Tag: ಗೂಗಲ್

  • ಜಿಯೋ ಫೋನ್‌ ನೆಕ್ಸ್ಟ್ ಹೇಗೆ ತಯಾರಾಗುತ್ತಿದೆ? – ತಿರುಪತಿ ಫ್ಯಾಕ್ಟರಿಯ ವಿಡಿಯೋ ರಿಲೀಸ್‌

    ಜಿಯೋ ಫೋನ್‌ ನೆಕ್ಸ್ಟ್ ಹೇಗೆ ತಯಾರಾಗುತ್ತಿದೆ? – ತಿರುಪತಿ ಫ್ಯಾಕ್ಟರಿಯ ವಿಡಿಯೋ ರಿಲೀಸ್‌

    – ಮೇಕಿಂಗ್ ಆಫ್ ಜಿಯೋಫೋನ್ ನೆಕ್ಸ್ಟ್ ಅನಾವರಣ
    – ಗೂಗಲ್, ಕ್ವಾಲ್‌ಕಾಮ್ ಜೊತೆ ಸಮಾನ ದೂರದೃಷ್ಟಿಯ ಸಹಭಾಗಿತ್ವ

    ಮುಂಬೈ: ದೀಪಾವಳಿಗೆ ಮುನ್ನ, ‘ಮೇಕಿಂಗ್ ಆಫ್ ಜಿಯೋಫೋನ್ ನೆಕ್ಸ್ಟ್’ ಕಿರುಚಿತ್ರವನ್ನು ಜಿಯೋ ಬಿಡುಗಡೆಗೊಳಿಸಿದೆ. ಇತ್ತೀಚಿನ ದಿನಗಳ ಬಹುನಿರೀಕ್ಷಿತ ಫೋನ್‌ಗಳಲ್ಲೊಂದಾದ ಜಿಯೋಫೋನ್ ನೆಕ್ಸ್ಟ್ ಅನ್ನು ಬಿಡುಗಡೆ ಮಾಡುತ್ತಿರುವುದರ ಹಿಂದಿನ ದೂರದೃಷ್ಟಿ ಮತ್ತು ಕಲ್ಪನೆಯ ಒಳನೋಟವನ್ನು ಈ ಕಿರುಚಿತ್ರವು ನೀಡುತ್ತದೆ.

    5 ವರ್ಷಗಳಷ್ಟು ಕಡಿಮೆ ಅವಧಿಯಲ್ಲಿ, ಜಿಯೋ ಭಾರತದಲ್ಲಿ ಮನೆಮಾತಾಗಿದ್ದು, 43 ಕೋಟಿ ಬಳಕೆದಾರರೊಂದಿಗೆ, ಅದರ ಸೇವೆಗಳು ವಿವಿಧ ಪ್ರದೇಶಗಳಲ್ಲಿ, ಆರ್ಥಿಕ ಹಾಗೂ ಸಾಮಾಜಿಕ ವರ್ಗಗಳಲ್ಲಿ ವಿಸ್ತರಿಸಿವೆ. ಜಿಯೋಫೋನ್ ನೆಕ್ಸ್ಟ್‌ನೊಂದಿಗೆ, ಜಿಯೋ ಭಾರತದಲ್ಲಿ ಡಿಜಿಟಲ್ ಸಂಪರ್ಕವನ್ನು ಪ್ರಜಾತಂತ್ರೀಕರಿಸುವ ದೃಷ್ಟಿಕೋನದ ಕಡೆಗೆ ನಿರ್ಣಾಯಕ ಹೆಜ್ಜೆ ಇಡಲು ಯೋಜಿಸಿದೆ.

    ಜಿಯೋಫೋನ್ ನೆಕ್ಸ್ಟ್ ಅನ್ನು ಭಾರತದಲ್ಲಿ, ಭಾರತಕ್ಕಾಗಿ ಹಾಗೂ ಭಾರತೀಯರಿಂದ ನಿರ್ಮಿಸಲಾಗಿದೆ. ಭಾರತೀಯರೆಲ್ಲರೂ ಡಿಜಿಟಲ್ ತಂತ್ರಜ್ಞಾನಕ್ಕೆ ಸಮಾನ ಅವಕಾಶ ಮತ್ತು ಸಮಾನ ಪ್ರವೇಶವನ್ನು ಪಡೆಯುವುದನ್ನು ಜಿಯೋಫೋನ್ ನೆಕ್ಸ್ಟ್ ಖಚಿತಪಡಿಸುತ್ತದೆ. ಲಕ್ಷಾಂತರ ಭಾರತೀಯರ ಜೀವನವನ್ನು ಬದಲಿಸಲು ಜಿಯೋಫೋನ್ ನೆಕ್ಸ್ಟ್ ಹೇಗೆ ಸನ್ನದ್ಧವಾಗಿದೆ ಎನ್ನುವುದನ್ನು ಈ ಕಿರುಚಿತ್ರ ಪರಿಚಯಿಸುತ್ತದೆ. ಇದನ್ನೂ ಓದಿ: ಜಿಯೋ-ಬಿಪಿ ಮೊದಲ ಮೊಬಿಲಿಟಿ ಸ್ಟೇಷನ್ ಆರಂಭ- ಇವಿ ಚಾರ್ಜಿಂಗ್‌, ಬ್ಯಾಟರಿ ಸ್ವಾಪ್

    ಆಂಡ್ರಾಯ್ಡ್‌ನಿಂದ ಸಶಕ್ತವಾದ ಪ್ರಗತಿ ಓಎಸ್ ಭಾರತಕ್ಕಾಗಿ ರೂಪಿಸಲಾದ ಒಂದು ವಿಶ್ವದರ್ಜೆಯ ಆಪರೇಟಿಂಗ್ ಸಿಸ್ಟಂ ಆಗಿದ್ದು, ಜಿಯೋಫೋನ್ ನೆಕ್ಸ್ಟ್‌ನ ಹೃದಯದಲ್ಲಿದೆ. ಕೈಗೆಟುಕುವ ಬೆಲೆಯಲ್ಲಿ ನೈಜ ತೊಡಕಿಲ್ಲದ ಅನುಭವವನ್ನು ನೀಡುವುದರೊಂದಿಗೆ ಎಲ್ಲರಿಗೂ ಪ್ರಗತಿ ತರುವ ಉದ್ದೇಶದಿಂದ ಜಿಯೊ ಮತ್ತು ಗೂಗಲ್‌ನ ಅತ್ಯುತ್ತಮ ಪ್ರತಿಭೆಗಳು ಫೋನ್ ರೂಪಿಸಿದ್ದಾರೆ.

    ತಂತ್ರಜ್ಞಾನ ಕ್ಷೇತ್ರದ ಇನ್ನೊಂದು ಮುಂಚೂಣಿ ಸಂಸ್ಥೆಯಾದ ಕ್ವಾಲ್‌ಕಾಮ್ ಜಿಯೋಫೋನ್ ನೆಕ್ಸ್ಟ್‌ನ ಪ್ರಾಸೆಸರ್ ಅನ್ನು ರೂಪಿಸಿದೆ. ಸಾಧನದ ಕಾರ್ಯಕ್ಷಮತೆ, ಆಡಿಯೋ ಮತ್ತು ಬ್ಯಾಟರಿಯಲ್ಲಿ ಆಪ್ಟಿಮೈಸೇಶನ್ ಜೊತೆಗೆ ಆಪ್ಟಿಮೈಸ್ಡ್ ಕನೆಕ್ಟಿವಿಟಿ ಮತ್ತು ಲೊಕೇಶನ್ ತಂತ್ರಜ್ಞಾನಗಳನ್ನು ಜಿಯೋಫೋನ್ ನೆಕ್ಸ್ಟ್‌ನಲ್ಲಿರುವ ಕ್ವಾಲ್‌ಕಾಮ್ ಪ್ರಾಸೆಸರ್‌ನ ಒದಗಿಸುತ್ತದೆ. ಜಿಯೋಫೋನ್ ನೆಕ್ಸ್ಟ್‌ನ ವೈವಿಧ್ಯಮಯ ಫೀಚರ್‌ಗಳು ತಂತ್ರಜ್ಞಾನದೊಂದಿಗೆ ಸಂಪೂರ್ಣ ಹೊಸ ರೀತಿಯ ಸಂವಹನವನ್ನು ಸಾಧ್ಯವಾಗಿಸುತ್ತವೆ. ಇದನ್ನೂ ಓದಿ: ಉದ್ಯೋಗಿಗಳ ಬೆಸ್ಟ್‌ ಕಂಪನಿ ಔಟ್‌ – ಭಾರತದ ಯಾವ ಕಂಪನಿಗೆ ಎಷ್ಟನೇ ಸ್ಥಾನ?

    ಜಿಯೋಫೋನ್‌ ನೆಕ್ಸ್ಟ್‌ ವೈಶಿಷ್ಟ್ಯಗಳು:
    ವಾಯ್ಸ್ ಅಸಿಸ್ಟೆಂಟ್
    ಬಳಕೆದಾರರು ತಮ್ಮ ಸಾಧನವನ್ನು ನಿರ್ವಹಿಸಲು (ಆಪ್ ತೆರೆಯುವುದು, ಸೆಟ್ಟಿಂಗ್‌ಗಳನ್ನು ನಿರ್ವಹಿಸುವುದು ಇತ್ಯಾದಿ) ಮತ್ತು ತಮಗೆ ತಿಳಿದಿರುವ ಭಾಷೆಯಲ್ಲಿ ಅಂತರಜಾಲದಿಂದ ಮಾಹಿತಿ/ಕಂಟೆಂಟ್ ಅನ್ನು ಸುಲಭವಾಗಿ ಪಡೆದುಕೊಳ್ಳಲು ವಾಯ್ಸ್ ಅಸಿಸ್ಟೆಂಟ್ ಸಹಾಯ ಮಾಡುತ್ತದೆ.

    ರೀಡ್ ಅಲೌಡ್
    ಆಲಿಸುವ (ʼಲಿಸನ್’) ಸೌಲಭ್ಯವು ಯಾವುದೇ ಪರದೆಯ ಮೇಲಿರುವ ವಿಷಯವನ್ನು ಬಳಕೆದಾರರಿಗೆ ಓದಿ ಹೇಳುತ್ತದೆ. ತಮಗೆ ಅರ್ಥವಾಗುವ ಭಾಷೆಯಲ್ಲಿ ಕೇಳುವ ಮೂಲಕ ಕಂಟೆಂಟ್ ಅನ್ನು ಪಡೆದುಕೊಳ್ಳಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.

    ಅನುವಾದ
    ಅನುವಾದ ಸೌಲಭ್ಯವು ಯಾವುದೇ ಪರದೆಯನ್ನು ಬಳಕೆದಾರರ ಆಯ್ಕೆಯ ಭಾಷೆಗೆ ಅನುವಾದಿಸಲು ಬಳಕೆದಾರರಿಗೆ ಅನುವುಮಾಡಿಕೊಡುತ್ತದೆ. ಇದರಿಂದ ಬಳಕೆದಾರರು ತಮ್ಮ ಆದ್ಯತೆಯ ಭಾಷೆಯಲ್ಲಿ ಯಾವುದೇ ವಿಷಯವನ್ನು ಓದುವುದು ಸಾಧ್ಯವಾಗುತ್ತದೆ.

    ಸುಲಭ ಮತ್ತು ಸ್ಮಾರ್ಟ್ ಕ್ಯಾಮೆರಾ
    ಈ ಸಾಧನದಲ್ಲಿರುವ ಸ್ಮಾರ್ಟ್ ಮತ್ತು ಶಕ್ತಿಯುತ ಕ್ಯಾಮೆರಾ ಪೋರ್ಟ್ರೇಟ್ ಮೋಡ್‌ನಂತಹ ವಿವಿಧ ಫೋಟೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಅಷ್ಟೇ ಅಲ್ಲದೇ ಇದು ಮಸುಕಾದ ಹಿನ್ನೆಲೆಯಿರುವ ಉತ್ತಮ ಫೋಟೋಗಳನ್ನು ಸ್ವಯಂಚಾಲಿತವಾಗಿ ಸೆರೆಹಿಡಿಯಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೈಟ್ ಮೋಡ್ ನೆರವಾಗುತ್ತದೆ. ಭಾವನೆಗಳು ಮತ್ತು ಹಬ್ಬಗಳ ಜೊತೆಗೂಡಿ ಚಿತ್ರಗಳ ಅಂದ ಹೆಚ್ಚಿಸಲು ಕ್ಯಾಮೆರಾ ಆಪ್‌ನಲ್ಲಿ ವಿಶಿಷ್ಟವಾದ ಭಾರತೀಯ ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್‌ಗಳನ್ನು ನೀಡಲಾಗಿದೆ.

    ಪ್ರಿಲೋಡೆಡ್ ಜಿಯೋ ಮತ್ತು ಗೂಗಲ್ ಆಪ್‌ಗಳು
    ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾದ ಎಲ್ಲ ಆಂಡ್ರಾಯ್ಡ್ ಆಪ್‌ಗಳನ್ನೂ ಈ ಸಾಧನವು ಬೆಂಬಲಿಸುತ್ತದೆ ಮತ್ತು ಆ ಮೂಲಕ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಲಕ್ಷಾಂತರ ಆಪ್‌ಗಳ ಪೈಕಿ ತಮಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೆ ನೀಡುತ್ತದೆ. ಅನೇಕ ಜಿಯೋ ಮತ್ತು ಗೂಗಲ್ ಆಪ್‌ಗಳ‌ನ್ನು ಈ ಸಾಧನದಲ್ಲಿ ಮುಂಚಿತವಾಗಿ ಲೋಡ್ ಮಾಡಲಾಗಿದೆ.

    ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಗ್ರೇಡ್
    ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಡೇಟ್‌ಗಳೊಂದಿಗೆ ಜಿಯೋಫೋನ್ ನೆಕ್ಸ್ಟ್ ಯಾವಾಗಲೂ ಅಪ್-ಟು-ಡೇಟ್ ಆಗಿರುತ್ತದೆ. ಇತ್ತೀಚಿನ ವೈಶಿಷ್ಟ್ಯಗಳನ್ನು ಸ್ವಯಂಚಾಲಿತವಾಗಿ ಒದಗಿಸಲಾಗುವುದರಿಂದ ಬಳಕೆದಾರರ ಅನುಭವವು ಕಾಲಕ್ರಮೇಣ ಉತ್ತಮಗೊಳ್ಳುತ್ತಲೇ ಇರುತ್ತದೆ. ರೇಜಿಗೆಯಿಲ್ಲದ ಅನುಭವವನ್ನು ಖಾತ್ರಿಪಡಿಸುವುದಕ್ಕಾಗಿ ಭದ್ರತಾ ಅಪ್‌ಡೇಟ್‌ಗಳನ್ನೂ ನೀಡಲಾಗುತ್ತದೆ.

    ಅದ್ಭುತ ಬ್ಯಾಟರಿ ಲೈಫ್
    ಆಂಡ್ರಾಯ್ಡ್‌ನಿಂದ ಚಾಲಿತವಾದ, ಹೊಸದಾಗಿ ವಿನ್ಯಾಸಗೊಳಿಸಲಾದ ಪ್ರಗತಿ ಓಎಸ್, ದೀರ್ಘಾವಧಿಯ ಬ್ಯಾಟರಿ ಬಾಳಿಕೆಯನ್ನು ಖಚಿತಪಡಿಸುವುದಲ್ಲದೆ ಅತ್ಯುತ್ತಮ ಕಾರ್ಯಕ್ಷಮತೆಯನ್ನೂ ನೀಡುತ್ತದೆ.

  • ಉದ್ಯೋಗಿಗಳ ಬೆಸ್ಟ್‌ ಕಂಪನಿ ಔಟ್‌ – ಭಾರತದ ಯಾವ ಕಂಪನಿಗೆ ಎಷ್ಟನೇ ಸ್ಥಾನ?

    ಉದ್ಯೋಗಿಗಳ ಬೆಸ್ಟ್‌ ಕಂಪನಿ ಔಟ್‌ – ಭಾರತದ ಯಾವ ಕಂಪನಿಗೆ ಎಷ್ಟನೇ ಸ್ಥಾನ?

    ನವದೆಹಲಿ: ಉದ್ಯೋಗಿಗಳ ಬೆಸ್ಟ್‌ ಕಂಪನಿ ಪಟ್ಟಿಯಲ್ಲಿ ವಿಶ್ವದಲ್ಲೇ ಮುಕೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ 52ನೇ ಸ್ಥಾನ ಪಡೆದಿದೆ.

    ಫೋರ್ಬ್ಸ್‌ ಮ್ಯಾಗಜಿನ್‌ ವಿಶ್ವದ 750 ಬೃಹತ್‌ ಕಂಪನಿಗಳ ಬಗ್ಗೆ ಅಧ್ಯಯನ ನಡೆಸಿ ಈ ರ‍್ಯಾಂಕ್ ನೀಡಿದೆ. ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಮೊದಲ ಸ್ಥಾನ ಪಡೆದರೆ ಅಮೆರಿಕದ ಐಬಿಎಂ ಎರಡನೇ ಸ್ಥಾನ ಪಡೆದಿದೆ.

