Tag: ಗೌರಿ-ಗಣೇಶ

  • ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು

    ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು

    ಶಿವಮೊಗ್ಗ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳನ್ನು ಗಡೀಪಾರು ಮಾಡಲಾಗಿದೆ.

    ಕಾನೂನು ಸುವ್ಯವಸ್ಥೆಗೆ ಮತ್ತು‌ ಸಾರ್ವಜನಿಕರ ಶಾಂತಿಗೆ ಭಂಗ ತರುತ್ತಿದ್ದ ಶಮಂತನಾಯ್ಕ (28) ಸಂದೀಪ್ ಕುಮಾರ್ (29) ಅವರನ್ನು ಗಡೀಪಾರು ಮಾಡಲಾಗಿದೆ. ಇದನ್ನೂ ಓದಿ: ದೇವರ ಜೊತೆ ನಾಸ್ತಿಕನಾಗಿರೋ ಸಾವರ್ಕರ್ ಫೋಟೋ ಇಡೋದು ಹಾಸ್ಯಸ್ಪದ: ಬಿ.ಕೆ ಹರಿಪ್ರಸಾದ್

    ತಮ್ಮ ವರ್ತನೆ ತಿದ್ದಿಕೊಳ್ಳದೇ, ಅಪರಾಧ ಕೃತ್ಯ ಹಾಗೂ ಗೂಂಡಾ ವರ್ತನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಮಾಹಿತಿ ಮೇರೆಗೆ ಶಿವಮೊಗ್ಗ ಉಪ ವಿಭಾಗಾಧಿಕಾರಿ ಗಡೀಪಾರಿಗೆ ಆದೇಶಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನಲ್ಲಿ ಎರಡು ಕಡೆ ಮಾದರಿಯುತವಾಗಿ ಗೌರಿ, ಗಣೇಶ ಹಬ್ಬ ಆಚರಣೆ

    ಮೈಸೂರಿನಲ್ಲಿ ಎರಡು ಕಡೆ ಮಾದರಿಯುತವಾಗಿ ಗೌರಿ, ಗಣೇಶ ಹಬ್ಬ ಆಚರಣೆ

    ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಇಂದು ಎರಡು ಕಡೆಗಳಲ್ಲಿ ಮಾದರಿಯುತವಾಗಿ ಗೌರಿ – ಗಣೇಶ ಹಬ್ಬ ಆಚರಿಸಲಾಯಿತು. ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ನೀಡಿ ಗೌರಿ ಹಬ್ಬ ಆಚರಿಸಿದರೆ, ಮತ್ತೊಂದು ಕಡೆ ಮುಸ್ಲಿಂ ಮತ್ತು ಹಿಂದೂ ಯುವಕರು ಜೊತೆಯಾಗಿ ಹಬ್ಬ ಆಚರಿಸಿದರು.

    ಇಂದು ಎಲ್ಲೆಡೆ ಗೌರಿ ಹಬ್ಬದ ಸಂಭ್ರಮ. ಮನೆಗಳಲ್ಲಿ ವಿಜೃಂಭಣೆಯಿಂದ ಹೆಣ್ಣು ಮಕ್ಕಳ ಹಬ್ಬ ಆಚರಿಸಿ ಸಂಭ್ರಮ ಪಡುತ್ತಿದ್ದಾರೆ. ಈ ನಡುವೆ ಮೈಸೂರಿನಲ್ಲಿ ಎಲ್ಲರಿಗೂ ಮಾದರಿ ಆಗುವ ರೀತಿಯಲ್ಲಿ ಹಬ್ಬ ಆಚರಿಸಲಾಗಿದೆ. ಪ್ರತಿ ನಿತ್ಯ ಮೈಸೂರಿನ ರಸ್ತೆಗಳ ಸ್ವಚ್ಛ ಮಾಡುವ ಮಹಿಳೆಯರಿಗೆ ಬಾಗಿನ ಅರ್ಪಿಸಿ ಹಬ್ಬ ಮಾಡಲಾಯಿತು. ಮತ್ತೊಂದು ಕಡೆ ಮುಸ್ಲಿಂ ಯುವಕರು ಹಿಂದೂ ಯುವಕರ ಜೊತೆಯಾಗಿ ಹಬ್ಬ ಆಚರಿಸಿ ಭಾವೈಕ್ಯಕ್ಕೆ ಸಂದೇಶ ಸಾರಿದರು.

    ಮೈಸೂರಿನ ಚಾಮುಂಡಿಪುರಂನ ಪಾರ್ಕ್ ನಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಮಾ.ವಿ. ರಾಮಪ್ರಸಾದ್ ಪೌರ ಕಾರ್ಮಿಕ ಮಹಿಳೆಯರಿಗೆ ಬಾಗಿನ ನೀಡಿದರು. ಸೀರೆ, ಹಣ್ಣು, ಎಲೆ, ಕಾಯಿ ಇಟ್ಟು ಪೌರಕಾರ್ಮಿಕರ ಮಹಿಳೆಯರಿಗೆ ಹಬ್ಬದ ಸಂಭ್ರಮ ಹಂಚಲಾಯಿತು.

    ಮೈಸೂರಿನ ಪ್ರಜ್ವಾವಂತ ಯುವಕರ ಒಕ್ಕೂಟದಿಂದ ಭಾವೈಕ್ಯತಾ ಹಬ್ಬ ಆಚರಿಸಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿ ಹಿಂದೂ- ಮುಸ್ಲಿಂ ಯುವಕರು ಜೊತೆಯಾಗಿ ಗೌರಿ- ಗಣೇಶನಿಗೆ ಪೂಜೆ ಸಲ್ಲಿಸಿ ಭಾವೈಕ್ಯತೆ ಸಂದೇಶ ಸಾರಿದರು.

    ಒಟ್ಟಾರೆ ಮೈಸೂರಿನಲ್ಲಿ ನಡೆದ ಈ ಎರಡು ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಿದವು. ಇಂತಹ ಆಚರಣೆಗಳು ಸಮಾಜದಲ್ಲಿ ಇನ್ನಷ್ಟು ಹೆಚ್ಚಾಗಬೇಕಿದೆ. ಆಗ ಮಾತ್ರ ಪೌರಕಾರ್ಮಿಕರನ್ನು ಕೀಳಾಗಿ ನೋಡುವ ಮನೋಭವ ನಿವಾರಣೆ ಆಗುತ್ತೆ. ಜೊತೆಗೆ ಧರ್ಮ ಧರ್ಮಗಳ ನಡುವಿನ ಸಂಘರ್ಷ ಕಡಮೆ ಆಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೌರಿ-ಗಣೇಶ ಹಬ್ಬಕ್ಕೆ ಸ್ಟಾರ್ ನಟರಿಂದ ಶುಭಾಶಯ

    ಗೌರಿ-ಗಣೇಶ ಹಬ್ಬಕ್ಕೆ ಸ್ಟಾರ್ ನಟರಿಂದ ಶುಭಾಶಯ

    ಬೆಂಗಳೂರು: ರಾಜ್ಯಾದ್ಯಂತ ಇಂದು ಗೌರಿ ಗಣೇಶ ಹಬ್ಬವನ್ನು ಆಚರಿಸುತ್ತಿದ್ದಾರೆ. ಅಲ್ಲದೇ ಸ್ಟಾರ್ ನಟರು ಕೂಡ ಗೌರಿ ಗಣೇಶ ಹಬ್ಬವನ್ನು ಆಚರಿಸಿ ನಾಡಿನ ಸಮಸ್ತ ಜನರಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

    ಸಮಸ್ತ ಕರುನಾಡ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ನಿಮ್ಮೆಲ್ಲ ಸಂಕಷ್ಟಗಳು ದೂರವಾಗಿ ಜೀವನದ ಎಲ್ಲಾ ಸುಖ ಸಂತೋಷ ನಿಮ್ಮದಾಗಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಣೇಶನ ಮುಂದೆ ಕೈ ಮುಗಿಯುತ್ತಿರುವ ಫೋಟೋ ಹಾಕಿ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

    ಸಮಸ್ತ ಕನ್ನಡ ನಾಡಿನ ಜನತೆಗೆ ಗೌರಿ ಹಣೇಶ ಹಬ್ಬದ ಶುಭಾಶಯಗಳು. ಎಲ್ಲರೂ ಯಾವಾಗಲೂ ಖುಷಿಯಾಗಿರಿ, ಸಂತೋಷವಾಗಿರಿ ಹಾಗೂ ಖುಷಿಯನ್ನು ಹಂಚುತ್ತಿರಿ. ನಿಮ್ಮೆಲರಿಗೂ ನನ್ನ ಕಡೆಯಿಂದ ನಿಮ್ಮಗೆಲ್ಲ ಹೆಚ್ಚಿನ ಪ್ರೀತಿ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ರಾಜ್ಯದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

    ನನ್ನ ಉಸಿರಿನಲ್ಲಿ ಬೆರೆತ ಕನ್ನಡ ನಾಡಿನ ಸಮಸ್ತ ಬಂಧುಗಳಿಗೆ ಗೌರಿ ಗಣೇಶನ ಹಬ್ಬದ ಶುಭಾಶಯಗಳು. ನೂರೂ ಕಾಲ ಸುಖ ಸಂತೋಷದಿಂದ ನೆಮ್ಮದಿಯಾಗಿ ನಗುತ ಬಾಳಿ. ಶುಭದಿನ ಶುಭೋದಯ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ರೋರಿಂಗ್ ಸ್ಟಾರ್ ಮುರಳಿ ಕೂಡ ‘ಭರಾಟೆ’ ಚಿತ್ರತಂಡದಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಎಲ್ಲರಿಗೂ ಶುಭಾಶಯ ತಿಳಿಸಿ ಎಲ್ಲರಿಗೂ ಗುಡ್ ಲಕ್ ಎಂದು ಟ್ವೀಟ್ ಮಾಡಿದ್ದಾರೆ.

    ಗೌರಿ ಶಕ್ತಿ, ಶೌರ್ಯದ ಪ್ರತೀಕವಾದರೆ, ಗಣಪತಿಯು ವಿದ್ಯೆ, ಜ್ಞಾನದ ಪ್ರತೀಕ. ಪ್ರತಿಯೊಬ್ಬ ವ್ಯಕ್ತಿಗೂ ಈ ಎರಡೂ ಗುಣಗಳಿಂದಲೇ ವ್ಯಕ್ತಿತ್ವ ವಿಕಾಸವಾಗಲು ಸಾಧ್ಯ. ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡಿದ್ದಾರೆ.

    https://twitter.com/actressharshika/status/1039806642374823941

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತವರಿಗೆ ಬಾ ತಂಗಿ ಎಂದು ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು

    ತವರಿಗೆ ಬಾ ತಂಗಿ ಎಂದು ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು

    ಮಂಡ್ಯ: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ತವರಿಗೆ ಬಾ ತಂಗಿ ಎನ್ನುವ ಮೂಲಕ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಟ್ಟಿದ್ದಾರೆ.

    ಕಳೆದ ಒಂದು ವರ್ಷದಿಂದ ಜಿಲ್ಲೆಯಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮನವಿ ಮಾಡಿಕೊಂಡಿದ್ದಾರೆ. ರಮ್ಯಾರವರಿಗೆ ಪೋಸ್ಟ್ ಮೂಲಕ ಬಾಗಿನವನ್ನು ತಲುಪಿಸಿ, ತವರಿಗೆ ಬಾ ತಂಗಿ ಎನ್ನುವ ಮೂಲಕ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ.

    ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಿಗೂ ಮತಚಲಾಯಿಸಲು ಬಂದಿಲ್ಲ. ಗೌರಿ-ಗಣೇಶ ಹಬ್ಬಕ್ಕಾದರೂ ತವರು ಕ್ಷೇತ್ರ ಮಂಡ್ಯಕ್ಕೆ ಆಗಮಿಸಿ, ಜನರ ಕಷ್ಟಕ್ಕೆ ಸ್ಪಂದಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷದಿಂದ ನಾಪತ್ತೆಯಾಗಿರುವ ನೀವು, ಈಗಲಾದರೂ ಆಗಮಿಸದಿದ್ದರೆ ಮುಂದಿನ ಲೋಕಾ ಚುನಾವಣೆಗೆ ಬಂದಾಗ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.

    ಬಾಗಿನದಲ್ಲಿ ಹೂವು, ಬಳೆ ಹಾಗೂ ತೆಂಗಿನಕಾಯಿ ಸೇರಿದಂತೆ ಎಲ್ಲವನ್ನೂ ಅಂಚೆ ಮೂಲಕ ರಮ್ಯಾಗೆ ರವಾನಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನೆಪಕ್ಕಾದರೂ ರಮ್ಯಾರವರು ತವರು ಜಿಲ್ಲೆಗೆ ಬರುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮತ ಚಲಾಯಿಸಿದ ಬಾರಿ ಟೀಕೆಗೆ ರಮ್ಯಾ ಗುರಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv