ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ಜುಲೈ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿದೆ.
ರನ್ಯಾರಾವ್ ತಾಯಿ ರೋಹಿಣಿ ಹೈಕೋರ್ಟ್ಗೆ (High Court) ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿಆರ್ಐ (DRI) ಅಧಿಕಾರಿಗಳು ನನ್ನ ಮಗಳನ್ನು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಈಗಾಗಲೇ ರನ್ಯಾಗೆ ಜಾಮೀನು ಮಂಜೂರಾಗಿದೆ ಎಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಇದಕ್ಕೆ ಹೈಕೋರ್ಟ್ ಅಲ್ಲಿ ಆಕ್ಷೇಪಣೆ ಎತ್ತಿದ ನ್ಯಾಯಾಲಯ ರನ್ಯಾ ಸೇರಿದಂತೆ 4 ಆರೋಪಿಗಳ ವಿರುದ್ಧ ಕಾಫೆಪೋಸಾ ಆಕ್ಟ್ ಹಾಕಲಾಗಿದೆ. ಕಾಫೆಪೋಸಾ ಇತ್ಯರ್ಥ ಮಾಡೋದು ಸಲಹಾ ಮಂಡಳಿ ಅಲ್ಲಿ ತೀರ್ಮಾನ ಆಗಬೇಕಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಆನ್ಲೈನ್ನಲ್ಲಿ ತರಿಸಿದ್ದ ಕೇಕ್ ತಿಂದು 6ರ ಮಗು ಸಾವು?
ಇನ್ನು ರನ್ಯಾ ರಾವ್ ಪರ ವಕೀಲರು ಸಲಹಾ ಮಂಡಳಿಯಲ್ಲಿ ನಾಳೆ ಅರ್ಜಿ ವಿಚಾರಣೆಗೆ ಬರುತ್ತದೆ ಎಂದಿದ್ದಾರೆ. ಇದನ್ನು ಗಮನಿಸಿದ ಹೈಕೋರ್ಟ್ ಸಲಹಾ ಮಂಡಳಿಯಲ್ಲಿ ಅರ್ಜಿಯ ಸ್ಥಿತಿಗತಿ ನೋಡಿ ವಿಚಾರಣೆ ಮುಂದುವರೆಸೋದಾಗಿ ಹೇಳಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದನ್ನೂ ಓದಿ: ಇರಾನಿನ ಪರಮಾಣು ಘಟಕದ ಮೇಲೆ ಅಮೆರಿಕ 14 ಸಾವಿರ ಕೆಜಿ ತೂಕದ ಬಾಂಬ್ ಹಾಕುತ್ತಾ?
ಬೆಂಗಳೂರು: ನಟಿ ರನ್ಯಾರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ.
ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು. ಇದನ್ನೂ ಓದಿ: ಕಲಬುರಗಿ| ಎಸ್ಬಿಐ ಎಟಿಎಂ ದರೋಡೆಕೋರರ ಕಾಲಿಗೆ ಪೊಲೀಸರ ಗುಂಡೇಟು
ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ (Gold Smuggling Case) ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್ಐ ಅಧಿಕಾರಿಗಳು ರನ್ಯಾರಾವ್ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2 ಬಾರಿ ರನ್ಯಾರಾವ್ ಜಾಮೀನು ಅರ್ಜಿ ವಜಾ ಆಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೆ (Gold Smuggling Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ರನ್ಯಾರಾವ್ ಮತ್ತು ಸಂಗಡಿಗರು 1 ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.
