Tag: ಗೂಗಲ್

  • ಮೀನುಗಾರರ ಪತ್ತೆಗೆ ಇಸ್ರೋ, ಗೂಗಲ್ ನೆರವು: ಸಚಿವ ವೆಂಕಟರಾವ್ ನಾಡಗೌಡ

    ಮೀನುಗಾರರ ಪತ್ತೆಗೆ ಇಸ್ರೋ, ಗೂಗಲ್ ನೆರವು: ಸಚಿವ ವೆಂಕಟರಾವ್ ನಾಡಗೌಡ

    ಕಾರವಾರ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ವೀನುಗಾರಿಕೆ ಬೋಟ್ ನಲ್ಲಿದ್ದ ಕುಮಟಾ ತಾಲೂಕು ಮಾದನಗೆರೆ ಸತೀಶ್, ಈಶ್ವರ, ಹರಿಕಂತ್ರ ಮನೆಗೆ ಸಚಿವರು ಇಂದು ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಸೆಂಬರ್ 13ರಂದು ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿರುವ ಏಳು ಮೀನುಗಾರರಿದ್ದ ಬೋಟ್ 2018ರ ಡಿ.15ರ ರಾತ್ರಿ ಒಂದು ಗಂಟೆವರೆಗೆ ಸಂಪರ್ಕದಲ್ಲಿದ್ದು, ನಂತರ ಸಂಪರ್ಕಕ್ಕೆ ಸಿಗುತ್ತಿಲ್ಲ. ಮೀನುಗಾರರ ಪತ್ತೆಗೆ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಈ ಸಂಬಂಧ ಉಪಗ್ರಹ ಮೂಲಕ ಪತ್ತೆಗೆ ಇಸ್ರೋಗೂ ಮನವಿ ಮಾಡಲಾಗಿದೆ” ಎಂದು ಹೇಳಿದರು.

    ಈ ಪ್ರಕರಣ ಸಂಬಂಧ ಡಿ. 22ರಂದು ದೂರು ದಾಖಲಿಸಿಕೊಳ್ಳಲಾಗಿದೆ. ಮೀನುಗಾರರ ಪತ್ತೆಗಾಗಿ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಫಲ ಸಿಕ್ಕಿಲ್ಲ. ರಾಜ್ಯ ಸರ್ಕಾರದಿಂದ ಸ್ಥಳೀಯ ಮೀನುಗಾರರ ಸಹಕಾರ ಪಡೆದು ಎಲ್ಲ ಬಂದರುಗಳೂ ಸೇರಿದಂತೆ ಶಂಕಾಸ್ಪದ ಸ್ಥಳಗಳಲ್ಲಿ ಪತ್ತೆ ಕಾರ್ಯ ನಡೆಸಲಾಗಿದೆ. ಸಮುದ್ರದಲ್ಲೂ ಕೂಡ ಹೆಲಿಕಾಪ್ಟರ್ ಮತ್ತು ತಟ ರಕ್ಷಣಾ ಪಡೆಗಳ ಮೂಲಕ ಪತ್ತೆಗೆ ಪ್ರಯತ್ನಿಸಲಾಗಿದೆ ಎಂದರು.  ಇದನ್ನೂ ಓದಿ: ನಾಪತ್ತೆಯಾದ ಮೀನುಗಾರರನ್ನು ಹುಡುಕಲು ನಾವೇನು ಸಮುದ್ರಕ್ಕೆ ಹಾರ್ಬೇಕಾ- ಸಚಿವ ನಾಡಗೌಡ ಪ್ರಶ್ನೆ

    ಈಗಾಗಲೇ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ನೌಕಾದಳವನ್ನು ಬಳಸಿಕೊಳ್ಳಲು ಕೋರಲಾಗಿದೆ. ಅಲ್ಲದೇ ಗೂಗಲ್ ಸೇರಿದಂತೆ ಉಪಗ್ರಹ ಸಂಸ್ಥೆಗಳ ನೆರವು ಪಡೆಯಲಾಗಿದೆ ಎಂದರು. ಗುಜರಾತ್ ಗಡಿದಾಟಿ ಪಾಕಿಸ್ತಾನ ಗಡಿ ಪ್ರವೇಶಿಸುವ ಸಾಧ್ಯತೆ ಕಡಿಮೆ ಇದೆ. ಬೋಟ್ ನಲ್ಲಿ ಅಷ್ಟು ಪ್ರಮಾಣದ ಇಂಧನ ಇರಲಿಲ್ಲ ಎಂದು ಹೇಳಲಾಗಿದೆ. ಈ ಹಿಂದಿನ ಕೆಲವು ಪ್ರಕರಣಗಳ ಆಧಾರದಂತೆ ಬೇರೆ ರಾಜ್ಯದ ಮೀನುಗಾರರು ನಮ್ಮ ಮೀನುಗಾರರನ್ನು ಅಪಹರಿಸಿರುವ ಸಂಶಯ ಇದೆ. ಈ ವಿಚಾರದಲ್ಲೂ ನೆರೆ ರಾಜ್ಯಗಳ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

    ವೀನುಗಾರರು ಜೀವಂತವಾಗಿರುತ್ತಾರೆ ಎಂಬ ಅಚಲ ವಿಶ್ವಾಸ ನಮ್ಮ ಸರ್ಕಾರದ್ದು. ಅವರ ಪತ್ತೆಗೆ ಅವಿರತ ಪ್ರಯತ್ನಗಳ ನಡೆದಿದ್ದು, ಶೀಘ್ರವೇ ನಿರೀಕ್ಷಿತ ಫಲಶೃತಿಗೆ ಎದುರು ನೋಡುತ್ತಿದ್ದೇವೆ ಅಂದ್ರು. ಸಚಿವರಿಗೆ ಸ್ಥಳೀಯ ಶಾಸಕ ದಿನಕರ್ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಎಸ್. ಪಾಟೀಲ್ ಸೇರಿದಂತೆ ವಿವಿಧ ಪ್ರಮುಖರು ಈ ಸಂದರ್ಭದಲ್ಲಿ ಸಾಥ್ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಾಪ್ಸಿ ಪನ್ನು ಹೇಳಿದ ದೇಹದ ಭಾಗದ ಅರ್ಥ ತಿಳಿಯಲು ಗೂಗಲ್ ಮೊರೆ ಹೋದ್ರು!

    ತಾಪ್ಸಿ ಪನ್ನು ಹೇಳಿದ ದೇಹದ ಭಾಗದ ಅರ್ಥ ತಿಳಿಯಲು ಗೂಗಲ್ ಮೊರೆ ಹೋದ್ರು!

