Tag: ಗೂಢಾಚಾರಿಕೆ

  • ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬೇಹುಗಾರಿಕೆಗೆ ಪ್ರಯತ್ನಿಸಿದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಇಮ್ರಾನ್ ಖಾನ್ ನಿವಾಸದಲ್ಲಿ ಉದ್ಯೋಗಿಯೊಬ್ಬ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಮಾಜಿ ಪ್ರಧಾನಿ ಮಲಗುವ ಕೋಣೆಯಲ್ಲಿ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಉದ್ಯೋಗಿಯೊಬ್ಬರಿಗೆ ಹಣ ನೀಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ತಿಳಿದ ಇನ್ನೊಬ್ಬ ಉದ್ಯೋಗಿ ಗೂಢಾಚಾರಿಕೆ ಬಗ್ಗೆ ಭದ್ರತಾ ತಂಡಕ್ಕೆ ತಿಳಿಸಿದ್ದಾನೆ. ಈ ಮೂಲಕ ಬೇಹುಗಾರಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜನ್ಸಿ ಲ್ಯಾಂಡಿಂಗ್

    ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್(ಪಿಟಿಐ) ಅಧ್ಯಕ್ಷನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವದಂತಿಯ ಮಧ್ಯೆಯೇ ಈ ಘಟನೆ ನಡೆದಿದೆ. ಇದಕ್ಕೂ ಮೊದಲು ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ನಗರದ ಬನಿ ಗಲಾದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ನೀಡಲಾಗಿತ್ತು. ಇದನ್ನೂ ಓದಿ: ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    ಘಟನೆ ಬಗ್ಗೆ ಮಾಹಿತಿ ನೀಡಿದ ಪಿಟಿಐ ನಾಯಕ ಶೆಹಬಾಜ್ ಗಿಲ್, ಮಾಜಿ ಪ್ರಧಾನಿ ಕೊಠಡಿ ಸ್ವಚ್ಛಗೊಳಿಸುವ ಉದ್ಯೋಗಿಯೊಬ್ಬ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಪ್ರಯತ್ನಿಸುತ್ತಿದ್ದ. ಅವನಿಗೆ ಈ ಕೃತ್ಯ ನಡೆಸಲು ಹಣ ನೀಡಲಾಗಿದೆ. ಆರೋಪಿಯನ್ನು ಬನಿ ಗಾಲಾ ಭದ್ರತಾ ತಂಡ ಬಂಧಿಸಿದ್ದು, ಫೆಡರಲ್ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

    Live Tv

  • ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ

    ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ

    ನವದೆಹಲಿ: ಪೆಗಾಸಸ್ ಸ್ಪೈವೇರ್ ಸಾಫ್ಟ್ ವೇರ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದೆ.

    ಅರ್ಜಿದಾರರ ಎಲ್ಲಾ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದ್ದು, ಪೆಗಾಸಸ್ ಬಳಸಿ ಯಾರನ್ನೂ ಟ್ರ್ಯಾಪ್ ಮಾಡಿಲ್ಲ. ಕೇವಲ ಊಹೆಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಲಾಗಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ಸಿಂಧು ಜೊತೆ ಐಸ್‍ಕ್ರೀಂ ಸವಿದ ಮೋದಿ

    ಈ ವಿಚಾರವಾಗಿ ಪರಿಣಿತರ ಸಮಿತಿಯೊಂದನ್ನು ಕೇಂದ್ರ ರಚನೆ ಮಾಡಲಿದೆ. ಆ ಸಮಿತಿ ಎಲ್ಲಾ ಆಯಾಮಗಳಲ್ಲಿ ಅಧ್ಯಯನ ನಡೆಸಲಿದೆ. ತನಿಖೆಯ ನಂತರ ಈ ಬಗ್ಗೆ ಮಾಹಿತಿ ನೀಡಲಿದೆ. ಪೆಗಾಸಸ್ ಬಗ್ಗೆ ಸುಳ್ಳು ವರದಿ ಮಾಡಿದವರ ಬಣ್ಣವನ್ನು ಈ ಸಮಿತಿ ಬಯಲು ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮುಂದೆ ಕೇಂದ್ರ ಸರ್ಕಾರದ ತನ್ನ ವಾದವನ್ನು ಮುಂದಿರಿಸಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನಕ್ಕೆ ಪೆಗಾಸಸ್ ಕಾರಣ: ಪರಮೇಶ್ವರ್

    ಕೇಂದ್ರ ಸರ್ಕಾರ ಪೆಗಾಸಸ್ ಸ್ಪೈವೇರ್ ಬಳಸಿ ಫೋನ್ ಟ್ರ್ಯಾಪ್ ಮಾಡಿದೆ ಎಂದು ಆರೋಪಿಸಿ ಎಡಿಟರ್ಸ್ ಗ್ರಿಡ್ ಜೊತೆ ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿ ಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ಮು.ನ್ಯಾ ಎನ್ ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ.