Tag: ಗೋವಿಂದ ಬಾಬು ಪೂಜಾರಿ

  • ಬಿಜೆಪಿ ಟೆಕೆಟ್‌ಗಾಗಿ ಕೋಟಿ ಡೀಲ್‌ – ಚೈತ್ರಾಗೆ ಜಾಮೀನು ಮಂಜೂರು

    ಬಿಜೆಪಿ ಟೆಕೆಟ್‌ಗಾಗಿ ಕೋಟಿ ಡೀಲ್‌ – ಚೈತ್ರಾಗೆ ಜಾಮೀನು ಮಂಜೂರು

    ಬೆಂಗಳೂರು: ಬಿಜೆಪಿ ಟಿಕೆಟ್‌ (BJP Ticket) ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಚೈತ್ರಾ (Chaithra) ಮತ್ತು ಸ್ನೇಹಿತ ಶ್ರೀಕಾಂತ್‌ಗೆ ಕೋರ್ಟ್‌ ಜಾಮೀನು (Bail) ಮಂಜೂರು ಮಾಡಿದೆ.

    ಮೂರನೇ ಎಸಿಎಂಎಂ ನ್ಯಾಯಾಲಯ (ACMM Court) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಇಬ್ಬರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಲಿದ್ದಾರೆ. ಪ್ರಕರಣದಲ್ಲಿ ಚೈತ್ರಾ ಎ1 ಆರೋಪಿಯಾಗಿದ್ದರೆ ಶ್ರೀಕಾಂತ್‌ ಎ2 ಆರೋಪಿಯಾಗಿದ್ದಾರೆ.

    ಚೈತ್ರಾ  ಸೇರಿದಂತೆ 7 ಆರೋಪಿಗಳಿಗೆ ಸೆ.23 ರಂದು ಮೂರನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು.

     

    ಏನಿದು ಪ್ರಕರಣ?
    ಚೈತ್ರಾ ಅವರು ಉದ್ಯಮಿ ಗೋವಿಂದಬಾಬು ಪೂಜಾರಿಗೆ (Govind Babu Poojari) ಬೈಂದೂರು (Baindur) ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಬೆಂಗಳೂರಿಗೆ ಬಂದಾಗ ಚೈತ್ರಾ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್​​ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದರು. ಇದನ್ನೂ ಓದಿ: ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ

    ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 5 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಆದರೆ ಚೈತ್ರಾ  ಹಣ ನೀಡಿರಲಿಲ್ಲ. ಹಣ ನೀಡದ ಕಾರಣ ಗೋವಿಂದಬಾಬು  ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಮತ್ತು ಅವರ ಸ್ನೇಹಿತರನ್ನು ಬಂಧಿಸಿದ್ದರು.

  • ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣ- ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ

    ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣ- ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ

    ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ (Chaitra) ತಪ್ಪೊಪ್ಪಿಗೆ ನೀಡಿದ್ದಾರೆ.

    ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು..?, ಡೀಲ್ ಮಾಡೋದಕ್ಕೆ ಸಿಮ್ ಖರೀದಿ ಮಾಡಿಸಿಕೊಟ್ಟಿದ್ದು ಯಾರು ಎಂಬುದರ ಇಂಚಿಂಚು ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ತಪ್ಪೊಪ್ಪಿಗೆ ಪ್ರತಿಯಲ್ಲಿ ಏನಿದೆ..?: 2018ರಲ್ಲಿ ಅಭಿನವ ಹಾಲಶ್ರೀಯನ್ನು (Halashree) ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ನನಗೆ ಒಂದು ಮಾತು ಹೇಳಿದ್ರು. ಈಗಾಗಲೇ 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ (BJP Ticket) ಯಾರಿಗಾದ್ರೂ ಬೇಕು ಅಂದ್ರೆ ನನಗೆ ಹೇಳಿ ಟಿಕೆಟ್ ಕೊಡಿಸ್ತೀನಿ ಅಂದಿದ್ರು.

    2022ರಲ್ಲಿ ಪ್ರಸಾದ್ ಬೈಂದೂರು (Prasad Baindoor) ಮೂಲಕ ನನಗೆ ಗೋವಿಂದ ಬಾಬು ಪೂಜಾರಿ (Govinda Babu Poojary) ಸಂಪರ್ಕ ಆಯ್ತು. ಗೋವಿಂದಬಾಬು ಪೂಜಾರಿ ಬೈಂದೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ರು. ಗೋವಿಂದ ಬಾಬು ಪೂಜಾರಿ ಅವರಿಗೆ ಮೋಸ ಮಾಡೋದಕ್ಕಾಗಿ ಗಗನ್ ಜೊತೆ ಸೇರಿಕೊಂಡೆ. ಕೇಂದ್ರದ ನಾಯಕರು ಅಂತ ಪರಿಚಯ ಮಾಡೋದಕ್ಕೆ ರಮೇಶ್, ಧನರಾಜ್ ತೀರ್ಮಾನ ಮಾಡಿದ್ವಿ. ಧನರಾಜ್ ಮತ್ತು ರಮೇಶ್‍ಗೆ ಮೂರು ಗಂಟೆಗಳ ಕಾಲ ರಿಹರ್ಸಲ್ ಮಾಡಿಸಿದ್ವಿ. 2022ರ ಜುಲೈ 4ರಂದು ಗಗನ್ (Gagan), ಗೋವಿಂದ ಬಾಬು ಪೂಜಾರಿಯನ್ನು ಚಿಕ್ಕಮಗಳೂರಿನ ಅತಿಥಿ ಗೃಹಕ್ಕೆ ಕರೆಸಿಕೊಂಡು ಧನರಾಜ್ ಮತ್ತು ರಮೇಶ್ ಇಬ್ಬರನ್ನು ಪಿಎಂ ಮತ್ತು ಗೃಹಸಚಿವಾಲಯದ ನಿಕಟವರ್ತಿಗಳು ಅಂತ ಪರಿಚಯ ಮಾಡಿಕೊಟ್ವಿ. ಗಗನ್ ಆ ಸಂದರ್ಭದಲ್ಲಿ 50 ಲಕ್ಷಕ್ಕೆ ಬೇಡಿಕೆ ಇಟ್ಟರು.

    ಗೋವಿಂದಬಾಬು ಪೂಜಾರಿ ಏಕಾಏಕಿ ಹಣ ನೀಡಲು ಒಪ್ಪಿಕೊಂಡ್ರು. ಇದ್ರಿಂದ ಖುಷಿಯಾಗಿ ನಾವು ಮುಂದಿನ ಡೀಲ್‍ಗೆ ಇಳಿದ್ವಿ. ಹೈಕಮಾಂಡ್ ನಾಯಕರು ಅಂತ ಹೇಳಿದ್ದ ಧನರಾಜ್ ಮತ್ತು ರಮೇಶ್‍ಗೆ 2 ಲಕ್ಷ ಹಣ ಕೊಟ್ವಿ. ಶಿವಮೊಗ್ಗದ ಆರ್‍ಎಸ್‍ಎಸ್ ಕಚೇರಿಯ ಬಳಿ ಮತ್ತೆ ಕರೆಸಿ 3 ಕೋಟಿ ಕೇಳಿದ್ವಿ. 3 ಕೋಟಿಯನ್ನು ಪ್ರಸಾದ್ ಬೈಂದೂರು ಮೂಲಕ ಮಂಗಳೂರಿಗೆ ಹಣ ತರಿಸಿಕೊಳ್ಳಲಾಯ್ತು. ಗೋವಿಂದ ಬಾಬು ನೀಡಿದ್ದ 50 ಲಕ್ಷದಲ್ಲಿ 12 ಲಕ್ಷ ಗಗನ್ ಕಡೂರಿಗೆ ನೀಡಲಾಗಿತ್ತು. ಚೆನ್ನನಾಯ್ಕ್‍ನನ್ನು ಬಳಸಿಕೊಂಡು ವಿಶ್ವನಾಥ್ ಜೀ ಹೆಸರನ್ನು ಹೇಳಿ ಮೋಸ ಮಾಡಲಾಗಿತ್ತು ಎಂದು ಸಿಸಿಬಿ ಮುಂದೆ ಚೈತ್ರಾ ತಪ್ಪೊಪ್ಪಿಕೊಂಡಿದ್ದಾರೆ.

    5 ಕೋಟಿ ಲೆಕ್ಕ ಕೊಟ್ಟ ಚೈತ್ರಾ..!
    * ಚೈತ್ರಾ & ಶ್ರೀಕಾಂತ್‍ಗೆ – 3 ಕೋಟಿ 2 ಲಕ್ಷ ರೂ.
    * ಅಭಿನವ ಹಾಲಶ್ರೀಗೆ – 1.5 ಕೋಟಿ ರೂ.
    * ಗಗನ್ ಕಡೂರ್ ಗೆ – 39 ಲಕ್ಷ ರೂ.
    * ರಮೇಶ್‍ಗೆ – 2 ಲಕ್ಷ ರೂ.
    * ಧನರಾಜ್‍ಗೆ – 2 ಲಕ್ಷ ರೂ.
    * ಚೆನ್ನನಾಯ್ಕ್ ಗೆ – 1 ಲಕ್ಷ ರೂ.

  • ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ

    ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಹಾಗೂ ಟೀಂ ನಿಂದ ವಂಚನೆ ಪ್ರಕರಣ ಸಂಬಂಧ ದೂರುದಾರ ಸಿಸಿಬಿ ಪೊಲೀಸರ ತನಿಖೆಗೆ ಸ್ಪಂದಿಸದೇ ಇರೋದು ಬೆಳಕಿಗೆ ಬಂದಿದೆ. ಐದು ಕೋಟಿ ಹಣದ ಮೂಲದ ಬಗ್ಗೆ ದಾಖಲಾತಿ ಇನ್ನೂ ನೀಡದಿರೋದರ ಬಗ್ಗೆ ಸಿಸಿಬಿಯಿಂದ ನೋಟಿಸ್ (CCB Notice) ನೀಡಲಾಗಿದೆ.

    ಉದ್ಯಮಿ ಗೋವಿಂದಬಾಬು ಪೂಜಾರಿಗೆ (GovindaBabu Poojary) ಚೈತ್ರಾ ಹಾಗೂ ಗ್ಯಾಂಗ್ ವಂಚನೆ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರಬರುತ್ತಿವೆ. ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ಜೈಲು ಸೇರಿದ್ರೆ, ಇತ್ತ ದಾಖಲಾತಿ ನೀಡೋದಾಗಿ ಹೇಳಿದ್ದ ಉದ್ಯಮಿ ಸಿಸಿಬಿ ಕಡೆ ತಲೆ ಹಾಕುತ್ತಿಲ್ಲವಂತೆ. ಹಣ ನೀಡಿರೋದ್ರ ಬಗ್ಗೆ ವಂಚನೆ ಬಗ್ಗೆ 10 ಕ್ಕೂ ಹೆಚ್ಚು ವೀಡಿಯೊಗಳಿರೋದಾಗಿ ಹೇಳಿದ್ದ ಉದ್ಯಮಿ, ಇದೀಗ ಕೇವಲ ಐದು ವೀಡಿಯೋಗಳನ್ನಷ್ಟೆ ಸಿಸಿಬಿಗೆ ನೀಡಿದ್ದಾರೆ.

