Tag: ಗೌರವ್ ಗುಪ್ತಾ

  • ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ನಡೆಸಿಕೊಡುವ ಲಾಕ್ ಅಪ್ ರಿಯಾಲಿಟಿ ಶೋನಲ್ಲಿ ನಟಿ ಮಂದಾನಾ ಕರೀಮಿ ಮಾತನಾಡುತ್ತಾ, ತಾವು ಪತಿಯಿಂದ ದೂರವಾದ ನಂತರ ಸಾಂತ್ವಾನ ಹೇಳುವಂತೆ ನಟಿಸಿ ಖ್ಯಾತ ನಿರ್ದೇಶಕರೊಬ್ಬರು ತಮ್ಮನ್ನು ಬಳಸಿಕೊಂಡು, ಬೀಸಾಕಿದರು ಎಂದು ಹೇಳಿಕೆ ನೀಡಿದ್ದರು. ಮಂದಾನಾ ಮತ್ತು ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ತುಂಬಾ ಕ್ಲೋಸ್ ಆಗಿದ್ದು, ನಂತರ ದೂರ ದೂರವಾಗಿದ್ದರಿಂದ ಆ ನಿರ್ದೇಶಕ ಅನುರಾಗ್ ಕಶ್ಯಪ್ ಎಂದೇ ಬಿಂಬಿಸಲಾಯಿತು. ಸೋಷಿಯಲ್ ಮೀಡಿಯಾ ಸೇರಿದಂತೆ ಹಲವರು ಅನುರಾಗ್ ಕಶ್ಯಪ್ ಅವರತ್ತು ಬೊಟ್ಟು ಮಾಡಿ ತೋರಿಸಿದ್ದರು. ಇದೀಗ ಮಂದಾನಾ ಮಾತಿಗೆ ಟ್ವಿಸ್ಟ್ ಸಿಕ್ಕಿದೆ. ಇದನ್ನೂ ಓದಿ : ಗಮನ ಸೆಳೆದ ‘ಒಂದಂಕೆ ಕಾಡು’ ಮೋಷನ್ ಪೋಸ್ಟರ್

    ಲಾಕ್ ಅಪ್ ಶೋ ನಿಂದ ಎಲಿಮಿನೇಟ್ ಆಗಿ ಆಚೆ ಬಂದಿರುವ ಮಂದಾನಾ ಕರೀಮಿ ಈ ಕುರಿತಾಗಿ ಮಾತನಾಡಿದ್ದಾರೆ. ತಮಗೆ ಅನ್ಯಾಯ ಆಗಿದ್ದು ಹೇಗೆ? ಆ ನಿರ್ದೇಶಕ ಇವರೊಂದಿಗೆ ಹೇಗೆ ಸಂಬಂಧ ಹೊಂದಿದ. ಯಾಕೆ ದೂರವಾದ ಎನ್ನುವ ಎಲ್ಲ ಮಾಹಿತಿಯನ್ನೂ ಆಚೆ ಹಾಕಿದ್ದಾರೆ. ಈ ಮೂಲಕ ಮತ್ತೊಂದು ವಿವಾದಕ್ಕೂ ಅವರು ಕಾರಣವಾಗಿದ್ದಾರೆ.  ಇದನ್ನೂ ಓದಿ : Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

    ಮಂದಾನಾ ಕರೀಮಿ ಅವರು ಗೌರವ್ ಗುಪ್ತಾ ಎನ್ನುವವರ ಜತೆ ಮದುವೆ ಆಗಿದ್ದರು. ಈ ಜೋಡಿ ತುಂಬಾ ದಿನಗಳ ಕಾಲ ಸತಿಪತಿಗಳಾಗಿ ಉಳಿಯಲಿಲ್ಲ. ಮಂದಾನಾ ನಿರ್ವಹಿಸುತ್ತಿದ್ದ ಪಾತ್ರಗಳು ಪತಿ ಇಷ್ಟವಾಗುತ್ತಿರಲಿಲ್ಲ ಎನ್ನುವ ಕಾರಣಕ್ಕೆ ಮತ್ತು ವೈಯಕ್ತಿಕ ಹಲವು ಕಾರಣಗಳಿಂದಾಗಿ ಇಬ್ಬರೂ ದೂರವಾದರು. ಪತಿಯು ದೂರವಾದ ನಂತರ ಮಂದಾನಾ ಮಾನಸಿಕ ಖಿನ್ನತೆಗೂ ಒಳಗಾದರು. ಈ ಸಂದರ್ಭದಲ್ಲಿ ಅವರಿಗೆ ನೆರವಿಗೆ ಬಂದಿದ್ದು ಬಾಲಿವುಡ್ ನ ಖ್ಯಾತ ನಿರ್ದೇಶಕ. ಇದನ್ನೂ ಓದಿ:`ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್

    ಲಾಕ್ ಅಪ್ ಶೋನಿಂದ ಆಚೆ ಬಂದ ನಂತರ ಮಂದಾನಾ ಅವರಿಗೆ ಆ ನಿರ್ದೇಶಕರು ಯಾರು? ಅನುರಾಗ್ ಕಶ್ಯಪ್ ಹೆಸರು ತಳುಕು ಹಾಕಿಕೊಂಡಿದೆ. ಅದು ನಿಜನಾ? ಎಂದು ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿದ್ದಾರೆ. ತಾವು ಯಾವತ್ತೂ ಅನುರಾಗ್ ಅವರ ಹೆಸರನ್ನು ಹೇಳಿಲ್ಲ. ಶೋನಲ್ಲೂ ಆ ನಿರ್ದೇಶಕರು ಯಾರು ಎಂದೂ ಹೇಳಿರಲಿಲ್ಲ. ಸುಖಾಸುಮ್ಮನೆ ಅವರು ಹೆಸರನ್ನು ಈ ವಿವಾದಕ್ಕೆ ತಳುಕು ಹಾಕುವುದು ಬೇಡ ಎಂದು ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ:ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್

    ತಮಗೆ ನಿರ್ದೇಶಕನೊಬ್ಬನಿಂದ ಅನ್ಯಾಯವಾಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು, ಆ ನಿರ್ದೇಶಕ ಯಾರು ಎನ್ನುವುದನ್ನು ಹೇಳಲಾರೆ ಅಂದಿದ್ದಾರೆ. ಲಾಕ್ ಅಪ್ ಶೋನ ಫಾರ್ಮೆಟ್ ಹಾಗಿದ್ದರಿಂದ ಅನಿವಾರ್ಯವಾಗಿಯೇ ಈ ವಿಷಯವನ್ನು ಪ್ರಸ್ತಾಪ ಮಾಡಲಾಯಿತು. ನಾನು ಯಾವತ್ತೂ ಅನುರಾಗ್ ಕಶ್ಯಪ್ ಅವರ ಹೆಸರನ್ನು ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಉತ್ತರಿಸಿದ್ದಾರೆ ಮಂದಾನಾ.

  • ಬಿಬಿಎಂಪಿ ಗೋಲ್‍ಮಾಲ್- ಲಾಕ್‍ಡೌನ್‍ನಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ಬಿಲ್

    ಬಿಬಿಎಂಪಿ ಗೋಲ್‍ಮಾಲ್- ಲಾಕ್‍ಡೌನ್‍ನಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ಬಿಲ್

    – ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದೂರು

    ಬೆಂಗಳೂರು: 2020-21ನೇ ಸಾಲಿನಲ್ಲಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಬೆಲ್ಟ್, ಸ್ವೆಟರ್‍ ಗಳನ್ನು ನೀಡದೇ ಬೋಗಸ್ ಬಿಲ್ ಮಾಡಿ ಬಿಬಿಎಂಪಿಗೆ ಆರ್ಥಿಕ ನಷ್ಟ ಉಂಟುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ಡಾ.ಸಿ.ಎಸ್ ರಘು ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ.

    ಆಯುಕ್ತರನ್ನು ಶನಿವಾರ ಭೇಟಿಯಾದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಿ.ಎಸ್. ರಘು ಅವರು, ಈ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೋಲಾಗಿರುವ ಸಾರ್ವಜನಿಕರ ತೆರಿಗೆ ಹಣವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಬೇಕು, “2020-21ನೇ ಸಾಲಿನ ಪಾಲಿಕೆ ಆಯವ್ಯಯದಲ್ಲಿ ಶಾಲಾ ಕಾಲೇಜುಗಳಿಗೆ ಅವಶ್ಯವಿರುವ ಮೂಲ ಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ತುರ್ತಾಗಿ ಒದಗಿಸಲು ಕೆಹೆಚ್‍ಡಿಸಿ ಹಾಗೂ ಎಂಎಸ್‍ಐಎಲ್ ಸಂಸ್ಥೆ ವತಿಯಿಂದ ಅಗತ್ಯ ಸಲಕರಣೆಗಳನ್ನು ಖರೀದಿಸಿರುವುದಾಗಿ ಹೇಳಲಾಗಿದೆ. 2021ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳೀಗೆ ಶೂ, ಸಾಕ್ಸ್, ಬೆಲ್ಟ್ ವಿತರಿಸಲು ಪಾಲಿಕೆಯಿಂದ 1.72 ಕೋಟಿ ರೂ.ಪಾವತಿ ಆಗಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಇವುಗಳನ್ನು ವಿತರಿಸುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗುತ್ತದೆ,” ಎಂದು ರಘು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

    ಅದೇ ರೀತಿ 400 ರೂಪಾಯಿ ಬೆಲೆಯ ಸ್ವೆಟರ್ ಅನ್ನು 1,400 ರೂಪಾಯಿ ಎಂದು ನಮೂದಿಸಿ ಬಿಲ್ ಮಾಡಲಾಗಿದೆ. ಈ ಕುರಿತು ಆರ್‍ಟಿಐ ಮೂಲಕ ಮಾಹಿತಿ ಪಡೆದಿದ್ದೇವೆ. ಬಿಬಿಎಂಪಿಯಲ್ಲಿ ಬಿಲ್ ಕ್ಲಿಯರ್ ಆಗುವುದೇ ಕಷ್ಟ. ಆದರೆ ಈ ಖರೀದಿ ಪ್ರಕರಣಗಳಲ್ಲಿ ದಿಢೀರ್ ಬಿಲ್ ಪಾವತಿಯಾಗಿದ್ದು, ಇದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಲಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಒದಗಿಸಿ,” ಎಂದು ಅವರು ಮನವಿ ಮಾಡಿದರು. ಇದನ್ನೂ ಓದಿ: SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್

