Tag: ಗ್ರಾಮಗಳು

  • ಕೊನೆಗೂ ಆಣೆ ಪ್ರಮಾಣದ ಮೂಲಕ ಬಗೆಹರಿದ ಕೋಣದ ವಿವಾದ

    ಕೊನೆಗೂ ಆಣೆ ಪ್ರಮಾಣದ ಮೂಲಕ ಬಗೆಹರಿದ ಕೋಣದ ವಿವಾದ

    ದಾವಣಗೆರೆ: ಕಳೆದ ನಾಲ್ಕೈದು ದಿನಗಳಿಂದ ಎರಡು ಗ್ರಾಮಗಳ ನಡುವೆ ಜಗಳಕ್ಕೆ ಕಾರಣವಾಗಿದ್ದ ದೇವರ ಕೋಣದ ವಿಚಾರ ಈಗ ಆಣೆ ಪ್ರಮಾಣದ ಮೂಲಕ ಬಗೆ ಹರಿದಿದ್ದು, ಸ್ವಗ್ರಾಮ ಬೇಲಿಮಲ್ಲೂರುಗೆ ದೇವರ ಕೋಣ ಬಂದಿದೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಮಾರಿಕಾಂಬಾ ದೇವಿಯ ಕೋಣ ಕಾಣೆಯಾಗಿತ್ತು. ಅದೇ ಕೋಣ ಶಿವಮೊಗ್ಗದ ಹಾರ್ನಹಳ್ಳಿ ಗ್ರಾಮದಲ್ಲಿ ಕಾಣಿಸಿದ್ದು, ಆ ಕೋಣ ನಮ್ಮದೇ ಎಂದು ಹಾರ್ನಹಳ್ಳಿ ಗ್ರಾಮದವರು ಕಟ್ಟಿಹಾಕಿಕೊಂಡಿದ್ದರು. ಇದರಿಂದ ಎರಡು ಗ್ರಾಮಗಳ ನಡುವೆ ವಾಗ್ವಾದ ಶುರುವಾಗಿದ್ದು, ಕೊನೆಗೆ ಪೊಲೀಸ್ ಠಾಣೆಯ ಮಟ್ಟಿಲೇರಿ ಡಿಎನ್‍ಎ ಪರೀಕ್ಷೆ ಮಾಡಬೇಕು ಎನ್ನುವ ಮಟ್ಟಿಗೆ ತಲುಪಿತ್ತು.

    ಆದರೆ ಹೊನ್ನಾಳಿಯ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳು ಮಧ್ಯಸ್ಥಿಕೆ ವಹಿಸಿ ಮಠದ ಶ್ರೀಗಳ ಗದ್ದಿಗೆ ಮುಂದೆ ಆಣೆ ಪ್ರಮಾಣದ ಮೂಲಕ ವಿವಾದವನ್ನು ಪರಿಹರಿಸಿದ್ದಾರೆ. ಈ ಕೋಣ ದಾವಣಗೆರೆಯ ಬೇಲಿ ಮಲ್ಲೂರು ಗ್ರಾಮದ ಮಾರಿಕಾಂಬಾ ದೇವಿಯ ಕೋಣ ಎಂದು ತಿಳಿದುಬಂದಿದೆ.

    ಅದ್ದರಿಂದ ಇಂದು ಪೊಲೀಸರ ಭದ್ರತೆಯ ಮೂಲಕ ಶಿವಮೊಗ್ಗದ ಗೋಶಾಲೆಯಿಂದ ಹೊನ್ನಾಳಿಯ ಬೇಲಿಮಲ್ಲೂರು ಗ್ರಾಮಕ್ಕೆ ದೇವರ ಕೋಣ ಆಗಮಿಸಿತು. ಇನ್ನು ಶಾಸಕ ಎಂ ಪಿ ರೇಣುಕಾಚಾರ್ಯ ಹಿರೇಕಲ್ಮಠದ ಬಳಿ ಕೋಣಕ್ಕೆ ಪೊಜೆ ಸಲ್ಲಿಸಿದರು. ಇನ್ನು ಬೇಲಿಮಲ್ಲೂರು ಗ್ರಾಮಸ್ಥರು ರೇಣುಕಾಚಾರ್ಯ ರನ್ನು ಎತ್ತಿ ಕುಣಿದಾಡಿ ಹರ್ಷೋದ್ಗಾರ ವ್ಯಕ್ತಪಡಿಸಿದರು.

  • ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರು: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಮಾನ್ವಿ ತಾಲೂಕಿನ ಮುಷ್ಟೂರು ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ ಸುಮಾರು 6 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ಮುಷ್ಠೂರು, ಜಾಗೀರ್ ಪನ್ನೂರು, ಯಡಿಯಾಳ್, ದೇವಿಪುರ, ಚೀಕಲಪರ್ವಿ ಸೇರಿದಂತೆ 6 ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಸಂಪರ್ಕ ಕಡಿತದಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮಾನ್ವಿ ಪಟ್ಟಣಕ್ಕೆ ಬರಲು 40 ಕಿ.ಮೀ ಹೆಚ್ಚುವರಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

    ಮುಳುಗಡೆಯಾದ ಸೇತುವೆ ಮಾರ್ಗ ಕೇವಲ 4 ಕಿ.ಮೀ ನಲ್ಲಿ ಮಾನ್ವಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನಾಲ್ಕು ಅಡಿಯಷ್ಟು ಎತ್ತರದಲ್ಲಿ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಕೆಲವು ಕಡೆ ರಸ್ತೆ ಕಿತ್ತು ಹೋಗಿದೆ. ನೂತನ ಸೇತುವೆ ಕಾರ್ಯ ಅರ್ಧಕ್ಕೆ ನಿಂತಿರುವುದರಿಂದ ಹಳ್ಳ ಬಂದಾಗಲೆಲ್ಲಾ ರಸ್ತೆ ಕಡಿತಗೊಳ್ಳುತ್ತಿದೆ. 2009ರಲ್ಲಿ ಉಂಟಾದ ಪ್ರವಾಹದಲ್ಲಿ ಸೇತುವೆ ಕೊಚ್ಚಿ ಹೋಗಿತ್ತು. 2011 ರಲ್ಲಿ ಆರಂಭಗೊಂಡಿದ್ದ ಸೇತುವೆ ಕಾರ್ಯ ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆ ಹಳ್ಳ ತುಂಬಿದ್ದರಿಂದ ಕೆಳಮಟ್ಟದ ಸೇತುವೆ ಮುಳುಗಡೆಯಾಗಿದೆ.

  • ಟ್ವೀಟ್ ಮಾಡೋ ಬದಲು ಗ್ರಾಮಗಳನ್ನು ದತ್ತು ಪಡೆದುಕೊಳ್ಳಿ: ಕಾಂಗ್ರೆಸ್ಸಿಗರಿಗೆ ಸಿಟಿ ರವಿ ಟಾಂಗ್

