Tag: ಗೌರಿ

  • ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

    ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

    ತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17,  ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ (Dance) ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್ (Samarjit Lankesh), ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ಗೌರಿ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.

    ಇಂದ್ರಜಿತ್  ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ.  ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.

    ಈಗಾಗಲೇ ಗೌರಿ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ಗೌರಿ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ.

     

    ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

  • ಚೊಚ್ಚಲ ‘ಗೌರಿ’ ಚಿತ್ರಕ್ಕೆ ಡಬ್ಬಿಂಗ್ ಮಾಡುತ್ತಿದ್ದಾರೆ ಸಾನ್ಯಾ ಅಯ್ಯರ್

    ಚೊಚ್ಚಲ ‘ಗೌರಿ’ ಚಿತ್ರಕ್ಕೆ ಡಬ್ಬಿಂಗ್ ಮಾಡುತ್ತಿದ್ದಾರೆ ಸಾನ್ಯಾ ಅಯ್ಯರ್

    ಸಾನ್ಯ ಅಯ್ಯರ್ ತಮ್ಮ ಚೊಚ್ಚಲು ಸಿನಿಮಾ ‘ಗೌರಿ’ ಶೂಟಿಂಗ್ ಮುಗಿಸಿದ್ದಾರೆ. ಇದೀಗ ಅವರು ಡಬ್ಬಿಂಗ್ (Dubbing) ಕೆಲಸದಲ್ಲಿ ನಿರತರಾಗಿದ್ದಾರೆ. ಡಬ್ಬಿಂಗ್ ಮಾಡುತ್ತಿರುವ ಫೋಟೋ ಅವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಜೊತೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ಇದ್ದಾರೆ.

    ‘ಗೌರಿ’ (Gauri) ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಈ ಚಿತ್ರಕ್ಕಾಗಿ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದರು.

    ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದವು.

    ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಗೌರಿ ಚಿತ್ರಕ್ಕಾಗಿ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.

    ಗೌರಿ ಸಿನಿಮಾ ಚಿಕ್ಕಮಗಳೂರು ಸೇರಿದಂತೆ ನಾನಾ ಸ್ಥಳಗಳಲ್ಲಿ ಶೂಟ್ ಆಗಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

  • ಹುಟ್ಟುಹಬ್ಬ ಆಚರಿಸಿಕೊಂಡ ‘ಗೌರಿ’ ನಾಯಕ ಸಮರ್ಜಿತ್ ಲಂಕೇಶ್

    ಹುಟ್ಟುಹಬ್ಬ ಆಚರಿಸಿಕೊಂಡ ‘ಗೌರಿ’ ನಾಯಕ ಸಮರ್ಜಿತ್ ಲಂಕೇಶ್

    ಖ್ಯಾತ ಸಾಹಿತಿ ಪಿ.ಲಂಕೇಶ್ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ (Indrajit Lankesh) ಮಗ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ (Samarjit) ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್,  ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ  ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಗೌರಿ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.

    ನಾನು ಹುಟ್ಟುಹಬ್ಬವನ್ನು (Birthday) ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ ಸಮರ್ಜಿತ್ ಲಂಕೇಶ್, ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆ ಇದೆ ಎಂದರು. ನಾಯಕಿ ಸಾನ್ಯ ಅಯ್ಯರ್ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಮಾನಸಿ ಸುಧೀರ್ ಹಾಗೂ ಎಸ್ತರ್ ನರೋನ ಸಹ ಚಿತ್ರದ ಕುರಿತು ಮಾತನಾಡಿದರು.

    ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ ಎಂದರು ಛಾಯಾಗ್ರಾಹಕ ಕೆ.ಕೆ. ಸಮರ್ಜಿತ್ ಅಜ್ಜಿ ಇಂದಿರಾ ಲಂಕೇಶ್ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

    ಸಮರ್ಜಿತ್ ತಮ್ಮ ಹುಟ್ಟುಹಬ್ಬವನ್ನು ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡರು.  ಆನಂತರ ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ನಕ್ಷತ್ರ’ವೊಂದಕ್ಕೆ ಸಾನ್ಯಾ ಅಯ್ಯರ್ ಹೆಸರು: ಇದು ಅಭಿಮಾನಿಗಳ ಗಿಫ್ಟ್