    – ನಿನ್ನ ಬಾಡಿ ಪಾರ್ಟ್ಸ್ ನಂಗಿಷ್ಟ ಎಂದವನಿಗೆ ತಾಪ್ಸಿ ತಿರುಗೇಟು

    ಮುಂಬೈ: ದಕ್ಷಿಣ ಭಾರತ ಚಿತ್ರರಂಗವಲ್ಲದೇ, ಬಾಲಿವುಡ್ ಕ್ಷೇತ್ರದಲ್ಲೂ ಖ್ಯಾತಿ ಪಡೆದಿರುವ ಬಹುಭಾಷಾ ನಟಿ ತಾಪ್ಸಿ ಪನ್ನು ತಮ್ಮನ್ನು ಟ್ರೋಲ್ ಮಾಡಲು ಯತ್ನಿಸಿದ ವ್ಯಕ್ತಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿ ತಿರುಗೇಟು ನೀಡಿದ್ದಾರೆ. ತಿರುಗೇಟು ನೀಡುವ ವೇಳೆ ಅವರು ಬಳಸಿದ ಪದದ ಅರ್ಥ ತಿಳಿಯಲು ಜನ ಗೂಗಲ್ ಮೊರೆ ಹೋಗಿದ್ದಾರೆ.

    ಸದಾ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿರುವ ತಾಪ್ಸಿ ಅವರಿಗೆ, ‘ನಿನ್ನ ಬಾಡಿ ಪಾರ್ಟ್ಸ್ ನಂಗಿಷ್ಟ’ ಎಂದು ವ್ಯಕ್ತಿಯೊಬ್ಬ ಟ್ವೀಟ್ ಮಾಡಿದ್ದ. ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ್ದ ತಾಪ್ಸಿ ‘ವಾವ್ ಐ ಲೈಕ್ ದೆಮ್ ಟೂ, ನಿಮ್ಮ ಇಷ್ಟದ ಭಾಗ ಯಾವುದು? ನನಗೆ cerebrum ಇಷ್ಟ’ ಎಂದು ರೀ ಟ್ವೀಟ್ ಮಾಡಿದ್ದರು.

    ಇತ್ತ ತಾಪ್ಸಿ ಅವರ ಖಡಕ್ ಉತ್ತರವನ್ನು ಕಂಡು ಹಲವು ಮಂದಿ ಶಾಕ್ ಆಗಿದ್ದರೆ, ಮತ್ತು ಕೆಲವರು ಸೆರೆಬ್ರಮ್ ಎಂಬ ಪದದ ಅರ್ಥ ತಿಳಿಯದೇ ಗೂಗಲ್ ಮಾಡಿದ್ದಾರೆ. ಸೋಮವಾರ ಭಾರತೀಯರು ಗೂಗಲ್‍ನಲ್ಲಿ ಹೆಚ್ಚು ಹುಡುಕಾಟ ನಡೆಸಿದ ಪದಗಳ ಪಟ್ಟಿಯಲ್ಲಿ ಸೆರೆಬ್ರಮ್ ಕೂಡ ಸ್ಥಾನ ಪಡೆದಿದೆ.

    ಗೂಗಲ್ ಸರ್ಚ್ ನಲ್ಲಿ ಸೆರೆಬ್ರಮ್ ಪದದ ಹುಡುಕಾಟ ನಡೆಸಿದ ವೇಳೆ ಉಂಟಾಗಿರುವ ಬದಲಾವಣೆಯ ಫೋಟೋವನ್ನು ಟ್ವೀಟ್ ಮಾಡಿರುವ ರಾಹುಲ್ ಎಂಬವರು ಹೆಚ್ಚಿನ ಜನರು ಈ ಪದದ ಅರ್ಥ ತಿಳಿಯಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ.

    ಅಂದಹಾಗೆ ‘ಸೆರೆಬ್ರಮ್’ ಮೆದುಳಿನಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು, ಇದನ್ನು ಕನ್ನಡದಲ್ಲಿ ಮುಮ್ಮಿದುಳು, ಪ್ರಧಾನ ಮೆದುಳು ಎಂದು ಕರೆಯುತ್ತಾರೆ. ತಮ್ಮನ್ನು ಟ್ರೋಲ್ ಮಾಡಲು ಯತ್ನಿಸಿದ ವ್ಯಕ್ತಿಗೆ ತಾಪ್ಸಿ ಸೂಕ್ತವಾಗಿಯೇ ಉತ್ತರಿಸಿ ತಿರುಗೇಟು ನೀಡಿದ್ದು, ತಾಪ್ಸಿ ಅವರ ಬುದ್ಧಿವಂತಿಕೆ ಉತ್ತರ ಕಂಡು ಟ್ವೀಟಿಗರು ಮೆಚ್ಚಿಕೊಂಡಿದ್ದಾರೆ.

    ಈ ಹಿಂದೆಯೂ ತಾಪ್ಸಿ ಹಲವು ಬಾರಿ ತಮ್ಮ ಖಡಕ್ ಟ್ವೀಟ್‍ಗಳಿಂದ ಎದುರಾಳಿಗಳಿಗೆ ತಿರುಗೇಟು ನೀಡಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ  ಟ್ರೋಲ್ ಮಾಡಿದವರನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ ‘ತಾಪ್ಸಿ ಬಾಲಿವುಡ್ ಕಂಡ ಅತ್ಯಂತ ಕೆಟ್ಟ ನಟಿ. ಆಕೆ ಎರಡು ಮೂರು ಚಿತ್ರಗಳ ನಂತರ ಬಾಲಿವುಡ್ ನಲ್ಲಿ ಉಳಿಯುವುದಿಲ್ಲ’ ಟ್ರೋಲ್ ಮಾಡಿದ್ದ ವ್ಯಕ್ತಿಗೆ ತಿರುಗೇಟು ನೀಡಿದ್ದ ತಾಪ್ಸಿ, ನಾನು ಈಗಾಗಲೇ ಮೂರು ಚಿತ್ರಗಳಲ್ಲಿ ನಟಿಸಿದ್ದು, ಇನ್ನು ಮೂರು ಚಿತ್ರಗಳಿಗೆ ಸಹಿ ಹಾಕಿದ್ದಾಗಿ ಹೇಳಿದ್ದರು.

    https://twitter.com/akshit4u/status/1075035119734280192

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೂಗಲ್‍ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದ್ರೆ ಟ್ರಂಪ್ ಫೋಟೋ ಯಾಕೆ ಬರುತ್ತೆ- ಸುಂದರ್ ಪಿಚೈಗೆ ಗೂಗ್ಲಿ ಪ್ರಶ್ನೆ

    ಗೂಗಲ್‍ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದ್ರೆ ಟ್ರಂಪ್ ಫೋಟೋ ಯಾಕೆ ಬರುತ್ತೆ- ಸುಂದರ್ ಪಿಚೈಗೆ ಗೂಗ್ಲಿ ಪ್ರಶ್ನೆ

    ವಾಷಿಂಗ್ಟನ್: “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವ ಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ.

