Tag: ಗೋದಾಮು

  • ವಿಜಯಪುರದಲ್ಲಿ ದುರಂತ – ಮೆಕ್ಕೆಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂವರು ಕಾರ್ಮಿಕರು ಸಾವು

    ವಿಜಯಪುರದಲ್ಲಿ ದುರಂತ – ಮೆಕ್ಕೆಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂವರು ಕಾರ್ಮಿಕರು ಸಾವು

    – ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

    ವಿಜಯಪುರ: ಇಲ್ಲಿನ ರಾಜಗುರು ಗೋದಾಮಿನ (Warehouse) ಸಂಸ್ಕರಣಾ ಘಟಕದಲ್ಲಿ ಮೆಕ್ಕೆ ಜೋಳ (Maize) ಮೂಟೆ ತುಂಬುವ ಯಂತ್ರ ಕುಸಿದು, ಮೂವರು ಮೂವರು ಕಾರ್ಮಿಕರು (Workers) ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್‌ನ ಗೋದಾಮಿನಲ್ಲಿ ಈ ದುರಂತ ಸಂಭವಿಸಿದೆ. ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ(29), ಶಂಭು ಮುಖಿಯಾ(26) ಮೃತ ಕಾರ್ಮಿಕರು. ಇದನ್ನೂ ಓದಿ: ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಅವಶೇಷಗಳ ಅಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿದ್ದು, ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಎಸ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಆ ಕಾರ್ಮಿಕರು ಇದೇ ಇಂಡಸ್ಟ್ರೀಜ್‍ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ ದುರಂತ ಅಂತ್ಯ – ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ, ಅಂತ್ಯಕ್ರಿಯೆಗೆ ಸಿದ್ಧತೆ

    ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ರಾತ್ರಿಯಿಂದಲೂ 4 ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳದಲ್ಲಿ ಕಾರ್ಮಿಕರು, ಅವರ ಸಂಬಂಧಿಕರು ಗುಂಪುಗೂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಸ್ಥಳದಲ್ಲೇ ಬೀಡುಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೈದ್ಯರ ತಂಡವೂ ಕಾರ್ಮಿಕರಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

  • ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಆನೇಕಲ್ (ಬೆಂಗಳೂರು): ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತ (Fire Cracker Tragedy In Attibele) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್‍ಗೆ ಮಾತ್ರ ಪರವಾನಿಗೆ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡ್ತಿದ್ದ. ಪ್ರೊಸೆಸಿಂಗ್ ಯೂನಿಟ್‍ಗೆ 2028ವರೆಗೆ ಪರವಾನಿಗೆ ಇದ್ದು, ಗೋದಾಮಿಗೆ ಅನುಮತಿ ಇರಲಿಲ್ಲ.

    ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಿದ್ದ ಕುರಿತು ಗೋದಾಮಿನ ಮಾಲೀಕರ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮಾಲೀಕ ರಾಮಸ್ವಾಮಿ ರೆಡ್ಡಿಯನ್ನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. 2018 ರಲ್ಲಿ ಪಟಾಕಿ ಅಂಗಡಿಕಷ್ಟೇ ಅನುಮತಿ ಪಡೆದಿದ್ದಾರೆ. ಗೋದಾಮಿಗೆ ಅನುಮತಿ ನೀಡಿಲ್ಲ ಎಂದು ರಾಮಸ್ವಾಮಿ ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.

    ಒಟ್ಟಿನಲ್ಲಿ ಪಟಾಕಿ ಅಂಗಡಿ ಅನುಮತಿ ಪಡೆದು ಗೋಡೌನ್ ಮಾಡಿಕೊಂಡಿದ್ದ ಆರೋಪಿ ರಾಮಸ್ವಾಮಿ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ

    ಪಟಾಕಿ ದುರಂತದಲ್ಲಿ ತಮಿಳುನಡು ಮೂಲದ ಗಿರಿ ಬಿನ್ ವೇಡಿಯಪ್ಪನ್, ಸಚೀನ್ ಬಿನ್ ಲೇಟ್ ವೇಡಿಯಪ್ಪನ್, ವಿಜಯರಾಘವನ್, ವಿಳಂಬರತಿ ಬಿನ್ ಸೆಂದಿಲ್, ಆಕಾಶ ಬಿನ್ ರಾಜಾ, ವೆಡಿಯಪ್ಪನ್, ಆದಿಕೇಶವ ಬಿನ್ ಪೆರಿಯಾಸ್ವಾಮಿ, ಪ್ರಕಾಶ್ ಬಿನ್ ರಾಮು, ವಸಂತರಾಜು ಬಿನ್ ಗೋವಿಂದ ರಾಜು, ಅಬ್ಬಾಸ್ ಬಿಸ್ ಶಂಕರ್, ಪ್ರಭಾಕರನ್ ಬಿನ್ ಗೋಪಿನಾಥ್, ನಿತೀಶ್ ಬಿನ್ ಮೇಘನಾಥ್, ಸಂತೋಷ್ ಬಿನ್ ಕುಮಾರ್ ಮೃತಪಟ್ಟಿದ್ದು, ಇನ್ನೊಬ್ಬನ ಹೆಸರು ಗುರುತು ಪತ್ತೆಯಾಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

    ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

    ನವದೆಹಲಿ: ಗೋದಾಮು ಜಲಾವೃತಗೊಂಡ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೆ ಸಿಲುಕಿದ್ದವರಿಗೆ ಕೊಡುವ ರೇಷನ್ ಕಿಟ್‍ಗಳು (Ration Kit) ನೀರುಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ.

    ಹೌದು. ದೆಹಲಿಯಲ್ಲಿ ಮುಂಗಾರು ಮಳೆಯ (Mansoon Rain) ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ದೆಹಲಿಯ ಹಲವು ಭಾಗಗಳು ಜಲಾವೃತಗೊಂಡಿವೆ. ಹೀಗಾಗಿ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಪರಿಹಾರ ಕಿಟ್‍ಗಳನ್ನು ಸಿದ್ಧಪಡಿಸಿದ್ದರು. ಅಲ್ಲದೆ ಈ ಕಿಟ್‍ಗಳನ್ನು ಸರ್ಕಾರಿ ಸ್ವಾಮ್ಯದ ಗೋದಾಮಿನಲ್ಲಿ ಇರಿಸಲಾಗಿತ್ತು. ಆದರೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈ ಗೋದಾಮು ಇದೀಗ ಜಲಾವೃತಗೊಂಡಿದ್ದು, ಕಿಟ್‍ಗಳು ನಾಶವಾಗಿವೆ.

    ಪ್ರವಾಹ ಸಂತ್ರಸ್ತರಿಗಾಗಿ ತಯಾರಿಸಿದ್ದ ಕಿಟ್ ಗಳನ್ನು ಜಂಗ್ಪುರದ ವಾರ್ಡ್ ಸಮಖ್ಯೆ 142 ರಲ್ಲಿ ಸಂಗ್ರಹಿಸಡಲಾಗಿತ್ತು. ಸದ್ಯ ಕಿಟ್ ಗಳು ನೀರು ಪಾಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ವಿಚಿತ್ರವಾದ್ರೂ ಸತ್ಯ- ದೇವಸ್ಥಾನದ ಹೊರಗಿದ್ದ ಚಪ್ಪಲಿ ಕದ್ದವರ ವಿರುದ್ಧ FIR

    ಮಳೆಯಿಂದ ತತ್ತರಿಸಿದ ದೆಹಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಇದು ಒಬ್ಬರು ಮತ್ತೊಬ್ಬರನ್ನು ದೂಷಿಸಿ ಮಾತನಾಡುವ ಸಮಯವಲ್ಲ. ಎಲ್ಲಾ ಪ್ರವಾಹ ಪೀಡಿತ ರಾಜ್ಯಗಳ ಸರ್ಕಾರಗಳು ಪರಿಹಾರ ನೀಡಲು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಿದೆ ಎಂದು ಕರೆ ಕೊಟ್ಟರು.

    ಅಲ್ಲದೆ ಜುಲೈ 8 ಮತ್ತು 9 ರಂದು ದೆಹಲಿಯಲ್ಲಿ 153 ಮಿ.ಮೀ ಮಳೆಯಾಗಿದೆ. ಈ ಮೂಲಕ ದಶಕಗಳ ದಾಖಲೆಯನ್ನು ಮುರಿದಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ 206 ಮೀಟರ್ ದಾಟಿದ ನಂತರ ನದಿ ಪಾತ್ರದ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಕಿ ಅವಘಡ – ಹೊತ್ತಿ ಉರಿದ ಫೈಬರ್ ವಸ್ತುಗಳ ಗೋದಾಮು

    ಬೆಂಕಿ ಅವಘಡ – ಹೊತ್ತಿ ಉರಿದ ಫೈಬರ್ ವಸ್ತುಗಳ ಗೋದಾಮು

    ಚಿಕ್ಕಬಳ್ಳಾಪುರ: ಫೈಬರ್ ವಸ್ತುಗಳ ಸಂಗ್ರಹಣೆ ಮಾಡಿದ್ದ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಪಾರಿವಾಳಗುಟ್ಟದ ಬಳಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಫೈಬರ್ ವಸ್ತುಗಳನ್ನು ಸಂಗ್ರಹ ಮಾಡಲಾಗಿದ್ದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಹಬ್ಬಿ, ದಟ್ಟ ಹೊಗೆ ಆವರಿಸಿದೆ. ಆಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

    ವಸ್ತು ಸಂಗ್ರಹಾಲಯದ ನಿರ್ಮಾಣಕ್ಕೆ ಬಳಸುವ ಫೈಬರ್ ವಸ್ತುಗಳ ಗೋದಾಮು ಎಂದು ತಿಳಿದು ಬಂದಿದೆ. ಈ ಗೋದಾಮು ಯಾರಿಗೆ ಸೇರಿದ್ದು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ದೇವನಹಳ್ಳಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ತಂಪು ಪಾನೀಯ ಗೋದಾಮಿಗೆ ಬೆಂಕಿ- ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

    ತಂಪು ಪಾನೀಯ ಗೋದಾಮಿಗೆ ಬೆಂಕಿ- ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

    ಶಿವಮೊಗ್ಗ: ತಂಪು ಪಾನೀಯ ಹಾಗೂ ಕುರ್ ಕುರೆ ಸೇರಿದಂತೆ ಇತರೆ ರೆಡಿಪುಡ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

    ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಹಿಂಭಾಗದ ಗೋದಾಮಿನಲ್ಲಿ ಬೆಳಗಿನಜಾವ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ದುರ್ವೇಶ್ ಅಸೋಸಿಯೇಷನ್ ರಫೀಕ್ ಮಾಲೀಕತ್ವದ ಸಗಟು ವ್ಯಾಪಾರ ಮಳಿಗೆಯಾಗಿದ್ದು, ದುರ್ವೇಶ್ ಅಸೋಸಿಯೇಷನ್ ಮೂಲಕ ಇಡೀ ಜಿಲ್ಲೆಗೆ ತಂಪು ಪಾನೀಯ ಹಾಗೂ ಕುರುಕಲು ತಿಂಡಿಯನ್ನು ವಿವಿಧ ಅಂಗಡಿಗಳಿಗೆ ವಿತರಣೆ ಮಾಡಲಾಗುತ್ತದೆ.

    ಬೆಳಗಿನ ಜಾವ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಕ್ಕದ ಮನೆಯವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಗೋದಾಮಿನಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿ ಆಗಿರುವುದರಿಂದ ಸಂಪೂರ್ಣ ಹಾನಿಯಾಗಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಗೋದಾಮಿನಲ್ಲಿ ಬಳಸಿದ್ದ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಕಾಂಡೋಮ್ ವಶ

    ಗೋದಾಮಿನಲ್ಲಿ ಬಳಸಿದ್ದ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಕಾಂಡೋಮ್ ವಶ

    – ಮರು ತಯಾರಿಕೆಗಾಗಿ ದಿನಗೂಲಿ ಕಾರ್ಮಿಕರ ನೇಮಕ
    – ಮಾಹಿತಿ ಮೇರೆಗೆ ದಾಳಿ, ಮಾಲಕಿ ಅರೆಸ್ಟ್

    ಹನೋಯಿ: ಉಪಯೋಗಿಸಿ ಬಿಸಾಡಿದ್ದ ಬರೋಬ್ಬರಿ ಮೂರು ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಮರುಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ವಿಯೆಟ್ನಾ ಪೊಲೀಸರು ದಾಳಿ ಮಾಡಿದ್ದಾರೆ. ಅಲ್ಲದೇ ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಮರುಬಳಕೆ ಮಾಡಲಾಗುತ್ತಿದ್ದ 3,24,000 ಉಪಯೋಗಿಸಿದ ಕಾಂಡೋಮ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲಿಗೆ ಉಪಯೋಗಿಸಿದ್ದ ಕಾಂಡೋಮ್‍ಗಳನ್ನು ಸಂಗ್ರಹಿಸಿ ರಾಸಾಯನಿಕಯುಕ್ತ ನೀರಿನಿಂದ ಶುಚಿಗೊಳಿಸಲಾಗುತ್ತಿತ್ತು. ನಂತರ ಅದನ್ನು ಮರದ ಕೋಲಿನಿಂದ ಮರು ರೂಪಿಸಲಾಗುತ್ತಿತ್ತು. ಈ ಕೆಲಸವನ್ನು ಮಾಡಲು ದಿನಗೂಲಿ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು.

    ಇದು ದಕ್ಷಿಣ ವಿಯೆಟ್ನಾಂನ ಭಾಗದಲ್ಲಿರುವ ಬಿನ್ಹ್ ಡುವಾಂಗ್ ಪ್ರಾಂತ್ಯದ ಗೋದಾಮಿನಲ್ಲಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ. ಆಗ ಬಳಸಿದ ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮರು ಪ್ಯಾಕೇಜ್ ಮಾಡಿ ಸುರಕ್ಷಿತವಲ್ಲದ ಕಾಂಡೋಮ್‍ಗಳನ್ನು ಮತ್ತೆ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ಈಗಾಗಲೇ ಸಾವಿರಾರು ಸಾರ್ವಜನಿಕರಿಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

    ಗೋದಾಮಿನ ಮಾಲಕಿ ಫಾಮ್ ಥಿ ಥನ್ ನ್ಗೋಕ್ (33)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಒಂದು ತಿಂಗಳ ಹಿಂದೆ ಕಾಂಡೋಮ್ ಸ್ವೀಕರಿಸಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಕಾಂಡೋಮ್‍ಗಳನ್ನು ಸಾಕ್ಷಿ ಸಮೇತ ವಶಪಡಿಸಿಕೊಳ್ಳಲಾಗಿದೆ. ಆದರೆ ಅವುಗಳನ್ನು ಅಪಾಯಕಾರಿ ವೈದ್ಯಕೀಯ ತ್ಯಾಜ್ಯವೆಂದು ಪರಿಗಣಿಸಲಾಗಿರುವುದರಿಂದ ತಕ್ಷಣ ವಿಲೇವಾರಿ ಮಾಡಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈಗಾಗಲೇ ಎಷ್ಟು ಕಾಂಡೋಮ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ತಿಳಿದಿಲ್ಲ. ಆದರೆ ಪೊಲೀಸರು 360 ಕೆ.ಜಿ. ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ಗೋದಾಮಿನ ಸಮೀಪವಿರುವ ಹೋಟೆಲ್‍ಗಳು ಮತ್ತು ಮಾರುಕಟ್ಟೆ ಮಳಿಗೆಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳೀಯ ವರದಿಗಳು ಹೇಳಿವೆ.

  • ನೆಲಮಂಗಲದಲ್ಲಿ ಬೆಂಕಿ ಅವಘಡ – ಧಗಧಗ ಹೊತ್ತಿ ಉರಿದ ಗೋದಾಮು

    ನೆಲಮಂಗಲದಲ್ಲಿ ಬೆಂಕಿ ಅವಘಡ – ಧಗಧಗ ಹೊತ್ತಿ ಉರಿದ ಗೋದಾಮು

    – ಯುನೈಟೆಡ್ ಪೇಂಟ್ಸ್ ಗೋದಾಮಿನಲ್ಲಿ ಅಗ್ನಿ ಅನಾಹುತ
    – 20 ಅಗ್ನಿಶಾಮಕ ತಂಡದಿಂದ ಕಾರ್ಯಾಚರಣೆ

    ಬೆಂಗಳೂರು: ಪೇಂಟ್ ಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನೆಲಮಂಗಲ ಸಮೀಪದ ಕುದರಗೆರೆಯಲ್ಲಿ ನಡೆದಿದೆ.

    ಯುನೈಟೆಡ್ ಪೇಂಟ್ಸ್ ಗೆ ಸೇರಿದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ರೀತಿಯಲ್ಲಿ ಶಬ್ದ ಕೇಳಿಬಂದ ಬಳಿಕ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ.

    ಬೆಂಕಿ ಅವಘಡದಿಂದ ಬಾರಿ ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗೋದಾಮಿನ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಪೊಲೀಸರು ಖಾಲಿ ಮಾಡಿಸುತ್ತಿದ್ದಾರೆ. ಗಾಳಿಯಿಂದಾಗಿ ಬೆಂಕಿ ರಭಸ ಮತ್ತಷ್ಟು ಹೆಚ್ಚಾಗುತ್ತಿದ್ದು, ಆಕಾಶದೆತ್ತರಕ್ಕೆ ಅಗ್ನಿಯ ಕೆನ್ನಾಲಿಗೆ ಆವರಿಸಿದೆ. ಅಲ್ಲದೆ ಎಲ್ಲೆಲ್ಲೂ ದಟ್ಟ ಹೊಗೆ ತುಂಬಿಕೊಂಡಿದೆ.

    ಗೋದಾಮಿನಲ್ಲಿದ್ದ ಕೋಟ್ಯಂತರ ರೂ. ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಗೋದಾಮಿನ ಸುತ್ತಮುತ್ತಲು ಬೆಂಕಿ ಹಾಗೂ ಹೊಗೆಯ ರಭಸಕ್ಕೆ ಪ್ರಾಣಿ ಪಕ್ಷಿಗಳ ತತ್ತರಿಸಿ ಹೋಗಿವೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಬೆಂಕಿಯನ್ನು ಆರಿಸಲು ಸುಮಾರು 20 ಅಗ್ನಿಶಾಮಕ ತಂಡ ಆಗಮಿಸಿದ್ದು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

    ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಹಿಂದೆ ಈ ಅಗ್ನಿ ದುರಂತ ಸಂಭವಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಪ್ತಿಗೆ ಈ ಪ್ರದೇಶ ಸೇರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೆಹಲಿಯಲ್ಲಿ ಅಗ್ನಿ ದುರಂತ- ಹೆಲಿಕಾಪ್ಟರ್ ಬಳಸಿ ನಂದಿಸೋ ಕಾರ್ಯವನ್ನ ನೋಡಿ

    ದೆಹಲಿಯಲ್ಲಿ ಅಗ್ನಿ ದುರಂತ- ಹೆಲಿಕಾಪ್ಟರ್ ಬಳಸಿ ನಂದಿಸೋ ಕಾರ್ಯವನ್ನ ನೋಡಿ

    ನವದೆಹಲಿ: ನಗರದ ಮಾಳವಿಯ ನಗರದ ಗೋದಾಮಿನಲ್ಲಿ ನಿನ್ನೆ ರಾತ್ರಿ ಬೃಹತ್ ಅಗ್ನಿ ದುರಂತ ಸಂಭವಿಸಿರುವ ಘಟನೆ ನಡೆದಿದೆ.

    ವಾಯುಪಡೆಯ ಎಮ್‍ಐ-17 ಹೆಲಿಕಾಪ್ಟರ್ ಬಳಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇತ್ತೀಚೆಗೆ ನಗರ ಕಂಡ ಬೃಹತ್ ಅಗ್ನಿ ದುರಂತ ಇದಾಗಿದೆ ಎನ್ನಲಾಗಿದೆ.

    ನಗರದ ಖಿರ್ಕಿ ಎಕ್ಸ್‍ಟೆನ್ಶನ್ ನ ಗೊದಾಮಿನಲ್ಲಿ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಜನನಿಭಿಡ ಪ್ರದೇಶ ಮಾಳವಿಯ ನಗರವಾಗಿದ್ದು ಸುಮಾರು 80 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪಕ್ಕದ ಕಟ್ಟಡಗಳಿಗೆ ಹಾಗೂ ಶಾಲೆಗೆ ಬೆಂಕಿ ಪಸರಿಸದಂತೆ ಸಾಕಷ್ಟು ಅಗ್ನಶಾಮಕ ಸಿಬ್ಬಂಧಿಗಳು ರಾತ್ರಿಯಿಡಿ ನೋಡಿಕೊಂಡಿದ್ದಾರೆ. ಹೊಗೆ ಮೇಲೇಳುತ್ತಿರುವುದನ್ನು ದಕ್ಷಿಣ ದೆಹಲಿಯ ಯಾವ ಭಾಗದಲ್ಲಿ ನಿಂತರೂ ನೋಡಬಹುದಾಗಿತ್ತು.

    ಗೋದಾಮಿನ ಬಳಿ ನಿಲ್ಲಿಸಿದ್ದ ರಬ್ಬರ್ ತುಂಬಿದ ಟ್ರಕ್ ಗೆ ಮೊದಲು ಬೆಂಕಿ ಹತ್ತಿದೆ. ತುಂಬಾ ಗಾಳಿ ಬೀಸುತ್ತಿದ್ದರಿಂದ ತಕ್ಷಣವೇ ಪಕ್ಕದಲ್ಲೇ ಇದ್ದ ಗೋದಾಮಿಗೂ ಬೆಂಕಿ ಪಸರಿಸಿದೆ. ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ಹಾಗೂ ಕಚ್ಛಾ ವಸ್ತುಗಳು ಬೆಂಕಿ ಹೆಚ್ಚಾಗಲು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಗೋದಾಮಿನ ಪಕ್ಕದಲ್ಲಿರುವ ಸುಮಾರು 15 ಮನೆಗಳಿಂದ ಜನರನ್ನು ಖಾಲಿಮಾಡಿಸಲಾಗಿದೆ. ಘಟನೆಯಿಂದ ಯಾವುದೇ ಜೀವ ಹಾನಿಯಾಗಿಲ್ಲ. ಒಬ್ಬ ಅಗ್ನಿ ಶಾಮಕ ಸಿಬ್ಬಂದಿಗೆ ಗಾಯವಾಗಿದೆ. ದಾರಿ ಚಿಕ್ಕದಿರುವುದರಿಂದ ಅಗ್ನಿ ಶಾಮಕ ವಾಹನಗಳಿಗೆ ನಂದಿಸುವ ಕಾರ್ಯದಲ್ಲಿ ಸ್ವಲ್ಪ ಅಡಚಣೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

    ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

    ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೆಂಚನಹಳ್ಳಿಯಲ್ಲಿರುವ ಹಳೇ ಪ್ಲಾಸ್ಟಿಕ್‍ ನ ಸಂಸ್ಕರಣ ಘಟಕದಲ್ಲಿ ಭಾನುವಾರ ರಾತ್ರಿ 12 ಗಂಟೆಗೆ ದಿಢೀರ್ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಸುಟ್ಟು ಭಸ್ಮವಾಗಿದೆ.

    ಇದು ದೇವು ಎಂಬುವವರಿಗೆ ಸೇರಿದ ಗೋದಾಮು ಆಗಿದ್ದು, ಸ್ಥಳಕ್ಕೆ 8 ಆಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಕುಡಿತದ ಅಮಲಿನಲ್ಲಿ ಯಾರೋ ಗೋದಾಮಿಗೆ ಬೆಂಕಿ ಹಚ್ಚಿದ್ದಾರೆಂದು ಎಂದು ಶಂಕಿಸಲಾಗಿದೆ. ಬೆಂಕಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಈ ಸಂಬಂಧ ಕೆಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

    https://www.youtube.com/watch?v=moctcEHg1KM&feature=youtu.be

  • ಪುರಸಭೆ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ವಾಹನಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

    ಪುರಸಭೆ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ವಾಹನಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

    ರಾಯಚೂರು: ಮಾನ್ವಿ ಪುರಸಭೆ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

    ಪುರಸಭೆಯ ಸಾಮಗ್ರಿ ಹಾಗೂ ವಾಹನಗಳ ನಿಲುಗಡೆಗೆ ಬಳಸುತ್ತಿದ್ದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅನಾಹುತದಲ್ಲಿ 1 ಜೆಸಿಬಿ, 2 ಕಸ ಒಯ್ಯುವ ಆಟೋ, ಒಂದು ಟಿಪ್ಪರ್, ನೀರಿನ ಪೈಪುಗಳು, ಸ್ಯಾನಿಟರಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಅವಘಡದಲ್ಲಿ ಅಂದಾಜು 35 ಲಕ್ಷ ರೂ.ಮೌಲ್ಯದ ವಸ್ತುಗಳು ಭಸ್ಮವಾಗಿವೆ.

    ಬಿಸಿಲಿನ ತಾಪದಿಂದ ಕಸದ ರಾಶಿಗೆ ಹೊತ್ತಿದ್ದ ಬೆಂಕಿಯಿಂದ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.