Tag: ಗೌರವ

  • ನಟಿ ದೀಪಿಕಾ ಪಡುಕೋಣೆಗೆ ಆಸ್ಕರ್ ಗೌರವ

    ನಟಿ ದೀಪಿಕಾ ಪಡುಕೋಣೆಗೆ ಆಸ್ಕರ್ ಗೌರವ

    ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಹಿಂದೆ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭದ ನಿರೂಪಣೆಯ ಹೊಣೆ ಹೊತ್ತಿದ್ದರು. ಅಂಥದ್ದೊಂದು ಗೌರವಕ್ಕೆ ಅವರು ಪಾತ್ರರಾಗಿದ್ದರು. ಈಗ ಅಕಾಡೆಮಿಯು ದೀಪಿಕಾಗೆ ಮತ್ತೊಂದು ಗೌರವ ನೀಡಿದೆ. ದೀಪಿಕಾ ನಟನೆಯ ಬಾಜಿರಾವ್ ಮಸ್ತಾನಿ ಸಿನಿಮಾದ ದಿವಾನಿ ಮಸ್ತಾನಿ ಹಾಡನ್ನು ಆಸ್ಕರ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

    ಒಂದು ಕಡೆ ಈ ಗೌರವ. ಮತ್ತೊಂದು ಕಡೆ ಇತ್ತೀಚೆಗೆ ತಾವು ತಾಯಿಯಾಗುತ್ತಿರುವ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ ದೀಪಿಕಾ. ಇದೀಗ ಬೆಂಗಳೂರಿನಲ್ಲಿಯೇ (Bengaluru) ಚೊಚ್ಚನ ಮಗುವಿಗೆ ದೀಪಿಕಾ ಜನ್ಮ ನೀಡಲಿದ್ದಾರೆ ಎಂಬ ಸುದ್ದಿ ಸಿಕ್ಕಿದೆ.

    ಕನ್ನಡತಿ ದೀಪಿಕಾ ಪಡುಕೋಣೆ- ರಣ್‌ವೀರ್ (Ranveer Singh) ಜೋಡಿ ಹಲವು ವರ್ಷಗಳು ಪ್ರೀತಿಸಿ 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ 6 ವರ್ಷಗಳ ನಂತರ ಈ ಜೋಡಿ ಪೋಷಕರಾಗುತ್ತಿದ್ದಾರೆ. ಇನ್ನೂ ದೀಪಿಕಾ ಮೂಲತಃ ಮಂಗಳೂರಿನವರಾಗಿದ್ದು, ನಟಿಯ ಪೋಷಕರು ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

     

     

    View this post on Instagram

     

    A post shared by The Academy (@theacademy)

    ಮಗುವಿಗೆ ಬೆಂಗಳೂರಿನಲ್ಲಿಯೇ ಜನ್ಮ ನೀಡಲು ದೀಪಿಕಾ ನಿಶ್ಚಯಿಸಿದ್ದಾರೆ. ಇಂದಿರಾ ನಗರದಲ್ಲಿ ದೀಪಿಕಾ ಪಡುಕೋಣೆ ಮನೆಯಿದ್ದು, ಇಲ್ಲಿಯೇ ಅವರು ಹಲವು ತಿಂಗಳುಗಳ ಕಾಲ ಸಮಯ ಕಳೆಯಲಿದ್ದಾರೆ. ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನೆರವನ್ನು ಪಡೆದುಕೊಳ್ಳಲಿದ್ದಾರೆ. ಯಾವ ಆಸ್ಪತ್ರೆ, ಯಾವ ವೈದ್ಯರು ದೀಪಿಕಾ ಪಡುಕೋಣೆ ಹೆರಿಗೆ ಮಾಡಿಸಲಿದ್ದಾರೆ ಎಂಬುದು ಬಹಿರಂಗವಾಗಿಲ್ಲ.

     

    ಬೆಂಗಳೂರಿನ ತಮ್ಮ ಇಷ್ಟದ ಜಾಗಗಳಲ್ಲಿ ಓಡಾಡಲಿದ್ದಾರೆ. ಬೆಂಗಳೂರಿನ ದೀಪಿಕಾ ಇಷ್ಟದ ಹೋಟೆಲ್‌ಗಳಾದ ಗೀತಾ ಸ್ಟೋರ್ಸ್, ಮೇಘನಾ, ವಿದ್ಯಾರ್ಥಿ ಭವನ್, ಸಿಟಿಆರ್ ಇನ್ನಿತರೆ ಹೋಟೆಲ್‌ಗಳಿಗೆ ಭೇಟಿ ನೀಡಲಿದ್ದಾರೆ.

  • ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಮಡಿಕೇರಿ: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದಂತಹ ಹುತಾತ್ಮ ಅಧಿಕಾರಿ, ಸಿಬ್ಬಂದಿಗಳಿಗೆ ಮಡಿಕೇರಿಯಲ್ಲಿ ಗೌರವ ನಮನ ಸಲ್ಲಿಸಲಾಯಿತು.

    ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಹಿನ್ನೆಲೆ ಕೊಡಗು ಅರಣ್ಯ ವೃತ್ತದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದಂತಹ ಅರಣ್ಯ ಅಧಿಕಾರಿಗಳಿಗೆ ಗೌರವ ಸಲ್ಲಿಸುವ ಮೂಲಕ ಹುತಾತ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದನ್ನೂ ಓದಿ: ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು

    ಮಡಿಕೇರಿ ನಗರದ ಅರಣ್ಯ ಭವನದಲ್ಲಿ ಅಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳು ತಾಕತ್ ಸಿಂಗ್ ರಾಣಾವತ್ ಹಾಗೂ ಮಡಿಕೇರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಏ ಟಿ ಪೂವಯ್ಯ ಹಾಗೂ ಕೊಡಗು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಉಪವಲಯ ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು ಮತ್ತು ಕಚೇರಿ ಸಿಬ್ಬಂದಿ ಹುತಾತ್ಮರಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 46 ವರ್ಷದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆ 

  • ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ

    ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ

    ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

    ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ವಿಶೇಷ ಗೌರವ ಸಲ್ಲಿಸಿದರು.

    ಇದೇ ವೇಳೆ ಮಾತನಾಡಿದ ವೀರಯೋಧ ನಾಗರಾಜ್, ದೇಶ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯವಾಗಿದೆ. ಹೆತ್ತ ತಾಯಿಯ ಹಾಗೂ ಭೂಮಿತಾಯಿಯ ಋಣ ತೀರಿಸಲು ಸಿಕ್ಕಿರುವ ಅವಕಾಶವಾಗಿದ್ದು, ನಿಜಕ್ಕೂ ನನಗೆ ನನ್ನ ದೇಶ ಸೇವೆ ಖುಷಿ ತಂದಿದೆ ಎಂದರು.

    ಮುಖ್ಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ನಿವೃತ್ತಿ ನಂತರವೂ ಕಾರ್ಯನಿರ್ವಹಿಸಿದ್ದೇನೆ. ನಮ್ಮ ಊರಿನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಎಲ್ಲೆಡೆಯೂ ಯೋಧರಿಗೆ ಗೌರವ ಸಲ್ಲಿಸುತ್ತಾರೆ. ಇದರಿಂದ ಯೋಧನ ಸೇವೆಗೆ ಸಿಕ್ಕ ಒಂದು ಗೌರವವಾಗಿದೆ ಎಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರಿಗೆ ಧನ್ಯವಾದ ತಿಳಿಸಿದರು.

  • ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ: ತಂದೆಯ ಪುಣ್ಯತಿಥಿಗೆ ರಾಹುಲ್ ನಮನ

    ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ: ತಂದೆಯ ಪುಣ್ಯತಿಥಿಗೆ ರಾಹುಲ್ ನಮನ

    ನವದೆಹಲಿ: ನಿಮ್ಮ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಪ್ಪ ರಾಜೀವ್ ಗಾಂಧಿಯವರ ಪುಣ್ಯತಿಥಿಗೆ ನಮನ ಸಲ್ಲಿಸಿದ್ದಾರೆ.

    ಇಂದು ಭಾರತದ 6ನೇ ಪ್ರಧಾನ ಮಂತ್ರಿಯಾಗಿ ಸೇವೆಸಲ್ಲಿಸಿದ್ದ ರಾಜೀವ್ ಗಾಂಧಿಯವರ 29ನೇ ಪುಣ್ಯತಿಥಿ, ಈ ಸಮಯದಲ್ಲಿ ಅಪ್ಪನನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ರಾಹುಲ್, ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಪ್ರಧಾನ ಮಂತ್ರಿಯಾಗಿ ರಾಜೀವ್ ಜಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಸಾಗಿಸಿದ್ದಾರೆ. ದೇಶವನ್ನು ಮುಂದೆ ತೆಗದುಕೊಂಡು ಹೋಗುವ ದೃಷ್ಟಿಯಿಂದ ಮತ್ತು ರಾಷ್ಟ್ರವನ್ನು ಸಬಲೀಕರಣಗೊಳಿಸಲು ಅವರು ಅನೇಕ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಇಂದು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಪ್ರೀತಿಯಿಂದ ಮತ್ತು ಕೃತಜ್ಞತೆಯಿಂದ ವಂದಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ, ಪುಣ್ಯತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ದೇಶಕ್ಕಾಗಿ ಪ್ರಾಣಬಿಟ್ಟ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರಿಗೆ ತುಂಬು ಹೃದಯದ ನಮನ ಎಂದು ಬರೆದುಕೊಂಡಿದ್ದಾರೆ.

    ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿನ ಶ್ರೀಪೆರಂಬುದೂರ್ ಗೆ ಬಂದಿದ್ದ ರಾಜೀವ್ ಗಾಂಧಿಯವರನ್ನು 1991 ಮೇ 21ರಂದು ಹತ್ಯೆ ಮಾಡಲಾಗಿತ್ತು. ಭಾಷಣ ಮಾಡಲು ಸ್ಟೇಜ್ ಕಡೆ ಹೋಗುತ್ತಿದ್ದಾಗ ರಾಹುಲ್ ಗಾಂಧಿ ಬಳಿ ಬಂದ ಮಹಿಳಾ ಸೂಸೈಡ್ ಬಾಂಬರ್ ತೆನ್ಮೋಜಿ ರಾಜರತ್ಮಂ ಆರ್.ಡಿ.ಎಕ್ಸ್ ಬಾಂಬ್ ಬ್ಲಾಸ್ಟ್ ಮಾಡಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ್ದಳು. ಈ ವೇಳೆ ರಾಜೀವ್ ಗಾಂಧಿ ಜೊತೆ ಇನ್ನೂ 14 ಮಂದಿ ಸಾವನ್ನಪ್ಪಿದ್ದರು.

  • ಭಾರತದ ಮೊದಲ ಮಹಿಳಾ ಶಾಸಕಿ ಡಾ. ಮುತ್ತುಲಕ್ಷ್ಮಿ ರೆಡ್ಡಿಗೆ ಗೂಗಲ್ ಡೂಡಲ್ ಗೌರವ

    ಭಾರತದ ಮೊದಲ ಮಹಿಳಾ ಶಾಸಕಿ ಡಾ. ಮುತ್ತುಲಕ್ಷ್ಮಿ ರೆಡ್ಡಿಗೆ ಗೂಗಲ್ ಡೂಡಲ್ ಗೌರವ

    ನವದೆಹಲಿ: ಇಂದು ಭಾರತದ ಮೊದಲ ಮಹಿಳಾ ಶಾಸಕಿ ಡಾ. ಮುತ್ತುಲಕ್ಷ್ಮಿ ರೆಡ್ಡಿ ಅವರ 133ರ ಹುಟ್ಟುಹಬ್ಬ. ಈ ಹಿನ್ನೆಲೆ ಗೂಗಲ್ ತನ್ನ ಡೂಡಲ್‍ನಲ್ಲಿ ಗೌರವ ಸಲ್ಲಿಸಿದೆ.

    ಭಾರತೀಯ ವೈದ್ಯೆ, ಪತ್ರಕರ್ತೆ, ಸಾಮಾಜಿಕ ಸುಧಾರಕಿ, ಪದ್ಮಭೂಷಣ ಪ್ರಶಸ್ತಿ ವಿಜೇತೆ, ಹಾಗೂ ಭಾರತದ ಮೊಟ್ಟ ಮೊದಲ ಮಹಿಳಾ ಶಾಸಕಿ ಎಂಬ ಕೀರ್ತಿಗೆ ಡಾ. ಮುತ್ತುಲಕ್ಷ್ಮಿ ರೆಡ್ಡಿ ಭಾಜನರಾಗಿದ್ದಾರೆ. ಇಂದು ಈ ಸಾಧಕಿಯ ಜನ್ಮದಿನವಾಗಿದೆ.

    ಮುತ್ತುಲಕ್ಷ್ಮಿ ಅವರು, 1886ರ ಜುಲೈ 30ರಂದು ತಮಿಳುನಾಡಿನ ಪುದುಕೋಟೆಯ ರಾಜವಂಶದ ಕುಟುಂಬದಲ್ಲಿ ಜನಿಸಿದ್ದರು. ಮುತ್ತುಲಕ್ಷ್ಮಿ ಅವರ ತಂದೆ ಎಸ್.ನಾರಾಯಣಸ್ವಾಮಿ ಹಾಗೂ ತಾಯಿ ಹೆಸರು ಚಂದ್ರಮಳಲ್. ಮಹಿಳಾ ಶಿಕ್ಷಣಕ್ಕೆ ಭಾರಿ ವಿರೋಧವಿದ್ದ ಕಾಲದಲ್ಲೇ ಮುತ್ತುಲಕ್ಷ್ಮಿ ಅವರು ಉನ್ನತ ಶಿಕ್ಷಣ ಪಡೆದಿದ್ದರು. 1912ನಲ್ಲಿ ಪದವಿ ಮುಗಿಸಿದ ಮುತ್ತುಲಕ್ಷ್ಮಿ ಅವರು ಭಾರತದಲ್ಲಿ ವೈದ್ಯಕೀಯ ಪದವಿ ಪಡೆದು ಮೊದಲ ಮಹಿಳಾ ವೈದ್ಯರಾದರು.

    1914ರಲ್ಲಿ ಡಾ. ಸುಂದರ ರೆಡ್ಡಿ ಅವರನ್ನು ಮುತ್ತುಲಕ್ಷ್ಮಿ ಅವರು ವಿವಾಹವಾದರು. 1927ರಲ್ಲಿ ಇವರು ಮದ್ರಾಸ್ ಶಾಸಕಾಂಗ ಸಭೆಗೆ ನೇಮಕಗೊಂಡರು. ಈ ಮೂಲಕ ಬ್ರಿಟಿಷ್ ಇಂಡಿಯಾದ ಮೊದಲ ಮಹಿಳಾ ಶಾಸಕಿಯಾಗಿ ಹೊರಹೊಮ್ಮಿದರು. ದೇವದಾಸಿ ಪದ್ಧತಿಯನ್ನು ನಿಷೇಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

    1930ರಲ್ಲಿ ಅವರು ಮದ್ರಾಸ್ ಶಾಸನ ಸಭೆಗೆ ರಾಜೀನಾಮೆ ನೀಡಿದರು. ಬಳಿಕ ಮಹಿಳಾ ಸಂಘದ ಸಂಸ್ಥಾಪಕ-ಅಧ್ಯಕ್ಷರಾಗಿದ್ದರು ಮತ್ತು ಮದ್ರಾಸ್ ಕಾರ್ಪೊರೇಶನ್ ನ ಮೊದಲ ಆಲ್ಡರ್ ವುಮನ್ ಆಗಿ ನೇಮಕವಾದರು. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮುತ್ತುಲಕ್ಷ್ಮಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಹಾತ್ಮ ಗಾಂಧಿಜೀ ಅವರೊಂದಿಗೆ ಸೇರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಕೂಡ ಮುತ್ತುಲಕ್ಷ್ಮಿ ಅವರು ಭಾಗವಹಿಸಿದ್ದರು.

    ಕ್ಯಾನ್ಸರ್‍ನಿಂದ ತಮ್ಮ ಸಹೋದರಿ ತೀರಿಹೋದ ಬಳಿಕ ಮುತ್ತುಲಕ್ಷ್ಮಿ ಅವರು 1954ರಲ್ಲಿ ಚೆನ್ನೈನಲ್ಲಿ ಅಡ್ಯಾರ್ ಕ್ಯಾನ್ಸರ್ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯೂ ವಿಶ್ವದ ಅತ್ಯಂತ ಗೌರವಾನ್ವಿತ ಅಂಕಾಲಾಜಿ ಕೇಂದ್ರಗಳಲ್ಲಿ ಒಂದಾಗಿದ್ದು, ಪ್ರತಿವರ್ಷ 80 ಸಾವಿರಕ್ಕೂ ಹೆಚ್ಚು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮುತ್ತುಲಕ್ಷ್ಮಿ ಅವರು ದೇಶಕ್ಕೆ ನೀಡಿರುವ ಅತ್ಯುತ್ತಮ ಕೊಡುಗೆಗಾಗಿ ಭಾರತ ಸರ್ಕಾರ 1956ರಲ್ಲಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 1968ರ ಜುಲೈ 22ರಂದು ಚೆನ್ನೈನಲ್ಲಿ ಮುತ್ತುಲಕ್ಷ್ಮಿ ಅವರು ನಿಧನರಾದರು.

  • ಕಾರ್ಗಿಲ್ ವಿಜಯೋತ್ಸವ – ದೇಶದೆಲ್ಲೆಡೆ ಮುಗಿಲು ಮುಟ್ಟಲಿದೆ ಸಂಭ್ರಮ

    ಕಾರ್ಗಿಲ್ ವಿಜಯೋತ್ಸವ – ದೇಶದೆಲ್ಲೆಡೆ ಮುಗಿಲು ಮುಟ್ಟಲಿದೆ ಸಂಭ್ರಮ

    ನವದೆಹಲಿ: ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ನೆನಪಿಸುವುದರ ಜೊತೆಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ 2 ದಿನ ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ.

    ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.

    ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು `ವಿಕ್ಟರ್ ಫ್ಲೇಮ್’ ಅನ್ನು ಬೆಳಗಿಸಿದ್ದರು. ಈ ಜ್ಯೋತಿ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿದೆ. ಸುಮಾರು 25 ದಿನಗಳ ಕಾಲ ನಡೆದಿದ್ದ ಯುದ್ಧದಲ್ಲಿ ಪಾಕ್ ಸೇನಾಪಡೆ ಹಾಗೂ ಉಗ್ರವಾದಿಗಳನ್ನು ನಮ್ಮ ಸಿಪಾಯಿಗಳು ಹಿಮ್ಮೆಟ್ಟಿಸಿದ್ದರು. ಇದಕ್ಕೆ ಆಪರೇಷನ್ ವಿಜಯ್ ಅಂತ ಹೆಸರಿಡಲಾಗಿತ್ತು.

    ಉರಿ ರಿಲೀಸ್:
    ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ‘ಉರಿ ದಿ ಸರ್ಜಿಕಲ್ ಸ್ಟೈಕ್’ ಚಿತ್ರ ಮರು ಬಿಡುಗಡೆಯಾಗುತ್ತಿದೆ. ಜನವರಿ 11ರಂದು ಬಿಡುಗಡೆಯಾಗಿದ್ದ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈಗ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಈ ಚಿತ್ರ ಮತ್ತೆ ಬಿಡುಗಡೆಗೆ ಸಿದ್ಧವಾಗಿದೆ. 2019ರ ಹೊಸ ವರ್ಷವನ್ನು ಬಾಲಿವುಡ್ ‘ಉರಿ ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು.

    ಯುದ್ಧ ನಡೆದಿದ್ದು ಯಾವಾಗ..?
    1999ರ ಮೇ ಮತ್ತು ಜುಲೈ ಈ 2 ತಿಂಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು. ಪಾಕ್ ಸೈನಿಕರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ ವಿಭಾಗವನ್ನು ಪುನಃ ಕೈವಶ ಮಾಡಿಕೊಳ್ಳಲು ಭಾರತ `ಆಪರೇಷನ್ ವಿಜಯ’ ಎಂಬ ಕಾರ್ಯಾಚರಣೆಯನ್ನು ನಡೆಸಿ ಜುಲೈನ 26ರಂದು ಯಶಸ್ವಿಯಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.

    ಕಾರ್ಗಿಲ್ ಯುದ್ಧದಲ್ಲಿ ಭಾರತದ 600ಕ್ಕೂ ಅಧಿಕ ವೀರ ಸೈನಿಕರು ಹುತಾತ್ಮರಾಗಿ, 1200ಕ್ಕೂ ಹೆಚ್ಚು ಮಂದಿ ಅಂಗವಿಕಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.

  • ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸೈನಿಕರಿಗೆ ವಿಶೇಷವಾದ ಪ್ರಾಧಾನ್ಯತೆ ನೀಡುವ ಮೂಲಕ ಗೌರವ ಸೂಚಿಸುತ್ತಿದೆ.

    ಹೌದು. ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ ದೇವರ ದರ್ಶನಕ್ಕೆ ಬರುವ ನಿವೃತ್ತ ಮತ್ತು ಸೇವೆಯಲ್ಲಿರುವ ಭಾರತೀಯ ಸೈನಿಕರಿಗೆ ವಿಶೇಷ ಪ್ರಾಶಸ್ತ್ಯವನ್ನು ದೇವಾಲಯದ ಆಡಳಿತ ಮಂಡಳಿ ಕಲ್ಪಿಸಿದೆ.

    ಪ್ರವೇಶ ದ್ವಾರದಲ್ಲಿ ನಾಮಫಲಕವನ್ನು ಅಳವಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಥವಾ ನಿವೃತ್ತ ಹೊಂದಿದ ವೀರಯೋಧರು ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸಿದರೆ, ಶ್ರೀ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದೆ.

    ರಾಮಚಂದ್ರಾಪುರ ಮಠ ದೇವಾಲಯದ ಆಡಳಿತವನ್ನು ವಹಿಸಿಕೊಂಡಾಗಿನಿಂದ ಭಕ್ತರಿಗೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಈಗ ನಮ್ಮ ಹೆಮ್ಮೆಯ ಸೈನಿಕರಿಗೂ ಶೀಘ್ರವೇ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದು, ಈ ಮೂಲಕ ಗೌರವ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಮಾನ ನಿಲ್ದಾಣದಲ್ಲೇ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಿದ ಜಿ. ಪರಮೇಶ್ವರ್

    ವಿಮಾನ ನಿಲ್ದಾಣದಲ್ಲೇ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಿದ ಜಿ. ಪರಮೇಶ್ವರ್

    ಬೆಳಗಾವಿ: ಸಿಆರ್​ಪಿಎಫ್ ಯೋಧ ಉಮೇಶ್ ಅವರ ಪಾರ್ಥಿವ ಶರೀರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹುತಾತ್ಮ ಯೋಧನಿಗೆ ವಿಮಾನ ನಿಲ್ದಾಣದಲ್ಲೇ ಗೌರವ ಸಲ್ಲಿಸಿ ಜಮಖಂಡಿಯತ್ತ ಪ್ರಯಾಣ ಬೆಳೆಸಿದರು.

    ಗೋಕಾಕ್ ಸಿಆರ್​ಪಿಎಫ್ ಯೋಧ ಮಣಿಪುರದಲ್ಲಿ ಹುತಾತ್ಮರಾದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಯೋಧನಿಗೆ ಗೌರವ ಸಲ್ಲಿಸಿದ್ದೇವೆ. ಹುತಾತ್ಮ ಯೋಧ ಉಮೇಶ್ 20 ಜನ ಯೋಧರ ಪ್ರಾಣ ಉಳಿಸಿದ್ದಾರೆ. ಯೋಧನ ಧೈರ್ಯ ಹಾಗೂ ಸಾಹಸಕ್ಕೆ ನಾನು ನನ್ನ ನಮನವನ್ನು ಸಲ್ಲಿಸುತ್ತೇನೆ. ಸರ್ಕಾರ ಯೋಧನ ಕುಟುಂಬಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸಲು ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.

    ಅಲ್ಲದೇ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು ಜಮಖಂಡಿ ಚುನಾವಣೆ ಉಸ್ತುವಾರಿ ಆಗಿ ನನ್ನನ್ನು ನೇಮಕ ಮಾಡಿದ್ದಾರೆ. 5 ಕ್ಷೇತ್ರದಲ್ಲಿ ನಮ್ಮ ಗೆಲ್ಲುವು ನಿಶ್ಚಿತವಾಗಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾರದು. ಮುಂದಿನ ಲೋಕಸಭಾ ಚುನಾವಣೆಗೆ ಈ ಎಲೆಕ್ಷನ್ ದಿಕ್ಸೂಚಿ ಅಲ್ಲ. ರಮೇಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಒಳ್ಳೆಯ ಫ್ರೆಂಡ್ಸ್. ಅವರಿಬ್ಬರು ಮಾತನಾಡುವುದು ಸಹಜ. ಇವರಿಬ್ಬರಿಗೂ ಬಹಿರಂಗವಾಗಿ ಮಾತನಾಡದಿರಲು ಸೂಚಿಸುತ್ತೇವೆ. ಎಂಇಎಸ್ ಕರಾಳ ದಿನ ಆಚರಣೆ ಹೊಸದಲ್ಲ. ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಟೋ ಡ್ರೈವರ್ ಪ್ರಾಮಾಣಿಕತೆ ಮೆಚ್ಚಿ ಪ್ರಶಂಸಿದ್ರು ಡಿಸಿಪಿ ರವಿ ಚನ್ನಣ್ಣನವರ್

    ಆಟೋ ಡ್ರೈವರ್ ಪ್ರಾಮಾಣಿಕತೆ ಮೆಚ್ಚಿ ಪ್ರಶಂಸಿದ್ರು ಡಿಸಿಪಿ ರವಿ ಚನ್ನಣ್ಣನವರ್

    ಬೆಂಗಳೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಿದ ಆಟೋರಿಕ್ಷಾ ಡ್ರೈವರ್ ಅವರ ಪ್ರಮಾಣಿಕತೆಯನ್ನು ಮೆಚ್ಚಿ ಪಶ್ಚಿಮ ವಲಯ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

    ಗಾಂಧಿನಗರದ ನಿವಾಸಿ ಶ್ರಿ.ಜುವೇರ್ ಖಾನ್ ಎಂಬವರು ಬೆಂಗಳೂರು ಉಬರ್ ಆಟೋವನ್ನು ಬುಕ್ ಮಾಡಿ ಪ್ರಯಾಣಿಸಿದ್ದಾರೆ. ಆದರೆ ಈ ವೇಳೆ ಆಟೋದಲ್ಲಿಯೇ ಲ್ಯಾಪ್‍ಟಾಪ್ ಇದ್ದ ಬ್ಯಾಗನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾರೆ.

    ಈ ವೇಳೆ ಆಟೋರಿಕ್ಷಾ ಚಾಲಕ ಆ ಲ್ಯಾಪ್‍ಟಾಪ್ ಬ್ಯಾಗನ್ನು ಉಪ್ಪರಪೇಟೆ ಪೊಲೀಸ್ ಠಾಣೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ಬ್ಯಾಗಿನ ವಾರಸುದಾರರ ಮಾಹಿತಿಯನ್ನು ತಿಳಿದುಕೊಂಡು ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಆಟೋ ಚಾಲಕನ ಕೈಯಲ್ಲಿಯೇ ಬ್ಯಾಗನ್ನು ಹಿಂದಿರುಗಿಸಿದ್ದಾರೆ.

    ಆಟೋರಿಕ್ಷಾ ಚಾಲಕನ ಪ್ರಮಾಣಿಕತೆಯನ್ನು ಮೆಚ್ಚಿ ಬೆಂಗಳೂರು ಸಿಟಿ ಪೊಲೀಸ್ ಪರವಾಗಿ ಡಿಸಿಪಿ ರವಿ ಡಿ ಚನ್ನಣ್ನನವರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಈ ಬಗ್ಗೆ ಡಿಸಿಪಿ ಅವರೇ ಟ್ವೀಟ್ ಮಾಡಿದ್ದಾರೆ.

    ಇತ್ತೀಷೆಗಷ್ಟೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಚಂದ್ರಕುಮಾರ್ ಅವರಿಗೆ 60 ಸಾವಿರ ರೂ. ಬೆಲೆ ಬಾಳುವ ಫೋನ್ ಸಿಕ್ಕಿದೆ. ಬಳಿಕ ಅದನ್ನು ಪೊಲೀಸರ ಸಹಾಯದ ಮೂಲಕ ಫೋನ್ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಇದರಿಂದ ಚಂದ್ರಕುಮಾರ್ ಅವರ ಪ್ರಮಾಣಿಕತೆಯನ್ನು ಮೆಚ್ಚಿ ಅವರಿಗೂ ಕೂಡ ಡಿಸಿಪಿ ರವಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

    ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

    ಬೆಂಗಳೂರು: ಇಂದು ರಾಷ್ಟ್ರಕವಿ ಕುಪ್ಪಳಿ ವೆಂಕಟಪ್ಪ ಪುಟಪ್ಪ ಅವರ 113 ಜನ್ಮ ವಾರ್ಷಿಕೋತ್ಸವ. ಕುವೆಂಪು ಅವರ ಜನ್ಮದಿನದಂದು ಗೂಗಲ್ ಡೂಡಲ್‍ನಲ್ಲಿ ಅವರ ಚಿತ್ರವನ್ನು ಪ್ರಕಟಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ.

    ಡೂಡಲ್ ನಲ್ಲಿ ಕುವೆಂಪು ಚಿತ್ರ ಮೂಡಿ ಬರಲು ಕಾರಣರಾದ ವ್ಯಕ್ತಿ ಉಪಮನ್ಯು ಭಟ್ಟಚಾರ್ಯ. ಕೋಲ್ಕತ್ತಾ ಮೂಲದ ಆನಿಮೇಟರ್ ಆಗಿರುವ ಉಪಮನ್ಯು ಈಗ ಕ್ಯಾಲಿಫೋರ್ನಿಯಾದಲ್ಲಿದ್ದೇನೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ಗೂಗಲ್ ನಲ್ಲಿ ಕನ್ನಡ ಪದವನ್ನು ಬರೆಯಲು ಇವರಿಗೆ ಹೇಳಿಕೊಟ್ಟವರು ಸ್ವಾತಿ ಶೇಲರ್.

    ಕುವೆಂಪು ಅವರ ಜನ್ಮದಿನಕ್ಕೆ ಡೂಡಲ್ ಮಾಡಿಕೊಡಿ ಎಂದು ಗೂಗಲ್ ಅವರು ಕೇಳೀಕೊಂಡಾಗ ನನಗೆ ಇದನ್ನು ನಂಬಲಿಕ್ಕೆ ಸಾಧ್ಯವಿಲ್ಲ. ಈ ಡೂಡಲ್ ನಾನು ಮಾಡಿದ್ದು, ಇದಕ್ಕೆ ಕನ್ನಡ ಪದವನ್ನು ಹಾಕಲು ಸ್ವಾತಿ ಶೇಲರ್ ಸಹಾಯ ಮಾಡಿದ್ದಾರೆ ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಗೂಗಲ್ ಎಂದು ಬರೆಯಲಾಗಿದೆ ಎಂದು ಉಪಮನ್ಯೂ ಭಟ್ಟಚಾರ್ಯ ಬರೆದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೊಸ್ಟ್ ಮಾಡಿದ್ದಾರೆ.

    ಕವಿಶೈಲದ ಪ್ರಕೃತಿಯ ಮಡಲಲ್ಲಿ ಬಂಡೆಯ ಮೇಲೆ ಕುಳಿತು ಕುವೆಂಪು ಸಾಹಿತ್ಯ ಸೃಷ್ಟಿಸುತ್ತಿರುವ ಚಿತ್ರವನ್ನು ಡೂಡಲ್‍ ಗೆ ಬಳಸಿಕೊಳ್ಳಲಾಗಿದೆ. ಮತ್ತೊಂದು ವಿಶಿಷ್ಟವೇನೆಂದರೆ ಕುವೆಂಪು ಚಿತ್ರದ ಹಿಂಭಾಗದಲ್ಲಿ ಗೂಗಲ್ ಎಂದು ಕನ್ನಡದಲ್ಲಿ ಬರೆಯಲಾಗಿದೆ. ಇದನ್ನು ಉಪಮನ್ಯೂ ಭಟ್ಟಚಾರ್ಯ ಬರೆದಿದ್ದು, ಸ್ವಾತಿ ಶೇಲರ್ ಕನ್ನಡ ಪದ ಬರೆಯಲು ಸಹಾಯ ಮಾಡಿದ್ದಾರೆ.

    ಯಾವಾಗಲ್ಲೂ ಪ್ರಕೃತಿ ಸೌಂದರ್ಯವನ್ನು ಇಷ್ಟಪಡುತ್ತಿದ್ದ ಕುವೆಂಪು ಅವರಿಗೆ ‘ಪೂವು’ ಎಂಬ ಡೂಡಲ್ ಬಳಸಿಕೊಳ್ಳಲಾಗಿದೆ. ಕುವೆಂಪು ಅವರು ತಮ್ಮ ಕವಿತೆಗಳಲ್ಲಿ ತಮ್ಮ ಸುತ್ತಮುತ್ತಲಿರುವ ಪ್ರಪಂಚದ ಸರಳ ಅದ್ಭುತವನ್ನು, ವಿಶೇಷವಾದ ಹೂವುಗಳಗೆ ಪ್ರತಿಬಿಂಬಿಸಿ ಪ್ರೀತಿಸುತ್ತಿದ್ದರು.

    ಕುವೆಂಪು ಅವರು 1904ರ ಡಿಸೆಂಬರ್ 29ರಂದು ಜನಿಸಿದ್ದು, ರಾಮಾಯಣ ದರ್ಶನಂ ಮೂಲಕ ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿದ್ದರು. ನವೆಂಬರ್ 11, 1994ರಲ್ಲಿ ಕುವೆಂಪು ವಿಧಿವಶರಾದ್ರು.

    ಉಪಮನ್ಯು ಭಟ್ಟಚಾರ್ಯ ಅವರು ಅನಿಮೇಷನ್ ಮೂಲಕ ಬೇರೆ ಬೇರೆ ಫೋಟೋಗಳನ್ನು ರಚಿಸಿದ್ದು ಅವುಗಳನ್ನು ಇಲ್ಲಿ ನೀಡಲಾಗಿದೆ.