ಹೌದು, ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು (COFEPOSA Act) ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಎನ್ಕೌಂಟರ್ಗೆ ಲಷ್ಕರ್ ಟಾಪ್ ಉಗ್ರ ಬಲಿ
ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ. ಇದನ್ನೂ ಓದಿ: ಮಂಗಳೂರಲ್ಲಿ ಪಹಲ್ಗಾಮ್ ದಾಳಿ ಸಮರ್ಥಿಸಿಕೊಂಡ ದುಷ್ಟ – ಪೊಲೀಸರಿಂದ ಕಿಡಿಗೇಡಿಗಾಗಿ ಹುಡುಕಾಟ
ಕಾಫಿಪೋಸಾ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(CEIB) ಜಾರಿ ಮಾಡುತ್ತದೆ. ಸಿಇಐಬಿಗೆ ವಿಚಾರ ನೀಡಬೇಕಿರೋದು ಡಿಆರ್ಐ(ಕಂದಾಯ ಗುಪ್ತಚರ ನಿರ್ದೇಶನಾಲಯ). ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿಯು 1 ವರ್ಷಗಳ ಕಾಲ ಜೈಲಿನಲ್ಲೇ ಇರಬೇಕು.
– 6 ತಿಂಗಳಿನಲ್ಲಿ 49.6 ಕೆಜಿ ಚಿನ್ನ ಭಾರತಕ್ಕೆ ತಂದಿದ್ದಳಂತೆ ರನ್ಯಾ
ಬೆಂಗಳೂರು: ದುಬೈನಿಂದ ಚಿನ್ನ ತಂದು ಪರಪ್ಪನ ಅಗ್ರಹಾರ ಸೇರಿರುವ ರನ್ಯಾ ರಾವ್(Ranya Rao) ಕೇಸ್ನಲ್ಲಿ ದಿನಕ್ಕೊಂದು ತಿರುವು ಸಿಗ್ತಿದೆ. `ಮಾಣಿಕ್ಯ’ ಬೆಡಗಿಯ ಕಳ್ಳಸಾಗಾಣಿಕೆಗೆ ಬಳಸುತ್ತಿದ್ದ ಕೋಡ್ವರ್ಡ್ಗಳ ರಹಸ್ಯ ಬಯಲಾಗಿದೆ.
ಕಳೆದ 5 ತಿಂಗಳಿನಲ್ಲಿಯೇ ಗೋಲ್ಡ್ ರಾಣಿ ದುಬೈನಿಂದ(Dubai) ಕದ್ದು ತಂದಿರುವ ಚಿನ್ನದ ಲೆಕ್ಕ ಕೇಳಿದ್ರೆ ನಿಬ್ಬೆರಗಿಸುತ್ತೆ. ಹೌದು, ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್(Gold Smuggling) ಕೇಸ್ ತನಿಖೆ ಮಾಡುತ್ತಿರುವ ಡಿಆರ್ಐ(DRI) ಅಧಿಕಾರಿಗಳು ಹಲವು ಸಂಗತಿಗಳನ್ನ ಬಯಲಿಗೆಳೆದಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಹವಾಲ ನಂಟಿನ ಬಗ್ಗೆ ಸಾಕ್ಷ್ಯ ಕಲೆಹಾಕಿದ್ದಾರೆ. ರನ್ಯಾರಾವ್ ಮೊಬೈಲ್ನಲ್ಲಿ ಸೇವ್ ಆಗಿದ್ದ ಆ ಒಂದು ನಂಬರ್ನಿಂದ ಚಿನ್ನ ಕಳ್ಳಸಾಗಾಣಿಕೆಯ ಸ್ಫೋಟಕ ರಹಸ್ಯ ಹೊರಬಂದಿದೆ. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್
ರನ್ಯಾ ಮೊಬೈಲ್ನಲ್ಲಿ `ಎಯು ಬೆಂಗಳೂರು ಡಿಸ್ಪ್ಯಾಚ್ ನ್ಯೂಟನ್’ ಎಂಬ ಹೆಸರಿನಲ್ಲಿ ಒಂದು ನಂಬರ್ ಸೇವ್ ಆಗಿತ್ತು. ಆ ನಂಬರ್ನ ಮೂಲಕವೇ ರನ್ಯಾ ಮತ್ತು ಸಾಹಿಲ್ ಮೆಸೇಜ್ ಮಾಡುತ್ತಿದ್ದರು. ಅಲ್ಲದೇ ಸ್ಮಗ್ಲಿಂಗ್ ನಡೆಸಲು ಐದು ಸ್ಟೆಪ್ಗಳನ್ನು ಫಾಲೋ ಮಾಡಿದ್ದರು ಎಂಬ ವಿಚಾರವೂ ಗೊತ್ತಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾರು ಚರ್ಚೆ ಮಾಡಿಲ್ಲ: ಸತೀಶ್ ಜಾರಕಿಹೊಳಿ
ಅದರಲ್ಲಿ ಮೊದಲನೇಯ ಹಂತ ಇನೀಶಿಯೇಷನ್ ಆದ್ರೆ, ಎರಡನೇಯದು ಕಮ್ಯೂನಿಕೇಷನ್, ಮೂರನೇಯದು ಅಥನ್ಟಿಕೇಷನ್, ಇನ್ನೂ ನಾಲ್ಕುನೇಯದು ಡೆಲಿವರಿ, ಕೊನೆಯದ್ದು ಸೆಟಲ್ಮೆಂಟ್. ಈ 5 ಸ್ಟೆಪ್ ಮೂಲಕ ಗೋಲ್ಡ್ ಗ್ಯಾಂಗ್ ಚಿನ್ನ ನೀಡಿ ಹಣ ಪಡೆದು ಸೆಟಲ್ಮೆಂಟ್ ಮಾಡಿರುವ ವಿಚಾರ ತನಿಖೆಯಲ್ಲಿ ಬಯಲಾಗಿದೆ.
ರನ್ಯಾರಾವ್ ಚಿನ್ನ ಸಾಗಾಟ ಮತ್ತು ಮಾರಾಟದ ನಡುವೆ ಅವಿನಾಶ್ ಎಂಬಾತ ಭಾಗಿಯಾಗಿದ್ದ ಬಗ್ಗೆ ಅಧಿಕಾರಿಗಳಿಗೆ ಸಾಕ್ಷಿ ಸಿಕ್ಕಿದೆ. ರನ್ಯಾ ಈ ಹಿಂದೆ ಅವಿನಾಶ್ ಜೊತೆಗೆ ಸಾಕಷ್ಟು ಬಾರಿ ವ್ಯವಹಾರ ನಡೆಸಿರುವುದು ಗೊತ್ತಾಗಿದೆ. ರನ್ಯಾ ಅವಿನಾಶ್ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ತಿಳಿಸಿದ ನಂತ್ರ ಸಾಹಿಲ್ ಜೈನ್ ಪ್ರವೇಶ ಮಾಡ್ತಿದ್ದ. ಕಳೆದ ನವೆಂಬರ್ ನವೆಂಬರ್ ಒಂದರಂದು ಮೊದಲ ಬಾರಿಗೆ ರನ್ಯಾ ಹಾಗೂ ಸಾಹಿಲ್ ಸಂಪರ್ಕ ವಾಗುತ್ತೆ. ಅಲ್ಲದೆ ರನ್ಯಾ ರಾವ್ ಒಮ್ಮೆ ಸಾಹಿಲ್ ಜೈನ್ ನಡೆಸುತಿದ್ದ ಚಿನ್ನದ ಅಂಗಡಿಗೆ ಹೋಗಿ ಡಿಲಿವರಿ ಮಾಡಿದ್ದು ತನಿಖೆಯಿಂದ ಬಹಿರಂಗವಾಗಿದೆ. ಜೊತೆಗೆ ರನ್ಯಾ ರಾವ್ ಕಳೆದ ಆರು ತಿಂಗಳಿನಲ್ಲಿ ಬರೊಬ್ಬರಿ 49.6 ಕೆಜಿ ಚಿನ್ನ ಭಾರತಕ್ಕೆ ತಂದಿದ್ದಳಂತೆ. ಇದನ್ನೂ ಓದಿ: IPL 2025 | ಸಿಎಸ್ಕೆ ತಂಡಕ್ಕೆ ಮತ್ತೆ ಲೆಜೆಂಡ್ ಮಹಿ ಕ್ಯಾಪ್ಟನ್?
