Tag: ಗೌತಮ್ ಅದಾನಿ

  • ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ಹೈದರಾಬಾದ್‌: ಅದಾನಿ ಸಮೂಹ (Adani Group) ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು (Telangana CM Revanth Reddy) ಬುಧವಾರ ಭೇಟಿ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ (Congress) ವಿರುದ್ಧ ಟ್ರೋಲ್‌ (Troll) ಆರಂಭವಾಗಿದೆ.

    ಚುನಾವಣಾ ಭಾಷಣದಲ್ಲಿ, ಸಂಸತ್‌ ಕಲಾಪದಲ್ಲಿ ಅದಾನಿ ಕಂಪನಿ ವಿರುದ್ಧ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಈಗ ಗೌತಮ್‌ ಅದಾನಿ (Gautam Adani) ಅವರ ಪುತ್ರ ಕರಣ್‌ ಅದಾನಿ (Karan Adani) ಅವರು ರೇವಂತ್‌ ರೆಡ್ಡಿ ಅವರ ಜೊತೆ ಡೇಟಾ ಸೆಂಟರ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ನಿರ್ಮಾಣ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

    ಅದಾನಿ ಪೋರ್ಟ್‌ ಮತ್ತು ಎಸ್‌ಇಝಡ್‌ ಕಂಪನಿಯ ಸಿಇಒ ಆಗಿರುವ ಕರಣ್‌ ಅದಾನಿ ಅವರು ರೇವಂತ್‌ ರೆಡ್ಡಿ ಜೊತೆಗಿನ ಮಾತುಕತೆ ವಿಚಾರ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಾಂಗ್ರೆಸ್‌ ನಾಯಕರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್‌

    ರಾಹುಲ್‌ ಗಾಂಧಿ ಅವರು ಗೌತಮ್‌ ಅದಾನಿ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ತೆಲಂಗಾಣ ಸಿಎಂ ಅವರು ಗೌತಮ್‌ ಅದಾನಿ ಅವರ ಪುತ್ರ ಕರಣ್‌ ಅದಾನಿ ಜೊತೆ ಮಾತನಾಡುತ್ತಾರೆ ಎಂದು ಟ್ರೋಲ್‌ ಮಾಡುತ್ತಿದ್ದಾರೆ.

    ಕಾಂಗ್ರೆಸ್‌ ಬೂಟಾಟಿಕೆ ಇದೊಂದು ಉತ್ತಮ ಉದಾಹರಣೆ. ರಾಹುಲ್‌ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರವಲ್ಲ. ಪಕ್ಷದಲ್ಲೇ ಅವರಿಗೆ ಹಿನ್ನಡೆಯಾಗುತ್ತಿದ್ದು, ಅವರ ಮಾತಿಗೆ ಕಾಂಗ್ರೆಸ್‌ನಲ್ಲೇ ಯಾರು ಗೌರವ ನೀಡುತ್ತಿಲ್ಲ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

     

  • ಹಿಂಡೆನ್‌ಬರ್ಗ್‌ ಆರೋಪ ಅಪ್ರಸ್ತುತ – ಅಮೆರಿಕ ಹೇಳಿಕೆ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರು ಮೌಲ್ಯ ಭಾರೀ ಏರಿಕೆ

    ಹಿಂಡೆನ್‌ಬರ್ಗ್‌ ಆರೋಪ ಅಪ್ರಸ್ತುತ – ಅಮೆರಿಕ ಹೇಳಿಕೆ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರು ಮೌಲ್ಯ ಭಾರೀ ಏರಿಕೆ

    – ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 16ನೇ ಸ್ಥಾನಕ್ಕೆ ಜಿಗಿದ ಗೌತಮ್‌ ಅದಾನಿ

    ಮುಂಬೈ: ಅದಾನಿ ಸಮೂಹದ (Adani Group) ವಿರುದ್ಧ ಹಿಂಡೆನ್‌ಬರ್ಗ್‌ ರಿಸರ್ಚ್‌ (Hindenburg Research) ಮಾಡಿದ ಆರೋಪ ಅಪ್ರಸ್ತುತ ಎಂದು ಅಮೆರಿಕದ ಸಂಸ್ಥೆ ತೀರ್ಮಾನಿಸಿದ ಬೆನ್ನಲ್ಲೇ ಅದಾನಿ ಸಮೂಹದ ಕಂಪನಿಗಳ ಷೇರುಗಳ ಮೌಲ್ಯ ಒಂದೇ ದಿನದಲ್ಲಿ ಭಾರೀ ಏರಿಕೆಯಾಗಿದೆ.

    ನವೆಂಬರ್‌ ಮೊದಲ ವಾರದಲ್ಲಿ ಶ್ರೀಲಂಕಾದ ಕೊಲಂಬೋದಲ್ಲಿ (Colombo) ಬಂದರಿನಲ್ಲಿ ಕಂಟೈನರ್ ಟರ್ಮಿನಲ್‌ ಯೋಜನೆಗೆ (Container Terminal Project) ಅಮೆರಿಕದ ಇಂಟರ್‌ನ್ಯಾಷನಲ್‌ ಡೆವಲಪ್‌ಮೆಂಟ್‌ ಫೈನಾನ್ಸ್‌ ಕಾರ್ಪೋರೇಷನ್‌ (DFC) 553 ಮಿಲಿಯನ್‌ ಡಾಲರ್‌ (ಅಂದಾಜು 4,600 ಕೋಟಿ ರೂ.) ಹಣವನ್ನು ಅದಾನಿ ಪೋರ್ಟ್‌ ಎಸ್‌ಇಝಡ್‌(Adani Port Sez) ಸಾಲವಾಗಿ ನೀಡಿದೆ.

