Tag: ಗೈರು

  • ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ: ನಿರ್ದೇಶಕ ನಾಗತಿಹಳ್ಳಿ ಸ್ಪಷ್ಟನೆ

    ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ: ನಿರ್ದೇಶಕ ನಾಗತಿಹಳ್ಳಿ ಸ್ಪಷ್ಟನೆ

    ಪ್ರಗತಿಪರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು.

    ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶಂಕರಪುರ ಭಾಗ ಜುಲೈ 16ರಂದು ‘ಶ್ರೀ ಗುರು ಪೂಜಾ ಉತ್ಸವ’ವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದ (Programme) ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ ಎಂದೂ, ಅಖಿಲ ಭಾರತ ಗ್ರಾಮ ವಿಕಾಸ ಸಂಯೋಜಕ ಶ್ರೀಗುರುರಾಜ್ ಅಂದಿನ ಸಮಾರಂಭದಲ್ಲಿ ಭಾಗಿಯಾಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿತ್ತು. ಈ ಆಹ್ವಾನ ಪತ್ರಿಕೆ ವೈರಲ್ ಆಗಿತ್ತು.

    ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ಬದಲಾಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದರೆ, ಇನ್ನೂ ಕೆಲವರು ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಜೊತೆ ಗುರುತಿಸಿಕೊಂಡು ತುಂಬಾ ದಿನವಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದರು. ನಾಗ್ತಿ ಮೇಷ್ಟ್ರ ಮೇಲೆ ನೆಗೆಟಿವ್ ಕಾಮೆಂಟ್ ಬಂದಿದ್ದೇ ಹೆಚ್ಚಿತ್ತು. ಹಾಗಾಗಿ ನಾಗತಿಹಳ್ಳಿಯವರು ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಸೋಷಿಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ‘ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ (Absent). ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ, ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ  ಮನಸ್ಸುಗಳಿಗೆ ಹೇಳುವ ಒಂದು ಮಾತು, ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

     

    ಮುಂದುವರೆದು, ‘ತಪ್ಪು ತಿಳಿಯಲು, ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು’ ಎಂದು ನಾಗತಿಹಳ್ಳಿ ಚಂದ್ರಶೇಖರ್ ಬರೆದುಕೊಂಡಿದ್ದಾರೆ.
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲ್ಯಾಣ ಕರ್ನಾಟಕ ಉತ್ಸವ- ರಾಯಚೂರಿನಲ್ಲಿ ಜನಪ್ರತಿನಿಧಿಗಳು ಗೈರು

    ಕಲ್ಯಾಣ ಕರ್ನಾಟಕ ಉತ್ಸವ- ರಾಯಚೂರಿನಲ್ಲಿ ಜನಪ್ರತಿನಿಧಿಗಳು ಗೈರು

    ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ ನಗರದ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ಜೀಪ್‍ನಲ್ಲಿ ಗೌರವ ವಂದನೆ ಸ್ವೀಕರಿಸಿದರು.

    ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಜನಪ್ರತಿನಿಧಿಗಳ ಗೈರು ಎದ್ದು ಕಾಣುತ್ತಿತ್ತು. ಜನಪ್ರತಿನಿಧಿಗಳಿಗಾಗಿ ಮೀಸಲಿಟ್ಟಿದ್ದ ಕುರ್ಚಿಗಳು ಖಾಲಿ ಇದ್ದವು. ನೂತನ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಸ್ಥಳೀಯ ಶಾಸಕ ಡಾ.ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ಸಂಸದ ಅಮರೇಶ್ವರ ನಾಯಕ್ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಇದನ್ನೂ ಓದಿ: ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

    ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್, ಜಿ.ಪಂ. ಸಿಇಓ ಶೇಖ್ ತನ್ವೀರ್ ಆಸೀಫ್ ಸೇರಿ ಇತರ ಅಧಿಕಾರಿಗಳು ಭಾಗಿಯಾಗಿದ್ದರು.

  • ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ 5 ಲಕ್ಷ ರೂ. ದಂಡ

    ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ 5 ಲಕ್ಷ ರೂ. ದಂಡ

    ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.

    ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಖಂಡ್ರೆ ಗೈರಾದ ಹಿನ್ನೆಲೆ ಹೈಕೋರ್ಟ್ ದಂಡ ವಿಧಿಸಿ ಗೈರು ಹಾಜರಿಯನ್ನು ಮನ್ನಿಸಿದೆ. ಜೊತೆಗೆ ದಂಡದ ಹಣ 5 ಲಕ್ಷ ರೂಗಳನ್ನು ಸಿಎಂ ಕೋವಿಡ್-19 ನಿಧಿಗೆ ನೀಡುವಂತೆ ಸೂಚಿಸಿದೆ. ಈಶ್ವರ್ ಖಂಡ್ರೆ ಅವರ ವಿರುದ್ಧ ಡಿ.ಕೆ ಸಿದ್ರಾಮ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

    ಸಿದ್ರಾಮ ಅವರು, ಈಶ್ವರ್ ಖಂಡ್ರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ. ಅವರು ತನ್ನ ಆಸ್ತಿ ವಿವರ ಬಹಿರಂಗಪಡಿಸಿಲ್ಲ ಎಂದು ಆರೋಪಿಸಿ ಶಾಸಕರಾಗಿ ಈಶ್ವರ್ ಖಂಡ್ರೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಈ ವಿಚಾರಣೆಗೆ ಹಾಜಾರಗಲು ಹೈಕೋರ್ಟ್ ಈಶ್ವರ್ ಖಂಡ್ರೆಯವರಿಗೆ ನೋಟಿಸ್ ನೀಡಿತ್ತು. ಆದರೆ ನೋಟಿಸ್ ನೀಡಿದ್ದರೂ ಈಶ್ವರ್ ಖಂಡ್ರೆ ವಿಚಾರಣೆಗೆ ಗೈರಾದ ಕಾರಣ ದಂಡ ವಿಧಿಸಿದೆ.

    ಇದಕ್ಕೆ ಪ್ರತಿಕ್ರಿಯೇ ನೀಡಿರುವ ಈಶ್ವರ್ ಖಂಡ್ರೆ, ತಮ್ಮ ಪಿಎಗೆ ಮರೆವಿನ ರೋಗವಿದ್ದುದರಿಂದ ವಿಚಾರಣೆಯ ದಿನಾಂಕ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿ ಕೋರ್ಟಿಗೆ ಮತ್ತೆ ಅರ್ಜಿ ಹಾಕಿದ್ದಾರೆ. ಆದ್ದರಿಂದ ನ್ಯಾ. ಕೃಷ್ಣ ಎಸ್.ದೀಕ್ಷಿತ್‍ರವರಿದ್ದ ಏಕಸದಸ್ಯ ಪೀಠ, 5. ಲಕ್ಷ ದಂಡ ವಿಧಿಸಿ ಗೈರನ್ನು ಮನ್ನಿಸಿದೆ.

  • ಶಿಕ್ಷಕರ ಕಳ್ಳಾಟ – ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು

    ಶಿಕ್ಷಕರ ಕಳ್ಳಾಟ – ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು

    ಚಾಮರಾಜನಗರ: ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಶಿಕ್ಷಕರ ಕಳ್ಳಾಟ ಹೆಚ್ಚಾಗಿದ್ದು, ಶಿಕ್ಷಕರು ಪದೆ ಪದೇ ಶಾಲೆಗೆ ಚಕ್ಕರ್ ಹಾಕುವ ಮೂಲಕ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಚಾಮರಾಜನಗರ ತಾಲೂಕು ಹೊಮ್ಮ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ಶಾಲೆಗೆ ಸರಿಯಾಗಿ ಬರದಿದ್ದಕ್ಕೆ ಗ್ರಾಮಸ್ಥರು ಹಾಗೂ ಪೋಷಕರು ಬೇಸತ್ತು, ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇವಲ ಮೂವರು ಶಿಕ್ಷಕರಿದ್ದು, ಇರುವ ಶಿಕ್ಷಕರೂ ಸಹ ಸರಿಯಾಗಿ ಶಾಲೆಗೆ ಬಾರದ್ದನ್ನು ಕಂಡು ಹಾಗೂ ಮಕ್ಕಳಿಗೆ ಏನೂ ಕಲಿಸದ್ದನ್ನು ಕಂಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರು ಶಾಲೆಗೆ ಬರುವುದಿಲ್ಲ ಹೀಗಿರುವಾಗ ಶಾಲೆ ಯಾಕೆ ತೆರಯಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ. ಮೂವರು ಶಿಕ್ಷಕರೂ ಸಹ ಪದೆ ಪದೇ ರಜೆ ಹಾಕುತ್ತಿದ್ದಾರೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

    ಶಾಲೆಯಲ್ಲಿ 1ರಿಂದ 7 ತರಗತಿ ವರೆಗೆ ಕೇವಲ 14 ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಶಿಕ್ಷಕರ ವರ್ತನೆಯೇ ಕಾರಣ. ಶಿಕ್ಷಕರು ಮಕ್ಕಳಿಗೆ ಏನೂ ಹೇಳಿಕೊಡುವುದಿಲ್ಲ. ಹೆಚ್ಚು ರಜೆ ಹಾಕುತ್ತಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಕ್ಷೇತ್ರ ಶಿಕ್ಷಣಾಧಿಕಾರಿಗಳ ಅನುಮತಿ ಇಲ್ಲದೆ ಶಿಕ್ಷಕರು 5 ದಿನ ನಿರಂತರವಾಗಿ ರಜೆ ಪಡೆದಿದ್ದಾರೆ. ಅಲ್ಲದೆ ಇತರ ಶಿಕ್ಷಕರಿಗೆ ಬುದ್ಧಿ ಹೇಳಬೇಕಿದ್ದ ಮುಖ್ಯ ಶಿಕ್ಷಕರು ಸಹ ಪತ್ನಿಗೆ ಹುಷಾರಿಲ್ಲ ಎಂದು ರಜೆ ಹಾಕುವುದು ಇಲ್ಲವೆ ಬೆಳಗ್ಗೆ ಶಾಲೆಗೆ ಆಗಮಿಸಿ ಮಧ್ಯಾಹ್ನವೇ ಮನೆಗೆ ತೆರಳುವುದನ್ನು ಮಾಡಿದ್ದಾರೆ. ಹಲವು ದಿನಗಳಿಂದ ಮೂವರು ಶಿಕ್ಷಕರು ಸಹ ಇದೇ ರೀತಿ ಮಾಡಿದ್ದು, ಇದರಿಂದ ಗ್ರಾಮಸ್ಥರು ಬೇಸತ್ತಿದ್ದಾರೆ. ಶಿಕ್ಷಕರು ಬಾರದೇ ಪಾಠ ಪ್ರವಚನ ಸರಿಯಾಗಿ ನಡೆಯುತ್ತಿಲ್ಲ. ಶಿಕ್ಷಕರ ಗೈರಿನಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಮೂವರು ಶಿಕ್ಷಕರು ಸಹ ಮಾತನಾಡಿಕೊಂಡು, ಪ್ರತಿ ದಿನ ಒಬ್ಬರೇ ಶಾಲೆಗೆ ಆಗಮಿಸುತ್ತಿದ್ದರು. ಉಳಿದ ಇಬ್ಬರು ಒಬ್ಬರು ರಜೆ ತೆಗೆದುಕೊಳ್ಳುತ್ತಿದ್ದರು. ಗುರುವಾರ ಇಬ್ಬರು ಶಿಕ್ಷಕರು ಬಂದಿರಲಿಲ್ಲ. ಬಂದಿದ್ದ ಒಬ್ಬ ಶಿಕ್ಷಕರು ಸಹ ಮಧ್ಯಾಹ್ನವೇ ಶಾಲೆಯ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಶಾಲೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಇನ್ನು ಕೆಲವು ದಿನ ಮೂವರು ಶಿಕ್ಷಕರು ಸಹ ಒಟ್ಟಿಗೆ ರಜೆ ಹಾಕುತ್ತಿದ್ದರು ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಶಿಕ್ಷಕರ ಧೋರಣೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಕಡೆಗೆ ಚಾಮರಾಜನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಪತಿ ಅವರು ಶಾಲೆಗೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ ಚಕ್ಕರ್ ಹಾಕುವ ಶಿಕ್ಷಕರನ್ನು ಕೆಲಸದಿಂದ ವಜಾಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಲಕ್ಷ್ಮಿಪತಿ ಭರವಸೆ ನೀಡಿದ್ದಾರೆ.