ನವೆಂಬರ್ 2024
8 ಕೆ ಜಿ 981 ಗ್ರಾಂ ಚಿನ್ನದ ಗಟ್ಟಿ
6 ಕೋಟಿ 82 ಲಕ್ಷ ಮೌಲ್ಯ
6 ಕೋಟಿ 50 ಲಕ್ಷ ಹಣ ದುಬೈಗೆ ಹವಾಲ
32 ಲಕ್ಷ ರನ್ಯಾರಾವ್ ಕಮಿಷನ್ ಲಾಭ
ಡಿಸೆಂಬರ್ 2024
12 ಕೆಜಿ 621 ಗ್ರಾಂ ಚಿನ್ನ
9 ಕೋಟಿ 94 ಲಕ್ಷ ಮೌಲ್ಯ
9 ಕೋಟಿ 64 ಲಕ್ಷ ದುಬೈಗೆ ಹವಾಲ
32 ಲಕ್ಷ ರನ್ಯಾರಾವ್ ಕಮಿಷನ್ ಲಾಭ
ಜನವರಿ 2025
14 ಕೆ ಜಿ 562 ಗ್ರಾಂ ಚಿನ್ನ
11 ಕೋಟಿ 56 ಲಕ್ಷ ಮೌಲ್ಯ
11 ಕೋಟಿ 10 ಲಕ್ಷ ದುಬೈಗೆ ಹವಾಲ
55 ಲಕ್ಷ ರನ್ಯಾರಾವ್ ಕಮಿಷನ್ ಲಾಭ
ಫೆಬ್ರವರಿ 2025
13 ಕೆಜಿ 433 ಗ್ರಾಂ ಚಿನ್ನ
11 ಕೋಟಿ 81 ಲಕ್ಷ ಮೌಲ್ಯ
11 ಕೋಟಿ 25 ದುಬೈಗೆ ಹವಾಲ ಹಣ
56 ಲಕ್ಷ ರನ್ಯಾರಾವ್ ಗೆ ಕಮಿಷನ್ ಲಾಭ
ಮಾರ್ಚ್ 2025
14 ಕೆ ಜಿ 213 ಗ್ರಾಂ ಚಿನ್ನ
13 ಕೋಟಿ ಚಿನ್ನದ ಮೌಲ್ಯ
11 ಕೋಟಿ ಹವಾಲ ಮೂಲಕ ದುಬೈಗೆ
ಮಾರ್ಚ್ 03 ರಂದು ಸಿಕ್ಕಿಬಿದ್ದ ರನ್ಯಾರಾವ್
ಆಖI ಅಧಿಕಾರಿಗಳಿಂದ ರನ್ಯಾರಾವ್ ಬಂಧನ
ಬಳ್ಳಾರಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ (Gold Smuggling Case) ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ.
ಬಳ್ಳಾರಿ (Ballari) ಮೂಲದ ಸಾಹಿಲ್ ಜೈನ್ (Sahil Jain) ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಲಾಕ್ ಆಗಿದ್ದಾನೆ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ – ಬಾಲಕಿ 6 ತಿಂಗಳ ಗರ್ಭಿಣಿ
ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನ ಜೊತೆಯಲ್ಲಿ ಮುಂಬೈನಲ್ಲಿ ವಾಸ ಮಾಡುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಏರ್ಪೋರ್ಟ್ನಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಸದ್ಯ ಸಾಹಿಲ್ ಜೈನ್ ವಶಕ್ಕೆ ಪಡೆದಿರುವ ಡಿಆರ್ಐ ಅಧಿಕಾರಿಗಳು ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ಗೂ ನೋಟೀಸ್ ಕೊಟ್ಟಿದ್ದಾರೆ. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ
ಬೆಂಗಳೂರು: ಚಿನ್ನಕಳ್ಳಸಾಗಣೆ ಪ್ರಕರಣದಲ್ಲಿ (Gold Smuggling Case) ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ಆದೇಶ ಇಂದು ಹೊರಬೀಳಲಿದೆ.
ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ. ಇದನ್ನೂ ಓದಿ: ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ
ವಿಜಯಪುರ: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ (Ranya Rao Gold Smuggling Case) ನಂಟು ಹೊಂದಿರುವ ಸಚಿವರು ಯಾರು ಅನ್ನೋದು ಗೊತ್ತಿದೆ. ಅಧಿವೇಶನಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.
ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿಂದು (Vijayapura) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರನ್ಯಾ ರಾವ್ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ನನಗೆ ಗೊತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಇದನ್ನೂ ಓದಿ: Ramanagara| 20 ವರ್ಷಗಳ ಬಳಿಕ ಮಂಚನಬೆಲೆ ಎಡದಂಡೆ ನಾಲೆಗೆ ಹರಿದ ನೀರು
ರನ್ಯಾ ಪ್ರಕರಣದ ನಂಟು ಹೊಂದಿರೋ ಸಚಿವರು ಯಾರು ಅನ್ನೋದು ಗೊತ್ತಿದೆ. ಅಧಿವೇಶನಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ. ರನ್ಯಾ ಜೊತೆಗೆ ಸಂಬಂಧ ಹೊಂದಿದವರು, ಆಕೆಗೆ ಪ್ರೋಟೊಕಾಲ್ (ಶಿಷ್ಟಾಚಾರ) ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಗೋಲ್ಡ್ ಎಲ್ಲಿಂದ ತಂದ್ರು? ಗೋಲ್ಡ್ ಎಲ್ಲಿಟ್ಟುಕೊಂಡು ತಂದ್ರು? ಎಲ್ಲವೂ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸಿನಿಮಾ ಮೂಲಕ ಪುನೀತ್ ಜೀವಂತವಾಗಿದ್ದಾರೆ: ‘ಅಪ್ಪು’ ಸಿನಿಮಾ ಬಗ್ಗೆ ರಮ್ಯಾ ಮಾತು
ರನ್ಯಾ ಪ್ರಕರಣದಲ್ಲಿ ಕೇಂದ್ರದವರ ತಪ್ಪಿದೆ ಎಂಬ ಸಚಿವ ಲಾಡ್ ಆರೋಪ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಯಾರು ತಪ್ಪು ಮಾಡಿದ್ರೆ ಅದು ತಪ್ಪೆ. ನಾವು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ತಿಲ್ಲ. ಕೇಂದ್ರದ ಅಧಿಕಾರಿಗಳ ತಪ್ಪಿದ್ರೆ ತಪ್ಪೆ, ನಮ್ಮ ಕೇಂದ್ರದ ಸಚಿವರು ಇದ್ರಲ್ಲಿ ಭಾಗಿ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ರನ್ಯಾಳಿಗೆ ಕೆಐಎಡಿಬಿಯಿಂದ ಜಮೀನು ಕೊಟ್ಟ ವಿಚಾರ ಕುರಿತು ಮಾತನಾಡಿ, ಜಮೀನು ಕೊಟ್ಟಿದ್ದನ್ನ ಸ್ವತಃ ನಿರಾಣಿ ಒಪ್ಪಿಕೊಂಡಿದ್ದಾರೆ. 12 ಏಕರೆ ಜಮೀನು ಕೊಟ್ಟಿದ್ದು, ಹಣ ಕಟ್ಟದೇ ಇರೋದಕ್ಕೆ ಅದು ರದ್ದಾಗಿದೆ. 12 ಎಕರೆಯದ್ದು ಯಾರೋ ಒಬ್ಬರು ಹಣ ಕೊಡ್ತೀನಿ ಎಂದಿದ್ದರು ಅವ್ರು ಕೊಟ್ಟಿಲ್ಲ ಎಂದರು. ಈ ವೇಳೆ ಹಣ ಕೊಡ್ತೀನಿ ಎಂದವರು ಸಚಿವರಾ? ಎನ್ನುವ ಪ್ರಶ್ನೆಗೆ ಮುಗುಳ್ನಕ್ಕರು. ಇದನ್ನೂ ಓದಿ: ‘ಜಗದೋದ್ಧಾರನಾ ಆಡಿಸಿದಳು ಯಶೋಧೆ’ ಹಾಡು ಹಾಡಿದ ಸಂಸದ ತೇಜಸ್ವಿ ಸೂರ್ಯ ಪತ್ನಿ
ಕಲಬುರಗಿ: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao Gold Smuggling Case) ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎಂಬುದು ಶುದ್ಧ ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanprakash Patil) ಬಾಂಬ್ ಸಿಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರನ್ಯಾ ಭಾಗಿಯಾಗಿರುವ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತವೆ. ಹಾಗಾಗಿ, ಬಹುಶಃ ತಪ್ಪು ಅಂದಾಜಿನಿಂದ ಹಾಗೆ ಹೇಳಿರಬಹುದು ಎಂದರು.
ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:
ಮುಂದಿನ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಐಸಿಸಿ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು. ಅದಕ್ಕಾಗಿ ಅವರ ಸಮಯ ಕೇಳಲಾಗಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ
ಇನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಇಬ್ಬರ ಸಾವಿನ ಪ್ರಕರಣ ಕುರಿತು ಪ್ರಸ್ತಾಪಿಸಿದ ಅವರು, ಇದುವರೆಗೆ ಜಿಮ್ಸ್ ನಲ್ಲಿ ಇಂತಹ ಪ್ರಕರಣ ನಡೆದಿಲ್ಲ. ಮಾಧ್ಯಮಗಳ ಮೂಲಕ ತಮಗೆ ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಣ್ಣ ತಪ್ಪಾಗಿದ್ದರೂ ಸಹಿಸುವುದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಖಾತ್ರಿಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?
ಹುಬ್ಬಳ್ಳಿ: ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಆರೋಪಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಲು ಸಾಲಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಯಾರೋ ಮಂತ್ರಿಯನ್ನು ರಕ್ಷಣೆ ಮಾಡುವ ಕಾರ್ಯ ನಡೆದಿದೆ. ಇದು ದೇಶದ್ರೋಹದ ಕೆಲಸವಾಗಿದೆ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು. ದೇಶದ್ರೋಹಿಗಳಿಗಾ, ನಕ್ಸಲ್ಗಳಿಗಾ, ಎಲ್ಲಿಗೆ ಹೋಗುತ್ತಿತ್ತು? ಇದರಲ್ಲಿ ಸರ್ಕಾರ ಯಾರನ್ನು ರಕ್ಷಣೆ ಮಾಡಲು ಹೊರಟಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇದೆ ಎಂಬ ಅನುಮಾನವಿದೆ. ಡಿಐಜಿ ಮಗಳು ಇದ್ದಾರೆ ಎನ್ನುವ ಆರೋಪಯಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಗುಜರಾತ್ ವಿರುದ್ಧ ಮುಂಬೈಗೆ 47 ರನ್ಗಳ ಭರ್ಜರಿ ಜಯ – ಶನಿವಾರ ಡೆಲ್ಲಿ ವಿರುದ್ಧ ಫೈನಲ್
ಸಿಐಡಿಗೆ ತನಿಖೆಗೆ ಯಾಕೆ ನೀಡಿದರು. ಒಬ್ಬ ಡಿಐಜಿಯನ್ನು ಒಬ್ಬ ಸಿಐಡಿ ಎಸ್ಪಿ ತನಿಖೆ ಮಾಡಲು ಆಗುತ್ತಾ? ಗೃಹ ಸಚಿವ ಪರಮೇಶ್ವರ ಅವರೇ ಯಾರದ್ದೋ ಒತ್ತಡದಿಂದ ಹೇಳಿಕೆ ನೀಡಬೇಡಿ ಎಂದಿದ್ದಾರೆ. ಇನ್ನೂ ಧರ್ಮಾಧಾರಿತ ಮೀಸಲಾತಿ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ನಾವು ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮರಾಠಿಯಲ್ಲಿ ಮಾತನಾಡುವಂತೆ ಪಿಡಿಓಗೆ ಧಮ್ಕಿ – ಆರೋಪಿ ಹಿಂಡಲಗಾ ಜೈಲಿಗೆ
ಯಾವ ಜಮೀರ್ ಅಹ್ಮದ್ ಹೇಳಿದ್ರೂ ಆಗಲ್ಲ. ಈ ಹಿಂದೆ ಜಮೀರ್ ನೀಡಿದ್ದ ಒಂದು ಹೇಳಿಕೆ ಏನಾಗಿದೆ ಗೊತ್ತು ಎಷ್ಟು ಆತ್ಮಹತ್ಯೆಗಳಾಗಿವೆ. 40 ಪರ್ಸೆಂಟ್ ಕಮಿಷನ್ ತನಿಖೆ ನ್ಯಾಯಯುತವಾಗಿ ಆಗಬೇಕು. ರಿಪೋರ್ಟ್ ಮಂಡಿಸಿ, ನೀವು ಯಾರಿಗೆ ನೋಟಿಸ್ ಕೊಟ್ಟಿದೀರಿ ನಮಗೆ ಗೊತ್ತಿರುವ ಹಾಗೆ ಯಾರಿಗೂ ನೋಟಿಸ್ ಕೊಟ್ಟಿಲ್ಲ. ಆರೋಪ ಬಂದವರಿಗೆ ನೋಟಿಸ್ ಕೊಟ್ಟಿಲ್ಲ. ಮೊದಲು ನೋಟಿಸ್ ಕೊಡಿ ನೋಟಿಸ್ ಬಂದ ಮೇಲೆ ನಾವು ಉತ್ತರ ಕೊಡುತ್ತೇವೆ. ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Ranya Rao Gold Smuggling Case) ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಈ ನಡುವೆ ರಾಜ್ಯ ಸರ್ಕಾರವೇ ಸಿಐಡಿ ವಿಚಾರಣೆಗೆ (CID Investigation) ನೀಡಿದ್ದ ಆದೇಶವನ್ನು ವಾಪಸ್ ಪಡೆದಿದೆ.
ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್ ಯೂಟರ್ನ್ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಯಾರ ಒತ್ತಡ ಹೆಚ್ಚಾಗಿತ್ತು..? ಎಂಬ ಪ್ರಶ್ನೆಯೂ ಹುಟ್ಟುಹಾಕಿದೆ. ಇದನ್ನೂ ಓದಿ: ಭೂಸ್ವಾಧೀನ ಪರಿಹಾರ ನೀಡದ ಜಿಲ್ಲಾಡಳಿತ – ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ
ಸಿಐಡಿ ತನಿಖೆ ಆದೇಶ ಬೆನ್ನಲ್ಲೇ ಐಓ ಆಗಿ ರಾಘವೇಂದ್ರ ಹೆಗ್ಡೆ ಅವರ ನೇಮಕ ಆಗಿತ್ತು. ಆದ್ರೆ ಆದೇಶ ಹಿಂಪಡೆಯಲಾಗಿದ್ದು, ಸಿಐಡಿ ಡಿಜಿಪಿ ತನಿಖಾಧಿಕಾರಿಯನ್ನ ನೇಮಕಗೊಳಿಸಿದ ಬಳಿಕ ಏಕೆ ಸರ್ಕಾರದ ವರಸೆ ಬದಲಾಯ್ತು..? ಎಂಬುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.
ಬಗೆದಷ್ಟೂ ರಹಸ್ಯ ಬಯಲು:
ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ ಬರ್ತಿವೆ. ಕಳೆದ ವರ್ಷದ ಕೊನೆಯಲ್ಲಿ 2 ಬಾರಿ ದುಬೈನಲ್ಲಿ ಚಿನ್ನ ಖರೀದಿ ಮಾಡಿದ್ದ ರನ್ಯಾರಾವ್, ಅದನ್ನು ಸ್ವಿಟ್ಜರ್ಲೆಂಡ್ಗೆ ಕೊಂಡೊಯ್ಯೋದಾಗಿ ಹೇಳಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳನ್ನು ಯಾಮಾರಿಸಿದ್ರು. ಜಿನೇವಾಗೆ ಹೋಗೋದಾಗಿ ಸುಳ್ಳು ಹೇಳಿದ್ದ ರನ್ಯಾರಾವ್ ನೇರವಾಗಿ ಭಾರತಕ್ಕೆ ಬಂದಿದ್ರು ಎಂಬುದು ಆಕೆಯ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ಡಿಆರ್ಐ, ಅರೆಸ್ಟ್ ಮೆಮೋದಲ್ಲಿ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕಾರ್ಯ: ರಾಜ್ಯಪಾಲರಿಗೆ ಬಿಜೆಪಿ ದೂರು
ರನ್ಯಾ ರಾವ್ ನಿರಂತರವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕಿಂಗ್ಪಿನ್ ಆಗಿರುವ ಈಕೆ ಆರು ತಿಂಗಳು ದೇಶದಿಂದ ಹೊರಗೆ ಇರ್ತಿದ್ರು.. ಎಂದಿದೆ. ರನ್ಯಾ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಎಲ್ಲಾ ಅಂಶಗಳು ಪ್ರಸ್ತಾಪವಾದ್ವು. ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ನಿದ್ದೆ ಮಾಡೋಕೂ ಬಿಡದೇ ವಿಚಾರಣೆ ನಡೆಸಿದ್ದಾರೆ. ನಿದ್ದೆಯ ಹಕ್ಕನ್ನು ಕಿತ್ಕೊಂಡಿದ್ದಾರೆ ಎಂದು ರನ್ಯಾ ಪರ ವಕೀಲರು ವಾದ ಮಂಡಿಸಿದ್ರು. ರನ್ಯಾ ಮದ್ವೆಯಾದ ಮಹಿಳೆ. ಅವರೆಲ್ಲೂ ಹೋಗಲ್ಲ.. ಜಾಮೀನು ನೀಡಿ ಎಂದು ಮನವಿ ಮಾಡಿದ್ರು. ಆದ್ರೆ, ಇದನ್ನು ಡಿಆರ್ಐ ಪರ ವಕೀಲರು ಆಕ್ಷೇಪಿಸಿದ್ರು. ರನ್ಯಾಗೆ ಕರೆ ಮಾಡಿದ್ದ ವ್ಯಕ್ತಿಗೆ ಸಮನ್ಸ್ ನೀಡಿ ಹೇಳಿಕೆ ಪಡೆಯಲಾಗಿದೆ. ಯಾವುದೇ ಲೋಪ ಎಸಗಿಲ್ಲ. ಆಕೆ ಬಳಿ ಯುಎಇ ರೆಸಿಡೆನ್ಸಿ ಕಾರ್ಡ್ ಸಿಕ್ಕಿದೆ. ಹೀಗಾಗಿ ಜಾಮೀನು ಕೊಡಬಾರದು ಎಂದು ಪ್ರತಿವಾದ ಮಾಡಿದ್ರು. ಕಡೆಗೆ ಕೋರ್ಟ್ ಮಾರ್ಚ್ 14ಕ್ಕೆ ಆದೇಶ ಕಾಯ್ದಿರಿಸಿತು.