    ‘ನಕ್ಷತ್ರ’ವೊಂದಕ್ಕೆ ಸಾನ್ಯಾ ಅಯ್ಯರ್ ಹೆಸರು: ಇದು ಅಭಿಮಾನಿಗಳ ಗಿಫ್ಟ್

    ಕ್ಷತ್ರಗಳಿಗೆ (Stars)  ತಮ್ಮ ನೆಚ್ಚಿನ ತಾರೆಯರು ಹೆಸರು ಇಡುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಕನ್ನಡದಲ್ಲಿ ಇದನ್ನು ಮೊದಲು ಶುರು ಮಾಡಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು. ಪುನೀತ್ ಅಗಲಿದಾಗ ನಕ್ಷತ್ರವೊಂದಕ್ಕೆ ಪುನೀತ್ ಅವರ ಹೆಸರು ಇಡಲಾಗಿತ್ತು. ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದಂದು ಹರೀಶ್ ಅರಸು ಅವರು ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದರು. ಇದೀಗ ಕಿರುತೆರೆ ನಟಿ ಸಾನ್ಯಾ ಅಯ್ಯರ್ ಅಭಿಮಾನಿಗಳು ನಟಿಯ ಹೆಸರಿನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದಾರೆ.

    ಸಾನ್ಯಾ ಅಯ್ಯರ್ ಹುಟ್ಟು ಹಬ್ಬದಂದು ಅಭಿಮಾನಿಗಳು ಈ ಕೆಲಸ ಮಾಡಿದ್ದು, ಆ ವಿಡಿಯೋವನ್ನು ಸ್ವತಃ ಸಾನ್ಯಾ ಅಯ್ಯರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಕ್ಷತ್ರಗಳಿಗೆ ಹೆಸರು ಇಡುವುದು ನನಗೆ ಗೊತ್ತೇ ಇರಲಿಲ್ಲ. ಇದೇ ಮೊದಲ ಬಾರಿಗೆ ನನಗೆ ಗೊತ್ತಾಗಿದ್ದು ಎಂದು ಅಚ್ಚರಿಯನ್ನು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಇಂಥದ್ದೊಂದು ಕೆಲಸ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನೂ ಅವರು ಹೇಳಿದ್ದಾರೆ.

    ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾದವರು ಸಾನ್ಯಾ ಅಯ್ಯರ್ (Sanya Iyer). ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವುದಕ್ಕಾಗಿಯೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದರು. ಈ ಫೋಟೋ ಶೂಟ್ ಬಳಿಕ ಅವರು ಕನ್ನಡ ಸಿನಿಮಾವೊಂದನ್ನು ಒಪ್ಪಿಕೊಂಡರು. ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ (Gauri) ಚಿತ್ರಕ್ಕೆ ಇವರೇ ನಾಯಕಿಯಾಗಿ ನಟಿಸುತ್ತಿದ್ದಾರೆ.

    ಸುದೀಪ್ ಹೆಸರಿನಲ್ಲೂ ನಕ್ಷತ್ರ

    ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆಯೊಂದನ್ನು ನೀಡಿತ್ತು ಅರಸು ಕ್ರಿಯೇಷನ್ಸ್ (Arasu Creation). ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ (Nakshatra) ನಾಮಕರಣ ಮಾಡಿದ್ದು, ಅಧಿಕೃತವಾಗಿ ನೋಂದಣಿ ಕೂಡ ಮಾಡಿಸಿತ್ತು. ಈ ಹಿಂದೆ ದಕ್ಷಿಣದ ಖ್ಯಾತ ನಟ ಮಹೇಶ್ ಬಾಬು ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಇಂಥದ್ದೊಂದು ನೋಂದಣಿ ಮಾಡಿಸಿದ್ದರು. ಅಲ್ಲದೇ, ಪುನೀತ್ ರಾಜ್ ಕುಮಾರ್ ಹೆಸರಿನಲ್ಲೂ ಒಂದು ನಕ್ಷತ್ರವಿದೆ. ಅಂಥದ್ದೊಂದು ಗೌರವ ಸುದೀಪ್ ಪಾಲಾಗಿತ್ತು. ಮೀನ ರಾಶಿಯ ನಕ್ಷತ್ರಪುಂಜದಲ್ಲಿ ಕಾಣಸಿಗುವ ನಕ್ಷತ್ರವೊಂದಕ್ಕೆ ಸುದೀಪ್ ಹೆಸರು ಇಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ ಶ್ರುತಿ ಮಗಳು ಗೌರಿ

    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ ಶ್ರುತಿ ಮಗಳು ಗೌರಿ

    ಚಂದನವನದ ಚೆಂದದ ನಟಿ ಶ್ರುತಿ ಕೃಷ್ಣ (Shruthi Krishna) ತಮ್ಮ ಜನ್ಮದಿನದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಣ್ಣದ ಲೋಕಕ್ಕೆ ಶ್ರುತಿ ಮಗಳು ಗೌರಿ (Gowri) ಎಂಟ್ರಿ ಕೊಡ್ತಿದ್ದಾರೆ. ಈ ಬಗ್ಗೆ ನಟಿ ಶ್ರುತಿ ಮಾಹಿತಿ ನೀಡಿದ್ದಾರೆ.

    90ರ ದಶಕದಿಂದ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ಶ್ರುತಿ ಅವರಿಗೆ ಈಗಲೂ ಚಿತ್ರರಂಗದಲ್ಲಿ ಬೇಡಿಕೆಯಿದೆ. ನಟಿಯಾಗಿ, ರಿಯಾಲಿಟಿ ಶೋಗಳ ಜಡ್ಜ್ ಆಗಿ ಹೈಲೆಟ್ ಆಗುತ್ತಿದ್ದಾರೆ. ಅವರ ಮಗಳು ಗೌರಿ (Gowri) ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರೀಲ್ಸ್, ಹಾಡುಗಾರಿಕೆ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:‘ಜವಾನ್ 2’ ಜೊತೆ ಮತ್ತೊಂದು ಸರ್ ಪ್ರೈಸ್ ನೀಡಿದ ನಿರ್ದೇಶಕ ಅಟ್ಲಿ

    ಶ್ರುತಿಗೆ, ಪ್ರತಿ ಸಲ ಮಗಳು ಚಿತ್ರರಂಗಕ್ಕೆ (Films) ಬರುತ್ತಾರಾ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಇದೀಗ ಈ ಪ್ರಶ್ನೆಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರುತಿ ಅವರ ಜನ್ಮದಂದು, ತಮ್ಮ ಮಗಳು ಇಂಡಸ್ಟ್ರಿಗೆ ನಟಿಯಾಗಿ ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಒಂದೂವರೆ ತಿಂಗಳ ಹಿಂದಷ್ಟೇ ನನ್ನ ಮಗಳು ನಟಿಸೋದಾಗಿ ಹೇಳಿದ್ದಾಳೆ. ನಾನು ಒಪ್ಪಿಗೆ ನೀಡಿದ್ದೇನೆ ಎಂದು ತಿಳಿಸಿದ್ದರು.

    ನಟನೆಗೆ ಬೇಕಾಗಿರುವ ತಯಾರಿ ಮಾಡಿಕೊಂಡೇ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾಳೆ ಎಂದು ನಟಿ ಮಾಹಿತಿ ನೀಡಿದ್ದಾರೆ. ಗೌರಿಗೆ ಒಳ್ಳೆಯ ಕಥೆಗಳು ಅರಸಿ ಬರುತ್ತಿವೆ. ಬೇರೆಯವರ ಬ್ಯಾನರ್‌ನಲ್ಲಿ ಲಾಂಚ್ ಆಗುತ್ತಾಳೆ ಎಂದು ನಟಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಅಕ್ಕನ ಮಗಳು ಬಣ್ಣದ ಲೋಕಕ್ಕೆ ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾನ್ಯ ಅಯ್ಯರ್ ಮತ್ತಷ್ಟು ಬೋಲ್ಡ್: ಬದಲಾದ ಪುಟ್ಟಗೌರಿ

    ಸಾನ್ಯ ಅಯ್ಯರ್ ಮತ್ತಷ್ಟು ಬೋಲ್ಡ್: ಬದಲಾದ ಪುಟ್ಟಗೌರಿ

    ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಇದೀಗ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದು,  ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ. ಕೆಲವರು ಪಾಸಿಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

    ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.  ಇದನ್ನೂ ಓದಿ:‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್

    ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್  ಆಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀರೆಯುಟ್ಟು ಅಪ್ಸರೆಯಂತೆ ಕಂಗೊಳಿಸಿದ ‘ಗೌರಿ’ ಸಾನ್ಯ ಅಯ್ಯರ್