    ಮಂಗಳವಾರ ಅಮೆರಿಕದ ಸೆನೆಟ್‍ನಲ್ಲಿ ಗೂಗಲ್ ಡೇಟಾ ಸಂಗ್ರಹದ ಪಾರದರ್ಶಕತೆ, ಉತ್ತಾರದಾಯಿತ್ವ ವಿಚಾರದ ಬಗ್ಗೆ ಎದಿದ್ದ ಸಂದೇಹಗಳಿಗೆ ಉತ್ತರ ನೀಡಲು ಸುಂದರ್ ಪಿಚೈ ಆಗಮಿಸಿದ್ದರು. ಸುಮಾರು ಮೂರುವರೆ ಗಂಟೆಗಳ ಕಾಲ ಪ್ರಶ್ನೋತ್ತರ ವಿಚಾರಣೆ ನಡೆಯಿತು.

    ಈ ಸಮಯದಲ್ಲಿ ಸೆನೆಟರ್ ಜೂಹಿ ಲೊಫ್ಗ್ರೆನ್ ಅವರು, ಗೂಗಲ್‍ನಲ್ಲಿ ಈಡಿಯೆಟ್ ಎಂದು ಸರ್ಚ್ ಮಾಡಿದರೆ, ಟ್ರಂಪ್ ಅವರ ಫೋಟೋ ಹಾಗೂ ಅವರಿಗೆ ಸಂಬಂಧಿಸಿದ ಸುದ್ದಿಗಳು ಬರುತ್ತವೆ. ಈ ಪದವನ್ನು ಟೈಪ್ ಮಾಡಿದ ಕೂಡಲೇ ಟ್ರಂಪ್ ಫೋಟೋ ಬರಲು ಹೇಗೆ ಸಾಧ್ಯ? ಇದರಲ್ಲಿ ವ್ಯಕ್ತಿಗಳ ಕೈವಾಡವಿದೆಯೇ ಎಂದು ಪ್ರಶ್ನಿಸಿದ್ದರು.

    ಇದಕ್ಕೆ ಪ್ರತಿಕ್ರಿಯಿಸಿದ ಸುಂದರ್ ಪಿಚೈ, ಈ ರೀತಿಯ ಫಲಿತಾಂಶ ಬರಲು ಯಾವುದೇ ವ್ಯಕ್ತಿಗಳ ಕೈವಾಡವಿಲ್ಲ. ಗೂಗಲ್ ಕೀವರ್ಡ್ ಗಳನ್ನು ಬಳಸಿಕೊಂಡು ನಿಖರ ಸರ್ಚ್ ರಿಸಲ್ಟ್ ಗಳನ್ನು ನೀಡುತ್ತದೆ. ಕೀವರ್ಡ್ ಗಳನ್ನು ಪಡೆದು ನಂತರ 200 ಸಿಗ್ನಲ್‍ಗಳ ಮೂಲಕ ಮ್ಯಾಚ್ ಮಾಡಲಾಗುತ್ತದೆ. ಅತಿ ಹೆಚ್ಚು ಸರ್ಚ್, ಪ್ರಸ್ತುತ ಅದರ ಅಗತ್ಯತೆ ಈ ಎಲ್ಲ ವಿಚಾರಗಳನ್ನು ನೋಡಿಕೊಂಡು ಫಲಿತಾಂಶ ಬರುವಂತೆ ಸಿದ್ಧಪಡಿಸಲಾಗಿದೆ. ಎಲ್ಲ ಸರ್ಚ್‍ಗಳನ್ನು ನಾವು ಪರಿಶೀಲಿಸುವುದಿಲ್ಲ ಎಂದು ತಿಳಿಸಿದರು.

    ಗೂಗಲ್‍ನಲ್ಲಿ ಈ ರೀತಿಯ ಫಲಿತಾಂಶ ಬರುತ್ತಿರುವುದು ಇದೇ ಮೊದಲೇನಲ್ಲ. ಕೆಲ ದಿನಗಳ ಹಿಂದೆ ಫೇಕ್ ಎನ್ನುವ ಪದವನ್ನು ಗೂಗಲ್ ನಲ್ಲಿ ಟೈಪ್ ಮಾಡಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೋರಿಸುತ್ತಿತ್ತು. ಅಲ್ಲದೇ ಪಪ್ಪು ಎಂದು ಟೈಪ್ ಮಾಡಿದಾಗ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಫೋಟೋ ಕೂಡ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಗೂಗಲ್ ರಾಜಕೀಯ ಸುದ್ದಿಯಲ್ಲಿ ಕರ್ನಾಟಕ ಚುನಾವಣೆ ನಂಬರ್ 1!

    ಗೂಗಲ್ ರಾಜಕೀಯ ಸುದ್ದಿಯಲ್ಲಿ ಕರ್ನಾಟಕ ಚುನಾವಣೆ ನಂಬರ್ 1!

    ಬೆಂಗಳೂರು: ಗೂಗಲ್ 2018ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಹುಡುಕಾಡಿದ ಟ್ರೆಡಿಂಗ್ ಟಾಪಿಕ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ರಾಜಕೀಯ ಸುದ್ದಿಯಲ್ಲಿ ಕರ್ನಾಟಕ ಚುನಾವಣೆ ದೇಶದಲ್ಲೇ ನಂಬರ್ ಒನ್ ಸ್ಥಾನವನ್ನು ಪಡೆದಿದೆ.

    ಗೂಗಲ್‍ನ ರಾಜಕೀಯ ವಿಭಾಗದ ಸುದ್ದಿಯಲ್ಲಿ ಟಾಪ್ 1 ಟ್ರೆಂಡಿಂಗ್ ನಲ್ಲಿ ಕರ್ನಾಟಕದ ಫಲಿತಾಂಶ ಸ್ಥಾನ ಗಿಟ್ಟಿಸಿಕೊಂಡಿದೆ. ಓವರ್ ಆಲ್ ಸುದ್ದಿ ವಿಭಾಗದಲ್ಲಿ ಕರ್ನಾಟಕ ಚುನಾವಣೆ 2ನೇ ಸ್ಥಾನ ಪಡೆದುಕೊಂಡಿದೆ. ಒಟ್ಟಾರೆ ವಿಭಾಗದಲ್ಲಿ ಟಾಪ್ 4 ಸ್ಥಾನದಲ್ಲಿದೆ.

    ಸುದ್ದಿ ವಿಭಾಗ:
    ಫಿಫಾ ವರ್ಲ್ಡ್ ಕಫ್ ಮೊದಲನೇ ಸ್ಥಾನದಲ್ಲಿದೆ. ಇದನ್ನು ಬಿಟ್ಟರೆ ಭಾರತದಲ್ಲಿ ಹೆಚ್ಚು ಜನರು ಕರ್ನಾಟಕ ಚುನಾವಣಾ ಸುದ್ದಿಯ ಬಗ್ಗೆ ಹುಡುಕಾಟ ನಡೆಸಿದ್ದಾರೆ. ಮೂರನೇ ಸ್ಥಾನ ಪ್ರಿಯಾಂಕ ಚೋಪ್ರಾ ಮದುವೆ ಸಿಕ್ಕಿದರೆ ನಾಲ್ಕನೇಯ ಸ್ಥಾನ ಏಕತಾ ಪ್ರತಿಮೆಗೆ ಸಿಕ್ಕಿದೆ.

    ಒಟ್ಟಾರೆ ವಿಭಾಗ:
    ಈ ವಿಭಾಗದಲ್ಲಿಯೂ ಫಿಫಾ ವರ್ಲ್ಡ್ ಕಫ್ ಮೊದಲನೇ ಸ್ಥಾನದಲ್ಲಿದೆ. ಟಾಪ್ 2ನಲ್ಲಿ ಲೈವ್ ಸ್ಕೋರ್ ಹಾಗೂ ಟಾಪ್ 3ನಲ್ಲಿ ಐಪಿಎಲ್ 2018 ಇದೆ. ಇದರ ನಂತರ ಸ್ಥಾನದಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

    ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

    ಬೆಂಗಳೂರು: ಭಾರತೀಯ ರೈಲುಗಳು ಈಗ ಎಲ್ಲಿ ಸಂಚರಿಸುತ್ತಿದೆ ಎನ್ನುವ ನಿಖರ ಮಾಹಿತಿಯನ್ನು ತಿಳಿಸುವ ‘ವೇರ್ ಈಸ್ ಮೈ ಟ್ರೈನ್’ ಅಪ್ಲಿಕೇಶನ್‍ನನ್ನು ಗೂಗಲ್ ಖರೀದಿಸಿದೆ.

    ಟೆಕ್ ವಿಶ್ಲೇಷಕರ ಪ್ರಕಾರ, ಗೂಗಲ್ ಭಾರತದಲ್ಲಿ ಜನಪ್ರಿಯ ಹೊಂದುತ್ತಿರುವ ‘ವೇರ್ ಈಸ್ ಮೈ ಟ್ರೈನ್’ ಆ್ಯಪನ್ನು ಅಭಿವೃದ್ಧಿ ಪಡಿಸಿದ ಸಿಗ್ಮಯಿಡ್ ಕಂಪನಿಯನ್ನು ಅಂದಾಜು 40 ಮಿಲಿಯನ್ ಡಾಲರ್ (288 ಕೋಟಿ ರೂಪಾಯಿ) ಖರೀದಿಸುವ ಸಂಬಂಧ ಮಾತುಕತೆ ನಡೆಸಿತ್ತು. ಈಗ ಈ ಕಂಪನಿಯನ್ನು ಎಷ್ಟು ಕೋಟಿ ರೂ. ನೀಡಿ ಖರೀದಿಸಿದೆ ಎನ್ನುವ ಮಾಹಿತಿ ಬಹಿರಂಗವಾಗಿಲ್ಲ.

    ಗೂಗಲ್ ಸಂಸ್ಥೆ ಖರೀದಿಸಿದ ಎರಡನೇ ಖರೀದಿ ಇದಾಗಿದ್ದು, ಇದಕ್ಕೂ ಮೊದಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕಂಪನಿ ‘ಹಳ್ಳಿ ಲ್ಯಾಬ್ಸ್’ ಖರೀದಿಸಿತ್ತು.

    ಏನಿದು `ವೇರ್ ಈಸ್ ಮೈ ಟ್ರೈನ್’ ಆ್ಯಪ್?
    ಭಾರತೀಯ ರೈಲುಗಳ ಮಾಹಿತಿಯನ್ನು ಒಳಗೊಂಡಿರುವ ಈ ಆ್ಯಪ್, ಪ್ರಯಾಣಿಕರ ರೈಲು ಯಾವ ನಿಲ್ದಾಣದ ಬಳಿ ಇದೆ ಎಂದು ನಿಖರವಾಗಿ ಹೇಳುತ್ತದೆ. ಇಂಟರ್‍ನೆಟ್ ಸೌಲಭ್ಯವಿಲ್ಲದಿದ್ದರೂ, ಗ್ರಾಹಕರು ರೈಲಿನ ಸಂಪೂರ್ಣ ಮಾಹಿತಿಯನ್ನು ರೈಲಿನ ಒಳಗಡೆ ಕುಳಿತು ಪಡೆದುಕೊಳ್ಳಬಹುದು. ಈ ಆ್ಯಪ್ ಆಫ್‍ಲೈನ್ ಜಿಪಿಎಸ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ ಕಾರಣ ರೈಲು ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿತ್ತು.

    ಈ ಆ್ಯಪ್ ಭಾರತೀಯ ರೈಲ್ವೇ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ರೈಲುಗಳ ಮಾಹಿತಿಯನ್ನು ಒಳಗೊಂಡಿದೆ. ಪ್ರಯಾಣಿಕರು ಆ್ಯಪ್ ನಲ್ಲಿ ಕೇವಲ ತಮ್ಮ ರೈಲು ಸಂಖ್ಯೆಯನ್ನು ನಮೂದಿಸಿದರೆ, ರೈಲು ಯಾವ ಸ್ಟೇಷನ್ ನಲ್ಲಿದೆ? ಮುಂದಿನ ನಿಲ್ದಾಣ ಯಾವುದು? ಎಷ್ಟು ಸಮಯಕ್ಕೆ ಬರುತ್ತದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ನೀಡುತ್ತದೆ.

    ‘ವೇರ್ ಈಸ್ ಮೈ ಟ್ರೇನ್’ ಆ್ಯಪ್ ಇಂಗ್ಲೀಷ್, ಹಿಂದಿ, ಮರಾಠಿ, ಬಂಗಾಳಿ, ತಮಿಳು, ತೆಲುಗು, ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ಲಭ್ಯವಿದ್ದು, ಇತ್ತೀಚೆಗೆ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದೆ

    ಗೂಗಲ್ ಪ್ಲೇ ಸ್ಟೋರ್ ನಿಂದ 2018ರಲ್ಲಿ ಅತಿ ಹೆಚ್ಚು ಡೌನ್‍ಲೋಡ್ ಆಗಿರುವ ಆ್ಯಪ್ ಗಳ ಪೈಕಿ ವೇರ್ ಈಸ್ ಮೈ ಟ್ರೈನ್ ಸ್ಥಾನ ಪಡೆದುಕೊಂಡಿದ್ದು, ಇದೂವರೆಗೂ 50 ಲಕ್ಷಕ್ಕೂ ಅಧಿಕ ಮಂದಿ ಈ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಗೂಗಲ್‍ನಲ್ಲಿ #MeToo ಗಾಳಿ- 48 ಸಿಬ್ಬಂದಿಗೆ ಗೇಟ್ ಪಾಸ್

    ಗೂಗಲ್‍ನಲ್ಲಿ #MeToo ಗಾಳಿ- 48 ಸಿಬ್ಬಂದಿಗೆ ಗೇಟ್ ಪಾಸ್

    ವಾಷಿಂಗ್ಟನ್: ಮೀಟೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವದ ಐಟಿ ದಿಗ್ಗಜ ಕಂಪನಿ ಗೂಗಲ್ ಕಳೆದ 2 ವರ್ಷಗಳಲ್ಲಿ 48 ಸಿಬ್ಬಂದಿಗೆ ಗೇಟ್ ಪಾಸ್ ನೀಡಿದೆ.

