Tag: ಗೌರಿ ಲಂಕೇಶ್ ಹತ್ಯೆ

  • ಸಿಸಿಬಿ ಮುಂದೆ 7 ಶಾರ್ಪ್ ಶೂಟರ್ ಗಳ ಬಗ್ಗೆ ಬಾಯ್ಬಿಟ್ಟ ತಾಹಿರ್

    ಸಿಸಿಬಿ ಮುಂದೆ 7 ಶಾರ್ಪ್ ಶೂಟರ್ ಗಳ ಬಗ್ಗೆ ಬಾಯ್ಬಿಟ್ಟ ತಾಹಿರ್

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆ ಮಾಡಲು ರವಿ ಬೆಳಗೆರೆ ಸುಪಾರಿ ನೀಡಿದ ಕುರಿತು ಶಶಿಧರ್ ಮುಂಡೇವಾಡ ಬಾಯ್ಬಿಟ್ಟ ನಂತರ ಸಿಸಿಬಿ ಅಧಿಕಾರಿಗಳು ವೆಪನ್ ಸಪ್ಲೈಯರ್ ತಾಹಿರ್ ನಿಂದ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ.

    ಅಲ್ಲದೇ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಮಹಾರಾಷ್ಟ್ರದ ಏಳು ಶಾರ್ಪ್ ಶೂಟರ್ ಗಳ ಬಗ್ಗೆ ತಾಹಿರ್ ಮಾಹಿತಿ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ತನಿಖೆ ವೇಳೆ ಸಿಸಿಬಿ ಮುಂದೆ ಹೇಳಿಕೆ ನೀಡಿರೋ ತಾಹೀರ್ ನಾನು ಶಾರ್ಪ್ ಶೂಟರ್ ಗಳಿಗೆ ರಿವಲ್ವಾರ್ ಸಪ್ಲೈ ಮಾಡುತ್ತೇನೆ. ಆದರೆ ಯಾರು ಯಾರನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಸಾಕಷ್ಟು ಜನರು ನನ್ನ ಬಳಿ ರಿವಲ್ವಾರ್ ಪಡೆದು ಹಣ ನೀಡಿದ್ದಾರೆ ಎಂದು ಹೇಳಿದ್ದಾನೆ.

    ಬೆಲೆ ಎಷ್ಟು?: ನನ್ನ ಬಳಿಯೇ ಬಂದು ರಿವಲ್ವಾರ್ ಪಡೆದರೆ 15 ಸಾವಿರ ರೂ. ನಾನೇ ರಿವಾಲ್ವರ್ ತಗೆದುಕೊಂಡು ಹೋದರೆ 30 ರಿಂದ 50 ಸಾವಿರ ರೂ. ಹಣ ಪಡೆದುಕೊಳ್ಳುತ್ತೇನೆ ಎಂಬ ಮಾಹಿತಿಯನ್ನು ನೀಡಿದ್ದಾನೆ. ತಾಹಿರ್ ನೀಡಿರುವ ಮಾಹಿತಿ ಆಧಾರಿಸಿ ಒಂದು ದಿನದ ಹಿಂದೆಯೇ ಮಹಾರಾಷ್ಟ್ರಕ್ಕೆ ತೆರಳಿರುವ ಎಸ್‍ಐಟಿ ತಂಡ ಅಲ್ಲಿಯೇ ಬಿಡು ಬಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

    https://www.youtube.com/watch?v=86k-IW3-boE

    https://www.youtube.com/watch?v=lgEoaxQ1l44

    https://www.youtube.com/watch?v=tvAkOpM6ZZo

  • Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

    ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

    ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

    ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
    ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
    ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

    ವಿಳಾಸ ತಿಳಿಯಲು ಕೊರಿಯರ್ ನೆಪ:
    ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

    ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

    ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    https://www.youtube.com/watch?v=tvAkOpM6ZZo

     

     

  • ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ, ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ರವಿಬೆಳಗೆರೆ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಪತ್ರಕರ್ತ ರವಿಬೆಳೆಗೆರೆ ಬಂಧನ ಹಿನ್ನೆಲೆ ವಿಕಾಸಸೌಧದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ತಾಹೀರ್ ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್ ಶಶಿಧರ್ ಮುಂಡೇವಾಡಗೆ ಗನ್ ಮಾರಾಟ ಮಾಡಿದ್ದ ಎಂಬ ಮಾಹಿತಿ ಸಿಕ್ಕಿದೆ. ತಾಹೀರ್ ವೆಪನ್ ಸೆಲ್ಲರ್ ಮಾತ್ರ. ಆದರೆ ಬೆಳಗೆರೆ ಬಂಧನಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದರು.