    ಸೀರೆಯುಟ್ಟು ಅಪ್ಸರೆಯಂತೆ ಕಂಗೊಳಿಸಿದ ‘ಗೌರಿ’ ಸಾನ್ಯ ಅಯ್ಯರ್

    ಬಿಗ್ ಬಾಸ್ ಬೆಡಗಿ (Bigg Boss Kannada) ಸಾನ್ಯ ಅಯ್ಯರ್ (Saanya Iyer) ಅವರು ಸ್ಯಾಂಡಲ್‌ವುಡ್‌ಗೆ (Sandalwood)  ನಾಯಕಿಯಾಗಿ ಪಾದಾರ್ಪಣೆ ಮಾಡ್ತಿದ್ದಾರೆ. ಗೌರಿ ಸಿನಿಮಾಗೆ ಹೀರೋಯಿನ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಸೀರೆಯುಟ್ಟು ಮಿಂಚಿದ್ದರು. ಈಗ ಸೀರೆಯಲ್ಲಿನ ತಮ್ಮ ಚೆಂದದ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.

    ಇತ್ತೀಚಿನ ಫೋಟೋಶೂಟ್‌ನಲ್ಲಿ ಸಾನ್ಯ ಅಯ್ಯರ್ ಅವರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಲೈಟ್ ಬಣ್ಣದ ಸೀರೆಯುಟ್ಟು ಕೊಂಚ ರೆಟ್ರೋ ಸ್ಟೈಲಿನಲ್ಲಿ ಮಿಂಚಿದ್ದಾರೆ. ಹಸಿರು ಮತ್ತು ಸಿಲ್ವರ್ ಮಿಶ್ರಿತ ಬಣ್ಣದ ಜ್ಯುವೆಲ್ಲರಿ, ತಲೆಗೆ ಗುಲಾಬಿ ಹೂ ಮುಡಿದು ಡಿಫರೆಂಟ್ ಗೆಟಪ್‌ನಲ್ಲಿ ಕಂಗೊಳಿಸಿದ್ದಾರೆ. ಸಾನ್ಯ ಸೀರೆ ಲುಕ್‌ ನೋಡ್ತಿದಂತೆ ಸೀರೆಯಲ್ಲಿ ಹುಡುಗಿರ ನೋಡಲೇಬಾರದು ನಿಲ್ಲಲ್ಲ ಟೆಂಪ್ರೇಚರ್‌ ಎಂದು ಪಡ್ಡೆಹುಡುಗರು ಹಾಡು ಹಾಡಲು ಶುರುಮಾಡಿದ್ದಾರೆ. ಇದನ್ನೂ ಓದಿ:Kushi ಸಿನಿಮಾ ಸಕ್ಸಸ್, ವಿಜಯ್ ದೇವರಕೊಂಡ ಟೆಂಪಲ್ ರನ್

    ಸಾನ್ಯ ಅಯ್ಯರ್‌ಗೆ ನಾಯಕಿಯಾಗಿ ನಟಿಸಬೇಕು ಎಂಬುದು ಚಿಕ್ಕ ವಯಸ್ಸಿನಿಂದ ಆಸೆ ಇತ್ತು. ಅದರಂತೆ ಈಗ ಇಂದ್ರಜಿತ್ ಲಂಕೇಶ್ (Indrajit Lankesh)  ಅವರ ನಿರ್ದೇಶನದ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

    ಮಗ ಸಮರ್ಜಿತ್ ಚೊಚ್ಚಲ ಸಿನಿಮಾಗೆ ಇಂದ್ರಜಿತ್ ನಿರ್ದೇಶನ ಮಾಡ್ತಿದ್ದಾರೆ. ಸಹೋದರಿ ಗೌರಿ ಲಂಕೇಶ್ ನೆನಪಿನಲ್ಲೇ ಈ ಸಿನಿಮಾಗೆ ಗೌರಿ (Gowri) ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಶುರುವಾಗಿಲಿದೆ. ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ರು. ಈಗ ಸಾನ್ಯ ನಾಯಕಿಯಾಗಿ ಕರ್ನಾಟಕ ಜನತೆಯ ಮನಗೆಲ್ಲುತ್ತಾರಾ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕನ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಮಗನ ಮೊದಲ ಚಿತ್ರಕ್ಕೆ ಗೌರಿ ಎಂದು ಹೆಸರಿಟ್ಟೆ : ಇಂದ್ರಜಿತ್

