Tag: ಗೋಲ್ಡ್ ಬಿಸ್ಕೆಟ್

  • ರಾಕಿಭಾಯ್ ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್, ಬಿಸ್ಕೆಟ್

    ರಾಕಿಭಾಯ್ ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್, ಬಿಸ್ಕೆಟ್

    ದೇ ಮೊದಲ ಬಾರಿಗೆ ಕನ್ನಡ ಸಿನಿಮಾ ನಟನೊಬ್ಬನ ಗೋಲ್ಡ್ ಕಾಯಿನ್ ಮತ್ತು ಗೋಲ್ಡ್ ಬಿಸ್ಕೆಟ್ ರಿಲೀಸ್ ಆಗಿದೆ. ಮೊನ್ನೆಯಷ್ಟೇ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾಗೆ ಪ್ರವಾಸ ಬೆಳೆಸಿದ್ದರು. ಅಲ್ಲಿ ಬಂಗಾರದ ಅಂಗಡಿಯ ಉದ್ಘಾಟನೆಯನ್ನು ಅವರು ಮಾಡಿದ್ದರು. ಅದೇ ಅಂಗಡಿಯವರು ರಾಕಿಭಾಯ್ (Rakibhai) ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್ ಮತ್ತು ಬಿಸ್ಕೆಟ್ (Gold Biscuit) ಬಿಡುಗಡೆ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಮಲೇಷ್ಯಾಗೆ ಹೋಗಿರುವ ಸಂದರ್ಭದಲ್ಲೇ ಯಶ್ ತಮ್ಮ ಮುಂದಿನ (New Movie) ಸಿನಿಮಾದ ಬಗ್ಗೆ ಮತ್ತೊಂದು ಅಪ್ ಡೇಟ್ (Update) ನೀಡಿದ್ದಾರೆ. ಮಲೇಷ್ಯಾದಲ್ಲಿ ಹೊಸ ಸಿನಿಮಾದ ಕುರಿತು ಮಾತನಾಡಿರುವ ಯಶ್, ‘ದೊಡ್ಡ ಸಿನಿಮಾವನ್ನು ಮಾಡುತ್ತೇನೆ ಎಂದು ಹೇಳುತ್ತಿಲ್ಲ, ಒಳ್ಳೆಯ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅದೊಂದು ಮಾಸ್ ಸಿನಿಮಾವಾಗಿರಲಿದೆ. ಸದ್ಯದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಹುಟ್ಟ ಹಬ್ಬಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡ ‘ಘೋಸ್ಟ್’ ಟೀಮ್

    ರಾಕಿಭಾಯ್ ಯಶ್ (Yash) ಮೊನ್ನೆ ಮಲೇಷ್ಯಾಗೆ ಹಾರಿದ್ದರು. ನಾಲ್ಕೈದು ಗೆಳೆಯರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಅವರು, ಮಲೇಷ್ಯಾದಲ್ಲಿ (Malaysia) ಚಿನ್ನದ ಅಂಗಡಿಯೊಂದರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ, ಮಲೇಷ್ಯಾದಲ್ಲಿ ವಾಸವಿರುವ ಅವರ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಶ್ ಅವರಿಗೆ ನೀಡಲಾದ ಗಿಫ್ಟ್ (Gift) ಸಾಕಷ್ಟು ವೈರಲ್ ಕೂಡ ಆಗಿದೆ.

     

    ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು (Group Photo) ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಅವರೇ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದರು ಯಶ್. ಆ ವಿಡಿಯೋ ಕೂಡ ವೈರಲ್ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 9.65 ಲಕ್ಷ ರೂ. ಮೌಲ್ಯದ ಗೋಲ್ಡ್ ಬಿಸ್ಕೆಟ್ ಮಾರಲು ಹೋದ ಏರ್‌ಪೋರ್ಟ್ ಸಿಬ್ಬಂದಿ ಅಂದರ್

    9.65 ಲಕ್ಷ ರೂ. ಮೌಲ್ಯದ ಗೋಲ್ಡ್ ಬಿಸ್ಕೆಟ್ ಮಾರಲು ಹೋದ ಏರ್‌ಪೋರ್ಟ್ ಸಿಬ್ಬಂದಿ ಅಂದರ್

    ಬೆಂಗಳೂರು: ಸುಮಾರು 9.65 ಲಕ್ಷ ರೂ. ಮೌಲ್ಯದ ಎರಡು ಗೋಲ್ಡ್ ಬಿಸ್ಕೆಟ್ ಮಾರಲು ಹೋದ ಏರ್‌ಪೋರ್ಟ್ ಸಿಬ್ಬಂದಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌಚಾಲಯ ಸ್ವಚ್ಚತೆ ಕೆಲಸ ಮಾಡುವ ಅಂಜಪ್ಪ ಬಂಧಿತ ಆರೋಪಿ. ಅಂಜಪ್ಪ ಚಿಂತಾಮಣಿ ತಾಲೂಕು ಶೆಟ್ಟಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಿಂತಾಮಣಿ ನಗರದ ಬಾಲಾಜಿ ಜ್ಯೂವೆಲ್ಲರ್ಸ್‍ನಲ್ಲಿ ತನ್ನ ಬಳಿ ಇದ್ದ ಚಿನ್ನದ ಬಿಸ್ಕೆಟ್‍ಗಳನ್ನು ಮಾರಾಟ ಮಾಡಲು ಮುಂದಾಗಿದ್ದನು. ಸುಮಾರು 9.65 ಲಕ್ಷ ರೂ. ಮೌಲ್ಯದ 232 ಗ್ರಾಂ ತೂಕದ ಎರಡು ಚಿನ್ನದ ಬಿಸ್ಕೆಟ್ ಗಳನ್ನು ಮಾರಾಟ ಮಾಡಲು ಅಂಜಪ್ಪ ಹೋಗಿದ್ದನು.

    ಈ ವೇಳೆ ಅನುಮಾನಗೊಂಡ ಚಿನ್ನದಂಗಡಿ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿಂತಾಮಣಿ ಪೊಲೀಸರು ಅಂಜಪ್ಪನನ್ನು ಬಂಧಿಸಿದ್ದಾರೆ. ಅಲ್ಲದೇ ಅಂಜಪ್ಪ ಬಳಿ ಒಟ್ಟು 6 ಚಿನ್ನದ ಬಿಸ್ಕೆಟ್‍ಗಳು ಪತ್ತೆಯಾಗಿದೆ. ಏರ್‌ಪೋರ್ಟ್‌ನಲ್ಲಿ ಅಪರಿಚಿತ ವ್ಯಕ್ತಿಗಳು ತನಗೆ ಚಿನ್ನದ ಬಗ್ಗೆ ಮಾಹಿತಿ ಕೊಟ್ಟಿದ್ದರು ಎಂದನು. ಕಸ್ಟಮ್ಸ್ ಅಧಿಕಾರಿಗಳಿಗೆ ಹೆದರಿ ಅಂಜಪ್ಪಗೆ ಅಪರಿಚಿತರು ಚಿನ್ನದ ಬಿಸ್ಕೆಟ್ ನೀಡಿ ಪರಾರಿಯಾಗಿದ್ದರು. ಏರ್‌ಪೋರ್ಟ್‌ನಿಂದ ಹೊರಬಂದ ಬಳಿಕ ಚಿನ್ನವನ್ನು ವಾಪಸ್ ಕೊಡುವಂತೆ ಹೇಳಿದ್ದರು, ಆದರೆ ಅಂಜಪ್ಪ ಚಿನ್ನವನ್ನು ವಾಪಸ್ ಕೊಡದೆ ತಾನೇ ಇಟ್ಟುಕೊಂಡಿದ್ದನು.