    ಬೆಳಗೆರೆ ಅವರ ಬಂಧನ ವಿಚಾರ ಎಲ್ಲವೂ ಪೊಲೀಸ್ ಪ್ರಕ್ರಿಯೆ, ಮಾಹಿತಿ ಇದ್ದ ಕಾರಣದಿಂದಲೇ ಈ ಪ್ರಕ್ರಿಯೆ ನಡೆದಿದೆ. ಮಾಹಿತಿ ಇಲ್ಲದೇ ಏನೂ ಮಾಡಲು ಆಗುವುದಿಲ್ಲ. ಅಲ್ಲದೇ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಲ್ಯಾಬ್ ರಿಪೋರ್ಟ್ ಬರುವವರೆಗೆ ಕಾಯಬೇಕು. ಕಳೆದ ಭಾನುವಾರ ತಾಹೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು, ಯಾರು ಯಾರಿಗೆ ಗನ್ ಮಾರಾಟ ಮಾಡಲಾಗಿದೆ ಎಂಬುವುದರ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಶಶಿಧರ್ ಮುಂಡೆವಾಡಿಗೆ ಗನ್ ಮಾರಾಟ ಮಾಡಿರುವ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧಾರಿಸಿ ಶಶಿಧರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಿಸಿಬಿಗೆ ಕೆಲವು ಮಾಹಿತಿ ಸಿಕ್ಕಿದೆ. ಅದರಂತೆ ಇಂದಿನ ಬಂಧನ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.  ( ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ )

    ಅಲ್ಲದೇ ಶಶಿಧರ್ ಮುಂಡೇವಾಡಿ ಬಳಸಿದ್ದ ಗನ್ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಆ ಗನ್ ಎಲ್ಲೆಲ್ಲಿ ಬಳಕೆಯಾಗಿದೆ ಎನ್ನುವ ಮಾಹಿತಿ ಲಭಿಸಲಿದೆ. ಬೆಳಗೆರೆ ಬಂಧನದ ಹಾಗೂ ತನಿಖೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು ಅಥವಾ ಸಿಸಿಬಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡುತ್ತಾರೆ ಎಂದು ಹೇಳಿದರು.

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

    ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

  • ಗೌರಿ ಹತ್ಯೆ ಮಾಡಿದ್ದ ರಿವಾಲ್ವರ್ ಟಿವಿಯೊಳಗಿಟ್ಟು ಆರಾಮಾಗಿದ್ದ ಸುಪಾರಿ ಕಿಲ್ಲರ್!

    ಗೌರಿ ಹತ್ಯೆ ಮಾಡಿದ್ದ ರಿವಾಲ್ವರ್ ಟಿವಿಯೊಳಗಿಟ್ಟು ಆರಾಮಾಗಿದ್ದ ಸುಪಾರಿ ಕಿಲ್ಲರ್!

    – ವಿಚಾರಣೆ ನಡೆಸಿದಷ್ಟೂ ಹೊರ ಬೀಳುತ್ತಿದೆ ರೋಚಕ ಮಾಹಿತಿ

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (ಎಸ್‍ಐಟಿ) ಮಹತ್ವದ ಪ್ರಗತಿ ಸಾಧಿಸಿದೆ. ಗೌರಿ ಹತ್ಯೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರದ ಜೈಲಿನಲ್ಲಿದ್ದ ಕೈದಿ ನೀಡಿದ್ದ ಸುಳಿವು ಆಧರಿಸಿ ಸುಪಾರಿ ಕಿಲ್ಲರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಯಲಹಂಕದ ಮನೆಯಲ್ಲಿ ಮೂರು ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ.

    ಆರಂಭದಲ್ಲಿ ಈತ ನನಗೆ ಈ ಪ್ರಕರಣದ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದನಾದ್ರೂ ಎಸ್‍.ಐ.ಟಿ ಈ ಮನೆಯಲ್ಲಿ ತೀವ್ರ ಪರಿಶೋಧನೆ ನಡೆಸಿದೆ. ಈ ವೇಳೆ ಮನೆಯಲ್ಲಿದ್ದ ಖಾಲಿ ಟಿವಿಯ ಒಳಗಡೆ 3 ರಿವಾಲ್ವರ್ ಸಿಕ್ಕಿದೆ ಎಂದು ಪಬ್ಲಿಕ್ ಟಿವಿಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಸದ್ಯ ಸುಪಾರಿ ಕಿಲ್ಲರ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಜೊತೆಗೆ ಆತನಿಂದ ವಶಕ್ಕೆ ಪಡೆದ ರಿವಾಲ್ವರ್ ತಪಾಸಣೆ ಮಾಡ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಂಟ್ರಿ ಮೇಡ್ ರಿವಾಲ್ವರ್ ರವಾನೆ ಮಾಡಲಾಗಿದೆ. ಸುಪಾರಿ ಕಿಲ್ಲರ್ ವಶಕ್ಕೆ ಪಡೆದು ಪೊಲೀಸರು ನಡೆಸಿದ ವಿಚಾರಣೆ ವೇಳೆ ಈತ ಇನ್ನಷ್ಟು ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಈ ಪ್ರಕರಣದ ಹಿಂದೆ ಪ್ರಭಾವಿಗಳಿದ್ದಾರೆ ಎಂಬ ಮಾಹಿತಿಯನ್ನೂ ಈತ ನೀಡಿದ್ದಾನೆ ಎಂಬ ಮಾಹಿತಿಯೂ ಸಿಕ್ಕಿದೆ. ಇನ್ನೊಂದೆರಡು ದಿನಗಳಲ್ಲಿ ಗೌರಿ ಹತ್ಯೆಗೆ ಭಯಾನಕ ಹಾಗೂ ರೋಚಕ ಕ್ಲೈಮ್ಯಾಕ್ಸ್ ಸಿಗಲಿದೆ ಎನ್ನುವುದಂತೂ ಸುಳ್ಳಲ್ಲ.