    ಅಕ್ಕನ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಮಗನ ಮೊದಲ ಚಿತ್ರಕ್ಕೆ ಗೌರಿ ಎಂದು ಹೆಸರಿಟ್ಟೆ : ಇಂದ್ರಜಿತ್

    ಸ್ಯಾಂಡಲ್ ವುಡ್‌ಗೆ ಹೊಸ ಹೀರೋನ ಪದಾರ್ಪಣೆ ಆಗಿದೆ. ಖ್ಯಾತ ಬರಹಗಾರ ಪಿ ಲಂಕೇಶ್ ಕುಟುಂಬದ ಮೂರನೇ ಕುಡಿ, ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಪುತ್ರ ಸಮರ್ಜಿತ್ ಲಂಕೇಶ್ (Samarjit Lankesh) ಸಿನಿಮಾರಂಗಕ್ಕೆ ಅದ್ದೂರಿ ಎಂಟ್ರಿ ಕೊಟ್ಟಿದ್ದಾರೆ. ಸಮರ್ಜಿತ್ ಮೊದಲ ಸಿನಿಮಾಗೆ ‘ಗೌರಿ’ (Gowri) ಎಂದು ಟೈಟಲ್ ಇಡಲಾಗಿದೆ. ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿ ಪೂಜೆ ಮೂಲಕ ಗೌರಿ ಸಿನಿಮಾಗೆ ಚಾಲನೆ ಸಿಕ್ಕಿದೆ. ಮುಹೂರ್ತ (Muhurta) ಸಮಾರಂಭಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಜಿ ಭೇಟಿ ನೀಡಿ ಸಮರ್ಜಿತ್‌ಗೆ ಆಶೀರ್ವದಿಸಿದರು. ನಿರ್ಮಾಪಕ ರಮೇಶ್ ರೆಡ್ಡಿ ಅವರು ಕ್ಲ್ಯಾಪ್ ಮಾಡಿ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ತಮ್ಮ ಸಹೋದರಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕಾಗಿ ಮಗನ ಚೊಚ್ಚಲು ಸಿನಿಮಾಗೆ ‘ಗೌರಿ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದರು. ಗೌರಿ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಅವರೇ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮಗನ ಚೊಚ್ಚಲ ಸಿನಿಮಾಗೆ ನಿರ್ದೇಶನ ಮಾಡುವ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ಇಂದ್ರಜಿತ್ ಲಂಕೇಶ್ ಪತ್ನಿ ಅರ್ಪಿತಾ ನಿರ್ಮಾಪಕಿಯಾಗಿ ಮಗನ ಜೊತೆಯೇ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕ ತಮ್ಮ ಮಗನನ್ನು ತಾವೇ ಬಣ್ಣದ ಲೋಕಕ್ಕೆ ಪರಿಚಯಿಸುತ್ತಿದ್ದಾರೆ ಇಂದ್ರಜಿತ್ ದಂಪತಿ. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ಗೌರಿ ಸಿನಿಮಾಗಾಗಿ ಸಮರ್ಜಿತ್ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡಿದ್ದಾರೆ. ಆಗಲೇ ಆಕ್ಟಿಂಗ್, ಸ್ಟಂಟ್ ಕಲಿತು ಎಲ್ಲಾ ರೀತಿಯ ತಯಾರಿ ಮಡಿಕೊಂಡೆ ಕ್ಯಾಮರಾ ಎದುರಿಸುತ್ತಿದ್ದಾರೆ. ಸಮರ್ಜಿತ್ ಮೊದಲ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಕಿರುತೆರೆ ಹಾಗೂ ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಐಯ್ಯರ್. ಅಂದಹಾಗೆ ಸಾನ್ಯಾ‌ಗೂ ಮೊದಲ ಸಿನಿಮಾ. ಚೊಚ್ಚಲ ಸಿನಿಮಾ ಮೂಲಕ ಸಮರ್ಜಿತ್ ಮತ್ತು ಸಾನ್ಯಾ (Sanya Iyer) ಇಬ್ಬರೂ ದೊಡ್ಡ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.

    ಅದ್ದೂರಿ ಮೂಹೂರ್ತದ ಮೂಲಕ ಸದ್ದು ಮಾಡಿರುವ ಗೌರಿ ಸಿನಿಮಾ ಸದ್ಯದಲ್ಲೇ ಶೂಟಿಂಗ್‌ಗೆ ಹೊರಡುತ್ತಿದೆ. ಮೊದಲ ಹಂತದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಸಲು ಸಿನಿಮಾತಂಡ ಪ್ಲಾನ್ ಮಾಡಿದೆ. ಇನ್ನೂ ಸಿನಿಮಾದಲ್ಲಿ ಕಾಂತಾರ ಸಿನಿಮಾ ಖ್ಯಾತಿಯ ನಟಿ ಮಾನಸಿ ಸುಧೀರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ಸಿನಿಮಾಗಿದೆ. ಈಗಾಗಲೇ ಫೋಟೋಶೂಟ್ ಹಾಗೂ ಲುಕ್ ಮೂಲಕ ಸಮರ್ಜಿತ್ ಗಮನ ಸೆಳೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಯಾಂಡಲ್ ವುಡ್ ಗೆ ಹೊಸ ನಾಯಕನ ಎಂಟ್ರಿ: ಕನ್ನಡಕ್ಕೆ ಸಿಕ್ಕ ಮತ್ತೋರ್ವ ಆರಡಿ ಕಟೌಟ್

    ಸ್ಯಾಂಡಲ್ ವುಡ್ ಗೆ ಹೊಸ ನಾಯಕನ ಎಂಟ್ರಿ: ಕನ್ನಡಕ್ಕೆ ಸಿಕ್ಕ ಮತ್ತೋರ್ವ ಆರಡಿ ಕಟೌಟ್

    ತ್ರಿಕೋದ್ಯಮದ ಖ್ಯಾತನಾಮರಾದ ಪಿ ಲಂಕೇಶ್ ಮೊಮ್ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈಗಾಗಲೇ ಇಂದ್ರಜಿತ್ ಲಂಕೇಶ್ (Indrajit Lankesh) ಚಿತ್ರರಂಗದಲ್ಲಿ ಸ್ಟೈಲಿಶ್ ನಿರ್ದೇಶಕ ಎಂದೇ ಗುರುತಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ನಿರ್ದೇಶನ ಮಾಡಿರುವಂತಹ ಇಂದ್ರಜಿತ್ ಲಂಕೇಶ್ ಈ ಬಾರಿ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

    ‘ಗೌರಿ’ (Gauri) ಹೆಸರಿನ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ (Samarjit Lankesh) ಅವರನ್ನ ಚಿತ್ರರಂಗಕ್ಕೆ ನಾಯಕನನ್ನಾಗಿ ಪರಿಚಯ ಮಾಡುತ್ತಿದ್ದು ಇಂದು ಬೆಂಗಳೂರಿನಲ್ಲಿ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನಡೆದಿದೆ. ಗೌರಿ ಸಿನಿಮಾಗಾಗಿ ಸಮರ್ಜಿತ್ ಈಗಾಗಲೇ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಂಡಿದ್ದು ಸಮರ್ಜಿತ್ ಜೊತೆಯಾಗಿ ಸಾನ್ಯ ಐಯ್ಯರ್ ನಾಯಕಿಯಾಗಿ ಅಭಿನಯ ಮಾಡುತ್ತಿದ್ದಾರೆ.

    ಸಿನಿಮಾ ಮುಹೂರ್ತಕ್ಕೂ ಮುನ್ನವೇ ಸಮರ್ಜಿತ್ ಹಾಗೂ ಸಾನಿಯಾ (Sanya Iyer) ಅವರ ಫೋಟೋಶೂಟ್ ನಡೆದಿದ್ದು ಸ್ಯಾಂಡಲ್ವುಡ್ ನ ಸ್ಟಾರ್ ಸಿನಿಮಾಟೋಗ್ರಾಫರ್ ಆದ ಭುವನ್ ಗೌಡ ಅವರು ಸಮರ್ಜಿತ್ ಅವರ  ಫೋಟೋಶೂಟ್ ಮಾಡಿ ಲುಕ್ ಟೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ನಿಂಬಿಯಾ ಬನಾದ ಮ್ಯಾಗ’ ಬೆರಗು ಮೂಡಿಸಿದ ಅಶೋಕ್ ಕಡಬ!

    ಭುವನ್ ಮಾತ್ರವಲ್ಲದೆ  ಎಜೆ ಶೆಟ್ಟಿ ಅವ್ರಿಂದಲೂ ಫೋಟೋ ಶೂಟ್ ಮಾಡಿಸಿದ್ದು ಸಾನ್ಯ ಹಾಗೂ ಸಮಜಿತ್ ಇಬ್ಬರ ಕೆಮಿಸ್ಟ್ರಿ ಫೋಟೋ ಶೂಟ್ ನಲ್ಲಿ ಸಖತ್ತಾಗಿ ವರ್ಕ್ ಆಗಿದೆ. ಈಗಾಗಲೇ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿರುವಂತಹ ಇಂದ್ರಜಿತ್ ತಮ್ಮ ಮಗ ಯಾವ ಯಾವ ಪಾತ್ರದಲ್ಲಿ ಯಾವ ರೀತಿ ಕಾಣಿಸುತ್ತಾರೆ ಎಂಬುದನ್ನು ಚೆಕ್ ಮಾಡಲು ಸುಮಾರು ನಾಲ್ಕೈದು ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

     

    ಬರೀ ಫೋಟೋ ಶೂಟ್ ಮಾತ್ರವಲ್ಲದೇ ಕೆಲ ಹಳೆ ಸಿನಿಮಾ ಸೀನ್ ಗಳನ್ನ ರೀ ಕ್ರಿಯೇಟ್ ಮಾಡುವ ಮೂಲಕ ಮಗನ ನಟನೆಯನ್ನೂ ಕೂಡ ಟೆಸ್ಟ್ ಮಾಡಿದ್ದಾರೆ. ಲುಕ್ ಹಾಗೂ ಆಕ್ಟಿಂಗ್, ಸ್ಟಂಟ್, ಡ್ಯಾನ್ಸ್ ಎಲ್ಲಾ ವಿಚಾರದಲ್ಲಿಯೂ ಸಮರ್ಜಿತ್ ಪರ್ಫೆಕ್ಟ್ ಅನ್ನಿಸುತ್ತಿದ್ದು ಮುಹೂರ್ತ ಮಾಡಿ ನೇರವಾಗಿ ಶೂಟಿಂಗ್ ಹೋಗಲಿದೆ ಗೌರಿ ಸಿನಿಮಾ ಟೀಂ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಗೌರಿ’ ಚಿತ್ರದಲ್ಲಿರೋದು ಮೂರೇ ಪಾತ್ರಗಳು

    ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಗೌರಿ’ ಚಿತ್ರದಲ್ಲಿರೋದು ಮೂರೇ ಪಾತ್ರಗಳು

    ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಎನ್.ಎಸ್.ರಾಜಕುಮಾರ್ – ವಿ.ಎಸ್ ರಾಜಕುಮಾರ್ ನಿರ್ಮಾಣದ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಶೇಷಾದ್ರಿಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭ ಕೋರಿದರು. ಮೂವತ್ತಕ್ಕೂ ಅಧಿಕ ವರ್ಷಗಳ ಕಾಲ ರಾಜಕುಮಾರ್ ಅವರ ಬಳಿ ಸಹಾಯಕರಾಗಿ ಕಾರ್ಯ ನಿರ್ವಹಿಸಿರುವ ಚನ್ನ ಅವರು  ಕ್ಯಾಮೆರಾ ಚಾಲನೆ ಮಾಡಿದರು.

    ಕನ್ನಡ ಚಿತ್ರರಂಗಕ್ಕೆ ಈಗ ಒಳ್ಳೆಯ ಕಾಲ. ವಿಶ್ವದಾದ್ಯಂತ ಕನ್ನಡ ಸಿನಿಮಾಗಳು ಹೆಸರು ಮಾಡುತ್ತಿದೆ. ಅದರಲ್ಲೂ ವಿಭಿನ್ನ ಕಥೆಯಿರುವ ಚಿತ್ರಗಳನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. “ಗೌರಿ” ಸಹ ವಿಭಿನ್ನ ಕಥೆಯ ಚಿತ್ರ. ಇಡೀ ಸಿನಿಮಾ ಪೂರ್ತಿ ಕೇವಲ ಮೂರೇ ಪಾತ್ರಗಳಿರುತ್ತದೆ. ಕೆಲವು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದಾಗಿ ನಿರ್ದೇಶಕರು ಹೇಳಿದ್ದಾರೆ. ದಾಂಡೇಲಿಯಲ್ಲಿ ಬಹುಭಾಗದ ಚಿತ್ರೀಕರಣ ನಡೆಯಲಿದೆ. ಹೊಸವರ್ಷಕ್ಕೆ ಹೊಸತರಹದ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇನ್ನು  ರಾಜಕುಮಾರ್ ಎಂಬ ಹೆಸರು ಸದಾ ನನ್ನ ಜೊತೆ ಇರುತ್ತದೆ ಎಂಬುದಕ್ಕೆ ಈ ಚಿತ್ರದ ನಿರ್ಮಾಪಕರು ಸಹ ರಾಜಕುಮಾರ್ ಅವರೆ ಎಂದು ನಾಯಕ ರವಿಚಂದ್ರನ್ ಚಿತ್ರದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಹನ್ಸಿಕಾ ಟ್ರೋಲ್‌: ಮದುವೆಗೆ ಎಲ್ಲಾ ಹೊಸದು, ಗಂಡ ಯಾಕೆ ಸೆಕೆಂಡ್ ಹ್ಯಾಂಡ್ ಎಂದ ನೆಟ್ಟಿಗರು

    ಇದು ನನ್ನ ಮೊದಲ ನಿರ್ದೇಶನದ ಚಿತ್ರ.  ಖ್ಯಾತ ನಟರಾದ ರವಿಚಂದ್ರನ್ ಅವರು ನನ್ನ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕರಾಗಿರುವುದು ಸಂತೋಷವಾಗಿದೆ. ಮುಂಬೈನ ಬರ್ಕಾ ಬಿಷ್ಟ್ ಈ ಚಿತ್ರದ ನಾಯಕಿ. ಗ್ರೀಷ್ಮಾ ಎಂಬ ಬಾಲ ಕಲಾವಿದೆ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಒಟ್ಟು ಮೂರೇ ಪಾತ್ರಗಳು.ಇದೊಂದು ಕೌಟುಂಬಿಕ ಚಿತ್ರ. ಇದುವರೆಗೂ ಸಾಕಷ್ಟು ಫ್ಯಾಮಿಲಿ ಚಿತ್ರಗಳು ಬಂದಿವೆ. ಈ ಚಿತ್ರದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ಯಾಕೆ ಸಮಸ್ಯೆಗಳು ಬರುತ್ತವೆ ಎಂಬುದನ್ನು ತೋರಿಸುತ್ತಿದ್ದೇವೆ. ಅವರಿಬ್ಬರ ನಡುವಿನ ಪ್ರೀತಿಗೆ ಯಾಕೆ ಸಮಸ್ಯೆ ಎದುರಾಗುತ್ತವೆ ಮತ್ತು ಅವರು ಅದನ್ನು ಹೇಗೆ ಪರಿಹರಿಸಿಕೊಳ್ಳುತ್ತಾರೆ ಎಂದು ಹೇಳುವುದಕ್ಕೆ ಹೊರಟಿದ್ದೇವೆ. “ಗೌರಿ” ಚಿತ್ರಕ್ಕೆ “ಶಂಕರ B/H ” ಎಂಬ ಅಡಿಬರಹವಿದೆ.  ಇದೊಂದು ವಿಭಿನ್ನವಾದ ಚಿತ್ರಕಥೆ ಎನ್ನಬಹುದು.  ಕೌಟುಂಬಿಕ ಚಿತ್ರವಾದರೂ, ಕಥೆ ಕಾಡಿನಲ್ಲಿ ನಡೆಯುತ್ತದೆ. ದಾಂಡೇಲಿ, ಯಲ್ಲಾಪುರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶಕ ಅನೀಸ್.

    ನನಗೆ ಕನ್ನಡದಲ್ಲಿ‌ ಇದು ಮೊದಲನೆಯ ಚಿತ್ರ. ಅದರಲ್ಲೂ ದಕ್ಷಿಣ ಭಾರತದಲ್ಲೇ ಮೊದಲು ಎನ್ನಬಹುದು. ರವಿಚಂದ್ರನ್ ಸರ್ ಜೊತೆ ನಟಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ನಾಯಕಿ ಬರ್ಕಾ ಬಿಷ್ಟ್. ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಹದಿನೈದನೇ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎನ್ ಎಸ್ ರಾಜಕುಮಾರ್.

    Live Tv
    [brid partner=56869869 player=32851 video=960834 autoplay=true]