Tag: ಗೋಬಿ ಮಂಚೂರಿ

  • ಚಾ.ನಗರ| ಐಸ್ ಕ್ರೀಂ, ಗೋಬಿಗಾಗಿ ಕಿಡ್ನ್ಯಾಪ್‌ ಕಥೆ ಕಟ್ಟಿದ 10 ವರ್ಷದ ಬಾಲಕ

    ಚಾ.ನಗರ| ಐಸ್ ಕ್ರೀಂ, ಗೋಬಿಗಾಗಿ ಕಿಡ್ನ್ಯಾಪ್‌ ಕಥೆ ಕಟ್ಟಿದ 10 ವರ್ಷದ ಬಾಲಕ

    – ಮಗನ ಮಾತು ನಂಬಿ ದೂರು ಕೊಟ್ಟಿದ್ದ ತಂದೆ
    – ಪ್ರಕರಣ ಬೆನ್ನತ್ತಿ ಹೊರಟ ಪೊಲೀಸರಿಗೆ ಗೊತ್ತಾಯ್ತು ಬಾಲಕನ ಅಸಲಿಯತ್ತು

    ಚಾಮರಾಜನಗರ: ಮನೆಯವರಿಗೆ ಗೊತ್ತಾಗದಂತೆ ಐಸ್ ಕ್ರೀಂ, ಗೋಬಿ ತಿನ್ನಲು ಹೋಗಿದ್ದ ಬಾಲಕ ಪೋಟೋ ತೆಗೆದು ಮನೆಯವರಿಗೆ ಕಳಿಸಿ ಕಿಡ್ನ್ಯಾಪ್‌ ಕಥೆ ಕಟ್ಟಿದ್ದ. ಈತನ ಮಾತು ನಂಬಿ ಪೋಷಕರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು. ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ ಕೊನೆಗೂ ಅಸಲಿಯತ್ತು ಗೊತ್ತಾಗಿದೆ.

    ಗೋಬಿ, ಐಸ್ ಕ್ರೀಂ ತಿನ್ನಲು ಟ್ಯೂಷನ್‌ಗೆ ಚಕ್ಕರ್ ಹಾಕಿದ ಬಾಲಕ ಪೋಷಕರಿಗೆ ನಿಜಾಂಶ ಮುಚ್ಚಿಡಲು ತನ್ನನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಅಂತಾ ಕಥೆ ಹೆಣೆದಿದ್ದ. ಈತನ ಮಾತನ್ನು ನಂಬಿದ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ. ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಈ ಬಾಲಕ ಪ್ರತಿದಿನ ಸಂಜೆ ಶಾಲೆ ಮುಗಿಸಿ ಕೋಚಿಂಗ್ ಸೆಂಟರ್ ಒಂದಕ್ಕೆ ಟ್ಯೂಷನ್‌ಗೆ ಹೋಗುತ್ತಿದ್ದ. ಮನೆಯಲ್ಲಿ ಹಣ ಕದ್ದು ಟ್ಯೂಷನ್‌ಗೆ ಚಕ್ಕರ್ ಹೊಡೆದು ಗೋಬಿ, ಐಸ್ ಕ್ರೀಂ ತಿನ್ನಲು ಹೋಗಿದ್ದ. ಈತ ಗೋಬಿ ತಿನ್ನುವ ವೇಳೆ ಸಂಬಂಧಿಕರೊಬ್ಬರು ಪೋಟೋ ತೆಗೆದುಕೊಂಡಿದ್ದರು. ಅದನ್ನು ಗಮನಿಸಿದ್ದ ಬಾಲಕ ಎಲ್ಲಿ ತಂದೆ-ತಾಯಿಗೆ ತನ್ನ ವಿಚಾರವನ್ನು ಹೇಳಿ ಬಿಡುತ್ತಾರೆಂದು ಹೆದರಿದ್ದ. ಬಳಿಕ ಪಕ್ಕದ ಮನೆಯ ಮಹಿಳೆಯೊಂದಿಗೆ ಮನೆಗೆ ತೆರಳಿದ ಬಾಲಕ ತನ್ನನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಅಂತಾ ಕಥೆ ಸೃಷ್ಟಿಸಿ ಪೋಷಕರನ್ನು ನಂಬಿಸಿದ್ದ.

    ಬಾಲಕ ಹೆಣೆದಿದ್ದ ಕಥೆ ಏನು?
    ನಾನು ಟ್ಯೂಷನ್ ಹೋಗ್ತಿದ್ದ ವೇಳೆ ಯಾರೋ ಅಪರಿಚಿತರು ಬಂದು ತಲೆ ನೋವಾಗುತ್ತಿದೆ ಎಂದು ನಿಮ್ಮ ಟ್ಯೂಷನ್ ಮೇಡಂಗೆ ಹೇಳಿ ವಾಪಾಸ್ ಬಾ ಅಂತ ಹೇಳಿದ್ರು. ನಂತರ ಕಾರಿನಲ್ಲಿ ಕೂರಿಸಿಕೊಂಡು, ಬಾಯಿಗೆ ಪ್ಲಾಸ್ಟರ್ ಹಾಕಿ ಯಾವುದೋ ಒಂದು ಗೋಡೌನ್ ಬಳಿ ಕಾರು ನಿಲ್ಲಿಸಿದರು. ಮತ್ತೆ ಅದೇ ಕಾರಿನಲ್ಲಿ ವಾಪಾಸ್ ತಂದು ಗೋಬಿ ಅಂಗಡಿ ಮುಂದೆ ನಿಲ್ಲಿಸಿ 50 ರೂ. ಕೊಟ್ಟು ಗೋಬಿ, ಐಸ್ ಕ್ರೀ ತಿನ್ನು ಇಲ್ಲದಿದ್ರೆ ಸಾಯಿಸ್ತೀನಿ ಅಂತ ಹೆದರಿಸಿದ್ದರೆಂದು ಬಾಲಕ ಕಥೆ ಕಟ್ಟಿದ್ದಾನೆ.

    ಈತನ ಮಾತು ನಂಬಿ ಬೆದರಿದ ಪೋಷಕರು ತಕ್ಷಣ ಪಟ್ಟಣ ಪೊಲೀಸ್ ಠಾಣೆ ಮೇಟ್ಟಿಲೇರಿದ್ದಾರೆ. ಬಾಲಕ ಹೇಳಿದ ಕಥೆಯನ್ನು ಸೀರಿಯಸ್ ಆಗಿ ತೆಗೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡರು. ಬಾಲಕ ಹೇಳಿದ ಕಡೆಯೆಲ್ಲಾ ಹೋಗಿ ಶೋಧ ನಡೆಸಿ, ಸಿಸಿಟಿವಿ ಫೂಟೇಜ್‌ಗಳನ್ನು ಪರಿಶೀಲನೆ ನಡೆಸಿದರು. ಆದರೆ, ಕಿಡ್ನ್ಯಾಪರ್ಸ್ ಸುಳಿವು ಎಲ್ಲಿಯೂ ಸಿಗದೇ ಮತ್ತೆ ಬಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆ ವೇಳೆ ಬಾಲಕ ಗೋಬಿಗಾಗಿ ಕಥೆ ಕಟ್ಟಿದ್ದಾನೆ ಅಂತಾ ಗೊತ್ತಾಗಿದೆ.

  • PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?

    PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?

    ಕಾಟನ್ ಕ್ಯಾಂಡಿ ಎಂದರೆ ಮಕ್ಕಳಿಗೆ ಬಹಳ ಇಷ್ಟ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರೆ ಕಲರ್ ಕಲರ್ ಕಾಟನ್ ಕ್ಯಾಂಡಿಗಳು (Cotton Candy) ಮಕ್ಕಳನ್ನು ಕೈಬೀಸಿ ಕರೆಯುತ್ತಿರುತ್ತವೆ. ಬಾಯಿಗಿಟ್ಟರೆ ಕರಗುತ್ತದೆ, ನಾಲಿಗೆಗೆ ರುಚಿಯಾಗಿರುತ್ತದೆ ಅಂತ ಮಕ್ಕಳು ಅದನ್ನು ತುಂಬಾ ಇಷ್ಟ ಪಟ್ಟು ತಿನ್ನುತ್ತಾರೆ. ಮಕ್ಕಳ ಆಸೆಗೆ ಕಟ್ಟುಬಿದ್ದು ಪೋಷಕರು ಸ್ವಲ್ಪವೂ ಯೋಚಿಸದೇ ಕ್ಯಾಂಡಿ ಕೊಡಿಸುತ್ತಾರೆ. ಆದರೆ ಇಂತಹ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ ಎಂಬುದನ್ನು ವೈದ್ಯಕೀಯ ಲೋಕ ಸಾರಿ ಸಾರಿ ಹೇಳುತ್ತಿದೆ.

    ಆರೋಗ್ಯಕ್ಕೆ ಹಾನಿಕರವಾದ ಇಂತಹ ಪದಾರ್ಥಗಳಿಗೆ ಹಲವು ರಾಜ್ಯಗಳಲ್ಲಿ ನಿಷೇಧಿಸಿ ಇತರೆ ರಾಜ್ಯಗಳಿಗೆ ಮಾದರಿಯಾಗಿವೆ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಗೋಬಿ ಮಂಚೂರಿ (Gobi Manchurian), ಪಾನಿಪುರಿ, ಕಬಾಬ್ ಇತರೆ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗಿದೆ.

    ಕಲರ್ ಕಾಟನ್ ಕ್ಯಾಂಡಿ ನಿಷೇಧ ಏಕೆ? ಅದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು? ನಿಯಮ ಉಲ್ಲಂಘಿಸಿ ಮಾರಾಟ ಮಾಡಿದ್ರೆ ಶಿಕ್ಷೆ ಏನು? ಖಾದ್ಯಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಸದಂತೆ ಕರ್ನಾಟಕ ಕೈಗೊಂಡಿರುವ ಕ್ರಮಗಳೇನು?

    ಏನಿದು ಕಾಟನ್ ಕ್ಯಾಂಡಿ?
    ಇದೊಂದು ಸಿಹಿ ತಿನಿಸು. ಮಕ್ಕಳಿಗೆ ಪ್ರಿಯವಾದ ತಿನಿಸು. ಇದು ತಿನ್ನಲು ಹತ್ತಿಯಂತೆ ಇರುತ್ತದೆ. ಆಕರ್ಷಣೀಯವಾಗಿ ಇರಲೆಂದು ಈ ತಿನಿಸಿಗೆ ಕೃತಕ ಬಣ್ಣ ಬಳಸಲಾಗುತ್ತದೆ. ಮಕ್ಕಳೇ ಇದನ್ನು ಹೆಚ್ಚು ಖರೀದಿಸಿ ತಿನ್ನುತ್ತಾರೆ.

    ಇದು ಅಪಾಯಕಾರಿಯೇ?
    ಹೌದು, ಕಾಟನ್ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್-ಬಿ ಅತ್ಯಂತ ಅಪಾಯಕಾರಿ. ತಿನಿಸು ಕಲರ್‌ಫುಲ್ ಆಗಿ ಕಾಣಲಿ ಎಂದು ಇದನ್ನು ಬಳಸುತ್ತಾರೆ. ಆದರೆ ರೋಡಮೈನ್-ಬಿಯನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದನ್ನು ಇಂಕ್, ಬಟ್ಟೆಗಳು (ಬಣ್ಣಕ್ಕೆ) ಮತ್ತು ಸೌಂದರ್ಯವರ್ಧಕಗಳಿಗೂ ಬಳಸಲಾಗುತ್ತದೆ.

    ಆರೋಗ್ಯದ ಮೇಲಾಗುವ ದುಷ್ಪರಿಣಾಮ ಏನು?
    ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ಕಾಟನ್ ಕ್ಯಾಂಡಿಗೆ ರೋಡಮೈನ್-ಬಿಯನ್ನು ಬಳಸಲಾಗುತ್ತದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ. ಅಷ್ಟೇ ಅಲ್ಲ, ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು.

    ಮಕ್ಕಳಿಗೆ ತೊಂದರೆಯೇನು?
    ಕಾಟನ್ ಕ್ಯಾಂಡಿಯಲ್ಲಿನ ಹೆಚ್ಚಿನ ಸಕ್ಕರೆ ಅಂಶವು ದೊಡ್ಡ ಪ್ರಮಾಣದ ಅಪಾಯವನ್ನುಂಟು ಮಾಡುತ್ತದೆ. ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿಯಲ್ಲಿ ಪರಿಣಿತರಾಗಿರುವ ಪ್ರೊಫೆಸರ್ ಟಾಮ್ ಸ್ಯಾಂಡರ್ಸ್, ಕ್ಯಾಂಡಿ ಫ್ಲೋಸ್‌ನಿಂದ ಮಕ್ಕಳಲ್ಲಿ ಹಲ್ಲು ಕ್ಷಯ ಉಂಟಾಗಲು ಕಾರಣವಾಗುತ್ತದೆ ಎಂದಿದ್ದಾರೆ.

    ವಿದೇಶಗಳಲ್ಲಿ ಎಲ್ಲೆಲ್ಲಿ ಬ್ಯಾನ್?
    ಯೂರೋಪ್, ಯುಕೆ ಮತ್ತು ಕ್ಯಾಲಿಫೋರ್ನಿಯಾದಲ್ಲೂ (California) ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. 2014 ರಲ್ಲಿ ವೆಸ್ಟ್ ಯಾರ್ಕ್ಷೈರ್‌ನಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆಸಲಾಯಿತು. ಆಗ ಏಷ್ಯನ್ ಸಿಹಿತಿಂಡಿಗಳಲ್ಲಿ ರೋಡಮೈನ್-ಬಿ ಇರುವುದು ದೃಢಪಟ್ಟಿತು.

    ಭಾರತದ ಯಾವ ರಾಜ್ಯಗಳಲ್ಲಿ ನಿಷೇಧ?
    ಕ್ಯಾನ್ಸರ್‌ಗೆ ಕಾರಣವಾಗುವ ರಾಸಾಯನಿಕ ಅಂಶವಿರುವುದು ಸಾಬೀತಾದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಕರ್ನಾಟಕದಲ್ಲಿ ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಲ್ಲದೇ, ಬಣ್ಣ ರಹಿತ ಕಾಟನ್ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇಲ್ಲ ಎಂದು ಹೇಳಿದೆ. ಜೊತೆಗೆ ಆಂಧ್ರಪ್ರದೇಶ ಮತ್ತು ದೆಹಲಿಯಲ್ಲೂ ಕಾಟನ್ ಕ್ಯಾಂಡಿ ನಿಷೇಧಕ್ಕೆ ಕ್ರಮಕೈಗೊಳ್ಳಲಾಗಿದೆ. ಕಾಟನ್ ಕ್ಯಾಂಡಿಗೆ ಬಳಸುವ ಪದಾರ್ಥಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

    ಕರ್ನಾಟಕದಲ್ಲಿ ಬ್ಯಾನ್?
    ಕೃತಕ ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ಕರ್ನಾಟಕದಲ್ಲಿ ನಿಷೇಧಿಸಲಾಗುವುದು. ಬಣ್ಣ ಬರಲು ಬಳಸುವ ರೋಡಮೈನ್-ಬಿಯನ್ನು ಕಾಟನ್ ಕ್ಯಾಂಡಿಯಲ್ಲಿ ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವಂತಿಲ್ಲ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ.

    ಗೋಬಿ ಮಂಚೂರಿ ಕಥೆ ಏನು?
    ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಹೀಗೆ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಬೀದಿ ಬದಿಯ ತಳ್ಳುವ ಗಾಡಿ ವ್ಯಾಪಾರಿಗಳಿಂದ ಹಿಡಿದು ದೊಡ್ಡ ದೊಡ್ಡ ಹೋಟೆಲ್‌ವರೆಗೂ ಈ ಆದೇಶ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ. ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ 171 ಕಡೆ ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆ ಪೈಕಿ 107 ಕಡೆಗಳಲ್ಲಿನ ಗೋಬಿ ಮಂಚೂರಿಗಳಲ್ಲಿ ಹಾನಿಕಾರಕ ಕೃತಕ ಬಣ್ಣ ಬಳಸಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

    ಕೃತಕ ಬಣ್ಣ ಬಳಸಿದ್ರೆ ಶಿಕ್ಷೆ ಏನು?
    ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ನಿಯಮ 59 ರಡಿ 7 ವರ್ಷಗಳ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು.

  • ಇನ್ಮೇಲೆ ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್- ಗೋಬಿಗೂ ಕೃತಕ ಬಣ್ಣ ಬಳಸುವಂತಿಲ್ಲ

    ಇನ್ಮೇಲೆ ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್- ಗೋಬಿಗೂ ಕೃತಕ ಬಣ್ಣ ಬಳಸುವಂತಿಲ್ಲ

    – ಕಾನೂನು ಉಲ್ಲಂಘಿಸಿದರೆ 10 ಲಕ್ಷ ದಂಡ, 7 ವರ್ಷ ಜೈಲು

    ಬೆಂಗಳೂರು: ಕಲರ್ ಕಾಟನ್ ಕ್ಯಾಂಡಿಯನ್ನು (Cotton Candy) ನಿಷೇಧ ಮಾಡಿ ಆಹಾರ ಮತ್ತು ಸುರಕ್ಷತಾ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲಿ ಕೂಡ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ಇತ್ತೀಚೆಗೆ ಕ್ಯಾನ್ಸರ್ ಸೇರಿದಂತೆ ಆರೋಗ್ಯ ಹಾಳಾಗುತ್ತಿದೆ. ಬೀದಿ ಬದಿ, ಹೊಟೇಲ್ ಊಟದ ಮೇಲೆ ಜನ ಹೆಚ್ಚು ಅವಲಂಬನೆ ಆಗುತ್ತಿದ್ದಾರೆ. ಆಹಾರ ಸರಿಯಾದ ರೀತಿ ಸೇವನೆ ಆಗದಿದ್ದರೆ ಅನಾರೋಗ್ಯ ಹೆಚ್ಚಾಗುತ್ತಿದೆ. ಹೆಚ್ಚು ಕೊಬ್ಬಿನಾಂಶ, ಉಪ್ಪು, ಸಕ್ಕರೆ, ಹೆಚ್ಚಿರೋ ಆಹಾರದಿಂದ ದುಷ್ಪರಿಣಾಮ ಇದೆ ಎಂದರು.

    ಎರಡು ಪದಾರ್ಥಗಳಾದ ಕಾಟನ್ ಕ್ಯಾಂಡಿ ಮತ್ತು ಗೋಬಿ (Gobi Manchuri) ಸ್ಯಾಂಪಲ್ ಕಲೆಕ್ಟ್ ಮಾಡಲಾಯಿತು. ಬೀದಿ ಬದಿ, ಹೊಟೇಲ್ ಗಳಲ್ಲಿ ಗೋಬಿಯ 171 ಮಾದರಿ ಸಂಗ್ರಹ ಮಾಡಲಾಯಿತು. ಇದರಲ್ಲಿ 107 ಕೃತಕ ಬಣ್ಣ ಬಳಕೆ ಆಗಿದೆ. ರೋಡಮೈನ್ ಬಿ, ಟಾರ್ ಟ್ರಾಸೈನ್ ಸ್ಯಾಂಪಲ್ ನಲ್ಲಿ ಸಿಕ್ಕಿದೆ. ರೋಡಮೈನ್ ಕ್ಯಾನ್ಸರ್ ಗೆ ಕಾರಣವಾಗಿದೆ. ಇದನ್ನ ಬಳಕೆ ಮಾಡಲು ಪರ್ಮಿಷನ್ ಇಲ್ಲ. ಮಕ್ಕಳು ಕಾಟನ್ ಕ್ಯಾಂಡಿ ಹೆಚ್ಚಾಗಿ ಸೇವನೆ ಮಡ್ತಾ ಇದ್ದಾರೆ ಎಂದು ಹೇಳಿದರು.

    ಟಾರ್ ಟ್ರಾಸೈನ್ ಬಳಕೆಗೆ ಅಪ್ರೂವಲ್ ಇದೆ. ಆದರೆ ಗೋಬಿಯಂತಹ ಪ್ರಿಪೇರ್ ಫುಡ್ ನಲ್ಲಿ ಇದು ಬಳಕೆ ಇಲ್ಲ. 107 ಸ್ಯಾಂಪಲ್ ನಲ್ಲಿ 12 ಟಾರ್ ಟ್ರಾಸೈನ್ ಸಿಕ್ಕಿದೆ. ಸನ್ ಸೆಟ್ 33 ಸಿಕ್ಕಿದೆ ಇದ್ಯಾವುದನ್ನು ಫುಡ್ ಗಳಲ್ಲಿ ಬಳಕೆ ಮಾಡುವಂತಿಲ್ಲ.  ಹೀಗಾಗಿ ಕಾನೂನು ಪ್ರಕಾರ ಉಲ್ಲಂಘನೆ ಮಾಡಿದವರಿಗೆ 10 ಲಕ್ಷ ದಂಡ, 7 ವರ್ಷ ಶಿಕ್ಷೆಗೆ ಅವಕಾಶ ಇದೆ. ಪ್ಲೇನ್ ಕಾಟನ್ ಕ್ಯಾಂಡಿ ತಯಾರಿ ಮಾಡಬಹುದು. ಆದರೆ ಕಲರ್ ಕಾಟನ್ ಕ್ಯಾಂಡಿ ಮಾತ್ರ ಮಾರಾಟ ಮಾಡುವಂತಿಲ್ಲ ಎಂದು ಗುಂಡೂರಾವ್ ತಿಳಿಸಿದರು.

  • ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಬ್ಯಾನ್?-ನಾಳೆ ಅಧಿಕೃತ ಆದೇಶ ಸಾಧ್ಯತೆ

    ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಬ್ಯಾನ್?-ನಾಳೆ ಅಧಿಕೃತ ಆದೇಶ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ (Gobi Manchurian) ಬ್ಯಾನ್ ಆಗುತ್ತಾ..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ನಾಳೆ (ಸೋಮವಾರ) ಹೊರಬೀಳುವ ಸಾಧ್ಯತೆ ಇದೆ.

    ಹೊರರಾಜ್ಯಗಳಲ್ಲಿ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಬ್ಯಾನ್ ಆಗಿದೆ. ಕಾರಣ ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಆಹಾರ ಮತ್ತು ಸುರಕ್ಷತಾ ಇಲಾಖೆ ಹೋಟೆಲ್, ಬೀದಿಬದಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ಬಳಿ ಕಾಂಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹಿಸಿ ಟೆಸ್ಟ್ ಮಾಡಿದೆ. ಈ ಟೆಸ್ಟ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ರಂಡೋಮನ್ ಬಿ ಅಂಶ ಇರೋದು ಪತ್ತೆಯಾಗಿದೆ. ಜೊತೆಗೆ ಗೋಬಿ ಮಂಚೂರಿಗೆ ಹಾಕುವ ಕಲರ್ ಜಲ್ಲಿಗಳನ್ನ ಟೌನ್ ಟೆಸ್ಟ್ ಗೆ ಒಳಪಡಿಸಿದಾಗ ಅದರಲ್ಲೂ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಬ್ಯಾನ್ ಮಾಡುವ ಸಾಧ್ಯತೆ ಇದೆ.

    ಕೃತಕ ಬಣ್ಣ ಬೆರಸಿ ಗೋಬಿ ಮಾಡುವುದಕ್ಕೆ ಅವಕಾಶ ಇಲ್ಲ. ಆಹಾರ ಸುರಕ್ಷತೆ ಕಾಯ್ದೆಯಡಿ 10 ಲಕ್ಷದ ವರೆಗೂ ದಂಡ ವಿಧಿಸುವ ಸಂಭವ ಇದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ. ಇದನ್ನೂ ಓದಿ: Lok Sabha: ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ 9 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ

    ಒಟ್ಟಾರೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಅಂಶ ಇರೋದು ವರದಿಯಲ್ಲಿ ಕನ್ಫರ್ಮ್ ಆಗಿದ್ದು ಆರೋಗ್ಯ ಸಚಿವರಿಗೆ ವರದಿ ಕೈ ಸೇರಿದೆ. ಆರೋಗ್ಯ ಸಚಿವರು ಕಾಟನ್ ಕ್ಯಾಂಡಿ ಬ್ಯಾನ್ ಮಾಡಿ ಗೋಬಿ ಮಂಚೂರಿಗೆ ಬಳಸೋ ಪದಾರ್ಥಗಳಿಗೆ ಪ್ರತ್ಯೇಕ ಗೈಡ್ ಲೈನ್ಸ್ ಬಿಡುಗಡೆ ಮಾಡ್ತಾರಾ ಕಾದು ನೋಡಬೇಕಿದೆ.

  • ರಾಜ್ಯದಲ್ಲೂ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್?

    ರಾಜ್ಯದಲ್ಲೂ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್?

    ಬೆಂಗಳೂರು: ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri) ಕೆಲವು ಹಾನಿಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಗೋವಾ, ತಮಿಳುನಾಡು ಈ ಆಹಾರಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಕಲರ್ ಜೆಲ್ಲಿಗಳನ್ನು ಸ್ಯಾಂಪಲ್ ಟೆಸ್ಟ್‌ಗೆ ಒಳಪಡಿಸಿಲಾಗಿತ್ತು. ಇದೀಗ ಕಾಟನ್ ಕ್ಯಾಂಡಿ ಜೆಲ್ಲಿ ಹಾಗೂ ಗೋಬಿ ಮಂಚೂರಿಯ ಟೆಸ್ಟಿಂಗ್ ರಿಪೋರ್ಟ್ ಆರೋಗ್ಯ ಇಲಾಖೆ (Health Department) ಕೈ ಸೇರಿದೆ.

    ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದು, ಸೋಮವಾರ (ಮಾ.11) ಆರೋಗ್ಯ ಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

    ಗೋಬಿ ಮಂಚೂರಿಯಲ್ಲಿ Sunset Yellow ಹಾಗೂ Tartrazine ಹಾನಿಕಾರಕ ಅಂಶ ಇರೋದ್ರಿಂದ ಎರಡೂ ರಾಸಾಯನಿಕ ಅಂಶಗಳನ್ನು ಬಳಕೆ ಮಾಡದೇ ಇರುವ ಥರ ಆರೋಗ್ಯ ಸಚಿವರು ಘೋಷಣೆ ಮಾಡುವ ಸಾಧ್ಯತೆ ಇದೆ. ಟೆಸ್ಟಿಂಗ್‌ನಲ್ಲಿ ಹಾನಿಕಾರಕ ಅಂಶ ಇರೋದು ವರದಿಯಲ್ಲಿ ತಿಳಿದು ಬಂದಿರುವುದಾಗಿ ಪಬ್ಲಿಕ್ ಟಿವಿಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಕಾಂಗ್ರೆಸ್ ಶಾಸಕ ವಾಸು ಅನಾರೋಗ್ಯದಿಂದ ನಿಧನ

    ರೊಡಮೈನ್ ಬಿ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಏನು?
    ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿದ್ದು, ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಗೋಬಿಯಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆ ಬರುವ ಸಾಧ್ಯತೆಗಳು ಹೆಚ್ಚಿವೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಳ್ಳಾರಿಯಲ್ಲಿ ತನಿಖೆ ಚುರುಕು, ಬಾಂಬರ್‌ನಂತೆ ಡ್ರೆಸ್‌ ಹಾಕಿ ಓರ್ವನ ವಿಚಾರಣೆ

    ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಬಾಂಬೆ ಮಿಠಾಯಿಯಲ್ಲಿ ರೊಡಮೈನ್-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿ ಬ್ಯಾನ್ ಆಗಿತ್ತು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ರಾಜ್ಯದಲ್ಲೂ ಬಾಂಬೆ ಮಿಠಾಯಿಯ ಮಾದರಿಗಳನ್ನು ತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

    ಗೋಬಿ ಮಂಚೂರಿಗೆ ಬಳಕೆ ಮಾಡುವ ಕೆಲವೊಂದು ಕಲರ್‌ಗಳನ್ನು ಬ್ಯಾನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಅಲ್ಲದೇ ಗೋಬಿ ಮಂಚೂರಿಗೆ ಬಳಕೆ ಮಾಡುವ ಮೂರು ಬಗೆಯ ಕಲರ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ. Sunset Yellow ಕಲರ್, Tartrazine, ಸಿಂಥೆಟಿಕ್ ಕಲರ್ ಸಾಸ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದ್ದು, ಕಲರ್‌ಗಳನ್ನ ಬಳಕೆ ಮಾಡದೇ ಗೋಬಿಮಂಚೂರಿಗೆ ಮಾರಾಟಕ್ಕೆ ಅವಕಾಶ ಕೊಡಬಹುದು. ಕಾಟನ್ ಕ್ಯಾಂಡಿ ಸಂಪೂರ್ಣ ಬ್ಯಾನ್‌ಗೆ ನಿರ್ಧರಿಸುವ ಸಾಧ್ಯತೆ ಹೆಚ್ಚಾಗಿದ್ದು, ಸೋಮವಾರ ಮಹತ್ವದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಮಾಡೋ ಸಾಧ್ಯತೆಯಿದೆ. ಇದನ್ನೂ ಓದಿ: ರಣಬಿಸಿಲ ನಡುವೆ ದಾಖಲೆಯ ವಿದ್ಯುತ್ ಬಳಕೆ – ಲೋಡ್ ಶೆಡ್ಡಿಂಗ್ ಭೀತಿ

  • ಗೋಬಿ ಮಂಚೂರಿಯಿಂದ ನಡೆದಿತ್ತು ವೃದ್ಧೆ ಶಾಂತಕುಮಾರಿ ಕೊಲೆ – 5 ವರ್ಷಗಳ ನಂತ್ರ ಆರೋಪಿಗಳು ಅರೆಸ್ಟ್

    ಗೋಬಿ ಮಂಚೂರಿಯಿಂದ ನಡೆದಿತ್ತು ವೃದ್ಧೆ ಶಾಂತಕುಮಾರಿ ಕೊಲೆ – 5 ವರ್ಷಗಳ ನಂತ್ರ ಆರೋಪಿಗಳು ಅರೆಸ್ಟ್

    ಬೆಂಗಳೂರು: ಕೆಂಗೇರಿ (Kengeri)  ವೃದ್ಧೆ ಶಾಂತಕುಮಾರಿ ಕೊಲೆ ಪ್ರಕರಣದ ಆರೋಪಿಗಳನ್ನು ಐದು ವರ್ಷಗಳ ನಂತರ ಪೊಲೀಸರು ಬಂಧಿಸಿದ್ದಾರೆ.

    ಹೌದು, ವೃದ್ದೆ ಶಾಂತಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸರು ಮಹಾರಾಷ್ಟ್ರದ (Maharashtra) ಕೊಲ್ಲಾಪುರದಲ್ಲಿ (Kollapura) ವೃದ್ಧೆಯ ಮಗಳು ಶಶಿಕಲಾ, ಮೊಮ್ಮಗ ಸಂಜಯ್ ಬಂಧಿಸಿದ್ಧಾರೆ. ಇದನ್ನೂ ಓದಿ: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್- ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

    2016ರ ಆಗಸ್ಟ್‌ನಲ್ಲಿ ಕೆಂಗೇರಿ ಸ್ಯಾಟಲೈಟ್‍ನಲ್ಲಿ (Satellite) ಈ ಘಟನೆ ನಡೆದಿದ್ದು, ಕೊಲೆ ಮಾಡಿ ಆರು ತಿಂಗಳು ಮನೆಯಲ್ಲೇ ಶವವನ್ನು ಆರೋಪಿಗಳು ಹೂತಿಟ್ಟಿದ್ದರು. ಶಾಂತಕುಮಾರಿ, ಮಗಳು ಶಶಿಕಲಾ, ಮೊಮ್ಮಗ ಸಂಜಯ್ ಒಟ್ಟಿಗೆ ವಾಸವಾಗಿದ್ದರು. ಒಂದು ದಿನ ಮೊಮ್ಮಗ ಸಂಜಯ್ ಅಜ್ಜಿಗೆ ರಸ್ತೆ ಬದಿಯಲ್ಲಿ ಮಾರುತ್ತಿದ್ದ ಗೋಬಿ ಮಂಚೂರಿಯನ್ನು (Gobi Manchuri) ತಂದು ಕೊಟ್ಟಿದ್ದ. ಆದರೆ ವಿಪರೀತ ಮಡಿವಂತಿಕೆ, ಶಿಸ್ತಿನಿಂದಿರುತ್ತಿದ್ದ ಶಾಂತಮ್ಮ, ಸಂಜಯ್ ಮುಖಕ್ಕೆ ಗೋಬಿ ಮಂಚೂರಿಯನ್ನು ಎಸೆದು ಬೈದಿದ್ದರು.

    ಇದರಿಂದ ಕೋಪಗೊಂಡ ಸಂಜಯ್ ಅಜ್ಜಿ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ನಂತರ ಶವವನ್ನು ಕೆಮಿಕಲ್ ಹಾಕಿ ಕಬೋರ್ಡ್‍ನಲ್ಲಿ ಮುಚ್ಚಿಟ್ಟು, ಊರಿಗೆ ಹೋಗಿ ಬರುತ್ತೇವೆ ಅಂತ ಯಾರಿಗೂ ಅನುಮಾನ ಬಾರದಂತೆ ತಾಯಿ-ಮಗ ಮನೆ ಖಾಲಿ ಮಾಡಿದ್ದರು. ಆರು ತಿಂಗಳ ಬಳಿಕ ಮನೆ ಓನರ್ ರಿಪೇರಿ ಕೆಲಸ ಮಾಡುವ ವೇಳೆ ಶವದ ಅಸ್ಥಿಪಂಜರ ಪತ್ತೆಯಾಗಿತ್ತು. ನಂತರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು ಮತ್ತು ಸಂಜಯ್ ಸ್ನೇಹಿತ ನಂದೀಶ್ ಎಂಬಾತನನ್ನು ಬಂಧಿಸಿದ್ದರು. ಅಲ್ಲದೇ ಪೊಲೀಸರು ಎಷ್ಟೇ ಹುಡುಕಾಟ ನಡೆಸಿದರೂ ತಾಯಿ – ಮಗ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

    ಸದ್ಯ ಕೊಲ್ಲಾಪುರದಲ್ಲಿ ತಾಯಿ, ಮಗ ವಾಸವಾಗಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದರು. ಮೊಮ್ಮಗ ಸಂಜಯ್ ಎಂಜಿನಿಯರಿಂಗ್ ಮಾಡಿಕೊಂಡು ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. ಇದೀಗ ಐದು ವರ್ಷದ ಬಳಿಕ ಕೊಲೆ ಆರೋಪಿಗಳಾದ ಶಶಿಕಲಾ ಮತ್ತು ಸಂಜಯ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಂಗಳೆಯರ ಮನಗೆದ್ದ ʼಗೋಬಿ ಮಂಚೂರಿʼ ಮಾಡುವ ಸಿಂಪಲ್ ವಿಧಾನ

    ಹೆಂಗಳೆಯರ ಮನಗೆದ್ದ ʼಗೋಬಿ ಮಂಚೂರಿʼ ಮಾಡುವ ಸಿಂಪಲ್ ವಿಧಾನ

    ಗೋಬಿ ಎಂದರೇ ಯಾರಿಗೆ ತಾನೇ ಇಷ್ಟವಿರುವುದಿಲ್ಲ. ಅದರಲ್ಲಿಯೂ ಯುವಜನತೆಗೆ ಮಾತ್ರ ಗೋಬಿ ಹೆಸರು ಕೇಳಿದ್ರೆ ತಿನ್ನಲೇ ಬೇಕು ಎಂದು ಹಾತೊರೆಯುತ್ತಾರೆ. ‘ಗೋಬಿ ಮಂಚೂರಿ’ ರೆಸಿಪಿ ತುಂಬಾ ಸಿಂಪಲ್ ಆಗಿದ್ದು, ನೀವು ಮನೆಯಲ್ಲಿ ಟ್ರೈ ಮಾಡಬಹುದು. ಅದು ಹೇಗೆ ಎಂದು ಯೋಚನೆ ಮಾಡುತ್ತಿದ್ದೀರಾ, ಈ ಕೆಳಗೆ ಸೂಚಿಸಿದ ರೀತಿ ಮಾಡಿ ಸವಿಯಿರಿ.

    ಬೇಕಾಗಿರುವ ಪದಾರ್ಥಗಳು:
    * ನೀರು – 4 ಕಪ್
    * ಉಪ್ಪು – ಅರ್ಧ ಟೀಸ್ಪೂನ್
    * ಕಟ್ ಮಾಡಿದ ಗೋಬಿ/ಹೂಕೋಸು – 20
    * ಮೈದಾ – ಅರ್ಧ ಕಪ್
    * ಕಾರ್ನ್ ಫ್ಲೋರ್ – 2 ಕಪ್
    * ಕೆಂಪು ಮೆಣಸಿನ ಪುಡಿ – 2 ಟೀಸ್ಪೂನ್
    * ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಟೀಸ್ಪೂನ್
    * ನೀರು – 1 ಕಪ್
    * ಎಣ್ಣೆ ಹುರಿಯಲು
    * ರುಚಿಗೆ ತಕ್ಕಷ್ಟು ಉಪ್ಪು

    ಮಂಚೂರಿಯನ್ ಸಾಸ್‍ಗಾಗಿ:
    * ಎಣ್ಣೆ – 4 ಟೀಸ್ಪೂನ್
    * ಕಟ್ ಮಾಡಿದ ಬೆಳ್ಳುಳ್ಳಿ, ಶುಂಠಿ – 2 ಟೀಸ್ಪೂನ್
    * ಹಸಿರು ಮೆಣಸಿನಕಾಯಿ – 1
    * ಕಟ್ ಮಾಡಿದ ಈರುಳ್ಳಿ – 1 ಕಪ್
    * ಸ್ಪ್ರಿಂಗ್ ಈರುಳ್ಳಿ – 1 ಕಪ್
    * ಕ್ಯಾಪ್ಸಿಕಂ – ಅರ್ಧ ಕಪ್
    * ಟೊಮೆಟೊ ಸಾಸ್ – 2 ಟೇಬಲ್ಸ್ಪೂನ್
    * ಮೆಣಸಿನಕಾಯಿ ಸಾಸ್ – 1 ಟೀಸ್ಪೂನ್
    * ವಿನೆಗರ್ – 2 ಟೀಸ್ಪೂನ್
    * ಸೋಯಾ ಸಾಸ್ – 2 ಟೀಸ್ಪೂನ್
    * ಮೆಣಸಿನ ಪುಡಿ – 1 ಟೀಸ್ಪೂನ್
    * ರುಚಿಗೆ ತಕ್ಕಷ್ಟು ಉಪ್ಪು

    ಮಾಡುವ ವಿಧಾನ:
    * ಮೊದಲನೆಯದಾಗಿ, ಒಂದು ದೊಡ್ಡ ಪಾತ್ರೆಯಲ್ಲಿ 4 ಕಪ್ ನೀರನ್ನು ತೆಗೆದುಕೊಂಡು ಉಪ್ಪು ಸೇರಿಸಿ ಕುದಿಸಿ.
    * ನೀರು ಕುದಿಯಲು ಬಂದ ನಂತರ ಕಟ್ ಮಾಡಿದ ಗೋಬಿ ಹಾಕಿ 2 ನಿಮಿಷ ಕುದಿಸಿ.
    * ಗೋಬಿ ಬೇಯಿಸಿದ ಮೇಲೆ ನೀರನ್ನು ಸುರಿದು ತಣ್ಣಗಾಗಲು ಬಿಡಿ. ಈಗ ಮೈದಾ ಮತ್ತು ಕಾರ್ನ್‍ನ್ನು ಬಟ್ಟಲಿಗೆ ಹಾಕಿ ಹಿಟ್ಟುನ್ನು ತಯಾರಿಸಿ. ಅದಕ್ಕೆ ಮೆಣಸಿನ ಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮತ್ತು ¼ ಟೀಸ್ಪೂನ್ ಉಪ್ಪು ಸೇರಿಸಿ. ಯಾವುದೇ ರೀತಿಯ ಗಟ್ಟಾಗದಂತೆ ಹಿಟ್ಟು ತಯಾರಿಸಿ.
    * ಈ ಮಿಶ್ರಣಕ್ಕೆ ಗೋಬಿ ಸೇರಿಸಿ ಸಂಪೂರ್ಣವಾಗಿ ಮಿಶ್ರಣ ಮಾಡಿ. ನಂತರ ಇದನ್ನು ನಿಂಬೆ ಹಣ್ಣಿನ ಗಾತ್ರದಲ್ಲಿ ಉಂಡೆ ಮಾಡಿಟ್ಟುಕೊಳ್ಳಿ.


    * ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಗೋಬಿ ಮಿಶ್ರಣವನ್ನು ಡೀಪ್ ಫ್ರೈ ಮಾಡಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.
    * ಮೊದಲನೆಯದಾಗಿ, ದೊಡ್ಡ ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ. ಅದಕ್ಕೆ ಲವಂಗ, ಬೆಳ್ಳುಳ್ಳಿ, ಶುಂಠಿ ಮತ್ತು ಹಸಿರು ಮೆಣಸಿನಕಾಯಿಯನ್ನು ಹಾಕಿ ಸರಿಯಾಗಿ ಫ್ರೈ ಮಾಡಿ.
    * ಅದಕ್ಕೆ ಈರುಳ್ಳಿ ಮತ್ತು ಸ್ಪ್ರಿಂಗ್ ಈರುಳ್ಳಿ, ಕ್ಯಾಪ್ಸಿಕಂ ಸೇರಿಸಿ 5 ನಿಮಿಷ ಉರಿಯಿರಿ.
    * ಟೊಮೆಟೊ ಸಾಸ್, ಮೆಣಸಿನಕಾಯಿ ಸಾಸ್, ವಿನೆಗರ್, ಸೋಯಾ ಸಾಸ್, ಪೆಪರ್ ಮತ್ತು ಉಪ್ಪು ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಒಂದು ನಿಮಿಷ ಬೇಯಿಸಿ.
    * ಕಾರ್ನ್ ಫ್ಲೊರ್‌ ಸ್ವಲ್ಪ ಹಾಕಿ ಗ್ರೇವಿ ಸ್ವಲ್ಪ ಗಟ್ಟಿಯಾಗುವವರೆಗೂ ಫ್ರೈ ಮಾಡಿ. ಇದಕ್ಕೆ ಹುರಿದ ಗೋಬಿಯನ್ನು ಸೇರಿಸಿ. ಸಾಸ್ ಚೆನ್ನಾಗಿ ಮಿಶ್ರಣ ಮಾಡಿ.


    – ಅಂತಿಮವಾಗಿ, ಗೋಬಿ ಮಂಚೂರಿಯನ್‍ಯನ್ನು ಸರ್ವಿಂಗ್ ಬೌಲ್‍ಗೆ ವರ್ಗಾಯಿಸಿ, ಕತ್ತರಿಸಿದ ಸ್ಪ್ರಿಂಗ್ ಈರುಳ್ಳಿಯಿಂದ ಅಲಂಕರಿಸಿ ಸರ್ವ್ ಮಾಡಿ.

    Live Tv
    [brid partner=56869869 player=32851 video=960834 autoplay=true]