    ಅದಾನಿ ಕಂಪನಿಗೆ ಭಾರೀ ಮೊತ್ತದ ಸಾಲ ನೀಡುವ ಮುನ್ನ ಡಿಎಫ್‌ಸಿ ಹಿಂಡೆನ್‌ಬರ್ಗ್‌ ಮಾಡಿದ ಎಲ್ಲಾ ಆರೋಪಗಳನ್ನು ಅಧ್ಯಯನ ಮಾಡಿತ್ತು. ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯ ಸತ್ಯಾಸತ್ಯತೆಯ ಬಳಿಕ ಈ ಆರೋಪ ಅಪ್ರಸ್ತುತ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ಡಿಎಫ್‌ಸಿ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಬ್ಲೂಮ್‌ಬರ್ಗ್‌ ವರದಿ ಮಾಡಿದೆ.  ಈ ವರದಿ ಪ್ರಕಟವಾದ ಬೆನ್ನಲ್ಲೇ ಮಂಗಳವಾರ ಒಂದೇ ದಿನ ಅದಾನಿ ಸಮೂಹದ ಕಂಪನಿಗಳ ಮೌಲ್ಯ 12.5 ಲಕ್ಷ ಕೋಟಿ ಏರಿಕೆಯಾಗಿದೆ.

    ಅಮೆರಿಕ ಬೇರೆ ದೇಶಗಳಲ್ಲಿ ಮೂಲಸೌಕರ್ಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವುದು ಹೊಸದೆನಲ್ಲ. ಆದರೆ ಏಷ್ಯಾದಲ್ಲಿ ಚೀನಾ (China) ಪ್ರಭಾವ ಕಡಿಮೆ ಮಾಡಲು ಅಮೆರಿಕ ಮುಂದಾಗುತ್ತಿದೆ. ಇದರ ಭಾಗವಾಗಿ ಭಾರತದ ಅದಾನಿ ಕಂಪನಿಯ ಮೇಲೆ ಹೂಡಿಕೆ ಮಾಡುತ್ತಿದೆ.  ಇದನ್ನೂ ಓದಿ: ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಅದಾನಿ ಕಂಪನಿಗಳ ಷೇರು ಜಿಗಿತ – ಯಾವುದು ಎಷ್ಟು ಏರಿಕೆ?
    ಗ್ರೀನ್‌ – 224.75(20%)
    ಟ್ರಾನ್ಸ್‌ಮಿಷನ್‌ – 180.71(19.99%)
    ಗ್ಯಾಸ್‌ – 45.61(19.88%)
    ಎಂಟರ್‌ಪ್ರೈಸಸ್‌ – 428.16(16.91%)
    ಪವರ್‌ -73.45(15.80%)
    ಪೋರ್ಟ್ಸ್‌ ಎಸ್‌ಇಝಡ್‌ -134.46(15.30%)
    ವಿಲ್ಮರ್‌ – 34.40(9.93%)

    ಶತಕೋಟ್ಯಧಿಪತಿ ಗೌತಮ್ ಅದಾನಿ ಸಮೂಹ ಮಾರಿಷಸ್‌ ಮೂಲದ ಶೆಲ್ ಕಂಪನಿಗಳನ್ನು ಬಳಸಿ ಸ್ಟಾಕ್‌ ಮಾರುಕಟ್ಟೆಯಲ್ಲಿ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಳ ಮಾಡಿದೆ ಎಂದು ಹಿಂಡೆನ್‌ಬರ್ಗ್‌ ಆರೋಪಿಸಿತ್ತು. ಈ ವರ್ಷದ ಜನವರಿ 24 ರಂದು ವರದಿ ಪ್ರಕಟವಾದ ಬಳಿಕ ಅದಾನಿ ಕಂಪನಿಯ ಷೇರುಗಳ ಮೌಲ್ಯ ಇಳಿಕೆಯಾಗಿ ಗೌತಮ್‌ ಅದಾನಿ ಅವರ ಸಂಪತ್ತು ಕರಗಿತ್ತು. ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ (Gautam Adani) 10 ದಿನದಲ್ಲೇ 25ನೇ ಸ್ಥಾನಕ್ಕೆ ಕುಸಿದಿದ್ದರು. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

    ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ ಎಂದು ಮಾರಿಷಸ್‌ ಸರ್ಕಾರ ಅಲ್ಲಿನ ಸಂಸತ್ತಿಗೆ ಉತ್ತರ ನೀಡಿತ್ತು. ಭಾರತದಲ್ಲಿ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿ ಸಹ ಅದಾನಿ ಕಂಪನಿಗೆ ಕ್ಲಿನ್‌ ಚೀಟ್‌ ನೀಡಿತ್ತು. ಈ ಬೆಳವಣಿಗೆಯ ನಂತರ ಅದಾನಿ ಸಮೂಹ ಕಂಪನಿಗಳ ಷೇರುಗಳ ಮೌಲ್ಯ ನಿಧನವಾಗಿ ಏರಿಕೆ ಕಾಣತೊಡಗಿತ್ತು.