    ಈ ಆರೋಪದಲ್ಲಿ 13 ಹಿರಿಯ ಅಧಿಕಾರಿಗಳು ಮತ್ತು 48 ಸಿಬ್ಬಂದಿ ಹೆಸರು ಕೇಳಿಬರುತ್ತಿದ್ದಂತೆ ಭಾರತೀಯ ಮೂಲದ ಗೂಗಲ್ ನ ಕಾರ್ಯನಿರ್ವಾಹಕ ಅಧಿಕಾರಿಯಾದ ಸುಂದರ್ ಪಿಚೈ ಅವರೆಲ್ಲರನ್ನು ಹೊರ ಹಾಕಿದ್ದಾರೆ.

    ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಗೂಗಲ್ ನ ಆಂಡ್ರಾಯ್ಡ್ ಮುಖ್ಯಸ್ಥ ಆಂಡಿ ರೂಬಿನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಸಂಬಂಧ ಗೂಗಲ್ ಆಂಡಿ ರೂಬಿನ್ ಗೆ 9 ಕೋಟಿ ಡಾಲರ್(659 ಕೋಟಿ ರೂ.) ನಿರ್ಗಮನದ ಪ್ಯಾಕೇಜ್ ನೀಡಿ ಕೆಲಸದಿಂದ ತೆಗೆದು ಹಾಕಿತ್ತು. ಈ ಆರೋಪದಲ್ಲಿ ಆಂಡಿ ಮಾತ್ರವಲ್ಲದೇ 13 ಹಿರಿಯ ಅಧಿಕಾರಿಗಳ ಹೆಸರು ಕೇಳಿಬಂದಿದ್ದು, ಅವರನ್ನು ಸಹ ತಮ್ಮ ಕೆಲಸದಿಂದ ಹೊರಹಾಕಿದೆ ಎಂದು ಗೂಗಲ್ ವಕ್ತಾರರೊಬ್ಬರು ಮಾಧ್ಯಮವೊಂದಕ್ಕೆ ಇಮೇಲ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಗೂಗಲ್ ತನ್ನ ಉಪಾಧ್ಯಕ್ಷರು ಮತ್ತು ಹಿರಿಯ ಉಪಾಧ್ಯಕ್ಷರು ಕಂಪನಿಯ ಇತರೆ ಸಿಬ್ಬಂದಿಯ ಜೊತೆಗೆ ಯಾವುದೇ ಪ್ರೇಮ ಸಂಬಂಧವನ್ನ ಹೊಂದುವುದನ್ನು ನಿಷೇಧಿಸಿದೆ. ಈ ಕುರಿತಾಗಿ ವಿಶೇಷ ನೀತಿಯನ್ನು ಜಾರಿಗೆ ತರಲಾಗಿದೆ.

    ಕಾರ್ಯಸ್ಥಳವನ್ನ ಸುರಕ್ಷಿತವಾಗಿ ನಿರ್ಮಾಣ ಮಾಡುವುದು ನಮ್ಮ ಗುರಿ, ಎರಡು ವರ್ಷದಲ್ಲಿ ನಮ್ಮ ಕಂಪನಿಯು ಅನೇಕ ಬದಲಾವಣೆಗಳನ್ನ ಮಾಡಿದೆ. ಕಿರುಕುಳ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಹ ಕೆಲಸಗಾರರಿಗೆ ಲೈಂಗಿಕ ಕಿರುಕುಳ ಅಥವಾ ದುರ್ವರ್ತನೆಗೆ ಸಂಬಂಧಿಸಿದ ಪ್ರತಿಯೊಂದು ದೂರನ್ನು ನಾವು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತೇವೆ ಎಂದು ಸುಂದರ್ ಪಿಚೈ ಇಮೇಲ್ ಮೂಲಕ ಉದ್ಯೋಗಿಗಳಿಗೆ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೃಷ್ಣಜನ್ಮಾಷ್ಟಮಿಯಂದು ಪತ್ನಿಯ ನಾನ್ ವೆಜ್ ಪಿಜ್ಜಾ ಆರ್ಡರ್ – ಗೂಗಲ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಐಪಿಎಸ್ ಅಧಿಕಾರಿ!

    ಕೃಷ್ಣಜನ್ಮಾಷ್ಟಮಿಯಂದು ಪತ್ನಿಯ ನಾನ್ ವೆಜ್ ಪಿಜ್ಜಾ ಆರ್ಡರ್ – ಗೂಗಲ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಐಪಿಎಸ್ ಅಧಿಕಾರಿ!

    – ಪತ್ನಿ ಜೊತೆ ಗಲಾಟೆ ಬಳಿಕ ಖಿನ್ನತೆಗೆ ಜಾರಿದ್ದ ಎಸ್‍ಪಿ
    – ವೈದ್ಯಕೀಯ ವಿದ್ಯಾಭ್ಯಾಸ ನಡೆಸುತ್ತಿರುವ ಪತ್ನಿ

    ಕಾನ್ಪುರ: ಕೃಷ್ಣಾಷ್ಟಮಿಯಂದು ಪತ್ನಿ ನಾನ್ ವೆಜ್ ಪಿಜ್ಜಾ ಆರ್ಡರ್ ಮಾಡಿದ್ದಕ್ಕೆ ಶುರುವಾದ ಗಲಾಟೆ ಐಪಿಎಸ್ ಅಧಿಕಾರಿಯೊಬ್ಬರ ಆತ್ಮಹತ್ಯೆ ಯತ್ನದಲ್ಲಿ ಅಂತ್ಯವಾಗಿದೆ. ಉತ್ತರ ಪ್ರದೇಶದ ಈ ಐಪಿಎಸ್ ಅಧಿಕಾರಿ ಸದ್ಯ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಜೀವನ ಅಂತ್ಯಗೊಳಿಸುವ ದಾರಿಗಳ ಬಗ್ಗೆ ಈ ಅಧಿಕಾರಿ ತನ್ನ ಮೊಬೈಲ್ ಹಾಗೂ ಲ್ಯಾಪ್ ಟಾಪ್‍ನಲ್ಲಿ ಕೆಲ ದಿನಗಳಿಂದ ಗೂಗಲ್ ಸರ್ಚ್ ಮಾಡಿದ್ದರು ಎಂಬ ವಿಚಾರವೂ ಪೊಲೀಸ್ ತನಿಖೆ ವೇಳೆ ಬಯಲಾಗಿದೆ. 30 ವರ್ಷದ ಅಧಿಕಾರಿ ಸುರೇಂದ್ರ ಕುಮಾರ ದಾಸ್ ಅವರು ಕಳೆದ 1 ತಿಂಗಳ ಹಿಂದಷ್ಟೇ ಅಂದರೆ ಆಗಸ್ಟ್ 9ರಂದು ಕಾನ್ಪುರ ಪೂರ್ವ ವಿಭಾಗದ ಎಸ್‍ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