  • ಗೌರಿ ಲಂಕೇಶ್ ಹತ್ಯೆ ಕೇಸ್‍ನಲ್ಲಿ ಮಹತ್ವದ ಸಾಕ್ಷಿ ಲಭ್ಯ- ಆರೋಪಿಗಾಗಿ ಗೋವಾದಲ್ಲಿ ನಡೀತಿದೆ ತಲಾಶ್

    ಗೌರಿ ಲಂಕೇಶ್ ಹತ್ಯೆ ಕೇಸ್‍ನಲ್ಲಿ ಮಹತ್ವದ ಸಾಕ್ಷಿ ಲಭ್ಯ- ಆರೋಪಿಗಾಗಿ ಗೋವಾದಲ್ಲಿ ನಡೀತಿದೆ ತಲಾಶ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆಯುತ್ತಾ ಇದ್ದು ಮಹತ್ವದ ಬೆಳವಣಿಗೆ ಪಡೆದುಕೊಂಡಿದೆ.

    ಸಂಶೋಧಕ ಕಲುಬುರಗಿ ಮತ್ತು ಗೌರಿ ಹತ್ಯೆಯನ್ನು ಮಾಡಿರೋದು ಒಂದೇ ಗುಂಪು. ಒಂದೇ ಮಾದರಿಯ ಪಿಸ್ತೂಲಿನಿಂದ ಕೊಲೆ ಮಾಡಲಾಗಿದೆ ಅಂತ ಎಫ್‍ಎಸ್‍ಎಲ್ ವರದಿ ಕೊಟ್ಟಿದೆ. ಇದೇ ವರದಿಯನ್ನ ಮುಂದಿಟ್ಟುಕೊಂಡು ಎಸ್‍ಐಟಿ ತಂಡ ಸನಾತನ ಸಂಸ್ಥಾ ಮೇಲೆ ತನಿಖೆ ಮಾಡ್ತಿದೆ. ಪ್ರಮುಖವಾಗಿ ಸನಾತನ ಸಂಸ್ಥಾದ ಪ್ರಮುಖ ಸದಸ್ಯ ರುದ್ರಾ ಪಾಟೀಲ್ ಎಂಬಾತನೇ ಗೌರಿ ಹತ್ಯೆ ಮಾಸ್ಟರ್ ಮೈಂಡ್ ಅನ್ನೋ ಅನುಮಾನದಲ್ಲೇ ತನಿಖೆ ನಡೆಸ್ತಿದೆ.

    ಈ ಪ್ರಕರಣದಲ್ಲಿ ಸನಾತನ ಸಂಸ್ಥಾ ಮೇಲೆ ಅನುಮಾನ ಪಡೋದಕ್ಕೂ ಕೂಡ ಒಂದು ಇತಿಹಾಸ ಇದೆ. ಸನಾತನ ಸಂಸ್ಥಾದ ಕೆಲಸ ಅಂದ್ರೆ ಹಿಂದೂ ಧರ್ಮವನ್ನು ಉಳಿಸೋದು ಮತ್ತು ಬೆಳೆಸೋದು. ಹಿಂದೂ ಧರ್ಮಕ್ಕೆನಾದ್ರೂ ಸಮಸ್ಸೆ ಉಂಟಾದ್ರೆ ಅದಕ್ಕೆ ಧಕ್ಕೆ ಮಾಡಿದವರಿಗೆ ತಕ್ಕ ಶಿಕ್ಷೆ ಅನ್ನೋದು ಆ ಸಂಘಟನೆಯ ವಾದ. ಭಾರತೀಯ ಸಂವಿಧಾನದಲ್ಲಿ ಕೃತ್ಯಕ್ಕೆ ತಕ್ಕಂತೆ ಶಿಕ್ಷೆ ಇರೋ ಹಾಗೆ ಸನಾತನ ಸಂಸ್ಥಾದಲ್ಲೂ ವಿಶೇಷ ಸಂವಿಧಾನ ಮತ್ತು ಕಾನೂನು ಇದೆ. ಸರಿ ಸುಮಾರು 21 ಪ್ರತ್ಯೇಕ ಪುಸ್ತಕಗಳು ಇದ್ದು, ಒಂದೊಂದು ಪುಸ್ತಕವೂ ಸರಿಸುಮಾರು ನೂರು ಪುಟಗಳಿವೆ.

    ಸನಾತನ ಸಂಸ್ಥಾದ ವಿಶೇಷತೆ ಏನು ?
    * ಸನಾತನ ಸಂಸ್ಥಾಕ್ಕೆ ವಿಶೇಷ ಸಂವಿಧಾನ.
    * 21 ಪುಸ್ತಕಗಳು- ಒಂದೊಂದು ಪುಸ್ತಕ 100 ಪುಟಗಳು.
    * ಮರಾಠಿ ಭಾಷೆಯಲ್ಲಿ ಸಂವಿಧಾನ ರಚನೆ.
    * ಹಿಂದೂ ಧರ್ಮದ ವಿರುದ್ಧ ಮಾತನಾಡಿವರಿಗೆ ಶಿಕ್ಷೆ.
    * ಹಿಂದೂ ಧರ್ಮದ ಉಳಿವಿಗಾಗಿ ಹೋರಾಟ.
    * ಹಿಂದೂ ಧರ್ಮ ಎಷ್ಟು ಹಿಯಾಳಿಸ್ತಾರೆ ಅಷ್ಟು ಶಿಕ್ಷೆ.
    * ಸ್ವಲ್ಪ ಹಿಯಾಳಿಸಿದ್ರೆ ಬುದ್ಧಿವಾದ ಹೇಳೋ ಪ್ರಯತ್ನ.
    * ಬುದ್ಧಿ ಹೇಳಿಯೂ ಮುಂದುವರೆಸಿದ್ರೆ ಕೈ ಕತ್ತರಿಸೋದು, ಕಾಲು ಕತ್ತರಿಸೋದು.
    * ಧರ್ಮಕ್ಕೆ ಕುತ್ತು ತರ್ತಾರೆ ಅಂದ್ರೆ ಮೋಕ್ಷವೇ ಕೊನೆ.
    * ಇನ್ನು ಕಾಂಗ್ರೆಸ್ ಪಕ್ಷದ ವಿರುದ್ಧವೂ ಈ ಸಂಘಟನೆ ಕೆಲಸ ಮಾಡುತ್ತೆ

    ಇದಿಷ್ಟು ಸನಾತನ ಸಂಸ್ಥಾ ಮಾಹಿತಿಯಾಗಿದ್ದು, ಗೌರಿ ಲಂಕೇಶ್ ಹತ್ಯೆಗೆ ರುದ್ರಾ ಪಾಟೀಲನೇ ಜವಬ್ದಾರಿ ಹೊತ್ತಿದ್ದ ಅನ್ನೋ ಸಂಶಯವೂ ಎದುರಾಗಿದೆ. ಇಷ್ಟೆಲ್ಲಾ ಮಾಹಿತಿಯನ್ನು ಆಧರಿಸಿ ಬೇರೆ ಬೇರೆ ಆಯಾಮಗಳಲ್ಲೂ ಸಹ ಎಸ್‍ಐಟಿ ವಿಚಾರಣೆ ನಡೆಸ್ತಾ ಇದೆ.

    ಆದ್ರೆ ಸಂಸ್ಥಾ ವಕ್ತಾರ ಚೇತನ್ ರಾಜಹನ್ಸ್ ಈ ಆರೋಪವನ್ನ ತಳ್ಳಿ ಹಾಕಿದ್ದಾರೆ. ಸನಾತನ ಸಂಸ್ಥೆಯ ಹೆಸರು ಕೆಡಿಸಲು ಗೌರಿ ಲಂಕೇಶ್ ಸಾವನ್ನ ನಮ್ಮ ತಲೆಗೆ ಕಟ್ತಿದ್ದಾರೆ. ಗೌರಿ ಲಂಕೇಶ್ ಹತ್ಯೆಗೂ, ಕಲಬುರುಗಿ ಹತ್ಯೆಗೂ ಸನಾತನ ಸಂಸ್ಥೆಗೂ ಸಂಬಂಧವಿಲ್ಲ. ಸನಾತನ ಸಂಸ್ಥೆಗೆ ಮಸಿ ಬಳಿಯಲು ಹಿಂದೂ ವಿರೋಧಿಗಳು ಸಂಚು ರೂಪಿಸಿದ್ದಾರೆ. ತನಿಖೆಯ ದಿಕ್ಕನ್ನ ಬೇರೆಡೆಗೆ ತಿರುಗಿಸಲು ಹಿಂದೂ ವಿರೋಧಿಗಳು ಮಾಡ್ತಿರೋ ಷಡ್ಯಂತ್ರ. ಶೀಘ್ರದಲ್ಲೇ ಸುದ್ದಿಗೋಷ್ಠಿ ಕರೆದು ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇವೆ ಅಂತ ಹೇಳಿದ್ದಾರೆ.

  • ಗೌರಿ ಲಂಕೇಶ್ ಹತ್ಯೆ ಕೇಸ್: ಕುಣಿಗಲ್ ಗಿರಿ ಸಹಚರರು ಸೇರಿ ಹಲವರ ವಿಚಾರಣೆ

    ಗೌರಿ ಲಂಕೇಶ್ ಹತ್ಯೆ ಕೇಸ್: ಕುಣಿಗಲ್ ಗಿರಿ ಸಹಚರರು ಸೇರಿ ಹಲವರ ವಿಚಾರಣೆ

    – ಸ್ಕಾಟ್‍ಲ್ಯಾಂಡ್ ಪೊಲೀಸರಿಂದಲೂ ತನಿಖೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೇಸ್‍ನಲ್ಲಿ ಎಸ್‍ಐಟಿ ತನಿಖೆ ಚುರುಕಾಗಿದ್ದು, ಗೌರಿ ಲಂಕೇಶ್ ಮನೆ ಸುತ್ತಮುತ್ತಲ ಏರಿಯಾದ ಸಿಸಿಟಿವಿ ದೃಶ್ಯದಲ್ಲಿ ರೌಡಿಗಳ ಚಲನವಲನ ಪತ್ತೆಯಾಗಿದೆ.

    ಸಿಸಿಟಿವಿಯಲ್ಲಿ ರೌಡಿ ಕುಣಿಗಲ್ ಗಿರಿ ಸಹಚರರ ಚಲನವಲನ ಪತ್ತೆಯಾಗಿದೆ. ಈಗಾಗಲೇ ಗಿರಿಯ ಹಲವು ಸಹಚರರನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜೊತೆಗೆ ಇದುವರೆಗೂ ಗೌರಿ ಹತ್ಯೆ ಪ್ರಕರಣದಲ್ಲಿ 100 ಮಂದಿಯನ್ನು ವಿಚಾರಣೆ ಮಾಡಿದ್ದಾರೆ.