    ಅಮೆರಿಕದ ಕಂಪನಿಗಳಾದ ಮೈಕ್ರೋಸಾಫ್ಟ್, ಅಮೆಜಾನ್, ಆಪಲ್, ಗೂಗಲ್‌ ಮಾತೃಸಂಸ್ಥೆ ಅಲ್ಫಾಬೆಟ್‌, ಡೆಲ್‌ ಅನುಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿದೆ. ಚೀನಾದ ಹುವಾವೇ 8ನೇ ಸ್ಥಾನ ಪಡೆದಿದೆ. ಫೇಸ್‌ಬುಕ್‌ 49ನೇ ಸ್ಥಾನ ಪಡೆದಿದೆ. ಇದನ್ನೂ ಓದಿ: ಆಪಲ್ ಉದ್ಯೋಗಿಗಳ ವಿರುದ್ಧ ಗರಂ – ಖಾರವಾದ ಪತ್ರ ಬರೆದು ಎಚ್ಚರಿಕೆ ನೀಡಿದ ಟಿಮ್ ಕುಕ್

    ಭಾರತದ ಕಂಪನಿಗಳಿಗೆ ಎಷ್ಟು ಸ್ಥಾನ?
    ರಿಲಯನ್ಸ್‌ ಇಂಡಸ್ಟ್ರೀಸ್‌ 52, ಐಸಿಐಸಿಐ ಬ್ಯಾಂಕ್‌ 65, ಎಚ್‌ಡಿಎಫ್‌ಸಿ 77, ಎಚ್‌ಸಿಎಲ್‌ ಟೆಕ್ನಾಲಜೀಸ್‌ 90, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ 119, ಲರ್ಸನ್‌ ಆಂಡ್‌ ಟ್ಯಾಬ್ರೋ 127, ಇಂಡಿಯನ್‌ ಬ್ಯಾಂಕ್‌ 314, ಕೋಟಕ್‌ ಮಹೀಂದ್ರಾ ಬ್ಯಾಂಕ್ 418, ಬ್ಯಾಂಕ್‌ ಆಫ್‌ ಇಂಡಿಯಾ 451, ಲೈಫ್‌ ಇನ್ಶುರೆನ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ 504 ಸ್ಥಾನ ಪಡೆದಿದೆ.

    58 ದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಸಂಸ್ಥೆಗಳ 1,50,000 ಉದ್ಯೋಗಿಗಳನ್ನು ಸಂದರ್ಶಿಸಿ ಫೋರ್ಬ್ಸ್‌ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.

  • ಈಗ ಬಿಡುಗಡೆಯಾಗಲ್ಲ, ದೀಪಾವಳಿಗೂ ಮೊದಲು ಬರಲಿದೆ ಜಿಯೋ ಫೋನ್

    ಈಗ ಬಿಡುಗಡೆಯಾಗಲ್ಲ, ದೀಪಾವಳಿಗೂ ಮೊದಲು ಬರಲಿದೆ ಜಿಯೋ ಫೋನ್

    ಮುಂಬೈ: ಗಣೇಶ ಚತುರ್ಥಿಗೆ ಬಿಡುಗಡೆಯಾಗಬೇಕಿದ್ದ ಕಡಿಮೆ ಬೆಲೆಯ ಜಿಯೋ ಆಂಡ್ರಾಯ್ಡ್ ಫೋನ್ ದೀಪಾವಳಿ ಮೊದಲು ಬಿಡುಗಡೆಯಾಗಲಿದೆ.

    ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಜಿಯೋ, ಈ ಫೋನ್ ಈಗ ಪ್ರಯೋಗದ ಹಂತದಲ್ಲಿದೆ. ದೀಪಾವಳಿಗೆ ಮೊದಲು ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.

    ಜೂನ್ ತಿಂಗಳಿನಲ್ಲಿ ನಡೆದ ರಿಲಯನ್ಸ್ ಇಂಡಸ್ಟ್ರೀಸ್ 44ನೇ ವಾರ್ಷಿಕ ಸಭೆಯಲ್ಲಿ ಮುಖ್ಯಸ್ಥ ಮುಕೇಶ್ ಅಂಬಾನಿ, ಗಣೇಶ ಚತುರ್ಥಿ ಸಮಯದಲ್ಲಿ ಗೂಗಲ್ ಜೊತೆಗೂಡಿ ಕಡಿಮೆ ಬೆಲೆಯ ಜಿಯೋ ಫೋನ್ ನೆಕ್ಸ್ಟ್ ಫೋನ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದರು.

    ಈಗ ವಿಶ್ವಾದ್ಯಂತ ಎಲ್ಲ ಕಂಪನಿಗಳಿಗೆ ಚಿಪ್ ಅಭಾವ ಕಾಡುತ್ತಿದೆ. ಸೆಮಿಕಂಡಕ್ಟರ್ ಕೊರತೆ ಜಿಯೋ ಫೋನಿಗೆ ತಟ್ಟಿದ್ದು ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿದೆ.

    ಭಾರತದಲ್ಲಿ ಮಾತ್ರವೇ ಅಲ್ಲದೆ ಇಡೀ ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಆಗಿರಲಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದರು.  ರಿಲಯನ್ಸ್ ಇಂಡಸ್ಟ್ರೀಸ್ 44ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದ್ದ ಗೂಗಲ್ ಸಿಇಒ ಸುಂದರ್ ಪಿಚೈ, ಈ ಸ್ಮಾರ್ಟ್‍ಫೋನ್ ಭಾರತಕ್ಕೆಂದೇ ನಿರ್ಮಿಸಲಾಗಿದ್ದು, ಮೊತ್ತಮೊದಲ ಬಾರಿಗೆ ಅಂತರಜಾಲ ಬಳಸುವ ಲಕ್ಷಾಂತರ ಹೊಸ ಬಳಕೆದಾರರಿಗೆ ಅದು ಹೊಸ ಸಾಧ್ಯತೆಗಳನ್ನು ತೆರೆದಿಡಲಿದೆ ಎಂದು ಹೇಳಿದ್ದರು.

    ಫೋನಿನಲ್ಲಿ ಏನಿರಲಿದೆ?
    ವಾಯ್ಸ್ ಅಸಿಸ್ಟೆಂಟ್, ಪರದೆಯ ಮೇಲಿನ ಪಠ್ಯವನ್ನು ಓದಿ ಹೇಳುವ ಸೌಲಭ್ಯ, ಅನುವಾದ ಸೌಲಭ್ಯ, ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್ ಗಳಿರುವ ಸ್ಮಾರ್ಟ್ ಕ್ಯಾಮೆರಾ ಇರಲಿದೆ. ಗೂಗಲ್ ಹಾಗೂ ಜಿಯೋ ಅಪ್ಲಿಕೇಶನ್ ಅಲ್ಲದೆ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿರುವ ಆಪ್ ಗಳನ್ನು ಬಳಸಬಹುದಾಗಿದೆ.

    ಕಡಿಮೆ ಬೆಲೆಯ ಫೋನಿನಲ್ಲಿ ಕ್ಯಾಮೆರಾ ಗುಣಮಟ್ಟ ಅಷ್ಟೇನೂ ಉತ್ತಮ ಇರುವುದಿಲ್ಲ. ಆದರೆ ಗೂಗಲ್ ಈ ಫೋನಿಗೆ ಫಾಸ್ಟ್ ಹೈ ಕ್ವಾಲಿಟಿ ಕ್ಯಾಮೆರಾ ನೀಡುವುದಾಗಿ ಹೇಳಿದೆ. ಅಲ್ಲದೇ ಎಚ್‍ಡಿಆರ್ ಮೋಡ್ ಇರಲಿದೆ. ಗೂಗಲ್ ಸ್ನಾಪ್‍ಚಾಟ್ ಜೊತೆಗೂಡಿ ಹೊಸ ಲೆನ್ಸ್ ಅಭಿವೃದ್ಧಿ ಪಡಿಸಿದೆ. ಹೀಗಾಗಿ ಉತ್ತಮ ಗುಣಮಟ್ಟದ ಕ್ಯಾಮೆರಾ ಇರುವ ಸಾಧ್ಯತೆಯಿದೆ. ಗೂಗಲ್ ಈ ಜಿಯೋ ಫೋನಿಗೆ ಲೇಟೆಸ್ಟ್ ಆಂಡ್ರಾಯ್ಡ್ ಓಎಸ್ ಭದ್ರತಾ ನವೀಕರಣಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಆದರೆ ಯಾವ ಆಂಡ್ರಾಯ್ ಆವೃತ್ತಿ ಇರಲಿದೆ ಎನ್ನುವುದು ಸಷ್ಟವಾಗಿ ತಿಳಿದು ಬಂದಿಲ್ಲ.  ಇದನ್ನೂ ಓದಿ: ಜಿಯೋದಲ್ಲಿ ಯಾರ ಹೂಡಿಕೆ ಎಷ್ಟಿದೆ?

    ಬೆಲೆ ಎಷ್ಟು?
    ಜಿಯೋ ಫೋನ್ ಬೆಲೆ ಎಷ್ಟು ಎನ್ನುವುದನ್ನು ಮುಕೇಶ್ ಅಂಬಾನಿ ತಿಳಿಸಿಲ್ಲ. ಆದರೆ ಕಡಿಮೆ ಬೆಲೆ ಎಂಬ ಸುಳಿವು ನೀಡಿದ ಹಿನ್ನೆಲೆಯಲ್ಲಿ 4-5 ಸಾವಿರ ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್‍ಬಿಲ್ಟ್ ಜಿಯೋ ಸಿಮ್ ಇರುವ ಕಾರಣ ಈ ಫೋನ್ ಬಳಕೆದಾರರಿಗೆ ಜಿಯೋ ವಿಶೇಷ ಡೇಟಾ ಪ್ಲ್ಯಾನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

    2017ರ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್  ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಅಂದೇ ವರದಿ ಪ್ರಕಟವಾಗಿತ್ತು.

  • ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಮುಂಬೈ: ಕಡಿಮೆ ಬೆಲೆಗೆ ಮೊಬೈಲ್ ಡೇಟಾ ನೀಡಿ ಕ್ರಾಂತಿ ಮಾಡಿದ್ದ ಜಿಯೋ ಈಗ ಕಡಿಮೆ ದರದಲ್ಲಿ 4ಜಿ ಸ್ಮಾರ್ಟ್‍ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

    ರಿಲಯನ್ಸ್ ಇಂಡಸ್ಟ್ರೀಸ್‍ನ 44ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಮುಖ್ಯಸ್ಥ ಮುಕೇಶ್ ಅಂಬಾನಿ ‘ಜಿಯೋಫೋನ್  ನೆಕ್ಸ್ಟ್’ ಎಂಬ ಹೆಸರಿನ ಆಂಡ್ರಾಯ್ಡ್ ಸ್ಮಾರ್ಟ್ ಫೋನನ್ನು ಜಿಯೋ ಹಾಗೂ ಗೂಗಲ್ ತಂಡಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಸೆಪ್ಟೆಂಬರ್ 10ರ ಗಣೇಶ ಚತುರ್ಥಿಯ ದಿನದಿಂದ ಅದು ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಘೋಷಿಸಿದ್ದಾರೆ.

    ಭಾರತದ ಸ್ಮಾರ್ಟ್‍ಫೋನ್ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಮತ್ತು ಬಜೆಟ್ ಬೆಲೆಯ ಸ್ಮಾರ್ಟ್ ಫೋನ್‍ಗಳನ್ನೇ ಹೆಚ್ಚಿನ ಜನ ಖರೀದಿಸುತ್ತಿದ್ದಾರೆ. ಈ ಮಾರುಕಟ್ಟೆಯ ತಂತ್ರವನ್ನು ತಿಳಿದ ಜಿಯೋ ಈಗ ಕಡಿಮೆ ಬೆಲೆಯಲ್ಲೇ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

    ಭಾರತದಲ್ಲಿ ಮಾತ್ರವೇ ಅಲ್ಲದೆ ಇಡೀ ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್  ಆಗಿರಲಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗೂಗಲ್ ಸಿಇಒ ಸುಂದರ್ ಪಿಚೈ, ಈ ಸ್ಮಾರ್ಟ್‍ಫೋನ್ ಭಾರತಕ್ಕೆಂದೇ ನಿರ್ಮಿಸಲಾಗಿದ್ದು, ಮೊತ್ತಮೊದಲ ಬಾರಿಗೆ ಅಂತರಜಾಲ ಬಳಸುವ ಲಕ್ಷಾಂತರ ಹೊಸ ಬಳಕೆದಾರರಿಗೆ ಅದು ಹೊಸ ಸಾಧ್ಯತೆಗಳನ್ನು ತೆರೆದಿಡಲಿದೆ ಎಂದು ಹೇಳಿದ್ದಾರೆ.

    2017ರ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್  ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಅಂದೇ ವರದಿ ಪ್ರಕಟವಾಗಿತ್ತು.

    ಫೋನಿನಲ್ಲಿ ಏನಿರಲಿದೆ?
    ವಾಯ್ಸ್ ಅಸಿಸ್ಟೆಂಟ್, ಪರದೆಯ ಮೇಲಿನ ಪಠ್ಯವನ್ನು ಓದಿ ಹೇಳುವ ಸೌಲಭ್ಯ, ಅನುವಾದ ಸೌಲಭ್ಯ, ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್ ಗಳಿರುವ ಸ್ಮಾರ್ಟ್ ಕ್ಯಾಮೆರಾ ಇರಲಿದೆ. ಗೂಗಲ್ ಹಾಗೂ ಜಿಯೋ ಅಪ್ಲಿಕೇಶನ್ ಅಲ್ಲದೆ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿರುವ ಆಪ್ ಗಳನ್ನು ಬಳಸಬಹುದಾಗಿದೆ.

    ಕಡಿಮೆ ಬೆಲೆಯ ಫೋನಿನಲ್ಲಿ ಕ್ಯಾಮೆರಾ ಗುಣಮಟ್ಟ ಅಷ್ಟೇನೂ ಉತ್ತಮ ಇರುವುದಿಲ್ಲ. ಆದರೆ ಗೂಗಲ್ ಈ ಫೋನಿಗೆ ಫಾಸ್ಟ್ ಹೈ ಕ್ವಾಲಿಟಿ ಕ್ಯಾಮೆರಾ ನೀಡುವುದಾಗಿ ಹೇಳಿದೆ. ಅಲ್ಲದೇ ಎಚ್‍ಡಿಆರ್ ಮೋಡ್ ಇರಲಿದೆ. ಗೂಗಲ್ ಸ್ನಾಪ್‍ಚಾಟ್ ಜೊತೆಗೂಡಿ ಹೊಸ ಲೆನ್ಸ್ ಅಭಿವೃದ್ಧಿ ಪಡಿಸಿದೆ. ಹೀಗಾಗಿ ಉತ್ತಮ ಗುಣಮಟ್ಟದ ಕ್ಯಾಮೆರಾ ಇರುವ ಸಾಧ್ಯತೆಯಿದೆ. ಗೂಗಲ್ ಈ ಜಿಯೋ ಫೋನಿಗೆ ಲೇಟೆಸ್ಟ್ ಆಂಡ್ರಾಯ್ಡ್ ಓಎಸ್ ಭದ್ರತಾ ನವೀಕರಣಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಆದರೆ ಯಾವ ಆಂಡ್ರಾಯ್ ಆವೃತ್ತಿ ಇರಲಿದೆ ಎನ್ನುವುದು ಸಷ್ಟವಾಗಿ ತಿಳಿದು ಬಂದಿಲ್ಲ.  ಇದನ್ನೂ ಓದಿ: ಜಿಯೋದಲ್ಲಿ ಯಾರ ಹೂಡಿಕೆ ಎಷ್ಟಿದೆ?

    ಬೆಲೆ ಎಷ್ಟು?
    ಜಿಯೋ ಫೋನ್ ಬೆಲೆ ಎಷ್ಟು ಎನ್ನುವುದನ್ನು ಮುಕೇಶ್ ಅಂಬಾನಿ ತಿಳಿಸಿಲ್ಲ. ಆದರೆ ಕಡಿಮೆ ಬೆಲೆ ಎಂಬ ಸುಳಿವು ನೀಡಿದ ಹಿನ್ನೆಲೆಯಲ್ಲಿ 5 ಸಾವಿರ ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್‍ಬಿಲ್ಟ್ ಜಿಯೋ ಸಿಮ್ ಇರುವ ಕಾರಣ ಈ ಫೋನ್ ಬಳಕೆದಾರರಿಗೆ ಜಿಯೋ ವಿಶೇಷ ಡೇಟಾ ಪ್ಲ್ಯಾನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

    ಜಿಯೋದಲ್ಲಿ ಈಗಾಗಲೇ ಗೂಗಲ್, ಫೇಸ್‍ಬುಕ್ ಅಲ್ಲದೇ ಚಿಪ್ ತಯಾರಕ ಕಂಪನಿಗಳಾದ ಕ್ವಾಲಕಂ ಮತ್ತು ಇಂಟೆಲ್ ಹೂಡಿಕೆ ಮಾಡಿದೆ. ಹೀಗಾಗಿ ಹಾರ್ಡ್‍ವೇರ್ ವಿಚಾರದಲ್ಲಿ ಫೋನ್ ತಯಾರಿಕೆಗೆ ಈ ಹೂಡಿಕೆ ನೆರವಾಗಬಹುದು. ಆಪರೇಟಿಂಗ್ ಸಿಸ್ಟಂ ವಿಚಾರದಲ್ಲಿ ಗೂಗಲ್ ಹೇಗೂ ಸಹಾಯ ಮಾಡುತ್ತದೆ ಎಂದು ಈಗಾಗಲೇ ಹೇಳಿದೆ.

    ಪರಿಣಾಮ ಏನು?
    ಈ ಹಿಂದೆ 3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ಭಾರತ ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿತ್ತು. ಹೀಗಾಗಿ ವಿಶ್ವದಲ್ಲಿ 4ಜಿ ಬಳಕೆ ಆರಂಭಗೊಂಡಿದ್ದರೂ ಭಾರತದ ಹಲವು ನಗರಗಳಲ್ಲಿ 3ಜಿ, ಗ್ರಾಮೀಣ ಭಾಗದಲ್ಲಿ 2ಜಿ ನೆಟ್‍ವರ್ಕ್ ಬಳಕೆ ಇತ್ತು. ದೇಶದಲ್ಲಿ 4ಜಿ ತಡವಾಗಿ ಬರಬಹುದು ಎಂಬ ಕಾರಣಕ್ಕೆ ಭಾರತದ ಫೋನ್ ಕಂಪನಿಗಳು 3ಜಿ ಫೋನ್‍ಗಳತ್ತ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದ್ದವು. 2016ರಲ್ಲಿ ಜಿಯೋ ಅಧಿಕೃತವಾಗಿ ಆರಂಭಗೊಂಡು 4ಜಿ ಸೇವೆ ಬಿಡುಗಡೆ ಮಾಡಿ ಸ್ಮಾರ್ಟ್‍ಫೋನ್ ಮತ್ತು ಟೆಲಿಕಾಂ ಮಾರುಕಟ್ಟೆಯನ್ನು ಅಲುಗಾಡಿಸಿತ್ತು. ಇದರಿಂದಾಗಿ 4ಜಿ ಸ್ಮಾರ್ಟ್‍ಫೋನ್ ತಯಾರಿಸುತ್ತಿದ್ದ ವಿಶ್ವದ ಹಲವು ಕಂಪನಿಗಳಿಗೆ ನೆರವಾಗಿದ್ದರೆ ಭಾರತದ ಫೋನ್‍ಗಳು ಸ್ಪರ್ಧಿಸಲಾಗದೇ ರೇಸ್‍ನಿಂದಲೇ ಹೊರಬಿದ್ದಿತ್ತು.

