Tag: ಗೋ ಪೂಜೆ

  • ಹಿಂದೂ ಜಪ ಆರಂಭಿಸಿದ ಪರಮೇಶ್ವರ್ – ಗೋ ಪೂಜೆ, ಧರ್ಮಗೋಷ್ಠಿ ಆಯೋಜನೆ

    ಹಿಂದೂ ಜಪ ಆರಂಭಿಸಿದ ಪರಮೇಶ್ವರ್ – ಗೋ ಪೂಜೆ, ಧರ್ಮಗೋಷ್ಠಿ ಆಯೋಜನೆ

    ತುಮಕೂರು: ಚುನಾವಣೆ ಸಮೀಪಿಸುತಿದ್ದಂತೆ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಹಿಂದೂ (Hindu) ಧರ್ಮದ ಜಪ ಮಾಡುತ್ತಿದ್ದಾರೆ. ಕೊರಟಗೆರೆ ಕ್ಷೇತ್ರದ ಚಿಕ್ಕತೊಟ್ಲುಕೆರೆ ಅಟವಿ ಮಠದಲ್ಲಿ ಧರ್ಮಗೋಷ್ಠಿ ಮತ್ತು ಗೋ ಪೂಜೆ (Go Pooja) ಆಯೋಜನೆ ಮಾಡಿದ್ದಾರೆ.

    ಈ ವೇಳೆ ಧರ್ಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿ.ಪರಮೇಶ್ವರ್, ಹಿಂದೂ ಧರ್ಮ ಬಹಳ ಶ್ರೇಷ್ಠವಾದ ಧರ್ಮ, ಹಿಂದೂ ಧರ್ಮದ ಬದ್ಧತೆಗಳು, ಹಿಂದೂ ಧರ್ಮ ಕೊಟ್ಟ ಅನೇಕ ವಿಚಾರಧಾರೆಗಳನ್ನು ಚರ್ಚೆ ಮಾಡಿ ಸಮಾಜಕ್ಕೆ ಇನ್ನೊಮ್ಮೆ ತಿಳಿಸುವ ಅವಶ್ಯಕತೆ ಇದೆ ಹೀಗಾಗಿ ಧರ್ಮಗೋಷ್ಠಿ ಆಯೋಜನೆ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ 108 ಅಂಬುಲೆನ್ಸ್ ನೌಕರರ ಹೋರಾಟದ ಎಚ್ಚರಿಕೆ

    ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮದ ಬಗ್ಗೆ ಗೊಂದಲ ಎದ್ದಿದೆ. ಈ ಧರ್ಮ ಸಭೆಯಲ್ಲಿ ಅದಕ್ಕೆ ಸ್ಪಷ್ಟೀಕರಣ ಸಿಗಲಿದೆ ಎಂದಿದ್ದು, ಗೋ ಪೂಜೆಯ ಮಹತ್ವವನ್ನೂ ಸಾರಿದ್ದಾರೆ. ಗೋ ಪೂಜೆ ಅನ್ನೋದು ಹಿಂದೂ ಧರ್ಮದಲ್ಲಿ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ. ಗೋ ಪೂಜೆ ಮಾಡೋದ್ರಿಂದ ನಾವು 33 ಕೋಟಿ ದೇವರುಗಳಿಗೆ ತಲುಪುತ್ತೇವೆ. ಹಾಗಾಗಿ ನಾವು ಇವತ್ತು ಗೋ ಪೂಜೆ ಮಾಡಿ ಆ ಶ್ರೇಷ್ಠತೆಯನ್ನು ಗಳಿಸಿಕೊಳ್ಳಬೇಕು. ಅದರಿಂದ ಸಮಾಜಕ್ಕೆ, ಮನುಕುಲಕ್ಕೆ ಒಳ್ಳೆದಾಗಬೇಕು ಎಂದಿದ್ದಾರೆ. ಗೋ ಹತ್ಯೆ ನಿಷೇಧ ಕಾನೂನು ವಿರೋಧಿಸುವ ಪಕ್ಷದ ನಾಯಕ ಗೋ ಪೂಜೆಗೆ ಬೆಂಬಲ ಸೂಚಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಜೊತೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ ರಿಷಿ ಸುನಾಕ್

    ಪತ್ನಿ ಜೊತೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ ರಿಷಿ ಸುನಾಕ್

    ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

    ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಗೋ ಬ್ಯಾಕ್ ಇಂಡಿಯಾ, ನೀವು ನಮ್ಮ ದೇಶ ಹಾಳು ಮಾಡ್ತಿದ್ದೀರಾ – ಭಾರತೀಯ ಮಹಿಳೆಯರ ಮೇಲೆ ವಿದೇಶಿ ಮಹಿಳೆಯಿಂದ ಹಲ್ಲೆ

    ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

    ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು. ಇದನ್ನೂ ಓದಿ: 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಬಿದ್ದು ಐವರು ಸಾವು, 7 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ವೀಡಿಯೋ: ಗೋ ಪೂಜೆ ಮಾಡಿ ಹಸುಗಳಿಗೆ ಚಿನ್ನದ ಸರ ತೊಡಿಸಿದ ಮನೆಮಂದಿ

    ವೀಡಿಯೋ: ಗೋ ಪೂಜೆ ಮಾಡಿ ಹಸುಗಳಿಗೆ ಚಿನ್ನದ ಸರ ತೊಡಿಸಿದ ಮನೆಮಂದಿ

    ಅಹಮದಾಬಾದ್: ಮನೆಯ ಹಸುವೊಂದು ಹೆಣ್ಣು ಕರುವಿಗೆ ಜನ್ಮ ನೀಡಿದ್ದರಿಂದಾಗಿ ಸಂತೋಷಗೊಂಡ ಕುಟುಂಬವೊಂದು ಕರುವಿಗೆ ಚಿನ್ನ ಮತ್ತು ಬೆಳ್ಳಿಯ ಸರವನ್ನು ತೊಡಿಸಿ ವಿಶಿಷ್ಟವಾಗಿ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

    ಗುಜರಾತ್‍ನ ನಿವಾಸಿಯಾಗಿರುವ ವಿಜಯ್ ಪ್ರಸನ್ನ ಎಂಬವರ ಮನೆಯಲ್ಲಿ ಕಳೆದ ಕೆಲದಿನಗಳ ಹಿಂದೆ ಹಸು ಹೆಣ್ಣು ಕರುವಿಗೆ ಜನ್ಮ ನೀಡಿತ್ತು. ಇದರಿಂದ ಸಂತೋಷಗೊಂಡ ವಿಜಯ್ ಕುಟುಂಬದವರು ಮನೆಗೆ ಗೃಹಲಕ್ಷ್ಮಿಯ ಆಗಮನವಾಗಿದೆ ಎಂದು ಸಮಾರಂಭವನ್ನು ಮಾಡಿ ಕರುವಿಗೆ ಪೂಜೆ ಮಾಡಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಉಡುಗೊರೆಯಾಗಿ ತೊಡಿಸಿ ಸಂಭ್ರಮಪಟ್ಟಿದ್ದಾರೆ.

    ವಿನಯ್ ಪ್ರಸನ್ನ ಅವರಿಗೆ ಗೋವುಗಳೆಂದರೆ ತುಂಬಾ ಪ್ರೀತಿಯಂತೆ. ಹಾಗಾಗಿ ತಮ್ಮ ಮನೆಯಲ್ಲಿ ಹಸು ಹೆಣ್ಣು ಕರು ಹಾಕುತ್ತಿದ್ದಂತೆ. ಸಮಾರಂಭವನ್ನು ಮಾಡಿ ಮನೆಯಲ್ಲಿ ಹೆಣ್ಣು ಮಗು ಹುಟ್ಟಿದರೆ ಯಾವ ರೀತಿ ಸಂಭ್ರಮಪಡುತ್ತಾರೋ ಅದೇ ರೀತಿ ಹಸು ಮತ್ತು ಕರುವಿಗೆ ಹೊಸ ಬಟ್ಟೆಯನ್ನು ತೊಡಿಸಿ ಪೂಜೆ ಮಾಡಿ ಮನೆಮಂದಿ ಖುಷಿ ಪಟ್ಟಿದ್ದಾರೆ.

    ಕರುವಿಗೆ ಉಡುಗೊರೆ ನೀಡುವ ಸಮಾರಂಭದ ವೀಡಿಯೋದಲ್ಲಿ, ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲರೂ ಕೂಡ ಸಾಲಾಗಿ ನಿಂತಿದ್ದಾರೆ. ಕುಟುಂಬ ಸದಸ್ಯರು ಗೋವುಗಳಿಗೆ ಹೊಸ ಬಟ್ಟೆಯನ್ನು ಹೊದಿಸಿದ್ದಾರೆ. ಹಣ್ಣು ಹಂಪಲನ್ನು ನೀಡಿದ ಮೇಲೆ ಬಾಕ್ಸ್ ನಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮನೆಯ ಮಹಿಳಾ ಸದಸ್ಯರು ಕರುವಿಗೆ ಹಾಕುತ್ತಿರುವ ದೃಶ್ಯವನ್ನು ಗಮನಿಸಬಹುದಾಗಿದೆ.

  • ಮಕರ ಸಂಕ್ರಾಂತಿ – ಗೋ ಪೂಜೆ ನೆರೆವೇರಿಸಿದ ಸಿಎಂ

    ಮಕರ ಸಂಕ್ರಾಂತಿ – ಗೋ ಪೂಜೆ ನೆರೆವೇರಿಸಿದ ಸಿಎಂ

    ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು. ಉಪಮುಖ್ಯಮಂತ್ರಿ  ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.

    ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ ಎಂದು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳನ್ನ ಸಿಎಂ ತಿಳಿಸಿದ್ದಾರೆ.

    ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ, ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ. ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿ ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.

  • ಹೆಮ್ಮಾರಿ ಕೊರೊನಾ ತೊಲಗಲೆಂದು 5 ಕಾಲಿನ ಗೋ ಮಾತೆಗೆ ಪೂಜೆ

    ಹೆಮ್ಮಾರಿ ಕೊರೊನಾ ತೊಲಗಲೆಂದು 5 ಕಾಲಿನ ಗೋ ಮಾತೆಗೆ ಪೂಜೆ

    ಶಿವಮೊಗ್ಗ: ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಮಹಾಮಾರಿ ತೊಲಗಲಿ ಎಂದು ಪ್ರಾರ್ಥಿಸಿ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ 5 ಕಾಲಿನ ಗೋ ಮಾತೆಗೆ ಡಿಕೆಶಿ ಅಭಿಮಾನಿ ದೇವೇಂದ್ರಪ್ಪ ಎಂಬವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    5 ಕಾಲಿನ ವಿಶೇಷ 4 ಗೋವುಗಳಿಗೆ ರಾಯರ ಮಠದ ಮುಂಭಾಗದಲ್ಲಿ ಪೂಜೆ ಸಲ್ಲಿಸಿ, ಕೊರೊನಾ ಮಹಾಮಾರಿ ತೊಲಗಿ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲಿ ಎಂದು ಪ್ರಾರ್ಥಿಸಲಾಯಿತು. ಅಲ್ಲದೇ ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹುಟ್ಟು ಹಬ್ಬ ಹಿನ್ನೆಲೆ ರಾಯರ ಮಠದಲ್ಲಿ ಡಿಕೆಶಿ ಹೆಸರಿನಲ್ಲಿ ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಗೋವುಗಳ ಮಾಲೀಕರಿಗೆ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ಸಹ ವಿತರಿಸಿದರು.

    ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಗೂ ಮಹಾಮಾರಿ ವಕ್ಕರಿಸಿದೆ. ಈವರೆಗೆ ಜಿಲ್ಲೆಯಲ್ಲಿ 9 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ ಐದು ದಿನದ ಹಿಂದೆ ಗುಜರಾತ್‍ನ ಅಹಮದಾಬಾದ್‍ನಿಂದ ಜಿಲ್ಲೆಗೆ ಆಗಮಿಸಿದ್ದ 8 ಮಂದಿ ತಬ್ಲಿಘಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಇಂದು ಮುಂಬೈನಿಂದ ತೀರ್ಥಹಳ್ಳಿ ತಾಲೂಕಿನ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ.

    ಮುಂಬೈನಿಂದ ಬಂದಿದ್ದ ವ್ಯಕ್ತಿಯನ್ನು ಹಾಸ್ಟೆಲ್‍ವೊಂದರಲ್ಲಿ ಕ್ವಾರಂಟೈನ್‍ಗೆ ಇಡಲಾಗಿತ್ತು. ಆದರೆ ಗುರುವಾರ ರಾತ್ರಿ ವ್ಯಕ್ತಿಗೆ ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಪರಿಣಾಮ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಯಿತು. ಈ ವೇಳೆ ಆವರಿಗೆ ಕೊರೊನಾ ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.