    ಐದು ಕೋಟಿ ಹಣವನ್ನ ಲೋನ್ ಪಡೆದು ಕೊಟ್ಟಿರೋದಾಗಿ ಹೇಳಿದ್ದ ಉದ್ಯಮಿ, ಈವರೆಗೂ ಹಣದ ಮೂಲದ ಡಾಕ್ಯುಮೆಂಟ್ಸ್ ನೀಡ್ತಿಲ್ಲ. ಲೋನ್ ಪಡೆದಿದ್ರೆ ಅದ್ರ ದಾಖಲಾತಿ ಸಲ್ಲಿಸಿ ಅಂತಾ ಸಿಸಿಬಿ ಪೊಲೀಸರು ಹೇಳಿದ್ರೂ ನೋ ಯೂಸ್. ದಾಖಲಾತಿ ಸಮೇತ ವಿಚಾರಣೆಗೆ ಬರುವಂತೆ ಎರಡು ಬಾರಿ ನೋಟಿಸ್ ನೀಡಿದರೂ ಉದ್ಯಮಿ ಗೋವಿಂದ ಬಾಬು ಪೂಜಾರಿ ಸಿಸಿಬಿ ಕಡೆ ತಲೆ ಹಾಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    ಕೇಸ್ ಮಾಡಿಸುವಾಗ ಇದ್ದ ಉತ್ಸಾಹ ಕೇಸ್ ಮುಕ್ತಾಯವಾಗುವ ಹಂತಕ್ಕೆ ಬಂದಾಗ ಇಲ್ಲದಂತೆ ಕಾಣ್ತಿದೆ. ಎವಿಡೆನ್ಸ್ ಕೊಟ್ಟು ಹಣದ ಮೂಲ ತಿಳಿಸಿದ್ರೆ ಕೇಸ್ ಮುಗಿದು ಪೊಲೀಸ್ರು ಚಾರ್ಜ್ ಶೀಟ್‍ಗೆ ತಯಾರಿ ಮಾಡ್ಕೊಂಡಿರೋರು. ಇದೀಗ ಉದ್ಯಮಿಯ ಅಸಹಕಾರದಿಂದ ಕೇಸ್ ಕುಂಟುತ್ತಾ ಸಾಗ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಬೆಂಗಳೂರು: ಚೈತ್ರಾ (Chaitra Kundapura) ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

    ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ (Govind Babu Poojari) ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ (BJP MLA Ticket Scam) ಹಣ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೆ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ ಮಠದಲ್ಲಿದೆ ಅಂತ ಸ್ವಾಮೀಜಿ ಅಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೇ ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ, ಚೈತ್ರಾ ಹೇಳಿದಂತೆ ಕೇಳಿದ್ದೀನಿ. ತಪ್ಪಿಗೆ ನಾನೇ ಹೊಣೆಯಾಗಿದ್ದು, ಬೇರೆ ಯಾರೂ ಈ ಕೇಸ್ ನಲ್ಲಿ ಇಲ್ಲ ಅಂತಾ ಅಭಿನವ ಹಾಲಶ್ರೀ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಇದನ್ನೂ  ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

    ಈ ನಡುವೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ. ಇದನ್ನೂ  ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

    ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

    ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ (BJP MLA Ticket Scam) ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ (Govind Babu Poojari) ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ED) ದೂರು ದಾಖಲಾಗಿದೆ.

    5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.  ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರ

    ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ನಟರಾಜ ಶರ್ಮಾ, ಗೋವಿಂದ ಪೂಜಾರಿ ಅವರು ನೀಡಿರುವ ದೂರಿನಲ್ಲಿ ನಗದು ರೂಪದಲ್ಲಿ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಟಿಕೆಟ್‌ಗೆ 5 ಕೋಟಿ ರೂ. ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ. ಮುಂಬೈನಲ್ಲಿ (Mumbai) ವ್ಯವಹಾರ ಮಾಡಿಕೊಂಡಿದ್ದ ಅವರಿಗೆ 5 ಕೋಟಿ ರೂ. ಹಣವನ್ನು ನಗದು ರೂಪದಲ್ಲಿ ನೀಡಬಾರದು ಎನ್ನುವುದು ಅವರಿಗೆ ತಿಳಿದಿರಬೇಕಿತ್ತು. ಇದು ಹವಾಲಾ ಹಣ ಎಂಬ ದೃಷ್ಟಿಯಿಂದ ದೂರು ನೀಡಿದ್ದೇನೆ ಎಂದು ತಿಳಿಸಿದರು.

    ಈ ವಂಚನೆ ಪ್ರಕರಣದಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಾಲವಾಗಿಯೇ ಹಣ ಪಡೆದಿದ್ದರೂ ಸಾಲ ಪಡೆದ ಉದ್ದೇಶವೇ ಬೇರೆಯಾಗಿದೆ. ನಗದು ರೂಪದಲ್ಲಿ ಇಷ್ಟೊಂದು ವ್ಯವಹಾರ ನಡೆಸಿದ್ದು ಹೇಗೆ? ಇಡಿ ಈ ವಿಚಾರವಾಗಿ ತನಿಖೆ ಮಾಡಬೇಕೆಂದು ಕೋರಿ ದೂರು ನೀಡಿದ್ದೇನೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    ಬೆಂಗಳೂರು: ಚೈತ್ರಾ ಕುಂದಾಪುರ & ಗ್ಯಾಂಗ್‍ನಿಂದ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೊಸ ಹೋಗಿದ್ದ ಗೋವಿಂದ ಪೂಜಾರಿ ವಂಚನೆ ವಿಚಾರವಾಗಿ ಏಪ್ರಿಲ್ ತಿಂಗಳಲ್ಲೇ ಆರ್ ಎಸ್‍ಎಸ್ (RSS) ಕದ ತಟ್ಟಿದ್ದರಂತೆ.

    ಈ ವೇಳೆ ಆರ್‍ಎಸ್‍ಎಸ್ ನಾಯಕರು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಲು ಹಿಂದೇಟು ಹಾಕಿದ್ದಾರೆ. ಅಲ್ಲದೆ ಚೈತ್ರಾ ಹಿಂದುತ್ವದ ಬಗ್ಗೆ ಭಾಷಣ ಮಾಡಿದ ಮಾತ್ರಕ್ಕೆ ವಂಚನೆ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದಿದ್ದಾರಂತೆ. ಈ ರೀತಿ ವ್ಯವಹಾರಗಳು ಟಿಕೆಟ್ (BJP Ticket) ಕೊಡಿಸುವ ವಿಚಾರಗಳಲ್ಲಿ ಆರ್‍ಎಸ್‍ಎಸ್ ಹೀಗೆಲ್ಲ ಮಧ್ಯಪ್ರವೇಶ ಮಾಡಿಲ್ಲ ಎಂದಿದ್ರಂತೆ.

    ಹಣ ಕೊಟ್ಟು ಟಿಕೆಟ್ ಪಡೆಯಲು ಮುಂದಾಗಿದ್ದ ಗೋವಿಂದ ಪೂಜಾರಿಗೆ ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ. ಇಲ್ಲ ಬಿಜೆಪಿ ಅವ್ರ ಹತ್ರ ಮಾತಾಡಿ. ನಾವು ಮಾತ್ರ ಸಂಧಾನ ಮಾಡಿಸಲ್ಲ ಅಂತಾ ಆರ್ ಎಸ್‍ಎಸ್ ನಾಯಕರು ಹೇಳಿದ್ದಾರಂತೆ. ಒಂದು ವೇಳೆ ಬಿಜೆಪಿ ನಾಯಕರು ಬಗೆಹರಿಸದಿದ್ದರೆ ಕಾನೂನು ಇದೆ ಹೋಗಿ ಎಂದು ಸಂದೇಶ ಕೊಟ್ಟಿದ್ದಾರಂತೆ. ಇದನ್ನೂ ಓದಿ: CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    ಇದೆಲ್ಲ ಕಹಾನಿ ನಡೆದು 4 ತಿಂಗಳ ಕಾಲ ಹಣ ವಾಪಸ್ ಪಡೆಯಲು ಗೋವಿಂದ ಪೂಜಾರಿ ನಾನಾ ಸರ್ಕಸ್ ನಡೆಸಿದ್ರಂತೆ. ಯಾವಾಗ ಬಿಜೆಪಿ ನಾಯಕರೂ ಸಂಧಾನಕ್ಕೆ ಡೋಂಟ್ ಕೇರ್ ಅಂದ್ರೋ ಆಗ ಗೋವಿಂದ ಪೂಜಾರಿ ಚೈತ್ರಾ& ಗ್ಯಾಂಗ್ ವಿರುದ್ಧ ದೂರು ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೋವಿಂದ ಬಾಬು ಪೂಜಾರಿಗೆ ಬೈದಿದ್ದೇನೆ: ಸೂಲಿಬೆಲೆ ಫಸ್ಟ್ ರಿಯಾಕ್ಷನ್

    ಗೋವಿಂದ ಬಾಬು ಪೂಜಾರಿಗೆ ಬೈದಿದ್ದೇನೆ: ಸೂಲಿಬೆಲೆ ಫಸ್ಟ್ ರಿಯಾಕ್ಷನ್

    ಬೆಂಗಳೂರು: ವಂಚಕಿ ಚೈತ್ರಾ ಕುಂದಾಪುರ (Chaitra Kundapura) ಹಾಗೂ ಗ್ಯಾಂಗ್ ಡೀಲ್‍ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆಯನ್ನು (Chakravarthy Sulibele) ಥಳಕು ಹಾಕುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ಸೂಲಿಬೆಲೆ ಪಬ್ಲಿಕ್ ಟಿವಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojary) ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಎರಡು ಬಾರಿ ಕರೆ ಮಾಡಿದ್ರು. ಗೋವಿಂದ ಬಾಬು ಪೂಜಾರಿಯವರ ಜೊತೆ ಯಾಕೆ ಹೀಗೆ ದುಡ್ಡು ಕೊಟ್ರಿ ಅಂತಾ ಜಗಳವಾಡಿದ್ದೆ. ಹಾಲಾಶ್ರೀ ಸ್ವಾಮೀಜಿ ಜೊತೆ ಸೇರಿದಂತೆ ಅನೇಕ ಸ್ವಾಮೀಜಿಗಳ ಜೊತೆ ಸಂಪರ್ಕ ಇದೆ. ಹಾಗಂತ ಈ ಪ್ರಕರಣದಲ್ಲಿ ಥಳಕು ಹಾಕೋದು ಬೇಡ ಎಂದರು.

    ನನ್ನ ಹೆಸರನ್ನು ಥಳಕು ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೆ ಇದನ್ನು ಗಂಭೀರವಾಗಿ ನಾನು ತೆಗೆದುಕೊಳ್ಳಲ್ಲ. ಗೋವಿಂದ ಬಾಬು ಪೂಜಾರಿ ನನ್ನ ಆತ್ಮೀಯರು ಎಂದರು. ಇದನ್ನೂ ಓದಿ: ಹೈದರಾಬಾದ್‍ನಲ್ಲಿ ಹಾಲಶ್ರೀ ಅಡಗಿರುವ ಶಂಕೆ – ಬಂಧನಕ್ಕೆ ತೆರಳಿದ ಸಿಸಿಬಿ ಟೀಂ

    ಸಿಟಿ ರವಿ ಕೂಡ ತುಂಬಾ ಸಲ ಹೇಳಿದ್ರು ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೇಟ್ ಪಡೆಯುವಂತಿಲ್ಲ. ನಾನು ಕೂಡ ಇದನ್ನೇ ಹೇಳಿದ್ದೇನೆ. ಗೋವಿಂದ ಬಾಬು ಪೂಜಾರಿಗೆ ಬೈದಿದ್ದೇನೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಡೀಲ್ ಪ್ರಕರಣಕ್ಕೂ ಹಿರೇಹಡಗಲಿ ಶ್ರೀಮಠಕ್ಕೂ ಸಂಬಂಧವಿಲ್ಲ: ಕಿರಿಯ ಹಾಲಶ್ರೀ ಸ್ಪಷ್ಟನೆ

    ಚೈತ್ರಾ ಡೀಲ್ ಪ್ರಕರಣಕ್ಕೂ ಹಿರೇಹಡಗಲಿ ಶ್ರೀಮಠಕ್ಕೂ ಸಂಬಂಧವಿಲ್ಲ: ಕಿರಿಯ ಹಾಲಶ್ರೀ ಸ್ಪಷ್ಟನೆ

    ಬಳ್ಳಾರಿ: ಚೈತ್ರಾ ಕುಂದಾಪುರ (Chaithra Kundapura) ಡೀಲ್ ಪ್ರಕರಣದ 3ನೇ ಆರೋಪಿಯಾಗಿರುವ, ಅಭಿನವ ಹಾಲಶ್ರೀ ಈವರೆಗೂ ಪತ್ತೆಯಾಗಿಲ್ಲ. ಇತ್ತ ಮಠದ ಭಕ್ತರಲ್ಲೂ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹಾಲಸ್ವಾಮಿ ಮಠದ (Halashri Mutt) ಕಿರಿಯ ಹಾಲಶ್ರೀಗಳು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

    ಹಿರೇಹಡಗಲಿ ಮಠಕ್ಕೆ ನೂರಾರು ವರ್ಷಗಳ ಪರಂಪರೆ ಇದೆ. ಜನಸಾಮಾನ್ಯರಿಗೆ ಇರುವ ಮಠ ಇದಾಗಿದೆ, ಜಾತಿ ವರ್ಗದ ಕಳೆ ಕಿತ್ತು ಸಾಮರಸ್ಯ ಬಿತ್ತಿದೆ. ನೂರಾರು ಧಾರ್ಮಿಕ ಕಾರ್ಯಗಳನ್ನ ಮಾಡಿಕೊಂಡು ಬಂದಿದೆ. ಸದ್ಯ ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆಘಾತ ಆಗಿದೆ. ಆ ಪ್ರಕರಣಕ್ಕೂ ಶ್ರೀಮಠಕ್ಕೂ ಸಂಬಂಧ ಇಲ್ಲ. ಪಾರದರ್ಶಕ ತನಿಖೆ ಮಾಡಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಮನವಿ ಮಾಡಿದ್ದಾರೆ.

    ಅಭಿನವ ಹಾಲಶ್ರೀಗಳ (Abhinava Halashri) ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿ, ಪ್ರಕರಣ ಇನ್ನೂ ತನಿಕೆ ಹಂತದಲ್ಲಿದೆ, ಭಕ್ತರು ವಿಚಲಿತರಾಗೋದು ಬೇಡ. ಸಹನೆಯಿಂದ ಎಲ್ಲ ಎದುರಿಸೋಣ. ಇದು ಪುತ್ರ ವರ್ಗ ಮಠ, ನಾಲ್ಕು ಪೂಜ್ಯರಿದ್ದಾರೆ. ಪ್ರತಿ ವರ್ಷ ಒಬ್ಬೊಬ್ಬರು ಮಠದ ಜವಾಬ್ದಾರಿ ಹೊರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯಮಿಗೆ ವಂಚನೆ ಪ್ರಕರಣ – ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ ಸಿಸಿಬಿ

    ಕೆಲವರು ನಮ್ಮ ಅಭಿಪ್ರಾಯ ಪಡೆಯದೇ ಮಠದ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ನಾವು ಕೂಡ ಕಾನೂನಿನ ಮೇಲೆ ನಂಬಿಕೆ ಇಟ್ಟವರು. ಅವರು ಎಲ್ಲಿ ಹೋಗುತ್ತಿದ್ದರು, ಏನು ಮಾಡುತ್ತಿದ್ದರು? ಎಂಬುದೇ ನಮಗೆ ಗೊತಿಲ್ಲ. ಆದ್ರೆ ಅವರು ಸಾಮಾಜಿಕ ಕೆಲಸ ಮಾಡುತ್ತಿದ್ದರು ಎಂಬುದು ನಮ್ಮ ನಂಬಿಕೆ ಎಂದು ಹೇಳಿದ್ದಾರೆ. 

    ವಂಚನೆ ಪ್ರಕರಣ ಬೇರೆ-ಬೇರೆ ತಿರುವು ಪಡೆಯುತ್ತಿದೆ. ಕಾನೂನಿನಡಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಸ್ವಾಮೀಜಿಯನ್ನ ಕರೆದುಕೊಂಡು ಉಪಯೋಗ ಮಾಡಿಕೊಂಡಿದ್ದಾರೆ. ಉಪಯೋಗಿಸಿಕೊಂಡವರು ಯಾರೂ ಇಲ್ಲ, ಎಲ್ಲಿದ್ದಾರೆ ಇವರ ಜೊತೆ ಓಡಾಡಿದವರು, ಒಬ್ಬರೇ ಓಡಾಟ ಮಾಡುತ್ತಿದ್ರು, ಏನ್ ಮಾಡುತ್ತಿದ್ರೋ ಗೊತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾನು ಬದುಕುಳಿಯಲ್ಲ.. ಮಗುವನ್ನು ಚೆನ್ನಾಗಿ ನೋಡಿಕೊ: ಪತ್ನಿಗೆ ವೀಡಿಯೋ ಕಾಲ್‌ ಮಾಡಿ ಹಿರಿಯ ಪೊಲೀಸ್‌ ಆಡಿದ ಕೊನೆ ಮಾತು

    ಈ ಹಿಂದೆಯೂ ಹಲವು ಬಾರಿ ಹಾಲಶ್ರೀಗಳಿಗೆ ಕೆಲ ಕಾರ್ಯಕ್ರಮಗಳಿಗೆ ಹೋಗೋದು ಬೇಡ ಅಂತಾ ಹೇಳಿದ್ವಿ. ಸ್ವಾಮೀಜಿಗಳು ರಾಜಕೀಯವಾಗಿ ಹೋಗಬಾರದಿತ್ತು. ತಪ್ಪು ಮಾಡಿಲ್ಲ ಅಂದ್ರೆ ಹೆದರುವ ಅವಶ್ಯಕತೆಯಿಲ್ಲ. ಅವರು ನಿರ್ದೋಷಿಯಾಗಿ ಬರಬೇಕು ಎಂಬುದೊಂದೇ ಮಠದ ಭಕ್ತರ ಆಶಯ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಓದಿದ್ದು 7ನೇ ಕ್ಲಾಸ್‌ – ಮೋಸಹೋದ ಕಥೆಯನ್ನು ವಿನಯ್‌ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ

    ನಾನು ಓದಿದ್ದು 7ನೇ ಕ್ಲಾಸ್‌ – ಮೋಸಹೋದ ಕಥೆಯನ್ನು ವಿನಯ್‌ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ

    ಉಡುಪಿ: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಕಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರನ್ನು ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರ (CCB Police) ತನಿಖೆ ನಡೆಸುತ್ತಿದ್ದಾರೆ. ಚೈತ್ರಾ ಕುಂದಾಪುರ (Chaitra Kundapura) ಮತ್ತು ಏಳು ಜನ ಸಹಚರರು ಪೊಲೀಸರ ವಶದಲ್ಲಿದ್ದಾರೆ. ಈ ನಡುವೆ ಮೋಸಕ್ಕೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Poojari) ಅವಧೂತ ವಿನಯ ಗುರೂಜಿಯವರಿಗೆ (Vinay Guruji) ಪತ್ರ ಬರೆದು ಆಗಿರುವ ವೃತ್ತಾಂತವನ್ನೆಲ್ಲ ವಿವರಿಸಿದ್ದಾರೆ.

    ಐದೂವರೆ ಕೋಟಿ ರೂಪಾಯಿ ಕಳೆದುಕೊಂಡ ನಂತರ ಮನನೊಂದು ಗೋವಿಂದ ಪೂಜಾರಿ ಅವಧೂತ ವಿನಯ್ ಗುರೂಜಿಗೆ ಪತ್ರ ಬರೆದಿದ್ದರು. ಗೋವಿಂದ ಬಾಬು ಪೂಜಾರಿ ಬರೆದ ಪತ್ರದ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಮುಂದಿನ ವರ್ಷ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಬಿಡುಗಡೆ

    ಕಷ್ಟಕರ ಪರಿಸ್ಥಿತಿಯಲ್ಲಿ ನಾನು ಏಳನೇ ತರಗತಿ ವಿದ್ಯಾಭ್ಯಾಸ ಮಾಡಿ ಮುಂಬೈಗೆ ಹೋದೆ. ಮುಂಬೈ ಹೋಟೆಲುಗಳಲ್ಲಿ ಪ್ಲೇಟ್ ತೊಳೆದು ಜೀವನವನ್ನು ರೂಪಿಸಿದ್ದೇನೆ. ಕೆಲಸ ಮಾಡುತ್ತಾ ಮಾಡುತ್ತಾ ಫೈವ್ ಸ್ಟಾರ್ ಹೋಟೆಲ್ ಗೆ ಸೇರಿಕೊಂಡೆ.

    ಐದು ಜನರಿಂದ ಒಂದು ಉದ್ಯಮವನ್ನು ನಾನು ಆರಂಭ ಮಾಡಿದೆ. ತಮಿಳುನಾಡು ಗುಜರಾತ್ ಆಂಧ್ರದಲ್ಲಿ ಮನೆ ಕಂಪನಿಗೆ ಫುಡ್ ಸರ್ವಿಸ್ ಶುರು ಮಾಡಿದೆ. ಲಾಭದಲ್ಲಿ ವೃದ್ಧಾಶ್ರಮ ಅನಾಥಾಶ್ರಮ ಕೋವಿಡ್ ಸಂದರ್ಭ ಶಿಕ್ಷಣಕ್ಕೆ ಸಹಾಯ ಮಾಡಿದೆ. ನನ್ನ ಜೀವನದಲ್ಲಿ ಈವರೆಗೆ 15 ರಿಂದ 20 ಸಾವಿರ ಮನೆ/ ಜನಗಳಿಗೆ ಸಹಾಯ ಮಾಡಿದ್ದೇನೆ. ಹಿರಿಯರ ಮಾರ್ಗದರ್ಶನದಂತೆ ನಾನು ಆರ್‌ಎಸ್‌ಎಸ್‌ನ ಐಟಿಸಿ ಕೋರ್ಸ್ ಅನ್ನು ಮುಗಿಸಿದೆ. ಊರಿನವರ ಆಪ್ತರ ಹಿತೈಷಿಗಳ ಮಾರ್ಗದರ್ಶನದಂತೆ ಬಿಜೆಪಿ ಸೇರ್ಪಡೆಯಾದೆ.

     

    ಕಳೆದ ಆರು ವರ್ಷಗಳಿಂದ ನಾನು ಬಿಜೆಪಿಯ ಸದಸ್ಯತ್ವ ಸ್ವೀಕರಿಸಿದ್ದೇನೆ. ನನ್ನ ಜೊತೆ ಕೆಲಸ ಮಾಡುತ್ತಿದ್ದ ಪ್ರಸಾದ್ ಬೈಂದೂರು ಚೈತ್ರಾಳನ್ನು ಮೊದಲು ಪರಿಚಯ ಮಾಡಿದ್ದಾನೆ. ಚೈತ್ರಾ ನಂತರ ಗಗನ್ ಕಡೂರು ಪರಿಚಯ ಮಾಡಿಸಿದಳು. ಬಿಜೆಪಿ ಮತ್ತು ಆರ್‌ ಎಸ್ ಎಸ್ ಎಂದು ವಿಶ್ವನಾಥ್ ಜಿ, ಅಭಿನವ ಸ್ವಾಮೀಜಿ , ನಾಯ್ಕ್ ಒಬ್ಬೊಬ್ಬರಾಗಿ ಪರಿಚಯಿಸಿದರು. ಆಮೇಲೆ ಚಿಕ್ಕಮಗಳೂರು ಬೆಂಗಳೂರು, ಮಂಗಳೂರಿನಲ್ಲಿ ಅಂತ ಹಂತವಾಗಿ 5.50ಕೋಟಿ ಪಡೆದರು. ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

    ಹರಿದ 10 ರೂ. ನೋಟು ಮೂಲಕ ಹಣ ವರ್ಗಾವಣೆಯಾಗಿದೆ. ಅರ್ಧ ಅರ್ಧ ನೋಟಿನ ಕೋಡ್ ವಾರ್ಡ್ ಮೂಲಕ ನಾವು ಹಣ ಹಸ್ತಾಂತರ ಮಾಡಿದ್ದೇವೆ. ನನ್ನ ಆಸ್ತಿಯನ್ನು ಅಡ ಇಟ್ಟು ಒಮ್ಮೆ ಮೂರು ಕೋಟಿ ಸಾಲ ಪಡೆದಿದ್ದೇನೆ. ಇನ್ನೆರಡು ಕೋಟಿ ಬೇಕು ಎಂದು ಚೈತ್ರ ಗ್ಯಾಂಗ್ ಬೇಡಿಕೆ ಇಟ್ಟಿದ್ದು, ಮತ್ತೆ ಖಾಸಗಿ ಫೈನಾನ್ಸ್ ನಿಂದ 2 ಕೋಟಿ ಸಾಲ ಪಡೆದುಕೊಂಡೆ ಎಂದು ವಿವರಿಸಿದ್ದಾರೆ.

    ಅವಧೂತ ಗುರೂಜಿಗೆ ಗೋವಿಂದ ಬಾಬು ಪೂಜಾರಿ ಪತ್ರದ ಕೊನೆಗೆ ವಿನಂತಿ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ, ಆರ್‌ಎಸ್‌ಎಸ್‌ ಸಂಘ ಎಂದು ಹೇಳಿ ನನಗೆ ಮೋಸ ಮಾಡಿದರು. ರಾಜಕೀಯದ ಆಮೀಷ ತೋರಿಸಿ ನನ್ನನ್ನು ಹಳ್ಳಕ್ಕೆ ತಳ್ಳಿದರು. ಹಿರಿಯರಾದ ತಾವು ನನಗೆ ದಾರಿ ತೋರಿಸಬೇಕು. ಕಾನೂನು ಮತ್ತು ಪೊಲೀಸ್ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ನನಗೆ ನ್ಯಾಯ ಒದಗಿಸಲು ಸಹಕಾರ ಮಾಡಿ ಎಂದು ಹೇಳುವ ಮೂಲಕ ಪತ್ರ ಕೊನೆಗೊಳಿಸಿದ್ದಾರೆ. ಅದರ ಜೊತೆ ಎರಡು ವಾಯ್ಸ್ ನೋಟ್ ಗಳು ಲಭ್ಯವಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • EXCLUSIVE: ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ವಿಷ ಕುಡಿಯೋ ನಾಟಕವಾಡಿದ್ದ ಗಗನ್!

    EXCLUSIVE: ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ವಿಷ ಕುಡಿಯೋ ನಾಟಕವಾಡಿದ್ದ ಗಗನ್!

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಹಾಗೂ ಗ್ಯಾಂಗ್ ಉದ್ಯಮಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೇ ಅಚ್ಚರಿಯ ವಿಚಾರಗಳು ಬಯಲಾಗುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಹಾಗೂ ಗ್ಯಾಂಗ್ ನಾಟಕದ ವೀಡಿಯೋವೊಂದು ಎಕ್ಸ್ ಕ್ಲೂಸೀವ್ ಆಗಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಚೈತ್ರಾ ಗ್ಯಾಂಗ್ ಮಾಡ್ತಿರುವ ಮೋಸ ಗೊತ್ತಾಗಿ ಗೋವಿಂದ ಬಾಬು ಕೊಟ್ಟ ಹಣವನ್ನು ವಾಪಸ್ ಮಾಡುವಂತೆ ಡಿಮ್ಯಾಂಡ್ ಮಾಡಿದ್ರು. ಹೀಗಾಗಿ ಏಪ್ರಿಲ್ 24ರಂದು ಗೋವಿಂದಬಾಬು ಕಚೇರಿಗೆ ಬಂದ ಚೈತ್ರಾ, ಗಗನ್ ಕಡೂರು ಮತ್ತು ಇತರರು ಮುಂಚಿತವಾಗಿಯೇ ಮಾಡಿದ ಪ್ಲಾನ್ ರೀತಿ ದೊಡ್ಡ ಹೈಡ್ರಾಮಾವನ್ನೇ ಮಾಡಿದ್ರು.

    ಗೋವಿಂದ ಬಾಬು ಕಚೇರಿಗೆ ಪ್ರಮುಖ ಆರೋಪಿ ಚೈತ್ರಾ, 2ನೇ ಆರೋಪಿ ಗಗನ್ ಕಡೂರು, 7ನೇ ಆರೋಪಿ ಕಿಶೋರ್, 8ನೇ ಆರೋಪಿ ಪ್ರಶಾಂತ್ ಬೈಂದೂರು ಆಗಮಿಸಿ ಸಂಧಾನಕ್ಕೆ ಯತ್ನಿಸಿದ್ರು. ಆದ್ರೆ, ಇದಕ್ಕೆ ಒಪ್ಪದೇ 5 ಕೋಟಿ ಹಣಕ್ಕೆ ಗೋವಿಂದ ಬಾಬು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಖಾಲಿ ವಿಷದ ಬಾಟಲಿಯಲ್ಲಿ ನೀರು ತುಂಬಿಕೊಂಡು, ಅದನ್ನೇ ಕುಡಿದು ಆತ್ಮಹತ್ಯೆಗೆ ಯತ್ನಿಸುವ ರೀತಿ ಗಗನ್ ಕಡೂರು ಡ್ರಾಮಾ ಮಾಡಿದ್ರು.

    ಈ ವೇಳೆ ಎ1 ಆರೋಪಿ ಚೈತ್ರಾ, ಗಗನ್ ಜೀವ ರಕ್ಷಣೆ ಮಾಡೋ ರೀತಿ ನಾಟಕ ಮಾಡಿದ್ರು. ಇದೀಗ ಈ ವಿಡಿಯೋ ಸಿಸಿಬಿಗೆ ಪ್ರಬಲ ಸಾಕ್ಷ್ಯವಾಗಲಿದೆ. ಅಂದ ಹಾಗೇ, ಪಬ್ಲಿಕ್ ಟಿವಿ ಜೊತೆ ನಿನ್ನೆ ಮಾತಾಡಿದ್ದ ಗೋವಿಂದ ಬಾಬು ಸಿಬ್ಬಂದಿ ಆರ್ಯ ಎನ್ನುವವರು, ಚೈತ್ರಾ ಗ್ಯಾಂಗ್ ಆತ್ಮಹತ್ಯೆ ಡ್ರಾಮಾ ಮಾಡಿತ್ತು. ಇದಕ್ಕೆ ನಾನೆ ಸಾಕ್ಷಿ ಅಂದಿದ್ರು. ಇದನ್ನೂ ಓದಿ: ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?

    ಇಂದು ಬೆಳಗ್ಗೆಯಷ್ಟೇ ಸಿಸಿಬಿ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದರು. ಕೂಡಲೇ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಚ್ಚರಿ ಅಂದ್ರೆ ಚೈತ್ರಾ ಕುಸಿದು ಬಿದ್ದಾಗ ಆಕೆಯ ಬಾಯಲ್ಲಿ ನೊರೆ ಬಂದಿತ್ತು. ಹೀಗಾಗಿ ಆಕೆಗೆ ಪಿಡ್ಸ್ ಬಂದಿರಬಹುದು ಎಂದು ಊಹಿಸಲಾಗಿತ್ತು. ಆದರೆ ಮೂರ್ಛೆ ರೋಗ ಅಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ  ಪ್ರಾಂಶುಪಾಲೆ ಆಸೀಮಾ ಬಾನು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]