    ಆಗಿದ್ದೇನು?
    ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯ ಐಪಿಎಸ್ ಅಧಿಕಾರಿ ಸುರೇಂದ್ರ ದಾಸ್ ಕಳೆದ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲೇ ಕೃಷ್ಣಾಷ್ಟಮಿ ಆಚರಣೆ ಬಳಿಕ ತಮ್ಮ ಮೊಬೈಲ್ ಹಾಗೂ ಲ್ಯಾಪ್‍ಟಾಪಲ್ಲಿ ವಿಷವನ್ನು ತೆಗೆದುಕೊಳ್ಳುವುದು ಹೇಗೆ, ರೇಜರ್ ಬಳಸಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ ಇತ್ಯಾದಿ ವೀಡಿಯೋಗಳನ್ನು ನೋಡಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ಮುಂದುವರಿದಿದ್ದು, ಈ ವೇಳೆ ಈ ಮಹತ್ವದ ಅಂಶಗಳು ಬಯಲಾಗಿವೆ ಎಂದು ಕಾನ್ಪುರರ ಎಸ್‍ಎಸ್‍ಪಿ ಅನಂತ್ ದೇವ್ ಹೇಳಿದ್ದಾರೆ.

    ಸದ್ಯ ದಾಸ್ ಅವರನ್ನು ಉಳಿಸಿಕೊಳ್ಳಲು ವೈದ್ಯಾಧಿಕಾರಿಗಳ ತಂಡ ಶತಾಯಗತಾಯ ಪ್ರಯತ್ನ ನಡೆಯುತ್ತಿದ್ದು, ಮುಂಬೈನಿಂದ ವಿಶೇಷ ವೈದ್ಯಕೀಯ ತಂಡ ದೌಡಾಯಿಸಿದೆ. ಎಲ್ಲರೂ ದಾಸ್ ಉಳಿವಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಪೂರ್ವ ಕಾನ್ಪುರ ಎಸ್‍ಪಿಯಾಗಿ ಸುರೇಂದ್ರ ಕುಮಾರ್ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಬುಧವಾರ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ?
    ದಾಸ್ ಹಾಗೂ ಅವರ ಪತ್ನಿ ರವೀನಾ ಸಿಂಗ್ ಮಧ್ಯೆ ಆಹಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ ಅಂತ ದಾಸ್ ಮನೆಯ ಹತ್ತಿರದ ನಿವಾಸಿಯೊಬ್ಬರು ತಿಳಿಸಿದ್ದಾರೆ. ದಾಸ್ ಪತ್ನಿ ರವೀನಾ ಅವರು ಜಿಎಸ್‍ವಿಎಂ ಮೆಡಿಕಲ್ ಕಾಲೇಜಿನಲ್ಲಿ ಮಾಸ್ಟರ್ಸ್ ಇನ್ ಸರ್ಜರಿ ವ್ಯಾಸಂಗ ಮಾಡುತ್ತಿದ್ದಾರೆ.

    ಕೃಷ್ಣ ಜನ್ಮಾಷ್ಟಮಿಯಂದು ದಾಸ್ ಪತ್ನಿ ನಾನ್ ವೆಜ್ ಪಿಜ್ಜಾ ಆರ್ಡರ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ಅವರ ಸಂಬಂಧಿಕರು ಮನೆಗೆ ಬಂದು ಸಂಧಾನ ಮಾತುಕತೆ ನಡೆಸಿದ್ದರು. ಇದಾದ ಬಳಿಕ ದಾಸ್ ಖಿನ್ನತೆಗೆ ಜಾರಿದ್ದರು ಎಂದು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾಸ್ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ವೈದ್ಯರು ಹೇಳುತ್ತಿದ್ದಾರೆ. ಅಲ್ಲದೇ ವಿಷಕಾರಿ ಅಂಶ ಸೇವಿಸಿದ್ದರಿಂದ ಅದು ದಾಸ್ ಕಿಡ್ನಿ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಅಂತ ಆಸ್ಪತ್ರೆಯ ವೈದ್ಯಕೀಯ ಮುಖ್ಯ ಅಧೀಕ್ಷಕ ಡಾ. ರಾಜೇಶ್ ಅಗರ್‍ವಾಲ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫಸ್ಟ್ ಟೈಂ, ಗೂಗಲ್ ಹೋಮ್ ಪೇಜ್‍ನಲ್ಲಿ ಮೋದಿ ಭಾಷಣ ಲೈವ್ ಸ್ಟ್ರೀಮ್!

    ಫಸ್ಟ್ ಟೈಂ, ಗೂಗಲ್ ಹೋಮ್ ಪೇಜ್‍ನಲ್ಲಿ ಮೋದಿ ಭಾಷಣ ಲೈವ್ ಸ್ಟ್ರೀಮ್!

    ನವದೆಹಲಿ: ಆಗಸ್ಟ್ 15 ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಗೂಗಲ್ ನೇರ ಪ್ರಸಾರ ಮಾಡಲು ನಿರ್ಧಾರ ಮಾಡಿದೆ.

    ಡಿಜಿಟಲ್ ಯೋಜನೆಯ ಮೂಲಕ ವೀಕ್ಷಕರನ್ನು ಸೆಳೆಯಲು ಗೂಗಲ್ ಸಂಸ್ಥೆ ಪ್ರಸಾರ ಭಾರತಿ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಲೈವ್ ಸ್ಟ್ರೀಮ್ ಮಾಡಲು ಮುಂದಾಗಿದೆ. ಹೀಗಾಗಿ ತನ್ನ ಗೂಗಲ್ ಸರ್ಚ್‍ಪೇಜಿನ ಮುಖ್ಯ ಪುಟದಲ್ಲಿ ಮತ್ತು ಯುಟ್ಯೂಬ್‍ನಲ್ಲಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.

    ಈಗಾಗಲೇ ಮೋದಿ ಭಾಷಣ ಸಾಕಷ್ಟು ವೀಕ್ಷಕರನ್ನು ಸೆಳೆಯುವ ಸಾಧ್ಯತೆಯಿದೆ. ಹೀಗಾಗಿ ಮತ್ತಷ್ಟು ವೀಕ್ಷಕರನ್ನು ಸೆಳೆಯಲು ಗೂಗಲ್ ಹೋಮ್ ಪೇಜ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ನೇಮಕವಾದಾಗ ಗೂಗಲ್ ತನ್ನ ಹೋಮ್ ಪೇಜ್ ನಲ್ಲಿ ಮೊದಲ ಬಾರಿಗೆ ಕಾರ್ಯಕ್ರಮವನ್ನು ಲೈವ್ ಮಾಡಿತ್ತು.