    ಈಗ ದೇಶದಲ್ಲಿ 5ಜಿ ಪ್ರಯೋಗಗಳು ನಡೆಯುತ್ತಿದೆ. 4ಜಿ ಫೋನ್‍ಗಳದ್ದೇ ಮಾರುಕಟ್ಟೆಯಲ್ಲಿ ಹವಾ ಜೋರಿದೆ. ಕಡಿಮೆ ಬೆಲೆಗೆ ಗುಣಮಟ್ಟದ ಸೇವೆ ನೀಡಿದರೆ ಕ್ಲಿಕ್ ಆಗುತ್ತದೆ ಎಂಬ ಜಿಯೋದ ಡೇಟಾ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ. ಹೀಗಾಗಿ ಕಡಿಮೆ ಬೆಲೆಯ ಫೋನ್ ಯಾವ ರೀತಿ ಮಾರುಕಟ್ಟೆಯನ್ನು ಶೇಕ್ ಮಾಡಬಹುದು ಎಂಬ ಕುತೂಹಲ ಮೂಡಿದೆ.

    ಹೊಸದೆನಲ್ಲ:
    ಕಡಿಮೆ ಬೆಲೆಯಲ್ಲಿ ಆಂಡಾಯ್ಡ್ ಫೋನ್ ಗಳನ್ನು ಬಿಡುಗಡೆ ಮಾಡುವ ಸಂಬಂಧ ಗೂಗಲ್ ಫೋನ್  ತಯಾರಕಾ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದು ಹೊಸದೆನಲ್ಲ. ಈ ಹಿಂದೆ 2014ರಲ್ಲಿ ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಆಂಡ್ರಾಯ್ಡ್ ಫೋನ್ ಮಾರುಕಟ್ಟೆ ಹೆಚ್ಚಿಸಲು ‘ಆಂಡ್ರಾಯ್ಡ್ ಒನ್’ ಓಎಸ್ ಬಿಡುಗಡೆ ಮಾಡಿತ್ತು. ಮೈಕ್ರೋಮ್ಯಾಕ್ಸ್, ಕಾರ್ಬನ್, ಲಾವಾ, ಸ್ಫೈಸ್, ಕ್ಸಿಯೋಮಿ, ನೋಕಿಯಾ ಕಂಪನಿಗಳು ಈ ಓಎಸ್ ಅಡಿಯಲ್ಲಿ ಫೋನ್  ಬಿಡುಗಡೆ ಮಾಡಿತ್ತು.

    ಸ್ಟಾಕ್ ಆಂಡ್ರಾಯ್ಡ್ (ಶುದ್ಧವಾದ ಆಂಡ್ರಾಯ್ಡ್ ಓಸ್. ಸ್ಟಾಕ್ ಆಂಡ್ರಾಯ್ಡ್ ಇದ್ದಲ್ಲಿ ಗೂಗಲ್ ಅಪ್‍ಡೇಟ್ ಮಾಡಿದ ಕೂಡಲೇ ಓಎಸ್ ಅಪ್‍ಡೇಟ್ ಸಿಗುತ್ತದೆ. ಕಸ್ಟಮಸ್ಡ್ ಆಂಡ್ರಾಯ್ಡ್ ಓಎಸ್ ಆದ್ರೆ ಕಂಪನಿಗಳು ಅಪ್‍ಡೇಟ್ ನೀಡಬೇಕಾಗುತ್ತದೆ) ಆಗಿದ್ದ ಕಾರಣ ಸ್ಮಾರ್ಟ್ ಫೋನ್  ಮಾರುಕಟ್ಟೆಯಲ್ಲಿ ಕ್ಲಿಕ್ ಆಗಿತ್ತು.

    ಇದಾದ ಬಳಿಕ 2019ರಲ್ಲಿ ಗೂಗಲ್ ಕಡಿಮೆ ಬೆಲೆಯಲ್ಲಿ ಫೋನ್  ಬಿಡುಗಡೆ ಮಾಡಲು ಆಂಡ್ರಾಯ್ಡ್ ಗೋ ಹೆಸರಿನ ಓಎಸ್ ಬಿಡುಗಡೆ ಮಾಡಿತ್ತು. ಆಂಡ್ರಾಯ್ಡ್ ಗೋ ಎಂಬುದು ಅತ್ಯಂತ ಲಘುವಾದ ಆಂಡ್ರಾಯ್ಡ್ ಆವೃತ್ತಿ. ಕಡಿಮೆ ಮೆಮೊರಿ, ವೈಶಿಷ್ಟ್ಯಗಳೂ ಸೀಮಿತ ಮತ್ತು ಅದರ ಕಾರ್ಯಾಚರಣೆಗೆ ಕಡಿಮೆ ರ‍್ಯಾಮ್ ಸಾಕಾಗಿತ್ತು. ಈ ಆಪರೇಟಿಂಗ್ ಸಿಸ್ಟಂಗೆ 2 ಜಿಬಿ ರ‍್ಯಾಮ್ ಅಥವಾ ಅದಕ್ಕಿಂತ ಕಡಿಮೆ ಗಾತ್ರದ ರ‍್ಯಾಮ್ ಇರುವ ಫೋನ್  ಸಾಕಾಗಿತ್ತು.

  • ಬಂಗಾರದ ಮನುಷ್ಯನಿಗೆ ಅವಮಾನ- ಗೂಗಲ್‍ಗೆ ರಿಷಬ್ ಶೆಟ್ಟಿ ರಿಪೋರ್ಟ್

    ಬಂಗಾರದ ಮನುಷ್ಯನಿಗೆ ಅವಮಾನ- ಗೂಗಲ್‍ಗೆ ರಿಷಬ್ ಶೆಟ್ಟಿ ರಿಪೋರ್ಟ್

    ಬೆಂಗಳೂರು: ಗೂಗಲ್ ಸರ್ಚನಲ್ಲಿ ತಮಿಳು ವೇದ್ ಸಿನಿಮಾ ತಂಡದ ಕುರಿತಾಗಿ ಸರ್ಚ್ ಮಾಡಿದರೆ ಡಾ. ರಾಜ್‍ಕುಮಾರ್ ಅವರ ಹೆಸರಿಗೆ ಅವಮಾನ ಆಗುವ ಪದವಿದೆ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

    ತಮಿಳು ವಿಕ್ರಮ್ ವೇದ್ ಸಿನಿಮಾ ತಂಡದ ಬಗ್ಗೆ ಸರ್ಚ್ ಮಾಡಿದಾಗ ರಾಜ್‍ಕುಮಾರ್ ಅವರ ಫೋಟೋ ಕಾಣಿಸುತ್ತದೆ ಜೊತೆಗೆ ಅರೆಬೆಂದ (HALF BOIL) ಪಾತ್ರವೊಂದರಲ್ಲಿ ನಟಿಸಿದ್ದಾರೆ ಎಂಬಂತೆ ಮಾಹಿತಿ ಇದೆ. ದಯಮಾಡಿ ಗೂಗಲ್‍ಗೆ ರಿಪೋರ್ಟ್ ಮಾಡಿ, ತಪ್ಪು ಸರಿ ಹೋಗಲಿ ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದಾರೆ.

    ಇತ್ತೀಚೆಗಷ್ಟೆ ಗೂಗಲ್‍ನಲ್ಲಿ ‘Ugliest Language of India‘ ಎಂದು ಟೈಪ್ ಮಾಡಿದರೆ ಕನ್ನಡ ಎಂದು ತೋರಿಸುತ್ತಿತ್ತು. ನಂತರ ಗೂಗಲ್ ತನ್ನ ತಪ್ಪನ್ನು ಸರಿಪಡಿಸಿಕೊಂಡಿತ್ತು. ಜೊತೆಗೆ ಕನ್ನಡಿಗರ ಬಳಿ ಕ್ಷಮೆಯಾಗಿಸಿತ್ತು. ಇದೀಗ ಗೂಗಲ್‍ನಿಂದ ಮತ್ತೊಂದು ಎಡವಟ್ಟಾಗಿದೆ. ಕನ್ನಡದ ಮೇರು ನಟ ಡಾ. ರಾಜ್‍ಕುಮಾರ್ ಅವರ ಫೋಟೋ ತಮಿಳು ಸಿನಿಮಾದ ತಾರಾಗಣದ ಪಟ್ಟಿಯಲ್ಲಿ ಕಾಣಿಸುತ್ತಿದೆ.  ತಮಿಳಿನ ಸಿನಿಮಾ ವಿಕ್ರಂ ವೇದ ಚಿತ್ರದ ತಾರಾಗಣದ ಪಟ್ಟಿಯಲ್ಲಿ ಡಾ. ರಾಜ್‍ಕುಮಾರ್ ಅವರ ಫೋಟೋ ಸಹ ಕಾಣಿಸಿಕೊಂಡಿದೆ. ಈ ಮೂಲಕ ಕನ್ನಡ ಹಾಗೂ ಡಾ, ರಾಜ್‍ಕುಮಾರ್ ಅವರಿಗೆ ಅವಮಾನ ಮಾಡಿದೆ ಎಂದು ಕನ್ನಡಿಗರು ಮತ್ತೆ ಸಿಟ್ಟಿಗೆದಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಸಿನಿಮಾ ಕಲಾವಿಧರು, ಅಭಿಮಾನಿಗಳು ಈ ಬಗ್ಗೆ ಗೂಗಲ್ ರಿಪೋರ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ

    ಗೂಗಲ್‍ನಲ್ಲಿ ಹೀಗೆ ತಪ್ಪಾಗಿ ಬೇರೆಯವರ ಫೋಟೋಗಳನ್ನು ಹಾಕುವುದು ಹೊಸದೇನಲ್ಲ. ಈ ಹಿಂದೆಯೂ ಗೂಗಲ್ ಕಡೆಯಿಂದ ಇಂತಹ ಎಡವಟ್ಟಾಗಿದೆ. ಯಾರದ್ದೋ ಹೆಸರಿಗೆ ಯಾರದ್ದೋ ಚಿತ್ರ ತೋರಿಸಿರುವ ಹಲವಾರು ಘಟನೆಗಳು ಸಾಕಷ್ಟು ಸಲ ಬೆಳಕಿಗೆ ಬಂದಿದೆ. ಇದನ್ನೂ ಓದಿ:ಕನ್ನಡ ಕೊಳಕು ಭಾಷೆ ಎಂದ ವೆಬ್‍ಸೈಟ್ – ಪೇಜ್ ಅನ್ನು ಸರ್ಚ್‍ನಿಂದ ಕಿತ್ತೆಸೆದ ಗೂಗಲ್

    ರಿಪೋರ್ಟ್ ಮಾಡುವುದು ಹೇಗೆ:

    ಬಳಕೆದಾರ ಹುಡುಕಿದಾಗ ಫಲಿತಾಂಶವನ್ನು ಗೂಗಲ್ ಸರ್ಚ್ ತೋರಿಸುತ್ತದೆಯೋ ಹೊರತು ಆ ಫಲಿತಾಂಶ ಸರಿ ಇದೆಯೋ ತಪ್ಪಿದೆಯೋ ಎಂಬುದನ್ನು ಪರಿಶೀಲಿಸುವುದಿಲ್ಲ. ಅಷ್ಟೇ ಅಲ್ಲದೇ ಇದು ಅಸಾಧ್ಯ. ಆದರೆ ಬಳಕೆದಾರರಿಗೆ ಆಯ್ಕೆಯನ್ನು ನೀಡಿದ್ದು ಒಂದು ವೇಳೆ ತಪ್ಪು ಮಾಹಿತಿಗಳು ಇದ್ದಲ್ಲಿ ಆ ಪೇಜ್ ಅನ್ನು ರಿಪೋರ್ಟ್ ಮಾಡಬಹುದಾಗಿದೆ. ರಿಪೋರ್ಟ್‍ಗಳ ಸಂಖ್ಯೆ ಜಾಸ್ತಿಯಾದರೆ ಗೂಗಲ್ ಸರ್ಚ್‍ನಲ್ಲಿ ಕೆಲಸ ಮಾಡುವವರು ಈ ವಿಚಾರವನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಆ ಪೇಜ್‍ಗಳನ್ನು ಸರ್ಚ್‍ನಿಂದ ತೆಗೆದು ಹಾಕುತ್ತಾರೆ. ಗೂಗಲ್ ಸರ್ಚ್‍ನ ಕೊನೆಯಲ್ಲಿ ‘‘Send Feedback”  ಆಯ್ಕೆಯನ್ನು ಕ್ಲಿಕ್ ಮಾಡಿ  ರಿಪೋರ್ಟ್ ಮಾಡಬಹುದಾಗಿದೆ.

  • ಗೂಗಲ್‍ಗೆ 1,948 ಕೋಟಿ ರೂ. ದಂಡ ಹಾಕಿದ ಫ್ರಾನ್ಸ್

    ಗೂಗಲ್‍ಗೆ 1,948 ಕೋಟಿ ರೂ. ದಂಡ ಹಾಕಿದ ಫ್ರಾನ್ಸ್

    ಪ್ಯಾರಿಸ್: ಆನ್‍ಲೈನ್ ಜಾಹಿರಾತುಗಳ ಪ್ರದರ್ಶನಕ್ಕೆ ತನ್ನ ಮಾರುಕಟ್ಟೆಯನ್ನು ದುರುಪಯೋಗ ಪಡಿಸಿದ್ದಕ್ಕೆ ಅಮೆರಿಕದ ಗೂಗಲ್ ಕಂಪನಿ ಮೇಲೆ ಫ್ರಾನ್ಸ್ 220 ದಶಲಕ್ಷ ಯೂರೋ(ಅಂದಾಜು 1948 ಕೋಟಿ ರೂ.) ದಂಡವನ್ನು ವಿಧಿಸಿದೆ.

    ಫ್ರಾನ್ಸ್‍ನ ಸ್ಪರ್ಧಾ ನಿಯಂತ್ರಕವು ಈ ದಂಡವನ್ನು ವಿಧಿಸಿದ್ದು, ಮುಂದಿನ ದಿನಗಳಲ್ಲಿ ತನ್ನ ಆನ್‍ಲೈನ್ ಜಾಹೀರಾತಿನಲ್ಲಿ ಬದಲಾವಣೆ ಮಾಡಲಾಗುವುದು ಎಂದು ಗೂಗಲ್ ಕಂಪನಿ ತಿಳಿಸಿದೆ.

    ಗೂಗಲ್ ಕೆಲವು ಸಾಧನಗಳು ದೊಡ್ಡ ಪ್ರಕಾಶಕರಿಗೆ ಬಹುತೇಕ ಅವಶ್ಯಕವಾಗಿದೆ. ಆದರೆ ಗೂಗಲ್ ತನ್ನ ಮಾರುಕಟ್ಟೆಯನ್ನು ದುರುಪಯೋಗಪಡಿಸಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ದಂಡವನ್ನು ಹೇರಲಾಗಿದೆ. ಇದನ್ನೂ ಓದಿ: ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

    ಮೂರು ಮಾಧ್ಯಮ ಕಂಪನಿಗಳಾದ ನ್ಯೂಸ್ ಕಾರ್ಪೋರೇಷನ್, ಲೆ ಫಿಗರೊ ಮತ್ತು ಬೆಲ್ಜಿಯಂನ ಗ್ರೂಪ್ ರೊಸೆಲ್‍ ಗೂಗಲ್ ಇಂಟರ್ನೆಟ್ ಜಾಹೀರಾತು ಮಾರಾಟವನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

    ಗೂಗಲ್ ಜಾಹೀರಾತುಗಳು ಬಳಸುವ ವಿಧಾನಗಳು ಅಪಾರದರ್ಶಕವಾಗಿದೆ ಮತ್ತು ಅರ್ಥಮಾಡಿಕೊಳ್ಳುವುದು ಕಷ್ಟವಾಗಿದೆ. ಇದು ಅಸಮಾನತೆಯಿಂದ ಕೂಡಿದ್ದು ಅನಿಯಂತ್ರಿತ ರೀತಿಯಲ್ಲಿದೆ ಎಂದು ಹೇಳಿ ಫ್ರಾನ್ಸ್ ಸ್ಪರ್ಧಾ ನಿಯಂತ್ರಕ  2019ರಲ್ಲಿ 150 ದಶಲಕ್ಷ ಯುರೋ(1,327 ಕೋಟಿ ರೂ.) ದಂಡವನ್ನು ವಿಧಿಸಿತ್ತು. ಇದನ್ನೂ ಓದಿ: ಸಿಸ್ಕೋ, ಅಮೆಜಾನ್‌ 49 ಸಾವಿರ, ಗೂಗಲ್‌ನಲ್ಲಿ 46 ಸಾವಿರ – ಐಟಿ ಇಂಟರ್ನಿಗಳ ತಿಂಗಳ ಸಂಬಳ ಎಷ್ಟು?

  • ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ

    ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ

    ಬೆಂಗಳೂರು: ಗೂಗಲ್ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ ಎಂದು ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ಸೇವೆ, ಹಿಂದಿ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್, ಅಮೆಜಾನ್ ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ. ಇದನ್ನೂ ಓದಿ: ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

    ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.