    ರಾಮನಗರ ಕೋರ್ಟ್‍ನಲ್ಲಿರುವ ಕುಣಿಗಲ್ ಗಿರಿಯನ್ನು ಕೋರ್ಟ್ ಅನುಮತಿ ಪಡೆದು ವಶಕ್ಕೆ ಪಡೆಯಲು ಎಸ್‍ಐಟಿ ತಂಡ ನಿರ್ಧಾರ ಮಾಡಿದೆ. ಅತ್ತ ಮಹಾರಾಷ್ಟ್ರದಲ್ಲೂ ತನಿಖೆ ಚುರುಕುಗೊಳಿಸಿರುವ ಎಸ್‍ಐಟಿ ಟೀಂ, ಸನಾತನ ಸಂಸ್ಥೆ ಸದಸ್ಯರು ಸೇರಿದಂತೆ ಹಲವರನ್ನು ಪ್ರಶ್ನೆ ಮಾಡ್ತಿದೆ.

    ಗೌರಿ ಹತ್ಯೆ ಕೇಸ್‍ನಲ್ಲಿ ಮಹತ್ವದ ಸುಳಿವು ಪತ್ತೆಯಾಗಿದೆ. ಆದ್ರೆ ಯಾವುದೇ ಸುಳಿವು ಬಿಟ್ಟುಕೊಡಲ್ಲ ಅಂತಾ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿರೋದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

    ಇಷ್ಟೆಲ್ಲದ್ರ ಮಧ್ಯೆ ಗೌರಿ ಲಂಕೇಶ್ ಮರ್ಡರ್ ಕೇಸ್ ತನಿಖೆಗೆ ಸ್ಕಾಟ್‍ಲ್ಯಾಂಡ್ ಪೊಲೀಸರೂ ಸಾಥ್ ಕೊಟ್ಟಿದ್ದು, ಗುರುವಾರದಂದು ಇಬ್ಬರು ಸ್ಕಾಟ್‍ಲ್ಯಾಂಡ್ ಪೊಲೀಸರು ಬೆಂಗಳೂರಿಗೆ ಬಂದು ತನಿಖೆ ಶುರು ಮಾಡಿದ್ದಾರೆ.

  • ಮೋಸ್ಟ್ ವಾಂಟೆಡ್ ನಕ್ಸಲ್  ನಾಯಕ ವಿಕ್ರಮ್ ಗೌಡನಿಂದ ಗೌರಿ ಲಂಕೇಶ್ ಹತ್ಯೆ?

    ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡನಿಂದ ಗೌರಿ ಲಂಕೇಶ್ ಹತ್ಯೆ?

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ನಕ್ಸಲ್ ಮುಖಂಡ ಕರ್ನಾಟಕ, ತಮಿಳುನಾಡು ಪೊಲೀಸರಿಗೆ ಬೇಕಾಗಿರುವ ವಿಕ್ರಮ್ ಗೌಡನೇ ಶೂಟೌಟ್ ಮಾಡಿಸಿದ್ದಾನಾ ಎನ್ನುವ ಶಂಕೆ ಈಗ ವ್ಯಕ್ತವಾಗಿದೆ.

    ಹೌದು. ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) 7 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ವಿಕ್ರಮ್ ಗೌಡನಿಗೆ ಆಗ್ರಸ್ಥಾನ ಸಿಕ್ಕಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ. ಎಸ್‍ಐಟಿ ಈಗ ವಿಕ್ರಮ್ ಗೌಡ ಮತ್ತು ಐವರು ಸಹಚರರ ಬೆನ್ನುಬಿದ್ದಿದ್ದು, ತನಿಖೆಯನ್ನು ತೀವ್ರಗೊಳಿಸಿದೆ.

    ನಕ್ಸಲರಿಂದ ಹತ್ಯೆ ಆಗಿರಬಹುದಾ ಎನ್ನುವ ಅನುಮಾನ ಬಂದಿರುವ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಗೌರಿ ಲಂಕೇಶ್ ಅವರ ಮನೆಯನ್ನು ತಪಾಸಣೆ ಮಾಡಿದ್ದರೆ, ಇಂದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಛತ್ತೀಸ್‌ಗಢ ಪೊಲೀಸರು ಎಸ್‍ಐಟಿಯಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ದ್ವೇಷ ಯಾಕೆ?
    ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಮ್ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಈ ಕಾರಣಕ್ಕೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರಬಹುದಾ ಎನ್ನುವ ಪ್ರಶ್ನೆಯನ್ನು ಇಟ್ಟುಕೊಂಡು ತನಿಖೆ ಮುಂದುವರಿದಿದೆ.

    ಯಾರು ಈ ವಿಕ್ರಮ್ ಗೌಡ?
    ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಮ್ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಮ್ ಗೌಡ ಹೆಗಲಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಮ್ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಮ್ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದಾನೆ. ಕಳೆದ ವರ್ಷ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ ವಿಕ್ರಮ್ ಗೌಡ ಸದ್ಯ ಕೇರಳದಲ್ಲಿ ಅಡಗಿದ್ದಾನೆ ಎಂದು ಹೇಳಲಾಗುತ್ತಿದೆ.

    ಗೌರಿ ಲಂಕೇಶ್ ಕಳೆದ ನಾಲ್ಕು ವರ್ಷಗಳಲ್ಲಿ ನಕ್ಸಲರಾದ ಸಿರಿಮನೆ ನಾಗರಾಜು, ನೂರ್ ಜುಲ್ಫೀಕರ್ ಶ್ರೀಧರ್, ಕನ್ಯಾಕುಮಾರಿ, ರಾಜು ಅಲಿಯಾಸ್ ಪರಶುರಾಮ್, ಶಿವು, ಚೆನ್ನಮ್ಮ, ನಿಲಗುಳಿ ಪದ್ಮನಾಭ್, ರಿಜ್ವಾನ್ ಬೇಗಂ, ಕಲ್ಪನಾ ಇವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತಂದಿದ್ದರು.

     

    https://youtu.be/9i4m_pe6Ir4

    https://youtu.be/UpTSQC0W05M

  • ಗೌರಿ ಲಂಕೇಶ್ ಹತ್ಯೆಗೆ ಮುಂಬೈನಿಂದ ಬಂದಿದ್ರಾ ಸುಪಾರಿ ಕಿಲ್ಲರ್ಸ್?- ಎಸ್‍ಐಟಿ ಶಂಕೆ

    ಗೌರಿ ಲಂಕೇಶ್ ಹತ್ಯೆಗೆ ಮುಂಬೈನಿಂದ ಬಂದಿದ್ರಾ ಸುಪಾರಿ ಕಿಲ್ಲರ್ಸ್?- ಎಸ್‍ಐಟಿ ಶಂಕೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಾಂಬೆಯಿಂದ ಸುಪಾರಿ ಕಿಲ್ಲರ್ಸ್ ಬಂದಿದ್ರಾ? ಸ್ಪಾಟ್‍ನಲ್ಲಿ ಸಿಕ್ಕ ಸುಳಿವು ಇಟ್ಟುಕೊಂಡು ಅಖಾಡಕ್ಕೆ ಇಳಿದ ಎಸ್‍ಐಟಿ ತಂಡ ಈ ಅನುಮಾನ ವ್ಯಕ್ತಪಡಿಸಿದೆ.

    ಗುಂಡು ಹಾರಿಸಿದ ಹಂತಕ ಥೇಟ್ ಸಿನಿಮಾ ಸ್ಟೈಲ್‍ನಲ್ಲೇ ವರ್ತಿಸಿದ್ದಾನೆ. ಕಳೆದ ಎರಡು ಮೂರು ದಿನಗಳಿಂದ ಅದೇ ಐಡಿಯಲ್ ಹೋಮ್ಸ್ ಪ್ರದೇಶದಲ್ಲಿ ಓಡಾಟ ಮಾಡಿರೋ ಹಂತಕರು, ಕಾದು ಕೂತು ಗುಂಡು ಹಾರಿಸಿದ್ದಾರೆ. ಘಟನೆ ನಡೆಯೋದಕ್ಕೂ ಮುನ್ನ ಇಬ್ಬರು ಗೌರಿ ಅವರ ಮನೆಯ ಮುಂದೆ ಕಾದು ಕೂತಿದ್ದರು ಎನ್ನಲಾಗಿದೆ.

    ಗೌರಿ ಅವರು ಮನೆ ತಲುಪಿದ ಕೂಡಲೇ ಕಾದು ಕೂತಿದ್ದ ಸಂಚುಕೋರರು, ಗುಂಡು ಹಾರಿಸುವವನಿಗೆ ಮಾಹಿತಿ ಮುಟ್ಟಿಸಿದ್ದಾರೆ. ಆ ಬಳಿಕ ಬಂದ ಆ ಆಗಂತುಕ ಗುಂಡು ಹಾರಿಸಿ, ಸಾವು ಖಚಿತ ಪಡಿಸಿಕೊಂಡೇ ಮುಂದೆ ಹೋಗಿದ್ದಾನೆ. ಇದು ಮುಂಬೈ ಮೂಲದ ಸುಪಾರಿ ಕಿಲ್ಲರ್ಸ್ ಮೋಡ್ಸ್ ಅನ್ನುತ್ತೆ ಎಸ್‍ಐಟಿ ತಂಡ.

    ಇಷ್ಟರ ನಡುವೆ ಗಾಂಧೀ ಬಜಾರ್‍ನಿಂದ ಬಂದ ಗೌರಿ ಲಂಕೇಶ್ ಅವರು ಮನೆಯ ಮುಂಭಾಗ ಕಾರಿನಲ್ಲಿ ನಿಲ್ಲಿಸಿಕೊಂಡು ಒಂದೆರಡು ನಿಮಿಷ ಕಾರಿನಲ್ಲಿ ಕೂತು ಮೊಬೈಲ್ ನೋಡಿದ್ದಾರೆ. ಅದ್ಯಾರಿಗೋ ಮೆಸೇಜ್ ಕೂಡ ಕಳುಹಿಸಿದ್ದಾರೆ ಎನ್ನುತ್ತಿದೆ ಎಸ್‍ಐಟಿ ತಂಡ.

  • ಇದ್ದಕ್ಕಿದ್ದಂತೆ ಮೋದಿಯನ್ನ ಯಾಕೆ ಬ್ಲಾಕ್ ಮಾಡ್ತಿದ್ದಾರೆ ಟ್ವಿಟ್ಟರಿಗರು?

    ಇದ್ದಕ್ಕಿದ್ದಂತೆ ಮೋದಿಯನ್ನ ಯಾಕೆ ಬ್ಲಾಕ್ ಮಾಡ್ತಿದ್ದಾರೆ ಟ್ವಿಟ್ಟರಿಗರು?

    ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಂತರ ಪ್ರಧಾನಿ ನರೇಂದ್ರ ಮೋದಿಯನ್ನ ಹಲವಾರು ಟ್ವಿಟ್ಟರಿಗರು ಬ್ಲಾಕ್ ಮಾಡುವ ಮೂಲಕ ಬ್ಲಾಕ್ ನರೇಂದ್ರ ಮೋದಿ ಎಂಬ ಅಭಿಯಾನ ಶುರುಮಾಡಿದ್ದಾರೆ.

    ಈಗಾಗಲೇ #BlockNarendraModi ಹ್ಯಾಶ್‍ಟ್ಯಾಗ್ ಟ್ವಿಟ್ಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಸಾಕಷ್ಟು ಟ್ವಿಟ್ಟರ್ ಬಳಕೆದಾರರು ಮೋದಿಯನ್ನ ಬ್ಲಾಕ್ ಮಾಡಿ ಅದರ ಸ್ಕ್ರೀನ್‍ಶಾಟ್ಸ್ ಹಂಚಿಕೊಳ್ಳುತ್ತಿದ್ದಾರೆ.

    ಯಾಕೆ ಬ್ಲಾಕ್ ಮಾಡ್ತಿದ್ದಾರೆ?: ಮಂಗಳವಾರ ರಾತ್ರಿ ಗೌರಿ ಲಂಕೇಶ್ ಹತ್ಯೆಯಾದ ಬಳಿಕ ನಿಖಿಲ್ ದಧೀಚ್ ಎಂಬ ಟ್ವಿಟ್ಟರ್ ಬಳಕೆದಾರರೊಬ್ಬರು ಗೌರಿ ಲಂಕೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಒಬ್ಬ ನಾಯಿ ನಾಯಿಯಂತೆ ಸತ್ತಳು, ನಾಯಿಮರಿಗಳು ಈಗ ಒಂದೇ ಸ್ವರದಲ್ಲಿ ಅಳುತ್ತಿವೆ ಎಂದು ಟ್ವೀಟ್ ಮಾಡಿದ್ದರು. ದಧೀಚ್ ಗಾರ್ಮೆಂಟ್ ಉತ್ಪಾದಕರು ಎಂದು ಅವರ ಟ್ವಿಟ್ಟರ್ ಖಾತೆಯಿಂದ ತಿಳಿದುಬಂದಿದೆ. ದಧೀಚ್ ಟ್ವಿಟ್ಟರ್ ಖಾತೆಯನ್ನ ಬಿಜೆಪಿಯ ಅನೇಕ ರಾಜಕಾರಣಿಗಳು ಫಾಲೋ ಮಾಡ್ತಿದ್ದು, ಮೋದಿಯೂ ಅದರಲ್ಲಿ ಒಬ್ಬರಾಗಿದ್ದಾರೆ. ಈ ರೀತಿ ಪೋಸ್ಟ್ ಹಾಕಿದ್ದಕ್ಕೆ ದಧೀಚ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ಮೋದಿ ಇನ್ನೂ ಯಾಕೆ ಫಾಲೋ ಮಾಡ್ತಿದ್ದಾರೆ ಎಂದು ಹಲವಾರು ಮಂದಿ ಪ್ರಶ್ನಿಸಿದ್ದಾರೆ. ದಧೀಚ್‍ರನ್ನು ಅನ್‍ಫಾಲೋ ಮಾಡಿ ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ.

    ಇದಕ್ಕೆ ಪ್ರತಿಭಟನೆಯಾಗಿ ಬುಧವಾರ ರಾತ್ರಿಯಿಂದ ಬ್ಲಾಕ್ ನರೇಂದ್ರ ಮೋದಿ ಅಭಿಯಾನ ಶುರುವಾಗಿದ್ದು, ಇಂದು ಟ್ರೆಂಡಿಂಗ್ ಟಾಪಿಕ್ ಆಗಿದೆ. ಮೋದಿಯನ್ನು ಬ್ಲಾಕ್ ಮಾಡಿದ ಅನೇಕರು ಈ ಅಭಿಯಾನದ ಐಡಿಯಾ ಶುರು ಮಾಡಿದ ಡಾ ರಾಕೇಶ್ ಪರೀಕ್ ಎಂಬ ವ್ಯಕ್ತಿಗೆ ಅದನ್ನ ಟ್ಯಾಗ್ ಮಾಡ್ತಿದ್ದಾರೆ. ಪರೀಕ್ ಅವರು ಡಯಾಬೆಟೊಲಾಜಿಸ್ಟ್, ಬ್ಲಾಗರ್ ಹಾಗೂ ಸಾಮಾಜಿಕ ಕಾರ್ಯಕರ್ತ ಎಂದು ಟ್ವಿಟ್ಟರ್ ಖಾತೆಯ ವೈಯಕ್ತಿಕ ಮಾಹಿತಿಯಿಂದ ತಿಳಿದುಬಂದಿದೆ.