    16ನೇ ಸ್ಥಾನಕ್ಕೆ ಜಿಗಿತ
    ಸದ್ಯ ಈಗ ಗೌತಮ್‌ ಅದಾನಿ ಅವರು ಬ್ಲೂಮ್‌ಬರ್ಗ್‌ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 70.2 ಬಿಲಿಯನ್‌ ಡಾಲರ್‌ ಸಂಪತ್ತಿನೊಂದಿಗೆ 16ನೇ ಸ್ಥಾನಕ್ಕೆ ಜಿಗಿದಿದ್ದರೆ. ಮುಕೇಶ್‌ ಅಂಬಾನಿ 90.4 ಬಿಲಿಯನ್‌ ಡಾಲರ್‌ ಸಂಪತ್ತಿನೊಂದಿಗೆ14ನೇ ಸ್ಥಾನ ಪಡೆದಿದ್ದಾರೆ. 220 ಬಿಲಿಯನ್‌ ಡಾಲರ್‌ ಸಂಪತ್ತು ಹೊಂದಿರುವ ಎಲೋನ್‌ ಮಸ್ಕ್‌ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ ಈ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ 15,446 ಕೋಟಿ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು  ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

  • ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ನವದೆಹಲಿ: ಸರ್ಕಾರ ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? ನಮ್ಮ ಫೋನ್‌ಗಳನ್ನು ಎಷ್ಟು ಬೇಕಾದರೂ ಟ್ಯಾಪ್ (Phone Tapping) ಮಾಡಬಹುದು, ಸರ್ಕಾರದ ಪ್ರಯತ್ನಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ರಾಹುಲ್ ಗಾಂಧಿ (Rahul Gandhi) ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ ವಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಆರೋಪದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ (Union Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಇಂತಹ ನಡೆ ವಿರುದ್ಧ ಬಹಳ ಕಡಿಮೆ ಜನರು ಹೋರಾಡುತ್ತಿದ್ದಾರೆ. ನೀವು ಎಷ್ಟು ಬೇಕಾದರೂ ಟ್ಯಾಪಿಂಗ್ ಮಾಡಬಹುದು, ನಾನು ಹೆದರುವುದಿಲ್ಲ, ಬೇಕಿದ್ದರೆ ನಾನೇ ನಿಮಗೆ ನನ್ನ ಫೋನ್‌ ಕೊಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಸರ್ಕಾರವು ವಿಚಲಿತ ರಾಜಕೀಯದಲ್ಲಿ ತೊಡಗಿದೆ, ಈಗಿನ ಸರ್ಕಾರದ ಮುಖ್ಯಸ್ಥರು ಮರೆಮಾಚುತ್ತಿದ್ದ ಸತ್ಯ ಪ್ರತಿಪಕ್ಷಗಳಿಗೆ ಗೊತ್ತಾಗಿದೆ. ದೇಶದ ಜನತೆಗೆ ಪ್ರತಿಯೊಂದು ಸತ್ಯವೂ ಅರ್ಥವಾಗುತ್ತಿದೆ. ಸರ್ಕಾರದ ಟ್ಯಾಪಿಂಗ್ ಸಹ ಯಾವುದೇ ವ್ಯತ್ಯಾಸ ತೋರಿಸುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ದೇಶ ಅನುಭವಿಸುತ್ತಿರುವ ನಷ್ಟವನ್ನು ಊಹಿಸಲೂ ಸಾಧ್ಯವಿಲ್ಲ. ಏಕೆಂದರೆ ಸುಳ್ಳು ಕನಸುಗಳೇ ಮಾರಾಟವಾಗುತ್ತಿವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ನಾವು ವಿರೋಧ ಪಕ್ಷದಲ್ಲಿದ್ದು ನಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿದ್ದೇವೆ. ಅಲ್ಲದೇ ಪ್ರಧಾನಿ ಮೋದಿಯವರ ಆತ್ಮ ಅದಾನಿಯಲ್ಲಿದೆ, ಅಧಿಕಾರ ಬೇರೆಯವರ ಕೈಯಲ್ಲಿದೆ, ಕೃಷಿ ಕ್ಷೇತ್ರ ಅದಾನಿ (Gautam Adani) ಕೈಯಲ್ಲಿದೆ, ಮೂಲಸೌಕರ್ಯ ಅವರ ಕೈಯಲ್ಲಿದೆ. ದೇಶದ ಆಸ್ತಿ ಮಾರಾಟವಾಗುತ್ತಿದೆ. ಇದರಿಂದ ದೇಶದ ಯುವಕರಿಗೆ ತೊಂದರೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಈ ಹಿಂದೆ ಪ್ರಧಾನಿ ಮೋದಿ ಸರ್ಕಾರದಲ್ಲಿ ನಂ.1 ಮತ್ತು ಅಮಿತ್ ಶಾ (Amit Shah) 2ನೇ ಸ್ಥಾನದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಚಿತ್ರಣ ಬದಲಾಗಿದೆ, ಸರ್ಕಾರದಲ್ಲಿ ಅದಾನಿ ನಂಬರ್ 1, ಪಿಎಂ ಮೋದಿ 2 ಮತ್ತು ಅಮಿತ್ ಶಾ 3ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಯಾರು ಕೆಲಸ ಕೊಡಲು ಹೊರಟಿದ್ದಾರೆ ಎಂಬ ಸತ್ಯ ಸಾರ್ವಜನಿಕರಿಗೆ ಅರ್ಥವಾಗುತ್ತದೆ. ಕೃಷಿ ಕ್ಷೇತ್ರ ಮತ್ತು ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮಾರಾಟ ಮಾಡಲಾಗಿದೆ, ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದಾದರೆ ಹ್ಯಾಕಿಂಗ್ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದರು.

