೂಂಡಾ ಕಾಯ್ದೆಯಡಿ ತಮಿಳುನಾಡು ಮೊದಲ ಬಾರಿಗೆ 2004ರಲ್ಲಿ ತಂದಿತ್ತು. ಇದನ್ನೂ ಓದಿ: ನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

  • ಗೂಂಡಾ ಕಾಯ್ದೆ ಅಡಿ ಅರೆಸ್ಟ್ – ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್‌ಗಳು

    ಗೂಂಡಾ ಕಾಯ್ದೆ ಅಡಿ ಅರೆಸ್ಟ್ – ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್‌ಗಳು

    ಬೆಂಗಳೂರು: ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಇಬ್ಬರು ರೌಡಿಶೀಟರ್‌ಗಳ ಮೇಲೆ ಬೆಂಗಳೂರು ಪೊಲೀಸರು ಗೂಂಡಾ ಅಕ್ಟ್ ಜಾರಿ ಮಾಡಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.

    ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಶ್ರೀಧರ್ ಸೋಡ, ಸಂತೋಷ್ ಮೂಳೆ ಮೇಲೆ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಶ್ರೀಧರ್ ಸೋಡ ವೈಯ್ಯಾಲಿಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಈತ ಕೊಲೆ, ದರೋಡೆ, ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ಗೂಂಡಾ ಆಕ್ಟ್ ಜಾರಿ ಮಾಡಲಾಗಿದೆ.

    ಅದೇ ರೀತಿ ಸಂಪಂಗಿರಾಮ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂತೋಷ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿ 18ಕ್ಕೂ ಹೆಚ್ಚು ಪ್ರಕರಣಗಳು ಇವೆ. ಅಲ್ಲದೇ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಹಿನ್ನಲೆ ಸಂತೋಷ್ ಮೇಲೂ ಗೂಂಡಾ ಕಾಯ್ದೆ ಜಾರಿ ಮಾಡಿ ಪೊಲೀಸರು ಬಂಧಿಸಿದ್ದಾರೆ.

    ಏನಿದು ಗೂಂಡಾ ಕಾಯ್ದೆ?
    ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ರೌಡಿಗಳ ಹಾವಳಿ ಮೀತಿ ಮೀರಿತ್ತು. ಈ ರೌಡಿಗಳನ್ನು ಮಟ್ಟ ಹಾಕಲು 1985ರಲ್ಲಿ ಜನತಾ ಸರ್ಕಾರ ಗೂಂಡಾ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿತು.

    ಯಾರ ವಿರುದ್ಧ ಕ್ರಮ ಕೈಗೊಳ್ಳಬಹುದು?
    ತಿದ್ದು ಪಡಿಯಾದ ಕಾಯ್ದೆ ವ್ಯಾಪ್ತಿಗೆ ಆಸಿಡ್ ದಾಳಿಕೋರರು, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಪರಿಸರಕ್ಕೆ ಹಾನಿ ಮಾಡುವವರು, ಡಿಜಿಟಲ್ ಮೀಡಿಯಾದಲ್ಲಿ (ವೆಬ್‍ಸೈಟ್) ವಂಚಿಸುವವರು, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು, ಕಾನೂನು ಬಾಹಿರ ಹಣಕಾಸು ವ್ಯವಹಾರ ನಡೆಸುವವರನ್ನು ಸೇರಿಸಲಾಗಿದೆ.

    ನೇರವಾಗಿ ಜೈಲಿಗೆ:
    ಈ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ. ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದಾಗಿದೆ. ಈ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ. ಮುನ್ನಚ್ಚರಿಕಾ ಕ್ರಮವಾಗಿ ಬಂಧಿಸಿ ಗಡೀಪಾರು ಆದೇಶವನ್ನೂ ಹೊರಡಿಸಲು ಅವಕಾಶವಿದೆ.

    ಯಾವ ರಾಜ್ಯದಲ್ಲಿದೆ?
    ಸ್ವಾತಂತ್ರ್ಯಾ ನಂತರ ರಾಜಸ್ತಾನ (1975), ಉತ್ತರ ಪ್ರದೇಶ (1971), ತಮಿಳುನಾಡು (1982), ಕೇರಳ(2007) ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಿವೆ. ಡಿಜಿಟಲ್ ಅಪರಾಧ, ಸೈಬರ್ ಅಪರಾಧಗಳನ್ನು ಗೂಂಡಾ ಕಾಯ್ದೆಯಡಿ ತಮಿಳುನಾಡು ಮೊದಲ ಬಾರಿಗೆ 2004ರಲ್ಲಿ ತಂದಿತ್ತು.