    ಗೂಗಲ್ ಆಲ್ಗಾರಿದಮ್‌ನ ಸಮಸ್ಯೆಯಿಂದಾಗಿ ಕನ್ನಡಕ್ಕೆ ಅಪಮಾನವಾಗಿರಬಹುದು. ಆದರೆ, ಗೂಗಲ್‌ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ?

    ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ. ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ. ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ. ಇದನ್ನೂ ಓದಿ: ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

    ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂಬುದು ನನ್ನ ಅಭಿಪ್ರಾಯ.

    ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ.

    ನಮ್ಮ ಜಿಎಸ್‌ಟಿ ಪಾಲು ನಮಗೆ ಸಿಗುವುದಿಲ್ಲ, ನೆರೆ–ಬರ ಪರಿಹಾರವಿಲ್ಲ, ಕನ್ನಡಿಗರು ಉಸಿರುಗಟ್ಟಿ ಸಾಯುತ್ತಿದ್ದರೂ ಆಮ್ಲಜನಕ ನೀಡುವುದಿಲ್ಲ, ಕಾಯಿಲೆಗೆ ಔಷಧ ನೀಡುವುದಿಲ್ಲ. ಕರ್ನಾಟಕದಿಂದ ಬರಬೇಕಾದ್ದನ್ನು ವಸೂಲಿ ಮಾಡದೇ ಬಿಡುವುದಿಲ್ಲ. ಇದೆಲ್ಲವೂ ಕನ್ನಡ, ಕನ್ನಡಿಗರ ಮೇಲಿನ ದರ್ಪವಲ್ಲದೇ ಮತ್ತೇನಲ್ಲ. ನಮ್ಮ ಹೋರಾಟ ಇದರ ವಿರುದ್ಧವೂ ಇರಬೇಕು. ಇದನ್ನೂ ಓದಿ: 11 ಸಾವಿರ ಕೋಟಿ ಜಿಎಸ್‍ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿ – ಬೊಮ್ಮಾಯಿ

    ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ಕನ್ನಡಿಗ ಎಚ್ ಡಿ ದೇವೇಗೌಡರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನ ವಹಿಸಿಕೊಳ್ಳುವುದನ್ನು ಹಿಂದಿ ಲಾಭಿ ಎಂದೂ ಸಹಿಸುವುದಿಲ್ಲ.

    ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಿ ವರ್ತಿಸಬೇಕಾಗಿದೆ. ಹಲವು ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಗೆ ಪ್ರಧಾನ.

    ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ. ಕನ್ನಡಿಗರಾದ ನಮಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಮ್ಮ ಐತಿಹಾಸಿಕ, ಚಾರಿತ್ರಿಕ ಗುಣ ಜಾಗೃತವಾಗಬೇಕಾದ ಪರಿಸ್ಥಿತಿ ಬಂದಿದೆ.

  • ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

    ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

    ನವದೆಹಲಿ: ಅಗ್ಲಿ ಲಾಂಗ್ವೇಜ್ ಆಫ್ ಇಂಡಿಯಾ ಎಂದು ಸರ್ಚ್ ಮಾಡಿದಾಗ ವೆಬ್‍ಸೈಟ್ ಒಂದು ಕನ್ನಡ ಎಂಬ ಫಲಿತಾಂಶ ತೋರಿಸುತ್ತಿದ್ದ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಯಾನವೇ ನಡೆದಿತ್ತು. ಗೂಗಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಗೂಗಲ್ ಇದೀಗ ಕನ್ನಡದಲ್ಲೇ ಕನ್ನಡಿಗರ ಕ್ಷಮೆಯಾಚಿಸಿದೆ.

    ಈ ಕುರಿತು ಟ್ವೀಟ್ ಮಾಡಿರುವ ಗೂಗಲ್, ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್‍ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ. ಇದನ್ನೂ ಓದಿ: ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ: ಹೆಚ್‍ಡಿಕೆ ಕಿಡಿ

    ಅಗ್ಲಿ ಲಾಂಗ್ವೇಜ್ ಆಫ್ ಇಂಡಿಯಾ ಎಂದು ಸರ್ಚ್ ಮಾಡಿದಾಗ ವೆಬ್‍ಸೈಟ್ ಒಂದು ಕನ್ನಡ ಎಂಬ ಫಲಿತಾಂಶ ತೋರಿಸುತ್ತಿದ್ದ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು. ಬಳಿಕ ವೆಬ್‍ಸೈಟ್ ಪೇಜ್ ಅನ್ನು ಗೂಗಲ್ ತನ್ನ ಸರ್ಚ್‍ನಿಂದಲೇ ತೆಗೆದು ಹಾಕಿತ್ತು.

    ಆಗಿದ್ದು ಏನು?
    www.debtconsolidationsquad.com ವೆಬ್‍ಸೈಟ್‍ Which is the ugliest language in india ಪ್ರಶ್ನೆಗೆ ಕನ್ನಡ ಉತ್ತರವನ್ನು ನೀಡಿತ್ತು. ಈ ಪುಟದಲ್ಲಿರುವ ಮಾಹಿತಿ ಗೂಗಲ್ ಸರ್ಚ್‍ನಲ್ಲಿ ಕಾಣುತ್ತಿತ್ತು.

    ಗೂಗಲ್ ಸರ್ಚ್‍ನಲ್ಲಿ ಈ ಮಾಹಿತಿ ಕಾಣುತ್ತಿದ್ದಂತೆ ಇಂದು ಭಾರೀ ಸಂಖ್ಯೆಯಲ್ಲಿ ಕನ್ನಡಿಗರು ರಿಪೋರ್ಟ್ ಮಾಡಲು ಆರಂಭಿಸಿದರು. ಜನರ ರಿಪೋರ್ಟ್ ಗಮನಿಸಿದ ಗೂಗಲ್ ಸರ್ಚ್ ಈಗ ಆ ಉತ್ತರ ಪ್ರದರ್ಶನವಾಗುತ್ತಿದ್ದ ಪುಟವನ್ನೇ ಸರ್ಚ್‍ನಿಂದ ತೆಗೆದು ಹಾಕಿದೆ. ಇದನ್ನೂ ಓದಿ:  ಕನ್ನಡ ಕೊಳಕು ಭಾಷೆ ಎಂದ ವೆಬ್‍ಸೈಟ್ – ಪೇಜ್ ಅನ್ನು ಸರ್ಚ್‍ನಿಂದ ಕಿತ್ತೆಸೆದ ಗೂಗಲ್

    ಗೂಗಲ್‍ನದ್ದು ತಪ್ಪಿಲ್ಲ:
    ಈ ಪ್ರಮಾದ ಗೂಗಲ್‍ನಿಂದ ಆಗಿದ್ದಲ್ಲ. ಬಳಕೆದಾರರು ಯಾವುದೇ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹತ್ತಿರದ ಮಾಹಿತಿಯನ್ನು ಗೂಗಲ್ ತನ್ನ ಸರ್ಚ್ ರಿಸಲ್ಟ್ ನಲ್ಲಿ ತೋರಿಸುತ್ತದೆ. ಹೀಗಾಗಿ www.debtconsolidationsquad.com ವೆಬ್‍ಸೈಟ್ ನಲ್ಲಿ Which is the ugliest language in India ಪ್ರಶ್ನೆ ಇದ್ದ ಕಾರಣ ಆ ವೆಬ್‍ಸೈಟ್ ತೋರಿಸಿದೆ. ಗೂಗಲ್ ಯಾವಾಗಲೂ ಸರ್ಚ್ ಮಾಡಿದ ಫಲಿತಾಂಶವನ್ನು ನೀಡುತ್ತದೆ ಹೊರತು ಉದ್ದೇಶಪೂರ್ವಕವಾಗಿ ಈ ರೀತಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ.

    ಬಳಕೆದಾರ ಹುಡುಕಿದಾಗ ಫಲಿತಾಂಶವನ್ನು ಗೂಗಲ್ ಸರ್ಚ್ ತೋರಿಸುತ್ತದೆಯೋ ಹೊರತು ಆ ಫಲಿತಾಂಶ ಸರಿ ಇದೆಯೋ ತಪ್ಪಿದೆಯೋ ಎಂಬುದನ್ನು ಪರಿಶೀಲಿಸುವುದಿಲ್ಲ. ಅಷ್ಟೇ ಅಲ್ಲದೇ ಇದು ಅಸಾಧ್ಯ. ಆದರೆ ಬಳಕೆದಾರರಿಗೆ ಆಯ್ಕೆಯನ್ನು ನೀಡಿದ್ದು ಒಂದು ವೇಳೆ ತಪ್ಪು ಮಾಹಿತಿಗಳು ಇದ್ದಲ್ಲಿ ಆ ಪೇಜ್ ಅನ್ನು ರಿಪೋರ್ಟ್ ಮಾಡಬಹುದಾಗಿದೆ. ರಿಪೋರ್ಟ್‍ಗಳ ಸಂಖ್ಯೆ ಜಾಸ್ತಿಯಾದರೆ ಗೂಗಲ್ ಸರ್ಚ್‍ನಲ್ಲಿ ಕೆಲಸ ಮಾಡುವವರು ಈ ವಿಚಾರವನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಆ ಪೇಜ್‍ಗಳನ್ನು ಸರ್ಚ್‍ನಿಂದ ತೆಗೆದು ಹಾಕುತ್ತಾರೆ. ಗೂಗಲ್ ಸರ್ಚ್‍ನ ಕೊನೆಯಲ್ಲಿ ‘Send Feedback’ ಆಯ್ಕೆಯನ್ನು ಕ್ಲಿಕ್ ಮಾಡಿ ರಿಪೋರ್ಟ್ ಮಾಡಬಹುದಾಗಿದೆ.

  • ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ: ಹೆಚ್‍ಡಿಕೆ ಕಿಡಿ

    ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ: ಹೆಚ್‍ಡಿಕೆ ಕಿಡಿ

    ಬೆಂಗಳೂರು: ಕನ್ನಡ ಭಾಷೆಯ ವಿಚಾರದಲ್ಲಿ ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘Ugliest language in India’ ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ?

    ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‍ಪುಟ ಡಿಲಿಟ್ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ?

    ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ.

    ಇದು ನಿನ್ನ ಭಾಷೆ, ಇದು ದೇಶಭಾಷೆ, ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ ಎಂದು ಕುವೆಂಪು ಅವರ ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಆಗಿದ್ದು ಏನು?
    www.debtconsolidationsquad.com ವೆಬ್‍ಸೈಟ್‍ Which is the ugliest language in india ಪ್ರಶ್ನೆಗೆ ಕನ್ನಡ ಉತ್ತರವನ್ನು ನೀಡಿತ್ತು. ಈ ಪುಟದಲ್ಲಿರುವ ಮಾಹಿತಿ ಗೂಗಲ್ ಸರ್ಚ್‍ನಲ್ಲಿ ಕಾಣುತ್ತಿತ್ತು.

    ಗೂಗಲ್ ಸರ್ಚ್‍ನಲ್ಲಿ ಈ ಮಾಹಿತಿ ಕಾಣುತ್ತಿದ್ದಂತೆ ಇಂದು ಭಾರೀ ಸಂಖ್ಯೆಯಲ್ಲಿ ಕನ್ನಡಿಗರು ರಿಪೋರ್ಟ್ ಮಾಡಲು ಆರಂಭಿಸಿದರು. ಜನರ ರಿಪೋರ್ಟ್ ಗಮನಿಸಿದ ಗೂಗಲ್ ಸರ್ಚ್ ಈಗ ಆ ಉತ್ತರ ಪ್ರದರ್ಶನವಾಗುತ್ತಿದ್ದ ಪುಟವನ್ನೇ ಸರ್ಚ್‍ನಿಂದ ತೆಗೆದು ಹಾಕಿದೆ.

  • ಕನ್ನಡ ಕೊಳಕು ಭಾಷೆ ಎಂದ ವೆಬ್‍ಸೈಟ್ – ಪೇಜ್ ಅನ್ನು ಸರ್ಚ್‍ನಿಂದ ಕಿತ್ತೆಸೆದ ಗೂಗಲ್

    ಕನ್ನಡ ಕೊಳಕು ಭಾಷೆ ಎಂದ ವೆಬ್‍ಸೈಟ್ – ಪೇಜ್ ಅನ್ನು ಸರ್ಚ್‍ನಿಂದ ಕಿತ್ತೆಸೆದ ಗೂಗಲ್

    ಬೆಂಗಳೂರು: ಅಗ್ಲಿ ಲಾಂಗ್ವೇಜ್ ಆಫ್ ಇಂಡಿಯಾ ಎಂದು ಸರ್ಚ್ ಮಾಡಿದಾಗ ಕನ್ನಡ ಎಂಬ ಫಲಿತಾಂಶ ನೀಡುತ್ತಿದ್ದ ವೆಬ್‍ಸೈಟ್ ಪೇಜ್ ಅನ್ನು ಗೂಗಲ್ ತನ್ನ ಸರ್ಚ್‍ನಿಂದಲೇ ತೆಗೆದು ಹಾಕಿದೆ.

    ಆಗಿದ್ದು ಏನು?
    www.debtconsolidationsquad.com ವೆಬ್‍ಸೈಟ್‍ Which is the ugliest language in india ಪ್ರಶ್ನೆಗೆ ಕನ್ನಡ ಉತ್ತರವನ್ನು ನೀಡಿತ್ತು. ಈ ಪುಟದಲ್ಲಿರುವ ಮಾಹಿತಿ ಗೂಗಲ್ ಸರ್ಚ್‍ನಲ್ಲಿ ಕಾಣುತ್ತಿತ್ತು.

     

    ಗೂಗಲ್ ಸರ್ಚ್‍ನಲ್ಲಿ ಈ ಮಾಹಿತಿ ಕಾಣುತ್ತಿದ್ದಂತೆ ಇಂದು ಭಾರೀ ಸಂಖ್ಯೆಯಲ್ಲಿ ಕನ್ನಡಿಗರು ರಿಪೋರ್ಟ್ ಮಾಡಲು ಆರಂಭಿಸಿದರು. ಜನರ ರಿಪೋರ್ಟ್ ಗಮನಿಸಿದ ಗೂಗಲ್ ಸರ್ಚ್ ಈಗ ಆ ಉತ್ತರ ಪ್ರದರ್ಶನವಾಗುತ್ತಿದ್ದ ಪುಟವನ್ನೇ ಸರ್ಚ್‍ನಿಂದ ತೆಗೆದು ಹಾಕಿದೆ.

    ಗೂಗಲ್‍ನದ್ದು ತಪ್ಪಿಲ್ಲ:
    ಈ ಪ್ರಮಾದ ಗೂಗಲ್‍ನಿಂದ ಆಗಿದ್ದಲ್ಲ. ಬಳಕೆದಾರರು ಯಾವುದೇ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹತ್ತಿರದ ಮಾಹಿತಿಯನ್ನು ಗೂಗಲ್ ತನ್ನ ಸರ್ಚ್ ರಿಸಲ್ಟ್ ನಲ್ಲಿ ತೋರಿಸುತ್ತದೆ. ಹೀಗಾಗಿ www.debtconsolidationsquad.com ವೆಬ್‍ಸೈಟ್ ನಲ್ಲಿ Which is the ugliest language in India ಪ್ರಶ್ನೆ ಇದ್ದ ಕಾರಣ ಆ ವೆಬ್‍ಸೈಟ್ ತೋರಿಸಿದೆ. ಗೂಗಲ್ ಯಾವಾಗಲೂ ಸರ್ಚ್ ಮಾಡಿದ ಫಲಿತಾಂಶವನ್ನು ನೀಡುತ್ತದೆ ಹೊರತು ಉದ್ದೇಶಪೂರ್ವಕವಾಗಿ ಈ ರೀತಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ.

    ಬಳಕೆದಾರ ಹುಡುಕಿದಾಗ ಫಲಿತಾಂಶವನ್ನು ಗೂಗಲ್ ಸರ್ಚ್ ತೋರಿಸುತ್ತದೆಯೋ ಹೊರತು ಆ ಫಲಿತಾಂಶ ಸರಿ ಇದೆಯೋ ತಪ್ಪಿದೆಯೋ ಎಂಬುದನ್ನು ಪರಿಶೀಲಿಸುವುದಿಲ್ಲ. ಅಷ್ಟೇ ಅಲ್ಲದೇ ಇದು ಅಸಾಧ್ಯ. ಆದರೆ ಬಳಕೆದಾರರಿಗೆ ಆಯ್ಕೆಯನ್ನು ನೀಡಿದ್ದು ಒಂದು ವೇಳೆ ತಪ್ಪು ಮಾಹಿತಿಗಳು ಇದ್ದಲ್ಲಿ ಆ ಪೇಜ್ ಅನ್ನು ರಿಪೋರ್ಟ್ ಮಾಡಬಹುದಾಗಿದೆ. ರಿಪೋರ್ಟ್‍ಗಳ ಸಂಖ್ಯೆ ಜಾಸ್ತಿಯಾದರೆ ಗೂಗಲ್ ಸರ್ಚ್‍ನಲ್ಲಿ ಕೆಲಸ ಮಾಡುವವರು ಈ ವಿಚಾರವನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಆ ಪೇಜ್‍ಗಳನ್ನು ಸರ್ಚ್‍ನಿಂದ ತೆಗೆದು ಹಾಕುತ್ತಾರೆ. ಗೂಗಲ್ ಸರ್ಚ್‍ನ ಕೊನೆಯಲ್ಲಿ ‘Send Feedback” ಆಯ್ಕೆಯನ್ನು ಕ್ಲಿಕ್ ಮಾಡಿ ರಿಪೋರ್ಟ್ ಮಾಡಬಹುದಾಗಿದೆ. ಇದನ್ನೂ ಓದಿ : 3 ಕೆಂಪು ಟಿಕ್ ಮಾರ್ಕ್, ಕೋರ್ಟ್ ಸಮನ್ಸ್ – ದಯವಿಟ್ಟು ಈ ಮೆಸೇಜ್ ಶೇರ್ ಮಾಡಬೇಡಿ