Tag: ಗೌತಮ್

  • ಗೌತಮಿ ದಂಪತಿ ಜೊತೆ ಕುಟುಂಬ ಸಮೇತ ಉಗ್ರಂ ಮಂಜು ಟೆಂಪಲ್ ರನ್

    ಗೌತಮಿ ದಂಪತಿ ಜೊತೆ ಕುಟುಂಬ ಸಮೇತ ಉಗ್ರಂ ಮಂಜು ಟೆಂಪಲ್ ರನ್

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಶೋ ಅದ್ಧೂರಿಯಾಗಿ ತೆರೆಬಿದ್ದಿದೆ. ಶೋ ಮುಗಿದು ಹಲವು ದಿನಗಳು ಕಳೆದಿದೆ. ಹೀಗಿರುವಾಗ ದೊಡ್ಮನೆ ಆಟದ ನಂತರವೂ ಗೌತಮಿ, ಉಗ್ರಂ ಮಂಜು ಗೆಳೆತನ ಮುಂದುವರೆದಿದೆ. ಗೌತಮಿ (Gouthami) ಕುಟುಂಬದಲ್ಲಿ ಮಂಜು ಒಬ್ಬರಾಗಿದ್ದಾರೆ. ಸದ್ಯ ಗೌತಮಿ ದಂಪತಿ ಜೊತೆ ಶ್ರೀ ವನದುರ್ಗಾ ದೇವಾಲಯಕ್ಕೆ (Vanadurga Temple) ಉಗ್ರಂ ಮಂಜು ಕೂಡ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಐಶ್ವರ್ಯ ರೈ ಕಾರಿಗೆ ಬಸ್‌ ಡಿಕ್ಕಿ – ನಟಿ ಸೇಫ್‌

    ಬಿಗ್ ಬಾಸ್‌ನಲ್ಲಿ (Bigg Boss) ಶುರುವಿನಲ್ಲಿ ಗೌತಮಿ, ಮಂಜು ಗೆಳೆತನ ಚೆನ್ನಾಗಿತ್ತು. ಆ ನಂತರ ಗೌತಮಿ ಮತ್ತು ಮಂಜು (Ugramm Manju) ನಡುವೆ ಬಿರುಕು ಮೂಡಿತ್ತು. ಇಬ್ಬರ ಜಿದ್ದಾಜಿದ್ದಿ ಫಿನಾಲೆವರೆಗೂ ಮುಂದುವರೆದಿತ್ತು. ಶೋ ಮುಗಿದ ಬಳಿಕ ಇಬ್ಬರ ನಡುವಿನ ಸ್ನೇಹ ಮತ್ತೆ ಗಟ್ಟಿಯಾಗಿದೆ. ಆಗಾಗ ಗೌತಮಿ ದಂಪತಿಯನ್ನು ಉಗ್ರಂ ಮಂಜು ಭೇಟಿಯಾಗುತ್ತಿರುತ್ತಾರೆ. ಇದನ್ನೂ ಓದಿ:ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ರನ್ಯಾ ರಾವ್‌ ಜಾಮೀನು ಅರ್ಜಿ ಆದೇಶ ಇಂದು

     

    View this post on Instagram

     

    A post shared by Max manju (@maxmanju_official)

    ಗೌತಮಿ ಅವರು ವನದುರ್ಗಾ ದೇವಿಯನ್ನು ಅಪಾರವಾಗಿ ನಂಬುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವನದುರ್ಗಾ ದೇವಾಲಯ ಇದೆ. ಇಲ್ಲಿಗೆ ಅವರು ಅನೇಕ ಬಾರಿ ಭೇಟಿ ಕೊಟ್ಟಿದ್ದರು. ಈಗ ಮಂಜು ಫ್ಯಾಮಿಲಿ ಹಾಗೂ ಗೌತಮಿ ದಂಪತಿ ಒಟ್ಟಾಗಿ ಈ ದೇವಾಲಯಕ್ಕೆ ತೆರಳಿದ್ದಾರೆ. ಶೋ ಮುಗಿದ ಮೇಲೆಯೂ ಇವರ ಬಾಂಧವ್ಯ ನೋಡಿ ಫ್ಯಾನ್ಸ್‌ ಮೆಚ್ಚುಗೆ ಸೂಚಿಸಿದ್ದಾರೆ.

    ಇನ್ನೂ ‘ಬಿಗ್ ಬಾಸ್’ ಮತ್ತು ‘ಮ್ಯಾಕ್ಸ್’ ಸಿನಿಮಾದ ಸಕ್ಸಸ್ ಬಳಿಕ ಉಗ್ರಂ ಮಂಜು ಹಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗೌತಮಿ ಉತ್ತಮ ಪ್ರಾಜೆಕ್ಟ್‌ಗಳಿಗಾಗಿ ಎದುರು ನೋಡ್ತಿದ್ದಾರೆ.

  • ಕನ್ನಡದಲ್ಲಿ ಸಿನಿಮಾ ಮಾಡಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್

    ಕನ್ನಡದಲ್ಲಿ ಸಿನಿಮಾ ಮಾಡಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್

    ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ (Gautham Vasudev Menon) ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡುವ ಪ್ಲ್ಯಾನ್‌ ಅನ್ನು ನಿರ್ದೇಶಕ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ

    ಸಂದರ್ಶನವೊಂದರಲ್ಲಿ ಡೈರೆಕ್ಟರ್ ಗೌತಮ್ ಮಾತನಾಡಿ, ಈ ವರ್ಷ ನಾನು ಕನ್ನಡ ಸಿನಿಮಾ ಮಾಡುವ ಆಲೋಚನೆ ಹೊಂದಿದ್ದೇನೆ. ದೊಡ್ಡ ಸಿನಿಮಾ ನಿರ್ಮಿಸುವ ಪ್ಲ್ಯಾನ್‌ಯಿದೆ ಎಂದಿದ್ದಾರೆ. ದಕ್ಷಿಣದ ಜೊತೆಗೆ ಬಾಲಿವುಡ್‌ನಲ್ಲೂ ನಾನು ಹೆಚ್ಚಿನ ಸಿನಿಮಾಗಳನ್ನು ಮಾಡಿದ್ದೇನೆ. ನಾನು ಯಾವಾಗಲೂ ಭಾಷೆಯ ಗಡಿ ದಾಟಲು ಇಷ್ಟಪಡುತ್ತೇನೆ. ಈಗ ನಾನು ಕನ್ನಡದಲ್ಲಿ ಸಿನಿಮಾ ಮಾಡಲು ಗುರಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.

    ಕನ್ನಡ ನಾನು ಮಾತನಾಡುವ ಭಾಷೆಯಲ್ಲ. ಆದರೆ ನನಗೆ ಗೊತ್ತಿಲ್ಲದ ಭಾಷೆಯಲ್ಲಿ ಸಿನಿಮಾ ಮಾಡುವ ಸವಾಲನ್ನು ಸ್ವೀಕರಿಸಲು ರೆಡಿಯಾಗಿದ್ದೇನೆ ಎಂದು ಕನ್ನಡ ಸಿನಿಮಾ ಮಾಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸ್ಯಾಂಡಲ್‌ವುಡ್‌ನ ಯಾವ ನಟರೊಂದಿಗೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

    ಅಂದಹಾಗೆ, ನಾಗಚೈತನ್ಯ ಮತ್ತು ಸಮಂತಾ ನಟಿಸಿದ ಯೇ ಮಾಯಾ ಚೇಸಾವೆ, ಎಕ್ ದಿವಾನಾ ಥಾ, ಕುಟ್ಟಿ ಸ್ಟೋರಿ ಸೇರಿದಂತೆ ಬಹುಭಾಷೆಗಳಲ್ಲಿ ಅವರು ನಿರ್ದೇಶನ ಮಾಡಿದ್ದಾರೆ. ಸದ್ಯ ಚಿಯಾನ್ ವಿಕ್ರಮ್ ನಟನೆಯ ಹೊಸ ಸಿನಿಮಾಗೆ ಗೌತಮ್ ವಾಸುದೇವ್ ಮೆನನ್ ನಿರ್ದೇಶನ ಮಾಡಿದ್ದಾರೆ. ಮುಂದಿನ ತಿಂಗಳು ಏಪ್ರಿಲ್‌ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

  • ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕಾಲ ಕಳೆದ ಮಹೇಶ್‌ ಬಾಬು ಪುತ್ರ

    ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕಾಲ ಕಳೆದ ಮಹೇಶ್‌ ಬಾಬು ಪುತ್ರ

    ತೆಲುಗಿನ ಸ್ಟಾರ್ ಹೀರೋ ಮಹೇಶ್ ಬಾಬು (Mahesh Babu) ಪುತ್ರ ಗೌತಮ್ (Gautam) ಇದೀಗ ಸುದ್ದಿಯಲ್ಲಿದ್ದಾರೆ. ಗೌತಮ್ ಶಾಲೆಗೆ ಮುಗಿದ ಮೇಲೆ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಮಗನ ಆಸ್ಪತ್ರೆಯ ಭೇಟಿಯ ಬಗ್ಗೆ ಅಸಲಿ ಕಾರಣ ಬಿಚ್ಚಿದ್ದಾರೆ. ಗೌತಮ್ ನಡೆಯ ಬಗ್ಗೆ ನಟಿ ನಮ್ರತಾ ಶಿರೋಡ್ಕರ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಕಲಾ ಪ್ರತಿನಿಧಿಯಾಗಿ ಮೈಸೂರಿಗೆ ದೀಪ ಹಚ್ಚಲು ಬರುತ್ತೇನೆ: ಹಂಸಲೇಖ

    ನಟ ಮಹೇಶ್ ಬಾಬು ಅವರು ತಮ್ಮದೇ ಚಾರಿಟೇಬಲ್ ಫೌಂಡೇಶನ್ (MB Foundation)  ಹೊಂದಿದ್ದಾರೆ. ಎಂಬಿ ಫೌಂಡೇಶನ್ ಎಂಬುದು ಇದರ ಹೆಸರು. ಇದರ ಮೂಲಕ ಅನೇಕರಿಗೆ ನೆರವು ನೀಡುವ ಕೆಲಸ ಮಾಡ್ತಿದ್ದಾರೆ. ರೇನ್‌ಬೋ ಮಕ್ಕಳ ಆಸ್ಪತ್ರೆ ಜೊತೆಗೆ ಈ ಫೌಂಡೇಶನ್ ಕೈಜೋಡಿಸಿದೆ. ಹಾಗಾಗಿ ಗೌತಮ್ ಘಟ್ಟಮನೇನಿ ಅವರು ಈ ಆಸ್ಪತ್ರೆಗಳಿಗೆ (Hospital) ಭೇಟಿ ನೀಡುತ್ತಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜೊತೆಗೆ ಅವರು ಮಾತನಾಡುತ್ತಾರೆ. ಆ ಮೂಲಕ ಅವರ ಮುಖದಲ್ಲಿ ನಗು ಅರಳಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ನಮ್ರತಾ ಶಿರೋಡ್ಕರ್ (Namrata Shirodkar) ಮಗನ (Son) ನಡೆ ಬಗ್ಗೆ ಶ್ಲಾಘಿಸಿದ್ದಾರೆ.

    ಗೌತಮ್ ಎಂಬಿ ಫೌಂಡೇಶನ್‌ನ ಮುಖ್ಯ ಭಾಗ. ಶಾಲೆ ಮುಗಿದ ಬಳಿಕ ಅವನು ಆಸ್ಪತ್ರೆಗೆ ತೆರಳುತ್ತಾನೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಖದಲ್ಲಿ ನಗು ಅರಳಿಸುವ ಸಲುವಾಗಿ ಅವರ ಜೊತೆ ಒಂದಷ್ಟು ಸಮಯ ಕಳೆಯುತ್ತಾನೆ. ಮಕ್ಕಳು ಆದಷ್ಟು ಬೇಗ ಚೇತರಿಸಿಕೊಳ್ಳಲು ಈ ರೀತಿಯಲ್ಲಿ ಸಹಾಯ ಮಾಡುತ್ತಿರುವ ಗೌತಮ್ ಸಾಥ್ ನೀಡುತ್ತಾರೆ. ಈ ಬಗ್ಗೆ ನಟಿ ನಮ್ರತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಒಟ್ನಲ್ಲಿ ಮಹೇಶ್ ಬಾಬು ಪುತ್ರ ನಡೆ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಮಹೇಶ್ ಬಾಬು ಪುತ್ರಿ ಸಿತಾರಾ (Sitara), ನಿರೂಪಣೆ- ಮಾಡೆಲಿಂಗ್ ಅಂತಾ ಒಂದಲ್ಲಾ ಒಂದು ವಿಚಾರವಾಗಿ ಗಮನ ಸೆಳೆಯುತ್ತಿದ್ದಾರೆ. ಗೌತಮ್ ಸದ್ಯ ಎಜುಕೇಶನ್ ಕಡೆ ಗಮನ ಕೊಡಲಿ ಬಳಿಕ ಚಿತ್ರರಂಗದಲ್ಲಿ ಬೆಳೆಯುವ ಆಸಕ್ತಿ ಇದ್ದರೆ ಬೆಳಯಲಿ ಎಂದು ನಮ್ರತಾ ಈ ಹಿಂದಿನ ಸಂದರ್ಶನದಲ್ಲಿ ಹೇಳಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀವು ನನ್ನ ನಿಜವಾದ ಹೀರೋ, ಅಗಲಿದ ತಾತನ ನೆನೆದು ಮಹೇಶ್ ಬಾಬು ಪುತ್ರಿ ಭಾವುಕ

    ನೀವು ನನ್ನ ನಿಜವಾದ ಹೀರೋ, ಅಗಲಿದ ತಾತನ ನೆನೆದು ಮಹೇಶ್ ಬಾಬು ಪುತ್ರಿ ಭಾವುಕ

    ತೆಲುಗು ನಟ(Telagu Actor) ಮಹೇಶ್ ಬಾಬು(Mahesh Babu) ಅವರ ಕುಟುಂಬಕ್ಕೆ ಒಂದಾದ ಮೇಲೊಂದು ಆಘಾತ ಎದುರಾಗುತ್ತಿದೆ. ಮಹೇಶ್ ಬಾಬು ತಂದೆ ಕೃಷ್ಣ ಅವರ ಸಾವಿಗೆ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಇದೀಗ ಮಹೇಶ್ ಬಾಬು ಇಬ್ಬರು ಮಕ್ಕಳು ಸಿತಾರಾ ಮತ್ತು ಗೌತಮ್ ಕೂಡ ಅಗಲಿದ ತಾತನ ನೆನೆದು ಕಣ್ಣೀರಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪತ್ರದ ಮೂಲಕ ದುಃಖ ತೊಡಿಕೊಂಡಿದ್ದಾರೆ.

    ಮಹೇಶ್ ಬಾಬು ಅವರ ಕುಟುಂಬಕ್ಕೆ ದೊಡ್ಡ ಪೆಟ್ಟೆ ಬಿದ್ದಿದೆ. ಈ ವರ್ಷ ಶುರುವಿನಲ್ಲಿ ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು ನಿಧನರಾಗಿದ್ದರು. ಇತ್ತೀಚೆಗೆ ನಟನ ತಾಯಿ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದರು. ಈಗಾಗಲೇ ಶೋಕ ಸಾಗರದಲ್ಲಿ ಮುಳುಗಿರುವ ಈ ಕುಟುಂಬಕ್ಕೆ ಮಹೇಶ್ ಬಾಬು ಅವರ ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ ಅವರ ಕೂಡ ಶಾಕ್ ಕೊಟ್ಟಿದೆ. ಹೀಗಿರುವಾಗ ಅಗಲಿದ ತಾತನನ್ನು ನೆನೆದು ಮಹೇಶ್ ಬಾಬು ಮಕ್ಕಳು ಪತ್ರವೊಂದನ್ನ ಬರೆದಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: 50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ? 

    ಪುತ್ರಿ ಸಿತಾರಾ ತನ್ನ ತಾತನ ಜೊತೆಯಿರುವ ಫೋಟೋ ಶೇರ್ ಮಾಡಿ, ಇನ್ನು ನಾವು ಒಟ್ಟಿಗೆ ಕೂತು ಊಟ ಮಾಡುವುದಕ್ಕೆ ಆಗಲ್ಲ. ನೀವು ನನಗೆ ಸಾಕಷ್ಟು ವಿಚಾರಗಳನ್ನು ತಿಳಿಸಿದ್ದೀರಿ. ಪ್ರತಿನಿತ್ಯ ನಾನು ನಗುವಂತೆ ನೋಡಿಕೊಂಡಿದ್ದೀರಿ. ಇನ್ನು ಅವೆಲ್ಲಾ ನೆನಪು ಮಾತ್ರ. ನೀವು ನನ್ನ ನಿಜವಾದ ಹೀರೋ. ಒಂದು ದಿನ ನೀವು ಹೆಮ್ಮೆ ಪಡುವಂತೆ ಮಾಡುತ್ತೇನೆ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ತಾತ ಎಂದು ಸಿತಾರಾ ತನ್ನ ತಾತನೊಂದಿಗಿನ ಬಾಂಧವ್ಯವನ್ನು ಹಂಚಿಕೊಂಡಿದ್ದಾಳೆ.

    ಅದೇ ರೀತಿಯಾಗಿ ಮಹೇಶ್ ಬಾಬು ಪುತ್ರ ಗೌತಮ್ ಕೂಡ ಭಾವನಾತ್ಮಕ ಪತ್ರ ಹಂಚಿಕೊAಡಿದ್ದು, ನೀವು ಎಲ್ಲೇ ಇರಿ, ಹೇಗೆ ಇರಿ ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ನೀವು ಕೂಡ ನನ್ನನ್ನು ಪ್ರೀತಿಸುತ್ತೀರಾ ಎಂದು ಗೊತ್ತು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ತಾತ ಎಂದು ಗೌತಮ್ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾನೆ.

    ಇನ್ನೂ ಪದ್ಮಾಲಯ ಸ್ಟುಡಿಯೋದಲ್ಲಿ ನಟ ಕೃಷ್ಣ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಯಿತು. ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಅಮ್ಮಂದಿರ ದಿನದ ವಿಶೇಷ: ತನ್ನ ಪುಟ್ಟ ರಾಜಕುಮಾರನಿಗಾಗಿ ಭಾವನಾತ್ಮಕ ಸಾಲು ಬರೆದ ಕಾಜಲ್

    ಅಮ್ಮಂದಿರ ದಿನದ ವಿಶೇಷ: ತನ್ನ ಪುಟ್ಟ ರಾಜಕುಮಾರನಿಗಾಗಿ ಭಾವನಾತ್ಮಕ ಸಾಲು ಬರೆದ ಕಾಜಲ್

    ಟಾಲಿವುಡ್ ಕ್ವೀನ್ ಕಾಜಲ್ ಅಗರ್ವಾಲ್ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತನ್ನ ಮುದ್ದು ಕಂದಮ್ಮನ ಜೊತೆ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳ ಮಕ್ಕಳು ಹುಟ್ಟುವಾಗಲೇ ಸೆಲೆಬ್ರಿಟಿಗಳಾಗಿ ಹುಟ್ಟುತ್ತಾರೆ. ಅದರಂತೆ ಕಾಜಲ್ ಮಗನ ಮುದ್ದು ಮುಖ ನೋಡಬೇಕು ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ ಕಾಜಲ್ ಮಗನ ಜೊತೆ ಆಟವಾಡುವ ಫೋಟೋ ಶೇರ್ ಮಾಡಿದ್ರೂ, ಮುಖವನ್ನು ಮಾತ್ರ ಹ್ಯಾಡ್ ಮಾಡುತ್ತಿದ್ದರು. ಆದರೆ ಇಂದು ‘ಅಮ್ಮಂದಿರ ದಿನ’ವಾಗಿದ್ದರಿಂದ ತಮ್ಮ ಮುದ್ದು ಕಂದಮ್ಮನ ಫೋಟೋ ಜೊತೆಗೆ ಭಾವನ್ಮಾಕ ಸಾಲು ಬರೆದು ಪೋಸ್ಟ್ ಮಾಡಿದ್ದಾರೆ.

    ಕಾಜಲ್ ತನ್ನ ಮಗನಿಗೆ ನೀಲ್ ಎಂದು ಹೆಸರಿಟ್ಟಿದ್ದು, ತನ್ನ ಚಿಕ್ಕ ರಾಜಕುಮಾರನಿಗೆ ಮುದ್ದಾದ ಪತ್ರವನ್ನು ಬರೆದಿದ್ದಾರೆ. ಫೋಟೋವನ್ನು ಇನ್‍ಸ್ಟಾದಲ್ಲಿ ಶೇರ್ ಮಾಡಿದ ಕಾಜಲ್, ನನ್ನ ಪ್ರೀತಿಯ ನೀಲ್, ನೀನು ನನಗೆ ಯಾವಾಗಲೂ ಎಷ್ಟು ಅಮೂಲ್ಯವಾದವನು ಎಂದು ತಿಳಿಯಬೇಕೆಂದು ನಾನು ಬಯಸುತ್ತೇನೆ. ನಾನು ನಿನ್ನನ್ನು ನನ್ನ ತೋಳುಗಳಲ್ಲಿ ಹಿಡಿದಿಟ್ಟುಕೊಂಡೆ. ನಿನ್ನ ಪುಟ್ಟ ಕೈಯನ್ನು ನಾನು ಹಿಡಿದುಕೊಂಡಾಗ ನಿನ್ನ ಬೆಚ್ಚಗಿನ ಉಸಿರನ್ನು ನಾನು ಅನುಭವಿಸಿದೆ. ನಿನ್ನ ಸುಂದರವಾದ ಕಣ್ಣುಗಳನ್ನು ನೋಡಿದ ಕ್ಷಣ, ನಾನು ಶಾಶ್ವತವಾಗಿ ನಿನ್ನನ್ನು ಪ್ರೀತಿಸುತ್ತಿದ್ದೇನೆ. ಇದನ್ನೂ ಓದಿ: ಪೂಲ್‌ನಲ್ಲಿ ಪತಿಯ ಜೊತೆ ಹಾಟ್ ಆಗಿ ಕಾಣಿಸಿಕೊಂಡ ಕತ್ರಿನಾ ಕೈಫ್ 

    ನೀನು ನನ್ನ ಮೊದಲ ಮಗು. ಮುಂಬರುವ ವರ್ಷಗಳಲ್ಲಿ, ನಾನು ನಿನಗೆ ಕಲಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ಆದರೆ ನೀನು ಈಗಾಗಲೇ ನನಗೆ ಸಾಕಷ್ಟು ಪ್ರಮಾಣದಲ್ಲಿ ಕಲಿಸಿದ್ದೀಯಾ. ತಾಯಿಯಾಗುವುದು ಏನು ಎಂದು ನೀನು ನನಗೆ ಕಲಿಸಿದ್ದೀಯ. ನೀನು ನನಗೆ ನಿಸ್ವಾರ್ಥವಾಗಿರಲು, ಶುದ್ಧ ಪ್ರೀತಿ ಎಲ್ಲವನ್ನು ಕಲಿಸಿದ್ದೀಯ ಎಂದು ಭಾವನ್ಮಾಕ ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದಾರೆ.

    ಈ ಸಾಲುಗಳನ್ನು ನೋಡಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ತಾಯಂದಿರ ದಿನ ವಿಶ್ ಮಾಡಿದ್ದು, ಕ್ಯೂಟ್ ಎಂದು ಕಾಮೆಂಟ್ ಮಾಡಿದ್ದಾರೆ. ಈ ಹಿಂದೆ ಕಾಜಲ್ ತನ್ನ ಪತಿ ಗೌತಮ್ ಬಗ್ಗೆಯೂ ಭಾವನ್ಮಾಕ ಸಾಲುಗಳನ್ನು ಬರೆದು ಪೊಸ್ಟ್ ಮಾಡಿದ್ದರು. ಗೌತಮ್ ಹೇಗೆ ತನ್ನನ್ನು ನೋಡಿಕೊಳ್ಳುತ್ತಾರೆ. ಅವರು ನನಗೆ ಗೌರವವನ್ನು ಕೊಡುತ್ತಾರೆ ಎಂಬುದನ್ನು ಬರೆದುಕೊಂಡಿದ್ದರು. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಕಾಜಲ್ ಅಗರ್ವಾಲ್

  • ಕನ್ನಡಿಗ ಗೌತಮ್, ಚಹಲ್‍ಗೆ ಕೊರೊನಾ

    ಕನ್ನಡಿಗ ಗೌತಮ್, ಚಹಲ್‍ಗೆ ಕೊರೊನಾ

    ಕೊಲಂಬೋ: ನಿಗದಿತ ಓವರ್‍ ಗಳ ಕ್ರಿಕೆಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಂಡ ಭಾರತ ತಂಡಕ್ಕೆ ಕೊರೊನಾ ಆಘಾತ ನೀಡಿದೆ. ಇದೀಗ ಕನ್ನಡಿಗ ಕೃಷ್ಣಪ್ಪ ಗೌತಮ್ ಮತ್ತು ಯಜುವೇಂದ್ರ ಚಹಲ್‍ಗೆ ಕೊರೊನಾ ದೃಢಪಟ್ಟಿದೆ.

    ಶ್ರೀಲಂಕಾ ನಡುವಿನ 2ನೇ ಟಿ20 ಪಂದ್ಯಕ್ಕೂ ಮುನ್ನ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್ ಆಗಿತ್ತು. ಆ ಬಳಿಕ ಅವರ ಸಂಪರ್ಕಹೊಂದಿದ್ದ 8 ಮಂದಿ ಆಟಗಾರರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಲ್ಲಿ ಇಬ್ಬರು ಆಟಗಾರರಾದ ಗೌತಮ್ ಮತ್ತು ಚಹಲ್‍ಗೆ ಕೊರೊನಾ ಪಾಸಿಟಿವ್ ಆಗಿದೆ.

    ಈಗಾಗಲೇ ಟಿ20 ಮತ್ತು ಏಕದಿನ ಸರಣಿ ಮುಗಿಸಿಕೊಂಡು ಭಾರತ ತಂಡ ಇಂದು ತವರಿಗೆ ಆಗಮಿಸುವ ನಿರೀಕ್ಷೆ ಇದ್ದು, ಕೊರೊನಾ ಪಾಸಿಟಿವ್ ಬಂದ ಆಟಗಾರರು ಐಸೋಲೇಷನ್ ನಲ್ಲಿ ಅಲ್ಲೇ ಉಳಿದುಕೊಳ್ಳುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ

    ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದರೆ, ಟಿ20 ಸರಣಿಯನ್ನು 1-2 ಅಂತರದಲ್ಲಿ ಸೋತು ಮಿಶ್ರ ಫಲ ಅನುಭವಿಸಿದೆ.

  • ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ ಎಂದ ರಚಿತಾ ಸೋದರಿ

    ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ ಎಂದ ರಚಿತಾ ಸೋದರಿ

    – ಮಾಸ್ಕ್ ಧರಿಸಿ ಲಿಪ್‍ಲಾಕ್

    ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಪ್ರಕರಣ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ. ಈಗಾಗಲೇ ಸೀರಿಯಲ್, ಸಿನಿಮಾ ಶೂಟಿಂಗ್‍ಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಕೆಲವು ನಟ-ನಟಿಯರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಈ ಮಧ್ಯೆ ನಟಿ ನಿತ್ಯಾ ರಾಮ್ ಮಾಸ್ಕ್ ಧರಿಸಿ ಪತಿಯೊಂದಿಗೆ ಕಿಸ್ ಮಾಡಿದ್ದಾರೆ.

    ನಟಿ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ಪತಿ ಗೌತಮ್ ಜೊತೆ ಮಾಸ್ಕ್ ಧರಿಸಿ ಕಿಸ್ ಮಾಡಿದ್ದಾರೆ. ಈ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಪರಸ್ಪರ ಮಾಸ್ಕ್ ಧರಿಸಿ ಕಿಸ್ ಮಾಡಿದ್ದು, “ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ” ಎಂದು ಫೋಟೋಗೆ ಕ್ಯಾಪ್ಶನ್ ಕೊಟ್ಟಿದ್ದಾರೆ.

    ಅಷ್ಟೇ ಅಲ್ಲದೇ ಆ ಫೋಟೋಗೆ #CoronaEffect #StaySafe #NeverStopRomance ಎಂಬ ಹ್ಯಾಶ್ ಟ್ಯಾಗ್‍ಗಳನ್ನು ಬಳಸಿದ್ದಾರೆ. ಈ ಫೋಟೋವನ್ನು ಅಪ್ಲೋಡ್ ಮಾಡಿದ ತಕ್ಷಣ ಕಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡಿದ್ದಾರೆ. ‘ಮೊದಲು ಸುರಕ್ಷತೆ ಆಮೇಲೆ ಕಿಸ್’, ‘ಕೊರೊನಾ ಗಂಭೀರವಾದ ಸಮಸ್ಯೆ, ತಮಾಷೆಯಲ್ಲ’ ಅಲ್ಲಿ ಕೊರೊನಾ ಇದ್ರೂ ನೀವು ರೊಮ್ಯಾನ್ಸ್ ಮಾಡುವುದು ಬಿಡುತ್ತಿಲ್ಲ’ ಎಂದು ಅನೇಕ ರೀತಿ ಕಮೆಂಟ್ ಮಾಡಿದ್ದಾರೆ.

    https://www.instagram.com/p/B9-vhgoAFNB/

    2019 ಡಿಸೆಂಬರ್‌ನಲ್ಲಿ ನಿತ್ಯ ರಾಮ್ ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಜೊತೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ.

    ನಿತ್ಯ ರಾಮ್ ಹಾಗೂ ಗೌತಮ್ ಅವರದ್ದು ಅರೇಂಜ್ಡ್ ಮ್ಯಾರೇಜ್ ಆಗಿದೆ. ನಿತ್ಯಾ ರಾಮ್ ತಾಯಿಯ ಸ್ನೇಹಿತರ ಮಗನೇ ಗೌತಮ್. ಹೀಗಾಗಿ ಕುಟುಂಬದವರ ಮೂಲಕ ಪರಿಚಯರಾದ ಗೌತಮ್ ಅವರನ್ನೇ ನಿತ್ಯಾ ವರಿಸಿದ್ದಾರೆ. ಗೌತಮ್ ಉದ್ಯಮಿಯಾಗಿದ್ದು, ಆಸ್ಟ್ರೇಲಿಯಾದಲ್ಲಿಯೇ ವಾಸಿಸುತ್ತಿದ್ದಾರೆ. ಹೀಗಾಗಿ ಮದುವೆ ನಂತರ ನಟಿ ನಿತ್ಯಾ ಕೂಡ ಆಸ್ಟ್ರೇಲಿಯಾದಲ್ಲಿ ಸೆಟಲ್ ಆಗಿದ್ದಾರೆ.

    ನಿತ್ಯಾ ರಾಮ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಂದಿನಿ’ ಧಾರಾವಾಹಿ ಮೂಲಕ ಖ್ಯಾತಿ ಪಡೆದುಕೊಂಡಿದ್ದರು.