  • ರಾಜಕೀಯ ಹೈಡ್ರಾಮಕ್ಕೆ ತೆರೆ – 14 ತಿಂಗಳ ದೋಸ್ತಿ ಸರ್ಕಾರ ಪತನ

    ರಾಜಕೀಯ ಹೈಡ್ರಾಮಕ್ಕೆ ತೆರೆ – 14 ತಿಂಗಳ ದೋಸ್ತಿ ಸರ್ಕಾರ ಪತನ

    ಬೆಂಗಳೂರು: ಒಂದು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಈ ಮೂಲಕ 18 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಪೂರ್ಣವಿರಾಮ ಬಿದ್ದಿದೆ.

    ಇಂದಿನ ವಿಶ್ವಾಸ ಮತಯಾಚನೆಯ ವೇಳೆ ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದರು. ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್‍ಪಿಯ ಎನ್ ಮಹೇಶ್ ಗೈರಾಗಿದ್ದರು. ಇಂದು ದೋಸ್ತಿ ಪಕ್ಷದ ಒಟ್ಟು 99 ಶಾಸಕರು ಹಾಜರಾಗಿದ್ದರೆ ಬಿಜೆಪಿಯ 105 ಶಾಸಕರು ಹಾಜರಾಗಿದ್ದರು.

    ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಸಿಎಂ ಸಲ್ಲಿಸಿದ್ದ  ವಿಶ್ವಾಸ ಮತಯಾಚನೆ ಬಿದ್ದು ಹೋಗಿದೆ.

    ಸದನದಲ್ಲಿ ಮಾತನಾಡಿದ ಸಿಎಂ, ನಾಡಿನ ಜನ ನಮ್ಮನ್ನು ಕ್ಷಮಿಸಲಾರರು. ಹೀಗಾಗಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ತಡವಾಗಿದ್ದಕ್ಕೆ ಕ್ಷಮೆ ಕೋರುತ್ತೇನೆ ಎಂದರು. ಮನುಷ್ಯ ತಪ್ಪು ಮಾಡುವುದು ಸಹಜ. ಹೀಗಾಗಿ ಹೋದವರು ಮರಳಿ ಬರಬಹುದು ಎನ್ನುವ ಕಾರಣಕ್ಕೆ ವಿಳಂಬವಾಯಿತು ಎಂದು ತಿಳಿಸಿದರು.

    ಜೆಡಿಎಸ್‍ನಿಂದ ರಾಜೀನಾಮೆ ಕೊಟ್ಟಿದ್ದ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ಸದನಕ್ಕೆ ಬಂದಿರಲಿಲ್ಲ.

    ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್,  ವಿಜಯನಗರದ ಆನಂದ್ ಸಿಂಗ್  ಗೈರಾಗಿದ್ದರು.

    ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಗವಾಡದ ಶ್ರೀಮಂತ ಪಾಟೀಲ್, ಬಳ್ಳಾರಿಯ ನಾಗೇಂದ್ರ ಸದನಕ್ಕೆ ಬಂದಿರಲಿಲ್ಲ. ಪಕ್ಷೇತರ ಶಾಸಕರಾದ ಮುಳಬಾಗಿಲು ಶಾಸಕ ಎಚ್ ನಾಗೇಶ್ ಹಾಗೂ ರಾಣೆಬೆನ್ನೂರು ಶಾಸಕ ಆರ್ ಶಂಕರ್ ಕೂಡ ಸದನಕ್ಕೆ ಗೈರು ಹಾಜರಿ ಹಾಕಿದ್ದರು.

  • ವಿಶ್ವಾಸಮತಯಾಚನೆಗೆ 20 ಶಾಸಕರು ಗೈರು

    ವಿಶ್ವಾಸಮತಯಾಚನೆಗೆ 20 ಶಾಸಕರು ಗೈರು

    ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಚರ್ಚೆ ಆರಂಭಗೊಂಡಿದ್ದು ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದಾರೆ.

    ಇಂದು ಸದನದಲ್ಲಿ ನಡೆಯುತ್ತಿರುವ ವಿಶ್ವಾಸ ಮತಯಾಚನೆ ಚರ್ಚೆಗೆ ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್‍ಪಿಯ ಎನ್ ಮಹೇಶ್ ಗೈರಾಗಿದ್ದಾರೆ.

    ಜೆಡಿಎಸ್‍ನಿಂದ ರಾಜೀನಾಮೆ ಕೊಟ್ಟಿದ್ದ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಾಹಾಲಕ್ಷ್ಮಿ ಲೇ ಔಟ್ ಶಾಸಕ ಗೊಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ಸದನಕ್ಕೆ ಬಂದಿಲ್ಲ.

    ಇತ್ತ ರಾಜೀನಾಮೆ ಕೊಟ್ಟ ಕೈ ಶಾಸಕರು ಕೂಡ ಸದನಕ್ಕೆ ಎಂಟ್ರಿ ಕೊಟ್ಟಿಲ್ಲ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ ಪಾಟೀಲ್, ಬಳ್ಳಾರಿಯ ನಾಗೇಂದ್ರ ವಿಶ್ವಾಸಮತಯಾಚನೆ ಬಾರದೆ ಕೈ ಕೊಟ್ಟಿದ್ದಾರೆ.

    ಪಕ್ಷೇತರ ಶಾಸಕರಾದ ಮುಳಬಾಗಿಲು ಶಾಸಕ ಎಚ್ ನಾಗೇಶ್ ಹಾಗೂ ರಾಣೆಬೆನ್ನೂರು ಶಾಸಕ ಆರ್ ಶಂಕರ್ ಕೂಡ ಸದನಕ್ಕೆ ಗೈರಾಗಿದ್ದಾರೆ.

  • ಅನಾರೋಗ್ಯದ ನೆಪವೊಡ್ಡಿ ಸದನಕ್ಕೆ ಗೈರಾಗಲು ನಾಗೇಂದ್ರ ನಿರ್ಧಾರ

    ಅನಾರೋಗ್ಯದ ನೆಪವೊಡ್ಡಿ ಸದನಕ್ಕೆ ಗೈರಾಗಲು ನಾಗೇಂದ್ರ ನಿರ್ಧಾರ

     ಬಳ್ಳಾರಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರು ವಿಶ್ವಾಸ ಮತಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗಲು ನಿರ್ಧರಿಸಿದ್ದಾರೆ.

    ಹೀಗಾಗಿ ದೋಸ್ತಿ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಕಾದಿದ್ದು, ಕಾಂಗ್ರೆಸ್‍ಗೆ ಕೈ ಕೊಡಲು ನಾಗೇಂದ್ರ ಅವರು ಸಜ್ಜಾಗಿದ್ದಾರಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಆರೋಗ್ಯದ ನೆಪವೊಡ್ಡಿ ಗೈರು ಹಾಜರಾಗಲು ನಾಗೇಂದ್ರ ನಿರ್ಧರಿಸಿದ್ದಾರೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಹೃದಯಾಘಾತದಿಂದ ನಾಗೇಂದ್ರ ಅವರು ಭಾನುವಾರ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹೃದಯಾಘಾತದ ನಂತರ ವೈದ್ಯರು ನಾಗೇಂದ್ರ ಅವರಿಗೆ ಸ್ಟಂಟ್ ಅಳವಡಿಸಿದ್ದು, ವೈದ್ಯರ ಸೂಚನೆ ಮೇರೆಗೆ ರೆಸ್ಟ್ ತಗೆದುಕೊಂಡು ಸದನಕ್ಕೆ ಗೈರು ಹಾಜರಾಗಲು ನಾಗೇಂದ್ರ ಅವರು ನಿರ್ಧರಿಸಿದ್ದಾರೆ.

    ಭಾನುವಾರವಷ್ಟೇ ನಾಗೇಂದ್ರರನ್ನ ಕೈ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ನಾಗೇಂದ್ರ ಗೈರು ಹಾಜರಿಯ ಮುನ್ಸೂಚನೆ ಅರಿತೇ ಕೈ ನಾಯಕರು ಭೇಟಿ ಮಾಡಿದ್ದರು ಎಂಬ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಈ ಹಿಂದೆ ಅತೃಪ್ತ ಶಾಸಕರ ಗುಂಪಿನಲ್ಲಿ ನಾಗೇಂದ್ರ ಅವರು ಕೂಡ ಸೇರಿದ್ದರು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯರ ಮನವೊಲಿಕೆಯಿಂದ ರಾಜೀನಾಮೆ ನಿರ್ಧಾರದಿಂದ ಅವರು ಹಿಂದೆ ಸರಿದಿದ್ದರು ಎನ್ನಲಾಗಿದೆ.

    ಆದರೆ ಆಂಧ್ರಪ್ರದೇಶ ಸರ್ಕಾರದ ಸಚಿವರಾಗಿರುವ ಸಹೋದರ ಜಯರಾಮ್‍ರಿಂದ ಮನವೋಲಿಸಿದ್ದರು. ಜೊತೆಗೆ ಸದನಕ್ಕೆ ಗೈರು ಹಾಜರಿ ಆಗಿ ಬಿಜೆಪಿಗೆ ಬೆಂಬಲಿಸುವಂತೆ ಬಿಎಸ್ ಯಡಿಯೂರಪ್ಪರಿಂದ ಕೂಡ ಮನವಿ ಬಂದಿತ್ತು. ಬಿಜೆಪಿಗೆ ಬೆಂಬಲಿಸುವಂತೆ ಮನವೊಲಿಕೆ ಮಾಡಿದ ಹಿನ್ನೆಲೆಯಲ್ಲಿ ಸದನಕ್ಕೆ ಗೈರಾಗುವ ನಿರ್ಧಾರಕ್ಕೆ ಬಂದು ಶಾಸಕ ನಾಗೇಂದ್ರ ಕಾಂಗ್ರೆಸ್ಸಿಗೆ ಉಲ್ಟಾ ಹೊಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ.

  • ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ – ಚಲನಚಿತ್ರಕ್ಕೆ ಶಾಸಕ ಹಾಜರ್

    ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ – ಚಲನಚಿತ್ರಕ್ಕೆ ಶಾಸಕ ಹಾಜರ್

    ವಿಜಯಪುರ: ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ ಹಾಕಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಲನಚಿತ್ರ ವೀಕ್ಷಣೆ ಮಾಡಿದ್ದಾರೆ.

    ಬಸನಗೌಡ ಪಾಟೀಲ್ ಯತ್ನಾಳ್ ‘ಉರಿ’ ಸಿನಿಮಾವನ್ನು ವಿಜಯಪುರದ ಅಪ್ಸರಾ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಾವರ್ಜನಿಕರಿಗೂ ಉಚಿತವಾಗಿ ಸಿನಿಮಾ ವೀಕ್ಷಣೆಗೆ ಬಸನಗೌಡ ಪಾಟೀಲ್ ಅವಕಾಶ ಒದಗಿಸಿದ್ದು, ಸಾರ್ವಜನಿಕರೊಂದಿಗೆ ಕುಳಿತು ಚಿತ್ರವನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ: ಅಧಿವೇಶನದ ಮೊದಲ ದಿನವೇ 12 ಶಾಸಕರು ಗೈರು

    ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಯತ್ನಾಳ್, ಇದೊಂದು ದೇಶಾಭಿಮಾನದ ಚಿತ್ರವಾಗಿದೆ. ಇಂದು ಸಿನಿಮಾದ ಕೊನೆಯ ಪ್ರದರ್ಶನವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಚಿತ ವೀಕ್ಷಣೆಗೆ ನಾವು ಅವಕಾಶ ಕಲ್ಪಿಸಿದ್ದೆವು. ನಮಗಾಗಿ ದೇಶದ ಗಡಿಯಲ್ಲಿ ಪ್ರತಿನಿತ್ಯ ಹೋರಾಡುವ ಸೈನಿಕರ ಕಾರ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.

    ಇನ್ನೂ ಇವತ್ತಿನ ಅಧಿವೇಶನ ಅಷ್ಟೊಂದು ಪ್ರಾಮುಖ್ಯತೆ ಹೊಂದಿಲ್ಲ. ಗುರುವಾರದ್ದು ಮುಖ್ಯವಾಗಿರುತ್ತದೆ. ಆದ್ದರಿಂದ ಗುರುವಾರ ನಾನು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು ನನ್ನ ಹಾಗೆ ಯಾವುದೋ ಒಳ್ಳೆಯ ಕೆಲಸದಲ್ಲಿರಬೇಕು. ನಮ್ಮಲ್ಲಿ ಯಾವುದೇ ಅತೃಪ್ತಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಯತ್ನಾಳ್ ಟಾಂಗ್ ಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ, ನಾಳೆ ಹಾಜರಾಗುತ್ತೇನೆ: ಶಾಸಕಿ ಸೌಮ್ಯಾ ರೆಡ್ಡಿ

    ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ, ನಾಳೆ ಹಾಜರಾಗುತ್ತೇನೆ: ಶಾಸಕಿ ಸೌಮ್ಯಾ ರೆಡ್ಡಿ

    ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮೊದಲ ದಿನ ಬಜೆಟ್ ಅಧಿವೇಶನಕ್ಕೆ ಗೈರಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

    ಗೈರು ಹಾಜರಿ ಬಗ್ಗೆ ಪಬ್ಲಿಕ್ ಟಿವಿಗೆ ದೂರವಾಣಿ ಮೂಲಕ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ ಅವರು, ಪಕ್ಷದಿಂದ ಸದನಕ್ಕೆ ಹಾಜರು ಆಗವಂತೆ ವಿಪ್ ಜಾರಿ ಮಾಡಿದ್ದಾರೆ. ಆದರೆ ಈ ಬಗ್ಗೆ ನಾನು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿ ಗೈರಾಗುವ ಬಗ್ಗೆ ಪೂರ್ವಾನುಮತಿ ಪಡೆದಿದ್ದೇನೆ ಎಂದು ತಿಳಿಸಿದರು.

    ಸದನದ ಮೊದಲ ದಿನವಾಗಿದ್ದು, ನನಗೆ ಅನಾರೋಗ್ಯದ ಸಮಸ್ಯೆ ಇದೆ. ಒಂದು ದಿನ ಬರಲಿಲ್ಲ ಎಂದರೆ ಅಸಮಾಧಾನ ಎಂದು ಪರಿಗಣಿಸಬಾರದು, ಆದರೆ ಪಕ್ಷದ ವಲಯದಲ್ಲಿ ಈ ಬಗ್ಗೆ ನಾಯಕರಿಗೆ ಸ್ಪಷ್ಟವಾಗಿ ಮಾಹಿತಿ ನೀಡಿದ್ದೇನೆ. ನಾಳೆ ಸದನಕ್ಕೆ ಆಗಮಿಸುತ್ತೇನೆ ಎಂದರು. ಇದೇ ವೇಳೆ ಅಸಮಾಧಾನದ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಮೊದಲು ಸಚಿವ ಸ್ಥಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಆದರೆ ಒಂದು ಕುಟುಂಬ ಎಂದರೆ ಇದೆಲ್ಲ ಸಾಮಾನ್ಯ. ಸದ್ಯ ಅಂತಹ ಯಾವುದೇ ಅಸಮಾಧಾನ ಇಲ್ಲ, ಎಲ್ಲರೂ ಒಟ್ಟಾಗಿ ನಡೆಯುತ್ತೇವೆ ಎಂದರು.

    ಇತ್ತ ಸದನಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಪಕ್ಷದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಸದನಕ್ಕೆ ಬರುವುದು ಸ್ವಲ್ಪ ತಡ ಆಯಿತು ಅಷ್ಟೇ. ಆದರೆ ಬಿಜೆಪಿ ಶಾಸಕರು ಸದನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸಿದ್ದು ಸರಿ ಅಲ್ಲ. ಅವರ ಭಾಷಣ ಮುಗಿದ ಮೇಲೆ ಮಾತನಾಡಲು ವಿಪಕ್ಷಕ್ಕೆ ಅವಕಾಶ ಇರುತ್ತದೆ. ನಾವು ವಿರೋಧ ಪಕ್ಷದಲ್ಲಿ ಇದ್ದ ವೇಳೆ ಇಂತಹ ವರ್ತನೆ ತೋರಿರಲಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದಲ ದಿನದ ಅಧಿವೇಶನಕ್ಕೆ ತಂದೆ, ಮಗಳು ಚಕ್ಕರ್!

