Tag: ಗೋಲ್ಡಿ ಬ್ರಾರ್

  • ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು

    ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು

    ನವದೆಹಲಿ: ಬೆಂಗಳೂರಿನಲ್ಲಿ (Bengaluru) ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಮುನಾವರ್ ಫಾರೂಕಿ (Munawar Faruqui) ಹತ್ಯೆಗೆ ಯತ್ನ ನಡೆಸಿದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಸದ್ಯ ವಿದೇಶದಲ್ಲಿರುವ ಗ್ಯಾಂಗ್‌ಸ್ಟಾರ್‌ಗಳಾದ​​ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ (Rohit Godara, Goldy Brar) ಸೂಚನೆಯ ಮೇರೆಗೆ ಮುನಾವರ್ ಫಾರೂಕಿಯನ್ನು ಹತ್ಯೆ ಮಾಡಲು ಹಂತಕರು ಸಂಚು ರೂಪಿಸಿದ್ದ ವಿಚಾರ ದೆಹಲಿ ಪೊಲೀಸರ ತನಿಖೆಯಿಂದ ಹೊರ ಬಿದ್ದಿದೆ.

    ಡಿಸೆಂಬರ್‌ 2024 ರಲ್ಲಿ ಹರಿಯಾಣದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಗಳಾದ ಶೂಟರ್ ರಾಹುಲ್ ಮತ್ತು ಸಾಹಿಲ್ ದೆಹಲಿಯಲ್ಲಿರುವ ಬಗ್ಗೆ ಖಚಿತ ಮಾಹಿತಿ ದೆಹಲಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಆಧಾರದ ಮೇಲೆ ಇಬ್ಬರನ್ನು ಹಿಡಿಯಲು ಪೊಲೀಸರು ತೆರಳಿದ್ದರು.

     
    ಗುರುವಾರ ಬೆಳಗ್ಗೆ 3 ಗಂಟೆಗೆ ದೆಹಲಿಯ ಐತ್ಪುರ್-ಕಾಳಿಂದಿ ಕುಂಜ್ ರಸ್ತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದಇಬ್ಬರನ್ನು ನಿಲ್ಲಿಸುವಂತೆ ಕೇಳಿದಾಗ ಇವರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಪೊಲೀಸರು ಇವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

    ವಿಚಾರಣೆಯ ಸಂದರ್ಭದಲ್ಲಿ ಹಿಂದೂ (Hindu) ಧರ್ಮ ಮತ್ತು ದೇವರನ್ನು ಅವಹೇಳನ ಮಾಡುತ್ತಿರುವ ಮುನಾವರ್ ಫಾರೂಕಿ ಹತ್ಯೆ ನಡೆಸುವಂತೆ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಕಡೆಯಿಂದ ನಮಗೆ ಸೂಚನೆ ಬಂದಿತ್ತು. ದೆಹಲಿಯಲ್ಲಿ ಮುನಾವರ್ ಫಾರೂಕಿ ಇರುವ ವಿಚಾರ ತಿಳಿದು ಹತ್ಯೆ ಮಾಡಲು ನಾವು ಬಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ದೆಹಲಿಗೆ ಬರುವ ಮೊದಲು ಮುಂಬೈ ಮತ್ತು ಬೆಂಗಳೂರಿನಲ್ಲಿ ಫಾರೂಕಿ ಹತ್ಯೆಗೆ ಪ್ಲ್ಯಾನ್‌ ಮಾಡಿದ್ದರು. ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆದ ಜಾಗದ ಹೊರ ಭಾಗದಲ್ಲಿ ಫಾರೂಕಿ ಹತ್ಯೆಗೆ ಸಂಚು ರೂಪಿಸಿ ಕಾಯುತ್ತಿದ್ದರು. ಆದರೆ ಫಾರೂಕಿ ಬೇರೆ ಕಾರಿನಲ್ಲಿ ಹೊರಟುಹೋಗಿದ್ದರಿಂದ ಕೊನೆ ಕ್ಷಣದಲ್ಲಿ ಈ ಪ್ಲ್ಯಾನ್‌ ವಿಫಲವಾಗಿತ್ತು ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    2021 ರಲ್ಲಿ ದ್ವೇಷ ಭಾಷಣ ಮಾಡಿದ್ದಕ್ಕೆ ಫಾರೂಕಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿತ್ತು. 1 ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಜಾಮೀನು ಮಂಜೂರು ಮಾಡಿತ್ತು. ಕಳೆದ ವರ್ಷ ಮುಂಬೈ ಪೊಲೀಸರು ಅಕ್ರಮ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿದ ಬಳಿಕ ಮತ್ತೆ ಫಾರೂಕಿಯ ಬಂಧನವಾಗಿತ್ತು.  ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

    ಫಾರೂಕಿ 2024 ರ ಹಿಂದಿ  ಬಿಗ್ ಬಾಸ್ ಗೆದ್ದಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 1.4 ಕೋಟಿ ಫಾಲೋವರ್‌ಗಳನ್ನು ಹೊಂದಿದ್ದಾರೆ.

  • ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ನವದೆಹಲಿ: ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ (Goldy Brar) ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರ್ಕಾರ ಘೋಷಿಸಿದೆ.

    ದರೋಡೆಕೋರ ಗೋಲ್ಡಿ ಬ್ರಾರ್‌ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದಕ ಎಂದು ಘೋಷಿಸಿದೆ. ಈತ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ (Babbar Khalsa International) ಜೊತೆಗೆ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ (Home Ministry) ಪ್ರಕಟಣೆಯಲ್ಲಿ ತಿಳಿಸಿದೆ.

    ಗೋಲ್ಡಿ ಬ್ರಾರ್ ಗಡಿಯಾಚೆಗಿನ ಏಜೆನ್ಸಿಗಳಿಂದ ಬೆಂಬಲಿತನಾಗಿ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದು ಉಗ್ರವಾದದ ಆಮೂಲಾಗ್ರ ಸಿದ್ಧಾಂತ ಪ್ರತಿಪಾದಿಸಿದ್ದಾನೆ. ರಾಷ್ಟ್ರವಾದದ ಪರ ನಾಯಕರಿಗೆ ಬೆದರಿಕೆ ಕರೆಗಳನ್ನ ಹಾಕಿದ್ದಾನೆ. ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾನೆ ಎಂದು ಗೃಹ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಮತ್ತು ಸ್ಫೋಟಕಗಳನ್ನ ಕಳ್ಳಸಾಗಣಿಕೆಯಲ್ಲೂ ತೊಡಗಿಸಿಕೊಂಡಿದ್ದು, ಹತ್ಯೆಗಳನ್ನು ನಡೆಸಲು ಶಾರ್ಪ್ ಶೂಟರ್‌ಗಳಿಗೆ ಸರಬರಾಜು ಮಾಡುತ್ತಿದ್ದ. ಆತನ ಸಹಚರರು ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳನ್ನು ನಡೆಸುವುದು ಮತ್ತು ಇತರ ದೇಶ ವಿರೋಧಿ ಯೋಜನೆಗಳ ಮೂಲಕ ಪಂಜಾಬ್ ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹಾಳುಮಾಡಲು ಪಿತೂರಿ ನಡೆಸಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದೆ.

    ಸಿಧು ಮೂಸೆವಾಲಾ ಹತ್ಯೆಯ ದಿನಗಳ ನಂತರ, 2022ರ ಜೂನ್‌ನಲ್ಲಿ ಗೋಲ್ಡಿ ಬ್ರಾರ್ ಅವರ ಹಸ್ತಾಂತರಕ್ಕಾಗಿ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು. ಆ ನಂತರ ಕ್ಯಾಲಿಫೋರ್ನಿಯಾದಲ್ಲಿ ಆತನನ್ನ ಬಂಧಿಸಲಾಗಿತ್ತು ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ರಾಮಜನ್ಮಭೂಮಿ ನಮಗೆ ಮತ ಪಡೆಯುವ ರಾಜಕೀಯ ವಿಚಾರವಲ್ಲ: ರಾಜನಾಥ್ ಸಿಂಗ್

  • ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ : ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ

    ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ : ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ

    ಬಾಲಿವುಡ್ (Bollywood) ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಹೇಳಿಕೆ ನೀಡಿದ್ದ. ಅವನ ತಂಡ ಅನೇಕ ಸದಸ್ಯರು ಪೊಲೀಸರ ಕೈಗೆ ಸಿಕ್ಕಿಬಿದ್ದಾಗಲೂ ಸಲ್ಮಾನ್ ಕೊಲ್ಲುವ ಮಾತುಗಳನ್ನು ಅವರು ಆಡಿದ್ದರು. ಹೀಗಾಗಿ ಸಲ್ಮಾನ್ ಖಾನ್ ಅವರಿಗೆ ವಿಶೇಷ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಕೇವಲ ಸಲ್ಮಾನ್ ಗೆ ಮಾತ್ರವಲ್ಲ, ಅವರ ತಂದೆ ಮತ್ತು ಕುಟುಂಬಕ್ಕೆ ಭದ್ರತೆ ನೀಡಲಾಗಿದೆ. ಲಾರೆನ್ಸ್ ತಣ್ಣಗಾದ ಎನ್ನುವ ಹೊತ್ತಿಗೆ ಇದೀಗ ಮತ್ತೊಬ್ಬ ಗ್ಯಾಂಗ್ ಸ್ಟಾರ್ ಸಲ್ಮಾನ್ ಕೊಲ್ಲುವ ಕುರಿತು ಮಾತನಾಡಿದ್ದಾನೆ.

    ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಹೇಳಿಕೊಂಡಿರುವ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ (Goldie Brar) ನನ್ನ ಮುಂದಿನ ಟಾರ್ಗೆಟ್ ಸಲ್ಮಾನ್ ಖಾನ್ ಎಂದು ಹೇಳುವ ಮೂಲಕ ಆತಂಕ ಸೃಷ್ಟಿ ಮಾಡಿದ್ದಾನೆ. ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಗೋಲ್ಡಿ ಬ್ರಾರ್, ‘ನನ್ನ ಮುಂದಿನ ಗುರಿ ಇರುವುದು ಸಲ್ಮಾನ್ ಖಾನ್ ನನ್ನು ಕೊಲ್ಲುವುದು. ಕೊಂದೇ ಕೊಲ್ಲುತ್ತೇನೆ. ನನ್ನಿಂದ ಅವನು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಸಂದರ್ಶನದಲ್ಲಿ ಹೇಳಿದ್ದಾನೆ.

    salman

    ರಾಷ್ಟ್ರೀಯ ವಾಹಿನಿಯಲ್ಲಿ  ಹಲವು ರಾಜ್ಯಗಳ ಪೊಲೀಸರಿಗೆ ಬೇಕಾಗಿರುವ, ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗೋಲ್ಡಿ ಬ್ರಾರ್ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹವೂ ಹೆಚ್ಚಾಗಿದೆ.

    ಈಗಾಗಲೇ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ.

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾರೆ. ಜೈಲಿನಿಂದಲೇ ಸಲ್ಮಾನ್ ಬಗ್ಗೆ ಕೊಲ್ಲುವ ಮಾತುಗಳನ್ನು ಆಡಿದ್ದ.

    ಈ ಹಿಂದೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದ.

     

    ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎನ್ನುವ ಮಾತುಗಳನ್ನೂ ಆಡಿದ್ದ. ಲಾರೆನ್ಸ್ ನಂತರ ಇದೀಗ ಗೋಲ್ಡಿ ಬ್ರಾರ್ ಕೂಡ ಅದೇ ಮಾತುಗಳನ್ನು ಆಡಿದ್ದಾನೆ.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ನವದೆಹಲಿ: ಪಂಜಾಬಿ ಖ್ಯಾತ ಗಾಯಕ (Punjabi Singer) ಹಾಗೂ ರಾಜಕಾರಣಿ ಸಿಧು ಮೂಸೆವಾಲಾ (Sidhu Moose Wala) ಹತ್ಯೆಯ ಮಾಸ್ಟರ್ ಮೈಂಡ್ (Mastermind) ಗೋಲ್ಡಿ ಬ್ರಾರ್‌ನನ್ನು (Goldy Brar) ಕ್ಯಾಲಿಫೋರ್ನಿಯಾದಲ್ಲಿ (California) ಬಂಧಿಸಲಾಗಿದೆ. ಸಿಧು ಹತ್ಯೆಯ ಜವಾಬ್ದಾರಿ ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.

    ಭಾರತದ ಗುಪ್ತಚರ ಸಂಸ್ಥೆಗಳು ಅಂತಾರಾಷ್ಟ್ರೀಯ ಮೂಲಗಳಿಂದ ಈ ಮಾಹಿತಿಯನ್ನು ಪಡೆದಿವೆ. ಆದರೆ ಗೋಲ್ಡಿ ಬ್ರಾರ್ ಬಂಧನದ ಬಗ್ಗೆ ಕ್ಯಾಲಿಫೋರ್ನಿಯಾ ಸರ್ಕಾರ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

    ಆದರೆ ಭಾರತದ ಗುಪ್ತಚರ ಇಲಾಖೆಗಳಾದ ಆರ್‌ಎಡಬ್ಲ್ಯೂ, ಐಬಿ, ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಮತ್ತು ಪಂಜಾಬ್ ಗುಪ್ತಚರ ಸಂಸ್ಥೆ ಈ ಮಾಹಿತಿಯನ್ನು ಪಡೆದಿರುವುದಾಗಿ ತಿಳಿಸಿವೆ. ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಪತ್ತೆಹಚ್ಚಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಕೆನಡಾ ಮೂಲದವನಾಗಿದ್ದಾನೆ. ಸಿಧು ಮೂಸೆವಾಲಾ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು. ಈ ಹತ್ಯೆಯ ಮಾಸ್ಟರ್ ಮೈಂಡ್ ಇದೇ ಬ್ರಾರ್ ಎನ್ನಲಾಗಿದೆ.

    ಸಿಧು ಸಾವಿನ ಕೆಲ ದಿನಗಳ ಬಳಿಕ ಬ್ರಾರ್ ಸಿಧು ಹತ್ಯೆಗೆ ತಾನೇ ಕಾರಣ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದ. ಸಿಧು ಬ್ರಾರ್‌ನ ವಿರೋಧಿ ಗ್ಯಾಂಗ್‌ನೊಂದಿಗೆ ಭಾಗಿಯಾಗಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಮೂಸೆವಾಲಾ ವಿರುದ್ಧ ಸೇಡು ತೀರಿಸಿಕೊಳ್ಳಲು ಕೊಲೆಯ ಯೋಜನೆ ಹಾಕಿದ್ದಾಗಿ ತಿಳಿಸಿದ್ದ. ಇದನ್ನೂ ಓದಿ: ಪಾಕಿಸ್ತಾನಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಕೊಡಲ್ಲ – ರಷ್ಯಾ

    Live Tv
    [brid partner=56869869 player=32851 video=960834 autoplay=true]