    ಈಗಿನ ಕೇಂದ್ರ ಸರ್ಕಾರ ಸಾಮಾನ್ಯ ಜನರ ಸರ್ಕಾರವಲ್ಲ, ಈ ಸರ್ಕಾರದಲ್ಲಿ ಶ್ರೀಸಾಮಾನ್ಯರ ಕಡೆಗಣನೆ ಮತ್ತು ಶ್ರೀಮಂತರ ಗಣನೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಸರ್ಕಾರವು ಕೆಲವು ಕೈಗಾರಿಕದ್ಯೊಮಿಗಳ ಮನೆಗಳಿಗೆ ಕೆಲಸ ಮಾಡುತ್ತದೆ. ಈ ಸರ್ಕಾರದ ಅಡಿಯಲ್ಲಿ ಹಣದುಬ್ಬರ ಉತ್ತುಂಗದಲ್ಲಿದೆ, ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಅವರ ಜೇಬಿನಲ್ಲಿ ಹಣವಿಲ್ಲ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಅಷ್ಟೇ ಅಲ್ಲದೇ ದೇಶೀಯ ರಂಗದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

    ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್


    ನವದೆಹಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ (Odisha Train Tragedy) ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ (Gautam Adani) ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ರೈಲ್ವೆ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ (Adani Group) ವಹಿಸಿಕೊಳ್ಳುತ್ತದೆ ಎಂದು ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.

    ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಅಮಾಯಕ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಸಮೂಹ ವಹಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ಒದಗಿಸುವುದು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಬಿಲಿಯನೇರ್ ಗೌತಮ್ ಅದಾನಿ ತಿಳಿಸಿದ್ದಾರೆ.

    ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲ್ಲಿಯವರೆಗೆ 275 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 88 ಶವಗಳನ್ನು ಗುರುತಿಸಲಾಗಿದೆ. ಉಳಿದ ಮೃತದೇಹಗಳ ಪೈಕಿ 170 ಶವಗಳನ್ನು ಭುವನೇಶ್ವರದ ಶವಾಗಾರ ಹಾಗೂ ಇತರ ಆಸ್ಪತ್ರೆಗಳಾದ ಏಮ್ಸ್, ಕ್ಯಾಪಿಟಲ್, ಎಸ್‌ಯುಎಂ, ಕೆಐಎಂ ಹಾಗೂ ಎಎಂಆರ್‌ಐ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ವೇಳೆ ಕವಚ್‌ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ- ಅಪಘಾತಕ್ಕೆ ಕಾರಣ ತಿಳಿಸಿದ ರೈಲ್ವೇ

    ಒಟ್ಟಾರೆಯಾಗಿ 1,175 ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗಿನ ಜಾವದವರೆಗೆ 793 ಗಾಯಾಳುಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

  • ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

    ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

    ಪೋರ್ಟ್ ಲೂಯಿಸ್: ಅದಾನಿ ಸಮೂಹದ (Adani Group) ಕಂಪನಿಗಳ ಬಗ್ಗೆ ಹಿಂಡೆನ್‌ಬರ್ಗ್‌ (Hindenburg) ಮಾಡಿರುವ ಸಂಶೋಧನಾ ವರದಿ ಸುಳ್ಳು ಮತ್ತು ಆಧಾರ ರಹಿತ ಎಂದು ಮಾರಿಷಸ್ (Mauritius) ಸರ್ಕಾರ ಅಲ್ಲಿನ ಸಂಸತ್ತಿಗೆ ಉತ್ತರ ನೀಡಿದೆ.

    ಲಿಖಿತ ಉತ್ತರ ನೀಡಿದ ಹಣಕಾಸು ಸೇವೆಗಳ ಸಚಿವ ಮಹೇನ್ ಕುಮಾರ್ ಸೀರುತ್ತುನ್, ಮಾರಿಷಸ್‌ನಲ್ಲಿ ಶೆಲ್ ಕಂಪನಿಗಳಿವೆ ಎಂಬ ಆರೋಪಗಳು ಸುಳ್ಳು ಮತ್ತು ನಿರಾಧಾರ ಎಂದು ನಾನು ಸದನಕ್ಕೆ ತಿಳಿಸಲು ಬಯಸುತ್ತೇನೆ. ಕಾನೂನಿನ ಪ್ರಕಾರ ಮಾರಿಷಸ್‌ನಲ್ಲಿ ಶೆಲ್ ಕಂಪನಿಗಳಿಗೆ ಅವಕಾಶವಿಲ್ಲ. ಅದಾನಿ ಕಂಪನಿ ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ.

    ಹಣಕಾಸು ಸೇವಾ ಆಯೋಗದಿಂದ ಪರವಾನಗಿ ಪಡೆದ ಎಲ್ಲಾ ಜಾಗತಿಕ ವ್ಯಾಪಾರ ಕಂಪನಿಗಳು ಎಲ್ಲಾ ಅವಶ್ಯಕತೆಗಳನ್ನು ಪೂರೈಸಬೇಕು ಮತ್ತು ಆಯೋಗವು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ

    ಹಿಂಡೆನ್‌ಬರ್ಗ್‌ ಆರೋಪ ಸುಳ್ಳು ಮತ್ತು ಆಧಾರ ರಹಿತ ಎಂದು ಹೇಗೆ ತೀರ್ಮಾನಕ್ಕೆ ಬರಲಾಯಿತು ಎಂದು ಕೇಳಿದ ಪ್ರಶ್ನೆಗೆ, ಮಾರಿಷಸ್‌ನಲ್ಲಿ ಕಂಪನಿ ಪರವಾನಗಿ ಪಡೆಯಬೇಕಾದರೆ ಷರತ್ತುಗಳನ್ನು ವಿಧಿಸಲಾಗುತ್ತದೆ. ಆ ಕಂಪನಿಗಳು ಷರತ್ತುಗಳಿಗೆ ಬದ್ಧವಾಗಿರಬೇಕು ಮತ್ತು ಆಯೋಗವೂ ಕಂಪನಿಯನ್ನು ಮೇಲ್ವಿಚಾರಣೆ ಮಾಡುತ್ತಿರುತ್ತದೆ. ಈ ಷರತ್ತುಗಳನ್ನು ಒಪ್ಪಿದ ಕಂಪನಿಗಳನ್ನು ಶೆಲ್‌ ಕಂಪನಿಗಳು ಎಂದು ಹೇಳುವುದು ಆಧಾರ ರಹಿತ ಎಂದು ಅವರು ತಿಳಿಸಿದರು.

     

    ಶತಕೋಟ್ಯಧಿಪತಿ ಗೌತಮ್ ಅದಾನಿ ಸಮೂಹ ಮಾರಿಷಸ್ ಮೂಲದ ಶೆಲ್ ಕಂಪನಿಗಳನ್ನು ಬಳಸಿ ಸ್ಟಾಕ್‌ ಮಾರುಕಟ್ಟೆಯಲ್ಲಿ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಳ ಮಾಡಿದೆ ಎಂದು ಹಿಂಡೆನ್‌ಬರ್ಗ್‌ ಆರೋಪಿಸಿತ್ತು.

    ಅದಾನಿ ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿನ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ನೇಮಕ ಮಾಡಿದ ಸಮಿತಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

     

    ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡ ಸಮಿತಿಯನ್ನು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ಮಾರ್ಚ್‌ನಲ್ಲಿ ನೇಮಿಸಿತ್ತು. ಸಮಿತಿ ವರದಿಯನ್ನು ಸಲ್ಲಿಸಿದ್ದು ಮೇ 12 ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.

  • ಅದಾನಿ – ಹಿಂಡನ್‌ಬರ್ಗ್‌ : ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ

    ಅದಾನಿ – ಹಿಂಡನ್‌ಬರ್ಗ್‌ : ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ

    ನವದೆಹಲಿ: ಅದಾನಿ ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ (Hindenburg) ಸಂಶೋಧನಾ ವರದಿಯಲ್ಲಿನ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ನೇಮಕ ಮಾಡಿದ ಸಮಿತಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

    ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡ ಸಮಿತಿಯನ್ನು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ಮಾರ್ಚ್‌ನಲ್ಲಿ ನೇಮಿಸಿತ್ತು. ಇಂದು ಸಮಿತಿ ವರದಿಯನ್ನು ಸಲ್ಲಿಸಿದ್ದು ಮೆ 12 ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.

    ಅದಾನಿ ಕಂಪನಿಗಳಲ್ಲಿ ಅಕ್ರಮ ನಡೆದಿದೆಯೇ? ಷೇರುಗಳ ಮೌಲ್ಯ ಹೆಚ್ಚಿಸಲು ಕೃತಕ ಪ್ರಯತ್ನಗಳು ನಡೆದಿವೆಯೇ? ಸೆಬಿ ನಿಯಮಗಳ ಸೆಕ್ಷನ್ 19ರ ಉಲ್ಲಂಘನೆಯಾಗಿದೆಯೇ? ಹೂಡಿಕೆದಾರರ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಕೋರ್ಟ್ ಸಮಿತಿಗೆ ಸೂಚಿಸಿತ್ತು. ತನಿಖೆಯನ್ನು ನಡೆಸಿ ಎರಡು ತಿಂಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: Karnataka Election 2023 Live – ರಾಜ್ಯದಲ್ಲಿ 1 ಗಂಟೆವರೆಗೆ 37.25% ಮತದಾನ

    ಸೆಬಿ ಅಧ್ಯಕ್ಷರು ಎಲ್ಲಾ ಅಗತ್ಯ ಮಾಹಿತಿಯನ್ನು ತಜ್ಞರ ಸಮಿತಿಗೆ ಒದಗಿಸಬೇಕು. ಸಂಬಂಧಪಟ್ಟ ಕೇಂದ್ರ ಸರ್ಕಾರದ ಏಜೆನ್ಸಿಗಳು ಸಮಿತಿಯೊಂದಿಗೆ ಸಹಕರಿಸಬೇಕು ಕೋರ್ಟ್‌ ಸೂಚಿಸಿತ್ತು.

    ಅದಾನಿ ಕಂಪನಿಗಳ ತನಿಖೆಗೆ ಸುಪ್ರೀಂ ಕೋರ್ಟ್ ಸಮಿತಿ ರಚಿಸಿದ್ದನ್ನು ಗೌತಮ್ ಅದಾನಿ (Gautam Adani) ಸ್ವಾಗತಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಸಮಯ ಕಳೆದಂತೆ ಪ್ರಕರಣ ತಾರ್ಕಿಕ ಅಂತ್ಯ ಕಾಣಲಿದೆ. ಸತ್ಯ ಮೇಲುಗೈ ಸಾಧಿಸಲಿದೆ ಎಂದು ಹೇಳಿದ್ದರು.

    6 ತಿಂಗಳು ಬೇಕು:
    ತನಿಖೆ ಪೂರ್ಣಗೊಳಿಸಲು ಕಾಲವಕಾಶದ ಅಗತ್ಯವಿದೆ. ಇನ್ನೂ ಆರು ತಿಂಗಳು ಅವಕಾಶ ವಿಸ್ತರಣೆಗೆ ಸೆಬಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಇದುವರೆಗೂ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಹಾಗೂ ಇದುವರೆಗೂ ತಿಳಿದು ಬಂದ ಅಂಶಗಳನ್ನು ತಜ್ಞರ ಸಮಿತಿಯ ಗಮನಕ್ಕೆ ತರಲಾಗಿದೆ. ಅಲ್ಲದೆ ಹಿಂಡೆನ್‍ಬರ್ಗ್ ವರದಿಯಲ್ಲಿ ತಿಳಿಸಿರುವ 12 ಶಂಕಾಸ್ಪದ ವರ್ಗಾವಣೆಗಳ ಕುರಿತು ಆಳವಾದ ತನಿಖೆ ನಡೆಸಬೇಕಿದೆ. ಆ ವರ್ಗಾವಣೆಗಳ ಮಾಹಿತಿಗಳು ಜಟಿಲವಾಗಿವೆ ಎಂದು ಸೆಬಿ ತನ್ನ ಮನವಿಯಲ್ಲಿ ತಿಳಿಸಿತ್ತು.

  • ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ಗಾಂಧಿನಗರ: ಪ್ರತಿಷ್ಠಿತ ಉದ್ಯಮಿ ಗೌತಮ್ ಅದಾನಿ (Gautam Adani) ಅವರ ಪುತ್ರ ಜೀತ್ ಅದಾನಿ (Jeet Adani) ಅವರ ನಿಶ್ಚಿತಾರ್ಥ ಭಾನುವಾರ ನೆರವೇರಿದೆ.

    ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿ ದಿವಾ ಜೈಮಿನ್ ಶಾ ಅವರೊಂದಿಗೆ ನಿಶ್ಚಿತಾರ್ಥ ನೆರವೇರಿದೆ. ಆಪ್ತ ಬಳಗದವರು ಹಾಗೂ ಕೌಟುಂಬಿಕ ಸ್ನೇಹಿತರನ್ನಷ್ಟೇ ನಿಶ್ಚಿತಾರ್ಥಕ್ಕೆ ಆಹ್ವಾನಿಸಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲವೆಂದು ಪತ್ನಿಯ ಕೊಲೆಗೈದ ಪತಿ

    ಜೀತ್ ಅದಾನಿ ನಿಶ್ಚಿತಾರ್ಥದ ಫೋಟೋಗಳು ಇದೀಗ ಜಾಲತಾಣದಲ್ಲಿ ಸದ್ದು ಮಾಡ್ತಿವೆ. ಕಸೂತಿ ಲೆಹೆಂಗಾದಲ್ಲಿ ವಧು ದಿವಾ ಕಂಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಭಗವಾನ್ ಶ್ರೀಕೃಷ್ಣನನ್ನೇ ವರಿಸಿದ ಎಲ್‍ಎಲ್‍ಬಿ ಪದವೀಧರೆ!

    ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಎಂಜಿನಿಯರಿಂಗ್ ವಿಶ್ವವಿದ್ಯಾನಿಲಯದಲ್ಲಿ ಅಪ್ಲೈಡ್‌ ಸೈನ್ಸಸ್ ಪದವಿ ಪೂರ್ಣಗೊಳಿಸಿದ ಜೀತ್ ಅದಾನಿ, 2019ರಲ್ಲಿ ಅದಾನಿ ಸಮೂಹ (Adani Group) ಸೇರಿಕೊಂಡರು. ಪ್ರಸ್ತುತ ಅದಾನಿ ಸಮೂಹದ ಫೈನಾನ್ಸ್ ಉಪಾಧ್ಯಕ್ಷರಾಗಿದ್ದಾರೆ. ಜೊತೆಗೆ ಅದಾನಿ ಏರ್‌ಪೋರ್ಟ್ ವ್ಯವಹಾರದೊಂದಿಗೆ ಅದಾನಿ ಲ್ಯಾಬ್‌ಗಳನ್ನ ಮುನ್ನಡೆಸುತ್ತಾರೆ ಎನ್ನಲಾಗಿದೆ.

  • ಹಿಂಡೆನ್‌ಬರ್ಗ್ ರಿಪೋರ್ಟ್ – ಅದಾನಿ ಕಂಪನಿಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ

    ಹಿಂಡೆನ್‌ಬರ್ಗ್ ರಿಪೋರ್ಟ್ – ಅದಾನಿ ಕಂಪನಿಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ

    ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ (Hindenburg) ಸಂಶೋಧನಾ ವರದಿ ಮಾಡಿರುವ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court), ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಆರು ಮಂದಿಯ ಸಮಿತಿಯನ್ನು ರಚಿಸಿದೆ.

    ಸಮಿತಿಯೂ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡಿರಲಿದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ತಿಳಿಸಿದೆ. ಇದನ್ನೂ ಓದಿ: ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

    ಸಮಿತಿಯೂ ಅದಾನಿ ಕಂಪನಿಗಳಲ್ಲಿ ಅಕ್ರಮ ನಡೆದಿದೆಯೇ? ಷೇರುಗಳ ಮೌಲ್ಯ ಹೆಚ್ಚಿಸಲು ಕೃತಕ ಪ್ರಯತ್ನಗಳು ನಡೆದಿವೆಯೇ? ಸೆಬಿ ನಿಯಮಗಳ ಸೆಕ್ಷನ್ 19 ರ ಉಲ್ಲಂಘನೆಯಾಗಿದೆಯೇ? ಹೂಡಿಕೆದಾರರ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಕೋರ್ಟ್ ಸೂಚಿಸಿದೆ.

    ತನಿಖೆಯನ್ನು ನಡೆಸಿ ಎರಡು ತಿಂಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. ಸಮಿತಿಯನ್ನು ರಚಿಸುವುದರಿಂದ ಸೆಬಿಯ ಸ್ವಾತಂತ್ರ್ಯ ಮತ್ತು ಅದರ ತನಿಖಾ ಪ್ರಕ್ರಿಯೆಗಳಿಗೆ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಹಿಂಡೆನ್‍ಬರ್ಗ್ ರಿಪೋರ್ಟ್ ಎಫೆಕ್ಟ್- ಗೌತಮ್ ಅದಾನಿಗೆ 12 ಲಕ್ಷ ಕೋಟಿ ನಷ್ಟ

    SEBI ಅಧ್ಯಕ್ಷರು ಎಲ್ಲಾ ಅಗತ್ಯ ಮಾಹಿತಿಯನ್ನು ತಜ್ಞರ ಸಮಿತಿಗೆ ಒದಗಿಸಬೇಕು. ಸಂಬಂಧಪಟ್ಟ ಕೇಂದ್ರ ಸರ್ಕಾರದ ಏಜೆನ್ಸಿಗಳು ಸಮಿತಿಯೊಂದಿಗೆ ಸಹಕರಿಸಬೇಕು. ಸಮಿತಿಯು ತನ್ನ ಕೆಲಸಕ್ಕಾಗಿ ಬಾಹ್ಯ ತಜ್ಞರೊಂದಿಗೆ ಸಮಾಲೋಚನೆಯನ್ನು ಪಡೆಯಬಹುದು. ಸಮಿತಿಯ ಸದಸ್ಯರಿಗೆ ಪಾವತಿಸಬೇಕಾದ ಸಂಭಾವನೆಯನ್ನು ಅಧ್ಯಕ್ಷರು ನಿಗದಿಪಡಿಸುತ್ತಾರೆ. ಕೇಂದ್ರ ಸರ್ಕಾರವು ಭರಿಸಬೇಕು. ಇದಕ್ಕಾಗಿ ಕೇಂದ್ರ ಹಣಕಾಸು ಸಚಿವರು ಹಿರಿಯ ಅಧಿಕಾರಿಯನ್ನು ನಾಮನಿರ್ದೇಶನ ಮಾಡಬೇಕು ಎಂದು ಸುಪ್ರೀಂ ಆದೇಶಿಸಿದೆ.

    ಅದಾನಿ ಕಂಪನಿಗಳ ತನಿಖೆಗೆ ಸುಪ್ರೀಂ ಕೋರ್ಟ್ ಸಮಿತಿ ರಚಿಸುವುದನ್ನು ಗೌತಮ್ ಅದಾನಿ (Gautam Adani) ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಮಯ ಕಳೆದಂತೆ ಪ್ರಕರಣ ತಾರ್ಕಿಕ ಅಂತ್ಯ ಕಾಣಲಿದೆ. ಸತ್ಯ ಮೇಲುಗೈ ಸಾಧಿಸಲಿದೆ ಎಂದು ಹೇಳಿದ್ದಾರೆ.

  • ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

    ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

    ನವದೆಹಲಿ: ಹಿಂಡೆನ್‌ಬರ್ಗ್ (Hindenburg) ವರದಿ ಬಳಿಕ ಅದಾನಿ ಸಾಮ್ರಾಜ್ಯ ಪತನದತ್ತ ಮುಖ ಮಾಡಿದ್ದು, ಫೋರ್ಬ್ಸ್ (Forbes) ಶ್ರೀಮಂತರ ಪಟ್ಟಿಯಲ್ಲಿ ಗೌತಮ್‌ ಅದಾನಿ (Gautam Adani) 3ನೇ ಸ್ಥಾನದಿಂದ 38ನೇ ಸ್ಥಾನಕ್ಕೆ ಕುಸಿದಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಕಂಪನಿಗಳ ನಿರಂತರ ಕುಸಿತದ ಪರಿಣಾಮದಿಂದಾಗಿ ಅವರು ದೊಡ್ಡ ಸಂಕಷ್ಟ ಎದುರಿಸುತ್ತಿದ್ದಾರೆ.

    ಜನವರಿ 24 ರಂದು ಹಿಂಡೆನ್‌ಬರ್ಗ್ ವರದಿ ಪ್ರಕಟಿಸುವ ಮುನ್ನ ಗೌತಮ್ ಅದಾನಿ ಒಟ್ಟು ಮೌಲ್ಯ 119 ಶತಕೋಟಿ ಡಾಲರ್ ಆಗಿತ್ತು. ವರದಿ ಬಂದು ಒಂದು ತಿಂಗಳ ಬಳಿಕ 85 ಶತಕೋಟಿ ಡಾಲರ್ ನಷ್ಟ ಅನುಭವಿಸಿದ್ದು ಸದ್ಯ ಅವರ ನಿವ್ವಳ ಮೌಲ್ಯ 33 ಶತಕೋಟಿ ಡಾಲರ್‌ಗೆ ಕುಸಿದಿದೆ. ಇದನ್ನೂ ಓದಿ: `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ

    ಅದಾಗ್ಯೂ ಬ್ಲೂಮ್ ಬರ್ಗ್ ಬಿಲಿನೆಯರ್ಸ್ ಸೂಚ್ಯಂಕ (Bloomberg BillionairesIndex) ಪಟ್ಟಿಯಲ್ಲಿ ಗೌತಮ್ ಅದಾನಿ 30ನೇ ಸ್ಥಾನದಲ್ಲಿದ್ದಾರೆ. ಅವರು 40 ಶತಕೋಟಿ ಡಾಲರ್ ನಿವ್ವಳ ಮೌಲ್ಯ ಹೊಂದಿದ್ದಾರೆ ಎಂದು ಅದು ವರದಿ ಮಾಡಿದೆ. ಹಿಂಡೆನ್‌ಬರ್ಗ್ ವರದಿ ಬಳಿಕ ಅದಾನಿ 150 ಶತಕೋಟಿ ಡಾಲರ್ ಮೌಲ್ಯವನ್ನು ಕಳೆದುಕೊಂಡಿದ್ದಾರೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಅಧಿಕಾರ – ಮೇಘಾಲಯದಲ್ಲಿ 3ನೇ ಸ್ಥಾನ

    84.3 ಶತಕೋಟಿ ಡಾಲರ್ ನಿವ್ವಳ ಮೌಲ್ಯ ಹೊಂದಿರುವ ಮುಕೇಶ್ ಅಂಬಾನಿ (Mukesh Ambani) ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಪೆಟ್ರೋಕೆಮಿಕಲ್ಸ್, ತೈಲ ಮತ್ತು ಅನಿಲ, ಟೆಲಿಕಾಂ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ರಿಲಯನ್ಸ್‌ ಹೂಡಿಕೆ ಮಾಡಿದೆ.

  • ಹಿಂಡೆನ್‌ಬರ್ಗ್ ಎಫೆಕ್ಟ್ – 9.91 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗೆ ಇಳಿಯಿತು ಅದಾನಿ ಸಂಪತ್ತು

    ಹಿಂಡೆನ್‌ಬರ್ಗ್ ಎಫೆಕ್ಟ್ – 9.91 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗೆ ಇಳಿಯಿತು ಅದಾನಿ ಸಂಪತ್ತು

    ನವದೆಹಲಿ: ಹಿಂಡೆನ್‌ಬರ್ಗ್ (Hindenburg) ವರದಿ ಬಳಿಕ ಉದ್ಯಮಿ ಗೌತಮ್ ಅದಾನಿ (Gautam Adani) ಕಂಪನಿಗಳ ಷೇರುಗಳಲ್ಲಿ ಭಾರೀ ಕುಸಿತ ಕಂಡಿದ್ದು ಅವರ ಸಂಪತ್ತಿನ ಮೌಲ್ಯ 5,000 ಕೋಟಿ ಡಾಲರ್(ಸುಮಾರು 4 ಲಕ್ಷ ಕೋಟಿ ರೂ.) ಕಡಿಮೆಯಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ (Bloomberg Billionaires Index) ನವೀಕರಿಸಿದ ಡೇಟಾದ ಪ್ರಕಾರ ಅವರ ಒಟ್ಟು ಸಂಪತ್ತು ಈಗ 49.1 ಬಿಲಿಯನ್ ಡಾಲರ್ (ಸುಮಾರು 4 ಲಕ್ಷ ಕೋಟಿ ರೂ.) ಆಗಿದೆ.

    ಒಂದು ತಿಂಗಳ ಹಿಂದೆ ಗೌತಮ್ ಅದಾನಿ ಸಂಪತ್ತಿನ ಮೌಲ್ಯ ಸುಮಾರು 120 ಶತಕೋಟಿ ಡಾಲರ್ (ಸುಮಾರು 9.91 ಲಕ್ಷ ಕೋಟಿ ರೂ.) ನಷ್ಟಿತ್ತು. ಈ ಮೂಲಕ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದರು. ಹಿಂಡೆನ್‌ಬರ್ಗ್ ವರದಿ ಬಳಿಕ ಷೇರುಗಳ ಕುಸಿತದಿಂದಾಗಿ ದೊಡ್ಡ ಪ್ರಮಾಣದ ಸಂಪತ್ತನ್ನು ಅದಾನಿ ಕಳೆದುಕೊಂಡಿದ್ದಾರೆ.

    ಅದಾನಿ ಗ್ರೂಪ್ ಹಿಂಡೆನ್‌ಬರ್ಗ್ ಮಾಡಿದ ಆರೋಪಗಳನ್ನು ತಳ್ಳಿಹಾಕಿದೆ. ಅದರೂ ವರದಿಯು ಹೂಡಿಕೆದಾರರು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಇದರ ಪರಿಣಾಮವಾಗಿ ಅದರ ಪಟ್ಟಿಮಾಡಿದ ಕಂಪನಿಗಳ ಷೇರುಗಳ ಬೆಲೆಗಳು ನಿರಂತರವಾಗಿ ಕುಸಿಯುತ್ತಿವೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ

    ಇದು ಕೈಗಾರಿಕಾ ಉದ್ಯಮಿ ಗೌತಮ್ ಅದಾನಿ ಸಂಗ್ರಹಿಸಿದ ವೈಯಕ್ತಿಕ ಸಂಪತ್ತಿನ ಮೇಲೆ ತೀವ್ರ ಪರಿಣಾಮ ಬೀರಿದೆ. ಅವರು ವರ್ಷದ ಆರಂಭದಿಂದ 71 ಶತಕೋಟಿ ಡಾಲರ್‌ನಷ್ಟು (ಸುಮಾರು 5 ಲಕ್ಷ ಕೋಟಿ ರೂ.) ಸಂಪತ್ತು ಕಳೆದುಕೊಂಡಿದ್ದಾರೆ. ಇದರಿಂದಾಗಿ 500 ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಪಟ್ಟಿಯಲ್ಲಿ ಹಂತ ಹಂತವಾಗಿ ಸ್ಥಾನ ಕಳೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಂತೆ ಇನ್ನು ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲೂ ವೆರಿಫೈಡ್ ಖಾತೆಗಳಿಗೆ ದುಡ್ಡು ಪಾವತಿಸಬೇಕು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k