Tag: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

  • 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ (Remona Evette Pereira) 7 ದಿನಗಳ ಕಾಲ 170 ಗಂಟೆ ಭರತನಾಟ್ಯ (Bharatanatyam) ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ (Golden Book of World Records) ದಾಖಲೆ ಮಾಡಿದ್ದಾರೆ.

    ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ಮಾಡಿದ್ದು, ಪ್ರದರ್ಶನದ ಪ್ರತಿ ದಿನ ರಾತ್ರಿ ಒಂದು ಗಂಟೆ ಹಾಗೂ ಮೂರು ಗಂಟೆಗೊಮ್ಮೆ 15 ನಿಮಿಷಗಳ ಕಾಲ ಮಾತ್ರ ವಿರಾಮ ಇರಲಿದೆ. ಈ ಸಮಯದಲ್ಲಿ ಕನಿಷ್ಟ ಪ್ರಮಾಣದ ಆಹಾರ ಸೇವಿಸುತ್ತಾಳೆ ರೆಮೋನಾ. ನಿರಂತರ ವೈದ್ಯರ ಸಲಹೆ, ಫಿಸಿಯೋಥೆರಪಿ ಆರೈಕೆಯೊಂದಿಗೆ ಈ ಪ್ರದರ್ಶನ ನಡೆಸಿದ್ದಾಳೆ. ಇದನ್ನೂ ಓದಿ: ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

    ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲರಿಪ್ಪು ಜತಿಸ್ವರ, ವರ್ಣ, ಪದವರ್ಣ, ತಿಲ್ಲಾನಗಳೊಂದಿಗೆ ಲಘು ಶಾಸ್ತ್ರೀಯ, ದೇವರನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ್ದಾಳೆ ರೆಮೋನಾ. ಈ ಹಿಂದೆ ಮಹಾರಾಷ್ಟ್ರದ ಸೃಷ್ಟಿ ಸುಧೀರ್ ಜಗತಾಪ್ ಎಂಬ 16 ವರ್ಷದ ಬಾಲಕಿ ನಿರಂತರ 127 ಗಂಟೆ ಕಥಕ್ ನೃತ್ಯ ಪ್ರದರ್ಶನ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಳು. ಇದೀಗ ರೆಮೋನಾ ಈ ದಾಖಲೆಯನ್ನು ಮುರಿದು 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿದ್ದಾಳೆ. ಈಕೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಷ್ಯಾದ ಮುಖ್ಯಸ್ಥ ಡಾ.ಮನೀಶ್ ವಿಷ್ನೋಯಿ ಅವರು ನೂತನ ದಾಖಲೆಯ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ.  ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

  • ಚಕ್ರಾಸನದ ರೇಸ್- ತನುಶ್ರೀ ಪಿತ್ರೋಡಿಯಿಂದ ಮತ್ತೊಂದು ವಿಶ್ವದಾಖಲೆ

    ಚಕ್ರಾಸನದ ರೇಸ್- ತನುಶ್ರೀ ಪಿತ್ರೋಡಿಯಿಂದ ಮತ್ತೊಂದು ವಿಶ್ವದಾಖಲೆ

    – ಪಬ್ಲಿಕ್ ಹೀರೋ ತನುಶ್ರೀಯ ಐದನೇ ವಿಶ್ವದಾಖಲೆ

    ಉಡುಪಿ: ಯೋಗಾಸನದ ಮೂಲಕವೇ ನಾಲ್ಕು ವಿಶ್ವದಾಖಲೆ ಮಾಡಿರುವ ಕೇವಲ 10 ವರ್ಷದ ತನುಶ್ರೀ ಮತ್ತೊಂದು ದಾಖಲೆ ಮುಡಿಗೇರಿಸಿಕೊಂಡಿದ್ದಾಳೆ.

    ಅತೀ ಕಲ್ಲಿಷ್ಟಕರ ಚಕ್ರಾಸನ ರೇಸ್ ಮಾಡುವ ಮೂಲಕ ದಾಖಲಿ ಬರೆದಿದ್ದಾರೆ. ಉಡುಪಿಯ ಉದ್ಯಾವರದಲ್ಲಿ ಈ ಸಾಧನೆ ದಾಖಲೆಯಾಗಿದ್ದು, ಈಗಾಗಲೇ ನಾಲ್ಕು ವಿಶ್ವದಾಖಲೆ ಹೊಂದಿರುವ ಪಬ್ಲಿಕ್ ಹೀರೋ ತನುಶ್ರೀ ಪಿತ್ರೋಡಿ ಇದೀಗ ಅತೀ ಕ್ಲಿಷ್ಟಕರ ಚಕ್ರಾಸನ ರೇಸ್ ಮಾಡಿದ್ದಾಳೆ. 100 ಮೀಟರ್ ಚಕ್ರಾಸನ ರೇಸನ್ನು ಕೇವಲ 1.14 ನಿಮಿಷದಲ್ಲಿ ಮುಗಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾಳೆ.

    10 ವರ್ಷದ ಪುಟಾಣಿಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿಂದ ನೋಡುತ್ತಿದೆ. ಹಿಮಾಚಲ ಪ್ರದೇಶದ ಸಮೀಕ್ಷಾ ಡೋಗ್ರಾ ಹೆಸರಿನಲ್ಲಿದ್ದ ದಾಖಲೆಯನ್ನು ಉಡುಪಿಯ ತನುಶ್ರೀ ಮುರಿದಿದ್ದಾಳೆ. ಸಮೀಕ್ಷಾ ಇದೇ ದೂರ ಕ್ರಮಿಸಲು ಆರು ನಿಮಿಷ ತೆಗೆದುಕೊಂಡಿದ್ದರು. ಆದರೆ ತನುಶ್ರೀ ಕೇವಲ 1.14 ನಿಮಿಷಗಳಲ್ಲಿ 100 ಮೀ. ಕ್ರಮಿಸುವ ಮೂಲಕ ದಾಖಲೆ ಮುರಿದಿದ್ದಾರೆ. ಯೋಗಾಸನದಲ್ಲೇ ರೇಸ್ ಮಾಡೋದು ಅಂದ್ರೆ ಅಸಾಧ್ಯ ಎನ್ನುವವರೇ ಹೆಚ್ಚು. ಇಂತಹ ಸಂದರ್ಭದಲ್ಲಿ ತನುಶ್ರೀ ಕೇವಲ 1.14 ನಿಮಿಷದಲ್ಲಿ 100 ಮೀಟರ್ ಕ್ರಮಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

    ತನುಶ್ರೀ ಈ ಹಿಂದೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ್ದಾರೆ 2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಕೇವಲ ಒಂದು ನಿಮಿಷದಲ್ಲಿ 19 ಬಾರಿ ಮಾಡಿದ್ದಾರೆ. ಅಲ್ಲದೆ, 2018ರಲ್ಲಿ ಎದೆಯ ಭಾಗ ಮತ್ತು ತಲೆಯನ್ನು ಸ್ಥಿರವಾಗಿರಿಸಿ ಉಳಿದ ಭಾಗವನ್ನು 1.42 ನಿಮಿಷದಲ್ಲಿ 42 ಬಾರಿ ತಿರುಗಿಸಿ ದಾಖಲೆ ಮಾಡಿದ್ದರು. 2019ರಲ್ಲಿ ಇದೇ ಭಂಗಿಯಲ್ಲಿ ತನ್ನ ಹಿಂದಿನ ದಾಖಲೆ ಮುರಿದಿದ್ದರು. ನಂತರ ಧನುರಾಸನ ಭಂಗಿಯನ್ನು 1.40 ನಿಮಿಷದಲ್ಲಿ 96 ಬಾರಿ ಮಾಡಿ ಮತ್ತೊಂದು ದಾಖಲೆಗೆ ಕಾರಣರಾಗಿದ್ದರು. ಇದೀಗ ಐದನೇ ವಿಶ್ವದಾಖಲೆ ಮಾಡಿದ್ದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ತನುಶ್ರೀ ನಮ್ಮ ಪಬ್ಲಿಕ್ ಹೀರೋ ಎಂಬುದು ಮತ್ತೊಂದು ಹೆಮ್ಮೆಯ ವಿಚಾರವಾಗಿದೆ.

  • ಒಂದೇ ವೇದಿಕೆಯಲ್ಲಿ 4,500 ಮಂದಿ ‘ವಂದೇ ಮಾತರಂ’ ಗೀತೆ ಗಾಯನ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಲು ಸಿದ್ಧತೆ

    ಒಂದೇ ವೇದಿಕೆಯಲ್ಲಿ 4,500 ಮಂದಿ ‘ವಂದೇ ಮಾತರಂ’ ಗೀತೆ ಗಾಯನ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಲು ಸಿದ್ಧತೆ

    ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಉಡುಪಿಯಲ್ಲಿ ಇಂದು ವಿಶ್ವದಾಖಲೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಒಂದೇ ವೇದಿಕೆಯಲ್ಲಿ 4500 ಮಂದಿ ಸಂಪೂರ್ಣ ವಂದೇ ಮಾತರಂ ಹಾಡನ್ನು ಗಾಯನ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡುವ ಹಾದಿಯಲ್ಲಿದ್ದಾರೆ.

    ಜಿಲ್ಲೆಯ ಸಂವೇದನಾ ಫೌಂಡೇಶನ್ಸ್ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು, ಮಲ್ಪೆ ಪೊಲೀಸ್ ಸ್ಟೇಷನ್ ಮೈದಾನದಿಂದ ಬೃಹತ್ ಮೆರವಣಿಗೆಯಲ್ಲಿ 1,750 ಅಡಿ ಉದ್ದದ ತಿರಂಗವನ್ನು ಸುಮಾರು ಒಂದು ಸಾವಿರ ಮಕ್ಕಳು ಹೊತ್ತು ಸಾಗುತ್ತಾರೆ. ಸುಮಾರು 10 ಸಾವಿರ ಮಂದಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು ರಾಷ್ಟ್ರ ಧ್ವಜಕ್ಕೆ ಹೂವು ಹಾಕಿ ಗೌರವ ವಂದನೆ ಸಲ್ಲಿಸಲಿದ್ದಾರೆ.

    ಮಲ್ಪೆ ಬೀಚ್‍ವರೆಗೆ ಮೆರವಣಿಗೆ ಸಾಗಿ ಅಲ್ಲಿ 4500 ವಿದ್ಯಾರ್ಥಿಗಳು ಒಂದೇ ಬಾರಿ ವಂದೇ ಮಾತರಂ ಹಾಡುತ್ತಾರೆ. ಸಾಮೂಹಿಕ ಹಾಡಿಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅಧಿಕಾರಿಗಳು ಸಾಕ್ಷಿಯಾಗಲಿದ್ದಾರೆ. ಈ ವಿಶೇಷ ಕಾರ್ಯಕ್ರಮಕ್ಕಾಗಿ ಆಂಧ್ರಪ್ರದೇಶದಿಂದ ಅರ್ಧ ಕಿಲೋಮೀಟರ್ ಉದ್ದದ ತಿರಂಗವನ್ನು ತರಿಸಿಕೊಳ್ಳಲಾಗಿದೆ.

    ಕಾರ್ಯಕ್ರಮದಲ್ಲಿ 40 ಭಜನಾ ಮಂಡಳಿ, ವಿವಿಧ ಸಂಘ ಸಂಸ್ಥೆಗಳು, 24 ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಸೇವ್ ನೇಚರ್ ಎಂಬ ಬ್ಯಾಡ್ಜ್, ಸಮವಸ್ತ್ರ ತೊಟ್ಟು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ರಿಂದ ಸಂಜೆ ಆರು ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದೆ.

    ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ 25 ಸಾವಿರ ಜನ ಪಾಲ್ಗೊಳ್ಳಲಿದ್ದು, ಸಿನೆಮಾ ಕ್ಷೇತ್ರದ 20 ಹಿನ್ನೆಲೆ ಗಾಯಕರು ವಂದೇ ಮಾತರಂ ಹಾಡಿಗೆ ಧನಿಗೂಡಿಸಲಿದ್ದಾರೆ. ಮೂವರು ವಿದೇಶಿಗರು ವಂದೇ ಮಾತರಂ ಹಾಡೋದು ಮತ್ತೊಂದು ವಿಶೇಷ. ಟ್ಯಾಬ್ಲೋಗಳು, ಸಾಂಸ್ಕೃತಿಕ ತಂಡಗಳು, ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.

    ಸಾಂಧರ್ಬಿಕ ಚಿತ್ರ