Tag: ಗೋ ಕಳ್ಳತನ

  • ಗೋ ಕಳ್ಳತನದಲ್ಲಿ ಬಂಧಿತನಾದವನಿಗೆ ಕಸ್ಟಡಿಯಲ್ಲಿ ಕರೆಂಟ್ ಶಾಕ್, ಚಿತ್ರಹಿಂಸೆ – ಐವರು ಪೊಲೀಸರ ಅಮಾನತು

    ಗೋ ಕಳ್ಳತನದಲ್ಲಿ ಬಂಧಿತನಾದವನಿಗೆ ಕಸ್ಟಡಿಯಲ್ಲಿ ಕರೆಂಟ್ ಶಾಕ್, ಚಿತ್ರಹಿಂಸೆ – ಐವರು ಪೊಲೀಸರ ಅಮಾನತು

    ಲಕ್ನೋ: ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ವ್ಯಕ್ತಿಯೊಬ್ಬನಿಗೆ ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಠಾಣಾ ಉಸ್ತುವಾರಿ ಸೇರಿದಂತೆ ಏಳು ಮಂದಿ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    20 ವರ್ಷದ ರೆಹಾನ್ ದಿನಗೂಲಿ ಕೆಲಸಗಾರನಾಗಿದ್ದು, ಮೇ 2 ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಪೊಲೀಸರು ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬಂಧಿಸಿದ್ದಾರೆ. ಜಾನುವಾರು ಕಳ್ಳಸಾಗಣೆದಾರರ ಗುಂಪಿಗೆ ನೆರವು ನೀಡುತ್ತಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ನಂತರ ಆತನ ಮೇಲೆ ಲಾಠಿಯಿಂದ ಹಲ್ಲೆ ನಡೆಸಲಾಗಿದ್ದು, ವಿದ್ಯುತ್ ಶಾಕ್ ನೀಡಿದ್ದಾರೆ. ಆತನ ಖಾಸಗಿ ಭಾಗಗಳಿಗೆ ಗಾಯಗಳಾಗಿವೆ. ಆತನನ್ನು ಕಸ್ಟಡಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೀಗ ತೀವ್ರವಾಗಿ ಗಾಯಗೊಂಡಿರುವ ರೆಹಾನ್‍ಗೆ ನಡೆಯಲು ಮತ್ತು ಮಾತನಾಡುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.  ದನ್ನೂ ಓದಿ: ಚರ್ಚ್‍ನಲ್ಲಿ ಹತ್ಯಾಕಾಂಡ – 50 ಮಂದಿಯನ್ನು ಗುಂಡಿಟ್ಟು ಕೊಂದ

    ನಂತರ ಆತನನ್ನು ಬಿಡುಗಡೆಗೊಳಿಸಬೇಕಾದರೆ 5 ಸಾವಿರ ಲಂಚ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು. ಕೊನೆಗೆ 5,000 ರೂ. ದಂಡ ನೀಡಿದ ಬಳಿಕ ಪೊಲೀಸರು ಆತನನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಆತನ ಚಿಕಿತ್ಸೆಗಾಗಿ ಪೊಲೀಸರು 100 ರೂ. ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಇದೀಗ ಏಳು ಮಂದಿ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಅವರಲ್ಲಿ ಐವರನ್ನು ಅಮಾನತುಗೊಳಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ತೀವ್ರ ಗಾಯ ಮಾಡಿರುವುದು ಮತ್ತು ಅಪರಾಧ ಬೆದರಿಕೆ ಹಾಗೂ ಇತರೆ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ನಗರ ಪೊಲೀಸ್ ಹಿರಿಯ ಅಧಿಕಾರಿ ಪ್ರವೀಣ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಇದನ್ನೂ ಓದಿ:  ಬೆಂಗಳೂರಿನಲ್ಲಿ 16 ದಿನಗಳ ಬಳಿಕ ಕೊರೊನಾಗೆ ಮಹಿಳೆ ಬಲಿ

  • ಗೋವು ಕಳ್ಳರನ್ನು ಬಂಧಿಸಿ – ಶಿವಮೊಗ್ಗದ್ದಲ್ಲಿ ವಿಎಚ್‍ಪಿ, ಭಜರಂಗ ದಳ ಪ್ರತಿಭಟನೆ

    ಗೋವು ಕಳ್ಳರನ್ನು ಬಂಧಿಸಿ – ಶಿವಮೊಗ್ಗದ್ದಲ್ಲಿ ವಿಎಚ್‍ಪಿ, ಭಜರಂಗ ದಳ ಪ್ರತಿಭಟನೆ

    ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಗ್ರಾಮಾಂತರ ಹಾಗೂ ನಗರ ವ್ಯಾಪ್ತಿಯಲ್ಲಿ ನಿರಂತರ ಗೋವು ಕಳ್ಳತನ ನಡೆಯುತ್ತಿದೆ. ಗೋವುಗಳ ಕಳ್ಳ ಸಾಗಾಣಿಕೆ ತಡೆಯಬೇಕು ಮತ್ತು ಮಾರಿಕಾಂಬಾ ದೇವಸ್ಥಾನದ ಎದುರು ಮಲಗಿದ್ದ ಗೋವು ಕದ್ದೊಯ್ದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಮಾರಿಕಾಂಬಾ ದೇವಾಲಯದ ಎದುರು ಗೋವಿಗೆ ಪೂಜೆ ಸಲ್ಲಿಸಿ ಮೆರವಣಿಗೆ ಹೊರಟ ಕಾರ್ಯಕರ್ತರು ಮಾರ್ಕೆಟ್ ರಸ್ತೆ ಮಾರ್ಗವಾಗಿ ಬಿ.ಹೆಚ್.ರಸ್ತೆಯ ಶಿವಪ್ಪ ನಾಯಕ ವೃತ್ತ ರಾಷ್ಟೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸುವ ಮೂಲಕ ಗೋವು ಕಳ್ಳರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ

    ಸಾಗರ ತಾಲೂಕಿನ ಗ್ರಾಮಾಂತರ ಭಾಗ ಹಾಗೂ ನಗರ ಭಾಗದಲ್ಲಿ ನಡೆಯುತ್ತಿರುವ ಗೋಹತ್ಯೆ ಮತ್ತು ಗೋವು ಕಳ್ಳ ಸಾಗಾಣಿಕೆ ತಡೆಯುವಲ್ಲಿ ಪೆÇಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ.

    ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ನಗರ ಸಭೆಯಲ್ಲಿ ಬಿಜೆಪಿ ಆಡಳಿತವಿದೆ. ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಹಿಂದೂಗಳನ್ನು ಬಳಸಿಕೊಂಡು, ಹಿಂದುತ್ವ, ಗೋಸಂರಕ್ಷಣೆ ಬಗ್ಗೆ ಮಾತನಾಡುವ ಶಾಸಕರು, ನಗರಸಭೆ ಆಡಳಿತ ಈಗ ಗೋವು ಕಳ್ಳ ಸಾಗಾಣಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಲು ಹಿಂದೆ ಸರಿದಿರುವುದು ನಾಚಿಕೆಯ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: KFC ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