    ಈ ಸುದ್ದಿ ಬರೆಯುವ ವೇಳೆಗೆ ಮೋದಿ ಅವರ ಟ್ವಿಟ್ಟರ್ ಖಾತೆಗೆ 3,37,62,468 ಫಾಲೋವರ್‍ಗಳಿದ್ದು, ಪಿಎಂ ಆಫ್ ಇಂಡಿಯಾ ಟ್ವಿಟ್ಟರ್ ಖಾತೆಗೆ 2,05,68,483 ಫಾಲೋವರ್‍ಗಳಿದ್ದಾರೆ.

    https://twitter.com/amitbehere/status/905520013465059328?ref_src=twsrc%5Etfw&ref_url=http%3A%2F%2Findiatoday.intoday.in%2Fstory%2Fblocknarendramodi-pm-following-twitter-trolls-abusing-gauri-lankesh-prompts-hashtag-in-protest%2F1%2F1042648.html

  • ಗೌರಿ ಲಂಕೇಶ್ ಹತ್ಯೆ: ಪ್ರಮೋದ್ ಮುತಾಲಿಕ್ ಹೇಳಿದ್ದೇನು?

    ಗೌರಿ ಲಂಕೇಶ್ ಹತ್ಯೆ: ಪ್ರಮೋದ್ ಮುತಾಲಿಕ್ ಹೇಳಿದ್ದೇನು?

    ಬೆಳಗಾವಿ: ಗೌರಿ ಲಂಕೇಶ್ ಅವರನ್ನು ಕೊಂದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾರೇ ಆಗಲಿ ಶಾರೀರಿಕ ಸಂಘರ್ಷಕ್ಕೆ ಇಳಿಯಬಾರದು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮುತಾಲಿಕ್, ಪತ್ರಕರ್ತೆ- ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ನಾನು ಖಂಡಿಸುತ್ತೇನೆ. ತಕ್ಷಣ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಅಂತ ಹೇಳಿದ್ರು.

    ಈ ರೀತಿ ಕೊಲೆ ಮಾಡುವ ವಿಕೃತಿ ಸರಿಯಲ್ಲ. ವಿಚಾರವಾದಿಗಳದ್ದಿರಬಹುದು, ಇನ್ಯಾವುದೇ ಹಿಂದೂ ಕಾರ್ಯಕರ್ತರದ್ದಿರಬಹುದು, ಹತ್ಯೆ ಮಾಡುವುದು ಸರಿಯಲ್ಲ. ವೈಚಾರಿಕ ಸಂಘರ್ಷ ಆಗಲಿ ಆದ್ರೆ ಶಾರೀರಿಕ ಸಂಘರ್ಷ ಸರಿಯಲ್ಲ. ಇದನ್ನ ಒಪ್ಪುವುದಿಲ್ಲ. ಸರ್ಕಾರ ಇಂತಹ ಪ್ರಕರಣಗಳನ್ನ ಗಂಭೀರವಾಗಿ ತೆಗೆದುಕೊಂಡು ಕೂಡಲೇ ತನಿಖೆಯಾಗಿ ಶಿಕ್ಷೆಯಾಗುವಂತಹ ಪ್ರಕ್ರಿಯೆ ದೀರ್ಘ ಕಾಲ ಎಳೆದುಕೊಂಡು ಹೋಗುತ್ತಿರುವುದರಿಂದ ಕೊಲೆಗಡುಗರಿಕೆ ಭಯ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಇದು ಅಪಾಯಕಾರಿ ಅಂತ ಹೇಳಿದ್ರು.

    ವ್ಯಕ್ತಿಯ ವಿಚಾರವನ್ನ ಪ್ರಕಟ ಮಾಡುವಂತಹ ಸ್ವಾತಂತ್ರ್ಯ ನಮಗೆ ಡಾ. ಅಂಬೇಡ್ಕರ್ ಸಂವಿಧಾನ ಕೊಟ್ಟಿದೆ. ಕೊಲೆಯ ಮೂಲಕ ಅಂತಹ ವಿಚಾರವನ್ನ ಹತ್ತಿಕ್ಕುವ ಪ್ರಯತ್ನ ಸರಿಯಲ್ಲ. ಅದು ಸಾಧ್ಯವೂ ಇಲ್ಲ. ವೈಚಾರಿಕತೆ ಜೀವಂತವಾಗಿರುತ್ತದೆ. ವ್ಯಕ್ತಿಯ ದೇಹ ಹೋಗಬಹುದು ಆದ್ರೆ ವಿಚಾರ ಉಳಿಯುತ್ತದೆ. ಕೊಲೆಗಡುಕರು ಅರ್ಥ ಮಾಡಿಕೊಳ್ಳಬೇಕು. ಕೊಲೆಯಿಂದ ಅವರ ವಿಚಾರವನ್ನ ನಿಲ್ಲಿಸಲು ಸಾಧ್ಯವಿಲ್ಲ ಅಂದ್ರು.

    ಕರ್ನಾಟಕ ಪೊಲೀಸರು ಸಮರ್ಥವಾಗಿದ್ದಾರೆ. ಕೊಲೆಗಾರರನ್ನು ಬಂಧಿಸುವುದರಲ್ಲಿ ನಿಶ್ಚಿತವಾಗಿ ಯಶಸ್ಸು ಗಳಿಸುತ್ತಾರೆ ಅಂತ ಮುತಾಲಿಕ್ ಹೇಳಿದ್ರು.

    https://www.youtube.com/watch?v=4ltP25aJrF4&feature=youtu.be