    ಟ್ವೀಟ್ ಮಾಡೋ ಬದಲು ಗ್ರಾಮಗಳನ್ನು ದತ್ತು ಪಡೆದುಕೊಳ್ಳಿ: ಕಾಂಗ್ರೆಸ್ಸಿಗರಿಗೆ ಸಿಟಿ ರವಿ ಟಾಂಗ್

    ಚಿಕ್ಕಮಗಳೂರು: ಕಾಂಗ್ರೆಸ್ಸಿಗರೇ ನೀವು ತಾಕತ್ತಿರೋ ಜನರೇ ಇದ್ದೀರಾ. ನಿಮ್ಮ ಆಸ್ತಿ ಕೂಡ ಚಿಕ್ಕ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ. ಅದು ಸದುಪಯೋಗ ಆಗಬೇಕಂದರೆ ಪುಣ್ಯದ ಕೆಲಸ ಮಾಡಬೇಕು. ಟ್ವೀಟ್ ಮಾಡೋ ಬದಲು, 5-10-20 ಗ್ರಾಮಗಳನ್ನು ದತ್ತು ಪಡೆದುಕೊಳ್ಳಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರೇ ನಿಮ್ಮದು ಕೇವಲ ರಾಜಕೀಯ ಅದನ್ನು ಬಿಟ್ಟು ಕಷ್ಟದಲ್ಲಿರುವವರ ನೆರವಿಗೆ ಬನ್ನಿ. ಒಳ್ಳೆಯ ಸ್ಪರ್ಧೆ ಬೆಳೆಯುತ್ತದೆ. ನೀವು 10 ಗ್ರಾಮ ಪಡೆದರೆ, ಬಿಜೆಪಿಯವರು 20 ಗ್ರಾಮ ಪಡೆಯುತ್ತಾರೆ. ನಾವೇನಾದರೂ ಮಾಡಬೇಕೆಂದು ಆ ಜೆಡಿಎಸ್‍ನವರು 8-10 ಗ್ರಾಮ ಪಡೆಯುತ್ತಾರೆ. ನಮ್ಮೆಲ್ಲರ ಸಹನೆ, ಸಿಟ್ಟನ್ನು ಕನ್ಟ್ರಷ್ಷನ್ ಆಗಿ ನಿರ್ಮಾಣ ಮಾಡೋಣ. ಪ್ರಶ್ನೆ ಮಾಡೋ ಬದಲು ಆ ರೀತಿ ಆರೋಗ್ಯಕರ ಸ್ಪರ್ಧೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ವಿಜಯನಗರವನ್ನು ಜಿಲ್ಲೆ ಮಾಡಬೇಕೆಂಬುದು ಅಲ್ಲಿನ ಶಾಸಕರ ಒತ್ತಡ ಹಾಕುತ್ತಿರುವ ವಿಚಾರವಾಗಿ ಮಾತನಾಡಿ, ಅದು ಇನ್ನೂ ಸಂಪುಟದ ಮುಂದೆ ಬಂದಿಲ್ಲ. ಆ ಸಂದರ್ಭ ಬಂದಾಗ ಅದರ ಸಾಧಕ-ಬಾಧಕ ಚರ್ಚಿಸೋಣ. ಸಿಎಂ ಅವರ ಮನವಿಗೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದರು.

  • ಮಲಪ್ರಭೆಯ ಆರ್ಭಟ- ಪ್ರವಾಹ ಭೀತಿಯಲ್ಲಿ ಊರು ಬಿಡ್ತಿರುವ ಜನ

    ಮಲಪ್ರಭೆಯ ಆರ್ಭಟ- ಪ್ರವಾಹ ಭೀತಿಯಲ್ಲಿ ಊರು ಬಿಡ್ತಿರುವ ಜನ

    ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ ನದಿ ತೀರದ ಗ್ರಾಮಗಳಿಗೆ ಮತ್ತೆ ನೀರು ನುಗ್ಗುವ ಭೀತಿಯಿಂದ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ.

    ಮಲಪ್ರಭಾ ನದಿ ತುಂಬಿ ಹರಿಯುತ್ತಿರುವುದರಿಂದ ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಜನರು ಆತಂಕದಲ್ಲಿದ್ದಾರೆ. ಈಗಾಗಲೇ ಸುನ್ನಾಳ ಗ್ರಾಮಕ್ಕೆ ನದಿ ನೀರು ನುಗ್ಗಿದೆ. ಸವದತ್ತಿಯ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ರಾಮದುರ್ಗದ ಹಳ್ಳಿಗಳಿಗೆ ನೀರು ನುಗ್ಗಿದೆ. ಮಲಪ್ರಭಾ ಜಲಾಶಯದಿಂದ 21 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಪರಿಣಾಮ ರಾಮದುರ್ಗ ತಾಲೂಕಿನ 30ಕ್ಕೂ ಹೆಚ್ಚು ಗ್ರಾಮಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಸುನ್ನಾಳ ಸರಕಾರಿ ಶಾಲೆ, ದರ್ಗಾ ಸೇರಿದಂತೆ ಮನೆಗಳಿಗೆ ನೀರು ನುಗ್ಗಿದೆ. ಆದ್ದರಿಂದ ತಾಲೂಕು ಆಡಳಿತ ಪರಿಹಾರ ಕೇಂದ್ರಗಳನ್ನು ತೆರೆದು ಗ್ರಾಮಸ್ಥರನ್ನು ಸ್ಥಳಾಂತರ ಮಾಡುತ್ತಿದೆ. ಕೆಲವೆಡೆ ನೀರು ನುಗ್ಗುವ ಆತಂಕದಲ್ಲಿ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ.

  • ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ.

    ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

    ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೃಷ್ಣಾ ನದಿಗೆ ಇಳಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

  • ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ಉಡುಪಿ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಂದೂಕು ಹಿಡಿದು ಸದಾ ಗಸ್ತು ತಿರುಗೋದು ಎಎನ್‍ಎಫ್ ಕರ್ತವ್ಯ. ಆ್ಯಂಟಿ ನಕ್ಸಲ್ ಫೋರ್ಸ್ ಸಿಬ್ಬಂದಿ ಕರ್ತವ್ಯಕ್ಕೆ ಹೊರತಾಗಿ ಸಾರ್ವಜನಿಕರು ಮೆಚ್ಚುವ ಕಾರ್ಯ ಮಾಡಿದ್ದಾರೆ.

    ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ನಕ್ಸಲ್ ಪೀಡಿತ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ತೋರಿದ್ದಾರೆ. ನಕ್ಸಲ್ ಪೀಡಿತ ಪ್ರದೇಶ ಕಬ್ಬಿನಾಲೆಯಲ್ಲಿ ಹೆಲ್ತ್ ಕ್ಯಾಂಪ್ ಮಾಡಿ, ಹೆಬ್ರಿ ತಾಲೂಕಿಗೆ ಒಳಪಡುವ ನಕ್ಸಲ್ ಪೀಡಿತ ಎಲ್ಲಾ ಗ್ರಾಮಗಳ ಜನರನ್ನು ಕರೆಸಿ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ.

    ತೀರಾ ಗ್ರಾಮೀಣ ಪ್ರದೇಶದ ಜನರನ್ನು ಎಎನ್‍ಎಫ್ ಅಧಿಕಾರಿಗಳು ತಮ್ಮದೇ ಜೀಪಿನಲ್ಲಿ ಕರೆದುಕೊಂಡು ಬಂದು ತಪಾಸಣೆಗೆ ಒಳಪಡಿಸಿದ್ದಾರೆ. ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳಿಗೆ ಅಲ್ಲೇ ಔಷಧಿ ಕೊಡಿಸಿದ್ದಾರೆ. ಮುಂಗಾರು ಮಳೆ ಆರಂಭದಲ್ಲಿ ಜ್ವರ, ಚರ್ಮರೋಗ ಗ್ರಾಮಸ್ಥರಿಗೆ ಆವರಿಸುವುದರಿಂದ ಈ ಹೆಲ್ತ್ ಕ್ಯಾಂಪ್ ಬಹಳ ಮಹತ್ವ ಪಡೆದಿದೆ. ಜನಕ್ಕೂ ಈ ಹೆಲ್ತ್ ಕ್ಯಾಂಪ್ ಬಹಳ ಉಪಯೋಗವಾಗಿದೆ.

  • ಮಂಗನ ಕಾಯಿಲೆಗೆ ಹೆದರಿ ಊರು ತೊರೆಯುತ್ತಿದ್ದಾರೆ ಮಲೆನಾಡಿಗರು!

    ಮಂಗನ ಕಾಯಿಲೆಗೆ ಹೆದರಿ ಊರು ತೊರೆಯುತ್ತಿದ್ದಾರೆ ಮಲೆನಾಡಿಗರು!

    ಶಿವಮೊಗ್ಗ: ಮರಣ ಮೃದಂಗ ಭಾರಿಸುತ್ತಿರುವ ಮಾರಕ ಮಂಗನ ಕಾಯಿಲೆಗೆ ಮಲೆನಾಡಿಗರು ತತ್ತರಿಸಿ ಹೋಗಿದ್ದಾರೆ. ಅಲ್ಲದೆ ಸರ್ಕಾರ ನೀಡುತ್ತಿರುವ ಔಷಧಿಗಳು ಕೂಡ ಈ ಮಾರಣಾಂತಿಕ ಕಾಯಿಲೆಯನ್ನು ನಿಯಂತ್ರಿಸಲು ಆಗುತ್ತಿಲ್ಲ. ಆದರಿಂದ ಮಂಗನ ಕಾಯಿಲೆಗೆ ಹೆದರಿ ಮಲೆನಾಡಿನ ಕೆಲವು ಭಾಗಗಳಲ್ಲಿ ಜನರು ಊರು ಬಿಡುತ್ತಿದ್ದಾರೆ.

    ಹೌದು, ಮಂಗನ ಕಾಯಿಲೆ ಮಲೆನಾಡಿನ ಜನರಿಗೆ ಬೆನ್ನುಬಿಡದೇ ಕಾಡುತ್ತಿದೆ. ಅಲ್ಲದೆ ಈ ಬಗ್ಗೆ ಸರ್ಕಾರ ಎಷ್ಟೇ ಕ್ರಮಗಳನ್ನು ತೆಗೆದುಕೊಂಡಿದ್ದರು ಮಂಗನ ಜ್ವರ ನಿಯಂತ್ರಣ ಮಾಡುವಲ್ಲಿ ಸೋತಿದೆ. ವ್ಯಾಕ್ಸನ್, ಡಿಎಂಪಿ ತೈಲ ಬಳಸಿದ ಮೇಲೂ ಕೂಡ ಜನ ಮಂಗನ ಜ್ವರದಿಂದ ಸಾಯುತ್ತಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಈ ಮಾರಕ ಕಾಯಿಲೆಗೆ ಹದಿನೈದು ಜನ ಮೃತಪಟ್ಟಿದ್ದಾರೆ. ಇದರಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಮಂಡವಳ್ಳಿ, ಕೊಪ್ಪರಿಗೆ, ಬಣ್ಣುಮನೆ ಸೇರಿ ಈ ಭಾಗದ ಪ್ರತೀ ಹಳ್ಳಿಯಲ್ಲೂ ಸಾವುಗಳು ಸಂಭವಿಸಿವೆ. ಇದನ್ನೂ ಓದಿ:ಹಾಸನದಲ್ಲೂ ಮಂಗನ ಕಾಯಿಲೆ ವೈರಸ್ ಪತ್ತೆ

    ಮಂಗನ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಏನೂ ಮಾಡಲಾಗದೆ ಅಸಹಾಯಕರಾಗಿರುವ ಇಲ್ಲಿನ ಜನ ಊರು ಬಿಡುತ್ತಿದ್ದಾರೆ. ಕಾಡಿನ ನಡುವೆ ಇರುವ ಒಂಟಿ ಮನೆಗಳಿಗೆ ಈಗ ಬೀಗ ಹಾಕಲಾಗಿದೆ. ಐತುಮನೆ ಎಂಬ ಊರಿನ ಎಲ್ಲಾ ಮನೆಗಳಿಗೆ ಬೀಗ ಹಾಕಲಾಗಿದೆ. ಉಳಿದ ಗ್ರಾಮದವರು ಬೇರೆ ಊರುಗಳಿಗೆ ಹೋಗಲು ಸಿದ್ಧವಾಗುತ್ತಿದ್ದಾರೆ. ಇದನ್ನೂ ಓದಿ:ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

    ಅಲ್ಲದೆ ಕೃಷಿ ಮಾಡುತ್ತಲೇ ಬದುಕು ಕಟ್ಟಿಕೊಂಡಿರುವ ಇಲ್ಲಿನ ಜನ ತಮ್ಮ ತೋಟ ಗದ್ದೆಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಆದರಿಂದ ಕೊಯ್ಲಿಗೆ ಬಂದ ಅಡಕೆಗಳು ತೋಟದಲ್ಲೇ ಹಣ್ಣಾಗಿ ಉದುರುತ್ತಿದೆ. ಜಾನುವಾರುಗಳನ್ನು ಮನೆಯಲ್ಲೇ ಕಟ್ಟಿ ಮೇವು ಹಾಕಬೇಕಾದ ಪರಿಸ್ಥಿತಿ ಈ ಭಾಗಗಳಲ್ಲಿ ಮಂಗನ ಕಾಯಿಲೆಯಿಂದ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv