Tag: ಗೂಗಲ್

  • ನಮ್ಮ ಆಹಾರ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ಮೆಣಸಿನಕಾಯಿ ಚಿತ್ರ ಹಾಕಿ ಪ್ರಿಯಾಂಕ್‌ಗೆ ನಾರಾ ಲೋಕೇಶ್‌ ಟಾಂಗ್‌

    ನಮ್ಮ ಆಹಾರ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ಮೆಣಸಿನಕಾಯಿ ಚಿತ್ರ ಹಾಕಿ ಪ್ರಿಯಾಂಕ್‌ಗೆ ನಾರಾ ಲೋಕೇಶ್‌ ಟಾಂಗ್‌

    – ಆಂಧ್ರದ ಪ್ರೋತ್ಸಾಹಕ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದಿದ್ದ ಪ್ರಿಯಾಂಕ್‌
    – ಕಿರಿಯ ರಾಜ್ಯದಲ್ಲಿ ಅತಿ ಹೆಚ್ಚು ಹೂಡಿಕೆ ಎಂದ ನಾರಾ ಲೋಕೇಶ್‌

    ಹೈದರಾಬಾದ್‌: ಆಂಧ್ರದ ಆಹಾರ ಖಾರವಾಗಿದೆ ಎಂದು ಅವರು ಹೇಳುತ್ತಾರೆ. ನಮ್ಮ ಕೆಲವು ಹೂಡಿಕೆಗಳು ಕೂಡ ಈಗ ಅವರಿಗೆ ಖಾರವಾಗಿವೆ ಎಂದು ತೋರುತ್ತದೆ. ನಮ್ಮ ನೆರೆಹೊರೆಯವರು ಈಗಾಗಲೇ ಅದರ ಘಾಟು ಅನುಭವಿಸುತ್ತಿದ್ದಾರೆ ಎಂದು ಮೆಣಸಿಕಾಯಿ ಇಮೋಜಿ ಹಾಕಿ ಕರ್ನಾಟಕಕ್ಕೆ ಆಂಧ್ರ ಐಟಿ ಸಚಿವ ನಾರಾ ಲೋಕೇಶ್‌ (Nara Lokesh) ಪ್ರಿಯಾಂಕ್‌ ಖರ್ಗೆ ಅವರಿಗೆ  ಟಾಂಗ್‌ ನೀಡಿದ್ದಾರೆ.

    ಗೂಗಲ್‌ (Google) ವಿಶಾಖಪಟ್ಟಣದಲ್ಲಿ 1.3 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರ್ನಾಟಕ (Karnataka) ಮತ್ತು ಆಂಧ್ರ ಮಧ್ಯೆ ಜಟಾಪಟಿ ನಡೆಯುತ್ತಿದೆ.

    ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyanka Khrge) ಗೂಗಲ್‌ ಕಂಪನಿಗೆ ಆಂಧ್ರಪ್ರದೇಶ ನೀಡಿದ ಪ್ರೋತ್ಸಾಹಕ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದು ಬಣ್ಣಿಸಿದ ಬೆನ್ನಲ್ಲೇ ನಾರಾ ಲೋಕೇಶ್‌ ಈಗ ಎಕ್ಸ್‌ನಲ್ಲಿ ಟಾಂಗ್‌ ನೀಡಿ ಆಂಧ್ರಪ್ರದೇಶ ಬೆಳವಣಿಗೆ ಆಗುತ್ತಿದೆ. ಕಿರಿಯ ರಾಜ್ಯದಲ್ಲಿ ಅತಿ ಹೆಚ್ಚು ಹೂಡಿಕೆಯಾಗುತ್ತಿದೆ ಎಂದು ಬರೆದು ಎಲ್ಲಿಯೂ ಕರ್ನಾಟಕದ ಹೆಸರನ್ನು ಉಲ್ಲೇಖಿಸದೇ ತಿರುಗೇಟು ನೀಡಿದ್ದಾರೆ.

    ಪ್ರಿಯಾಂಕ್‌ ಹೇಳಿದ್ದೇನು?
    ಆಂಧ್ರಪ್ರದೇಶವು ಗೂಗಲ್ ಕಂಪನಿಗೆ ಬಹಳ ಪ್ರೋತ್ಸಾಹ ನೀಡುತ್ತಿದೆ. 22,000 ಕೋಟಿ ರೂ. ಪ್ರೋತ್ಸಾಹ ಧನ, ಭೂಮಿಗೆ 25% ಸಬ್ಸಿಡಿ, ನೀರಿನ ಶುಲ್ಕಕ್ಕೆ 25% ಸಬ್ಸಿಡಿ, ಉಚಿತ ವಿದ್ಯುತ್ ಮತ್ತು ರಾಜ್ಯ ಜಿಎಸ್‌ಟಿಯ 100% ಮರುಪಾವತಿಯನ್ನು ನೀಡುತ್ತಿದೆ. ಈ ಆರ್ಥಿಕ ವಿಪತ್ತನ್ನು ಭರಿಸಲು ಸಾಧ್ಯವೇ? ಕರ್ನಾಟಕ ಇದನ್ನು ಮಾಡಿದ್ದರೆ ರಾಜ್ಯವನ್ನು ದಿವಾಳಿಯತ್ತ ತಳ್ಳಿದ ಆರೋಪ ನಮ್ಮ ಮೇಲಿತ್ತು ಎಂದು ಪ್ರತಿಕ್ರಿಯಿಸಿದ್ದರು.

    ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಸುವ ಗೂಗಲ್‌ನ 1.3 ಲಕ್ಷ ಕೋಟಿ ರೂ. ಹೂಡಿಕೆ ಕರ್ನಾಟಕದಿಂದ ಕೈ ತಪ್ಪಿ ಹೋಗಿದ್ದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತ್ತು. ವಿಪಕ್ಷಗಳ ಟೀಕೆಗೆ ಉತ್ತರಿಸುವ ಸಂದರ್ಭದಲ್ಲಿ ಪ್ರಿಯಾಂಕ್‌ ಖರ್ಗೆ ಆಂಧ್ರ ಸರ್ಕಾರದ ಗೂಗಲ್ ಪ್ರೋತ್ಸಾಹಕ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದು ಬಣ್ಣಿಸಿದ್ದರು. ಇದನ್ನೂ ಓದಿ:  Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌- ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ

     

    ನಾರಾ ಲೋಕೇಶ್‌ ಹೇಳಿದ್ದೇನು?
    ಕರ್ನಾಟಕದ ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ವಿದ್ಯುತ್ ಕಡಿತವಿದೆ ಎಂದು ಹೇಳುತ್ತಾರೆ. ಕರ್ನಾಟಕ ಮೊದಲು ಆ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ನಾರಾ ಲೋಕೇಶ್ ಬುಧವಾರ ಹೇಳಿದ್ದರು.

    ವಿಶಾಖಪಟ್ಟಣದಲ್ಲಿ ಗೂಗಲ್‌ ಎಐ ಕೇಂದ್ರ ತೆರೆಯುವ ಸಂಬಂಧ ಮಾಡಿಕೊಂಡ ಒಪ್ಪಂದಕ್ಕೆ ಕರ್ನಾಟದ ನಾಯಕರು ಪ್ರಶ್ನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಅವರು ಉತ್ತರ ನೀಡಿದರು.

    ಕಂಪನಿಗಳನ್ನು ಸೆಳೆಯಲು ಅವರು ಅಸಮರ್ಥರಾಗಿದ್ದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಗೂಗಲ್‌ ಜೊತೆ ಸಹಿ ಹಾಕುವ ಒಂದು ದಿನದ ಮೊದಲು ಹಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಬರುವಂತೆ ಪ್ರಯತ್ನ ಮಾಡಿದ್ದವು. ನಾವು ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುತ್ತೇವೆ. ವಿಶಾಖಪಟ್ಟಣದಲ್ಲಿ ಗೂಗಲ್‌ ಕೇಂದ್ರ ತೆರೆಯಲು ನಾವು ಹಲವಾರು ಸಭೆಗಳನ್ನು ನಡೆಸಿದ್ದೇವೆ. ಏನೇನು ಸಮಸ್ಯೆಯಾಗಿತ್ತು ಅವುಗಳನ್ನು ನಾವು ಪರಿಹರಿಸಿಕೊಟ್ಟಿದ್ದೇವೆ ಎಂದರು.

    ರಾಜ್ಯ ರಾಜ್ಯಗಳ ಮಧ್ಯೆ ಈ ರೀತಿಯ ಸ್ಪರ್ಧೆ ಇರಬೇಕು. ಸ್ಪರ್ಧೆ ಇದ್ದರೆ ಅಂತಿಮವಾಗಿ ಲಾಭ ಭಾರತಕ್ಕೆ ಆಗಲಿದೆ. ಕಂಪ್ಯೂಟರ್‌ ಕ್ರಾಂತಿಯಾಗುವ ಸಂದರ್ಭದಲ್ಲಿ ಹಲವು ಮಂದಿ ಕಂಪ್ಯೂಟರ್‌ ಆಹಾರ ನೀಡುತ್ತಾ ಎಂದು ಪ್ರಶ್ನಿಸಿದ್ದರು. ಆದರೆ ನಮ್ಮ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರು ಅಂದು ಕಂಪನಿಗಳಿಗೆ ಪ್ರೋತ್ಸಾಹ ನೀಡಿದ್ದರಿಂದ ಹೈದರಾಬಾದ್‌ ಇಂದು ಟೆಕ್‌ ಸಿಟಿಯಾಗಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದರು.

  • Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌-   ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ

    Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌- ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ

    ಹೈದರಾಬಾದ್‌: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಅವರು Vizag ನಲ್ಲಿರುವ ‘G’ ಅಂದರೆ ಅದು ಗೂಗಲ್‌ ಎಂದು ಬಣ್ಣಿಸಿದ್ದಾರೆ.

    ವಿಶಾಖಪಟ್ಟಣದಲ್ಲಿ(ವೈಜಾಗ್) ಎಐ ಡೇಟಾ ಹಬ್ ಮಾಡಲು ಗೂಗಲ್‌ ಆಂಧ್ರ ಸರ್ಕಾರದ ಜೊತೆ ಸಹಿ ಹಾಕಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

    ಬಂದರು ನಗರಿಯಾಗಿರುವ ವೈಜಾಗ್‌ನ ಫೋಟೋವನ್ನು ಹಾಕಿ #YoungestStateHighestInvestment ಎಂದು ಹ್ಯಾಶ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಿದ್ದಾರೆ.

    ಡೇಟಾ ಹಬ್ ನಿರ್ಮಾಣಕ್ಕೆ ಗೂಗಲ್‌ ಸುಮಾರು 1.33 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿದ್ದು ಮುಂದಿನ 5 ವರ್ಷಗಳಲ್ಲಿ ತಲೆ ಎತ್ತಲಿದೆ. ಅಮೆರಿಕದ ಹೊರಗೆ ಗೂಗಲ್‌ ನಿರ್ಮಿಸುತ್ತಿರುವ ಅತಿ ದೊಡ್ಡ ಹೂಡಿಕೆ ಇದಾಗಿದೆ.

    AI ಮೂಲಸೌಕರ್ಯ, ಡೇಟಾ ಕೇಂದ್ರಗಳು, ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಮತ್ತು ಹೊಸ ಸಬ್‌ಸೀ ಗೇಟ್‌ವೇ ಅನ್ನು ಸಂಯೋಜಿಸುತ್ತದೆ. ಇದು ದೇಶದ ಮೊದಲ ಗಿಗಾವ್ಯಾಟ್-ಪ್ರಮಾಣದ ಡೇಟಾ ಸೆಂಟರ್ ಕ್ಯಾಂಪಸ್ ಆಗಿರಲಿದೆ. ಇದನ್ನೂ ಓದಿ:  ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಐದು ವರ್ಷಗಳ ಯೋಜನೆಯು (2026–2030) 1 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಎನ್ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ಇದನ್ನೂ ಓದಿ:  ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

    ಈ ಕೇಂದ್ರವನ್ನು ಅಡಾನಿಕಾನೆಕ್ಸ್ (AdaniConneX) ಮತ್ತು ಏರ್‌ಟೆಲ್‌ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಉಪಕ್ರಮದ ಭಾಗವಾಗಿ, ಗೂಗಲ್ ವಿಶಾಖಪಟ್ಟಣದಲ್ಲಿ ಹೊಸ ಅಂತರರಾಷ್ಟ್ರೀಯ ಸಬ್‌ಸೀ ಕೇಬಲ್‌ಗಳನ್ನು ನಿರ್ಮಿಸಲಿದೆ. ಇದು ಭಾರತದ ಇಂಟರ್ನೆಟ್ ಸಾಮರ್ಥ್ಯವನ್ನು ಸುಧಾರಿಸಲಿದೆ.

  • ಗೂಗಲ್ ಎಐ ಹಬ್ ಆಂಧ್ರಪ್ರದೇಶ ಪಾಲು, ಗೂಗಲ್ ನಮ್ಮ ಜೊತೆ ಚರ್ಚೆಗೆ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

    ಗೂಗಲ್ ಎಐ ಹಬ್ ಆಂಧ್ರಪ್ರದೇಶ ಪಾಲು, ಗೂಗಲ್ ನಮ್ಮ ಜೊತೆ ಚರ್ಚೆಗೆ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಗೂಗಲ್ (Google) ನಮ್ಮ ಜೊತೆ ಚರ್ಚೆಗೆ ಬಂದಿದ್ರೆ ಟೀಕೆ ಮಾಡಬಹುದಿತ್ತು. ನಮ್ಮ ಜೊತೆಗೆ ಚರ್ಚೆಗೆ ಬಂದ ಯಾವ ಕಂಪನಿಯನ್ನು ನಾವು ಬಿಟ್ಟಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

    ಗೂಗಲ್ ಎಐ ಹಬ್ (Google AI Hub) ಆಂಧ್ರಕ್ಕೆ ಹೋದ ವಿಚಾರದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಬಹಳ ಸರಳವಾಗಿ ಮುಚ್ಚಿ ಹಾಕ್ತಾರೆ. 22 ಸಾವಿರ ಕೋಟಿ ಇನ್ಸೆಂಟಿವ್ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಕೊಡುತ್ತಿದೆ. 25% ಲ್ಯಾಂಡ್ ರಿಯಾಯಿತಿ, ವಾಟರ್, ವಿದ್ಯುತ್ ಫ್ರೀ ಕೊಡುತ್ತಾರೆ. 100% ರಾಜ್ಯ ಜಿಎಸ್ಟಿ ಮರುಪಾವತಿ ಕೊಡುತ್ತಿದ್ದಾರೆ ಎಂಬುದನ್ನ ಬಿಜೆಪಿಯವರು ಹೇಳಲ್ಲ. ಇದೇ ನಮ್ಮ ರಾಜ್ಯ ಕೊಟ್ಟಿದ್ರೆ ಇವರು ಸರ್ಕಾರ ದಿವಾಳಿತನಕ್ಕೆ ಮುಂದಾಗುತ್ತಿದೆ ಎನ್ನುತ್ತಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್

    ನಾವು ಇಡೀ ಜಗತ್ತಿನ ಎಐ ಡೆವಲಪ್ಮೆಂಟ್‌ನಲ್ಲಿ 5ನೇ ಸ್ಥಾನದಲ್ಲಿದ್ದೇವೆ. ನಾಲ್ಕನೇ ದೊಡ್ಡ ಟೆಕ್ನಾಲಜಿ ಕ್ಲಸ್ಟರ್ ನಾವು. ನಾಲ್ಕೂವರೆ ಲಕ್ಷ ಕೋಟಿ ಐಟಿ ರಫ್ತು ಮಾಡುತ್ತೇವೆ. ಆಂಧ್ರಪ್ರದೇಶದ್ದು 2 ಲಕ್ಷ ಕೋಟಿ ಅಷ್ಟೇ. ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ವ್ಯತ್ಯಾಸ ಬಹಳ ದೊಡ್ಡದಿದೆ. ನಮ್ಮ ಬಳಿ ಕ್ವಾಂಟಮ್ ರೋಡ್ ಮ್ಯಾಪ್ ಇದೆ. ಅವರ ಬಳಿ ಇದೆಯಾ? ಬಂಡವಾಳ ಹಾಕುವವರು ಎಲ್ಲಿ ಬೇಕಾದರೂ ಹಾಕುತ್ತಾರೆ. ಗೂಗಲ್ ಅನಂತ ಎಂಬ ಬಹುದೊಡ್ಡ ಕ್ಯಾಂಪಸ್ ನಮ್ಮ ಬೆಂಗಳೂರಿನಲ್ಲಿದೆ. ಚರ್ಚೆಗೆ ಬರಲು ನಾವು ರೆಡಿ ಇದ್ದೇವೆ, ಆದರೆ ಇವರು ಚರ್ಚೆಗೆ ಬರಲ್ಲ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ- ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

  • ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    – ರಾಜ್ಯದ ಉದ್ಯಮಿಗಳ ಹೇಳಿಕೆಯನ್ನು ಉಲ್ಲೇಖಿಸಿ ಟಾಂಗ್‌ ನೀಡಿದ ನಾರಾ ಲೋಕೇಶ್‌
    – ಕರ್ನಾಟಕ ಮೊದಲು ಈ ಸಮಸ್ಯೆ ಸರಿಮಾಡಬೇಕು

    ಹೈದರಾಬಾದ್‌: ಕರ್ನಾಟಕದ ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ವಿದ್ಯುತ್ ಕಡಿತವಿದೆ ಎಂದು ಹೇಳುತ್ತಾರೆ. ಕರ್ನಾಟಕ ಮೊದಲು ಆ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.

    ವಿಶಾಖಪಟ್ಟಣದಲ್ಲಿ ಗೂಗಲ್‌ ಎಐ ಕೇಂದ್ರ ತೆರೆಯುವ ಸಂಬಂಧ ಮಾಡಿಕೊಂಡ ಒಪ್ಪಂದಕ್ಕೆ ಕರ್ನಾಟಕ ನಾಯಕರು ಪ್ರಶ್ನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಅವರು ಉತ್ತರ ನೀಡಿದರು.

    ಕಂಪನಿಗಳನ್ನು ಸೆಳೆಯಲು ಅವರು ಅಸಮರ್ಥರಾಗಿದ್ದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಗೂಗಲ್‌ ಜೊತೆ ಸಹಿ ಹಾಕುವ ಒಂದು ದಿನದ ಮೊದಲು ಹಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಬರುವಂತೆ ಪ್ರಯತ್ನ ಮಾಡಿದ್ದವು. ನಾವು ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುತ್ತೇವೆ. ವಿಶಾಖಪಟ್ಟಣದಲ್ಲಿ ಗೂಗಲ್‌ ಕೇಂದ್ರ ತೆರೆಯಲು ನಾವು ಹಲವಾರು ಸಭೆಗಳನ್ನು ನಡೆಸಿದ್ದೇವೆ. ಏನೇನು ಸಮಸ್ಯೆಯಾಗಿತ್ತು ಅವುಗಳನ್ನು ನಾವು ಪರಿಹರಿಸಿಕೊಟ್ಟಿದ್ದೇವೆ ಎಂದರು.

    ರಾಜ್ಯ ರಾಜ್ಯಗಳ ಮಧ್ಯೆ ಈ ರೀತಿಯ ಸ್ಪರ್ಧೆ ಇರಬೇಕು. ಸ್ಪರ್ಧೆ ಇದ್ದರೆ ಅಂತಿಮವಾಗಿ ಲಾಭ ಭಾರತಕ್ಕೆ ಆಗಲಿದೆ. ಕಂಪ್ಯೂಟರ್‌ ಕ್ರಾಂತಿಯಾಗುವ ಸಂದರ್ಭದಲ್ಲಿ ಹಲವು ಮಂದಿ ಕಂಪ್ಯೂಟರ್‌ ಆಹಾರ ನೀಡುತ್ತಾ ಎಂದು ಪ್ರಶ್ನಿಸಿದ್ದರು. ಆದರೆ ನಮ್ಮ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರು  ಅಂದು ಕಂಪನಿಗಳಿಗೆ ಪ್ರೋತ್ಸಾಹ ನೀಡಿದ್ದರಿಂದ ಹೈದರಾಬಾದ್‌ ಇಂದು ಟೆಕ್‌ ಸಿಟಿಯಾಗಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದರು.

    ಗೂಗಲ್‌ ಆಂಧ್ರಕ್ಕೆ ಹೋಗಿದ್ದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿವೆ. ಉದ್ಯಮಿಗಳಿಗೆ ಬೆದರಿಕೆ ಹಾಕುವುದು, ಮೂಲಸೌಕರ್ಯ ಅಭಿವೃದ್ಧಿ ಮಾಡದೇ ಇರುವ ಕಾರಣ ಕಂಪನಿಗಳು ರಾಜ್ಯವನ್ನು ತೊರೆಯುತ್ತಿವೆ ಎಂದು ದೂರಿವೆ.  ಇದನ್ನೂ ಓದಿ:  ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಇದ್ದ ಘನತೆ, ಆಕರ್ಷಣೆ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿಗಳ ಉದ್ಯೋಗ ಸೃಷ್ಟಿಯ ಬೆಟ್ಟ ಕರಗುತ್ತಿದೆ, ಯುವ ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಎಲ್ಲೆಂದರಲ್ಲಿ ಗುಂಡಿ ಬಿದ್ದ ರಾಜಧಾನಿಯ ಪರಿಸ್ಥಿತಿಗೆ ‘ಅಂತರಾಷ್ಟ್ರೀಯ ಉದ್ಯಮಗಳು ಬೆಂಗಳೂರಿನಿಂದ ವಿಮುಖವಾಗುತ್ತಿವೆ’. ರಾಜ್ಯಕ್ಕೆ ಬರಬೇಕಿದ್ದ ಜಾಗತಿಕ ದಿಗ್ಗಜ ಗೂಗಲ್‌ ಸಂಸ್ಥೆಯ ಬರೋಬ್ಬರಿ 30,000 ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವ 1.3 ಲಕ್ಷ ಕೋಟಿ ರೂ ಹೂಡಿಕೆ ನೆರೆ ರಾಜ್ಯ ಆಂಧ್ರ ಪ್ರದೇಶದ ಪಾಲಾಗಿದೆ.

    ವಿಶ್ವದ ಜನರನ್ನು ಸೆಳೆಯುತ್ತಿದ್ದ ಬೆಂಗಳೂರನ್ನು ‘ಗುಂಡಿಗಳ ಬೆಂಗಳೂರು’ ಎಂಬ ಅಪಖ್ಯಾತಿ ಅಂಟಿಸಿರುವ ಈ ಸರ್ಕಾರದ ನಡೆಯಿಂದಾಗಿ ಹಾಗೂ ಬೆಂಗಳೂರು ಉಸ್ತುವಾರಿ ಹೊತ್ತ ಡಿಕೆ ಶಿವಕುಮಾರ್‌ ಅವರ ಇಚ್ಚಾಶಕ್ತಿ ಹಾಗೂ ವೈಫಲ್ಯದ ಕಾರಣದಿಂದಾಗಿ ಕನ್ನಡಿಗರಿಗೆ ಸಿಗಬೇಕಿದ್ದ ಸಾವಿರಾರು ಉದ್ಯೋಗಗಳು ನೆರೆ ರಾಜ್ಯದ ಪಾಲಾಗುತ್ತಿವೆ.  ಅಭಿವೃದ್ಧಿಯನ್ನು ಸಂಪೂರ್ಣ ಮರೆತ ಕಾಂಗ್ರೆಸ್ ಸರ್ಕಾರ ಕನಿಷ್ಠ ಬಂಡವಾಳ ಹೂಡುವ ಉದ್ಯಮ ಕ್ಷೇತ್ರವನ್ನೂ ಹಿಡಿದಿಟ್ಟುಕೊಳ್ಳುವ ಪ್ರಾಮಾಣಿಕ ಕಾಳಜಿಯ ಪ್ರತೀಕವಾಗಿ, ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸುವಲ್ಲಿಯೂ ವಿಫಲವಾಗಿರುವುದು ಕರ್ನಾಟಕ ರಾಜ್ಯದ ದುರಂತವೇ ಸರಿ ಎಂದು ಸಿಟ್ಟು ಹೊರಹಾಕಿವೆ.

  • ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ನವದೆಹಲಿ: ಮೇಕ್ ಅಮೆರಿಕ ಗ್ರೇಟ್ ಅಗೇನ್ (MAGA) ಅಂತಿದ್ದ ಟ್ರಂಪ್‌ಗೆ ಗೂಗಲ್ (Google) ಸಿಇಓ ಸುಂದರ್ ಪಿಚೈ ಟಕ್ಕರ್ ಕೊಟ್ಟಿದ್ದಾರೆ. ಭಾರತದಲ್ಲಿ (India) ಮೊದಲ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (Artificial Intelligence) ಹಬ್‌ಗಾಗಿ ಗೂಗಲ್ ಬರೋಬ್ಬರಿ 1500 ಕೋಟಿ ರೂ. ಡಾಲರ್ ಹೂಡಿಕೆ ಮಾಡುತ್ತಿದೆ.

    ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (Visakhapatnam) ನಿರ್ಮಾಣವಾಗಲಿರುವ ಎಐ ಹಬ್‌ಗಾಗಿ ಯೋಜನೆಗಳ ಬಗ್ಗೆ ಸುಂದರ್ ಪಿಚೈ ಪ್ರಧಾನಿ ಮೋದಿಗೆ (PM NarendraModi) ವಿವರಣೆ ಕೊಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಗೂಗಲ್‌ ಕಾರ್ಯಕ್ರಮದಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಐಟಿ ಸಚಿವ ಎನ್ ಲೋಕೇಶ್ ಸಮ್ಮುಖದಲ್ಲಿ ಗೂಗಲ್‌ ಈ ಘೋಷಣೆ ಮಾಡಿದೆ.

    ಏನೇನು ಇರಲಿದೆ?
    AI ಮೂಲಸೌಕರ್ಯ, ಡೇಟಾ ಕೇಂದ್ರಗಳು, ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಮತ್ತು ಹೊಸ ಸಬ್‌ಸೀ ಗೇಟ್‌ವೇ ಅನ್ನು ಸಂಯೋಜಿಸುತ್ತದೆ. ಇದು ದೇಶದ ಮೊದಲ ಗಿಗಾವ್ಯಾಟ್-ಪ್ರಮಾಣದ ಡೇಟಾ ಸೆಂಟರ್ ಕ್ಯಾಂಪಸ್ ಆಗಿರಲಿದೆ. ಇದನ್ನೂ ಓದಿ:  ನೀವು ಬೆಂಗಳೂರಿಗೆ ಹೋದರೆ, ಕನ್ನಡ ಕಲಿಯಿರಿ: ಝೋಹೊ ಸಂಸ್ಥಾಪಕ ಶ್ರೀಧರ್ ವೆಂಬು

    ಕ್ಲೌಡ್ ಸೇವೆಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು, ಬೃಹತ್ ಕಂಪ್ಯೂಟಿಂಗ್ ಶಕ್ತಿ ಮತ್ತು ಕಡಿಮೆ-ಲೇಟೆನ್ಸಿ ಸಂಪರ್ಕದ ಅಗತ್ಯವಿರುವುದರಿಂದ ಡೇಟಾ ಕೇಂದ್ರಗಳು ಹೆಚ್ಚು ನಿರ್ಣಾಯಕವಾಗುತ್ತಿವೆ.

    ಐದು ವರ್ಷಗಳ ಯೋಜನೆಯು (2026–2030) 1 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಎನ್ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

    ಈ ಕೇಂದ್ರ ಅಡಾನಿಕಾನೆಕ್ಸ್ ( daniConneX) ಮತ್ತು ಏರ್‌ಟೆಲ್‌ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಉಪಕ್ರಮದ ಭಾಗವಾಗಿ, ಗೂಗಲ್ ವಿಶಾಖಪಟ್ಟಣದಲ್ಲಿ ಹೊಸ ಅಂತರರಾಷ್ಟ್ರೀಯ ಸಬ್‌ಸೀ ಕೇಬಲ್‌ಗಳನ್ನು ನಿರ್ಮಿಸಲಿದೆ. ಇದು ಭಾರತದ ಇಂಟರ್ನೆಟ್ ಸಾಮರ್ಥ್ಯವನ್ನು ಸುಧಾರಿಸಲಿದೆ. ಅಷ್ಟೇ ಅಲ್ಲದೇ ಮುಂಬೈ ಮತ್ತು ಚೆನ್ನೈನಲ್ಲಿ ಅಸ್ತಿತ್ವದಲ್ಲಿರುವ ಗೇಟ್‌ವೇಗಳಿಗೆ ಪೂರಕವಾಗಿರುತ್ತದೆ.

  • ಕಮಲಾಗೆ ಗೂಗಲ್‌, ಮೈಕ್ರೋಸಾಫ್ಟ್‌ ಭಾರೀ ದೇಣಿಗೆ – ಟ್ರಂಪ್‌ಗೆ ಅಮೆರಿಕನ್‌ ಏರ್‌ಲೈನ್ಸ್‌, ವಾಲ್‌ಮಾರ್ಟ್‌ ಸಹಾಯ

    ಕಮಲಾಗೆ ಗೂಗಲ್‌, ಮೈಕ್ರೋಸಾಫ್ಟ್‌ ಭಾರೀ ದೇಣಿಗೆ – ಟ್ರಂಪ್‌ಗೆ ಅಮೆರಿಕನ್‌ ಏರ್‌ಲೈನ್ಸ್‌, ವಾಲ್‌ಮಾರ್ಟ್‌ ಸಹಾಯ

    ವಾಷಿಂಗ್ಟನ್‌: ಅಮೆರಿಕದ ಚುನಾವಣೆ (US Presidential Election) ಕಾವೇರುತ್ತಿದ್ದು ಕಂಪನಿಗಳೇ ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ದೇಣಿಗೆ ನೀಡಿವೆ.

    ಗೂಗಲ್‌ ಮತ್ತು ಮೈಕ್ರೋಸಾಫ್ಟ್‌ ಕಂಪನಿ ಕಮಲಾ ಹ್ಯಾರಿಸ್‌ (Kamala Harris) ಭಾರೀ ಮೊತ್ತದ ದೇಣಿಗೆ ನೀಡಿದರೆ ಡೊನಾಲ್ಡ್‌ ಟ್ರಂಪ್‌ಗೆ (Donald Trump) ಅಮೆರಿನ್‌ ಏರ್‌ಲೈನ್ಸ್‌, ವಾಲ್‌ಮಾರ್ಟ್‌ ಹಣಕಾಸಿನ ಸಹಾಯ ನೀಡಿದೆ. ಇದನ್ನೂ ಓದಿ: ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!


    ಯಾರಿಗೆ ಎಷ್ಟು?
    ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಗೂಗಲ್‌ 14,64,292 ಡಾಲರ್‌, ಮೈಕ್ರೋಸಾಫ್ಟ್‌ 7,43,045 ಡಾಲರ್‌, ಬ್ರೌನ್‌ ಆಂಡ್‌ ಬ್ರೌನ್‌ 3,24,568 ಡಾಲರ್‌ ನೀಡಿದೆ.

    ರಿಪಬ್ಲಿಕನ್‌ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಅವರಿಗೆ ಅಮೆರಿಕನ್‌ ಏರ್‌ಲೈನ್ಸ್‌ 1,34,174 ಡಾಲರ್‌, ವಾಲ್‌ಮಾರ್ಟ್‌ 83,908 ಡಾಲರ್‌, ಬೋಯಿಂಗ್‌ 82,761 ಡಾಲರ್‌ ನೀಡಿದೆ.

    ಈ ವಿಚಾರವನ್ನು ಎಕ್ಸ್‌ ಮುಖ್ಯಸ್ಥ ಎಲೋನ್‌ ಮಸ್ಕ್ (Elon Musk) ಪ್ರಸ್ತಾಪಿಸಿ, ಗೂಗಲ್ ಮತ್ತು ಮೈಕ್ರೋಸಾಫ್ಟ್ ಡೆಮಾಕ್ರಟಿಕ್ ಪಕ್ಷಕ್ಕೆ ಭಾರೀ ದೇಣಿಗೆ ನೀಡಿವೆ. ಈ ಎರಡೂ ಕಂಪನಿಗಳು ಸುಮಾರು 100%  ಹುಡುಕಾಟವನ್ನು ನಿಯಂತ್ರಿಸುತ್ತವೆ. ಇವರು ಸಹಾಯ ಮಾಡದೇ ಇದ್ದರೂ ಪಕ್ಷಪಾತವನ್ನು ಪರಿಚಯಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

     

  • ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!

    ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!

    ಬೆಂಗಳೂರು: ತುಳು ಭಾಷೆಯನ್ನು (Tulu Language) ಕಲಿಯಬೇಕೆಂಬ ಜನರಿಗೆ ಸಿಹಿ ಸುದ್ದಿ. ಈಗ ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ.

    ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ಹೊಸದಾಗಿ 110 ಭಾಷೆಗಳನ್ನು ಸೇರಿಸಿದೆ. ಭಾರತದ ತುಳು ಸೇರಿದಂತೆ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿಯನ್ನು ಸೇರಿಸಿದೆ.

    Google ಅನುವಾದವನ್ನು 2006 ರಲ್ಲಿ ಪರಿಚಯಿಸಲಾಗಿದ್ದು ಇಲ್ಲಿಯವರೆಗೆ 133 ಭಾಷೆಗಳನ್ನು ಬೆಂಬಲಿಸುತಿತ್ತು. ಆದರೆ ಈಗ ಒಂದೇ ಬಾರಿಗೆ 110 ಭಾಷೆಗಳನ್ನು ಸೇರಿಸಿದ್ದು ಒಟ್ಟು ಈಗ 243 ಭಾಷೆಗಳನ್ನು ಬೆಂಬಲಿಸುತ್ತಿದೆ.

    ಡೆಸ್ಕ್‌ಟಾಪ್‌ನಲ್ಲಿ translate.google.co.in ಹೋಗಿ ಭಾಷೆಯನ್ನು ಆಯ್ಕೆ ಮಾಡಬಹುದು. ಸ್ಮಾರ್ಟ್‌ಫೋನ್‌ ಬಳಕೆದಾರರು ಗೂಗಲ್‌ ಟ್ರಾನ್ಸ್‌ಲೇಟ್‌ ಆಪ್‌ ಡೌನ್‌ಲೋಡ್‌ ಅಥವಾ ಡೆಸ್ಕ್‌ಟಾಪ್‌ ಯುಆರ್‌ಎಲ್‌ ಲಿಂಕ್‌ ಬಳಸಿ ಭಾಷಾಂತರ ಮಾಡಬಹುದು. ಇದನ್ನೂ ಓದಿ: ಡಿಕೆಗೆ ಸಿಎಂ ಸ್ಥಾನ ಹೇಳಿಕೆ ಹಿಂದಿದ್ಯಾ ಕುತಂತ್ರ? – ಆಪ್ತರ ಬಳಿ ಸಿಎಂ ತೀವ್ರ ಅಸಮಾಧಾನ

    ಹಲವು ಪದಗಳು ನಿಖರವಾಗಿ ತುಳುವಿಗೆ ಅನುವಾದವಾದರೂ ಕೆಲವೊಂದು ಪದಗಳು ಸರಿಯಾಗಿ ಅನುವಾದವಾಗೇಬೇಕಿದೆ. ಕನ್ನಡ ಭಾಷೆಯನ್ನು ಆರಂಭದಲ್ಲಿ ಟ್ರಾನ್ಸ್‌ಲೇಟ್‌ಗೆ ಸೇರಿಸಿದಾಗಲೂ ಕೆಲವೊಂದು ಪದಗಳು ಸರಿಯಾಗಿ ಅನುವಾದವಾಗುತ್ತಿರಲಿಲ್ಲ. ಹಂತ ಹಂತವಾಗಿ ಗೂಗಲ್‌ ಇದನ್ನು ಸರಿಪಡಿಸುತ್ತಾ ಬಂದಿದೆ. ಗೂಗಲ್‌ನ ಆರಂಭಿಕ ಪ್ರಯತ್ನಕ್ಕೆ ತುಳು ಭಾಷಿಗರು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

  • ತಮಿಳುನಾಡಿನಲ್ಲಿ ಗೂಗಲ್‌ ಕಂಪನಿಯ ಫೋನ್‌ – ಹೂಡಿಕೆ ಕಳೆದುಕೊಂಡ ಕರ್ನಾಟಕ

    ತಮಿಳುನಾಡಿನಲ್ಲಿ ಗೂಗಲ್‌ ಕಂಪನಿಯ ಫೋನ್‌ – ಹೂಡಿಕೆ ಕಳೆದುಕೊಂಡ ಕರ್ನಾಟಕ

    – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ
    – ಬಿಜೆಪಿ ಅವಧಿಯಲ್ಲಿ ಕಿರುಕುಳ ಇತ್ತು: ಡಿಕೆಶಿ

    ಬೆಂಗಳೂರು: ಕರ್ನಾಟಕ (Karnataka) ಗೂಗಲ್ (Google) ಕಂಪನಿಯ ಹೂಡಿಕೆ ಕಳೆದುಕೊಂಡಿದೆ. ನೆರೆಯ ತಮಿಳುನಾಡಿನಲ್ಲಿ ಗೂಗಲ್ ಕಂಪನಿ, ಫಾಕ್ಸ್‌ಕಾನ್‌ ಸಂಸ್ಥೆಯ ಸಹಯೋಗದಲ್ಲಿ ಪಿಕ್ಸೆಲ್ ಸ್ಮಾರ್ಟ್‌ಫೋನ್‌ (Pixel Smartphone) ಹಾಗೂ ಡ್ರೋನ್ (Drone) ತಯಾರಿಕಾ ಘಟಕ ಸ್ಥಾಪಿಸಲಿದೆ.

    ಈ ಸಂಬಂಧ ತಮಿಳುನಾಡು ಸರ್ಕಾರದ ಜೊತೆ ಗೂಗಲ್ ಸಂಸ್ಥೆ ಒಪ್ಪಂದ ಮಾಡಿಕೊಂಡಿದೆ. ವಾಸ್ತವದಲ್ಲಿ ಗೂಗಲ್ ಸಂಸ್ಥೆ ಕರ್ನಾಟಕದಲ್ಲಿ ಈ ಹೂಡಿಕೆ ಮಾಡಬೇಕಿತ್ತು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇದು ತಮಿಳುನಾಡು (Tamil Nadu) ಪಾಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.


    ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ. ಕರ್ನಾಟಕ ಶತಕೋಟಿ ಡಾಲರ್ ಹೂಡಿಕೆ ಕಳೆದುಕೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಗಾಗಿ ರಾಜ್ಯಕ್ಕೆ ಬರಬೇಕಿದ್ದ ಹೂಡಿಕೆ ನೆರೆ ರಾಜ್ಯಕ್ಕೆ ಹೋಗಿದೆ ಅಂತ ಬಿಜೆಪಿ ಕಿಡಿಕಾರಿದೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೂಡ ಟ್ವೀಟ್ ಮಾಡಿ ಸಿದ್ದು ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಹಿಂದೆ ಉಗ್ರ ಕತ್ಯದಲ್ಲಿ ದೋಷಿಯಾಗಿದ್ದ ಹುಬ್ಬಳ್ಳಿ ವ್ಯಕ್ತಿ ಮತ್ತೆ ಅರೆಸ್ಟ್‌


    ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕ (Karnataka) ಶಾಂತಿಯುತ ರಾಜ್ಯ. ಕರ್ನಾಟಕದ ಅಭಿವೃದ್ಧಿ ಮಾದರಿ ಜಗತ್ತನ್ನೇ ಆಕರ್ಷಿಸುತ್ತಿದೆ. ಬಂಡವಾಳ ಹೂಡಿಕೆದಾರರಿಗೆ ಬಿಜೆಪಿ ಅವಧಿಯಲ್ಲಿ ಕಿರುಕುಳ ಇತ್ತು. ಆದರೆ ನಮ್ಮ ಅವಧಿಯಲ್ಲಿ ಇದು ಬದಲಾಗಿದೆ. ನಮ್ಮ ಅವಧಿಯಲ್ಲಿ ಬಂಡವಾಳ ಹೂಡಿಕೆ ಎಷ್ಟು ಆಗಿದೆ ಎಂದು ಚುನಾವಣೆ ಮುಗಿದ ಮೇಲೆ ತಿಳಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

  • ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕ್ಯಾಲಿಫೋರ್ನಿಯಾ: ಕಚೇರಿಯ ಒಳಗಡೆ ಪ್ಯಾಲೆಸ್ತೀನ್‌ (Palestine) ಪರ ಘೋಷಣೆ ಕೂಗಿದ 28 ಸಿಬ್ಬಂದಿಯನ್ನು ಗೂಗಲ್‌ (Google) ಮನೆಗೆ ಕಳುಹಿಸಿದೆ.

    ಕಂಪನಿಯು ಇಸ್ರೇಲ್‌ನೊಂದಿಗೆ 1.2 ಬಿಲಿಯನ್ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ವಿರೋಧಿಸಿ ಉದ್ಯೋಗಿಗಳು ಪ್ರತಿಭಟಿಸಿದ್ದರು. ಕೆಲವರು ಕ್ಯಾಲಿಫೋರ್ನಿಯಾದಲ್ಲಿರುವ ಕಚೇರಿ ಒಳಗಡೆ ಪ್ರತಿಭಟಿಸಿದ್ದರೆ ಇನ್ನು ಕೆಲವರು ನ್ಯೂಯಾರ್ಕ್‌ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಧರಣಿ ನಡೆಸಿದ್ದರು.ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಏಪ್ರಿಲ್ 16 ರಂದು ಗೂಗಲ್ ಕ್ಲೌಡ್ ಸಿಇಒ ಥಾಮಸ್ ಕುರಿಯನ್ ಅವರ ಕ್ಯಾಲಿಫೋರ್ನಿಯಾದ ಕಚೇರಿ ಪ್ರವೇಶಿಸಿ ಸಿಬ್ಬಂದಿ ಪ್ರತಿಭಟಿಸಿದ್ದರು. ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಅವರನ್ನು ಬಂಧಿಸಿದ್ದರು.  ಇದನ್ನೂ ಓದಿ: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಗೂಗಲ್‌ ಗಾಜಾದಲ್ಲಿ ಇಸ್ರೇಲ್‌ (Israel) ನಡೆಸುತ್ತಿರುವ ಯುದ್ಧ ಪ್ಯಾಲೆಸ್ತೀನ್‌ ಜನರ  ನರಮೇಧಕ್ಕೆ ಶಕ್ತಿ ತುಂಬುತ್ತಿದೆ. ಹೀಗಾಗಿ ಕೂಡಲೇ ಈ ಒಪ್ಪಂದವನ್ನು ರದ್ದು ಮಾಡಬೇಕೆಂದು ಸಿಬ್ಬಂದಿ ಪ್ರತಿಭಟಿಸುತ್ತಿದ್ದರು. ಗೂಗಲ್‌ ಕಂಪನಿ ಆಂತರಿಕ ತನಿಖೆ ನಡೆಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಈಗ ವಜಾ ಮಾಡಿದೆ.

     

  • ಶೀಘ್ರವೇ ಭಾರತದಲ್ಲಿ ಪಿಕ್ಸೆಲ್ ಫೋನ್‌ ತಯಾರಿಸಲಿದೆ ಗೂಗಲ್‌

    ಶೀಘ್ರವೇ ಭಾರತದಲ್ಲಿ ಪಿಕ್ಸೆಲ್ ಫೋನ್‌ ತಯಾರಿಸಲಿದೆ ಗೂಗಲ್‌

    ನವದೆಹಲಿ: ಗೂಗಲ್ (Google) ಕಂಪನಿಯೂ ತನ್ನ ಪಿಕ್ಸೆಲ್ (Pixel) ಸ್ಮಾರ್ಟ್‌ಫೋನ್‌ಗಳನ್ನು (Smartphone) ಮುಂದಿನ ತ್ರೈಮಾಸಿಕದಿಂದ ಭಾರತದಲ್ಲಿ (India) ತಯಾರಿಸಲಿದೆ ಎಂದು ವರದಿಯಾಗಿದೆ.

    ಭಾರತದಲ್ಲಿ ದುಬಾರಿ ಫೋನುಗಳ ಮಾರಾಟ ಏರಿಕೆಯಾಗುತ್ತಿರುವ ಬೆನ್ನಲ್ಲೇ ಈಗ ಗೂಗಲ್‌ ಪಿಕ್ಸೆಲ್‌ ಫೋನ್‌ಗಳನ್ನು ಭಾರತದಲ್ಲಿ ಉತ್ಪಾದನೆ ಮಾಡಲು ಮುಂದಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಬಂಧನಕ್ಕೆ ವಾರಂಟ್ ಹೊರಡಿಸಬೇಕಾಗುತ್ತೆ – ಶ್ರೀರಾಮುಲುಗೆ ಹೈಕೋರ್ಟ್ ಎಚ್ಚರಿಕೆ

    ಕಳೆದ ವರ್ಷದ ಗೂಗಲ್ ಫಾರ್ ಇಂಡಿಯಾ ಈವೆಂಟ್‌ನಲ್ಲಿ ಭಾರತದಲ್ಲಿ ಫೋನ್‌ ಉತ್ಪಾದನೆ ಮಾಡುವ ಯೋಜನೆ ಪ್ರಕಟಿಸಿತ್ತು. ವರದಿ ಪ್ರಕಾರ ಪಿಕ್ಸೆಲ್‌ ಮಾದರಿಯಲ್ಲಿ ಹೈ ಎಂಡ್‌ ಫೋನ್‌ ಆಗಿರುವ ಪಿಕ್ಸೆಲ್‌ 8 ಪ್ರೊ ಭಾರತದಲ್ಲಿ ಉತ್ಪಾದನೆಯಾಗುವ ಮೊದಲ ಫೋನ್‌ ಎನ್ನಲಾಗುತ್ತಿದೆ.  ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ BMRCL ನಿಂದ ಗುಡ್‌ನ್ಯೂಸ್‌

    ಗೂಗಲ್‌ನ ಇಂಡಿಯಾದ ಪಿಕ್ಸೆಲ್ ಫೋನ್‌ ಉತ್ಪಾದನೆಯು ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಲಿದೆ. ಈ ಮೊದಲು ಚೀನಾದಲ್ಲಿ ಪಿಕ್ಸೆಲ್‌ ಫೋನ್‌ ತಯಾರಾಗುತ್ತಿತ್ತು. ಅಮೆರಿಕ (USA) ಮತ್ತು ಚೀನಾ (China) ನಡುವೆ ನಡೆಯುತ್ತಿರುವ ತಾಂತ್ರಿಕ ಯುದ್ಧದ ನಂತರ ಗೂಗಲ್‌ ವಿಯೆಟ್ನಾಂನಲ್ಲಿ ಫೋನ್‌ ತಯಾರಿಸುತ್ತಿತ್ತು.

    ಭಾರತದಲ್ಲಿ ತಯಾರಾಗಲಿರುವ ಫೋನುಗಳನ್ನು ದೇಶದ ಒಳಗಡೆ ಮಾರಾಟ ಮಾಡುತ್ತದೋ ಅಥವಾ ವಿದೇಶಕ್ಕೆ ರಫ್ತು ಮಾಡುತ್ತದೋ ಎನ್ನುವುದು ತಿಳಿದು ಬಂದಿಲ್ಲ.