    ಈ ಪ್ರಕರಣದಲ್ಲಿ ಪ್ರಮುಖವಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಹಾಗೂ ವಿಶೇಷ ಹಣಕಾಸು ಆಯುಕ್ತೆ ತುಳಸಿ ಮೇದಿನೇನಿ ತಪ್ಪಿತಸ್ಥರಾಗಿದ್ದಾರೆ. 6-3-21 ರಲ್ಲಿ ಕಾರ್ಯಾದೇಶ ನೀಡಿದ್ದು ನಂತರ ಶಾಲಾ ಕಾಲೇಜುಗಳು ಪ್ರಾರಂಭವೇ ಆಗಿಲ್ಲ. ಕಾರ್ಯಾದೇಶದಲ್ಲಿ ಒಂದು ಕಡೆ ಸ್ವೆಟರ್ ಮತ್ತಿತರ ವಸ್ತುಗಳು ಎಂದು ಉಲ್ಲೇಖ ಆಗಿದ್ದರೆ, ಡಿ.ಸಿ.ಬಿಲ್ ನಲ್ಲಿ ಪುಸ್ತಕ ಎಂದು ನಮುದಾಗಿದೆ. ಮಕ್ಕಳಿಗೆ ಯಾವುದೇ ವಸ್ತುಗಳನ್ನು ಕೊಟ್ಟಿರುವ ಛಾಯಾಚಿತ್ರ ವರದಿಯಲ್ಲಿ ಉಲ್ಲೇಖಿಸಲಾಗಿಲ್ಲ. ಅಲ್ಲದೆ ಕೇವಲ ಶಾಲೆಗಳಿಗೆ ನೀಡಿದ್ದೇವೆ ಎಂದು ಮುಚ್ಚಳಿಕೆ ಮೇಲೇ ಹಣ ಪಾವತಿ ಮಾಡಲಾಗಿದೆ. ಕೆಲಸ ಮಾಡಿ ನಾಲ್ಕಾರು ವರ್ಷದ ಕಾಲ ಚಪ್ಪಲಿ ಸವೇದರು ಹಣ ನೀಡದೆ ಸತಾಯಿಸುವ ಬಿಬಿಎಂಪಿ ಅಧಿಕಾರಿಗಳು ಇಷ್ಟು ಬೇಗ ಹಣ ನೀಡಿದ್ದು ಹೇಗೆ ಎಂದು ಅವರು ಪ್ರಶ್ನಿಸಿದರು.

    ತಾವು ನೀಡಿದ ದೂರಿನ ಕುರಿತಂತೆ ಆಯುಕ್ತರಾದ ಗೌರವ್ ಗುಪ್ತಾ ಅವರು ಪೂರಕವಾಗಿ ಸ್ಪಂದಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಡಾ.ಸಿ.ಎಸ್. ರಘು ತಿಳಿಸಿದ್ದಾರೆ.

  • ಡೆಲ್ಟಾ ಪ್ರಕರಣದ ಬಗ್ಗೆ ಬಿಬಿಎಂಪಿ ಕಮಿಷನರ್ ಆತಂಕ

    ಡೆಲ್ಟಾ ಪ್ರಕರಣದ ಬಗ್ಗೆ ಬಿಬಿಎಂಪಿ ಕಮಿಷನರ್ ಆತಂಕ

    ಬೆಂಗಳೂರು: ನಗರದಲ್ಲಿ ಡೆಲ್ಟಾ ಪ್ರಕರಣಗಳು ಮಹಾ ಸ್ಫೋಟ ಆಗುತ್ತಿರುವ ಹೊತ್ತಲ್ಲೇ ಬಿಬಿಎಂ ಕಮಿಷನರ್ ಗೌರವ್ ಗುಪ್ತಾ ಆತಂಕಕಾರಿ ಹೇಳಿಕೆಯನ್ನು ನೀಡಿದ್ದಾರೆ. ಡೆಲ್ಟಾ ವೇರಿಯಂಟ್ ವೈರಾಣು ತಳಿ, 10 ಕೇಸ್ ಗಳು ದೃಢವಾದ್ರೆ, ಅದ್ರಲ್ಲಿ 6-7 ಕೇಸ್ ಗಳು ಡೆಲ್ಟಾ ಕೇಸ್ ಗಳು ಪತ್ತೆಯಾಗುತ್ತಿವೆ. ಎರಡನೇ ಅಲೆಯಲ್ಲಾದ ಸಾವು ನೋವುಗಳಿಗೆ ಇದರ ಹಬ್ಬುವಿಕೆಯೇ ಕಾರಣ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ, ಡೆಲ್ಟಾ ವೆರಿಯಂಟ್ ಕೇಸ್ ಗಳ ಬಗ್ಗೆ ಮಾಹಿತಿಯನ್ನು ನೀಡಿದ್ದು, ಪ್ರತಿನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಡೆಲ್ಟಾ ರೂಪಾಂತರ ವೈರಸ್‍ನ ಪ್ರಕರಣಗಳು ಪತ್ತೆಯಾಗುತ್ತಿವೆ. ಡೆಲ್ಟಾ ವೇರಿಯಂಟ್‍ನ ಮತ್ತೊಂದು ರೂಪವೇ ಡೆಲ್ಟಾ ಪ್ಲಸ್. ಜನರ ಕೈಯಲ್ಲಿಯೇ ಎಲ್ಲವೂ. ಜನರ ಸುರಕ್ಷತೆ ಮುಖ್ಯ. ಜನ ಗಾಬರಿ ಪಡುವಂತಹ ಅವಶ್ಯಕತೆಯಿಲ್ಲ ಎಂದರು. ಇದನ್ನೂ ಓದಿ: ಮೈಸೂರಲ್ಲಿ ಶೀಘ್ರವೇ ಡೆಲ್ಟಾ ಪ್ಲಸ್ ಪರೀಕ್ಷಾ ಲ್ಯಾಬ್ ಆರಂಭ

    ಬೆಂಗಳೂರಿನಲ್ಲಿ ಒಟ್ಟು 525 ಡೆಲ್ಟಾ ವೆರಿಯಂಟ್ ಪ್ರಕರಣಗಳು ಪತ್ತೆಯಾಗಿದ್ದು, ಸ್ಯಾಂಪಲ್ಸ್ ನ್ನು ನಿಮಾನ್ಸ್ ಹಾಗೂ ಎನ್‍ಸಿಬಿಎಸ್‍ಗೆ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ ಜನರು ಆದಷ್ಟು ಸುರಕ್ಷತೆಯಿಂದ ಇರಬೇಕೆಂದು ಸಲಹೆ ನೀಡಿದರು.

  • ಹೂ ಮಾರಿ SSLC ಪರೀಕ್ಷೆಗೆ ತಯಾರಾಗ್ತಿದ್ದ ವಿದ್ಯಾರ್ಥಿನಿಗೆ ಸಿಕ್ತು ಲ್ಯಾಪ್‍ಟಾಪ್

    ಹೂ ಮಾರಿ SSLC ಪರೀಕ್ಷೆಗೆ ತಯಾರಾಗ್ತಿದ್ದ ವಿದ್ಯಾರ್ಥಿನಿಗೆ ಸಿಕ್ತು ಲ್ಯಾಪ್‍ಟಾಪ್

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ತಯಾರಿಯ ಜೊತೆಗೆ ಹೂವು ಮಾರುವ ಯುವತಿ ಬನಶಂಕರಿಗೆ ಇಂದು ಲ್ಯಾಪ್ ಟಾಪ್ ಹಸ್ತಾಂತರ ಮಾಡಲಾಯಿತು. ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದ ಆದಿಶಕ್ತಿ ದೇವಾಲಯದಲ್ಲಿ ಹೂವು ಮಾರುವ ಯುವತಿ ಬನಶಂಕರಿ ಓದಿಗೆ ಹಲವು ಕೈಗಳು ನೆರವು ಮುಂದುವರಿಸಿದೆ.

    ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬನಶಂಕರಿ ಓದಿಗೆ ಸಹಾಯ ಆಗಲೀ ಎಂದು ಲ್ಯಾಪ್ ಟಾಪ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಮೀಷನರ್, ವಿದ್ಯೆ ಬಡತನ ದೂರ ಮಾಡುತ್ತದೆ. ಆಕೆಯ ಆಸಕ್ತಿ ಕಂಡು ನಾನು ಲ್ಯಾಪ್ ಟ್ಯಾಪ್ ವಿತರಣೆ ಮಾಡಿರುವೆ. ಇದನ್ನ ಯುವತಿ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿ ಎಂದರು.

    ಇದೇ ವೇಳೆ ಯುವತಿ ಬನಶಂಕರಿ ಮಾತನಾಡಿ, ತುಂಬಾ ಖುಷಿ ಆಯಿತು. ಓದುವಾಗ ಈ ನೆರವು ಸಿಕ್ಕಿದು ನನ್ನ ಭಾಗ್ಯ ಎಂದರು. ನೆನ್ನೆಯಷ್ಟೇ ಪಬ್ಲಿಕ್ ಟಿವಿ ವತಿಯಿಂದ ಯುವತಿ ಓದಿಗಾಗಿ ಟ್ಯಾಬ್ ವಿತರಣೆ ಸಹ ಮಾಡಲಾಗಿದೆ. ಇದನ್ನೂ ಓದಿ: ಹೂ ಮಾರುವ ಹುಡ್ಗಿ ಮತ್ತು ಪಬ್ಲಿಕ್ ಟಿವಿ ಬಿಗ್ ಬುಲೆಟಿನ್‍ನ ಆ ಬ್ರೇಕ್..!

  • ಜನರ ಬಳಿಗೆ ವ್ಯಾಕ್ಸಿನ್ ವಿತರಣೆ ತಲುಪಿಸಲು ಬಿಬಿಎಂಪಿ ಕ್ರಮ

    ಜನರ ಬಳಿಗೆ ವ್ಯಾಕ್ಸಿನ್ ವಿತರಣೆ ತಲುಪಿಸಲು ಬಿಬಿಎಂಪಿ ಕ್ರಮ

    ಬೆಂಗಳೂರು: ನಗರದಲ್ಲಿ ವ್ಯಾಕ್ಸಿನ್ ವಿರಣೆಗೆ ಹೆಚ್ಚು ಒತ್ತು ಕೊಡುತ್ತಿದ್ದು, 45 ವರ್ಷ ಮೇಲ್ಪಟ್ಟವರಲ್ಲಿ ಈಗಾಗಲೇ ಶೇ. 50 ಜನರಿಗೆ ವ್ಯಾಕ್ಸಿನ್ ಹಂಚಲಾಗಿದೆ. ಇನ್ನೂ ಹೆಚ್ಚಳ ಮಾಡುವ ಬಗ್ಗೆ ಮಾತನಾಡಿದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಈಗಾಗಲೇ ಲಸಿಕೆ ನೀಡುವ ಕಾರ್ಯಕ್ರಮ ಹೆಚ್ಚು ವೇಗದಿಂದ ನಡೆಯುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಕೆಲವು ವಾರ್ಡ್ ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ಆ ವಾರ್ಡ್ ಗಳಲ್ಲಿ ಇತರೆ ಜಾಗಗಳಲ್ಲಿ ಲಸಿಕೆ ಕ್ಯಾಂಪ್ ನಡೆಸಲಾಗ್ತಿದೆ. 18 ರಿಂದ 45 ವರ್ಷದ ಜನರಿಗೆ, 30 ವಿಭಾಗಗಳ ಜನರಿಗೆ ಅವರು ಕೆಲಸ ಮಾಡುವ ಜಾಗಗಳಿಗೆ ಹೋಗಿ ಅವರಿಗೆ ಲಸಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.

    ಸದ್ಯ ಬಂದಿರುವ ಮಾಹಿತಿಯ ಪ್ರಕಾರ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಾಕಷ್ಟು ಜನ ದೂರದಲ್ಲಿದ್ದಾರೆ. ಅವರ ಸ್ಥಳಕ್ಕೆ ಹೋದರೆ ಮಾತ್ರ ಕೆಲವರು ಲಸಿಕೆ ಪಡೆಯುತ್ತಾರೆ. ಈ ಹಿನ್ನಲೆ ಈಗಾಗಲೇ ಡೋರ್ ಟೂ ಡೋರ್ ಸರ್ವೇ ಮಾಡುತ್ತಿದ್ದೇವೆ. ಸರ್ವೆಯಲ್ಲಿ ಯಾರು ಲಸಿಕೆ ಪಡೆದಿಲ್ಲ ಅವರ ಪಟ್ಟಿ ಮಾಡುತ್ತಿದ್ದೇವೆ. ಪಟ್ಟಿಯಲ್ಲಿ ಯಾವ ಕ್ಷೇತ್ರದ ಜನ ಲಸಿಕೆ ತೆಗೆದುಕೊಂಡಿಲ್ಲ. ಲಸಿಕೆ ತೆಗೆದುಕೊಳ್ಳಲು ಯಾಕೆ ಮುಂದಾಗಿಲ್ಲ ಅನ್ನೊದನ್ನ ತಿಳಿದುಕೊಂಡು ಆ ಸ್ಥಳದಲ್ಲೇ ವಿಶೇಷ ಲಸಿಕೆ ಕ್ಯಾಂಪ್ ಮಾಡಲು ಮುಂದಾಗಿದ್ದೇವೆ ಎಂದರು. ಇದನ್ನೂ ಓದಿ: ಲಸಿಕೆ ಪಡೆಯದವರಿಗೆ ಇಲ್ಲ ಹೇರ್ ಕಟ್ಟಿಂಗ್, ಶೇವಿಂಗ್ – ಸಲೂನ್ ಮಾಲೀಕರ ನಿರ್ಧಾರ

    ಈ ಕುರಿತು ಎಲ್ಲ ಸಿದ್ಧತೆಯಾಗಿದ್ದು ಮುಂದಿನ ದಿನಗಳಲ್ಲಿ ಚಾಲ್ತಿಗೆ ಬರಲಿದೆ. ಫ್ಯಾಕ್ಟರಿಗಳಲ್ಲಿ ಈಗಾಗಲೇ ಲಸಿಕೆ ಕ್ಯಾಂಪ್ ಗಳನ್ನ ಮಾಡಲಾಗಿದೆ. ಬೆಂಗಳೂರು ಅಪಾರ್ಟ್‍ಮೆಂಟ್ ಫೆಡರೇಶನ್ ಅವರು ಕೂಡ ಖಾಸಗಿ ಆಸ್ಪತ್ರೆಗಳ ಜೊತೆ ಲಿಂಕ್ ಅಪ್ ಮಾಡಿಕೊಂಡು ಲಸಿಕೆ ಕ್ಯಾಂಪ್ ಮಾಡಿದ್ದಾರೆ. ಇನ್ನು ಖಾಸಗಿ ರಂಗದ ಸಂಸ್ಥೆಗಳು ಹಲವು ಕಡೆ ಕ್ಯಾಂಪ್ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಜನರಿಗೆ ಉಪಯೋಗವಾಗುವಂತೆ ಜನರ ಮನೆಯ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಕೆಲಸ ಬಿಬಿಎಂಪಿ ಕಡೆಯಿಂದ ಮಾಡುತ್ತೇವೆ ಎಂದರು.

  • ಬೆಂಗಳೂರಲ್ಲಿ ಡೆಲ್ಟಾ ಪ್ಲಸ್ ಬಂದಿದ್ದ ವ್ಯಕ್ತಿ ಸಂಪೂರ್ಣ ಗುಣಮುಖ- ಗೌರವ್ ಗುಪ್ತ

    ಬೆಂಗಳೂರಲ್ಲಿ ಡೆಲ್ಟಾ ಪ್ಲಸ್ ಬಂದಿದ್ದ ವ್ಯಕ್ತಿ ಸಂಪೂರ್ಣ ಗುಣಮುಖ- ಗೌರವ್ ಗುಪ್ತ

    ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಒಂದು ಪ್ರಕರಣದಲ್ಲಿ ಕೊರೊನಾ ಕುಲಾಂತರಿ ಸೋಂಕು ಡೆಲ್ಟಾ ಪ್ಲಸ್ ಕಂಡುಬಂದಿದೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಕೇಸ್ ಡೆಲ್ಟಾ ಪ್ಲಸ್ ಅಂತ ಗುರುತಿಸಲಾಗಿದೆ. ಈ ಕೇಸ್ ಗಳ ಪರಿಶೀಲನೆ ಮಾಡಿದಾಗ ಬಹಳ ಹಿಂದೆಯೇ ರಾಜ್ಯ ಸರ್ಕಾರದ ಮಟ್ಟದಲ್ಲಿ ಜಿನೋಮ್ ಸೀಕ್ವೆನ್ಸ್ ಸಹ ಮಾಡಲಾಗಿತ್ತು. ಆ ಮೂಲಕ ಇದು ಗುರುತಿಸಲಾಗಿದೆ. ಇಡೀ ದೇಶದಲ್ಲಿಯೇ ಮ್ಯೂಟೆಂಟ್ ವೈರೆಸ್ ಡೆಲ್ಟಾ ಪ್ಲಸ್ ಎಂದು ಪ್ರತ್ಯೇಕಿಸಿ ಈ ಕೇಸ್ ಗುರುತಿಸಲಾಗಿದೆ. ಡೆಲ್ಟಾ ಗಿಂತ ಸ್ವಲ್ಪ ಭಿನ್ನವಾದ ವೆರೆಯಂಟ್ ಅಂತ ಪ್ರತ್ಯೇಕಿಸಿ ಇಡಲಾಗಿತ್ತು. ಈಗ ಇದಕ್ಕೆ ಡೆಲ್ಟಾ ಪ್ಲಸ್ ಎಂದು ಹೆಸರಿಸಲಾಗಿದೆ ಎಂದರು.

    ಬಹಳ ಹಿಂದೆ ಆಗಿರುವ ಪ್ರಕರಣ ಆದ್ದರಿಂದ ಈ ವ್ಯಕ್ತಿ ಈಗ ಗುಣಮುಖರಾಗಿದ್ದಾರೆ. ಇವರ ಸಂಪರ್ಕದಲ್ಲಿದ್ದ ಕುಟುಂಬಸ್ಥರು ಸಹ ಗುಣಮುಖರಾಗಿದ್ದಾರೆ. ನಗರದಲ್ಲಿಯೂ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಹೆಚ್ಚು ಒತ್ತು ಕೊಡಲಾಗುತ್ತದೆ ಎಂದರು.

    ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಾಗ, ಯಾವ ವೈರಸ್ ವೆರೆಯಂಟ್ ಎಂಬ ಬಗ್ಗೆಯೂ ಚೆಕ್ ಮಾಡಲಾಗುತ್ತದೆ. ಇದು ಹೊಸ ಕೆಲಸ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಲಾಗುತ್ತದೆ ಎಂದರು. ಈ ಡೆಲ್ಟಾ ಪ್ಲಸ್ ವೈರಸ್ ಹಾಗೂ ಡೆಲ್ಟಾ ವೈರಸ್ ನ ನಡುವೆ ಇರುವ ವ್ಯತ್ಯಾಸ, ಗುಣಲಕ್ಷಣಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ ಎಂದರು. ತಜ್ಞರ ಸಲಹೆ ಮೇರೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.

    ಇನ್ನು ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್ ರಿಪೋರ್ಟ್ ವಿಚಾರವಾಗಿ ಮಾತನಾಡಿದ ಗೌರವ್ ಗುಪ್ತಾ, ಈ ವಿಶ್ಲೇಷಣೆ ಪಡೆಯಲಾಗಿದೆ. ಈ ಪ್ರಕರಣಗಳಲ್ಲಿ 6 ಲಕ್ಷಕ್ಕಿಂತ ಹೆಚ್ಚು ಮಂದಿ ಹೋಂ ಐಸೋಲೇಷನ್ ನಲ್ಲಿದ್ದರು. ಎರಡೂ ಅಲೆಯಲ್ಲಿ 15 ಲಕ್ಷ ಕೇಸ್ ಈಗಾಗಲೇ ವರದಿಯಾಗಿದೆ. ಈ ಪೈಕಿ ಶೇ.90 ರಷ್ಟು ಜನರು ಹೋಂ ಐಸೂಲೇಷನ್ ನಲ್ಲಿದ್ದರು. ಶೇ.1 ಕ್ಕಿಂತ ಕಡಿಮೆ ಹೋಂ ಐಸೋಲೇಷನ್ ಡೆತ್ ಆಗಿದೆ. ಇದನ್ನು ಇನ್ನೂ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

    ಇನ್ನು ನಿನ್ನೆ ನಗರದಲ್ಲಿ ಗಾಳಿಪಟದ ದಾರದಿಂದ ಕತ್ತು ಕೊಯ್ದು ವ್ಯಕ್ತಿಯೊಬ್ಬರಿಗೆ ತೀವ್ರ ಗಾಯವಾಗಿರುವ ವಿಚಾರವಾಗಿ ಮಾತನಾಡಿ, ಗಾಳಿಪಟ ಮಾಂಜಾ ದಾರ ಬ್ಯಾನ್ ಆಗಿದೆ. ಇದನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

  • ಎಂಎಸ್‍ವಿ ಕನ್‍ಸ್ಟ್ರಕ್ಷನ್ ಕಂಪನಿ ವಿರುದ್ಧ ಕಾನೂನು ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

    ಎಂಎಸ್‍ವಿ ಕನ್‍ಸ್ಟ್ರಕ್ಷನ್ ಕಂಪನಿ ವಿರುದ್ಧ ಕಾನೂನು ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

    ಬೆಂಗಳೂರು: ಕಾನುನು ಉಲ್ಲಂಘಿಸಿ ಟೆಂಡರ್ ಪಡೆದುಕೊಂಡಿರುವ ಆರೋಪವಿರುವ ಎಂಎಸ್‍ವಿ ಕನ್‍ಸ್ಟ್ರಕ್ಷನ್ ಕಂಪನಿ ವಿರುದ್ಧ ಸದ್ಯದಲ್ಲೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ತಿಳಿಸಿದ್ದಾರೆ.

    ನಿನ್ನೆ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ರಮೇಶ್ ಎನ್ ಆರ್ ಅವರು ಈ ಬಗ್ಗೆ ವಿಸ್ತೃತವಾಗಿ ಬಿಬಿಎಂಪಿ ಆಯುಕ್ತರಿಗೆ ದೂರನ್ನ ಸಲ್ಲಿಸಿದ್ದರು. ಈ ದೂರಿನಲ್ಲಿ ಹಲವಾರು ವರ್ಷಗಳಿಂದಲೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೂರಾರು ಕೋಟಿ ರೂಪಾಯಿಗಳ ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಾಗಿ ಅವಕಾಶ ಪಡೆದಿರುವ ವೆಂಕಟೇಶ್ (MSV Construction Company) ಎಂಬ ಗುತ್ತಿಗೆದಾರರು ತಮ್ಮ ಲೆಕ್ಕ ಪರಿಶೋಧಕರ ಮೂಲಕ ಸತ್ಯಕ್ಕೆ ದೂರವಾದ ಮಾಹಿತಿಗಳನ್ನು / ದಾಖಲೆಗಳನ್ನು ನೀಡಿ ನೂರಾರು ಕಾಮಗಾರಿಗಳ ಗುತ್ತಿಗೆಯನ್ನು ಪಡೆದಿದ್ದಾರೆ. ಪ್ರಸ್ತುತ ಇವರು-ಅವರೇ ಪ್ರಮಾಣೀಕರಿಸಿರುವ ದಾಖಲೆಗಳಂತೆ ಪಾಲಿಕೆ ವ್ಯಾಪ್ತಿಯಲ್ಲಿ ಅವರ ಒಟ್ಟು Bid Capacity ಮೊತ್ತ ಕೆ. 108.88 (ಒಂದು ನೂರಾ ಎಂಟು ಕೋಟಿ ಎಂಬತ್ತೆಂಟು ಲಕ್ಷ) ಕೋಟಿಗಳಾಗಿರುತ್ತದೆ. ಆದರೆ, ಅವರು ನಕಲಿ ದಾಖಲೆಗಳನ್ನು ಸಲ್ಲಿಸುವ ಮೂಲಕ ಸುಮಾರು 380 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸಿರುವ ಅಂಶ ಬೆಳಕಿಗೆ ಬಂದಿರುತ್ತದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಆರ್.ಅಂಬಿಕಾಪತಿ, ಸಾಮಾಜಿಕ ಹೋರಾಟಗಾರ ನರಸಿಂಹ ಮೂರ್ತಿ ಹಾಗೂ ವಕೀಲರುಗಳಾದ ಹೆಚ್.ಎನ್.ರವಿಶಂಕರ್, ಎಂ. ಮುರಳಿಧರ್ ಮತ್ತು ತೇಜರಾಜ್ ಅವರುಗಳು ಈ ಸಂಬಂಧ ಎಂ.ಎಸ್.ವೆಂಕಟೇಶ್ ಅಲಿಯಾಸ್ ಗಿಲಿ ಗಿಲಿ ವೆಂಕಟೇಶ್ ಎಂಬ ಗುತ್ತಿಗೆದಾರರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ನಗರಾಭಿವೃದ್ಧಿಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಬಿಬಿಎಂಪಿಯ ಆಯುಕ್ತರಿಗೆ ಹಲವಾರು ದೂರುಗಳನ್ನು ನೀಡಿದ್ದಾರೆ.

    ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳ ಮತ್ತು ಪಾಲಿಕೆಯ ಆಯುಕ್ತರ ಆದೇಶದಂತೆ ಪಾಲಿಕೆಯ ಟಿವಿಸಿಸಿ ಇಲಾಖೆಯ ಅಧಿಕಾರಿಗಳು ವೆಂಕಟೇಶ್ ಅವರಿಗೆ ಸಂಬಂಧಿಸಿದಂತೆ ಸಮಗ್ರವಾದ ವರದಿಯನ್ನು ಪಾಲಿಕೆಯ ಮುಖ್ಯ ಆಯುಕ್ತರಿಗೆ ಸಲ್ಲಿಸಿರುತ್ತಾರೆಂಬ ವಿಷಯ ತಿಳಿದು ಬಂದಿರುತ್ತದೆ.

    ಕಳೆದ ಒಂದೂವರೆ ವರ್ಷದ ಹಿಂದಷ್ಟೇ, ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆಂದು ಪ್ರಾರಂಭಿಸಲಾಗಿರುವ Hot Batch Mix Plant ನ ಗುತ್ತಿಗೆಯನ್ನು ಪಡೆದುಕೊಂಡಿದ್ದ ಇದೇ ವೆಂಕಟೇಶ್ ಅವರು ಗುತ್ತಿಗೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡದಿರುವ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯವು ನೀಡಿದ್ದ ಆದೇಶದಂತೆ ಅವರ ಗುತ್ತಿಗೆಯನ್ನು ರದ್ದು ಪಡಿಸಿರುವುದು ಸರಿಯಷ್ಟೇ. ಆದರೆ, ಗುತ್ತಿಗೆ ಕರಾರುಪತ್ರದ ಷರತ್ತುಗಳನ್ನು ಪಾಲಿಸದ ಉಲ್ಲಂಘಿರುವ ವೆಂಕಟೇಶ್ ಅವರನ್ನು ನಿಯಮಗಳಿಗೆ ಅನುಸಾರವಾಗಿ ಕಪ್ಪುಪಟ್ಟಿಗೆ ಸೇರಿಸಬೇಕಿರುತ್ತದೆ ಎಂದು ಆಗ್ರಹಿಸಿದ್ದರು.

    ಈ ಎಲ್ಲಾ ಕಾರಣಗಳಿಂದಾಗಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹಿತ ದೃಷ್ಟಿಯಿಂದ ವೆಂಕಟೇಶ್ (MSV Construction Company) ಎಂಬ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸುವುದು ಅತ್ಯಂತ ಸೂಕ್ತವಾಗಿರುತ್ತದೆ ಎಂಬ ವಾಸ್ತವವನ್ನು ತಿಳಿಸುತ್ತಾ, ಎಂತಹುದೇ ರಾಜಕೀಯ ಪ್ರಭಾವಗಳಿಗೆ ಒಳಗಾಗದೇ ವೆಂಕಟೇಶ್ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದರು.

    ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸದ್ಯದಲ್ಲೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

  • ಬೆಂಗಳೂರಲ್ಲಿ ಅನ್‍ಲಾಕ್ ಅನಿವಾರ್ಯ: ಗೌರವ್ ಗುಪ್ತಾ

    ಬೆಂಗಳೂರಲ್ಲಿ ಅನ್‍ಲಾಕ್ ಅನಿವಾರ್ಯ: ಗೌರವ್ ಗುಪ್ತಾ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನ್‍ಲಾಕ್ ಅನಿವಾರ್ಯ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಅನ್ ಲಾಕ್ ಗೆ ಸಿದ್ಧವಾಗಬೇಕು. ಎರಡು ತಿಂಗಳು ಎಲ್ಲರೂ ನೊಂದಿದ್ದಾರೆ. ಹಂತ ಹಂತವಾಗಿ ಅನ್ ಲಾಕ್ ಆಗಲೇಬೇಕಾಗಿದೆ. ಎಲ್ಲ ವಲಯಗಳಲ್ಲೂ ಆನ್ ಲಾಕ್ ಆಗಬೇಕಿದೆ. ಉದ್ದಿಮೆಗಳು ಆರ್ಥಿಕ ಚೇತರಿಕೆ ಕಾಣಲು ಅಗತ್ಯ ಇದೆ ಎಂದರು.

    ಲಾಕ್ ಡೌನ್ ಸಡಿಲಿಕೆ ಹಂತ ಹಂತವಾಗಿ ಮಾಡಬೇಕು. ಕೇಸ್ ಪ್ರಮಾಣ ಕಡಿಮೆ ಆಗಬೇಕು, ತಳಮಟ್ಟದಲ್ಲಿ ಸೋಂಕಿತರು ಐಸೋಲೇಷನ್ ಆಗಬೇಕು. ಸದ್ಯದ ಸ್ಥಿತಿಯಲ್ಲಿ ಎರಡೂ ಆಗ್ತಾ ಇದೆ. ಸಾಮಾಜಿಕ ಜೀವನದ ಬಗ್ಗೆ ನಮಗೆ ಕಾಳಜಿ ಇದೆ. ಹಂತ ಹಂತವಾಗಿ ರಿಲೀಫ್ ಮಾಡಿದರೆ ಉತ್ತಮ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದರು.

     ಒಟ್ಟಿನಲ್ಲಿ ಜೂನ್ 7ರಂದು ಪ್ರಸ್ತುತ ಇರುವ ಲಾಕ್ ಡೌನ್ ಕೊನೆಗೊಳ್ಳಲಿದ್ದು, ಇತ್ತ ತಜ್ಞರು ಲಾಕ್ ಡೌನ್ ಮುಂದುವರಿಸಿ ಎಂದು ಹೇಳುತ್ತಿದ್ದಾರೆ. ಆದರೆ ಸರ್ಕಾರ ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.