Tag: ಗೌರಮ್ಮ

  • ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರು ಸದ್ಯ ‘ಕಬ್ಜ’ (Kabza) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ‘ಯುಐ’ (UI) ಚಿತ್ರಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ ಹೊಸ ಸಿನಿಮಾದ ಅಪ್‌ಡೇಟ್ ಮೂಲಕ ಸಿಹಿಸುದ್ದಿ ಸಿಕ್ಕಿದೆ. ಐತಿಹಾಸಿಕ ಸಿನಿಮಾ ಮಾಡಲು ಉಪ್ಪಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕನಕದಾಸನಾಗಲು ಉಪ್ಪಿ ರೆಡಿಯಾಗಿದ್ದಾರೆ.

    ಸದಾ ಭಿನ್ನ ಪಾತ್ರ, ವಿಭಿನ್ನ ಕಥೆಯನ್ನ ಆಯ್ಕೆ ಮಾಡೋದ್ರಲ್ಲಿ ನಟ ಉಪೇಂದ್ರ ಅವರು ಯಾವಾಗಲೂ ಮುಂದು. ಈಗಾಗಲೇ ನಾನಾ ಪಾತ್ರದ ಮೂಲಕ ಸಿನಿಮಾರಂಗದಲ್ಲಿ ಉಪೇಂದ್ರ ಅವರು ರಂಜಿಸಿದ್ದಾರೆ. ಹಾಗಾಗಿ ಈ ಬಾರಿ ಹಿಸ್ಟೋರಿಕಲ್ ಚಿತ್ರ ಮಾಡಲು ಉಪ್ಪಿ ಮನಸ್ಸು ಮಾಡಿದ್ದಾರೆ. ಕುಟುಂಬ, ಗೌರಮ್ಮ, ಗೋಕರ್ಣ, ದುಬೈ ಬಾಬು ಚಿತ್ರಗಳನ್ನ ಉಪ್ಪಿಗೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಾಗಣ್ಣ ಈ ಹೊಸ ಚಿತ್ರಕ್ಕೆ ಡೈರೆಕ್ಷನ್ ಮಾಡ್ತಿದ್ದಾರೆ. ಈ ಮೂಲಕ 5ನೇ ಬಾರಿಗೆ ಉಪ್ಪಿ-ನಾಗಣ್ಣ (Naganna) ಒಂದಾಗುತ್ತಿದ್ದಾರೆ. ಇದನ್ನೂ ಓದಿ:8 ವರ್ಷದ ಪ್ರೀತಿಗೆ ಸೈನಿಕನ ಜೊತೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾದ ‘ಗಿಣಿರಾಮ’ ನಟಿ

    ಈ ಚಿತ್ರದಲ್ಲಿ ಉಪೇಂದ್ರ ಕನಕದಾಸರ ಪಾತ್ರ ನಿರ್ವಹಿಸಲಿದ್ದು, ಕಥೆ ಕೇಳಿ ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದಾರೆ. ಉಪೇಂದ್ರ ಅವರು ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಲುಕ್ ಬದಲಿಸಿಕೊಳ್ಳಲಿದ್ದಾರೆ. ಈ ಸಿನಿಮಾಗಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವ ಕಥೆ 15ನೇ ಶತಮಾನದ್ದು. ಕನಕದಾಸರ ಸಿದ್ದಾಂತಗಳಿಂದ ಆದ ಪರಿಣಾಮಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ತೆರೆಮೇಲೆ ತರಲು ಡೈರೆಕ್ಟರ್ ನಾಗಣ್ಣ ಸಜ್ಜಾಗಿದ್ದಾರೆ. ಈ ಸಿನಿಮಾಗೆ ಖ್ಯಾತ ಚಿತ್ರಕಥೆಗಾರ ಜಿ.ಕೆ. ಭಾರವಿ ಚಿತ್ರಕಥೆ ಬರೆದಿದ್ದಾರೆ. ಹಂಸಲೇಖ ಸಂಗೀತ ಸಂಯೋಜನೆ ಮಾಡುತ್ತಿದ್ದು, ಈಗ ಕೆಲಸ ಆರಂಭಿಸಿದ್ದಾರೆ.

    ಈ ಸಿನಿಮಾದ ಕಥೆ ಮುಖ್ಯವಾಗಿ ಕನಕದಾಸರ ಬಗ್ಗೆ ಇದ್ದು, ಉಪೇಂದ್ರ ಅವರು ಕನಕದಾಸರಾಗಲಿದ್ದಾರೆ. ಈಗಾಗಲೇ ನಾವು ರಿಸರ್ಚ್ ವರ್ಕ್ ಮಾಡಿ ಕೆಲಸ ಆರಂಭಿಸಿಲಿದ್ದೇವೆ. ಉಪ್ಪಿ ಅವರು ಸಹ ಕಥೆ ಕೇಳಿ ಥ್ರಿಲ್ ಆಗಿದ್ದರೆ. ಎರಡು ಶೇಡ್‌ನಲ್ಲಿ ಅವರ ಪಾತ್ರ ಇರಲಿದೆ ಎಂದು ನಿರ್ದೇಶಕ ನಾಗಣ್ಣ ಮಾಹಿತಿ ನೀಡಿದ್ದಾರೆ.

    ಕನಕದಾಸರ ಐತಿಹಾಸಿಕ ಚಿತ್ರವನ್ನ ಅದ್ದೂರಿಯಾಗಿ ನಿರ್ಮಾಣ ಮಾಡಲಿದ್ದಾರೆ. ಈ ಹಿಂದೆ ‘ಎ’ ಚಿತ್ರ ನಿರ್ಮಿಸಿದ್ದ ಜಗನ್ನಾಥ್ ಅವರು ಉಪ್ಪಿ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಉಪ್ಪಿ ಜೊತೆ ಯಾರೆಲ್ಲಾ ನಟಿಸುತ್ತಾರೆ? ಶೂಟಿಂಗ್ ಯಾವಾಗ ಈ ಎಲ್ಲಾ ಮಾಹಿತಿಗಾಗಿ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

  • ಹರಕೆ ಹೊತ್ತ ನಂತರ ಡಿಕೆಶಿ ಹುಟ್ಟಿದ್ದು : ಅಮ್ಮನ ಭಾವುಕ ಮಾತು

    ಹರಕೆ ಹೊತ್ತ ನಂತರ ಡಿಕೆಶಿ ಹುಟ್ಟಿದ್ದು : ಅಮ್ಮನ ಭಾವುಕ ಮಾತು

    ಜೀ ಕನ್ನಡ ವಾಹಿನಿಯ ಪ್ರಸಿದ್ಧ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar). ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಡಿಕೆಸಿ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ತಾಯಿ, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿರುವ ಡಿಕೆಶಿ ತಾಯಿ ಗೌರಮ್ಮ (Gauramma), ತಮ್ಮ ಮಗನ ಹುಟ್ಟಿನ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಎರಡು ವರ್ಷ ಮಕ್ಕಳೇ ಇರಲಿಲ್ಲ. ನಾನು ದೇವರಲ್ಲಿ ಹರಕೆ ಹೊತ್ತೆ. ಹರಕೆ ಮಾಡಿದ  ನಂತರ ಶಿವಕುಮಾರ್ ಹುಟ್ಟಿದ. ಮಗ ಮನೆಗೆ ಬಂದ ಖುಷಿ ಹೇಳೋಕೆ ಆಗಲ್ಲ’ ಎಂದು ಭಾವುಕರಾಗಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಮಗನ ಬಗ್ಗೆ ಮತ್ತಷ್ಟು ಹೆಮ್ಮೆಯ ಮಾತುಗಳನ್ನೂ ಅವರು ಆಡಿದ್ದಾರೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ. ಇದನ್ನೂ ಓದಿ:ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

     

    ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • CBI ರೇಡ್ ಹಿನ್ನೆಲೆ- ಗೇಟ್‍ಗೆ ಬೀಗ ಹಾಕಿ ಮನೆಯಲ್ಲಿ ಕುಳಿತ ಡಿಕೆಶಿ ತಾಯಿ ಗೌರಮ್ಮ

    CBI ರೇಡ್ ಹಿನ್ನೆಲೆ- ಗೇಟ್‍ಗೆ ಬೀಗ ಹಾಕಿ ಮನೆಯಲ್ಲಿ ಕುಳಿತ ಡಿಕೆಶಿ ತಾಯಿ ಗೌರಮ್ಮ

    ರಾಮನಗರ: ಕೇಂದ್ರಿಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಗೇಟ್‍ಗೆ ಬೀಗ ಹಾಕಿ ಮನೆಯಲ್ಲಿ ಕುಳಿತಿದ್ದಾರೆ.

    ಡಿಕೆಶಿ ಕನಕಪುರ ಮನೆ ಮೇಲೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿಕೆಶಿಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿರುವ ಮನೆಯ ಗೇಟ್‍ಗೆ ಬೀಗ ಜಡಿಯಲಾಗಿದೆ. ಗೇಟ್ ಗೆ ಬೀಗ ಹಾಕಿ ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಡಿಕೆಶಿ ತಾಯಿ ಗೌರಮ್ಮ ಕುಳಿತಿದ್ದಾರೆ. ಇತ್ತ ಡಿಕೆಶಿಯವರು, ನನಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

    ಸಿಬಿಐ ದಾಳಿ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಏನ್ಮಾಡ್ತಿರಾ ಯಾರ ಮೇಲೆ ಪ್ರೀತಿ ಇರುತ್ತಾ ಅವರ ಮನೆ ದಾಳಿ ಮಾಡುತ್ತಾರೆ. ನಾನು ಈ ಕೆಲಸದಲ್ಲಿದ್ದಿನಿ. ಅವರು ಅಲ್ಲಿ ದಾಳಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ತಾಯಿಗೆ ವಯಸ್ಸಾಗಿದೆ, ಮರೆವು ಜಾಸ್ತಿ ಆಗಿದೆ: ಡಿಕೆ ಶಿವಕುಮಾರ್

    ಜಮೀನು ನೋಡಿದರೆ, ಮನೆ ನೋಡಿದ್ದಾರೆ. ಅಧಿಕಾರಿಗಳು ಏನೇನೂ ಮಾಡಿದ್ದಾರೋ ಗೊತ್ತಿಲ್ಲ. ನನ್ನ ತಾಯಿಗೆ ವಯಸ್ಸಾಗಿದೆ. ಮರೆವು ಜಾಸ್ತಿ ಆಗಿದೆ. ಸಿಬಿಐ ಅಂದಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವು ಗಡಗಡ ಅಂತೀವಿ. ಹೀಗಾಗಿ ಅಲ್ಲಿ ಏನಾಗಿದೆ ಅಂತಾ ಯಾರಿಗೂ ಗೊತ್ತಾಗಿಲ್ಲ ಎಂದು ಹೇಳಿದರು.

    ಸಿಬಿಐ ದಾಳಿ: 5 ವರ್ಷದಲ್ಲಿ 75 ಕೋಟಿಗೂ ಅಧಿಕ ಆಸ್ತಿಗಳಿಸಿರುವ ಸಂಬಂಧ ಡಿಕೆಶಿ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ತನ್ನ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್‍ಮೇಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.

    ಸಿಬಿಐ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆಗೆ ಕಾಲಾವಧಿ ಕೇಳಿದ ಅರ್ಜಿ ಸಲ್ಲಿಸಿದ್ದರು. ನಂತರ ಆಸ್ತಿ ಮೌಲ್ಯಮಾಪನ ಮಾಡಿ ಹೆಚ್ಚಿನ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸಿಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆ ತೆರಳಿ ಮೌಲ್ಯಮಾಪನ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋಡಿ ಹಳ್ಳಿ ನಿವಾಸದಲ್ಲಿ ಡಿಕೆಶಿ ತಾಯಿ ವಿಚಾರಣೆ

    ಕೋಡಿ ಹಳ್ಳಿ ನಿವಾಸದಲ್ಲಿ ಡಿಕೆಶಿ ತಾಯಿ ವಿಚಾರಣೆ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್‍ಗೆ ಶಾಕ್ ನೀಡಿರುವ ಸಿಬಿಐ ಅಧಿಕಾರಿಗಳು ಇದೀಗ ಕನಕಪುರ ಬಂಡೆ ತಾಯಿಯನ್ನು ವಿಚಾರಣೆ ನಡೆಸಿದ್ದಾರೆ.

    ಕೋಡಿಹಳಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಹಾಗೂ ಡಿಕೆಶಿ ತಾಯಿ ಗೌರಮ್ಮ ಎದುಬದುರಾಗಿ ಕುಳೀತುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಗೌರಮ್ಮ ಉತ್ತರಿಸಿದ್ದಾರೆ. ಕೊಡಿಹಳ್ಳಿಯ ನಿವಾಸದ ಮುಂದೆ ಕಾರ್ಯಕರ್ತರು ಜಮಾಯಿಸಿದ್ದಾರೆ.

    ಬೆಳಗ್ಗೆ 6 ಗಂಟೆ ಸುಮಾರಿಗೆ ದೊಡ್ಡ ಆಲಹಳ್ಳಿಯ ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಸತತ 6 ಗಂಟೆಗಳ ಕಾಲ ದಾಳಿ ಮಾಡಿರುವ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಚಾರಣೆ ಮುಕ್ತಾಯವಾಗಿದೆ. ಸಿಬಿಐ ಅಧಿಕಾರಿಗಳ ದಾಳಿ ವೇಳೆ ಡಿಕೆ ತಾಯಿಯ ಕಾರು ಡ್ರೈವರ್ ಉಮೇಶ್ ಮಾತ್ರ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮಗಳ ಐಶ್ವರ್ಯವೇ ಮುಳುವಾಗುತ್ತಾ..?

    ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಗೌರಮ್ಮ, ನನ್ನ ನನ್ನ ಮಗನನ್ನ ಕಂಡರೆ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಪ್ರೀತಿ. ಅದಕ್ಕಾಗಿಯೇ ಪದೇ ಪದೇ ನಮ್ಮ ಮಗನನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಮೇಲೆ ತಮ್ಮ ಅಸಮಾಧಾನ ಹೊರಹಾಕಿದ್ದರು.  ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?

    ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ತೆಗೆದುಕೊಂಡು ಹೋಗಲಿ. ಅವರಿಗೂ ಮಾಡೋಕೆ ಕೆಲಸವಿಲ್ಲ ಸುಮ್ಮನೆ ತಿರುಗುತ್ತಾರೆ. ಸುಮ್ಮನೆ ನಮ್ಮ ಹೊಟ್ಟೆ ಉರಿಸುತ್ತಾರೆ. ನಮ್ಮ ಮಗನನ್ನ ಅವರ ಮನೆಗೆ ಕರೆದುಕೊಂಡು ಕೂರಿಸಿಕೊಳ್ಳಲಿ. ಬೇಕಾದ್ರೆ ನಾನು ಹೋಗಿ ಕುಳಿತುಕೊಳ್ಳುತ್ತೇನೆ ಸಮಯಕ್ಕೆ ಸರಿಯಾಗಿ ಊಟ ಕೊಟ್ಟರೆ ಸಾಕು ಎಂದು ಹೇಳಿದ್ದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

  • ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

    ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

    – ನನ್ನ ಮಗನನ್ನು ಕಂಡ್ರೆ ಅಧಿಕಾರಿಗಳಿಗೆ ಪ್ರೀತಿ

    ರಾಮನಗರ: ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ಕೂಡ ತೆಗೆದುಕೊಂಡು ಹೋಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹೇಳಿದ್ದಾರೆ.

    ಮಗನ ಮನೆ ಮೇಲೆ ಸಿಬಿಐ ದಾಳಿ ಕುರಿತು ಕೋಡಿಹಳ್ಳಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನನ್ನ ಕಂಡರೆ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಪ್ರೀತಿ. ಅದಕ್ಕಾಗಿಯೇ ಪದೇ ಪದೇ ನಮ್ಮ ಮಗನನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಮೇಲೆ ತಮ್ಮ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಡಿಕೆಶಿಗೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಬಿಗ್ ಶಾಕ್ ಕೊಟ್ಟ ಸಿಬಿಐ

    ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ತೆಗೆದುಕೊಂಡು ಹೋಗಲಿ. ಅವರಿಗೂ ಮಾಡೋಕೆ ಕೆಲಸವಿಲ್ಲ ಸುಮ್ಮನೆ ತಿರುಗುತ್ತಾರೆ. ಸುಮ್ಮನೆ ನಮ್ಮ ಹೊಟ್ಟೆ ಉರಿಸುತ್ತಾರೆ. ನಮ್ಮ ಮಗನನ್ನ ಅವರ ಮನೆಗೆ ಕರೆದುಕೊಂಡು ಕೂರಿಸಿಕೊಳ್ಳಲಿ. ಬೇಕಾದ್ರೆ ನಾನು ಹೋಗಿ ಕುಳಿತುಕೊಳ್ಳುತ್ತೇನೆ ಸಮಯಕ್ಕೆ ಸರಿಯಾಗಿ ಊಟ ಕೊಟ್ಟರೆ ಸಾಕು ಎಂದು ಹೇಳಿದರು.

    ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?

    ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಎಫ್‍ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

  • ಇಡಿ ವಿಚಾರಣೆ ಅಂತ್ಯವಾಗಿದೆ, ಇನ್ನೂ ವಿಚಾರಣೆಗೆ ಬೇಕಾದರೆ ಸಹಕರಿಸ್ತೇವೆ: ಡಿಕೆ ಸುರೇಶ್

    ಇಡಿ ವಿಚಾರಣೆ ಅಂತ್ಯವಾಗಿದೆ, ಇನ್ನೂ ವಿಚಾರಣೆಗೆ ಬೇಕಾದರೆ ಸಹಕರಿಸ್ತೇವೆ: ಡಿಕೆ ಸುರೇಶ್

    ರಾಮನಗರ: ಇಡಿ ಅಧಿಕಾರಿಗಳ ತನಿಖೆ ಆಂತ್ಯವಾಗಿದ್ದು ಸುದೀರ್ಘವಾಗಿ ವಿಚಾರಣೆ ನಡೆದಿದ್ದಾರೆ. ಮುಂದೆಯೂ ಕೂಡಾ ಅವರಿಗೆ ಬೇಕಾದ ಮಾಹಿತಿ ಹಾಗೂ ವಿಚಾರಣೆಗೆ ಸಹಕರಿಸಲು ಸಿದ್ಧರಿದ್ದೇವೆ ಎಂದು ಸಂಸದ ಡಿಕೆ ಸುರೇಶ್ ತಮ್ಮ ತಾಯಿ ಗೌರಮ್ಮರ ಇಡಿ ವಿಚಾರಣೆ ಬಳಿಕ ತಿಳಿಸಿದ್ದಾರೆ.

    ಕನಕಪುರ ತಾಲೂಕಿನ ಕೋಡಿಹಳ್ಳಿಯ ನಿವಾಸದಲ್ಲಿ ಇಂದು ಗೌರಮ್ಮರ ವಿಚಾರಣೆಯನ್ನು ಸುಮಾರು 8 ಗಂಟೆಗಳ ಕಾಲ ಇಡಿ ಅಧಿಕಾರಿಗಳು ನಡೆಸಿದರು. ವಿಚಾರಣೆ ಬಳಿಕ ಮಾತನಾಡಿದ ಡಿಕೆ ಸುರೇಶ್, ಮುಂದೆ ವಿಚಾರಣೆ ಅವಶ್ಯವಿದ್ದರೆ 85 ವರ್ಷವಾದ್ರೂ ನಮ್ಮ ತಾಯಿ ಕೂಡ ಸ್ಪಂದಿಸುವುದಾಗಿ ಹೇಳಿದ್ದಾರೆ. ನಮ್ಮ ತಾಯಿಗೆ ಜ್ವರ ಇತ್ತು. ಆದರೂ ತನಿಖೆಗೆ ಸಹಕರಿಸಿದ್ದಾರೆ. ನಾನು ಮತ್ತು ಅಣ್ಣ ಗೌರವಯುತ ಸ್ಥಾನದಲ್ಲಿದ್ದು, ಸಹಕರಿಸಲು ನಿರ್ಧರಿಸಿದ್ದೇವು. ಅಮ್ಮ ಕೂಡ ತಿಳಿಸಿದರು ಎಂದು ಹೇಳಿದರು.

    ವಿಚಾರಣೆ ವೇಳೆ ಗಲಾಟೆ ನಡೆಯಬಹುದು ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಬಂದೋಬಸ್ತ್ ನೀಡಿದ್ದರು. ನಾವು ಕೂಡಾ ಕಾರ್ಯಕರ್ತರು ಮನೆಯ ಬಳಿ ಬರದಂತೆ ಮನವಿ ಮಾಡಿದ್ದೇವು. ನಮ್ಮ ಮನವಿಗೆ ಕಾರ್ಯಕರ್ತರು ಸಹಕರಿಸಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

    ಅಧಿಕಾರಿಗಳು ಕೂಲಂಕುಷವಾಗಿ ವಿಚಾರಣೆ ನಡೆಸಿ ಹೋಗಿದ್ದಾರೆ. ಮತ್ತೆ ವಿಚಾರಣೆ ಬೇಕಾದರೆ ಎದರುಸಿಲು ಸಿದ್ಧರಿದ್ದು, ಅಧಿಕಾರಿಗಳು ಬರುವುದಾದರೆ ನಾವು ಸ್ವಾಗತಿಸ್ತೇವೆ. ಅವರು ಯಾವಾಗ ಬೇಕಾದರೂ ತನಿಖೆ ನಡೆಸಬಹುದು. ಕಾನೂನಿನ ಮುಂದೆ ಎಲ್ಲರೂ ಕೂಡಾ ತಲೆಬಾಗಲೇಬೇಕು ಎಂದರು.

  • ಕೋಡಿಹಳ್ಳಿಯಲ್ಲಿ ಇಡಿಯಿಂದ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

    ಕೋಡಿಹಳ್ಳಿಯಲ್ಲಿ ಇಡಿಯಿಂದ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

    ರಾಮನಗರ: ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಹಿನ್ನೆಲೆಯಲ್ಲಿ ಅವರ ತಾಯಿ ಗೌರಮ್ಮ ಅವರ ವಿಚಾರಣೆಗೆ ಇಡಿ ಅಧಿಕಾರಿಗಳ ತಂಡ ಕನಕಪುರ ತಾಲೂಕಿನ ಕೋಡಿಹಳ್ಳಿಯ ನಿವಾಸಕ್ಕೆ ಆಗಮಿಸಿದೆ.

    ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿನ ತೋಟದ ಮನೆಗೆ ಎರಡು ಕಾರ್ ಗಳಲ್ಲಿ ಬಂದ ಐವರು ಅಧಿಕಾರಿಗಳ ತಂಡ ಡಿಕೆಶಿ ತಾಯಿ ಗೌರಮ್ಮ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಕೋಡಿಹಳ್ಳಿಯ ಹೊರವಲಯದಲ್ಲಿರುವ ತೋಟದ ಮನೆಯಲಿ ಬೆಳಗ್ಗಿನಿಂದ ಗೌರಮ್ಮರ ಆರೋಗ್ಯದ ಬಗ್ಗೆ ಅವರ ಫ್ಯಾಮಿಲಿ ಡಾಕ್ಟರ್ ರಿಂದ ತಪಾಸಣೆ ನಡೆಸಲಾಗಿದೆ.

    ವಿಚಾರಣೆಗಾಗಿ ದೆಹಲಿಗೆ ವಿಚಾರಣೆಗೆ ಬರುವಂತೆ ಇ.ಡಿ. ಅಧಿಕಾರಿಗಳು ಗೌರಮ್ಮ ಅವರಿಗೆ ನೋಟಿಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಗೌರಮ್ಮ, ಅನಾರೋಗ್ಯ ಮತ್ತು ವಯಸ್ಸಾದ ಕಾರಣ ವಿಚಾರಣೆಗೆ ವಿನಾಯಿತಿ ನೀಡಬೇಕು. ಇಲ್ಲವೇ ತಮ್ಮ ನಿವಾಸದಲ್ಲಿಯೇ ವಿಚಾರಣೆ ನಡೆಸಬೇಕು ಎಂದು ಕೋರಿದ್ದರು. ಅವರ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ ಕಾರಣ ಕೋಡಿಹಳ್ಳಿ ನಿವಾಸದಲ್ಲಿ ವಿಚಾರಣೆ ನಿಗದಿಯಾಗಿತ್ತು.

  • ಜೈಲಿಂದ ಹೊರಬಂದ್ರೂ ಡಿಕೆಶಿಗೆ ತಪ್ಪಿಲ್ಲ ಸಂಕಷ್ಟ – ಇಡಿಯಿಂದ ಪಾರಾಗ್ತಾರಾ ತಾಯಿ, ಪತ್ನಿ?

    ಜೈಲಿಂದ ಹೊರಬಂದ್ರೂ ಡಿಕೆಶಿಗೆ ತಪ್ಪಿಲ್ಲ ಸಂಕಷ್ಟ – ಇಡಿಯಿಂದ ಪಾರಾಗ್ತಾರಾ ತಾಯಿ, ಪತ್ನಿ?

    ನವದೆಹಲಿ: ಜಾಮೀನು ಪಡೆದು ಹೊರ ಬಂದರೂ ಕನಕಪುರದ ಬಂಡೆಗೆ ಟೆನ್ಶನ್ ಮಾತ್ರ ತಪ್ಪಿಲ್ಲ. ತಾವೇನೋ ಹರಸಾಹಸ ಪಟ್ಟು 50 ದಿನಗಳ ಬಳಿಕ ಇಡಿ ಬಲೆಯಿಂದ ಹೊರ ಬಂದರು. ಆದರೆ ಈಗ ಜಾರಿ ನಿರ್ದೇಶನಾಲಯ(ಇಡಿ) ಡಿಕೆಶಿ ಪತ್ನಿ ಹಾಗೂ ತಾಯಿಗೆ ಬಲೆ ಬೀಸಿದೆ. ಇಡಿ ನೀಡಿರುವ ಸಮನ್ಸ್ ಸಂಬಂಧ ಇಂದು ದಿಲ್ಲಿ ಹೈಕೋರ್ಟಿನಿಂದ ಮಧ್ಯಂತರ ತೀರ್ಪು ಬರುವ ಸಾಧ್ಯತೆಗಳಿವೆ.

    ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಜಾಲ ಕುಟುಂಬಕ್ಕೆ ವಿಸ್ತರಣೆ ಆಗಿದೆ. ಈಗಾಗಲೇ ಸಹೋದರ ಡಿ.ಕೆ ಸುರೇಶ್ ಮತ್ತು ಪುತ್ರಿ ಐಶ್ವರ್ಯ ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಈಗ ಡಿ.ಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ಎರಡನೇ ಬಾರಿ ಸಮನ್ಸ್ ನೀಡಿದ್ದಾರೆ.

    ಈ ಹಿಂದೆ ಅಕ್ಟೋಬರ್ 17 ಕ್ಕೆ ವಿಚಾರಣೆ ಬರುವಂತೆ ಡಿಕೆ ತಾಯಿ ಮತ್ತು ಮಡದಿಗೆ ಇಡಿಯಿಂದ ಸಮನ್ಸ್ ನೀಡಲಾಗಿತ್ತು. ಆದರೆ ಸಮನ್ಸ್ ರದ್ದು ಮಾಡಬೇಕು, ಬೆಂಗಳೂರಿನಲ್ಲಿ ವಿಚಾರಣೆ ನಡೆಸಬೇಕು ಅಂತ ಕೋರಿ ಡಿಕೆಶಿ ಪತ್ನಿ ಮತ್ತು ತಾಯಿ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ ಇಂದಿಗೆ ವಿಚಾರಣೆ ನಿಗದಿ ಮಾಡಿತ್ತು. ಅಲ್ಲದೆ 7 ದಿನಗಳ ಕಾಲ ಸಮನ್ಸ್ ನೀಡದಂತೆ ಇಡಿಗೆ ಸೂಚನೆ ನೀಡಿತ್ತು. ಈಗಾಗಲೇ 7 ದಿನ ಕಳೆದಿರುವ ಹಿನ್ನೆಲೆಯಲ್ಲಿ ನಾಳೆ ವಿಚಾರಣೆ ಬನ್ನಿ ಅಂತ ಡಿಕೆ ತಾಯಿ ಮತ್ತು ಮಡದಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ನಡುವೆ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಗೌರಮ್ಮ ಮತ್ತು ಉಷಾ ಸಲ್ಲಿಸಿದ್ದ ಅರ್ಜಿ ಕೂಡ ಇಂದೇ ವಿಚಾರಣೆಗೆ ಬರಲಿದೆ.

    ಐಟಿ ಪ್ರಕಣರದಲ್ಲಿ ಅನಾವಶ್ಯಕವಾಗಿ ಇಡಿ ಮೂಗು ತೂರಿಸಿದ್ದು ಇಡೀ ಕುಟುಂಬಸ್ಥರ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ ಅಂತ ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ಪರ ವಕೀಲರು ವಾದ ಮಂಡಿಸಿದರು. ಒಂದು ವೇಳೆ ವಿಚಾರಣೆ ಅತ್ಯವಶ್ಯಕ ಅನ್ನೋದಾದರೆ ಗೌರಮ್ಮ ಅವರಿಗೆ 85 ವರ್ಷ ಆಗಿದ್ದು ದೆಹಲಿಗೆ ಬರಲು ಸಾಧ್ಯವಿಲ್ಲ. ಹೀಗಾಗಿ ಡಿಕೆಶಿ ಪತ್ನಿ ಉಷಾರನ್ನು ಒಳಗೊಂಡು ಗೌರಮ್ಮರನ್ನು ಬೆಂಗಳೂರಿನಲ್ಲಿ ವಿಚಾರಣೆಗೆ ಒಳಪಡಿಸಲು ಇಡಿಗೆ ಸೂಚಿಸುವಂತೆ ಹೈಕೋರ್ಟಿಗೆ ಮನವಿ ಮಾಡಿದರು.

    ಈ ಸಂಬಂಧ ಇಂದು ಕೂಡ ವಾದ ಪ್ರತಿ-ವಾದ ಮುಂದುವರಿಯಲಿದ್ದು, ಬಳಿಕ ಮಧ್ಯಂತರ ತೀರ್ಪು ಬರುವ ಸಾಧ್ಯತೆಗಳಿವೆ. ಇಡಿ ವಿಚಾರಣೆಗೆ ಹೈಕೋರ್ಟ್ ಬ್ರೇಕ್ ಹಾಕುತ್ತಾ ಅಥವಾ ವಯಸ್ಸಿನ ಕಾರಣಗಳಿಂದ ಬೆಂಗಳೂರಿನಲ್ಲಿಯೇ ವಿಚಾರಣೆಗೆ ನಿರ್ದೇಶನ ಕೊಡುತ್ತಾ ಅನ್ನೋದನ್ನು ಕಾದು ನೋಡಬೇಕು.

  • ಮಗ ಮನೆಗೆ ಬರ್ತಿದ್ದಾನೆ, ನನಗೆ ಅದೇ ಹಬ್ಬ: ಡಿಕೆಶಿ ತಾಯಿ ಗೌರಮ್ಮ

    ಮಗ ಮನೆಗೆ ಬರ್ತಿದ್ದಾನೆ, ನನಗೆ ಅದೇ ಹಬ್ಬ: ಡಿಕೆಶಿ ತಾಯಿ ಗೌರಮ್ಮ

    ರಾಮನಗರ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ದೊರೆತಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ಗೌರಮ್ಮ ಅವರು, ನನ್ನ ಮಗ ಮನೆಗೆ ಬರ್ತಿದ್ದಾನೆ, ನನಗೆ ಅದೇ ಹಬ್ಬ ಎಂದಿದ್ದಾರೆ.

    ಕನಕಪುರ ತಾಲೂಕಿನ ಕೋಡಿಹಳ್ಳಿಯ ನಿವಾಸದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನ್ನ ಮಗ ಶಿವಕುಮಾರ್ ಗೆ ಜಾಮೀನು ದೊರೆತಿರುವುದು ಸಂತಸ ತಂದಿದ್ದು, ಈ ಸಂದರ್ಭದಲ್ಲಿ ಬೇರೆ ಏನು ಹೇಳಲಾಗುತ್ತಿಲ್ಲ. ದೇವರಿಗೆ ಮಗ ಮನೆಗೆ ಬರುವಂತೆ ಬೇಡಿಕೊಂಡಿದ್ದೆ. ನನ್ನ ಮಗ ಮನೆಗೆ ಬರುತ್ತಿರುವುದೇ ಬಹುದೊಡ್ಡ ಹಬ್ಬ. ಈ ವೇಳೆ ಪಟಾಕಿ ಹೊಡಿಬೇಕಾಗಿಲ್ಲ, ಸಿಹಿ ತಿನ್ನಬೇಕಿಲ್ಲ ಎಂದರು.

    ಇತ್ತ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಲಭಿಸಿರುವುದರಿಂದ ರಾಮನಗರ, ಕನಕಪುರ, ಕೆಪಿಸಿಸಿ ಕಚೇರಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ಸಂಭ್ರಮಾಚರಣೆ ನಡೆಸಿದ್ದಾರೆ.

  • ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್

    ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಪತ್ನಿಗೆ ಉಷಾಗೆ ಇಡಿ ವಿಚಾರಣೆಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

    ಉಷಾ ಅವರು ನಾಳೆ ವಿಚಾರಣೆಗೆ ಹಾಜರಾಗಬೇಕೆಂದಿಲ್ಲ. ಹಾಗೆಯೇ ಗೌರಮ್ಮ ಅವರಿಗೆ ನೀಡಿದ್ದ ಸಮನ್ಸ್ ಕೂಡ ವಾಪಸ್ ಪಡೆದುಕೊಂಡಿದ್ದು, ಹೊಸದಾಗಿ ಸಮನ್ಸ್ ಕಳುಹಿಸುವುದಾಗಿ ಇಡಿ ಅಧಿಕಾರಿಗಳು ದೆಹಲಿ ಹೈಕೋರ್ಟಿನಲ್ಲಿ ತಿಳಿಸಿದ್ದಾರೆ.

    ಡಿಕೆಶಿ ಪತ್ನಿ ಹಾಗೂ ತಾಯಿ ಸಮನ್ಸ್ ರದ್ದು ಕೋರಿ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾ ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಉಷಾ, ಗೌರಮ್ಮ ಪರ ವಕೀಲ ದಯಾನ್ ಕೃಷ್ಣನ್ ನ್ ವಾದ ಮಂಡಿಸಿ, ಬೇರೆ ಕೋರ್ಟ್ ಗಳ ತೀರ್ಪು ಉಲ್ಲೇಖ ಮಾಡುವ ಮೂಲಕ ಒಂದೇ ಪ್ರಕರಣವನ್ನು ಇಡಿ ತಿರುಚಿ ಆರೋಪ ಮಾಡುತ್ತಿದೆ. ಒಂದೇ ಪ್ರಕರಣದಲ್ಲಿ ಡಿಕೆಶಿ ಪತ್ನಿ ಉಷಾ ಮತ್ತು ಗೌರಮ್ಮ ಅವರಿಗೆ ನೊಟೀಸ್ ನೀಡಿದೆ. ಬೇರೆ ಪ್ರಕರಣವೊಂದರಲ್ಲಿ ಗೌರಮ್ಮ ಅವರಿಂದ ಡಿ.ಕೆ ಸುರೇಶ್ ಗೆ ಜಮೀನು ವರ್ಗ ಮಾಡಿರುವ ಹಿನ್ನೆಲೆಯಲ್ಲಿ ನೊಟೀಸ್ ನೀಡಲಾಗಿದೆ. ವಿಚಾರಣೆಯಲ್ಲಿ ಮಹಿಳೆಯರಿಗೆ ವಿನಾಯಿತಿ ಇದೆ ಎಂದು ವಾದಿಸಿದರು.

    ಅಲ್ಲದೆ 15 ವರ್ಷಕ್ಕಿಂತ ಕೆಳಗಿರುವ ಮತ್ತು 85 ವರ್ಷದಕ್ಕಿಂತ ಮೇಲ್ಪಟ್ಟವರನ್ನು ಪೋಲೀಸ್ ಸ್ಟೇಷನ್ ಗೆ ವಿಚಾರಣೆಗೆ ಕರೆಯಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಗೌರಮ್ಮ ಮತ್ತು ಉಷಾ ಅವರಿಗೆ ನೊಟೀಸ್ ಕೊಡುವ ಅಗತ್ಯ ಇರಲಿಲ್ಲ ಎಂದು ಕೃಷ್ಣನ್ ವಾದಿಸಿದರು.

    ಇದೇ ವೇಳೆ ಎಷ್ಟು ದಿನ ವಿಚಾರಣೆ ಮಾಡುತ್ತೀರಿ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಇಡಿ ಪರ ವಕೀಲರು, ಎರಡು ಪ್ರಕರಣಗಳಿವೆ ಹೀಗಾಗಿ ವಿಚಾರಣೆ ಮಾಡಬೇಕಾಗುತ್ತದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿ ತನಿಖೆ ಮಾಡಬೇಕು. ಮುಂದಿನ ವಾರದಲ್ಲಿ ವಿಚಾರಣೆ ನಡೆಸುತ್ತೇವೆ. ಸಮನ್ಸ್ ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದರು.

    ಮುಂದಿನ ವಾರ ಪ್ರಕರಣ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 10.30ಕ್ಕೆ ಮುಂದೂಡಿ, ನಾಳೆ ಉಷಾ ಶಿವಕುಮಾರ್ ಹಾಜರಾಗುವ ಅವಶ್ಯಕತೆ ಇಲ್ಲ. ಇಬ್ಬರಿಗೂ ತಾತ್ಕಾಲಿಕ ರಿಲೀಫ್ ನೀಡಲಾಗಿದೆ. ನಾಳೆ ವಿಚಾರಣೆ ಹಾಜರಾಗಬೇಕೆಂದಿಲ್ಲ. ಸಮನ್ಸ್ ವಾಪಸ್ ಪಡೆದು, ಹೊಸ ಸಮನ್ಸ್ ಜಾರಿ ಮಾಡುತ್ತೇವೆ. 7 ದಿನಗಳ ಬಳಿಕ ಸಮನ್ಸ್ ಬಳಿಕ ಹೊಸ ಸಮನ್ಸ್ ಜಾರಿ ಮಾಡುತ್ತೇವೆ ಎಂದು ಇಡಿ ಪರ ವಕೀಲರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಕರಣದ ವಿಸ್ತ್ರತ ವಿಚಾರಣೆಯನ್ನು ಕೋರ್ಟ್ ನಡೆಸಲಿದೆ.