    ಈ ಕುರಿತು ಪ್ರಸಾರ ಭಾರತಿಯ ಮುಖ್ಯಸ್ಥರಾದ ಶಶಿ ಶೇಖರ್ ವೆಂಪತಿಯವರು ಮಾತನಾಡಿ, ಡಿಜಿಟಲ್ ಕ್ಷೇತ್ರವನ್ನು ಉತ್ತೇಜನಗೊಳಿಸಲು ಗೂಗಲ್ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿದೆ. ಇದಲ್ಲದೇ ವೀಕ್ಷಕರು ಕೆಂಪುಕೋಟೆಯ ಎಲ್ಲಾ ಸಮಾರಂಭಗಳನ್ನು ನಮ್ಮ ದೂರದರ್ಶನದ ಮೂಲಕವು ಸಹ ವೀಕ್ಷಣೆ ಮಾಡಬಹುದಾಗಿದೆ. ಇದರ ಚಿತ್ರೀಕರಣಕ್ಕೆ ಸುಮಾರು 22 ಕ್ಕೂ ಹೆಚ್ಚಿನ ಹೆಚ್‍ಡಿ ಕ್ಯಾಮೆರಾಗಳನ್ನು ಈಗಾಗಲೇ ಸಿದ್ದಪಡಿಸಿಕೊಳ್ಳಲಾಗಿದೆ. ದೇಶದ 22 ಭಾಷೆಗಳಲ್ಲಿ ನೇರಪ್ರಸಾರಗೊಳ್ಳುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಂಡ್ರಾಯ್ಡ್ ಅಪ್ಲಿಕೇಷನ್‍ಗಳಲ್ಲಿ ಭದ್ರತೆ ನಿಯಮ ಉಲ್ಲಂಘಿಸಿದ್ದಕ್ಕೆ ದಾಖಲೆಯ ದಂಡ ತೆತ್ತ ಗೂಗಲ್!

    ಆಂಡ್ರಾಯ್ಡ್ ಅಪ್ಲಿಕೇಷನ್‍ಗಳಲ್ಲಿ ಭದ್ರತೆ ನಿಯಮ ಉಲ್ಲಂಘಿಸಿದ್ದಕ್ಕೆ ದಾಖಲೆಯ ದಂಡ ತೆತ್ತ ಗೂಗಲ್!

    ಲಂಡನ್: ಭದ್ರತಾ ನಿಯಮ ಉಲ್ಲಂಘಿಸಿದ ಗೂಗಲ್ ಕಂಪೆನಿಯ ವಿರುದ್ಧ ಯುರೋಪಿಯನ್ ಒಕ್ಕೂಟ ಸಂಸ್ಥೆಗಳು ದಾಖಲೆಯ ಪ್ರಮಾಣದಲ್ಲಿ ದಂಡ ವಿಧಿಸಿವೆ.

    ಈ ಕುರಿತಂತೆ ಇಂದು ಬೆಳಗ್ಗೆ 6 ಗಂಟೆಗೆ ಯುರೋಪಿಯನ್ ಯೂನಿಯನ್ ಕಮಿಷನರ್ ಗೂಗಲ್ ಕಂಪೆನಿಗೆ 4.3 ಬಿಲಿಯನ್ ಯುರೊ (3 ಲಕ್ಷ 42 ಸಾವಿರ ಕೋಟಿ) ದಂಡ ವಿಧಿಸಿದೆ. ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಮೊತ್ತದ ದಂಡ ಇದಾಗಿದೆ. ಇಂದು ಯುರೋಪಿಯನ್ ಒಕ್ಕೂಟ ಸಂಸ್ಥೆ ತನ್ನ ಟ್ವಿಟ್ಟರ್ ನಲ್ಲಿ ಗೂಗಲ್ ದಂಡ ವಿಧಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

    ಗೂಗಲ್ ತನ್ನ ಅಂಡ್ರಾಯ್ಡ್ ಹಾಗೂ ಸರ್ಚ್ ಇಂಜಿನ್ ಗಳಲ್ಲಿ ಭದ್ರತಾ ಲೋಪ ಎಸಗಿರುವುದಲ್ಲದೇ, ತನ್ನ ಅಂಡ್ರಾಯ್ಡ್ ಅಪ್ಲಿಕೇಶನ್‍ಗಳ ಮೂಲಕ ಬಳಕೆದಾರರ ಮಾಹಿತಿಯನ್ನು ಕಾಪಾಡುವಲ್ಲಿ ವಿಫಲವಾಗಿತ್ತು. ಅಲ್ಲದೇ ಮೂರನೇ ವ್ಯಕ್ತಿಗೆ ಗ್ರಾಹಕರ ಮಾಹಿತಿಗಳನ್ನು ರವಾನಿಸಿದ್ದರ ಕುರಿತು ತನಿಖೆಯಲ್ಲಿ ದೃಢಪಟ್ಟಿದೆ.

    ಯುರೋಪ್‍ನಲ್ಲಿ ನೋಕಿಯಾ, ಮೈಕ್ರೋಸಾಪ್ಟ್ ಹಾಗೂ ಒರ್ಯಾಕಲ್ ಕಂಪೆನಿಯ ಹಿಂದಿಕ್ಕುವ ಬರದಲ್ಲಿ ಗೂಗಲ್ ತನ್ನ ಆಂಡ್ರಾಯ್ಡ್ ಓಎಸ್ ಗಳಲ್ಲಿ ಭದ್ರತಾ ಲೋಪ ಎಸಗಿರುವುದು ಕಂಡು ಬಂದಿದೆ. ಅಲ್ಲದೇ ಯುರೋಪಿಯನ್ ದೇಶಗಳಲ್ಲಿ ಏಕಸ್ವಾಮ್ಯತೆ ಪಡೆಯುವ ದೃಷ್ಟಿಯಿಂದ ಈ ರೀತಿ ಮಾಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಭಾರೀ ದಂಡಕ್ಕೆ ಗೂಗಲ್ ಗುರಿಯಾಗಿದೆ.

    ಗೂಗಲ್ ಪ್ರತಿಯೊಬ್ಬರಿಗೂ ಆಂಡ್ರಾಯ್ಡ್ ನ ನೂತನ ಫೀಚರ್ ಗಳುಳ್ಳ ಸೌಲಭ್ಯಗಳನ್ನು ಕಡಿಮೆ ದರದಲ್ಲಿ ಪರಿಚಯಿಸಿದೆ. ಯುರೋಪಿಯನ್ ಒಕ್ಕೂಟ ನೀಡಿದ ತೀರ್ಪನ್ನು ಮತ್ತೊಮ್ಮೆ ಮೇಲ್ಮನವಿ ಸಲ್ಲಿಸುವುದಾಗಿ ಗೂಗಲ್ ವಕ್ತಾರರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

    ಈ ಮೊದಲೂ ಸಹ ಯೂರೋಪಿಯನ್ ಒಕ್ಕೂಟ ಸಂಸ್ಥೆಗಳು ಭದ್ರತಾ ವೈಫಲ್ಯದಿಂದ ವಿಶ್ವದ ಹಲವು ಪ್ರಮುಖ ಸಂಸ್ಥೆಗಳಿಂದ ದಂಡ ವಸೂಲಿ ಮಾಡಿತ್ತು. ಈ ಮೊದಲು ಗೂಗಲ್ ಸಂಸ್ಥೆಯೇ ಮೊದಲನೇ ಸ್ಥಾನದಲ್ಲಿತ್ತು. ಈಗ ಮತ್ತೊಮ್ಮೆ ಭಾರಿ ದಂಡಕ್ಕೆ ಗುರಿಯಾಗಿದೆ.

     

    ಯುರೋಪಿಯನ್ ಒಕ್ಕೂಟ ಸಂಸ್ಥೆಗಳು ದಂಡ ವಸೂಲಾತಿ ವರದಿಯ ಪ್ರಕಾರ 2018 ರಲ್ಲಿ ಗೂಗಲ್ 4.3 ಬಿಲಿಯನ್ ಯುರೊ, 2017 ರಲ್ಲಿ ಗೂಗಲ್ 2.4 ಬಿಲಿಯನ್ ಯುರೋ, 2009 ರಲ್ಲಿ ಇಂಟೆಲ್ 1.06 ಬಿಲಿಯನ್ ಯುರೊ, 2008 ರಲ್ಲಿ ಮೈಕ್ರೋಸಾಫ್ಟ್ 899 ಮಿಲಿಯನ್ ಯುರೊ, 2013 ರಲ್ಲಿ ಮೈಕ್ರೋಸಾಪ್ಟ್ 561 ಮಿಲಿಯನ್ ಯುರೋ, 2017 ರಲ್ಲಿ ಫೇಸ್‍ಬುಕ್ 110 ಮಿಲಿಯನ್ ಯುರೊ ದಂಡ ಪಾವತಿಸಿದ ಪ್ರಮುಖ ಸಂಸ್ಥೆಗಳಾಗಿವೆ.

  • ಹಿಮಾ ದಾಸ್ ಸಾಧನೆಗಿಂತ, ಜಾತಿಯನ್ನೇ ಹೆಚ್ಚಾಗಿ ಹುಡುಕಿದ ಜಾಲತಾಣಿಗರು!

    ಹಿಮಾ ದಾಸ್ ಸಾಧನೆಗಿಂತ, ಜಾತಿಯನ್ನೇ ಹೆಚ್ಚಾಗಿ ಹುಡುಕಿದ ಜಾಲತಾಣಿಗರು!

    ನವದೆಹಲಿ: ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಭಾರತಕ್ಕೆ ಮೊದಲನೇ ಬಾರಿ ಚಿನ್ನ ತಂದಕೊಟ್ಟ ಹಿಮಾದಾಸ್ ಅವರನ್ನು ಭಾರತೀಯರು ಅವರ  ಪ್ರತಿಭೆಯನ್ನು ಗುರುತಿಸುವುದಕ್ಕಿಂತ ಹೆಚ್ಚಾಗಿ ಅವರ ಜಾತಿಯನ್ನೇ  ಹುಡುಕಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿಜಯ ಪತಾಕೆಯನ್ನು ಹಾರಿಸಿದ ಹಿಮಾದಾಸ್ ರವರನ್ನು, ಜಾಲತಾಣಿಗರು ಹೆಚ್ಚಾಗಿ ಅವರ ಸಾಧನೆಯನ್ನು ಹುಡುಕದೇ, ಕೇವಲ ಅವರ  ಜಾತಿಯನ್ನೇ ಹೆಚ್ಚಾಗಿ ಹುಡುಕಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

    ಗೂಗಲ್ ನಲ್ಲಿ ಯಾವುದೇ ವಿಚಾರವನ್ನು ಟೈಪ್ ಮಾಡಿದರೆ ಮೊದಲು ಅತಿ ಹೆಚ್ಚು ಸರ್ಚ್ ಆದ 10 ಟಾಪಿಕ್‍ಗಳ ಪಟ್ಟಿಯನ್ನು ತೋರಿಸುತ್ತದೆ. ಹೀಗಾಗಿ ಗೂಗಲ್ ನಲ್ಲಿ ಹಿಮಾದಾಸ್ ಎಂದು ಹುಡುಕಲು ಪ್ರಯತ್ನಸಿದರೇ, ಮೊದಲನೇ ಸ್ಥಾನದಲ್ಲೇ ಹಿಮಾ ದಾಸ್ ಜಾತಿ ಸರ್ಚ್ ಅನ್ನು ತೋರಿಸುತ್ತದೆ. ನಂತರ ಹಿಮಾ ದಾಸ್ ಅಥ್ಲೆಟ್ ಎಂಬುದು ಎರಡನೇ ಸ್ಥಾನದಲ್ಲಿ ತೋರಿಸುತ್ತದೆ.

    ಹಿಮಾದಾಸ್ ರವರ ಜಾತಿ ಬಗ್ಗೆ ಮಾಹಿತಿ ಬರುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ವಿಷಯವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅನೇಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

    ಗುರುವಾರ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. 18 ವರ್ಷದ ಹಿಮಾ ದಾಸ್ 400 ಮೀಟರ್ ಓಟವನ್ನು 51.46 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಹಿಮಾ ದಾಸ್ ಅವರು ಮೂಲತಃ ಅಸ್ಸಾಂನ ನಾಗೋನ್ ಜಿಲ್ಲೆಯವರಾಗಿದ್ದು, ಕೃಷಿ ಹಿನ್ನೆಲೆ ಹೊಂದಿರುವ ಕುಟುಂಬದಲ್ಲಿ ಜನಿಸಿದ್ದಾರೆ. ಇದೀಗ ವಿಶ್ವದಾಖಲೆ ಮರೆದು ದೇಶದ ಮನೆಮಾತಾಗಿದ್ದಾರೆ.

    ಭಾರತೀಯರು ಕ್ರೀಡಾಪಟುಗಳ ಜಾತಿಯನ್ನು ಹುಡುಕುವುದು ಇದೇ ಮೊದಲಲ್ಲ. ಈ ಹಿಂದೆ ರಿಯೋ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪಿವಿ ಸಿಂಧೂ ರವರ ಜಾತಿಯನ್ನು ಸಹ ಹುಡುಕಿದ್ದರು.

    https://twitter.com/swatisingh1995/status/1018156648559341569