    ಮೊದಲ ದಿನದ ಅಧಿವೇಶನಕ್ಕೆ ತಂದೆ, ಮಗಳು ಚಕ್ಕರ್!

    ಬೆಂಗಳೂರು: ಐವರು ಅತೃಪ್ತ ಶಾಸಕರು ಸದನಕ್ಕೆ ಗೈರು ಹಾಜರಿ ಹಾಕುವ ಜೊತೆಯಲ್ಲಿ ಈಗ ತಂದೆ ಮತ್ತು ಮಗಳು ಗೈರಾಗಿದ್ದು ಕಾಂಗ್ರೆಸ್ ನಾಯಕರು ಆತಂಕಕ್ಕೆ ಕಾರಣವಾಗಿದೆ. ಬಿಟಿಎಂ ಶಾಸಕ, ಹಿರಿಯ ಕೈ ನಾಯಕ ರಾಮಲಿಂಗಾ ರೆಡ್ಡಿ ಜೊತೆಗೆ ಅವರ ಪುತ್ರಿ ಜಯನಗರಾದ ಶಾಸಕಿ ಸೌಮ್ಯಾ ರೆಡ್ಡಿ ಮೊದಲ ದಿನವೇ ಅಧಿವೇಶನಕ್ಕೆ ಚಕ್ಕರ್ ಹಾಕಿದ್ದಾರೆ.

    ಬೆಂಗಳೂರಿನಲ್ಲೇ ತಂದೆ, ಮಗಳು ಇದ್ದರು ಕೂಡ ಸದನಕ್ಕೆ ಗೈರಾಗಲು ಕಾರಣವೇನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಸದನಕ್ಕೆ ಗೈರಾಗುವ ಮೂಲಕ ಪಕ್ಷದ ನಾಯಕರ ವಿರುದ್ಧ ಇವರಿಬ್ಬರು ನೇರವಾಗಿಯೇ ಅಸಮಾಧಾನ ಹೊರ ಹಾಕಿದ್ದರಾ ಎನ್ನುವ ಪ್ರಶ್ನೆ ಎದ್ದಿದೆ.

    ಸಮ್ಮಿಶ್ರ ಸರ್ಕಾರದ ರಚನೆ ವೇಳೆ ಅನುಭವಿ ಹಾಗೂ ಹಿರಿಯ ನಾಯಕರಾಗಿದ್ದ ರಾಮಲಿಂಗಾ ರೆಡ್ಡಿ ಅವರನ್ನು ದೂರವಿಟ್ಟಿದ್ದರು. ಈ ಕುರಿತು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆ ಆಗಿದ್ದ ಸೌಮ್ಯ ರೆಡ್ಡಿ ಅವರು ನಾಯಕರ ವಿರುದ್ಧ ಬಹಿರಂಗವಾಗಿಯೇ ಆಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಇಬ್ಬರನ್ನು ಅಸಮಾಧಾನ ಪಡಿಸಲು ಮುಂದಾಗಿದ್ದ ಹೈಕಮಾಂಡ್ ಸೌಮ್ಯ ರೆಡ್ಡಿ ಅವರಿಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿತ್ತು. ಇದಕ್ಕೂ ಮುನ್ನ ಅಂದರೆ ಸಂಪುಟ ವಿಸ್ತರಣೆ ವೇಳೆ ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿತ್ತು. ಆದರೆ ಇದನ್ನು ಸೌಮ್ಯ ರೆಡ್ಡಿ ಅವರು ತಿರಸ್ಕರಿಸಿದ್ದರು.

    ನನಗೆ ನನ್ನ ಕ್ಷೇತ್ರದ ಜನರಿಗೆ ಕೆಲ್ಸ ಮಾಡಿ ಅವರ ಋಣವನ್ನು ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಆದ್ರೂ ನನ್ನ ತಂದೆಯವರಿಗೆ ಸಚಿವ ಸ್ಥಾನ ಸಿಗದಿರುವುದು ಬೆಸರದ ಸಂಗತಿ. ಕೇವಲ ಒಂದು ಶಾಸಕರಿಂದಾಗಿ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv