Tag: ಗೌರಿ ಲಂಕೇಶ್ ಹತ್ಯೆ

  • ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

    ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

    ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

    ಆರೋಪಿಗಳನ್ನು ಮುಂಬೈ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

    ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್‌ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರವೊಂದಕ್ಕೇ ಸಾಧ್ಯವಿಲ್ಲ, ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು: ಡಾ.ಕೆ. ಸುಧಾಕರ್

    ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಮುಂಬೈಗೆ ಕಳುಹಿಸಲಾಗುವುದು ಎಂದು ಗ್ರಾಮೀಣ ಠಾಣೆ ಸಿಪಿಐ ರಮೇಶ ತಿಳಿಸಿದ್ದಾರೆ.

  • ಫೋಟೋ ತೆಗಿಸಿಕೊಂಡವರೆಲ್ಲಾ ಸಂಘಟನೆ ಕಾರ್ಯಕರ್ತರಲ್ಲ – ಗೌರಿ ಲಂಕೇಶ್ ಹತ್ಯೆಗೂ ಸಂಘಟನೆಗೂ ಸಂಬಂಧವಿಲ್ಲ: ಪ್ರಮೋದ್ ಮುತಾಲಿಕ್

    ಫೋಟೋ ತೆಗಿಸಿಕೊಂಡವರೆಲ್ಲಾ ಸಂಘಟನೆ ಕಾರ್ಯಕರ್ತರಲ್ಲ – ಗೌರಿ ಲಂಕೇಶ್ ಹತ್ಯೆಗೂ ಸಂಘಟನೆಗೂ ಸಂಬಂಧವಿಲ್ಲ: ಪ್ರಮೋದ್ ಮುತಾಲಿಕ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರರಕಣದಲ್ಲಿ ಅನಗತ್ಯವಾಗಿ ಹಿಂದೂ ಸಂಘಟನೆಗಳ ಹೆಸರು ಕೇಳಿ ಬರುತ್ತಿದೆ. ಅನಗತ್ಯವಾಗಿ ರಾಜಕೀಯ ದುರುದ್ದೇಶದಿಂದ ಪ್ರಕರಣಕ್ಕೆ ತಿರುವು ನೀಡಲಾಗುತ್ತಿದೆ. ಅನಗತ್ಯವಾಗಿ ಹಿಂದೂ ಸಂಘಟನೆಯ ಮಾನಹಾನಿಯನ್ನು ಮಾಡಲಾಗುತ್ತಿದೆ ಎಂದು ಶ್ರೀರಾಮ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಗೌರಿ ಲಂಕೇಶ್ ಹತ್ಯೆಯಲ್ಲಿ ಶ್ರೀರಾಮಸೇನೆ ಪಾತ್ರವಿದೆ ಎಂಬ ಆರೋಪ ಹಿನ್ನೆಲೆ ಹಿಂದೂ ಜನಜಾಗೃತಿ ವೇದಿಕೆಯಿಂದ ಜನಸಂವಾದ ಸಭೆ ಆಯೋಜನೆ ಮಾಡಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗೌರಿ ಹತ್ಯೆಗೆ ಶ್ರೀ ರಾಮಸೇನೆಗೆ ಯಾವುದೇ ಸಂಬಂಧ ಇಲ್ಲ. ಯಾವುದೇ ಹಿಂದೂ ಸಂಘಟನೆಯ ಕೈವಾಡ ಇಲ್ಲ. ಫೋಟೋ ಸಂಬಂಧಿಸಿದಂತೆ ನಾನು ಮದುವೆಗೆ ಹೋಗುತ್ತೇನೆ. ಈ ಸಂದರ್ಭದಲ್ಲಿ ಸಾಕಷ್ಟು ಜನ ಫೋಟೋ ತೆಗೆದುಕೊಳ್ಳುತ್ತಾರೆ. ಫೋಟೋ ತೆಗೆಸಿಕೊಂಡವರಲ್ಲ ನಮ್ಮ ಸಂಘಟನೆಗೆ ಸಂಬಂಧ ಇಲ್ಲ. ಆದರೆ ಅವರು ಹಿಂದೂ ಅಭಿಮಾನಿಗಳು ಎಂದು ಸ್ಪಷ್ಟನೆ ನೀಡಿದರು.

    ನಾನು ಮುಸ್ಲಿಂ ಮತ್ತು ಕ್ರಿಶ್ಚಿಯನ್ ವಿರೋಧಿ ಅಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಅವರು, ಅವರೆಲ್ಲರೂ ನಮ್ಮವರೆ, ಏಕೆಂದರೆ ಅವರ ಪೂರ್ವಜರು ಹಿಂದೂಗಳು. ಆದರೆ ಬೇರೆ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ನರು ಸುಖವಾಗಿದ್ದಾರೆ ಎಂದರೆ ಅದು ಭಾರತದಲ್ಲಿ ಮಾತ್ರ. ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ನೂರಾರು ದೇಶಗಳಿವೆ ಆದರೆ ಹಿಂದೂಗಳಿಗೆ ಭಾರತವೊಂದೆ ಮನೆ ಎಂದರು.

    ಗೌರಿ ಹತ್ಯೆ ತನಿಖೆಯನ್ನು ಆರಂಭದಲ್ಲೆ ದಿಕ್ಕು ತಪ್ಪಿಸಲಾಯ್ತು, ಆರಂಭದಿಂದಲೂ ಬಲಪಂಥೀಯರ ಮೇಲೆ ಆರೋಪ ಮಾಡಲಾಯಿತು. ಆದರೆ ಮಹಾರಾಷ್ಟ್ರದಲ್ಲಿ ಇಬ್ಬರು ಮತ್ತು ಕರ್ನಾಟಕದಲ್ಲಿ ಇಬ್ಬರು ಹತ್ಯೆಯಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಆದರೆ ಬುದ್ಧಿಜೀವಿಗಳು ಕಾಂಗ್ರೆಸ್ ಆನ್ನು ಪ್ರಶ್ನೆ ಮಾಡುವುದಿಲ್ಲ. ಎಲ್ಲಾ ಹತ್ಯೆಗಳಿಗೂ ಮೋದಿಯನ್ನು ಪ್ರಶ್ನೆ ಮಾಡಲಾಗುತ್ತೆ. ಗೌರಿ ಹತ್ಯೆಗೆ ಮೋದಿಗೂ ಏನು ಸಂಬಂಧ. ರಸ್ತೆಯಲ್ಲಿ `ನಾಯಿ’ ಸತ್ತರೂ ಮೋದಿ ಮಾತನಾಡಬೇಕಾ ಎಂದು ಪ್ರಶ್ನಿಸಿದರು.

    ಬುದ್ಧಿಜೀವಿಗಳು ಕಾಂಗ್ರೆಸ್ ಏಜೆಂಟ್: ದೇಶದಲ್ಲಿರುವ ಬುದ್ಧಿ ಜೀವಗಳು ಕಾಂಗ್ರೆಸ್ ಏಜೆಂಟರು. ಕಾಂಗ್ರೆಸ್ ಪಕ್ಷವನ್ನು ಪ್ರಶ್ನೆ ಮಾಡುವುದಿಲ್ಲ, ಆದರೆ ಮೋದಿ ಮೋದಿ ಎಂದು ಬೊಗಳುತ್ತಾರೆ. ನೀವು ಮೋದಿಯನ್ನು ಪ್ರಶ್ನಿಸುವಷ್ಟು ದೊಡ್ಡವರಾದಾರಾ. ಪ್ರಶ್ನೆ ಮಾಡಲಿ ಆದರೆ ಸರಿಯಾದ ಪ್ರಶ್ನೆಗಳನ್ನು ಎತ್ತಲಿ ಎಂದು ವಾಗ್ದಾಳಿ ನಡೆಸಿದರು.

    ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮೋಹನ್ ಗೌಡ ಮತ್ತು ವಕೀಲ ಅಮೃತೇಶ್ ಭಾಗಿಯಾಗಿದ್ದರು. ನಗರದ ರಾಜಾಜಿನಗರದ ರಾಮಮಂದಿರದಲ್ಲಿ ಜನಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

  • ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

    ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆ ಬಂಧನದ ಬಳಿಕ ಹಲವು ಮಹತ್ವದ ವಿಚಾರಗಳನ್ನು ಎಸ್‍ಐಟಿ ತಂಡ ಸಂಗ್ರಹಿಸಿದ್ದು, ಸದ್ಯ ಗೌರಿ ಲಂಕೇಶ್ ಅವರ ಹತ್ಯೆಗೆ `ಅಪರೇಷನ್ ಅಮ್ಮ’ ಎಂದು ಹೆಸರಿಟ್ಟಿದ್ದರು ಎಂದು ಮೂಲಗಳು ತಿಳಿಸಿದೆ.

    ಪ್ರಮುಖವಾಗಿ ಗೌರಿ ಅವರ ಹತ್ಯೆಗೂ ಮುನ್ನ ಆರೋಪಿಗಳಿಗೆ ಕುರಿತು ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಕೋರ್ಡ್ ವಾರ್ಡ್‍ಗಳನ್ನು ಬಳಕೆ ಮಾಡಲಾಗುತ್ತಿತ್ತು. ಅದ್ದರಿಂದಲೇ ಹತ್ಯೆಗೂ ಮುನ್ನ ಆರೋಪಿಗಳಿಗೆ ಗೌರಿ ಅವರ ಕುರಿತು ಮಾಹಿತಿ ನೀಡಿರಲಿಲ್ಲ. ಈ ಕುರಿತು ಎಸ್‍ಐಟಿ ಅಧಿಕಾರಿಗಳು ಆರೋಪಿಗಳಿಂದ ಜಪ್ತಿಯಾದ ಡೈರಿಯಲ್ಲಿ ಬಹುತೇಕ ಕೋಡ್‍ವರ್ಡ್ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

    ಸಂವಹನಕ್ಕೂ ಕೋಡ್‍ವರ್ಡ್: ಹತ್ಯೆ ಸಂಚು ರೂಪಿಸುವ ವೇಳೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳಿಗೂ ಸಂವಹನ ನಡೆಸಲು ಕೋಡ್ ವರ್ಡ್‍ಗಳನ್ನೇ ಬಳಕೆ ಮಾಡುತ್ತಿದ್ದರು. ಮೊಬೈಲ್ ನಂಬರ್, ಭೇಟಿಯಾಗುವ ಸ್ಥಳಕ್ಕೂ ಕೋಡ್‍ವರ್ಡ್ ನಿಗಧಿಯಾಗಿತ್ತು. ಎಲ್ಲಾ ಕೋಡ್‍ವರ್ಡ್‍ಗಳನ್ನು ಮರಾಠಿ ಮಿಶ್ರಿತ ಅಕ್ಷರಗಳಲ್ಲಿರುವ ಬಳಕೆ ಮಾಡಲಾಗುತ್ತಿತ್ತು. ಪ್ರಕರಣದಲ್ಲಿ ಯಾವುದೇ ಸುಳಿವು ಸಿಗಬಾರದು ಎಂಬ ಉದ್ದೇಶಕ್ಕೆ ಈ ಕೋಡ್‍ವರ್ಡ್ ಬಳಕೆ ಮಾಡಿದ್ದು, ಸದ್ಯ ಬಹುತೇಕ ಕೋಡ್‍ಗಳನ್ನು ಎಸ್‍ಐಟಿ ತಂಡ ಬಹುತೇಕ ಡಿಕೋಡ್ ಮಾಡಿದೆ ಎಂದು ತಿಳಿದು ಬಂದಿದೆ.

    ಮತ್ತಿಬ್ಬರು ಸಾಹಿತಿಗಳ ಹತ್ಯೆಗೆ ಸಂಚು: ಗೌರಿ ಲಂಕೇಶ್ ಹತ್ಯೆ ಮಾಡಿರುವ ರೀತಿಯಲ್ಲೇ ಆರೋಪಿಗಳು ಇನ್ನಿಬ್ಬರ ಸಾಹಿತಿಗಳ ಹತ್ಯೆಗೂ ಸಂಚು ರೂಪಿಸಿದ್ದರು. ವಿಶೇಷವಾಗಿ ಇನ್ನಿಬ್ಬರು ಸಾಹಿತಿಗಳ ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್ ಬಳಕೆ ಮಾಡಲಾಗಿದ್ದು, ಈ ಕುರಿತ ಪಟ್ಟಿ ಸಹ ತಯಾರು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ:  ಗೌರಿ ಲಂಕೇಶ್ ಹತ್ಯೆ ಕೇಸ್ – ಎಸ್‍ಐಟಿ ಮುಂದೆ ತಪ್ಪೊಪ್ಪಿಕೊಂಡು ಕಣ್ಣೀರಿಟ್ಟ ವಾಗ್ಮೋರೆ!

    https://www.youtube.com/watch?v=O-__JlcxgVc

  • ಗೌರಿ ಕೇಸ್:  ಪರಶುರಾಮ್ ವಾಗ್ಮೋರೆ ಕುರಿತಂತೆ ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ

    ಗೌರಿ ಕೇಸ್: ಪರಶುರಾಮ್ ವಾಗ್ಮೋರೆ ಕುರಿತಂತೆ ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ

    ರಾಯಚೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪದಲ್ಲಿ ಬಂಧಿತನಾಗಿರುವ ಪರಶುರಾಮ್ ವಾಗ್ಮೋರೆ ಕುರಿತು ಕೆಲವು ಇಂಟ್ರೆಸ್ಟಿಂಗ್ ವಿಚಾರಗಳು ಬೆಳಕಿಗೆ ಬಂದಿವೆ.

    ರಾಯಚೂರಿನ ಮಾನ್ವಿಯ ಇಸ್ಲಾಂನಗರದಲ್ಲಿರುವ ಅಲ್ ಫುರ್ ಖಾನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ತರಗತಿಯ ವರೆಗೆ ಪರಶುರಾಮ್ ವಿದ್ಯಾಭ್ಯಾಸ ನಡೆಸಿದ್ದಾನೆ. ಅಲ್ಲದೇ ಪರಶುರಾಮ್ ಕುಟುಂಬ ಮಾನ್ವಿಯಲ್ಲಿ ನೆಲೆಸಿದ್ದ ವೇಳೆ ಮುಸ್ಲಿಮರು ಹೆಚ್ಚು ವಾಸಿಸುವ ಇಸ್ಲಾಂ ನಗರದಲ್ಲೇ ವಾಸವಾಗಿತ್ತು.

    ಉಳಿದಂತೆ 1997 ರಿಂದ 2005ರ ಅವಧಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿರುವ ಪರಶುರಾಮ್, ಮಾನ್ವಿಯ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 8ರಿಂದ 10ನೇ ತರಗತಿಯನ್ನ ಓದಿದ್ದಾನೆ. 2007 ರಿಂದ 2009ರಲ್ಲಿ ಮಾನ್ವಿಯ ಕಲ್ಮಠ ಕಾಲೇಜಿನಲ್ಲಿ ಪಿಯುಸಿ ವಾಣಿಜ್ಯ ಮುಗಿಸಿ ಬಳಿಕ ಅದೇ ಕಾಲೇಜಿನಲ್ಲಿ ಬಿಕಾಂ ಸೇರಿದ್ದ. ಆದರೆ ಬಿಕಾಂ ಮೊದಲ ಹಾಗೂ ಎರಡನೇ ಸೆಮಿಸ್ಟರ್ ಗಳಲ್ಲಿ ಫೇಲ್ ಆಗಿದ್ದ ಆಕರಣ ಬಳಿಕ ಬಿಕಾಂ ಮೂರನೇ ಸೆಮಿಸ್ಟರ್ ಗೆ ಲಿಂಗಸುಗೂರಿನ ವಿಸಿಬಿ ಎಜುಕೇಶನ್ ಸೊಸೈಟಿ ಕಾಲೇಜ್ ಗೆ ಪ್ರವೇಶ ಪಡೆದಿದ್ದ.

    ಈ ಕುರಿತು ಮಾಹಿತಿ ನೀಡಿದರುವ ಕಾಲೇಜು ಪ್ರಾಂಶುಪಾಲರು ಕಾಲೇಜಿಗೆ ಪ್ರವೇಶದ ಪಡೆದ ಪರಶುರಾಮ್ ಬಳಿಕ ತರಗತಿಗಳಿಗೆ ಹಾಜರಾಗಿಲ್ಲ. ಇದರಿಂದ ಆತನ ಓದು ಅಲ್ಲಿಗೆ ಅಂತ್ಯವಾಗಿದೆ ಎಂದು ತಿಳಿಸಿದ್ದು, ಈ ವೇಳ ಪರಶುರಾಮ್ ಯಾವ ಸಂಘಟನೆಗಳ ಜೊತೆಗೂ ಗುರುತಿಸಿಕೊಂಡಿರುವ ಮಾಹಿತಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ನನ್ನ ಮಗ ತಪ್ಪು ಮಾಡಿಲ್ಲ- ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಬಂಧನ – ಪರಶುರಾಮ ಪೋಷಕರ ಆರೋಪ

    ನನ್ನ ಮಗ ತಪ್ಪು ಮಾಡಿಲ್ಲ- ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಬಂಧನ – ಪರಶುರಾಮ ಪೋಷಕರ ಆರೋಪ

    ವಿಜಯಪುರ: ನನ್ನ ಮಗ ಯಾವುದೇ ತಪ್ಪು ಮಾಡಲಿಲ್ಲ. ವಿನಾಕಾರಣ ನನ್ನ ಮಗನನ್ನು ಬಂಧಿಸಿದ್ದಾರೆ. ಶ್ರೀರಾಮ ಸೇನೆ ಮತ್ತು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದಕ್ಕೆ ಈ ರೀತಿ ಮಾಡಿದ್ದಾರೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತವಾಗಿರುವ ಅರೋಪಿ ಪರಶುರಾಮ ವಾಗ್ಮೋರೆ ಪೋಷಕರು ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಯೊಂದಿಗೆ ಮಾತನಾಡಿದ ಅವರು, ನಾವು ಕೂಲಿ ನಾಲಿ ಮಾಡಿ ಬದುಕು ಜನ. ನನ್ನ ಮಗ ಕೊಲೆ ಮಾಡುವಂತಹ ವ್ಯಕ್ತಿಯಲ್ಲ. ಭಾನುವಾರ ಬೆಳಿಗ್ಗೆ 9 ಗಂಟೆಗೆ ಎಸ್ ಐಟಿ ತಂಡ ಹಾಗೂ ಕೆಲ ಸ್ಥಳೀಯ ಪೊಲೀಸ್ ಮನೆಗೆ ಬಂದು ಪಾಕಿಸ್ತಾನ ಧ್ವಜ ಹಾರಿಸಿದ ಬಗ್ಗೆ ವಿಚಾರಣೆಗೆ ಕರೆದೊಯ್ಯುವುದಾಗಿ ತಮ್ಮ ಮಗನನ್ನು ಕರೆಕೊಡು ಹೋದರು ಎಂದು ತಿಳಿಸಿದರು.

    ಎಸ್ ಐಟಿ ತಂಡ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ತಿಳಿದಿಲ್ಲ. ಈ ಕುರಿತು ಇಂದು ಮಧ್ಯಾಹ್ನ ಎಸ್ ಐಟಿ ಡಿವೈಎಸ್ ಪಿ, ಪರಶುರಾಮ ಜೊತೆ ನಮ್ಮ ಸಂಬಂಧಿ ಅಶೋಕ ಕಾಂಬ್ಳೆ ಅವರೊಂದಿಗೆ ಮಾತನಾಡಿಸಿದ್ದಾರೆ. ಆಗ ನನ್ನನ್ನ ವಿಚಾರಣೆಗಾಗಿ ಕರೆತಂದಿದ್ದಾರೆ ನೀವು ಬೆಂಗಳೂರಿಗೆ ಬನ್ನಿ ಎಂದು ಹೇಳಿದ್ದು, ಆದರೆ ಈ ಪ್ರಕರಣದಲ್ಲಿ ಅರೋಪಿ ಮಾಡಿದ್ದಾರೆ ಎಂಬುವುದು ಮಾಧ್ಯಮದಿಂದಲೇ ಗೊತ್ತಾಗಿದ್ದು ಎಂದು ತಿಳಿಸಿದರು.

    ನ್ಯಾಯಾಲಯದ ಮೇಲೆ ನಂಬಿಕೆ ಇದ್ದು, ಪ್ರಕರಣದಲ್ಲಿ ತಮ್ಮ ಮಗ ಖುಲಾಸೆ ಹೊರ ಬರುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಓದಿ: ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದ ಶಂಕಿತ ಶೂಟರ್ ಅರೆಸ್ಟ್!

  • ಗೌರಿ ಕೇಸ್ – ಶಂಕಿತ ಆರೋಪಿ ಹೊಟ್ಟೆ ಮಂಜನಿಗೆ ಮಂಪರು ಪರೀಕ್ಷೆ- ಏನಿದು ಪರೀಕ್ಷೆ? ಹೇಗೆ ಮಾಡುತ್ತಾರೆ? ಇಲ್ಲಿದೆ ಪೂರ್ಣ ವಿವರ

    ಗೌರಿ ಕೇಸ್ – ಶಂಕಿತ ಆರೋಪಿ ಹೊಟ್ಟೆ ಮಂಜನಿಗೆ ಮಂಪರು ಪರೀಕ್ಷೆ- ಏನಿದು ಪರೀಕ್ಷೆ? ಹೇಗೆ ಮಾಡುತ್ತಾರೆ? ಇಲ್ಲಿದೆ ಪೂರ್ಣ ವಿವರ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಶಂಕಿತ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ನ್ಯಾಯಾಲಯ ಅನುಮತಿ ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಶೇಷ ತನಿಖಾ ತಂಡ ಮನವಿ ಮಾಡಿತ್ತು. ಮನವಿಯನ್ನು ಪುರಸ್ಕರಿಸಿದ ಮೂರನೇ ಎಸಿಎಂಎಂ ಕೋರ್ಟ್ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

    ವಿಚಾರಣೆ ವೇಳೆ ನ್ಯಾಯಾಧೀಶರು, ನಿನ್ನ ಮಂಪರು ಪರೀಕ್ಷೆಗೆ ಒಪ್ಪಿಗೆ ಇದ್ಯಾ ಎಂದು ನವೀನ್‍ಗೆ ಕೇಳಿದರು. ಇದಕ್ಕೆ ಒಪ್ಪಿಗೆ ಇದೆ ಆರೋಗ್ಯಕ್ಕೆ ಏನಾದ್ರೂ ಪರಿಣಾಮ ಬೀರುತ್ತಾ ಎಂದು ಪ್ರಶ್ನೆ ಮಾಡಿದ್ದಾನೆ. ಕೂಡಲೇ ಜಡ್ಜ್ ಅಂತಹ ಪರಿಸ್ಥಿತಿ ಬರುವುದಿಲ್ಲ ಎಂದು ಹೇಳಿದರು. ಕೂಡಲೇ ನವೀನ್, ಆರೋಗ್ಯದಲ್ಲಿ ತೊಂದರೆ ಆಗುವುದಿಲ್ಲ ಎಂದರೆ ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡುತ್ತೇನೆ ಎಂದು ಹೇಳಿದ.

    ನವೀನ್ ಪರ ವಕೀಲರ ಸಮಕ್ಷಮದಲ್ಲಿ ಅಹಮದಾಬಾದ್ ನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಂಪರು ಪರೀಕ್ಷೆ ನಡೆಯಲಿದೆ.

    ಮಂಪರು ಪರೀಕ್ಷೆ ಹೇಗೆ ನಡೆಯುತ್ತೆ?
    ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ನ್ಯಾಯಾಲಯದ ಅನುಮತಿ ತೆಗೆದುಕೊಳ್ಳಬೇಕಾಗುತ್ತದೆ. ಅನುಮತಿ ದೊರೆತ ಬಳಿಕ ಆರೋಪಿಗೆ ಕೇಳ ಬೇಕಾದ ಪ್ರಶ್ನೆಗಳ ಕುರಿತು ಪಟ್ಟಿ ಮಾಡಿಕೊಳ್ಳಲಾಗುತ್ತದೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಎರಡು ವಿಧಗಳಿದ್ದು ಮೊದಲಿಗೆ ಆತನ ಹೆಸರು, ಊರು ಎಂಬ ಸಾಮಾನ್ಯ ಮಾಹಿತಿ ಪಡೆಯಲಾಗುತ್ತದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತದೆ.

    ಮಂಪರು ಪರೀಕ್ಷೆಯನ್ನು ವೈದ್ಯರು, ಮನಶಾಸ್ತ್ರಜ್ಞರು ಸಮ್ಮುಖದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಾಡಲಾಗುತ್ತದೆ. ಇದಕ್ಕೂ ಮುನ್ನ ಆರೋಪಿಯ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ಆತನ ದೇಹದ ಆರೋಗ್ಯದ ಸಾಮರ್ಥ್ಯದ ಮೇಲೆ ವೈದ್ಯರು ಸೋಡಿಯಂ ಪೆಂಟೋಥಲ್ ಇಂಜೆಕ್ಷನ್ ಮೂಲಕ ನೀಡುತ್ತಾರೆ. ಆರೋಪಿಯ ಲಿಂಗ, ವಯಸ್ಸು, ದೇಹ ಸಾಮರ್ಥ್ಯ, ಆರೋಗ್ಯ ಇವುಗಳನ್ನು ನೋಡಿಕೊಂಡು ನಿಗಧಿತ ಪ್ರಮಾಣದಲ್ಲಿ ನೀಡಲಾಗುತ್ತದೆ. ಸರಿಯಾಗಿ ಪರೀಕ್ಷೆ ನಡೆಸದೇ ಜಾಸ್ತಿ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ನೀಡಿದರೆ ರೋಗಿ ಕೋಮಾಕ್ಕೆ ಜಾರುವ ಸಾಧ್ಯತೆ ಇರುತ್ತದೆ.

    ಈ ಡೋಸ್ ನೀಡಿದ ಬಳಿಕ ಆರೋಪಿ ನಿದ್ರಾವಸ್ಥೆಗೆ ಜಾರುವ ಹಂತದ ಮೊದಲಿನ ಹಂತಕ್ಕೆ ಬಂದಾಗ ನಿಧಾನವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಸಾಧಾರಣವಾಗಿ ನಿದ್ದೆಯ ಮಂಪರಿನಲ್ಲಿದ್ದ ವ್ಯಕ್ತಿಗೆ ಏನು ಕೇಳಿದರೂ ಆತ ಸತ್ಯ ಹೇಳುತ್ತಾನೆ. ಹೀಗಾಗಿ ಈ ಹಂತದಲ್ಲಿದ್ದ ಆರೋಪಿ ನಿದ್ದೆಗೆ ಜಾರದಂತೆ ಮೊದಲೇ ನಿಗದಿ ಪಡಿಸಿದ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ಡೋಸ್ ಅನ್ನು ನಿಮಿಷ, ನಿಮಿಷ ಗಳ ಅಂತರದಲ್ಲಿ ಸ್ವಲ್ಪ ಸ್ವಲ್ಪ ನೀಡಲಾಗುತ್ತದೆ.

    ಯಾರಿಗೆ ಮಾಡಬಹುದು?
    ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ಬಿಪಿ ಇರುವಂತಹ ವ್ಯಕ್ತಿಗಳಿಗೂ ಪರೀಕ್ಷೆ ನಡೆಸಬಹುದು. ಈ ವೇಳೆ ಆರೋಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಪೂರ್ಣ ಮಾಹಿತಿಯನ್ನು ತಿಳಿಸುತ್ತಾನೆ. ಯಾವುದೇ ಮಾಹಿತಿಯನ್ನು ಹೇಳದಿರಲು ಈ ಸ್ಥಿತಿಯಲ್ಲಿ ಆತನಿಗೆ ಸಾಧ್ಯವಿರುವುದಿಲ್ಲ. ಆತನಿಂದ ಮಾಹಿತಿ ಪಡೆಯುವ ಪ್ರತಿಯೊಂದು ಅಂಶವನ್ನು ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಮಾಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.

    ಅಹಮದಬಾದ್ ನಲ್ಲಿ ಏಕೆ?
    ಈ ಹಿಂದೆ ಛಾಪಾ ಕಾಗದ ಹಗರಣದಲ್ಲಿ ಸಿಕ್ಕಿಬಿದ್ದ ಕರೀಂ ಲಾಲ್ ತೆಲಗಿ ಸೇರಿದಂತೆ 350 ಕ್ಕೂ ಹೆಚ್ಚು ಆರೋಪಿಗಳನ್ನು ಬೆಂಗಳೂರಿನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ವಿಧಿವಿಜ್ಞಾನ ವಿಶ್ವವಿದ್ಯಾಲಯ 2008ರಲ್ಲಿ ಆರಂಭಗೊಂಡಿದೆ. ವಿಧಿವಿಜ್ಞಾನ ಕ್ಷೇತ್ರದ ಅಧ್ಯಯನಕ್ಕೆ ಸಂಬಂಧಿಸಿದಂತೆ ಆರಂಭಗೊಂಡ ವಿಶ್ವದ ಮೊದಲ ವಿಶ್ವವಿದ್ಯಾಲಯ ಎನ್ನುವ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

    https://www.youtube.com/watch?v=yGCm67SXFx8

  • ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

    ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

    ಬೆಂಗಳೂರು: ಗೌರಿ ಲಂಕೇಶ್ ಹುಟ್ಟಿದ ದಿನವಾದ ಸೋಮವಾರ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜನೆಗೊಂಡಿದ್ದ ‘ಗೌರಿ ದಿನ’ ಕಾರ್ಯಕ್ರಮ ಮೋದಿಗೆ ಮತ್ತು ಸಂಘ ಪರಿವಾರವನ್ನು ತೆಗಳಲು ಸೀಮಿತವಾಯಿತೇ ಎನ್ನುವ ಪ್ರಶ್ನೆ ಎದ್ದಿದೆ.

    ಕಾರ್ಯಕ್ರಮ ನಡೆಯುವ ಮೊದಲು ಸಹೋದರ ಇಂದ್ರಜಿತ್ ಲಂಕೇಶ್ ಟೌನ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮ ಸರ್ಕಾರಿ ಪ್ರಯೋಜಿತವಾಗಿದ್ದು ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದರು.

    ಈ ಹೇಳಿಕೆಗೆ ಪುಷ್ಟಿ ಎನ್ನುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಲು ವೇದಿಕೆಯನ್ನು ಬಳಸಿಕೊಂಡಿದ್ದು ಮಾತ್ರವಲ್ಲದೇ ಸಿಎಂ ಸಿದ್ದರಾಮಯ್ಯಮನವರನ್ನು ಹೊಗಳಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

    ಗೌರಿ ಹತ್ಯೆಯ ಬಗ್ಗೆ ರಾಜ್ಯ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಆರೋಪಿಗಳ ರೇಖಾಚಿತ್ರ ಇಂದು ಬಿಡುಗಡೆಯಾಗಿದ್ದು ಬಿಟ್ಟರೆ ಇದೂವರೆಗೂ ಆರೋಪಿಗಳ ಬಂಧನ ಆಗಿಲ್ಲ. ಹೀಗಾಗಿ ಆರೋಪಿಗಳ ಬಂಧಿಸದ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ಕೇಂದ್ರದ ವಿರುದ್ಧ ಟೀಕೆ ಮಾಡಿದ್ದು ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ.

    ಸಹೋದರಿ ಕವಿತಾ ಲಂಕೇಶ್ ರಾಜ್ಯ ಸರ್ಕಾರ ತನಿಖೆಯಲ್ಲಿ ನಮಗೆ ನಂಬಿಕೆ ಇದೆ. ಈ ಪ್ರಕರಣವನ್ನು ಯಾವುದೇ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬಾರದು. ಈಗಾಗಲೇ ನೀಡಿರುವ ಪ್ರಕರಣದಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ. ಎಸ್‍ಐಟಿ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಹಂತಕರನ್ನು ಬಂಧಿಸುವ ವಿಶ್ವಾಸವಿದೆ. ಪ್ರಕರಣವನ್ನು ಮತ್ತೆ ಸಿಬಿಐ ಗೆ ವಹಿಸುವುದರಿಂದ ವಿಚಾರಣೆ ಮತ್ತೆ ಒಂದು ವರ್ಷ ಹಿಂದುಳಿಯುವ ಸಂಭವವಿದೆ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದರು.

    ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಹೀಗಿರುವಾಗ ವೇದಿಕೆಯಲ್ಲಿದ್ದ ಜೆಎನ್‍ಯು ಮುಖಂಡ ಕನ್ಹಯ್ಯ ಕುಮಾರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರೆ, ಗುಜರಾತ್ ಪಕ್ಷೇತರ ಶಾಸಕ ದಲಿತ ಮುಖಂಡ ಜಿಗ್ನೇಶ್ ಮೇವಾನಿ ಮೋದಿಯನ್ನು ಟೀಕಿಸುವುದರ ಜೊತೆಗೆ ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಿದರು.

    ದೊರೆಸ್ವಾಮಿ ನರೇಂದ್ರ ಮೋದಿ ಅವರನ್ನು ದೇಶದಿಂದ ಓಡಿಸಿ ಎಂದು ಕರೆ ನೀಡಿದರೆ, ಕನ್ಹಯ್ಯ ಕುಮಾರ್ ಇಲ್ಲಿ ಸೇರಿದವರೆಲ್ಲ ಗೌರಿ ಪರಿವಾರದವರು, ಇಲ್ಲಿ ಯಾರೂ ಸಂಘ ಪರಿವಾರದವರಿಲ್ಲ. ಗೌರಿ ಪರಿವಾರವು ಸಂಘ ಪರಿವಾರಕ್ಕೆ ಹೊಡೆತ ಕೊಟ್ಟೇ ಕೊಡುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಗುಜರಾತ್ ಚುನಾವಣೆಯಲ್ಲಿ ನಿಂತು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಜಿಗ್ನೇಶ್ ಮೇವಾನಿ, ಕರ್ನಾಟಕದಲ್ಲೂ ಚುನಾವಣೆ ಬರುತ್ತಿದ್ದು ಚಡ್ಡಿಗಳನ್ನು ಸೋಲಿಸಲು ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು. ಚುನಾವಣೆ ವೇಳೆ ಮೂರು ವಾರ ಕರ್ನಾಟಕದಲ್ಲಿಯೇ ಇದ್ದು ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ಹೇಳಿ ಕರ್ನಾಟಕ ಸರ್ಕಾರಕ್ಕೆ ದಲಿತರ ಬಗ್ಗೆ ಆದಿವಾಸಿಗಳ ಬಗ್ಗೆ ಕಾಳಜಿ ಇದೆ. ಇವರಿಗೆ ಜಮೀನು ನೀಡಿ ಸಹಕರಿಸುತ್ತಿದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯನವರನ್ನು ಹೊಗಳಿದರು. ಅಷ್ಟೇ ಅಲ್ಲದೇ ಚಡ್ಡಿಗಳು ಅಧಿಕಾರಕ್ಕೆ ಬರಬಾರದು, ಮೋದಿ ಯಾವುದೇ ಕಾರಣಕ್ಕೆ ಮುಂದೆ ಪ್ರಧಾನಿಯಾಗಬಾರದು. ಮೋದಿ ನಿವೃತ್ತಿ ಪಡೆದುಕೊಳ್ಳುವುದು ಉತ್ತಮ ಎಂದರು. ಇದನ್ನೂ ಓದಿ: ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    2017ರ ಸೆಪ್ಟೆಂಬರ್ ನಲ್ಲಿ ಗೌರಿ ಹತ್ಯೆ ಖಂಡಿಸಿ ‘ನಾನು ಗೌರಿ’ ಹೆಸರಿನಲ್ಲಿ ದೊಡ್ಡ ಮಟ್ಟದ ಪ್ರತಿರೋಧ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲೂ ಅತಿಥಿಗಳು ಮೋದಿ, ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಎರಡನೇ ಬಾರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆದಿದ್ದು ಮತ್ತೊಮ್ಮೆ ಟೀಕೆಗಳು ರಿಪೀಟ್ ಆಗಿದೆ. ಗೌರಿ ಅಭಿಮಾನಿಗಳು ಮೋದಿ, ಸಂಘ ಪರಿವಾರದ ವಿರುದ್ಧ ಟೀಕೆ ಮಾಡಿದರೂ ಸರ್ಕಾರಕ್ಕೆ ಚುನಾವಣೆಯ ಒಳಗಡೆ ಹಂತಕರನ್ನು ಬಂಧಿಸಲೇಬೇಕಾದ ಅನಿವಾರ್ಯತೆಯಲ್ಲಿದೆ. ಒಂದು ವೇಳೆ ಬಂಧನವಾಗದೇ ಇದ್ದರೆ ಚುನಾವಣೆಯಲ್ಲೂ ಈ ವಿಚಾರ ಪ್ರಚಾರದ ವಸ್ತುವಾಗಿ ರಾಜಕೀಯ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನೂ ಓದಿ: ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

    ಗೌರಿ ಹತ್ಯೆ ಹಾಗೂ ಮೋದಿ ಸರ್ಕಾರಕ್ಕೆ ಏನು ಸಂಬಂಧ ಎನ್ನುವುದನ್ನು ಯಾವುದೇ ಭಾಷಣಕಾರರೂ ತಿಳಿಸುವ ಯತ್ನ ಮಾಡಲಿಲ್ಲ. ಜೊತೆಗೆ ರಾಜ್ಯ ಸರ್ಕಾರವನ್ನು, ವಿಚಾರಣೆ ನಡೆಸುತ್ತಿರುವ ಎಸ್‍ಐಟಿಯನ್ನೂ ಪ್ರಶ್ನಿಸಲಿಲ್ಲ ಎನ್ನುವುದು ಮಾತ್ರ ವಿಪರ್ಯಾಸದ ವಿಚಾರ. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

  • ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಲ್ಲರಿಗೂ ಕಾಮನ್ ಎನಮಿ ಆಗಿದ್ದು, ನಾವು ಪ್ರತಿಜ್ಞೆ ಮಾಡುವ ಮೂಲಕ ಕರ್ನಾಟಕದಲ್ಲಿ ಅವರಿಗೆ ಅವಕಾಶ ನೀಡಬಾರದು ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ಹೇಳಿದ್ದಾರೆ.

    ಪತ್ರಕರ್ತೆ ಗೌರಿ ಲಂಕೇಶ್‍ಗೆ ಜನ್ಮದಿನ ಪ್ರಯುಕ್ತ ಆಚರಿಸಲಾಗಿದ್ದ `ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಗೌರಿ ಲಂಕೇಶ್ ಅವರ ಒಡನಾಟ ಕೆಲ ದಿನಗಳಾದರೂ, ನಮ್ಮ ನಡುವಿನ ಸಂಪರ್ಕ ಬಹಳಗಾಢವಾದದ್ದು. ಅವರ ಕೆಲವು ದೌರ್ಬಲ್ಯಗಳ ನಡುವೆಯೂ ದೊಡ್ಡ ಮಟ್ಟದ ಅಲೋಚನೆಗಳು, ಕೆಲಸಗಳು ಮಾಡುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ: ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಸಮಾರಂಭದಲ್ಲಿ ಸೇರಿರುವ ಎಲ್ಲರೂ ಗೌರಿ ಲಂಕೇಶ್ ಅವರ ಮೇಲಿನ ಅಭಿಮಾನದಿಂದ ಇಲ್ಲಿಗೆ ಆಗಮಿಸಿದ್ದೀರಾ. ಆದರೆ ನೀವು ನಿಮ್ಮ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಮೂಲಕ ಪ್ರಧಾನಿ ಮೋದಿ ಅವರಿಗೆ ಇಲ್ಲಿ ಅವಕಾಶವನ್ನು ನೀಡದಿರುವ ಪ್ರತಿಜ್ಞೆಯನ್ನು ಮಾಡಬೇಕು. ಇಂತಹ ಸಮಾರಂಭವನ್ನು ಏರ್ಪಡಿಸುವ ಶಕ್ತಿ ನಮಗೇ ಇದೇಯಾ ಎಂಬುವುದರ ಬಗ್ಗೆ ಚರ್ಚೆ ನಡೆಸಬೇಕು. ಬೇರೆ ಬೇರೆ ಪಕ್ಷದಲ್ಲಿ ಇರುವ ನಾಯಕರನ್ನು ಸಂಪರ್ಕಿಸಿ ಅವರಿಗೂ ಇದನ್ನು ಮುಟ್ಟಿಸಿ, ಕಾಮನ್ ಎನಿಮಿಯನ್ನು ತೊಲಗಿಸುವ ಕಾರ್ಯವನ್ನು ಮಾಡಬೇಕು. ಇದು ಒಂದು ಪಕ್ಷದ ಒಲೈಕೆಗಲ್ಲ, ವೇದಿಕೆಯಲ್ಲಿ ಚಪ್ಪಾಳೆ ಸಿಳ್ಳೆ ಪಡೆಯುದಕ್ಕೂ ಅಲ್ಲ. ಇದು ಖಚಿತ ಅಭಿಪ್ರಾಯ ಎಂದರು. ಇದನ್ನೂ ಓದಿ:  ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

    ಇದೇ ವೇಳೆ ಗೌರಿ ಹಂತಕರ ಕುರಿತು ದಕ್ಷಿಣ ಕನ್ನಡದ ಮೇಲೆ ಒಂದು ಕಣ್ಣಿಡಬೇಕು. ಪೊಲೀಸರು ಯಾರೋ ಇಬ್ಬರನ್ನೂ ಹಿಡಿದಿದ್ದೇವೆ ಎಂದು ಹೇಳುತ್ತಿದ್ದಾರೆ. ಅವರು ಬಂದೂಕು ತಯಾರಿಸುವವರು ಇರಬೇಕು, ಆದರೆ ಬಂದೂಕಿಗೆ ಸುಪಾರಿ ಕೊಟ್ಟವರು ಯಾರು ಎನ್ನುವುದು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

    https://www.youtube.com/watch?v=GA_pyPUe6h4

  • ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಬೆಂಗಳೂರು: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ಗೆ ಜನ್ಮದಿನ ಪ್ರಯುಕ್ತ ಆಚರಿಸಲಾಗಿದ್ದ `ಗೌರಿ ದಿನ’ ಕಾರ್ಯಕ್ರಮ ಆಯೋಜನೆಗೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ ಎಂದು ಕವಿತಾ ಲಂಕೇಶ್ ಸ್ಪಷ್ಟಪಡಿಸಿದ್ದಾರೆ.

    ನಗರದ ಟೌನ್ ಹಾಲ್ ಬಳಿ ಆಯೋಜಿಸಿದ್ದ ಗೌರಿ ದಿನ ಕಾರ್ಯಕ್ರಮದ ಬಳಿಕ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಗೌರಿಹಬ್ಬ ಎಂದು ರಾಜ್ಯಾದ್ಯಂತ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಗೌರಿ ಹತ್ಯೆ ಆರೋಪಿಗಳನ್ನು ಬಂಧಿಸದ ಕಾರಣ ನಾವು ಇಂದು ವಿಚಾರ ಸಂಕೀರ್ಣವನ್ನು ಮಾತ್ರ ನಡೆಸುತ್ತಿದ್ದೇವೆ ಎಂದರು.

    ಈ ಹಿಂದೆ ಗೌರಿ ಟ್ರಸ್ಟ್ ಸ್ಥಾಪನೆ ವೇಳೆ ಗೌರಿ ಹಬ್ಬ ನಡೆಸುವ ಕುರಿತು ಚರ್ಚೆ ನಡೆಸಲಾಗಿತ್ತು, ಆದರೆ ಟ್ರಸ್ಟ್ ನ ಹಲವರ ಅಭಿಪ್ರಾಯದ ಮೇಲೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅಂತಹ ನಾಯಕರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿದೆ ಎಂಬ ಆರೋಪಗಳು ದೊರೆಸ್ವಾಮಿ ಅವರಿಗೆ ಅವಮಾನಿಸುವ ಹಾಗೇ ಆಗುತ್ತದೆ ಎಂದರು.

    ಕಾರ್ಯಕ್ರಮದ ಭಾಗವಹಿಸದಿರುವ ಸಹೋದರ ಇಂದ್ರಜಿತ್ ಲಂಕೇಶ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಮ್ಮ ಸಹೋದರನ ಚಿಂತನೆ, ಅಭಿಪ್ರಾಯ ಭಿನ್ನವಾಗಿದೆ ಅಷ್ಟೇ. ಆದರೆ ನಾವೆಲ್ಲರೂ ಹತ್ಯೆ ಮಾಡಿದವರ ವಿರುದ್ಧ ಹೋರಾಟ ನಡೆಸಿದ್ದೇವೆ. ನಾನು ಮತ್ತು ನಮ್ಮ ಸಹೋದರ ಇಬ್ಬರು ಟ್ರಸ್ಟ್ ನಲ್ಲಿ ಇಲ್ಲ. ಕಾರ್ಯಕ್ರಮಕ್ಕೆ ಖರ್ಚು ಮಾಡಿದ ವಿವರಗಳನ್ನು ಟ್ರಸ್ಟ್ ವತಿಯಿಂದ ಪಡೆಯಬಹುದು. ಮೇವಾನಿ ಹಾಗೂ ಕನ್ನಯ್ಯರನ್ನು ಗೌರಿ ಮಕ್ಕಳಂತೆ ಭಾವಿಸಿದ್ದರು. ಅದೇ ಪ್ರೀತಿಗಾಗಿ ಇವರು ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

     

    ಟ್ರಸ್ಟ್ ಮೂಲಕ ನಿರಂತರವಾಗಿ ಗೌರಿ ಅವರ ಸಿದ್ಧಾಂತಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಂದುವರೆಸುತ್ತೇವೆ. ವಿಶೇಷ ತನಿಖಾ ದಳ ಪ್ರಕರಣದ ತನಿಖೆಯನ್ನು ಮುಂದುವರೆಸುತ್ತಿದ್ದು, ಪ್ರತಿ ವಾರ ನಮಗೇ ತನಿಖೆಯ ಪ್ರಗತಿಯನ್ನು ತಿಳಿಸುತ್ತಿದ್ದಾರೆ. ಪೊಲೀಸ್ ತನಿಖೆ ನಮಗೇ ತೃಪ್ತಿ ನೀಡಿದೆ. ಆದರೆ ಕೊಲೆ ನಡೆದಿರುವುದು ವಯಕ್ತಿಕ ಕಾರಣದಿಂದ ಅಲ್ಲ. ಅದ್ದರಿಂದ ತನಿಖೆ ನಡೆಸುಲು ಸಮಯ ತೆಗೆದುಕೊಳ್ಳುತ್ತದೆ ಎಂಬ ಅರಿವಿದೆ ಎಂದರು. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

    ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಉದ್ದೇಶದ ಹಿಂದೆ ಬೇರೆಯಾದ್ದೆ ಕಾರಣಗಳು ಇರಬಹುದು. ಏಕೆಂದರೆ ಕಳೆದ ಹಲವು ವರ್ಷಗಳಲ್ಲಿ ಸಿಬಿಐಗೆ ವಹಿಸಿದ್ದ ಪ್ರಕರಣಣಗಳಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ. ವಿಶೇಷ ತನಿಖಾ ದಳದ ವಿಚಾರಣೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಹಂತಕರನ್ನು ಬಂಧಿಸುವ ವಿಶ್ವಾಸವಿದೆ. ಪ್ರಕರಣವನ್ನು ಮತ್ತೆ ಸಿಬಿಐ ಗೆ ವಹಿಸುವುದರಿಂದ ವಿಚಾರಣೆ ಮತ್ತೆ ಒಂದು ವರ್ಷ ಹಿಂದುಳಿಯುವ ಸಂಭವವಿದೆ ಎಂದು ಹೇಳಿದರು.

