Tag: ಗೋವಿಂದೇಗೌಡ

  • ನಟಿ ಶುಭ ಪೂಂಜಾಗೆ ಜಿಜಿ ಕೇರ್ ಟೇಕರ್ ಆಗಿದ್ದೇಕೆ?:  ಕಾಂಪೌಂಡರ್ ಕ್ಯಾರೆಕ್ಟರ್ ಸೀಕ್ರೆಟ್ ರಿವೀಲ್

    ನಟಿ ಶುಭ ಪೂಂಜಾಗೆ ಜಿಜಿ ಕೇರ್ ಟೇಕರ್ ಆಗಿದ್ದೇಕೆ?: ಕಾಂಪೌಂಡರ್ ಕ್ಯಾರೆಕ್ಟರ್ ಸೀಕ್ರೆಟ್ ರಿವೀಲ್

    ಚೆಂದುಳ್ಳಿ ಚೆಲುವೆ ನಟಿ ಶುಭ ಪುಂಜಾಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ್ರು (Govindegowda) ಕೇರ್ ಟೇಕರ್ ಅಂತೆ.  ಕಾಂಪೌಂಡರ್ ಆಗಿ ವೃತ್ತಿ ಆರಂಭಿಸಿರುವ ಜಿಜಿ, ಆ ವ್ಯಕ್ತಿಯ ಆಜ್ಞೆಯ ಮೇರೆಗೆ ಶುಭ ಪುಂಜಾರನ್ನು ಆರೈಕೆ ಮಾಡುವ ಕೆಲಸ ಮಾಡಿದ್ದಾರಂತೆ. ಹೀಗಂತ ನಾವು ಹೇಳ್ತಿಲ್ಲ ಸ್ವತಃ ಜಿಜಿಯವ್ರೇ ಹೇಳಿಕೊಂಡಿದ್ದಾರೆ. ಕನ್ ಫ್ಯೂಸ್ ಆಗ್ಬೇಡಿ ಕೇರ್ ಟೇಕರ್ ಆಗಿದ್ದು, ರಿಯಲ್ ಲೈಫ್‍ನಲ್ಲಿ ಅಲ್ಲ ರೀಲ್ ಲೈಫ್‍ನಲ್ಲಿ ಅಂತಹದ್ದೊಂದು ಪಾತ್ರ ನನ್ನರಸಿಕೊಂಡು ಬಂತು. ಆ ಸಿನಿಮಾದ ಭಾಗವಾಗುವ, ಆ ಪಾತ್ರಕ್ಕೆ ಬಣ್ಣಹಚ್ಚುವ ಅವಕಾಶ ನನ್ನದಾಯ್ತು ಅಂತ ಹೇಳಿಕೊಳ್ತಾರೆ. ಅಷ್ಟಕ್ಕೂ, ಆ ಚಿತ್ರ ಬೇರಾವುದು ಅಲ್ಲ ಶ್ರೀನಿ ಹನುಮಂತರಾಜು (Srini Hanumantharaju) ನಿರ್ದೇಶನದ ಅಂಬುಜ.

    ಗಾಂಧಿನಗರದಲ್ಲಿ ಸೌಂಡ್ ಮಾಡ್ತಿರುವ ಸಿನಿಮಾಗಳ ಪೈಕಿ ಅಂಬುಜ (Ambuja) ಚಿತ್ರ ಕೂಡ ಒಂದು. ಟೈಟಲ್‍ನಿಂದಲೇ ಒಂದಿಷ್ಟು ಕುತೂಹಲ ಮೂಡಿಸಿದ್ದ ಈ ಸಿನಿಮಾ, ಟೀಸರ್, ಟ್ರೈಲರ್, ಹಾಡುಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ನಟಿ ಶುಭ ಪೂಂಜಾ (Shubha Poonja), ಅಮೃತ ವರ್ಷಿಣಿ ಖ್ಯಾತಿಯ ರಜನಿ ಮುಖ್ಯಭೂಮಿಯಲ್ಲಿದ್ದಾರೆ. ದೀಪಕ್ ಸುಬ್ರಮಣ್ಯ, ಪದ್ಮಜ ರಾವ್, ಶರಣಯ್ಯ, ಬೇಬಿ ಆಕಾಂಕ್ಷ ,ಜಗದೀಶ್ ಹಲ್ಕುಡೆ, ನಿಶಾ ಹೆಗ್ಡೆ, ಗುರುದೇವ ನಾಗರಾಜ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಹಲವರು ತಾರಾಗಣದಲ್ಲಿದ್ದು, ಜಿಜಿ ಅಲಿಯಾಸ್ ಗೋವಿಂದೇಗೌಡ್ರು ಕಾಂಪೌಂಡರ್ ಆಗಿ, ನಟಿ ಶುಭ ಪೂಂಜಾರ ಕೇರ್ ಟೇಕರ್ ಆಗಿ ಗಮನ ಸೆಳೆಯಲಿದ್ದಾರೆ.

    ಕಾಮಿಡಿ ಟೈಮಿಂಗ್‍ನಿಂದ, ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಸ್ಸು ಗೆದ್ದಿರೋ ಜಿಜಿ, ಹಾಸ್ಯ ಪಾತ್ರಗಳಿಗಷ್ಟೇ ಸೀಮಿತವಾಗಿಲ್ಲ. ಬದಲಾಗಿ, ಗಂಭೀರ ಪಾತ್ರಗಳಿಗೂ ಸೈ ಎನ್ನುತ್ತಿದ್ದಾರೆ. ತಮ್ಮನ್ನ ಹುಡುಕಿಕೊಂಡು ಬರುವ ಯಾವ ಪಾತ್ರವನ್ನೂ ಕೈಬಿಡಲು ಒಪ್ಪದ ಗೋವಿಂದೇಗೌಡ್ರು, ನಿರ್ದೇಶಕನ ಅಣತಿಯಂತೆ ವರ್ಕ್‍ಶಾಪ್ ಮಾಡಿಯಾದ್ರೂ ಸರೀ, ದೇಹ ದಂಡಿಸಿಯಾದ್ರೂ ಸರೀ ಪಾತ್ರಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ. ಸ್ಯಾಂಡಲ್‍ವುಡ್‍ನ ಆಲ್ಮೋಸ್ಟ್ ಆಲ್ ಎಲ್ಲಾ ಸ್ಟಾರ್ ಗಳ ಸಿನಿಮಾಗಳಲ್ಲಿ ಮಿಂಚಿರುವ ಜಿಜಿ ಈಗ ಪರಭಾಷೆಗೂ ಲಗ್ಗೆ ಇಟ್ಟಿದ್ದಾರೆ. ಇದನ್ನೂ ಓದಿ:ಕೊನೆಗೂ ಮಗುವಿನ ತಂದೆ ಯಾರೆಂದು ಗುಟ್ಟು ಬಿಟ್ಟು ಕೊಟ್ಟ ಇಲಿಯಾನಾ

    ನಿಮಗೆಲ್ಲ ಗೊತ್ತಿರುವ ಹಾಗೇ ಕೆಜಿಎಫ್ ಸಿನಿಮಾದಿಂದ ಜಿಜಿಗೆ ಅದೃಷ್ಠ ಖುಲಾಯಿಸ್ತು. ಬಾಲಿವುಡ್‍ನಿಂದಲೂ ಬುಲಾವ್ ಬಂತು. ವೆಬ್‍ಸೀರಿಸ್ ತಂಡ ಕೂಡ ಜಿಜಿನಾ ಸಂಪರ್ಕ ಮಾಡಿದ್ದುಂಟು. ಆದರೆ, ಜಿಜಿ ಕನ್ನಡದಕ್ಕೆ ಮೊದಲ ಆದ್ಯತೆ ಕೊಟ್ಟರು. ಯಶ್, ಸುದೀಪ್, ಪುನೀತ್, ಶಿವಣ್ಣ, ದರ್ಶನ್ ಸೇರಿದಂತೆ ಹಲವು ಕನ್ನಡದ ನಟರುಗಳೊಟ್ಟಿಗೆ ಸ್ಕ್ರೀನ್ ಶೇರ್ ಮಾಡಿದರು. ಹೊಸಬರ ಸಿನಿಮಾದಲ್ಲೂ ಮಿಂಚಿದ್ರು. ಈಗ್ಲೂ ಗೋವಿಂದೇಗೌಡ್ರ ಕೈಯಲ್ಲಿ ಕಿಚ್ಚ-46, ಕರಟಕ ದಮನಕ, ಗ್ರಾಮಾಯಣ ಸೇರಿದಂತೆ ಇನ್ನೂ ಹಲವಾರು ಚಿತ್ರಗಳಿವೆ. ಈ ಮಧ್ಯೆ ಜಿಜಿ ಟಾಲಿವುಡ್‍ಗೆ ಲಗ್ಗೆ ಇಟ್ಟಿದ್ದು, ಮೆಗಾಸ್ಟಾರ್ ಕುಟುಂಬದ ಕುಡಿ ವರುಣ್ ತೇಜಾ ಜೊತೆ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಅಂಬುಜ, ನಮೋ ಭೂತಾತ್ಮ-2, ಜೋಗ್ 101 ಚಿತ್ರದ ರಿಲೀಸ್‍ಗಾಗಿ ಎದುರುನೋಡ್ತಿದ್ದಾರೆ.

    ಅಂಬುಜ ಇದೇ ಜುಲೈ 21 ರಂದು ತೆರೆಗೆ ಬರಲಿದೆ. ಮರ್ಡರ್ ಮಿಸ್ಟ್ರಿ ಹಾರರ್ ಥ್ರಿಲ್ಲರ್ ಎಲಿಮೆಂಟ್ಸ್ ಒಳಗೊಂಡಿರೋ ಚಿತ್ರ ಇದಾಗಿದ್ದು, ಕಾಶಿನಾಥ್ ಡಿ ಮಡಿವಾಳರ್ (Kashinath Madivalar) ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಒದಗಿಸುವುದರ ಜೊತೆಗೆ ಬಂಡವಾಳ ಕೂಡ ಹೂಡಿದ್ದಾರೆ.

     

    ಎಸ್.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಲೋಕೇಶ್ ಭೈರವ, ಶಿವಪ್ರಕಾಶ್.ಎನ್ ಸಹಯೋಗದ ಜೊತೆ ಅಂಬುಜ ಚಿತ್ರವನ್ನ ಅದ್ದೂರಿಯಾಗಿ ತೆರೆಗೆ ತರುತ್ತಿದ್ದಾರೆ. ಪ್ರಸನ್ನ ಕುಮಾರ್ ಮ್ಯೂಸಿಕ್, ತ್ಯಾಗರಾಜ್ ಅವ್ರ ಹಿನ್ನಲೆ ಸಂಗೀತ ಚಿತ್ರಕ್ಕಿದೆ.  ವಿಜಯ್ ಎಂ ಕುಮಾರ್ ಸಂಕಲನ, ಮುರುಳೀಧರ್ ಎಂ ಛಾಯಾಗ್ರಹಣ ಚಿತ್ರಕ್ಕಿದ್ದು, ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ಇದೇ ಜುಲೈ 21ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಪುನೀತ್ ರಾಜ್ ಕುಮಾರ್ ನಿಧನಾ ನಂತರ ಅವರ ಸಾವಿರಾರು ಅಭಿಮಾನಿಗಳು ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದರು. ನೇತ್ರದಾನದಂತಹ ಪವಿತ್ರ ಕಾರ್ಯ ಮುಂದುವರೆಯುತ್ತಲೇ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಆದರ್ಶವಾಗಿ ತಗೆದುಕೊಂಡಿದ್ದ ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಜೋಡಿಯೊಂದು ಸೀಮಂತ ಕಾರ್ಯಕ್ರಮದಲ್ಲೇ ನೇತ್ರದಾನ ಮಾಡಿದೆ. ಇದನ್ನೂ ಓದಿ : ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?


    ಕಾಮಿಡಿ ಕಿಲಾಡಿಗಳು ಅಂದಾಕ್ಷಣ ಥಟ್ಟನೆ ನೆನಪಾಗುವ ಜೋಡಿ ಗೋವಿಂದೇಗೌಡ ಮತ್ತು ದಿವ್ಯಶ್ರೀ ಅವರದ್ದು. ಕಾಮಿಡಿ ಕಿಲಾಡಿಗಳು ಶೋಗೆ ಸ್ಪರ್ಧೆಯಾಗಿ ಬಂದವರು, ನಂತರ ಸ್ನೇಹಿತರಾದರು. ಆನಂತರ ಪ್ರೇಮಿಗಳಾದರು. ಪ್ರೇಮವೇ ಸಪ್ತಪದಿ ತುಳಿಯುವುದಕ್ಕೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ದಿವ್ಯಶ್ರೀ ಅವರ ಸೀಮಂತ ಕಾರ್ಯಕ್ರಮವಾಯಿತು. ಅಂದು ಈ ದಂಪತಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನೇತ್ರದಾನ ಮಾಡುವ ಮೂಲಕ ನವ ಜೋಡಿಗಳಿಗೆ ಮಾದರಿಯಾದರು. ಇದನ್ನೂ ಓದಿ : ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?


    ಮೊದಲಿನಿಂದಲೂ ನನಗೆ ಪುನೀತ್ ರಾಜ್ ಕುಮಾರ್ ಅಂದರೆ ಇಷ್ಟ. ಅವರ ಸಿನಿಮಾಗಳನ್ನೇ ನೋಡಿಕೊಂಡು ಬೆಳೆದವರು ನಾವು. ಅಂತಹ ಮಹಾನ್ ನಟರೇ ಕಣ್ಣುದಾನ ಮಾಡಿದ್ದಾರೆ. ಅವರಿಂದ ಸ್ಫೂರ್ತಿಗೊಂಡು ನಾವು ಕೂಡ ಈ ಕೆಲಸಕ್ಕೆ ಮುಂದಾದೆವು ಅನ್ನುತ್ತಾರೆ ಕಿಲಾಡಿ ಜೋಡಿ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ


    ತಾವು ಮಾತ್ರ ನೇತ್ರದಾನ ಮಾಡಿಲ್ಲ, ಜತೆಗೆ ಇದೇ ವೇಳೆ ನೇತ್ರದಾನ ಶಿಬಿರವನ್ನು ಕೂಡ ಅವರು ಆಯೋಜನೆ ಮಾಡಿದ್ದರು. ಈ ಸಂದರ್ಭದಲ್ಲಿ ಡಾ.ರಾಜ್ ಐ ಬ್ಯಾಂಕಿನ ಸಿಬ್ಬಂದಿ ಕೂಡ ಹಾಜರಿತ್ತು.

  • ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಯೋಗರಾಜ್ ಭಟ್, ಒಂದು ಚಿಕ್ಕ ಅಪಘಾತವಾಗಿದೆ. ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

    ಈ ಸಂಬಂಧ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದು, ಈಗ ತಾನೆ ಗೋವಿಂದೇಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಟ್ವೀಟ್ ಮಾಡಿದ್ದಾರೆ.

  • ಹಳ್ಳಿ ಘಮಲಿನ ‘ಚಂಪಾ’ಕಲಿಯಂಥಾ ‘ಪರಸಂಗ’!

    ಹಳ್ಳಿ ಘಮಲಿನ ‘ಚಂಪಾ’ಕಲಿಯಂಥಾ ‘ಪರಸಂಗ’!

    ಹೊಸಾ ಅಲೆ ಹಳೇ ಸೆಲೆಗಳೆಲ್ಲವೂ ಝಗಮಗಿಸುವ ಕಥೆಗಳ ಬೆಂಬೀಳೋದೇ ಹೆಚ್ಚಾದ್ದರಿಂದ ಹಳ್ಳಿ ಘಮಲಿನ ಕಥೆಗಳೇ ಅಪರೂಪವಾಗಿ ಬಿಟ್ಟಿವೆ. ಹಾಗೊಂದು ವೇಳೆ ಅಂಥಾ ಚಿತ್ರಗಳು ತೆರೆ ಕಂಡರೂ ಎಲ್ಲದರಲ್ಲಿಯೂ ವೀಕ್ ನೆಸ್ ಪ್ರಾಬ್ಲಮ್ಮಿನಿಂದ ಸೊರಗಿರುತ್ತವೆ. ಆದರೆ ಎಲ್ಲ ವಿಚಾರದಲ್ಲಿಯೂ ದಷ್ಟ ಪುಷ್ಟವಾಗಿರುವ ಮಿತ್ರಾ ಅಭಿನಯದ ಪರಸಂಗ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಣಿಸುತ್ತಾ ಸಾರಾಸಗಟಾಗಿ ಎಲ್ಲರನ್ನು ಥೇಟರಿನತ್ತ ಸೆಳೆಯುತ್ತಿದೆ.

    ಪ್ರೇಕ್ಷಕರ ಬಾಯಿ ಮಾತಿಂದಲೇ ಥೇಟರು ತುಂಬಿಸಿಕೊಂಡ ಚಿತ್ರಗಳು ಗೆದ್ದವೆಂದೇ ಅರ್ಥ. ಸದ್ಯ ಪರಸಂಗವೂ ಅಂಥಾದ್ದೇ ವಾತಾವರಣ ಸೃಷ್ಟಿಸಿರೋದರಿಂದ ಇದು ಗೆದ್ದ ಲಕ್ಷಣ ಎಂಬುದನ್ನು ಸಪರೇಟಾಗಿ ಹೇಳೋ ಅವಶ್ಯಕತೆಯಿಲ್ಲ!

    ಯಾರಾದರೂ ಕಾಯಿಲೆ ಬಿದ್ದರೆ ಬೊಂಬೆಯೊಂದನ್ನು ತಯಾರಿಸಿ ಕಾಯಿಲೆಯನ್ನು ಅದರೊಳಗೆ ತುಂಬಿಸೋ ನಂಬಿಕೆಯಿಂದ ಅದನ್ನು ಗಡಿಯಾಚೆ ಬಿಟ್ಟು ಬರುವ ಒಂದು ಸಂಪ್ರದಾಯವಿದೆ. ಹಳ್ಳಿಗಾಡುಗಳಲ್ಲಿ ಇದು ಈಗಲೂ ಅಳಿದುಳಿದುಕೊಂಡಿದೆ. ಆ ಹಳ್ಳಿಯಲ್ಲಿ ತನ್ನ ವಿಧವೆ ತಾಯಿಯ ಜೊತೆ ಬದುಕುತ್ತಾ, ಊರ ಗೌಡನ ಮನೆಯಲ್ಲಿ ಚಾಕರಿ ಮಾಡಿಕೊಂಡಿರೋ ತಿಮ್ಮ ಕೂಡಾ ಗೊಂಬೆ ದಾಟಿಸುವ ವೃತ್ತಿಯನ್ನೂ ನಡೆಸಿಕೊಂಡು ಬಂದಿರುತ್ತಾನೆ. ಇಂಥವನಿಗೆ ಎತ್ತಣಿದ್ದೆಂತಲಿಂದಲೂ ಮ್ಯಾಚ್ ಆಗದ ಬೊಂಬೆಯಂಥಾ ಹುಡುಗಿಯೇ ಮಡದಿಯಾಗಿ ಬಂದು ಬಿಡುತ್ತಾಳೆ.

    ಚಂಪಾ ಹೆಸರಿನ ಈ ಚೆಲುವೆ ಪರಿಸ್ಥಿತಿಯ ಸಂಕೋಲೆಗೆ ಸಿಲುಕಿ ತನಗೆ ಹೊಂದದ ತಿಮ್ಮನನ್ನು ಮದುವೆಯಾಗುತ್ತಾಳೆ. ಈ ನಡುವೆ ತಿಮ್ಮ ಮಡದಿನ ಮಾತು ಕೇಳಿ ಚಂಪಾ ಚಾಟ್ಸ್ ಎಂಬ ಹೋಟೆಲು ಶುರುವಿಟ್ಟುಕೊಂಡೇಟಿಗೆ ಚಂಪಾಕಲಿಯಂಥಾ ಚಂಪಾಳ ಮೇಲೆ ಇಡೀ ಊರ ಕಣ್ಣು ಬೀಳುತ್ತದೆ. ಚಂಪಾ ಕೂಡಾ ಅಂಥಾ ಪಡ್ಡೆಗಳ ಜೊತೆ ಮೆತ್ತಗೆ ನವರಂಗಿಯಾಟ ಶುರು ಮಾಡಿಕೊಳ್ಳುತ್ತಾಳೆ.

    ಆದರೆ ಊರೆಲ್ಲ ಏನೇ ಹೇಳಿದರೂ ತಿಮ್ಮ ಮಾತ್ರ ತನ್ನ ಹೆಂಡತಿ ಪರಮ ಪತಿವ್ರತೆ ಎಂದೇ ನಂಬಿ ಕೂತಿರುತ್ತಾನೆ. ಹೀಗಿರುವಾಗಲೇ ಚಂಪಾ ಚಾಟ್ಸ್ ಎದುರಿಗೇ ಕ್ಲಿನಿಕ್ಕು ತೆರೆಯೋ ಸ್ಫುರದ್ರೂಪಿ ವೈದ್ಯನೂ ಚಂಪಾಳ ಬಾಧೆಗೆ ಟ್ರೀಟ್ ಮೆಂಟು ಶುರು ಮಾಡಿದಾಕ್ಷಣ ತಿಮ್ಮನ ಬದುಕಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತೆ. ಅದರಾಚೆಗಿನದ್ದು ಅಸಲೀ ಆಹ್ಲಾದ. ನಿರ್ದೇಶಕ ಕೆ.ಎಂ. ರಘು ತಾನೊಬ್ಬ ಅಪ್ಪಟ ಹಳ್ಳಿ ಘಮಲಿನ ಕಥೆ ಹೇಳೇ ಪಾರಂಗತ ಎಂಬುದನ್ನು ಹೆಜ್ಜೆ ಹೆಜ್ಜೆಗೂ ಧೃಡಪಡಿಸಿದ್ದಾರೆ.

    ಹಾಸ್ಯ ನಟರಾಗಿ ಬ್ರ್ಯಾಂಡ್ ಆಗಿದ್ದ ಮಿತ್ರಾ ಈ ಹಿಂದೆ ರಾಗ ಚಿತ್ರದ ಮೂಲಕ ಆ ಸೀಮೆ ದಾಟಿಕೊಂಡಿದ್ದರು. ಪರಸಂಗ ಚಿತ್ರದ ತನ್ಮಯ ನಟನೆಯಿಂದ ಯಾವ ಪಾತ್ರಕ್ಕೂ ಸೈ ಎನಿಸಿದ ಓರ್ವ ಅಪ್ಪಟ ಕಲಾವಿದನಾಗಿ ಮಿತ್ರಾ ಪ್ರೇಕ್ಷಕರನ್ನು ಮುಟ್ಟಿದ್ದಾರೆ. ಇನ್ನು ನಾಯಕಿ ಅಕ್ಷತಾ ಈ ಪಾತ್ರವನ್ನು ಮೈ ಮನಸುಗಳಿಗೆ ತುಂಬಿಕೊಂಡು ನಟಿಸೋ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನೆಲೆ ನಿಲ್ಲವ ಕನಸನ್ನು ಖಂಡಿತಾ ನನಸು ಮಾಡಿಕೊಂಡಿದ್ದಾರೆ. ವೈದ್ಯನಾಗಿ ನಟಿಸಿರೋ ಮನೋಜ್, ಕನೆಕ್ಷನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಂದ್ರಪ್ರಭ ಸೇರಿದಂತೆ ಎಲ್ಲರದ್ದೂ ಮಾಗಿದ ನಟನೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡರದ್ದೂ ಮನಸಲ್ಲುಳಿಯುವ ಪಾತ್ರ. ನಿರ್ದೇಶಕ, ಕ್ಯಾಮೆರಾ, ಸಂಗೀತ ಸೇರಿದಂತೆ ತಾಂತ್ರಿಕವಾಗಿಯೂ ವಿಶಿಷ್ಟವಾದ ಫೀಲ್ ಕೊಡುವ ಮೂಲಕ ಪರಸಂಗ ಚಿತ್ರ ಗೆಲುವಿನತ್ತ ದಾಪುಗಾಲಿಡುತ್ತಿದೆ.