  • ಏನ್ರಿ ಪ್ರಕಾಶ್ ರಾಜ್, So Called ದೊಡ್ಡ ನಟ?! ಎಂದು ಹೇಳುವ ಮೂಲಕ ಬಹಿರಂಗ ಸವಾಲ್ ಹಾಕಿದ ಒಳ್ಳೆ ಹುಡ್ಗ ಪ್ರಥಮ್

    ಏನ್ರಿ ಪ್ರಕಾಶ್ ರಾಜ್, So Called ದೊಡ್ಡ ನಟ?! ಎಂದು ಹೇಳುವ ಮೂಲಕ ಬಹಿರಂಗ ಸವಾಲ್ ಹಾಕಿದ ಒಳ್ಳೆ ಹುಡ್ಗ ಪ್ರಥಮ್

    ಬೆಂಗಳೂರು: ಇತ್ತೀಚೆಗೆ ಹಲವು ಹೇಳಿಕೆಗಳನ್ನು ನೀಡುವ ಮೂಲಕ ಭಾರೀ ಚರ್ಚೆಗೆ ಕಾರಣರಾಗಿದ್ದ ನಟ ಪ್ರಕಾಶ ರೈ ಅವರಿಗೆ ಬಿಗ್‍ಬಾಸ್ ವಿನ್ನರ್ ಪ್ರಥಮ್ ಬಹಿರಂಗವಾಗಿ ಸವಾಲು ಎಸೆದಿದ್ದಾರೆ.

    ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೋಮು ಗಲಭೆಯಲ್ಲಿ ಕಾಣೆಯಾಗಿದ್ದ ಪರೇಶ್ ಮೇಸ್ತ ಮೃತದೇಹ ಕೆರೆಯಲ್ಲಿ ಪತ್ತೆಯಾಗಿತ್ತು. ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದು ಕೊಂಡಿರುವ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಸವಾಲು ಎಸೆದಿದ್ದಾರೆ.

    ಪ್ರಥಮ್ ಸವಾಲು ಏನು?
    ತಮಗೆ ತಾವೇ ಹೇಳಿಕೊಳ್ಳುವಂತೆ ದೊಡ್ಡ ನಟ ಪ್ರಕಾಶ್ ರೈ ಅವರಿಗೆ ಬಹಿರಂಗ ಪ್ರಶ್ನೆ, ಏನ್ರೀ ಪ್ರಕಾಶ್ ರಾಜ್ so called ದೊಡ್ಡ ನಟ?!. ಅವತ್ತು ಗೌರಿ ಲಂಕೇಶ್ ಹತ್ಯೆಯಾದಾಗ ಈ ದೇಶದಲ್ಲಿ ಏನಾಗ್ತಿದೆ? ಅದು ಇದು ಅಂತ ಬಾಯಿಗೆ ಬಂದಂಗೆ ಎಲ್ಲಾ ಕೇಳಿ ಕೊನೆಗೆ ಜಸ್ಟ್ #just_asking ಅಂತಿದ್ರಿ.. ಇವತ್ತು ಪರೇಶ್ ಮೇಸ್ತಾ ವಿಕೃತ ರೀತಿಯಲ್ಲಿ ಹತ್ಯೆಯಾಗಿದೆ. ಈ ರಾಜ್ಯದಲ್ಲಿ ಏನಾಗ್ತಿದೆ ಅಂತ ಇವಾಗ ಕೇಳಲ್ವಾ So Called ದೊಡ್ಡ ನಟ (ಭಯಂಕರ)? ನರಕ ಅಂದರೆ ಏನು ಅಂತ ಸಾಯೋಕೂ ಮುಂಚೆನೇ ತೋರಿಸಿದ್ದಾರೆ ಆ ನಾಯಿಗಳು.. ಎಲ್ಲರಿಗೂ ಒಂದೇ ನ್ಯಾಯ ಇರಬೇಕಲ್ವೇನ್ರಿ ರೈ? ಹೊನ್ನಾವರದಲ್ಲಿ ಏನು ನಡೀತು ಅಂತ ಗೊತ್ತೇ ಇಲ್ವೇನ್ರಿ ಪ್ರಕಾಶ ರೈ ನಿಮಗೆ? ನಾನು ಹಿಂದು-ಮುಸ್ಲಿಂ ಅಂತ ಮಾತನಾಡುತ್ತಿಲ್ಲ. ಮಾನವೀಯತೆ, ಮನುಷ್ಯತ್ವ ಬಗ್ಗೆ ಮಾತನಾಡುತ್ತಿದ್ದೇನೆ. ಇದು ಬರಿ just asking ಅಲ್ಲ, #purposefully_asking ಎಂದು ತಮ್ಮ ಪೋಸ್ಟ್ ನಲ್ಲಿ ಬರೆದು ಕೊಂಡಿದ್ದಾರೆ.

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ್ದ ಅವರು, ಗೌರಿ ಲಂಕೇಶ್ ಹತ್ಯೆಯಯನ್ನು ಸಂಭ್ರಮಿಸುವಂತಹ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇಂತಹ ಟ್ರೋಲ್‍ಗಳನ್ನು ಹಾಕಿದ ಕೆಲವು ಟ್ವಿಟ್ಟರ್ ಖಾತೆಗಳನ್ನು ಮೋದಿ ಫಾಲೋ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಫಾಲೋ ಮಾಡ್ತಿರೋ ಜನರು ತುಂಬಾ ಕ್ರೂರಿಗಳು, ಅದರ ಬಗ್ಗೆ ಕಣ್ಣುಮುಚ್ಚಿ ಕುಳಿತಿರೋ ಪ್ರಧಾನಿ ನಮ್ಮಲ್ಲಿದ್ದಾರೆ. ಉತ್ತರ ಪ್ರದೇಶ ಸಿಎಂ ಅವರು ಮುಖ್ಯಮಂತ್ರಿಯೋ ಅಥವಾ ಪೂಜಾರಿಯೋ ಗೊಂದಲವಾಗುತ್ತದೆ. ಅವರು ನನಗಿಂತ ದೊಡ್ಡ ನಟರು ಎಂದು ಪ್ರಕಾಶ್ ರಾಜ್ ಹೇಳಿದ್ದರು.